Tag: coach

  • ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

    ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

    ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಹೆಸರು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ಕಪ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಬಹುಮಾನ ಪಡೆದಿದ್ದು ಎಲ್ಲರಿಗೂ ತಿಳಿದ ವಿಚಾರ. ಆದರೆ ಟೂರ್ನಿಯ ತಂಡದ ಕೋಚ್ ಗಳಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂಬುವುದು ಮಾತ್ರ ಅಚ್ಚರಿಯಾಗಿ ಉಳಿದಿದ್ದು, ಸದ್ಯ ಈ ಕುರಿತು ಮಾಹಿತಿ ಲಭಿಸಿದೆ.

    ಅಂದಹಾಗೇ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿದ್ದ ವಿರೇಂದ್ರ ಸೆಹ್ವಾಗ್ ಅತೀ ಹೆಚ್ಚು ಸಂಭಾವನೆ ಪಡೆದವರು ಎನ್ನಲಾಗಿತ್ತು, ಆದರೆ ಖಾಸಗಿ ಮಾಧ್ಯಮವೊಂದು ಮಾಡಿರುವ ವರದಿಯ ಅಂಕಿ ಅಂಶಗಳ ಪ್ರಕಾರ ಆರ್ ಸಿಬಿ ತಂಡದ ಮುಖ್ಯ ಆಗಿ ಕಾರ್ಯನಿರ್ವಹಿಸಿದ್ದ ನ್ಯೂಜಿಲೆಂಡ್ ಮಾಜಿ ಆಟಗಾರ ಡೇನಿಯಲ್ ವೆಟ್ಟೋರಿ ಹೆಚ್ಚು ಸಂಭಾವನೆ ಪಡೆದ ಕೋಚ್ ಆಗಿದ್ದಾರೆ. ಆದರೆ ವೆಟ್ಟೋರಿ ಪಡೆದ ಮೊತ್ತದ ಖಚಿತ ಮಾಹಿತಿ ನೀಡಿಲ್ಲ. ಉಳಿದಂತೆ ಆರ್ ಸಿಬಿ ಬೌಲಿಂಗ್ ಕೋಚ್ ನೆಹ್ರಾ ಅವರು 4 ಕೋಟಿ ರೂ. ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ.

    ಉಳಿದಂತೆ ಅಧಿಕ ಸಂಭಾವನೆ ಪಡೆದ ಕೋಚ್‍ಗಳ ಪಟ್ಟಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಮುಖ್ಯ ಕೋಚ್ ರಿಕ್ಕಿ ಪಾಂಟಿಂಗ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಿಫನ್ ಫ್ಲೆಮಿಂಗ್ ಕ್ರಮವಾಗಿ 3.7 ಕೋಟಿ ರೂ. ಹಾಗೂ 3.2 ಕೋಟಿ ರೂ. ಪಡೆದಿದ್ದಾರೆ. ಇನ್ನು ಪಂಜಾಬ್ ತಂಡದ ಕೋಚ್ ವಿರೇಂದ್ರ ಸೆಹ್ವಾಗ್ 3 ಕೋಟಿ ರೂ. ರಾಜಸ್ಥಾನ ರಾಯಲ್ಸ್ ತಂಡದ ಕೋಚ್ ಶೇನ್ ವಾರ್ನ್ 2.7 ಕೋಟಿ ರೂ. ಕೋಲ್ಕತ್ತಾ ತಂಡದ ಜ್ಯಾಕ್ ಕಾಲಿಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲಾ ಜಯವರ್ಧನೆ 2.25 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

    ಸನ್ ರೈಸರ್ಸ್ ಹೈದರಾಬಾದ್ ತಂಡದ ವಿವಿಎಸ್ ಲಕ್ಷ್ಮಣ್ ಮತ್ತು ಟಾಮ್ ಮೂಡಿ 2 ಕೋಟಿ ರೂ. ಹಾಗೂ ಆರ್ ಸಿಬಿ ತಂಡದ ಬ್ಯಾಟಿಂಗ್ ಕೋಚ್ ಗ್ಯಾರಿ ಕಸ್ಟರ್ನ್ ಮುಂಬೈ ಬೌಲಿಂಗ್ ಕೋಚ್ ಲಸಿತ್ ಮಾಲಿಂಗ 1.5 ಕೋಟಿ ರೂ. ಪಡೆದಿದ್ದಾರೆ.

    ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಕಪ್ ಗೆದ್ದ ಚೆನ್ನೈ ತಂಡ 20 ಕೋಟಿ ರೂ. ಹಾಗೂ ರನ್ನರ್ ಆಪ್ ಆಗಿದ್ದ ಹೈದರಾಬಾದ್ ತಂಡ 12.5 ಕೋಟಿ ರೂ. ಬಹುಮಾನ ಪಡೆದಿತ್ತು. ಉಳಿದಂತೆ ಟೂರ್ನಿಯಲ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದ ಕೋಲ್ಕತ್ತಾ ಹಾಗೂ ರಾಜಸ್ಥಾನ ತಂಡಗಳು 8.75 ಕೋಟಿ ರೂ. ಪಡೆದುಕೊಂಡಿತ್ತು.

     

  • ಜಸ್ಟಿನ್ ಲ್ಯಾಂಗರ್ ಆಸ್ಟ್ರೇಲಿಯಾದ ನೂತನ ಕೋಚ್

    ಜಸ್ಟಿನ್ ಲ್ಯಾಂಗರ್ ಆಸ್ಟ್ರೇಲಿಯಾದ ನೂತನ ಕೋಚ್

    ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಮಾಜಿ ಟೆಸ್ಟ್ ಓಪನರ್ ಜಸ್ಟಿನ್ ಲ್ಯಾಂಗರ್ ನೇಮಕಗೊಂಡಿದ್ದಾರೆ.

    ಸದ್ಯ ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ಪರ್ತ್ ಸ್ಕಾಚರ್ಸ್ ತಂಡದ ಕೋಚ್ ಕಾರ್ಯನಿರ್ವಹಿಸುತ್ತಿರುವ 47 ವರ್ಷದ ಜಸ್ಟಿನ್ ಲ್ಯಾಂಗರ್, ಕ್ರಿಕೆಟ್ ಆಸ್ಟ್ರೇಲಿಯಾ ಜೊತೆ ಮುಂದಿನ ನಾಲ್ಕು ವರ್ಷಗಳ ಅವಧಿಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಮೇ 22ರಂದು ತಂಡವನ್ನು ಸೇರಿಕೊಳ್ಳಲಿದ್ದಾರೆ.

    ಕ್ರಿಕೆಟ್ ಲೋಕವನ್ನೇ ತಲ್ಲಣಗೊಳಿಸಿದ್ದ ಚೆಂಡು ವಿರೂಪಗೊಳಿಸಿದ್ದ ಪ್ರಕರಣದಲ್ಲಿ ನಿರಪರಾಧಿಯಾಗಿದ್ದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದ ಕೋಚ್ ಡ್ಯಾರೆನ್ ಲೆಹ್ಮನ್ ಜಾಗಕ್ಕೆ ಜಸ್ಟಿನ್ ಲ್ಯಾಂಗರ್‍ರನ್ನು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಆಯ್ಕೆಮಾಡಿದೆ. ಲ್ಯಾಂಗರ್ ಟೆಸ್ಟ್, ಏಕದಿನ ಹಾಗೂ ಟಿ-20 ಸೇರಿದಂತೆ ಮೂರು ಮಾದರಿಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಈ ಹಿಂದೆ ಲ್ಯಾಂಗರ್ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

    ಕೋಚ್ ಆಯ್ಕೆಯ ಕುರಿತು ಪ್ರತಿಕ್ರಿಯಿಸಿರುವ ಲ್ಯಾಂಗರ್, ರಾಷ್ಟ್ರೀಯ ತಂಡವನ್ನು ಮುನ್ನಡೆಸುವ ಅವಕಾಶ ದೊರೆತಿರುವುದು ನನ್ನ ಪಾಲಿಗೆ ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ. 1993ರಿಂದ 2007 ರವರೆಗೂ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರನಾಗಿದ್ದ ಲ್ಯಾಂಗರ್ 105 ಟೆಸ್ಟ್ ಪಂದ್ಯಗಳನ್ನಾಡಿದ್ದು, 23 ಶತಕಗಳು ಸೇರಿದಂತೆ 45.27 ಸರಾಸರಿಯಲ್ಲಿ 7,696 ರನ್‍ಗಳಿಸಿದ್ದಾರೆ. ಲ್ಯಾಂಗರ್ ಅವರ ಈ ನಾಲ್ಕು ವರ್ಷದ ಅವಧಿಯಲ್ಲಿ ಆಸ್ಟ್ರೇಲಿಯಾ ಪ್ರಮುಖವಾಗಿ ಎರಡು ಆಶಸ್ ಸರಣಿ ಹಾಗೂ ಟಿ-20 ವಿಶ್ವಕಪ್ ಟೂರ್ನಿಗಳಲ್ಲಿ ಪಾಲ್ಗೊಳ್ಳಲಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ ಸಿಇಒ ಜೇಮ್ಸ್ ಸದರ್ಲೆಂಡ್, ಜಸ್ಟಿನ್ ಲ್ಯಾಂಗರ್ ತಂಡವನ್ನು ಮುನ್ನಡೆಸಲು ಸೂಕ್ತ ವ್ಯಕ್ತಿ ಎಂದು ನಾವು ಬಲವಾಗಿ ನಂಬುತ್ತೇವೆ. ಅವರು ತಮ್ಮ ಪಾತ್ರವನ್ನು ಯಶಸ್ವಿಯಾಗಿ ನಿಭಾಯಿಸುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    2013ರಲ್ಲಿ ಕೋಚ್ ಆಗಿ ನೇಮಗೊಂಡು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದ ಲೆಹ್ಮನ್ 2019ರ ಆಶಸ್ ಸರಣಿಯವರೆಗೂ ಕೋಚ್ ಆಗಿ ಮುಂದುವರೆಯಬೇಕಿತ್ತು. ಆದರೆ ಮಾರ್ಚ್‍ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟೆಸ್ಟ್‍ನಲ್ಲಿ ಚೆಂಡು ವಿರೂಪ ಪ್ರಕರಣದಿಂದಾಗಿ ಲೆಹ್ಮನ್ ಕಣ್ಣೀರ ವಿದಾಯ ಹೇಳಿದ್ದರು. ಇದೇ ವೇಳೆ ತಂಡದ ನಾಯಕರಾಗಿದ್ದ ಸ್ಟೀವ್ ಸ್ಮಿತ್ ಹಾಗೂ ಉಪನಾಯಕರಾಗಿದ್ದ ಡೇವಿಡ್ ವಾರ್ನರ್ ಒಂದು ವರ್ಷದ ನಿಷೇಧ ಶಿಕ್ಷೆಗೆ ಒಳಗಾಗಿದ್ದು, ಈ ಕಾರಣದಿಂದಾಗಿ ಪ್ರಸಕ್ತ ಐಪಿಲ್‍ನಿಂದಲೂ ಹೊರಗುಳಿದಿದ್ದಾರೆ. ಮತ್ತೊಬ್ಬ ಬ್ಯಾಟ್ಸ್‍ಮನ್ ಕ್ಯಾಮರೂನ್ ಬ್ಯಾನ್ ಕ್ರಿಫ್ಟ್ ರನ್ನು 9 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ.

  • 6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

    6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

    ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ.

    ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸುತ್ತಿರುವ ವೇಳೆ ಕ್ಯಾಮೆರಾದ ಕಣ್ಣಿಗೆ ಸಿಕ್ಕಿ ಬಿದ್ದಿದ್ದರು. ಇದನ್ನು ನೋಡಿದ ಡ್ಯಾರೆನ್ ಲೆಹ್ಮನ್ ವಾಕಿಟಾಕಿಯಲ್ಲಿ ‘What the f*** is going on?’ ಎಂದು ಮೈದಾನದಲ್ಲಿದ್ದ 12ನೇ ಆಟಗಾರರನ್ನು ಪ್ರಶ್ನಿಸಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಜೇಮ್ಸ್ ಸುಂದರ್ಲ್ಯಾಂಡ್  ಪ್ರಕರಣದಲ್ಲಿ ಕೋಚ್ ಲೆಹ್ಮನ್ ಅವರ ಪಾತ್ರದ ಕುರಿತು ಘಟನೆ ವೇಳೆ ಅವರು ವಾಕಿಟಾಕಿ ನಡೆಸಿದ್ದ ಸಂಭಾಷಣೆ ಪ್ರಮುಖ ಸಾಕ್ಷಿಯಾಗಿದೆ. ಇದು ಅವರನ್ನು ಪ್ರಕರಣದ ಶಿಕ್ಷೆಯಿಂದ ಕಾಪಾಡಿದೆ ಎಂದು ತಿಳಿಸಿದ್ದಾರೆ.

    ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಬುಧವಾರ ನಾಯಕ ಸ್ಮಿತ್, ಉಪನಾಯಕ ವಾರ್ನರ್ ಗೆ ಒಂದು ವರ್ಷ ಹಾಗೂ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಗೆ 9 ತಿಂಗಳು ಶಿಕ್ಷೆ ವಿಧಿಸಿತ್ತು. ಆದರೆ ಕೋಚ್ ಲೆಹ್ಮನ್ ಗೆ ತಮ್ಮ ಸ್ಥಾನದಲ್ಲಿ ಮುಂದುವರೆಲು ಸೂಚಿಸಿದೆ.

    ಪ್ರಕರಣದ ತನಿಖೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೇಮಿಸಿದ್ದ ಸಮಿತಿಯ ಮುಖ್ಯಸ್ಥ ಇಯಾನ್ ರಾಯ್ ಸತ್ಯಾಂಶವನ್ನು ಹೊರ ತಂದಿದ್ದಾರೆ. ಪ್ರಕರಣದಲ್ಲಿ ಕೋಚ್ ಲೆಹ್ಮನ್ ಪಾತ್ರವಹಿಸಿಲ್ಲ ಹಾಗೂ ಈ ಕುರಿತು ತಿಳಿದಿಲ್ಲ ಎಂಬುದು ತಮಗೆ ತೃಪ್ತಿ ತಂದಿದೆ ಎಂದು ಸುಂದರ್ಲ್ಯಾಂಡ್ ಹೇಳಿದ್ದಾರೆ.

    ಇದೇ ವೇಳೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆಟಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದಾಗಿ ತಿಳಿಸಿದ ಅವರು, ತಮ್ಮ ಕೃತ್ಯದ ಕುರಿತು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಚೆಂಡು ವಿರೂಪಗೊಳಿಸಿದ ಆಸೀಸ್ ಕಳ್ಳಾಟ ಸೆರೆಹಿಡಿದ ಕ್ಯಾಮೆರಾಮೆನ್ ಈಗ ಹೀರೋ!

    ಬಿಸಿಸಿಐ ಸ್ಮಿತ್ ಹಾಗೂ ವಾರ್ನರ್ ಐಪಿಎಲ್ ನಲ್ಲಿ ಭಾಗವಹಿಸಿದಂತೆ ಒಂದು ವರ್ಷ ನಿಷೇಧ ವಿಧಿಸಿದೆ. ಇದರೊಂದಿಗೆ ಕಳ್ಳಾಟದ ನಡೆಸಿದ ಪರಿಣಾಮವಾಗಿ ಇಬ್ಬರು ಆಟಗಾರರು ಸುಮಾರು 13 ಕೋಟಿ ರೂ. ಮೊತ್ತದ ಒಪ್ಪಂದಗಳನ್ನು ಕಳೆದು ಕೊಂಡಿದ್ದಾರೆ. ಇದನ್ನೂ ಓದಿ: ಆಟಗಾರರ ಕಳ್ಳಾಟಕ್ಕೆ ಭಾರೀ ಮೊತ್ತದ ಪ್ರಾಯೋಜಕತ್ವವನ್ನು ಕಳೆದುಕೊಂಡಿತು ಆಸ್ಟ್ರೇಲಿಯಾ!

  • ಪಾಟ್ನಾದಲ್ಲಿ ಧಗಧಗನೆ ಹೊತ್ತಿ ಉರಿದ ರೈಲು

    ಪಾಟ್ನಾದಲ್ಲಿ ಧಗಧಗನೆ ಹೊತ್ತಿ ಉರಿದ ರೈಲು

    ಪಾಟ್ನಾ: ಪಾಟ್ನಾ-ಮೊಕಾಮಾ ನಡುವಿನ ಮೆಮು ರೈಲಿನಲ್ಲಿ ಅವಘಢ ಸಂಭವಿಸಿದೆ. ರೈಲು ನಿಲ್ಲಿಸಿದ್ದ ಜಾಗದಲ್ಲೇ ಬೆಂಕಿ ಹೊತ್ತು ಉರಿದಿದೆ.

