Tag: Coastal Police

  • ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಡಲಿನಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಡಲಿನಲ್ಲಿ ಕಟ್ಟೆಚ್ಚರ

    ಕಾರವಾರ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಹದ್ದಿನ ಕಣ್ಣಿರಿಸಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಕೂಮಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

    ʻOP TRIGGERʼ ಹೆಸರಿನಲ್ಲಿ ಆಪರೇಷನ್ ನಡೆಸ್ತಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಅರಬ್ಬಿ ಸಮುದ್ರ ಭಾಗದಲ್ಲಿ ತಪಾಸಣೆ ನಡೆಸುತಿದ್ದಾರೆ.

    ದೇಶದ ಆಂತರಿಕ ಭದ್ರತೆ ಹಿನ್ನಲೆಯಲ್ಲಿ ಸಮುದ್ರದಲ್ಲಿರುವ ಸಾಗುವ ಪ್ರತಿ ಬೋಟುಗಳು ಹಾಗೂ ಬಂದರುಗಳಲ್ಲಿರುವ ಬೋಟುಗಳು, ಕಾರ್ಮಿಕರ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತಿದ್ದಾರೆ. ಯಾವುದೇ ಉಗ್ರರು ರಾಜ್ಯದ ಕರಾವಳಿಯ ಮೂಲಕ ದೇಶಕ್ಕೆ ಎಂಟ್ರಿಕೊಡಬಾರದು ಎಂಬ ಉದ್ದೇಶದಿಂದ ತಪಾಸಣೆ ಚುರುಕುಗೊಳಿಸಲಾಗಿದೆ. ಇದನ್ನೂ ಓದಿ: ಮರ ಬಿದ್ದು ಮೃತಪಟ್ಟಿದ್ದ ಆಟೋ ಚಾಲಕನ ಅಂತ್ಯಸಂಸ್ಕಾರ – ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಹೇಶ್

    ಅತಿ ಸೂಕ್ಷ್ಮ ಪ್ರದೇಶವಾಗಿರುವ ಕಾರವಾರದ ನೌಕಾನೆಲೆ ಹಾಗೂ ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲೂ ಭಿಗಿ ಭದ್ರತೆ ನೀಡಲಾಗಿದೆ. ಜೊತೆಗೆ ತೀರ ಪ್ರದೇಶಗಳಲ್ಲಿ ಡ್ರೋನ್‌ಗಳನ್ನು ಕೂಡ ಬಳಸಿ ಪರಿಶೀಲನೆ‌ ನಡೆಸಲಾಗುತ್ತಿದೆ. ಇನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಪ್ರತಿದಿನ ಕೂಮಿಂಗ್ ಕಾರ್ಯಾಚರಣೆಯನ್ನು ಹೆಚ್ಚಿಸಿದ್ದು ಮೀನುಗಾರರಿಗೆ ಯಾರೇ ಅನುಮಾನಸ್ಪದ ಬೋಟುಗಳು ಅರಬ್ಬಿ ಸಮುದ್ರದಲ್ಲಿ ಕಂಡಲ್ಲಿ ತಕ್ಷಣ ಮಾಹಿತಿ ನೀಡಲು ತಿಳಿಸಾಗಿದೆ.  ಇದನ್ನೂ ಓದಿ: ಪಾಕ್ ಯುವತಿಯನ್ನು ಮದ್ವೆಯಾಗಿ ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ!

  • ರಾಜ್ಯೋತ್ಸವ ಕಪ್ ಮುಡಿಗೇರಿಸಿಕೊಂಡ ಕರಾವಳಿ ಪೊಲೀಸರು – ಎಸ್‍ಪಿ ಇಲೆವೆನ್‍ಗೆ ರನ್ನರ್ ಅಪ್

    ರಾಜ್ಯೋತ್ಸವ ಕಪ್ ಮುಡಿಗೇರಿಸಿಕೊಂಡ ಕರಾವಳಿ ಪೊಲೀಸರು – ಎಸ್‍ಪಿ ಇಲೆವೆನ್‍ಗೆ ರನ್ನರ್ ಅಪ್

    ಉಡುಪಿ: ಕರಾವಳಿ ಕಾವಲು ಪೊಲೀಸ್ ತಂಡ ಈ ಬಾರಿಯ ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದಿದೆ. ಎಸ್‍ಪಿ ನೇತೃತ್ವದ ಜಿಲ್ಲಾ ಪೊಲೀಸ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ಭಾಜನವಾಗಿದೆ.

    72 ನೇ ಗಣರಾಜ್ಯೋತ್ಸವ ಪ್ರಯುಕ್ತ ಉಡುಪಿ ಜಿಲ್ಲಾಡಳಿತ ಮಣಿಪಾಲದ ಎಂಡ್ ಪಾಯಿಂಟ್ ಮೈದಾನದಲ್ಲಿ ಸೀಮಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಡಿಸಿ ಇಲೆವೆನ್, ಉಡುಪಿ ಜಿಲ್ಲಾ ಪೊಲೀಸ್, ಕರಾವಳಿ ಕಾವಲು ಪೊಲೀಸ್, ಜಿಲ್ಲಾ ಸರಕಾರಿ ವೈದ್ಯರ ತಂಡ, ಜಿಲ್ಲಾ ಪಂಚಾಯತ್ ಮತ್ತು ಪತ್ರಕರ್ತರ ತಂಡ ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು.

    ನಿಗದಿತ 10 ಓವರ್ ಗಳ ಮೊದಲ ಪಂದ್ಯದಲ್ಲಿ ಕರಾವಳಿ ಪೊಲೀಸರ ತಂಡ ಜಿಲ್ಲಾ ವೈದ್ಯಾಧಿಕಾರಿಗಳ ತಂಡವನ್ನು ಸೋಲಿಸಿತು. ಡಿಸಿ ಇಲೆವೆನ್ ಮತ್ತು ಜಿಲ್ಲಾ ಪೊಲೀಸ್ ತಂಡಗಳ ನಡುವೆ ನಡೆದ ಜಿದ್ದಾಜಿದ್ದಿನ ಲೀಗ್ ಪಂದ್ಯದಲ್ಲಿ ಎಸ್ ಪಿ. ವಿಷ್ಣುವರ್ಧನ್ ನೇತೃತ್ವದ ತಂಡ ವಿಜಯಿಯಾಯಿತು. ಸೆಮಿ ಫೈನಲ್ ನಲ್ಲಿ ಪತ್ರಕರ್ತರ ತಂಡ ಜಿಲ್ಲಾ ಪೊಲೀಸ್ ತಂಡದ ಎದುರು ಸೋಲನ್ನು ಅನುಭವಿಸಿತು. ಸಿಇಒ ನವೀನ್ ಭಟ್ ನೇತೃತ್ವದ ಜಿಲ್ಲಾ ಪಂಚಾಯತ್ ತಂಡವನ್ನು ಸಿಎಸ್‍ಪಿ ತಂಡ ಮಣಿಸಿ ಫೈನಲ್ ಗೆ ಪ್ರವೇಶಿಸಿತು.

    ಕರಾವಳಿ ಕಾವಲು ಪೊಲೀಸ್ ತಂಡ ಉಡುಪಿ ಜಿಲ್ಲಾ ಪೊಲೀಸ್ ತಂಡವನ್ನು ಮಣಿಸಿ 2020 ಗಣರಾಜ್ಯೋತ್ಸವ ಕಪ್ ಗೆದ್ದಿದೆ. ಗೆಲ್ಲುವ ಹಾಟ್ ಫೇವರೆಟ್ ತಂಡವೆಂದು ಬಿಂಬಿತವಾಗಿದ್ದ ಜಿಲ್ಲಾ ಪೊಲೀಸ್ ತಂಡ ರೋಚಕ ತಿರುವು ಕಂಡು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಜಿಲ್ಲಾ ಪೊಲೀಸ್ ತಂಡದಲ್ಲಿ ಆಡಿದ ಪ್ರಶಾಂತ್ ಪಡುಕೆರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ಚೇತನ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ನವೀನ್ ಭಟ್, ಜಿಲ್ಲಾ ವೈದ್ಯಾಧಿಕಾರಿ ಡಾ. ಸುಧೀರ್ ಚಂದ್ರ ಚೂಡ ಕೊರೋನಾ ನೋಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲೆಯ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡರು.