Tag: Coalfire

  • ಹಾಸನಾಂಬೆ ದರ್ಶನಕ್ಕೆ ಇಂದು ತೆರೆ- ಕೊಂಡ ಹಾಯುವಾಗ ಎಡವಿದ ಭಕ್ತನ ರಕ್ಷಣೆ

    ಹಾಸನಾಂಬೆ ದರ್ಶನಕ್ಕೆ ಇಂದು ತೆರೆ- ಕೊಂಡ ಹಾಯುವಾಗ ಎಡವಿದ ಭಕ್ತನ ರಕ್ಷಣೆ

    ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯ ಹಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ ಬಿದ್ದಿದ್ದು, ಈ ಮಧ್ಯೆ ಭಾರೀ ಅನಾಹುತವೊಂದು ತಪ್ಪಿದೆ.

    ದೇವಾಲಯದ ಮುಂದೆ ಕೊಂಡ ಹಾಯುವ ವೇಳೆ ತಲೆ ಮೇಲೆ ದೇವಿ ಉತ್ಸವ ಮೂರ್ತಿ ಹೊತ್ತಿದ್ದ ಭಕ್ತ ಎಡವಿದ್ದಾರೆ. ಅದೃಷ್ಟವಶಾತ್ ಜೊತೆಗಿದ್ದ ಭಕ್ತರು ಅವರನ್ನು ಹಾಗೂ ದೇವಿ ಉತ್ಸವ ಮೂರ್ತಿಯನ್ನು ಕೆಳಗೆ ಬೀಳದಂತೆ ತಡೆದು ಅಪಾಯದಿಂದ ಪಾರು ಮಾಡಿದ್ದಾರೆ. ಈ ಮೂಲಕ ಸ್ವಲ್ಪದರಲ್ಲೀ ಭಾರೀ ಅನಾಹುತವೊಂದು ತಪ್ಪಿದೆ.

    ಇಂದು ಬೆಳಗ್ಗೆ 6 ಗಂಟೆಗೆ ಹಾಸನಾಂಬೆ ದರ್ಶನಕ್ಕೆ ತೆರೆ ಬಿದ್ದಿದೆ. ಮಧ್ಯಾಹ್ನ 1.30ಕ್ಕೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ಮುಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನಡೆಯುತ್ತಿತ್ತು. ಈ ವೇಳೆ ಕೊಂಡ ಹಾಯುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

    ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಶುಕ್ರವಾರ ಅಂತಿಮ ದಿನವಾಗಿತ್ತು. ಹೀಗಾಗಿ ನಿನ್ನೆ ಬೆಳಗ್ಗೆ 5 ರಿಂದ ಸಂಜೆ 5 ಮತ್ತು ರಾತ್ರಿ 9 ರಿಂದ ಇಂದು ಬೆಳಗ್ಗೆ 6 ಗಂಟೆವರೆಗೆ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿತ್ತು. ಇಂದು ಮಧ್ಯಾಹ್ನ ವಿಶ್ವರೂಪ ದರ್ಶನದ ನಂತರ ಗರ್ಭಗುಡಿಯ ಬಾಗಿಲು ಹಾಕಲಾಗುತ್ತದೆ.

    ದೇವಿ ದರ್ಶನಕ್ಕೆ ಶನಿವಾರ ಕಡೇ ದಿನವಾಗಿರುವ ಹಿನ್ನೆಲೆಯಲ್ಲಿ ಜನಸಾಗರವೇ ದೇಗುಲಕ್ಕೆ ಹರಿದು ಬಂದಿತ್ತು. ಭಕ್ತರ ಸಾಮಾನ್ಯ ದರ್ಶನದ ಸಾಲು 2 ಕಿಲೋ ಮೀಟರ್ ಗೂ ಹೆಚ್ಚಿತ್ತು. ದೇವಿಯ ವಿಶೇಷ ದರ್ಶನದ 300 ರೂ. ಪಾಸ್ ಹಾಗೂ 1000 ರೂ. ಪಾಸ್ ಗೂ ಭಾರೀ ಬೇಡಿಕೆ ಇತ್ತು. ದೇವಿ ದರ್ಶನದ ಕೊನೆಯ ದಿನವಾದ ನಿನ್ನೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಶಾಸಕ ಶರವಣ ದೇಗುಲಕ್ಕೆ ಭೇಟಿ ನೀಡಿದ್ರು.

    https://www.youtube.com/watch?v=Xt40GinaJsM

  • ವಿಡಿಯೋ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ದೇವರ ಪಲ್ಲಕ್ಕಿ ಹೊತ್ತ ಭಕ್ತ

    ವಿಡಿಯೋ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ದೇವರ ಪಲ್ಲಕ್ಕಿ ಹೊತ್ತ ಭಕ್ತ

    ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದ ಕಲ್ಮೇಶ್ವರನ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತಿದ್ದ ವ್ಯಕ್ತಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ.

    ಪ್ರತಿ ವರ್ಷದಂತೆ ಗ್ರಾಮದಲ್ಲಿ ಕಲ್ಮೇಶ್ವರ ದೇವರ ಪಲ್ಲಕ್ಕಿ ಉತ್ಸವದ ಜೊತೆಯಲ್ಲಿ ಕೆಂಡದೋಕುಳಿ ನಡೆಯುತ್ತದೆ. ಈ ಜಾತ್ರೆಯಲ್ಲಿ ಭಕ್ತಾದಿಗಳು ಕೆಂಡವನ್ನು ಬಣ್ಣದಂತೆ ಎರಚಾಡಿ ದೇವರಿಗೆ ಭಕ್ತಿ ಸಮರ್ಪಣೆ ಮಾಡ್ತಾರೆ. ಸೋಮವಾರ ಮಧ್ಯರಾತ್ರಿ ದೇವರ ಪಲ್ಲಕ್ಕಿ ಹೊತ್ತಿದ್ದ ಇಬ್ಬರಲ್ಲಿ ಹಿಂದೆ ಇದ್ದ ವ್ಯಕ್ತಿ ಕೆಂಡ ಹಾಯುವಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಬಂದು ಪಲ್ಲಕ್ಕಿಯನ್ನ ಮೇಲಕ್ಕೆತ್ತಿ ತೆಗೆದುಕೊಂಡು ಹೋಗಿದ್ದಾರೆ. ಕೆಳಗೆ ಬಿದ್ದ ವ್ಯಕ್ತಿಯೂ ಕೂಡ ತಕ್ಷಣ ಮೇಲೆದ್ದು ಓಡಿದ್ದಾರೆ.

    ಸಾಮಾನ್ಯವಾಗಿ ಜಾತ್ರೆ ಹಾಗೂ ರಥೋತ್ಸವಗಳು ಸಂಜೆ ಹೊತ್ತಿನಲ್ಲಿ ನಡೆಯುತ್ತವೆ. ಆದರೆ ಕಲ್ಮೇೀಶ್ವರನ ರಥೋತ್ಸವ ಮಧ್ಯರಾತ್ರಿ ನಡೆಯುತ್ತದೆ. ಹರಕೆ ಹೊತ್ತ ಭಕ್ತರು ದೇವಾಲಯದ ಪ್ರಾಂಗಣದಲ್ಲಿ ಒಂದೆಡೆ ಸೇರಿ ಕೆಂಡದೋಕುಳಿಯಲ್ಲಿ ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ. ಬೆಂಕಿಯನ್ನ ಹೂವಿನಂತೆ ಕೈಯಲ್ಲಿ ಹಿಡಿದು ಎರಚಾಡೋದು ನೋಡಿದರೆ ಎಂಥವರಿಗೆ ಒಂದು ಕ್ಷಣ ಮೈ ಜುಮ್ ಅನ್ನಿಸುತ್ತದೆ.

    https://youtu.be/G5xd_E0k2V4