    ಪಾಟ್ನಾ-ಮೊಕಾಮಾ ರೈಲು ಮಂಗಳವಾರ ರಾತ್ರಿ 11 ಗಂಟೆಗೆ ಮೊಕಾಮಾ ಸ್ಟೇಷನ್ ತಲುಪಿತ್ತು. ಬುಧವಾರ ಮಧ್ಯರಾತ್ರಿ 1 ಗಂಟೆಗೆ 2 ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಆ ಬೋಗಿಯ ಬೆಂಕಿ ಆರಿಸುವಾಗ ಇನ್ನೂ 2 ಬೋಗಿಗಳಿಗೆ ಬೆಂಕಿ ಹತ್ತಿಕೊಂಡಿತು ಎಂದು ಸಿಪಿಆರ್‍ಒ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ ರೈಲಿನಲ್ಲಿ ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.

  • ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

    ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

    ಮುಂಬೈ: ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಎಂದೇ ಹೆಸರು ಪಡೆದಿರುವ ಮಾಜಿ ನಾಯಕ ಎಂ.ಎಸ್ ಧೋನಿ ಲಂಕಾ ಆಟಗಾರರಿಗೆ ಕೋಚ್ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.

    ಹೌದು, ಧೋನಿ ತಮ್ಮ ಕೂಲ್ ವ್ಯಕ್ತಿತ್ವದ ಮೂಲಕ ವಿಶ್ವ ಕ್ರಿಕೆಟ್ ನ ಹಲವು ಯುವ ಆಟಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೊಂದು ದೊರೆತಿದ್ದು, ಭಾನುವಾರ ಮುಂಬೈನಲ್ಲಿ ನಡೆದ ಶ್ರೀಲಂಕಾ ವಿರುದ್ಧ ಅಂತಿಮ ಟಿ20 ಪಂದ್ಯದ ಮುಕ್ತಾಯದ ಬಳಿಕ ಲಂಕಾ ಆಟಗಾರರಿಗೆ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.

    2017ರಲ್ಲಿ ಭಾರತ ಶ್ರೀಲಂಕಾ ಪ್ರವಾಸ ಮಾಡಿದ್ದರೆ, ಶ್ರೀಲಂಕಾ ಭಾರತ ಪ್ರವಾಸ ಮಾಡಿತ್ತು. ಎರಡು ತಂಡಗಳ ನಡುವಿನ ಟೆಸ್ಟ್, ಏಕದಿನ, ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿತ್ತು. ಭಾನುವಾರ ನಡೆದ ಕೊನೆಯ ಪಂದ್ಯದಲ್ಲೂ ಶ್ರೀಲಂಕಾ ಸೋತು ಸುಣ್ಣವಾಗಿತ್ತು. ಈ ವೇಳೆ ಲಂಕಾ ಆಟಗಾರರ ಮನಸ್ಥಿತಿ ಕಂಡ ಧೋನಿ ಅವರ ಬಳಿಗೆ ತೆರಳಿ ಕೆಲವು ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಲಂಕಾದ ಉಪುಲ್ ತರಂಗ, ಅಕಿಲ ಧನಂಜಯ ಮತ್ತು ಸಮರ ವಿಕ್ರಮ ಅವರು ಧೋನಿ ನೀಡುತ್ತಿರುವ ಸಲಹೆಗಳನ್ನು ಶ್ರದ್ಧೆಯಿಂದ ಕೇಳಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೇ ಧೋನಿ ಅವರ ಈ ವ್ಯಕ್ತಿತ್ವವನ್ನು ಹಲವು ಕ್ರಿಕೆಟ್ ಅಭಿಮಾನಿಗಳ ಮೆಚ್ಚಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಧೋನಿ, 2019ರ ವಿಶ್ವಕಪ್ ಆಡ್ತಾರಾ: ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದು ಹೀಗೆ

