Tag: coconut tree

  • ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು, ತಾಯಿ ಗಂಭೀರ

    ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು, ತಾಯಿ ಗಂಭೀರ

    ಚಿಕ್ಕಬಳ್ಳಾಪುರ: ತೆಂಗಿನ ಮರ (Coconut Tree) ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು (Gaurididanur) ತಾಲೂಕಿನ ಹಾಲಗಾನಹಳ್ಳಿಯಲ್ಲಿ (Halaganahalli) ನಡೆದಿದೆ.

    ಪೃಥ್ವಿರಾಜ್(3) ಮೃತ ಮಗು, ಗರ್ಭಿಣಿ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿವೆ. ಗರ್ಭಿಣಿ ಮೋನಿಕಾ 15 ದಿನಗಳ ಹಿಂದೆ ಹೆರಿಗೆಗಾಗಿ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಪಾಕಿಸ್ತಾನ ಆಲೌಟ್‌ – ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌

    ಭಾನುವಾರ (ಫೆ.23) ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದೆ. ಪರಿಣಾಮ ಮಗು ಸಾವನ್ನಪ್ಪಿದೆ. ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಅಧಿಕಾರದಲ್ಲಿ ತೃಪ್ತಿ ಅನ್ನೋದು ಇರಲ್ಲ: ಟಿ.ಬಿ ಜಯಚಂದ್ರ

    ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • 3,000ಕ್ಕೂ ಅಧಿಕ ಅಡಿಕೆ ಮರ, 200ಕ್ಕೂ ಅಧಿಕ ತೆಂಗಿನ ಮರಗಳು ನೆಲಸಮ

    3,000ಕ್ಕೂ ಅಧಿಕ ಅಡಿಕೆ ಮರ, 200ಕ್ಕೂ ಅಧಿಕ ತೆಂಗಿನ ಮರಗಳು ನೆಲಸಮ

    – ಬೆಳೆ ಹಾನಿ ಪ್ರದೇಶಕ್ಕೆ ರೇಣುಕಾಚಾರ್ಯ ಭೇಟಿ

    ದಾವಣಗೆರೆ: ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ (Rain) 3000ಕ್ಕೂ ಅಧಿಕ ಅಡಿಕೆ ಮರಗಳು ಹಾಗೂ 200ಕ್ಕೂ ಅಧಿಕ ತೆಂಗಿನ ಮರಗಳು ಧರೆಗುರುಳಿವೆ. ಬೆಳೆ ಹಾನಿ ಪ್ರದೇಶಕ್ಕೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (MP Renukacharya) ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಶನಿವಾರ ಸುರಿದ ಧಾರಾಕಾರ ಮಳೆಗೆ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮವೊಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ ಹಾಗೂ 200ಕ್ಕೂ ಅಧಿಕ ತೆಂಗಿನ ಮರಗಳು ಧರೆಗುರುಳಿವೆ. ಪ್ರತೀ ಎಕರೆಗೆ 50 ರಿಂದ 100 ಮರಗಳು ಧರೆಗೆ ಉರುಳಿವೆ. ಹಾಗೆಯೇ ಪ್ರತಿ ಎಕರೆಗೆ 4 ರಿಂದ 5 ಲಕ್ಷ ರೂ. ಮೌಲ್ಯದ ಅಡಿಕೆ ಬೆಳೆ ಹಾನಿಯಾಗಿದೆ. ಇದನ್ನೂ ಓದಿ: TB Dam – ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನ

    ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲ 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ಪ್ರತಿಭಟನೆ

    ಬೆಳೆ ಹಾನಿಯಾದ ತೋಟಗಳಿಗೆ ರೈತರೊಂದಿಗೆ ರೇಣುಕಾಚಾರ್ಯ ಭೇಟಿ ನೀಡಿ, ರೈತರಿಗೆ ಧೈರ್ಯ ತುಂಬಿದ್ದಾರೆ. ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

  • ತೆಂಗಿನಕಾಯಿ ತದ್ರೂಪಿ ಸೃಷ್ಠಿ ಯತ್ನ ಯಶಸ್ವಿ

    ತೆಂಗಿನಕಾಯಿ ತದ್ರೂಪಿ ಸೃಷ್ಠಿ ಯತ್ನ ಯಶಸ್ವಿ

    ತಿರುವನಂತಪುರಂ: ತೆಂಗಿನಕಾಯಿಯನ್ನು ಕಲ್ಪತರು ಎಂದು ಕರೆಯುತ್ತಾರೆ. ಈ ತೆಂಗಿನಕಾಯಿಯ ಮರದಿಂದ ಹಿಡಿದು ತೆಂಗಿನಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ. ಇದರ ಕುರಿತಾಗಿ ವಿಜ್ಞಾನಿಗಳು ಸಂಶೋಧನೆಯೊಂದನ್ನು ಮಾಡಿದ್ದಾರೆ. ಜಗತ್ತಿನಲ್ಲಿ ಮೊದಲ ಬಾರಿಗೆ ತೆಂಗಿನ ಮರದ ತದ್ರೂಪಿ ಸೃಷ್ಠಿಸುವಲ್ಲಿ ಬೆಲ್ಜಿಯಂನ ಜೀವಶಾಸ್ತ್ರ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.

    ಬೆಲ್ಜಿಯಂನ ಸಾಧನೆ: ತೆಂಗಿನ ಬೀಜವು ಒಂದೇ ಮೊಳಕೆಯೊಡೆದು ರೆಂಬೆಗಳಿಲ್ಲದೆ ನೇರವಾಗಿ ಬೆಳೆಯುವುದರಿಂದ ತದ್ರೂಪಿ ಸೃಷ್ಠಿ ಸಾಧ್ಯವಾಗಿರಲಿಲ್ಲ. ಹೊಸ ಕಸಿ ವಿಧಾನದ ಮೂಲಕವಾಗಿ ವಿಜ್ಞಾನಿಗಳು ಸಂಶೋಧನೆ ಮಾಡಿದ್ದಾರೆ. ಈ ವಿಧಾನದಿಂದ ಒಂದೇ ಬೀಜದಿಂದ ಹಲವು ತೆಂಗಿನ ಸಸಿಗಳನ್ನು ತಯಾರಿಸ ಬಹುದಾಗಿದೆ. ಇದರಿಂದ ರೈತರಿಗೆ ತೆಂಗಿನ ತೋಟಕ್ಕೆ ಮಾಡುವ ಖರ್ಚು ಕಡಿಮೆಯಾಗುತ್ತದೆ ಎಂದು ಹೇಳಲಾಗಿದೆ. ಇದನ್ನೂ ಓದಿ:  ವರುಣನ ಆರ್ಭಟಕ್ಕೆ ಬೆಳೆ ಹಾನಿ ಭೀತಿ – ಕೋಲಾರದಲ್ಲಿ ತೋಟದಲ್ಲೇ ಕೊಳೆಯುತ್ತಿವೆ ಟೊಮೆಟೋ

    ಕಸಿ ಮಾಡುವ ಮೂಲಕವಾಗಿ ತೆಂಗಿನ ತದ್ರೂಪಿ ಸೃಷ್ಠಿಸುವುದು ಹಾಗೂ ತೆಂಗಿನ ತಳಿಗಳನ್ನು ರಕ್ಷಿಸುವ ವಿಧಾನ ಇದಾಗಿದ್ದು, ತೆಂಗಿನ ಬೆಳೆಗಾರರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಇದರಲ್ಲಿ ಪರಿಹಾರ ಅಡಗಿದೆ. ಈ ತಂತ್ರಜ್ಞಾನ ಜನಸಾಮಾನ್ಯರ ಬಳಕೆಗೆ ಯಾವಾಗ ಸಿಗುತ್ತದೆ ಎನ್ನುವುದರ ಕುರಿತು ವಿಜ್ಞಾನಿಗಳು ಮಾಹಿತಿ ನೀಡಿಲ್ಲ. ಇದನ್ನೂ ಓದಿ: ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ – ರಾಜ್ಯಾದ್ಯಂತ ಅಬ್ಬರಿಸ್ತಿದೆ ಮಳೆ

    ಬೆಲ್ಜಿಯಂನ ಕೆ.ಯು ಲೀವನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ತದ್ರೂಪಿ ಸೃಷ್ಠಿಯ ಮೂಲಕ ತೆಂಗಿನ ಸಸಿಗಳು ಬೇಗ ಬೆಳೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ತೆಂಗಿನ ವಂಶವಾಯಿ ಗುಣಗಳನ್ನು ದೀರ್ಘಾವಧಿಗೆ ಸಂರಕ್ಷಿಸಿಡುವ ವಿಧಾನವನ್ನೂ ಕಂಡುಹಿಡಿದಿದ್ದು, ಇದರಿಂದ ಭಾರತ ಮುಂತಾದ ದೇಶಗಳಲ್ಲಿ ತೆಂಗು ಬೆಳೆಗಾರರು ಎದುರಿಸುತ್ತಿರುವ ಹಳದಿರೋಗ, ಹವಾಮಾನ ಬದಲಾವಣೆ, ಸಮುದ್ರ ಮಟ್ಟದ ಏರುವಿಕೆ ಹಾಗೂ ತೆಂಗಿನ ತೋಟಗಳು ಹಳೆಯದಾಗಿರುವುದು ಮುಂತಾದ ಸಮಸ್ಯೆಗೆ ಪರಿಹಾರ ಲಭಿಸಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

  • ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ – ಹೊತ್ತಿ ಉರಿದ ತೆಂಗಿನಮರ

    ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ – ಹೊತ್ತಿ ಉರಿದ ತೆಂಗಿನಮರ

    ಹಾವೇರಿ: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲಿನ ಅಬ್ಬರಕ್ಕೆ ರಾಣೇಬೆನ್ನೂರು ತಾಲೂಕಿನ ಕೆರಿಮಲ್ಲಾಪುರ ಗ್ರಾಮದಲ್ಲಿ ತೆಂಗಿನರವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

    ಜಿಲ್ಲೆಯಲ್ಲಿ ಸಂಜೆಯಾಗುತ್ತಿದ್ದಂತೆ ಹಾವೇರಿ ನಗರ, ಸವಣೂರು ತಾಲೂಕಿನ ಮೆಳಾಗಟ್ಟಿ, ಕುರುಬರಮಲ್ಲೂರು ಗ್ರಾಮದಲ್ಲಿ ಧಾರಾಕಾರ ಮಳೆ ಸುರಿಯಲು ಆರಂಭವಾಗಿದೆ. ಇತ್ತ ಕಿತ್ತೂರು, ಮರಡೂರು, ಸೇರಿದಂತೆ ಹಲವೆಡೆ ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಿದೆ. ಪರಿಣಾಮ ರಾಣೇಬೆನ್ನೂರು ತಾಲೂಕಿನ ಕೆರಿಮಲ್ಲಾಪುರ ಗ್ರಾಮದಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದು ತೆಂಗಿನಮರ ಧಗಧಗನೆ ಹೊತ್ತಿ ಉರಿದಿದೆ.

    ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಬಿರುಗಾಳಿ, ಗುಡುಗು ಸಹಿತ ವರುಣನ ಅಬ್ಬರಕ್ಕೆ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

  • ಕಲ್ಪರಸ ಎಂಬ ಕಲಿಯುಗದ ಅಮೃತ- ಕೃಷಿಕರ ಬಾಳು ಬಂಗಾರ

    ಕಲ್ಪರಸ ಎಂಬ ಕಲಿಯುಗದ ಅಮೃತ- ಕೃಷಿಕರ ಬಾಳು ಬಂಗಾರ

    ಉಡುಪಿ: ಎಂಟು ತೆಂಗಿನ ಮರ ಇದ್ದರೆ ಸಾಕು ಲಕ್ಷ ಲಕ್ಷ ಸಂಪಾದಿಸಬಹುದು. ಕರ್ನಾಟಕದಲ್ಲಿ ಉಕಾಸ ಕಂಪನಿ ಆರಂಭವಾಗಿದ್ದು, ಕಲಿಯುಗದ ಕಲ್ಪರಸ ಕೃಷಿಕನ ಕೈ ಹಿಡಿಯಲಿದೆ. ಕೃಷಿಕ ತಿಂಗಳು ತಿಂಗಳು ವಿಟಮಿನ್ “ಎಂ” ಜೇಬಿಗಿಳಿಸಿಕೊಳ್ಳುವ ಹೊಸ ದಾರಿ ಕಾಣಿಸುತ್ತಿದೆ.

    ತೆಂಗು ಬೆಳೆಗಾರರ ಹಿತರಕ್ಷಣೆ ಹಾಗೂ ತೆಂಗು ಉತ್ಪನ್ನಗಳ ಮೌಲ್ಯವರ್ಧನೆಗೆ ಉಡುಪಿಯಲ್ಲಿ ತೆಂಗಿನ ಕಲ್ಪರಸ ಮಾರುಕಟ್ಟೆಗೆ ಬಿಡುಗಡೆಗೆ ಸಿದ್ಧವಾಗಿದೆ. ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ಕಲ್ಪರಸ ತೆಗೆಯುವ ಸಂಸ್ಕರಣಾ ಘಟಕ ಆರಂಭಿಸಲಾಗಿದ್ದು, 14 ಯುವಕರಿಗೆ 45 ದಿನದ ತರಬೇತಿ ನಡೆಯುತ್ತಿದೆ. ತೆಂಗಿನ ಮರ ಹತ್ತುವ, ಹೊಂಬಾಳೆಗೆ ಕಟ್ಟು ಬಿಗಿದು ಐಸ್ ಬಾಕ್ಸ್ ಜೋಡಿಸುವ ದಿನಕ್ಕೆರಡು ಬಾರಿ ಕಲ್ಪರಸ ತೆಗೆದು ಕೆಡದಂತೆ ಕಾಪಾಡುವ ತರಬೇತಿ ಕೊಡಲಾಗುತ್ತಿದೆ.

    ಉಡುಪಿ ಜಿಲ್ಲೆಯಲ್ಲಿ 1,028 ರೈತರು ಸಂಸ್ಥೆಗೆ ಶೇರುದಾರರಾಗಿದ್ದು, ಮುಂದಿನ 5 ವರ್ಷದಲ್ಲಿ 5 ಸಾವಿರ ಕುಟುಂಬ ಸೇರ್ಪಡೆಯಾಗಲಿದೆ. ಉಕಾಸ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ತೆಂಗು ಬೆಳೆಗಾರರು ವರ್ಷಕ್ಕೆ ಲಕ್ಷಾಂತರ ರೂಪಾಯಿ ಬೆಳೆಯಬೇಕು ಎಂಬ ಉದ್ದೇಶ ನಮ್ಮ ಸಂಸ್ಥೆಯದ್ದು ಸುಮಾರು ಮೂರು ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ ತಿಂಗಳಿಗೆ 25ರಿಂದ 30 ಸಾವಿರ ರೂಪಾಯಿ ಆದಾಯ ಗಳಿಸಬಹುದು ಎಂದರು.

    ಕಲ್ಪರಸ ದಿಂದ ಆರೋಗ್ಯಕ್ಕೆ ಸಿಗುವ ಲಾಭ:
    ಕಲ್ಪರಸದಲ್ಲಿ ವಿಟಮಿನ್ ಎ, ಬಿ, ಸಿ.. ಕಬ್ಬಿಣದ ಅಂಶ, 17 ರೀತಿಯ ಅಮೀನೋ ಆಮ್ಲಗಳು ಅಡಕವಾಗಿವೆ. ಕಲ್ಪರಸ ಒಂದು ಕಂಪ್ಲೀಟ್ ಹೆಲ್ತ್ ಡ್ರಿಂಕ್ ಆಗಿದೆ. ಕಲ್ಪರಸದಲ್ಲಿ ಇರುವಷ್ಟು ಶಕ್ತಿಯುತವಾದ ಅಂಶ ಹೆಲ್ತ್ ಡ್ರಿಂಕ್ ಬೇರೆ ಡ್ರಿಂಕ್‍ಗಳಲ್ಲಿ ಇಲ್ಲ. ಗ್ರಾಹಕನ ಆರೋಗ್ಯ ಸುಧಾರಣೆ, ರೈತರಿಗೆ ಶಕ್ತಿ ತುಂಬುವ ಉದ್ದೇಶವಿದೆ. ವಿಪರೀತ ಸಿಹಿಯಾದ ಕಲ್ಪರಸ ಕುಡಿದ ನಂತರ ಬಾಯಾರಿಕೆ ಆಗಲ್ಲ. ಪೌಷ್ಟಿಕಾಂಶಯುಕ್ತ ಮತ್ತು ಹಸಿವು ನೀಗಿಸುತ್ತದೆ.

    ಸೊಸೈಟಿಯ ರೂಲ್ಸ್ ಹೀಗಿದೆ ನೋಡಿ:
    ಒಂದು ರೈತ ಕುಟುಂಬಕ್ಕೆ 8 ತೆಂಗಿನ ಮರಗಳಿಂದ ಮಾತ್ರ ಕಲ್ಪರಸ ಸಂಗ್ರಹಿಸುವ ಅವಕಾಶವನ್ನು ನೀಡಲಾಗಿದೆ. ಒಂದು ಮರದಿಂದ ಪ್ರತಿದಿನ 2 ಲೀಟರ್ ಸಿಹಿರಸ ಇಳಿಯಲಿದೆ. ವರ್ಷಕ್ಕೆ 8 ಮರದಿಂದ 5,000 ಲೀಟರ್ ರಸ ಇಳಿದರೆ ವಾರ್ಷಿಕ ಸುಮಾರು ಒಂದು ಲಕ್ಷ ರೂಪಾಯಿ ಆದಾಯ ