Tag: CM Pinarayi Vijayan

  • ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ – ಶಿವಗಿರಿ ಶ್ರೀ

    ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ – ಶಿವಗಿರಿ ಶ್ರೀ

    ತಿರುವನಂತಪುರಂ: ಕೇರಳದ (Kerala) ಹಲವು ದೇವಾಲಯಗಳಲ್ಲಿ, ದೇಗುಲ ಪ್ರವೇಶಕ್ಕೂ ಮುನ್ನ ಪುರುಷರು ಮೇಲಂಗಿ ತೆಗೆಯುವ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

    ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಕೇಸ್ – ಐಶ್ವರ್ಯಗೌಡ ರಿಲೀಸ್

    ಬಳಿಕ ಮಾತನಾಡಿದ ಅವರು, ದೇವಾಲಯಗಳಿಗೆ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರಿಗೆ ಶರ್ಟ್ ತೆಗೆಯುವಂತೆ ಹೇಳುವುದು ನಾರಾಯಣ ಗುರುಗಳ ಸಂದೇಶಕ್ಕೆ ವಿರುದ್ಧವಾಗಿದೆ. ಇದು ಸಾಮಾಜಿಕ ಅನಿಷ್ಟ, ಇದನ್ನು ತೆಗೆದು ಹಾಕಬೇಕಾಗಿದೆ. ದೇವಾಲಯಗಳಿಗೆ ಪ್ರವೇಶಿಸುವವರು ಪನೂಲ್ (ಜನಿವಾರ) ಧರಿಸುತ್ತಾರೆಯೇ ಎಂದು ಪರೀಕ್ಷಿಸಲು ಮೇಲಂಗಿ ತೆಗೆಯುವ ಅಭ್ಯಾಸ ರೂಢಿಯಾಯಿತು. ಆದರೆ ನಾರಾಯಣ ಗುರುಗಳಿಗೆ ಸಂಬಂಧಿಸಿದ ಸಂಸ್ಥೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ದೇಗುಲಗಳು ಇಂದಿಗೂ ಪುರುಷರಿಗೆ ಮೇಲಂಗಿ ಧರಿಸಿ ದೇಗುಲ ಪ್ರವೇಶವನ್ನು ನಿರ್ಬಂಧಿಸಿವೆ. ಸಂಸ್ಥೆಗಳು ಈ ಬಗ್ಗೆ ಗಮನ ಹರಿಸಬೇಕು ಎಂದರು.

    ಇದೇ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಮಾತನಾಡಿ, ಶ್ರೀಗಳ ಮಾತಿಗೆ ಬೆಂಬಲ ಸೂಚಿಸಿದ್ದು, ಸ್ವಾಮೀಜಿ ತಮ್ಮ ಮಾತಿನ ಮೂಲಕ ಸಾಮಾಜಿಕ ಸುಧಾರಣೆಯ ಸಂದೇಶ ಸಾರಿದ್ದಾರೆ. ಅವರ ಸಲಹೆಗಳು ಸಾಮಾಜಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಗುರುವಿನ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಅನೇಕ ಆಚರಣೆಗಳು ಬದಲಾಗಿವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ನ್ಯೂ ಇಯರ್‌ ‘ಕಿಕ್‌’ – ಒಂದೇ ದಿನ ಕೆಎಸ್‌ಬಿಸಿಎಲ್‌ನಿಂದ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ

  • ನಿಮ್ಮನ್ನು ಕೊಂದು ಸೇಡು ತೀರಿಸಿಕೊಳ್ಳುತ್ತೇವೆ – ಕೇರಳ ಸಿಎಂಗೆ ಮಾವೋವಾದಿಗಳಿಂದ ಪತ್ರ

    ನಿಮ್ಮನ್ನು ಕೊಂದು ಸೇಡು ತೀರಿಸಿಕೊಳ್ಳುತ್ತೇವೆ – ಕೇರಳ ಸಿಎಂಗೆ ಮಾವೋವಾದಿಗಳಿಂದ ಪತ್ರ

    ತಿರುವನಂತಪುರಂ: ತಮ್ಮ ಗುಂಪಿನ ಕೆಲ ನಕ್ಸಲರನ್ನು ಕೊಂದಿದ್ದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್‍ಗೆ ಮಾವೋವಾದಿಗಳು ಜೀವ ಬೆದರಿಕೆ ಪತ್ರ ರವಾನಿಸಿದ್ದಾರೆ.

    ಕೆಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಗಾಲಿ ಕಾಡುಗಳಲ್ಲಿ ಮಾವೋವಾದಿಗಳು ಮತ್ತು ಕೇರಳ ವಿಶೇಷ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದರು. ಈ ಸಾವಿನ ಪ್ರತೀಕಾರವನ್ನು ತೀರಿಸಿಕೊಳ್ಳಲು ಮುಖ್ಯಮಂತ್ರಿ ಅವರನ್ನು ಕೊಲ್ಲುತ್ತೇವೆ ಎಂದು ಪತ್ರ ಬರೆಯಲಾಗಿದೆ.

    ಈ ಪತ್ರವನ್ನು ಕೇರಳದ ವಡಕಾರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ಹತ್ಯೆಗೀಡಾದ ಮಾವೋವಾದಿಗಳಿಗೆ ಬಂದ ಪರಿಸ್ಥಿತಿಯನ್ನೇ ಸಿಎಂ ವಿಜಯನ್ ಮುಂದೆ ಎದುರಿಸಬೇಕಾಗುತ್ತದೆ ಎಂದು ನಕ್ಸಲರ ತಂಡದ ಕಬಿನಿಡಾಲ್ ಕ್ರಿಯಾ ಸಮಿತಿಯ ಉಪಾಧ್ಯಕ್ಷ ಬೇಡರ್ ಮೂಸಾ ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ. ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳನ್ನು ಒಳಗೊಂಡಂತೆ ಕಳೆದ ತಿಂಗಳು ದಟ್ಟ ಕಾಡುಗಳಲ್ಲಿ ತಮ್ಮ ನಾಲ್ವರು ಸ್ನೇಹಿತರು ಸಾವನ್ನಪ್ಪಿದ ನಂತರ ಮಾವೋವಾದಿಗಳು ವಿಜಯನ್ ಸರ್ಕಾರದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

    2016 ರಲ್ಲಿ ಪಿಣರಾಯಿ ವಿಜಯನ್ ಕೇರಳ ಸಿಎಂ ಆದ ನಂತರ ಕೇರಳ ರಾಜ್ಯದಲ್ಲಿ ಏಳು ಮಾವೋವಾದಿಗಳನ್ನು ತಟಸ್ಥಗೊಳಿಸಲಾಗಿದೆ. ಆದ್ದರಿಂದ ಮಲಯಾಳಂ ಭಾಷೆಯಲ್ಲಿ ಬರೆದಿರುವ ಪತ್ರದಲ್ಲಿ ಕೇರಳ ಸಿಎಂ ತಮ್ಮ ಏಳು ಮಂದಿ ಸ್ನೇಹಿತರ ಹತ್ಯೆಗೆ ಸೂಕ್ತ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇವರ ಜೊತೆಗೆ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೆರಂಬರ ಸಬ್ ಇನ್ಸ್‍ಪೆಕ್ಟರ್ ಹರೀಶ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

    ಅಕ್ಟೋಬರ್ 28 ರಂದು ಬೆಳಗ್ಗೆ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ನಾಲ್ವರು ಮಾವೋವಾದಿಗಳು ಹತರಾಗಿದ್ದರು. ಕೇರಳದ ಥಂಡರ್ ಬೋಲ್ಟ್ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದ್ದು, ಯಶಸ್ವಿಯಾಗಿ ನಾಲ್ವರನ್ನು ಹತ್ಯೆ ಮಾಡಿತ್ತು.

    ಇತ್ತೀಚಿಗೆ ಮಾವೋವಾದಿಗಳ ಉಪಟಳ ಕೇರಳದಲ್ಲಿ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾದು ಕುಳಿತಿದ್ದರು. ಅದರಂತೆ ಸೋಮವಾರ ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದರು. ಈ ವೇಳೆ ಪಾಲಕ್ಕಾಡ್ ಅರಣ್ಯದ ಮಂಚಕತ್ತಿ ಎಂಬ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿಯಾಗಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ಕರ್ನಾಟಕ ತಮಿಳುನಾಡು ಮತ್ತು ಕೇರಳದಲ್ಲಿ ಮಾವೋವಾದಿಗಳು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದ್ದರಿಂದ ಕೆಲ ಸೂಕ್ಷ್ಮ ಪ್ರದೇಶದ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಆದರೆ ಕೇರಳದಲ್ಲಿ ಬಿಟ್ಟರೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾವೋವಾದಿಗಳು ಕಾಣಿಸಿಕೊಂಡಿರಲಿಲ್ಲ. 2014 ರಿಂದ 2017ರವರೆಗೆ ಕೇರಳದಲ್ಲಿ ಮಾವೋವಾದಿಗಳ ವಿರುದ್ಧ 23 ವಿವಿಧ ಕೇಸ್‍ಗಳು ದಾಖಲಾಗಿತ್ತು.

  • ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

    ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

    ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ.

    ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ, ಸದನದಲ್ಲೇ ಪ್ರತಿಭಟನೆ ನಡೆಸಿದ್ದರು.

    ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಸಿಎಂ ಪಿಣರಾಯ್, ಶಬರಿಮಲೆಯಲ್ಲಿ ಜಾರಿಮಾಡಲಾಗಿರುವ ನಿಷೇಧಾಜ್ಞೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸುವುದಿಲ್ಲ. ನಾವು ಸುಪ್ರೀಂ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕಾಗಿದೆ. ಶಬರಿಮಲೆಯಲ್ಲಿ ಜಾರಿಯಲ್ಲಿರುವ ಆದೇಶದ ಬಗ್ಗೆ ಹೈ ಕೋರ್ಟ್ ಕೂಡ ಸಮ್ಮತಿ ಸೂಚಿಸಿದೆ. ಹೀಗಾಗಿ ನಿಷೇಧಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಬೆಂಬಲದೊಂದಿಗೆ ಸಂಘ ಪರಿವಾರದವರು ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ. ಹೀಗಾಗಿ ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಿ ಮಾಡಲು ಬಿಡುವುದಿಲ್ಲವೆಂದು ಖಡಕ್ ಆಗಿ ಉತ್ತರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಹಾಯಕ್ಕೆ ಸಹಾಯ ತತ್ವದ ಮೂಲಕ ಮಾನವೀಯತೆ ಮೆರೆದ ಲಿನಿ ನರ್ಸ್ ಪತಿ!

    ಸಹಾಯಕ್ಕೆ ಸಹಾಯ ತತ್ವದ ಮೂಲಕ ಮಾನವೀಯತೆ ಮೆರೆದ ಲಿನಿ ನರ್ಸ್ ಪತಿ!

    ತಿರುವನಂತಪುರಂ: ಒಬ್ಬರಿಂದ ಸಹಾಯ ಪಡೆದ ಮೇಲೆ, ಮತ್ತೊಬ್ಬರಿಗೆ ಸಹಾಯ ಮಾಡಬೇಕು ಎನ್ನುವುದು ಮಾನವೀಯತೆ ತತ್ವ. ಈ ತತ್ವವನ್ನು ಕೇರಳದಲ್ಲಿ ಇತ್ತೀಚೆಗೆ ನಿಪಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದ ಪತಿ ಪಾಲಿಸಿ ಮಾನವೀಯತೆ ಮೆರೆದಿದ್ದಾರೆ.

    ಕೇರಳದ ನರ್ಸ್ ಲಿನಿ ನಿಪಾ ವೈರಸ್ ದಾಳಿಗೆ ತುತ್ತಾಗಿ ಮೃತಪಟ್ಟಿದ್ದರು. ಹೀಗಾಗಿ ಅವರ ಕುಟುಂಬಕ್ಕೆ 20 ಲಕ್ಷ ರೂ. ಹಾಗೂ ಪತಿಗೆ ಉದ್ಯೋಗ ನೀಡುವ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೀಡಿದ್ದರು.

    ಸರ್ಕಾರ ತನ್ನ ಭರವಸೆ ಪ್ರಕಾರ ನರ್ಸ್ ಲಿನಿ ಪತಿ ಸಂಜೇಶ್‍ಗೆ ರಾಜ್ಯ ಆರೋಗ್ಯ ಇಲಾಖೆ ಕ್ಲರ್ಕ್ (ಗುಮಾಸ್ತ) ಕೆಲಸವನ್ನು ನೀಡಲಾಗಿದೆ. ಸೇವೆಗೆ ಸೇರಿದ ಸಂಜೇಶ್ ಅವರು ತಮ್ಮ ಮೊದಲ ತಿಂಗಳ ವೇತನವನ್ನು ಕೇರಳ ರಾಜ್ಯದ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ದಾನ ಮಾಡಿದ್ದಾರೆ.

    ಯಾರು ಲಿನಿ ನರ್ಸ್?
    ಇತ್ತೀಚೆಗೆ ಭಾರೀ ಪ್ರಮಾಣದಲ್ಲಿ ಜಾಗತೀಕ ಮಟ್ಟದಲ್ಲಿ ಆತಂಕ ಹುಟ್ಟಿಸಿದ್ದ ನಿಪಾ ವೈರಸ್ ಗೆ ಕೇರಳದ ನರ್ಸ್ ಲಿನಿ ಬಲಿಯಾಗಿದ್ದರು. ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ 31 ವರ್ಷ ಲಿನಿ, ತನ್ನ ಸಾವು ಖಚಿತವಾದ ಹಿನ್ನೆಲೆಯಲ್ಲಿ ಪತಿಗೆ ಭಾವನಾತ್ಮಕ ಪತ್ರ ಬರೆದಿದ್ದರು. ಈ ವಿಚಾರ ತಿಳಿದು ಕೂಡಲೇ ಬಹರೈನ್ ನಲ್ಲಿ ಉದ್ಯೋಗದಲ್ಲಿದ್ದ ಪತಿ ಸಜೀಶ್ ಊರಿಗೆ ವಾಪಸ್ಸಾಗಿದ್ದರು. ಅಲ್ಲದೇ ಕೇವಲ 2 ನಿಮಿಷವಷ್ಟೇ ಪತ್ನಿ ಮುಖ ನೋಡಿದ್ದರು.

    ಲಿನಿ ಡೆತ್ ನೋಟ್:
    ತನ್ನ ಸಾವು ಖಚಿತವಾದ ಲಿನಿ ತನ್ನ ಪತಿ ಸಜೀಶ್ ಗೆ ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ ಇಬ್ಬರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ತಿಳಿಸಿದ್ದರು. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ಸಜೀಶ್ ಅವರಿಗೂ ಈ ಪತ್ರ ತಲುಪಿತ್ತು. ಲಿನಿ ಅವರು ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರು. 5 ಹಾಗೂ 2 ವರ್ಷದ ಮಕ್ಕಳ ಜೊತೆಯೂ ಕಾಲ ಕಳೆಯುತ್ತಿದ್ದರು. ಸದ್ಯ ಈ ಇಬ್ಬರೂ ಮಕ್ಕಳು ಇನ್ನೂ ತಾಯಿಯ ಬರುವಿಕೆಗೆ ಕಾದು ಕುಳಿತಿದ್ದು, ಮಕ್ಕಳ ಮುಖವನ್ನು ನೋಡಿದಾಗ ಕರುಳು ಚುರುಕ್ ಅನ್ನುತ್ತದೆ.

    ಕೇರಳದಲ್ಲಿ ನಿಲ್ಲದ ಮಳೆ:
    ದೇವರನಾಡಲ್ಲಿ ಮಳೆ ಆರ್ಭಟ ಹೆಚ್ಚಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ಯಾಂಪ್‍ಗಳನ್ನು ನಿರ್ಮಿಸಿ ಸಂತ್ರಸ್ತರಿಗೆ ಆಶ್ರಯ ಹಾಗೂ ಆಹಾರ ವ್ಯವಸ್ಥೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಒಟ್ಟು 8 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

    ಬುಧವಾರ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಂ.ಸುಧೇರನ್ ನಿವಾಸವು ಸಂಪೂರ್ಣ ಜಲಾವೃತವಾಗಿತ್ತು. ಅವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರವಾಹ ವೀಕ್ಷಣೆಗೆ ಒಂದೇ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಕೇರಳ ಸಿಎಂ, ವಿಪಕ್ಷ ನಾಯಕ!

    ಪ್ರವಾಹ ವೀಕ್ಷಣೆಗೆ ಒಂದೇ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಕೇರಳ ಸಿಎಂ, ವಿಪಕ್ಷ ನಾಯಕ!

    ತಿರುವನಂತಪುರಂ: ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರು ಕಲಾಪ ಹೊರತು ಪಡೆಸಿ ಉಳಿದ ಸಮಯದಲ್ಲಿ ಒಂದೇಕಡೆ ಇರುವುದು ಅಪರೂಪ. ಕೇರಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಬೆಳೆ ನಾಯಕರಿಬ್ಬರನ್ನು ಒಂದಾಗಿಸಿದೆ.

    ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ವಿಪಕ್ಷ ನಾಯಕ ರಮೇಶ್ ಚೆನ್ನಿಥಲ ಒಂದೇ ಹೆಲಿಕಾಪ್ಟರ್‍ನಲ್ಲಿ ವೈನಾಡಿಗೆ ಬಂದು, ಪ್ರವಾಹ ವಿಕ್ಷಣೆ ಮಾಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಭಾರೀ ಮಳೆಯಿಂದಾಗಿ ಅಲಲ್ಲಿ ಭೂಕುಸಿತ, ರಸ್ತೆಗಳೇ ಕೊಚ್ಚಿ ಹೋಗಿರೋದ್ದರಿಂದ ರಕ್ಷಣಾ ಕಾರ್ಯಾಚರಣೆ ದುಸ್ತರವಾಗಿದೆ. ಮಳೆಯ ಅಬ್ಬರಕ್ಕೆ 30 ಮಂದಿ ಮೃತಪಟ್ಟಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆಗಾಗಿ ಸರ್ಕಾರವು ವಿವಿಧ ಕ್ರಮಕೈಗೊಂಡಿದೆ.

    ಇಡುಕ್ಕಿ ಡ್ಯಾಂನಿಂದ ನೀರು ಹರಿದು ಹಲವು ಗ್ರಾಮಗಳು ಪ್ರವಾಹದ ಸುಳಿಯಲ್ಲಿ ಸಿಲುಕಿವೆ. ಸೇನೆಯ 8 ತುಕಡಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಮಿಲಿಟರಿ ಎಂಜಿನಿಯರಿಂಗ್ ಸರ್ವಿಸಸ್‍ನಿಂದ ಮೂರು ತುಕಡಿಗಳನ್ನು, ಬೆಂಗಳೂರಿನಿಂದ ಎರಡು, ಹೈದರಾಬಾದ್‍ನಿಂದ ಒಂದು ತುಕಡಿಯನ್ನು ಕೇರಳಕ್ಕೆ ಕಳುಹಿಸಲಾಗಿದೆ. ಈ ನಡುವೆ, ವಯನಾಡ್ ಜಿಲ್ಲೆಯ ಪನಮರಮ್‍ನಲ್ಲಿ ಪ್ರವಾಹದ ನಡುವೆ ಸಿಕ್ಕಿಹಾಕಿಕೊಂಡ ಸುಮಾರು 50 ಮಂದಿಯನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಇತ್ತ ರಾಜ್ಯ ಸರ್ಕಾರವು ಸಕೇರಳಕ್ಕೆ 10 ಕೋಟಿ ರೂ. ನೀಡಿ ಸಹಾಯಹಸ್ತ ನೀಡಿದೆ.

  • ಕೇರಳ ಸಿಎಂ ನಿವಾಸದಲ್ಲಿ ಚಾಕು ಹಿಡಿದು ಪ್ರತಿಭಟಿಸಿದ ವ್ಯಕ್ತಿ!

    ಕೇರಳ ಸಿಎಂ ನಿವಾಸದಲ್ಲಿ ಚಾಕು ಹಿಡಿದು ಪ್ರತಿಭಟಿಸಿದ ವ್ಯಕ್ತಿ!

    ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೆಹಲಿ ನಿವಾಸದ ಮುಂದೆ ಚಾಕು ಹಿಡಿದು ಪ್ರತಿಭಟನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.

    ಭಾರೀ ಭದ್ರತೆಯ ನಡುವೆಯೇ ಮುಖ್ಯಮಂತ್ರಿ ನಿವಾಸದ ಒಳಗೆ ಚಾಕು ಹಿಡಿದು ಬಂದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಹಿಡಿಯಲು ಮುಂದಾದರು. ಆದರೆ ವ್ಯಕ್ತಿ ನಾನು ಯಾರಿಗೆ ಏನು ಮಾಡುವುದಿಲ್ಲ. ನೀವು ಹಿಂದಕ್ಕೆ ಹೋಗಿ ಎಂದು ಅಧಿಕಾರಿಯೊಬ್ಬರಿಗೆ ತಾಕೀತು ಮಾಡುತ್ತಿದ್ದರು.

    ನನಗೆ ಮುಖ್ಯಮಂತ್ರಿಯ ಬಳಿ ಯಾವುದೇ ಕೆಲಸವಿಲ್ಲ ಎನ್ನುತ್ತ, ಮನವಿ ಪತ್ರಗಳನ್ನು ತೋರಿಸಿ ನಾನು ಉನ್ನತ ಅಧಿಕಾರಿಗಳವರೆಗೆ ಹೋದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ವ್ಯಕ್ತಿಯ ವರ್ತನೆಯಿಂದ ವಿಚಲಿತರಾದ ಭದ್ರತಾ ಸಿಬ್ಬಂದಿ, ಆತನ ಜೊತೆಗೆ ಒಬ್ಬ ಅಧಿಕಾರಿ ಮಾತನಾಡುವಂತೆ ನಿಂತಿದ್ದಾರೆ. ಉಳಿದ ಕೆಲ ಭದ್ರತಾ ಸಿಬ್ಬಂದಿ ವ್ಯಕ್ತಿಯ ಹಿಂಬದಿಯಿಂದ ಗಟ್ಟಿಯಾಗಿ ಹಿಡಿದು, ಚಾಕು ಕಸಿದುಕೊಂಡಿದ್ದಾರೆ. ಬಳಿಕ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ವೇಳೆ ಸಿಎಂ ಪಿಣರಾಯಿ ವಿಜಯನ್ ಅಲ್ಲಿಯೇ ಇದ್ದರೂ, ಸ್ಥಳಕ್ಕೆ ಬಂದು ವಿಚಾರಿಸಲಿಲ್ಲ ಎಂದು ವರದಿಯಾಗಿದೆ.

    ಇಂತಹದ್ದೇ ಘಟನೆ ಇಂದು ಜಮ್ಮುದಲ್ಲಿ ನಡೆದಿದ್ದು, ಜಮ್ಮು ಕಾಶ್ಮಿರ್ ಮುಖ್ಯಮಂತ್ರಿ ಫಾರುಕ್ ಅಬ್ದುಲ್ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ಕಾರು ನುಗ್ಗಿಸಿದ್ದರಿಂದ ಭದ್ರತಾ ಸಿಬ್ಬಂದಿ ಆತನ ಮೇಲೆ ಗುಂಡು ಹಾರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews