Tag: CM yediyurappa

  • ಅನ್‍ಲಾಕ್ ಸ್ಟೇಜ್ -3ಕ್ಕೆ ಕ್ಷಣಗಣನೆ – ಇಂದು ಸಂಜೆ ಸಿಎಂ ಬಿಎಸ್‍ವೈ ಮಹತ್ವದ ಸಭೆ

    ಅನ್‍ಲಾಕ್ ಸ್ಟೇಜ್ -3ಕ್ಕೆ ಕ್ಷಣಗಣನೆ – ಇಂದು ಸಂಜೆ ಸಿಎಂ ಬಿಎಸ್‍ವೈ ಮಹತ್ವದ ಸಭೆ

    – ಷರತ್ತುಗಳನ್ನು ಹೇರಿ ಓಪನ್‍ಗೆ ಅವಕಾಶ ಕೊಡುತ್ತಾ ಸರ್ಕಾರ?

    ಬೆಂಗಳೂರು: ರಾಜ್ಯದಲ್ಲಿ 3ನೇ ಹಂತದ ಅನ್‍ಲಾಕ್‍ಗೆ ಕೌಂಟ್‍ಡೌನ್ ಶುರುವಾಗಿದೆ. ಸೋಮವಾರದಿಂದ ಏನೆಲ್ಲಾ ರಿಲೀಫ್ ನೀಡಬೇಕು ಎಂಬುದುರ ಬಗ್ಗೆ ಇಂದು ನಡೆಯಲಿರುವ ಸಿಎಂ ಸಭೆಯಲ್ಲಿ ನಿರ್ಧಾರವಾಗಲಿದೆ.

    ಪಾಸಿಟಿವಿಟಿ ರೇಟ್ ನೋಡಿಕೊಂಡು ಎಲ್ಲಾ ಜಿಲ್ಲೆಗಳನ್ನು ಅನ್‍ಲಾಕ್ ಮಾಡುವ ಸಂಭವ ಇದೆ. ಮಾಲ್‍ಗಳ ಜೊತೆಗೆ ಚಿತ್ರಮಂದಿರಗಳೂ ಹಾಗೂ ಮಾರುಕಟ್ಟೆಗಳನ್ನೂ ಓಪನ್ ಮಾಡುವಂತೆ ಬಿಬಿಎಂಪಿ ಪ್ರಸ್ತಾವನೆ ಮುಂದಿಟ್ಟಿದೆ. ಮಾಲ್ ಹಾಗೂ ದೇವಸ್ಥಾನಗಳು ಓಪನ್ ಆಗುವ ಸುದ್ದಿ ಹರಡಿರೋದ್ರಿಂದ ಈಗಿನಿಂದಲೇ ಶುಚಿತ್ವ ಕಾರ್ಯ ನಡೆದಿದೆ. ಆದ್ರೆ ಆರೋಗ್ಯ ಮಂತ್ರಿಗಳು ಮಾತ್ರ, ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಅಂದಿದ್ದಾರೆ.

    ದೇಗುಲಗಳು ಅಧಿಕೃತವಾಗಿ ಓಪನ್ ಆಗಿಲ್ಲ. ಆದ್ರೂ ಬೀದರ್ ನ  ನರಸಿಂಹ ಝರಣಾ ದೇಗುಲಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ಕೊಡಗು ಲಾಕ್ ಆಗಿದ್ರೂ ಪ್ರವಾಸಿಗರು ಲಗ್ಗೆ ಇಡೋದು ನಿಂತಿಲ್ಲ. ಪ್ರವಾಸಿಗರಿದ್ದ ರೆಸಾರ್ಟ್ ಮೇಲೆ ಪೊಲೀಸ್ ರೇಡ್ ನಡೆದಿದೆ. ಕೊಡಗು ಜಿಲ್ಲೆಯನ್ನು ಕಂಪ್ಲೀಟ್ ಅನ್‍ಲಾಕ್ ಮಾಡಬಾರದು ಅಂತ ಶಾಸಕ ಅಪ್ಪಚ್ಚುರಂಜನ್ ಮನವಿ ಮಾಡಿದ್ದಾರೆ. ಹರಿಹರ ಶಾಸಕ ರಾಮಪ್ಪ ಮಗಳ ಮದ್ವೆಯಲ್ಲಿ ರೂಲ್ಸ್ ಬ್ರೇಕ್ ಆಗಿತ್ತು. ಸಾವಿರಾರು ಮಂದಿ ಪಾಲ್ಗೊಂಡಿದ್ರು. ಇದಕ್ಕೆ ಸಾಕ್ಷಿಯಾಗಿದ್ದು ಸನ್ಮಾನ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ. ಈ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿಯೇ ಇಲ್ವಂತೆ.

    ಡೆಲ್ಟಾ ಪ್ಲಸ್ ಆತಂಕ:
    ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹೊತ್ತಲ್ಲಿ ಡೆಲ್ಟಾ ವೈರಸ್ ಹೆಡೆ ಬಿಚ್ಚಿ ತಿಂಗಳುಗಳೇ ಕಳೆದಿವೆ. ಆದ್ರೆ ಇದನ್ನು ಮುಚ್ಚಿಡಲು ಸರ್ಕಾರ ನೋಡ್ತಾ ಎಂಬ ಪ್ರಶ್ನೆ ಎದ್ದಿದೆ. ಹೆಲ್ತ್ ಬುಲೆಟಿನ್‍ನಲ್ಲಿ ಪ್ರಕಟಿಸಲಾದ 518 ಕೇಸ್ ಪೈಕಿ 200 ಡೆಲ್ಟಾ ಕೇಸ್‍ಗಳು ಹೊಸವಲ್ಲ.. ಇದೆಲ್ಲಾ ಪತ್ತೆಯಾಗಿ ಒಂದೂವರೆ ತಿಂಗಳೇ ಕಳೆದಿವೆ ಅಂತಾ ತಜ್ಞ ವೈದ್ಯ ಡಾ.ವಿಶಾಲ್ ರಾವ್ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ನೀಡಿದ ಹೇಳಿಕೆ ಕೂಡ ಅಚ್ಚರಿ ಮೂಡಿಸುತ್ತೆ. ಕೊರೊನಾ ಕೇಸ್‍ಗಳ ಪೈಕಿ ಶೇಕಡಾ 70ರಷ್ಟು ಡೆಲ್ಟಾ ಪಾಲಿದೆ ಎಂದಿದ್ದಾರೆ. ಇದನ್ನೂ ಓದಿ: ನಾನು ಓಪನ್ ಹಾರ್ಟೆಡ್, ಸಿದ್ದರಾಮಯ್ಯ ಮಾತನಾಡಬೇಡ ಎಂದಿದ್ದಾರೆ: ಜಮೀರ್

    ಡೆಲ್ಟಾ ವಿಚಾರದಲ್ಲಿ ರಾಜ್ಯಕ್ಕೆ ಮಹಾರಾಷ್ಟ್ರ, ಕೇರಳ ಕಂಟಕವಾದಂತೆ ಕಾಣ್ತಿದೆ. ನಿತ್ಯ ಸಾವಿರಾರು ಮಂದಿ ರೈಲು, ಬಸ್, ವಿಮಾನದ ಮೂಲಕ ಓಡಾಡ್ತಿದ್ದಾರೆ. ಇತ್ತ ಕೋವಿಡ್ ಟೆಸ್ಟ್ ಕೂಡ ಸರಿಯಾಗಿ ಆಗ್ತಿಲ್ಲ. ಈವರೆಗೂ ಸರಿಸುಮಾರು 100 ದೇಶಗಳಲ್ಲಿ ಡೆಲ್ಟಾ ವೈರಸ್ ಹಬ್ಬಿದ್ದು, ಹಲವು ದೇಶಗಳು ಮತ್ತೆ ಲಾಕ್ ಆಗ್ತಿವೆ. ರಷ್ಯಾದಲ್ಲಿ ಬೂಸ್ಟರ್ ಡೋಸ್ ನೀಡಲಾಗ್ತಿದೆ. ಡೆಲ್ಟಾ ಎದುರಿಸಲು ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ಸಮರ್ಥವಾಗಿದೆ ಅಂತಾ ಕಂಪನಿ ಹೇಳಿಕೊಂಡಿದೆ. ಮೊದಲ ಡೋಸ್ ತೆಗೆದುಕೊಂಡ 29 ದಿನಗಳಲ್ಲೇ ಡೆಲ್ಟಾ ವೈರಸನ್ನು ನಿರ್ವೀರ್ಯ ಮಾಡುವ ಆಂಟಿಬಾಡಿ ಉತ್ಪತ್ತಿ ಆಗುತ್ತವೆ ಎಂದು ತಿಳಿಸಿದೆ. ಇದನ್ನೂ ಓದಿ: ಬದುಕು ಕೊಡೋಕಾದ್ರೆ ಬನ್ನಿ, ಆಶ್ವಾಸನೆ ನೀಡೋಕಾದ್ರೆ ಬರಲೇಬೇಡಿ : ಸಚಿವ, ಶಾಸಕರಿಗೆ ಮಲೆನಾಡಿಗರ ಕ್ಲಾಸ್

  • ರಾಜ್ಯದ ಭೂಪಟದಲ್ಲಿ ಶಿವಮೊಗ್ಗ ಬಿಟ್ರೆ ಬೇರೆ ಜಿಲ್ಲೆ ಇಲ್ವೇ ಇಲ್ವಾ: ಸಿಎಂಗೆ ಹೆಚ್.ಡಿ ರೇವಣ್ಣ ಪ್ರಶ್ನೆ

    ರಾಜ್ಯದ ಭೂಪಟದಲ್ಲಿ ಶಿವಮೊಗ್ಗ ಬಿಟ್ರೆ ಬೇರೆ ಜಿಲ್ಲೆ ಇಲ್ವೇ ಇಲ್ವಾ: ಸಿಎಂಗೆ ಹೆಚ್.ಡಿ ರೇವಣ್ಣ ಪ್ರಶ್ನೆ

    ಹಾಸನ: ಮುಖ್ಯಮಂತ್ರಿ ಜಿಲ್ಲೆ ಶಿವಮೊಗ್ಗ ಒಂದಕ್ಕೆ 2019 ರಿಂದ ಇಲ್ಲಿಯವರೆಗೆ ನ್ಯಾಷನಲ್ ಹೈವೇ ಅಥಾರಿಟಿಯಿಂದ ಐದೂವರೆ ಸಾವಿರ ಕೋಟಿ ಕಾಮಗಾರಿ ನೀಡಲಾಗಿದೆ. ರಾಜ್ಯದ ಭೂಪಟದಲ್ಲಿ ಬೇರೆ ಜಿಲ್ಲೆಗಳು ಇಲ್ವೆ ಇಲ್ವಾ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ಪ್ರಶ್ನಿಸಿದ್ದಾರೆ.

    ಬಿಜೆಪಿ ಎಂಪಿಗಳು ಇದರ ಬಗ್ಗೆ ಉಸಿರಾಡುತ್ತಿಲ್ಲ, ಟಿಎಡಿಎ, ಸಂಬಳಕ್ಕಾಗಿ ಓಡಾಡುತ್ತಿವೆ. ಶಿವಮೊಗ್ಗಕ್ಕೆ ಮಾತ್ರ ಅಚ್ಛೇ ದಿನ್ ಬಂದಿದೆ. ಆತ್ಮಸ್ಥೈರ್ಯ ಇದ್ದರೆ ಬಿಜೆಪಿಯ 25 ಸಂಸದರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ನಿತಿನ್ ಗಡ್ಕರಿ ಈಸ್ ಎ ಡೈನಾಮಿಕ್ ಲೀಡರ್, ಟಿ.ಆರ್.ಬಾಲು, ಗಡ್ಕರಿ ಇಬ್ಬರೂ ನಾನು ಕಂಡ ಉತ್ತಮ ಸಚಿವರು. ಬಿಜೆಪಿ ರಾಜ್ಯಾಧ್ಯಕ್ಷರಿಗೆ 10 ವರ್ಷದಿಂದ ಸಕಲೇಶಪುರದಿಂದ ಗುಂಡ್ಯ -ಬಿಸಿ ರೋಡ್ ಗೆ ರಸ್ತೆ ಮಾಡಿಸಲು ಆಗಿಲ್ಲ. ಮಂಗಳೂರಿನಿಂದ ವಿಮಾನದಲ್ಲಿ ಹೋಗುತ್ತಾರೆ. ರಸ್ತೆಯಲ್ಲಿ ಓಡಾಡಲು ಜನರು ಹರಸಾಹಸಪಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

     

    ಮುಖ್ಯಮಂತ್ರಿಗೆ ಜೈ ಅಂದವರಿಗೆ 850 ಕೋಟಿ ನೀರಾವರಿ ಕಾಮಗಾರಿಗೆ ಹಣ ನೀಡಿದ್ದಾರೆ. ಅಧಿಕಾರಿಗಳು ವರ್ಗಾವಣೆಗೆ ಹೆದರಿ ಬಿಜೆಪಿಯವರು ಹೇಳಿದಂತೆ ಕೇಳುತ್ತಾರೆ. ಮುಂದೊಂದು ದಿನ ಕೆಲವು ಅಧಿಕಾರಿಗಳು ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ನಿಂಬೆಹಣ್ಣಿನ ಜ್ಯೂಸ್ ಮಾರುತ್ತಿದ್ದ ಮಹಿಳೆ ಇಂದು ಪೊಲೀಸ್

  • ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ – ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

    ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ – ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

    ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ.

    ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು ದಿನ ಈ ರೀತಿ ಮುಚ್ಚಿಟ್ಟು ಸುಳ್ಳು ಸುದ್ದಿ ಹಬ್ಬಿಸಲು ಆಗುತ್ತೆ. ಒಂದು ದಿನ ಪತ್ತೆ ಆಗೇ ಆಗುತ್ತೆ. ಪಾರ್ಟಿ ಎಲ್ಲವನ್ನೂ ಗಮನಿಸುತ್ತಿರುತ್ತೆ, ಯಾವಾಗ ಯಾವ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತದೆ ಎಂದರು.

    ಉದ್ದೇಶ ಪೂರ್ವಕವಾಗೋ, ದುರುದ್ದೇಶ ಪೂರ್ವಕವಾಗೋ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಅರುಣ್ ಸಿಂಗ್ ವರದಿ ನೀಡಿದರು ಎಂಬುವುದು ಕೂಡ ಸುಳ್ಳು ಸುದ್ದಿ ಎಂದರು. ಅರುಣ್ ಸಿಂಗ್ ನಾನು ಕಳೆದ 30 ವರ್ಷಗಳ ಒಡನಾಡಿಗಳು. ಅವರಿಗೆ ಫೋನ್ ಮಾಡಿ ಮಾತನಾಡಿದೆ. ಅವರು ಮೂರು ದಿನ ಕೇಂದ್ರದಲ್ಲೇ ಇಲ್ಲ. ಆದರೆ, ಕೆಲವು ಪ್ರಮುಖ ಪತ್ರಿಕೆಗಳು, ಸುದ್ದಿ ವಾಹಿನಿಗಳು ವರದಿ ನೀಡಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನ ಹಬ್ಬಿಸಿದರು. ಇದರ ಹಿಂದೆ ಯಾರದ್ದೋ ಷಡ್ಯಂತ್ರದ ಕೈವಾಡವಿರುವಂತೆ ಕಾಣುತ್ತಿದೆ ಎಂದು ನುಡಿದರು.

    ಅಪಪ್ರಚಾರ ಮಾಡಬೇಕೆಂಬ ಷಡ್ಯಂತ್ರ ಹಾಗೂ ಒಂದಲ್ಲ ಒಂದು ರೀತಿ ಸುದ್ದಿಯನ್ನ ಜೀವಂತವಾಗಿಡಬೇಕೆಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಹಾಗಾಗಿ, ಇದರ ಹಿಂದೆ ಒಂದು ಷಡ್ಯಂತ್ರ ಇದೆ. ಷಡ್ಯಂತ್ರದ ಕಾರಣದಿಂದಾಗಿಯೇ ಸುಳ್ಳು ಸುದ್ದಿಗಳನ್ನು ಬಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮುಖ್ಯಮಂತ್ರಿ ಕುರ್ಚಿಗೆ ಡಿಕೆಶಿ ಬಹಳ ದಿನದಿಂದ ಕಾಯ್ತಿದ್ದಾರೆ: ಸಂಗಣ್ಣ

    ಸುದ್ದಿ ಬಿಟ್ಟು ಚರ್ಚೆ ಹುಟ್ಟು ಹಾಕುತ್ತಾರೆ. ಚರ್ಚೆಗೆ ಬಿಟ್ಟು ಕ್ರಿಯೆ-ಪ್ರತಿಕ್ರಿಯೆ ಕೇಳುತ್ತಾರೆ. ಕ್ರಿಯೆ-ಪ್ರತಿಕ್ರಿಯ ಮೂಲಕ ಅದೇ ಜೀವಂತವಾಗಿರುತ್ತದೆ ಎಂದು ಹೇಳಿದರು. ನಾನು ಮೂರು ದಿನ ದೆಹಲಿಯಲ್ಲಿ ಇಲ್ಲ. ಯಾವ ಪತ್ರಿಕೆಯಲ್ಲಿ ಬಂದಿದೆ, ನನಗೆ ಗೊತ್ತಿಲ್ಲ. ಡಿಟೇಲ್ಸ್ ಕೊಡು ಎಂದು ಅರುಣ್ ಸಿಂಗ್ ಅವರೇ ನನಗೆ ಹೇಳಿದ್ದಾರೆ. ಸುದ್ದಿ ಹುಟ್ಟುಹಾಕಿದವರು ಯಾರು. ಸುದ್ದಿಯ ಸೃಷ್ಠಿಕರ್ತರು ಯಾರೆಂದು ಪ್ರಶ್ನಿಸಿದರು.

    ಸುಳ್ಳು ಸುದ್ದಿಯ ಸೃಷ್ಟಿಕರ್ತರು ಹಿಂಗೇಲ್ಲಾ ಸೃಷ್ಟಿ ಮಾಡುವ ಕೆಲಸ ಮಾಡುತ್ತಿರುತ್ತಾರೆ. ಕೆಲಸ ಇಲ್ಲದವರು ಅದನ್ನು ಮಾಡುತ್ತಾರೆ. ನಾವು ಜನರ ಮಧ್ಯೆ ಇದ್ದು, ಕೆಲಸ ಮಾಡುವವರು. ಕ್ಷೇತ್ರಕ್ಕೆ ಬಂದರೆ ಜನರ ಜೊತೆ ಇರುತ್ತೇವೆ. ಇಲ್ಲವಾದರೆ ಸಂಘಟನೆ ಕೆಲಸದಲ್ಲಿ ಇರುತ್ತೇವೆ. ನಮಗೆ ಯೋಚನೆ ಮಾಡಲು ಪರುಸೊತ್ತು ಇರಲ್ಲ. ಒಂದಲ್ಲ ಒಂದು ಊರಲ್ಲಿ ಯಾವುದಾದರೂ ಚಟುವಟಿಕೆಯಲ್ಲಿ ಇರುತ್ತೇವೆ. ಕೆಲಸ ಇಲ್ಲದವರಿಗೆ ಈ ರೀತಿ ಸೃಷ್ಟಿ ಮಾಡುವುದೇ ಕೆಲಸವಾಗಿರುತ್ತೆ ಎಂದರು.

  • ಜಲಜೀವನ್ ಮಿಷನ್ ಯೋಜನೆಯಡಿ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಬಿಎಸ್‍ವೈ

    ಜಲಜೀವನ್ ಮಿಷನ್ ಯೋಜನೆಯಡಿ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಬಿಎಸ್‍ವೈ

    ಬೆಂಗಳೂರು : ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಸಾಧಿಸುವಂತೆ ನಿರ್ದೇಶನ ನೀಡಿದರು.

    ರಾಜ್ಯದಲ್ಲಿ ಈವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2021-22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಯೋಜನೆ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ. ಈ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಕೋವಿಡ್ 3ನೇ ಅಲೆ ತಪ್ಪಿಸಲು ಸಿದ್ಧತೆ ಕೈಗೊಳ್ಳಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಸೂಚನೆ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ತಗ್ಗಿದ ಮಹಾಮಾರಿ – ಇಂದು 3,709 ಕೊರೊನಾ ಪ್ರಕರಣ

  • ಹನಿ ನೀರಾವರಿ ಸಬ್ಸಿಡಿಗೆ ರಾಜ್ಯದ ಪಾಲನ್ನ ನೀಡಿ – ಸಿಎಂಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮನವಿ

    ಹನಿ ನೀರಾವರಿ ಸಬ್ಸಿಡಿಗೆ ರಾಜ್ಯದ ಪಾಲನ್ನ ನೀಡಿ – ಸಿಎಂಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮನವಿ

    ಬೆಂಗಳೂರು: ಹನಿ ನೀರಾವರಿ ಸಬ್ಸಿಡಿ ಮುಂದುವರಿಸಲು ಮುಖ್ಯಮಂತ್ರಿಗಳನ್ನು ಕೋರಿದ್ದು, ಇದಕ್ಕೆ ಸಕಾರಾತ್ಮಕ ಸ್ಪಂದನೆ ಲಭಿಸಿದೆ ಅಂತಾ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ಈ ಹಿಂದಿನಂತೆ ಶೇ 90ರಷ್ಟು ಸಬ್ಸಿಡಿ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ರೈತರಿಗೆ ನೀಡುವ ಶೂನ್ಯ ಬಡ್ಡಿದರದ ಸಾಲವನ್ನು ಪ್ರತಿಯೊಬ್ಬ ಅರ್ಹ ರೈತರಿಗೂ ನೀಡಲು ಮನವಿ ಮಾಡಿದ್ದಾಗಿ ಕೋರಲಾಗಿದೆ. ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್‍ಗಳನ್ನು ಬೇಗನೆ ಪಾವತಿಸಲು ಸೂಚಿಸುವಂತೆ ಕೋರಿದ್ದೇವೆ ಎಂದರು.

    ರೈತರ ಉತ್ಪನ್ನಗಳ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸಕಾಲದಲ್ಲಿ ತೆರೆಯುವಂತೆ ವಿನಂತಿಸಲಾಗಿದೆ ಎಂದು ವಿವರಿಸಿದರು. ಅಲ್ಲದೆ ಸಾಮಾಜಿಕ, ವೈದ್ಯಕೀಯ ಮತ್ತು ಆರ್ಥಿಕ ಸುರಕ್ಷೆಗೆ ನಮ್ಮ ಪಕ್ಷ ಗಣನೀಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಸಾಮಾಜಿಕ ಜಾಗೃತಿ ಮೂಡಿಸುವುದು, ಲಸಿಕೆ ಸಂಬಂಧ, ಮನೆಮದ್ದು, ವ್ಯಾಯಾಮ ಜಾಗೃತಿ ಮೂಡಿಸಲಾಗುತ್ತಿದೆ. ಆರ್ಥಿಕ ಸುರಕ್ಷೆಗಾಗಿಯೂ ಕೆಲಸ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ಜನರನ್ನು ನಾವು ಕಳೆದುಕೊಂಡಿದ್ದೇವೆ. ಜನರಿಗೆ ನೆರವಾಗಲು ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಕುರಿತು (ಎರಡು ಲಕ್ಷ ವಿಮೆ), ಪ್ರಧಾನಮಂತ್ರಿ ಸುರಕ್ಷಾ ವಿಮೆ ಯೋಜನೆ ಕುರಿತು ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

    ರೈತ ಮೋರ್ಚಾವು ರಾಜ್ಯದಲ್ಲಿ ವಿವಿಧ ಮೋರ್ಚಾಗಳ ಸಹಯೋಗದಲ್ಲಿ 11 ಲಕ್ಷ ಸಸಿ ನೆಡುವ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಿದೆ. ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ- ಜನ್ಮದಿನದ ನಡುವಿನ ಅವಧಿಯಲ್ಲಿ ಈ ಕಾರ್ಯ ನೆರವೇರಲಿದೆ ಎಂದರು. ಕೇಂದ್ರ ಸರ್ಕಾರವು ಡಿಎಪಿ ಗೊಬ್ಬರದ ದರ ಏರದಂತೆ ತಡೆಯಲು ಹೆಚ್ಚುವರಿ ಸಬ್ಸಿಡಿ ನೀಡಿದ್ದು, ಈ ಮೂಲಕ 1,200 ರೂಪಾಯಿ ದರದಲ್ಲಿ ಒಂದು ಬ್ಯಾಗ್ ಡಿಎಪಿ ಲಭಿಸುವಂತೆ ಮಾಡಿದೆ. ನ್ಯಾನೋ ಯೂರಿಯಾ ಬಿಡುಗಡೆ ಮಾಡಿದೆ. ಕಡಿಮೆ ಖರ್ಚಿನಲ್ಲಿ ಇದು ಲಭಿಸಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

    ಕೃಷಿ ಡಿಪ್ಲೊಮಾ, ಕೃಷಿ ಬಿಎಸ್ಸಿ, ಸಮಾನ ಪದವಿ ಕೋರ್ಸ್ ಗಳ ಪ್ರವೇಶದಲ್ಲಿ ಕೃಷಿಕರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲು ಪ್ರಮಾಣವನ್ನು ಶೇ 40ರಿಂದ ಶೇ 50ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರ ನಿನ್ನೆ ನಿರ್ಧರಿಸಿದೆ. ಇದೊಂದು ಮಹತ್ವದ ಕ್ರಮವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಕೃಷಿಕರ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಹೇಳಿದರು. ಇದೇ ವೇಳೆ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನೆ, ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಅವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

  • ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿಗೆ ರೂ.36 ಕೋಟಿ : ಸಚಿವ ಪ್ರಭು ಚವ್ಹಾಣ್

    ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿಗೆ ರೂ.36 ಕೋಟಿ : ಸಚಿವ ಪ್ರಭು ಚವ್ಹಾಣ್

    ಬೆಂಗಳೂರು: ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

    ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ಆಗಿರುವುದರಿಂದ ಇಲ್ಲಿಯವರೆಗೆ ಪ್ರವೇಶಾತಿ ಆರಂಭವಾಗಿರಲಿಲ್ಲ. ಈ ಭಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಳೆದ ಅವಧಿಯಲ್ಲಿ ಘೋಷಣೆ ಮಾಡಿದ ಪಶುವೈದ್ಯಕೀಯ ಮಹಾವಿದ್ಯಾಲಯ ನಂತರದಲ್ಲಿ ಬಂದ ಸರ್ಕಾರಗಳು ಅನುದಾನ ನೀಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರರೊಂದಿಗೆ ಗಂಭೀರವಾಗಿ ಚರ್ಚೆ ಸಹ ನಡೆಸಲಾಗಿತ್ತು.

    ಮಹಾವಿದ್ಯಾಲದ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, MSVE (Minimum Standard of Veterinary Education Regulation 2016)ರ ಅನ್ವಯ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯಗಳಾದ ಪ್ರಾಯೋಗಿಕ ಉಪಕರಣಗಳು, ಪಿಠೋಪಕರಣಗಳು ಹಾಗೂ ಇತರೇ ಸೌಕರ್ಯಗಳಿಗೆ ರೂ.137 ಕೋಟಿ ಮೊತ್ತ ಬೇಕಿದ್ದು, ಅದರಲ್ಲಿ ಈಗಾಗಲೇ ರೂ.50 ಕೋಟಿ ಬಿಡುಗಡೆ ಮಾಡಲಾಗಿದ್ದು, ಪರಿಷ್ಕೃತ ಹೆಚ್ಚುವರಿ ರೂ.82 ಕೋಟಿಯಲ್ಲಿ ರೂ.36 ಕೋಟಿ ಸದ್ಯ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

    ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಮುಂಬೈ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಈ ಭಾಗದ ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಡಾ.ದೇವಿಶೆಟ್ಟಿ ವರದಿ, ಪರಿಶೀಲನೆ ಬಳಿಕ ಮುಂದಿನ ನಿರ್ಧಾರ: ಸುರೇಶ್ ಕುಮಾರ್

  • ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ – ಯಾದಗಿರಿ ಜಿಲ್ಲಾಡಳಿತಕ್ಕೆ ಬಿಎಸ್‍ವೈ ಸೂಚನೆ

    ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ – ಯಾದಗಿರಿ ಜಿಲ್ಲಾಡಳಿತಕ್ಕೆ ಬಿಎಸ್‍ವೈ ಸೂಚನೆ

    – ಜಿಲ್ಲಾಡಳಿತ ಹಿರಿಯ ಅಧಿಕಾರಿಗಳ ಜೊತೆಗೆ ಸಿಎಂ ವೀಡಿಯೋ ಸಂವಾದ

    ಯಾದಗಿರಿ: ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜೊತೆಗೆ ಸಿಎಂ ಯಡಿಯೂರಪ್ಪನವರು ವೀಡಿಯೋ ಸಂವಾದ ಮೂಲಕ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಡಾ.ರಾಗಾಪ್ರಿಯರೊಂದಿಗೆ ವೀಡಿಯೋ ಸಂವಾದ ನಡೆಸಿದ ಯಡಿಯೂರಪ್ಪನವರು, ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು, ಸಹಾಯವಾಣಿ ಕೇಂದ್ರ, ಕಾಳಜಿ ಕೇಂದ್ರ ಆರಂಭ ಜೊತೆಗೆ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿಕೊಳ್ಳಿ ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಅನ್‍ಲಾಕ್ ಬೆನ್ನಲ್ಲೇ ಮತ್ತೆ ಮಹಾನಗರಗಳತ್ತ ಯಾದಗಿರಿ ಜನರ ಮಹಾ ವಲಸೆ

    ವೀಡಿಯೋ ಸಂವಾದದ ವೇಳೆ ಡಿಸಿ ರಾಗಪ್ರಿಯ ಜಿಲ್ಲಾಡಳಿತ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಾದದ ವ್ಯವಸ್ಥೆ ಮಾಡಲಾಗಿತ್ತು. ಸಂವಾದದಲ್ಲಿ ಸಿಎಸ್ ಪಿ ವೇದಮೂರ್ತಿ, ಜಿ.ಪಂ ಸಿಇಓ ಶಿಲ್ಲಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

  • ಬಿಎಂಟಿಸಿ ಬಸ್ ಬಿಡಿ – ಸಿಎಂಗೆ ಪತ್ರದ ಮೂಲಕ ಹಲವು ಒಕ್ಕೂಟಗಳ ಮನವಿ

    ಬಿಎಂಟಿಸಿ ಬಸ್ ಬಿಡಿ – ಸಿಎಂಗೆ ಪತ್ರದ ಮೂಲಕ ಹಲವು ಒಕ್ಕೂಟಗಳ ಮನವಿ

    ಬೆಂಗಳೂರು: ಬಿಎಂಟಿಸಿ ಬಸ್‍ಗಳನ್ನು ಪುನಾರಂಭಿಸುವಂತೆ ಬೆಂಗಳೂರಿನ ಹಲವು ಒಕ್ಕೂಟಗಳು ಸಿಎಂ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

    ಕೊರೊನಾ ಲಾಕ್‍ಡೌನ್ ನಿಂದ ರಾಜ್ಯದ ನಾಲ್ಕು ನಿಗಮಗಳ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ. ಆದರೆ ಜೂನ್ 14ರಿಂದ ಅನ್‍ಲಾಕ್ ಪಾರ್ಟ್-1 ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಸೇವೆ ಪುನರಾಂಭಿಸುವಂತೆ ಬೆಂಗಳೂರಿನ ಹಲವು ಒಕ್ಕೂಟಗಳು ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ಬಸ್ ಗಳನ್ನು ಆದ್ಯತೆಯ ಮೇರೆಗೆ ಪುನರಾರಂಭಿಸಿ ಎಂದು ಒತ್ತಾಯ ಮಾಡಿದ್ದಾರೆ.

    ಕೊರೊನಾ ಲಾಕ್‍ಡೌನ್ ನಲ್ಲಿ ಸಾವಿರಾರು ಜನ ಕೆಲಸವಿಲ್ಲದೆ ಪರದಾಡಿದ್ದಾರೆ. ಈಗ ಕಟ್ಟಡ ನಿರ್ಮಾಣ ಕಾರ್ಮಿಕರು, ಭದ್ರತಾ ಸಿಬ್ಬಂದಿ, ಆಸ್ಪತ್ರೆ ಸೌಲಭ್ಯಗಳ ಸಿಬ್ಬಂದಿಗಳು, ಗೃಹಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತೆ ಕೆಲಸ ಆರಂಭಿಸಿದ್ದಾರೆ. ಆದರೆ ಕೆಲಸಕ್ಕೆ ಹೋಗಲು ಬಸ್ಸುಗಳು ಇಲ್ಲ. ಬಸ್ ಇಲ್ಲದೇ ಕೆಲಸಕ್ಕೆ ಹೇಗೆ ಹೋಗುವುದು? ಕೆಲಸಕ್ಕೆ ಹೋಗಲು ಸ್ವಂತ ವಾಹನವಿಲ್ಲ. ತಕ್ಷಣವೇ 6,300 ಬಸ್ಸುಗಳನ್ನು ಆರಂಭಿಸಬೇಕು. ಜೊತೆಗೆ ಬಸ್ಸುಗಳ ಟಿಕೆಟ್ ದರಗಳನ್ನು ರೂ.5 ಹಾಗೂ ರೂ.10ರಂತೆ ಕೇವಲ ಒಂದು ಅಥವಾ ಎರಡು ನಿಗದಿತ/ ಫ್ಲ್ಯಾಟ್ ದರಗಳಿಗೆ ಕಡಿಮೆಗೊಳಿಸಬೇಕು ಹಾಗೂ ಬಸ್ ಪಾಸ್ ಖರೀದಿಸಿದ ಪ್ರಯಾಣಿಕರಿಗೆ ಪರಿಹಾರ ನೀಡಬೇಕೆಂದು ಪತ್ರದಲ್ಲಿ ಆಗ್ರಹ ಮಾಡಲಾಗಿದೆ. ಇದನ್ನೂ ಓದಿ: ಕೋಕ್ ಬಾಟಲ್ ಕೆಳಗಿಟ್ಟ ರೊನಾಲ್ಡೊ- ಕಂಪನಿಗೆ 29 ಸಾವಿರ ಕೋಟಿ ನಷ್ಟ

    ಈ ಪತ್ರವನ್ನು ಪ್ರಮುಖವಾಗಿ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ, ಗಾರ್ಮೆಂಟ್ಸ್ ಹಾಗೂ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್, ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್, ಅಖಿಲ ಕರ್ನಾಟಕ ವಯೋವೃದ್ದರ ಒಕ್ಕೂಟ, ಮನೆ ಗೆಲಸ ಕಾರ್ಮಿಕರ ಯೂನಿಯನ್, ಡೊಮೆಸ್ಟಿಕ್ ವರ್ಕರ್ಸ್ ರೈಟ್ಸ್ ಯೂನಿಯನ್, ಕರ್ನಾಟಕ ಸ್ಲಂ ಜನರ ಸಂಘಟನೆ,ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘಟನೆ, ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಬರೆಯಲಾಗಿದೆ. ಇದನ್ನೂ ಓದಿ: 300 ಚೀಲ ನಕಲಿ ರಸಗೊಬ್ಬರ ಪತ್ತೆ

  • ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ವಿಜಯನಗರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮನಾಯ್ಕ್ ಹೇಳಿದ್ದಾರೆ.

    ದೇಶದಲ್ಲಿ ಜಾತಿಗಳ ಮಧ್ಯೆ ಕಲಹ ತಂದಿಟ್ಟು ಸಮಾಜದಲ್ಲಿನ ಸಹಬಾಳ್ವೆಗೆ ಬೆಂಕಿಯಿಟ್ಟು ಪೆಟ್ರೋಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಮಾಡಿ ಶ್ರಮಿಕ ವರ್ಗವನ್ನು ತೆರಿಗೆ ಎಂಬ ಕೂಪಕ್ಕೆ ಸಿಲುಕಿಸಿದೆ ಎಂದು ಭೀಮನಾಯ್ಕ್‍ರವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ತೈಲ ಬೆಲೆ ಏರಿಕೆ ಖಂಡಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಳ್ಳಾರಿ ಜಿಲ್ಲೆಯ ಕೊಟ್ಟರು ಪಟ್ಟಣದ ಉಜ್ಜಿನಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಂಬಿ ಮತ ಹಾಕಿದ ಎಲ್ಲಾ ಮತದಾರರಿಗೂ ತಮ್ಮ ತಮ್ಮ ಖಾತೆಗೆ 15 ಲಕ್ಷ ರೂ ಹಣ, ಎರಡು ಲಕ್ಷ ಕೋಟಿ ಉದ್ಯೋಗ ನೀಡದೇ ಸುಳ್ಳು ಭರವಸೆ ನೀಡಿ ದೇಶದ ಜನರಿಂದ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಖಾರವಾಗಿ ನುಡಿದಿದ್ದಾರೆ.

    ಈಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಏಕೆಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವಾಗ ನಮ್ಮ ಸಮ್ಮಿಶ್ರ ಸರ್ಕಾರದ 19 ಶಾಸಕರನ್ನು ಲಂಚ ಕೊಟ್ಟು ಖರೀದಿ ಮಾಡಿಕೊಂಡು ಕಳ್ಳದಾರಿಯಲ್ಲಿ ಬಂದು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ:  ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

  • ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್

    ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್

    ಚಾಮರಾಜನಗರ: ಸಿಎಂ ಯಡಿಯೂರಪ್ಪ ಪರ ಮಠಾಧೀಶರ ಬ್ಯಾಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ. ಪ್ರತಿಯೊಬ್ಬರಿಗು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ, ವಾಕ್ ಸ್ವಾತಂತ್ರ್ಯ ಇದೆ, ಮಠಾಧೀಶರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

    ಚಾಮರಾಜನಗರ ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಪಷ್ಡಪಡಿಸಿದ್ದಾರೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಮೂಲಿಯಂತೆ ಪಕ್ಷದ ಆಗು ಹೋಗುಗಳು ಹಾಗು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು

    ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಪೂರ್ಣ ಸುಳ್ಳು, ಮುಂದಿನ ಎರಡು ವರ್ಷ ಕಾಲ ಯಡಿಯೂರಪ್ಪ ನವರೇ ಸಿಎಂ ಆಗಿರುತ್ತಾರೆ. ನಾನೇ ಮುಂದಿನ ಸಿಎಂ ಎಂದು ಯತ್ನಾಳ್ ಎಲ್ಲಾ ಶಾಸಕರಿಗೆ ಫೋನ್ ಮಾಡಿ ಬೆಂಬಲ ಕೋರುತ್ತಿದ್ದಾರೆಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ಯಾರಿಂದಲೂ ಯಾವುದೇ ಫೋನ್ ಬಂದಿಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