Tag: CM Tirath Singh Rawat

  • ಇಂದಿನಿಂದ ಕೇದಾರನಾಥ ದೇವಾಲಯ ಓಪನ್ – ಆನ್‍ಲೈನ್ ಮೂಲಕ ಭಕ್ತರಿಗೆ ದೇವರ ದರ್ಶನ

    ಇಂದಿನಿಂದ ಕೇದಾರನಾಥ ದೇವಾಲಯ ಓಪನ್ – ಆನ್‍ಲೈನ್ ಮೂಲಕ ಭಕ್ತರಿಗೆ ದೇವರ ದರ್ಶನ

    ದೆಹ್ರಾಡೂನ್: ಕೋವಿಡ್-19 ಲಾಕ್‍ಡೌನ್‍ನಿಂದ ಮುಚ್ಚಿದ್ದ ಕೇದಾರನಾಥ ದೇವಾಲಯವನ್ನು ಇಂದು ಬೆಳಗ್ಗೆ 5 ಗಂಟೆಗೆ ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭಕ್ಕೆ ಭಕ್ತರಿಗೆ ಪ್ರವೇಶವಿರಲಿಲ್ಲ. ಆದರೆ ಬದಲಾಗಿ ಆನ್‍ಲೈನ್ ಮೂಲಕ ದರ್ಶನ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.

    ಕೇದಾರನಾಥ ದೇವಾಲಯವನ್ನು ಪುನರಾಂಭಿಸಿರುವ ಬಗ್ಗೆ ಉತ್ತರಾಖಂಡ್ ಸಿಎಂ ತಿರತ್ ಸಿಂಗ್ ರಾವತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಕೇದಾರನಾಥ ದೇವಾಲಯವನ್ನು ಇಂದು ಬೆಳಗ್ಗೆ 5 ಗಂಟೆಗೆ ತೆರೆಯಲಾಯಿತು. ಎಲ್ಲರೂ ಆರೋಗ್ಯವಾಗಿರಲು ನಾನು ಬಾಬಾ ಕೇದಾರನಾಥನನ್ನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚಾಗಿರುವ ಹಿನ್ನೆಲೆ ಚಾರ್‍ಧಾಮ್ ದೇವಸ್ಥಾನ ಮಂಡಳಿಯು ಚಾರ್‍ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದರೆ ಆದರೆ ಆಡಳಿತ ಮಂಡಳಿಯು ದೇಶಾದ್ಯಂತ ಲಕ್ಷಾಂತರ ಭಕ್ತರಿಗೆ ಆನ್‍ಲೈನ್ ಮೂಲಕ ಬದ್ರಿನಾಥ್, ಕೇದಾರನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಧಮ್ಸ್ ದೇವಾಲಯಗಳ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

  • ಶಾರ್ಟ್ಸ್ ಧರಿಸಿ ಅಂಗಾಂಗ ಪ್ರದರ್ಶನಕ್ಕೆ ಕಾಲೇಜಿಗೆ ಬರೋದಾ? ಮತ್ತೆ ಮಹಿಳೆಯರ ಉಡುಪು ಪ್ರಶ್ನಿಸಿದ ಸಿಎಂ ರಾವತ್

    ಶಾರ್ಟ್ಸ್ ಧರಿಸಿ ಅಂಗಾಂಗ ಪ್ರದರ್ಶನಕ್ಕೆ ಕಾಲೇಜಿಗೆ ಬರೋದಾ? ಮತ್ತೆ ಮಹಿಳೆಯರ ಉಡುಪು ಪ್ರಶ್ನಿಸಿದ ಸಿಎಂ ರಾವತ್

    ಡೆಹರಾಡೂನ್: ಸಿಎಂ ಪಟ್ಟಕ್ಕೇರಿದಾಗಿನಿಂದಲೂ ಉತ್ತರಾಖಂಡದ ಬಿಜೆಪಿ ಮುಖ್ಯಮಂತ್ರಿ ತೀರ್ಥ್ ಸಿಂಗ್ ರಾವತ್ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬುಧವಾರ ರಿಪ್ಪಡ್ ಜೀನ್ಸ್ ಬಗ್ಗೆ ಕಮೆಂಟ್ ಮಾಡಿದ್ದ ಮುಖ್ಯಮಂತ್ರಿಗಳ ಮತ್ತೊಂದು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಮಹಿಳೆಯರು ಧರಿಸುವ ಕಟ್ ಡ್ರೆಸ್ ಅಥವಾ ಶಾರ್ಟ್ಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಂ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವ ಮಹಿಳೆಯರು, ಮುಖ್ಯಮಂತ್ರಿಗಳ ತಮ್ಮ ಆಲೋಚನೆ ಬದಲಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?:
    ನಾನು ಶ್ರೀನಗರದಲ್ಲಿ ಓದುತ್ತಿರುವಾಗ ಚಂಡಿಗಢನಿಂದ ಓರ್ವ ಯುವತಿ ಬಂದಿದ್ದಳು. ಶ್ರೀನಗರದವರೇ ಆಗಿದ್ರೂ ಚಂಡೀಗಢನಿಂದ ಬಂದಿದ್ದರಿಂದ ಯುವತಿಯ ಉಡುಗೆ ಭಿನ್ನವಾಗಿತ್ತು. ಅದಕ್ಕೇ ಏನಂತಾರೆ ಅಂದ್ರೆ ಕಟ್ ಡ್ರೆಸ್ ಅಲ್ವಾ? ನಾವು ಆಕೆಯನ್ನ ಹಾಸ್ಯ ಮಾಡುತ್ತಿದ್ದೇವೆ. ಕಾರಣ ಎಲ್ಲ ಹುಡುಗರು ಆಕೆ ಹಿಂದೆಯೇ ತಿರುಗುತ್ತಿದ್ರು. ಯುನಿವರ್ಸಿಟಿಗೆ ಓದೋದಕ್ಕೆ ಬರೋದಾ ಅಥವಾ ಅಂಗಾಂಗ ಪ್ರದರ್ಶನಕ್ಕೆ ಬರೋದಾ ಎಂದು ತೀರ್ಥ್ ಸಿಂಗ್ ವೀಡಿಯೋದಲ್ಲಿ ಪ್ರಶ್ನೆ ಮಾಡಿದ್ದಾರೆ.

    ಹರಿದ ಜೀನ್ಸ್ ಹೇಳಿಕೆ ಬೆನ್ನಲ್ಲೇ ಈ ವೀಡಿಯೋ ವೈರಲ್ ಆಗಿದೆ. ವಿಪಕ್ಷಗಳು ಸೇರಿದಂತೆ ಸಿಎಂ ಹೇಳಿಕೆಯನ್ನ ಅಸ್ತ್ರವಾಗಿ ಬಳಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದ್ರೆ ಈ ವೀಡಿಯೋ ಎಲ್ಲಿಯದ್ದು ಮತ್ತು ಯಾವಾಗ ತೀರ್ಥ್ ಸಿಂಗ್ ಹೇಳಿಕೆ ನೀಡಿದ್ದು ಎಂಬುದರ ಬಗ್ಗೆ ವರದಿಯಾಗಿಲ್ಲ.

    ಹರಿದ ಜೀನ್ಸ್ ಧರಿಸೋದು ಯಾವ ಸಂಸ್ಕೃತಿ?: ಬುಧವಾರ ಮಕ್ಕಳ ಹಕ್ಕು ಮತ್ತು ಸಂರಕ್ಷಣಾ ಆಯೋಗದ ಕಚೇರಿ ಉದ್ಘಾಟಿಸಿ ಮಾತನಾಡಿದ್ದ ಸಿಎಂ, ಹರಿದ ಜೀನ್ಸ್ ಧರಿಸುವ ಮಹಿಳೆಯರು ಸಮಾಜಕ್ಕೆ ಏನು ಸಂದೇಶ ನೀಡುತ್ತಾರೆ? ಹರಿದ ಜೀನ್ಸ್ ಧರಿಸುವಿಕೆ ಇದ್ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ. ಈ ಜೀವನಶೈಲಿ ಪೋಷಕರ ಮೇಲೆ ನಿರ್ಧರಿತವಾಗಿರುತ್ತೆ ಎಂದು ಹೇಳಿದ್ದರು.

    ಒಂದು ದಿನ ವಿಮಾನಯಾನ ಮಾಡುವಾಗ ಮಹಿಳೆ ಇಬ್ಬರು ಮಕ್ಕಳ ಜೊತೆ ಬಂದು ಪಕ್ಕದಲ್ಲಿ ಕುಳಿತರು. ಮಹಿಳೆ ಹರಿದ ಜೀನ್ಸ್ ಧರಿಸಿದ್ದರು. ಸೋದರಿ ಎಲ್ಲಿಗೆ ಹೋಗ್ತೀದ್ದೀರಾ ಅಂತ ಕೇಳಿದಾಗ ಮಹಿಳೆ ತಮ್ಮ ಕಿರು ಪರಿಚಯ ಮಾಡಿಕೊಂಡರು. ಪತಿ ಜೆಎನ್‍ಯುನಲ್ಲಿ ಉಪನ್ಯಾಸಕರಾಗಿದ್ದು, ತಾನು ಎನ್‍ಜಿಓ ನಡೆಸುತ್ತಿರೋದಾಗಿ ತಿಳಿಸಿದರು. ಹರಿದ ಜೀನ್ಸ್ ಧರಿಸಿದ ಮಹಿಳೆ ಎನ್‍ಜಿಓ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಾರೆ. ನಮ್ಮ ಶಾಲಾ ದಿನಗಳಲ್ಲಿ ಈ ರೀತಿಯ ಜೀವನ ಶೈಲಿ ಇರಲಿಲ್ಲ ಎಂದು ಹೇಳಿದ್ದರು.