    ಧೋನಿ ಅವರು ಲಂಕಾ ವಿರುದ್ಧ ಏಕದಿನ ಸರಣಿಯ ವೇಳೆ ಹಲವರ ಟೀಕೆಗೆ ಗುರಿಯಾಗಿದ್ದರು. ನಂತರದ ಟಿ20 ಸರಣಿಯಲ್ಲಿ ಧೋನಿ ಅವರ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಲಾಗಿತ್ತು. ಈ ವೇಳೆ ಉತ್ತಮ ಪ್ರದರ್ಶನ ನೀಡಿ, ತಮ್ಮ ವಿರುದ್ಧ ಟೀಕೆ ಮಾಡುತ್ತಿದವರ ಬಾಯಿ ಮುಚ್ಚಿಸಿದ್ದಾರೆ. ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹಾಗೂ ಕೋಚ್ ರವಿ ಶಾಸ್ತ್ರಿ ಅವರು ಸಹ ಧೋನಿ ಪರ ಬ್ಯಾಟ್ ಬೀಸಿದ್ದು, 2019 ರ ವಿಶ್ವಕಪ್ ನಲ್ಲಿ ಧೋನಿ ಆಡುವುದನ್ನು ಖಚಿತ ಪಡಿಸಿದ್ದಾರೆ.

    https://twitter.com/VideosShots/status/945136128247640064

     

  • ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

    ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ.

    ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ.

    ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. ಜಾಸ್ತಿ ಇರಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರವಿಶಾಸ್ತ್ರಿ ಈ ಹಿಂದೆ ಮಾರ್ಗದರ್ಶಕರಾಗಿದ್ದಾಗಲೂ ಅವರಿಗೆ ಸಂಬಳ 7.5 ಕೋಟಿ ರೂ. ಒಳಗಡೆ ಇತ್ತು. ಭಾರತ ಎ ತಂಡ ಮತ್ತು 19 ವರ್ಷದ ಒಳಗಿನ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರಿಗೆ ಮೊದಲ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಿದ್ದರೆ ಎರಡನೇ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಲಾಗಿತ್ತು. ಈಗ ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ದ್ರಾವಿಡ್ ಅವರನ್ನು ಬ್ಯಾಟಿಂಗ್ ಸಲಹೆಗಾರನ್ನಾಗಿ ನೇಮಿಸಲಾಗಿದೆ.

    ಬೌಲಿಂಗ್ ಕೋಚ್ ಆಗಿ ನೇಮಕವಾಗಿರುವ ಜಹೀರ್ ಖಾನ್ ಅವರಿಗೆ ಎಷ್ಟು ಸಂಭಾವನೆ ಎನ್ನುವುದು ನಿಗದಿಯಾಗಿಲ್ಲ. ಅವರು ಎಷ್ಟು ದಿನ ತಂಡದ ಜೊತೆ ಇರುತ್ತಾರೆ ಆ ಅವಧಿಗೆ ಸಂಬಳ ನೀಡಲು ಬಿಸಿಸಿಐ ಮುಂದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಜಹೀರ್ ಖಾನ್ ಅವರು 100 ದಿನಕ್ಕೆ ವಾರ್ಷಿಕವಾಗಿ 4 ಕೋಟಿ ರೂ. ಸಂಭಾವನೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಬಿಸಿಸಿಐ ತಿರಸ್ಕರಿಸಿತ್ತು.

    ಬ್ಯಾಟಿಂಗ್ ಕೋಚ್, ಆಟಗಾರರಿಗೆ ಸಂಬಳ ಎಷ್ಟು?
    ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಮಾರ್ಚ್ ನಲ್ಲಿ ಇವರ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿತ್ತು.

    ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದರು.

    ಮಾರ್ಚ್ ತಿಂಗಳಿನಲ್ಲಿ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

    ಎಷ್ಟಿತ್ತು? ಈಗ ಎಷ್ಟು ಆಗಿದೆ?
    `ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈಗ ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

    ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಎ ದರ್ಜೆ:
    ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

    ಬಿ ದರ್ಜೆ:
    ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

    ಸಿ ದರ್ಜೆ:
    ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.

     

  • ಕುಂಬ್ಳೆ ರಾಜೀನಾಮೆ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಕೊಹ್ಲಿ ನೀಡಿದ ಉತ್ತರ ಇದು

    ಕುಂಬ್ಳೆ ರಾಜೀನಾಮೆ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಕೊಹ್ಲಿ ನೀಡಿದ ಉತ್ತರ ಇದು

    ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಗೌಪ್ಯತೆಯನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

    ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಕರ್ತರು ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂನಲ್ಲಿ ನಡೆದಿದೆ ಎನ್ನಲಾದ ಸುದ್ದಿಗಳು ನಿಜವೇ ಎಂದು ಪ್ರಶ್ನೆ ಮಾಡಿದರು.

    ನಿರೀಕ್ಷಿತ ಪ್ರಶ್ನೆಗೆ ಕೊಹ್ಲಿ, ಅನಿಲ್ ಕುಂಬ್ಳೆ ಅವರು ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ನಿರ್ಧಾರವನ್ನು ಗೌರವಿಸುತ್ತೇನೆ. ಯಾವುದೇ ಕಾರಣಕ್ಕೂ ಡ್ರೆಸಿಂಗ್ ರೂಂ ಪಾವಿತ್ರ್ಯತೆಯನ್ನು ನಾವು ಕಾಪಾಡಿಕೊಂಡು ಬಂದಿದ್ದೆವೆ. ಮುಂದೆಯೂ ಅದನ್ನು ಹಾಗೆ ಕಾಪಾಡಿಕೊಂಡು ಬರುತ್ತೇವೆ. ಹೀಗಾಗಿ ನಾನು ಡ್ರೆಸಿಂಗ್ ರೂಂ ವಿಚಾರವನ್ನು ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದರು.

    ಇಂಗ್ಲೆಂಡ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಸಂದರ್ಭದಲ್ಲಿ 11 ಪತ್ರಿಕಾಗೋಷ್ಠಿಯಲ್ಲಿ ನಡೆಸಿದ್ದೆ. ಆದ್ರೆ ಡ್ರೆಸ್ಸಿಂಗ್ ರೂಂನಲ್ಲಿ ಏನು ನಡೆಯುತ್ತೆ ಎನ್ನುವುದನ್ನು ಆ ಗುಟ್ಟು ನಾನು ಯಾವತ್ತು ಬಿಟ್ಟುಕೊಟ್ಟಿರಲಿಲ್ಲ. ನಾವು ಮೂರ್ನಾಲ್ಕು ವರ್ಷಗಳಿಂದ ಡ್ರೆಸ್ಸಿಂಗ್ ರೂಂ ಗೌಪ್ಯತೆಯನ್ನು ಬಹಿರಂಗಪಡಿಸದ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದಿದ್ದೇವೆ. ತಂಡದ ಎಲ್ಲ ಸದಸ್ಯರು ಇದಕ್ಕೆ ಬದ್ಧರಾಗಿದ್ದಾರೆ ಎಂದು ಕೊಹ್ಲಿ ತಿಳಿಸಿದರು.

    ಡ್ರೆಸಿಂಗ್ ರೂಂನಲ್ಲಿ ನಡೆಯುವ ಪ್ರತಿಯೊಂದು ಘಟನೆ ಕೂಡ ಆಟಗಾರರ ಖಾಸಗಿ ವಿಚಾರವಾಗಿರುತ್ತದೆ. ಹೀಗಾಗಿ ನಾವು ಅದರ ಗುಟ್ಟನ್ನು ನಿರ್ವಹಣೆ ಮಾಡಲೇಬೇಕು ಎಂದರು.

    ಒಬ್ಬ ಕ್ರಿಕೆಟಿಗನಾಗಿ ಅನಿಲ್ ಕುಂಬ್ಳೆ ಅವರನ್ನು ನಾನು ತುಂಬಾ ಗೌರವಿಸುತ್ತೇನೆ. ಅವರು ಹಲವು ವರ್ಷಗಳ ಕಾಲ ಆಡಿ ದೇಶದ ಕ್ರಿಕೆಟಿಗೆ ನೀಡಿರುವ ಕೊಡುಗೆಯನ್ನು ನಾನು ಗೌರವಿಸುತ್ತೆನೆ ಎಂದು ತಿಳಿಸಿದರು.

    ಇದನ್ನೂ ಓದಿ:   ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಹಿರಂಗ