Tag: co-operative bank

  • ಗೋಕಾಕ್ ಸಹಕಾರಿ ಬ್ಯಾಂಕ್ ಮುಂದೆ ಶವವಿಟ್ಟು ಗ್ರಾಹಕರಿಂದ ಪ್ರತಿಭಟನೆ

    ಗೋಕಾಕ್ ಸಹಕಾರಿ ಬ್ಯಾಂಕ್ ಮುಂದೆ ಶವವಿಟ್ಟು ಗ್ರಾಹಕರಿಂದ ಪ್ರತಿಭಟನೆ

    ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್ ಮುಂದೆ ಶವವನ್ನು ಇರಿಸಿ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ.

    ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಬ್ಯಾಂಕ್‍ನಿಂದ ಮೋಸವಾಗಿದೆ ಎಂದು ಆರೋಪಿಸಿ ಗ್ರಾಹಕರೊಬ್ಬರ ಶವವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಲಾಯಿತು. ಸುಮಾರು ನಾಲ್ಕು ಕೋಟಿಗೂ ಅಧಿಕ ಠೇವಣಿ ಹಣವನ್ನು ಬ್ಯಾಂಕ್ ದುರುಪಯೋಗ ಮಾಡಿಕೊಂಡಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

    ತಮ್ಮಯ್ಯ ಬನಶೆಟ್ಟಿ ಎಂಬುವವರು ರೇಣುಕಾಚಾರ್ಯ ಬ್ಯಾಂಕಿನಲ್ಲಿ ಹಣ ಕೂಡಿಸಿಟ್ಟಿದ್ದರು. ಆದರೆ ತಮ್ಮಯ್ಯ ಅವರು ಕಟ್ಟಿದ್ದ ಹಣವನ್ನು ಹಿಂಪಡೆಯಲು ಬ್ಯಾಂಕ್‍ಗೆ ಹೋಗಿದ್ದರು. ಈ ವೇಳೆ ಬ್ಯಾಂಕ್ ಸಿಬ್ಬಂದಿ ಅವರಿ ಹಣ ನೀಡಲು ನಿರಾಕರಿಸಿದ್ದಾರೆ. ತಾವು ಕೂಡಿಸಿಟ್ಟಿದ್ದ ಹಣ ಸಿಗದಿದ್ದಕ್ಕೆ ತಮ್ಮಯ್ಯ ಮನನೊಂದು ಅನಾರೋಗ್ಯಕ್ಕಿಡಾಗಿದ್ದರು.

    ಕೊನೆಗೆ ಚಿಕಿತ್ಸೆ ಪಡೆಯಲು ಕೂಡ ಹಣವಿಲ್ಲದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ಕೋಪಗೊಂಡ ತಿಮ್ಮಯ್ಯ ಅವರ ಕುಟುಂಬಸ್ಥರು ಠೇವಣಿಯ ಹಣ ಕೊಡುವಂತೆ ಒತ್ತಾಯಿಸಿ ಸಹಕಾರಿ ಬ್ಯಾಂಕ್ ಮುಂದೆ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ. ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೈತರಿಂದ ಕೇವಲ ಮೂರು ದಾಖಲೆ ಪಡೆಯಿರಿ- ಸಹಕಾರ ಬ್ಯಾಂಕ್‍ಗಳಿಗೆ ಸರ್ಕಾರದಿಂದ ಆದೇಶ

    ರೈತರಿಂದ ಕೇವಲ ಮೂರು ದಾಖಲೆ ಪಡೆಯಿರಿ- ಸಹಕಾರ ಬ್ಯಾಂಕ್‍ಗಳಿಗೆ ಸರ್ಕಾರದಿಂದ ಆದೇಶ

    ಬೆಂಗಳೂರು: ಸಾಲ ಪಡೆದ ರೈತರಿಂದ ಸಹಕಾರ ಬ್ಯಾಂಕುಗಳು ವಿವಿಧ ದಾಖಲೆಗಳನ್ನು ಕೇಳುತ್ತಿವೆ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ, ಕೇವಲ ಮೂರು ದಾಖಲಾತಿಗಳನ್ನು ಪಡೆಯಬೇಕು ಅಂತಾ ಸರ್ಕಾರ ಸುತ್ತೋಲೆ ಹೊರಡಿಸಿದೆ.

    ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ, ಸಹಕಾರ ಬ್ಯಾಂಕುಗಳಲ್ಲಿ ರೈತರಿಂದ ಸ್ವಯಂ ದೃಢೀಕರಣ ಪತ್ರ ಪಡೆಯಲಾಗುತ್ತಿದೆ. ಆದರೆ ಬ್ಯಾಂಕಿನ ಅಧಿಕಾರಿಗಳು ವಿವಿಧ ದಾಖಲೆಗಳನ್ನು ನೀಡುವಂತೆ ಸತಾಯಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟನಲ್ಲಿ ಸರ್ಕಾರ ಹೊಸ ಆದೇಶ ಕೈಹಾಕಿದೆ.

    ಸುತ್ತೋಲೆಯಲ್ಲಿ ಏನಿದೆ?:
    ಸಾಲ ಪಡೆದ ರೈತರಿಂದ ಸ್ವಯಂ ದೃಢೀಕರಣ ಪತ್ರದೊಂದಿಗೆ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಲಭ್ಯವಿದ್ದಲ್ಲಿ ಪ್ಯಾನ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು (ಒಂದು ಸೆಟ್) ಮಾತ್ರ ಪಡೆಯಬೇಕು. ರೈತರ ಪಹಣಿಯು ಸಂಘದಲ್ಲಿಯೇ ಲಭ್ಯವಿರುವುದರಿಂದ ಈ ಮೂರು ದಾಖಲೆಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಪ್ರಮಾಣ ಪತ್ರಗಳನ್ನು ನೀಡುವಂತೆ ರೈತರಿಗೆ ಒತ್ತಾಯಿಸುವಂತಿಲ್ಲ.

    ಸಾಲ ಪಡೆದ ರೈತರು ಮೃತಪಟ್ಟಿದ್ದರೆ ಅವರ ವಾರಸುದಾರರಿಂದ ಮರಣ ಪ್ರಮಾಣ ಪತ್ರದೊಂದಿಗೆ ಸ್ವಯಂ ದೃಢೀಕರಣ ಪತ್ರಪಡೆಯತಕ್ಕದ್ದು. ಭೂಮಿ ವಿವಿರದಲ್ಲಿ ಮಾತ್ರ ಮೃತಪಟ್ಟ ರೈತನ ವಿವಿರವನ್ನು ನಮೂದಿಸತಕ್ಕದ್ದು. ದೃಢೀಕರ ಪ್ರಮಾಣ ಪತ್ರ ಪಡೆಯಲು ನಿಗದಿಯಾಗಿದ್ದ ಅವಧಿಯನ್ನು ಇದೇ ತಿಂಗಳು 31ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೈತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 50 ಸಾವಿರ ರೂ. ಸಾಲ ಮನ್ನಾ

    ರೈತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 50 ಸಾವಿರ ರೂ. ಸಾಲ ಮನ್ನಾ

    ಬೆಂಗಳೂರು: ರೈತರಿಗೆ ಗುಡ್‍ನ್ಯೂಸ್. ಕೊನೆಗೂ ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದಾರೆ.

    ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

    ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ಅವರು ತಿಳಿಸಿದರು.

    ರಾಜ್ಯ ಸರ್ಕಾರ ಸಾಲ ಮನ್ನಾ ಮಾಡುವಂತೆ ಬಿಜೆಪಿ, ಜೆಡಿಎಸ್, ಮತ್ತು ರೈತರು ಪ್ರತಿಭಟನೆ ನಡೆಸಿದ್ದರು.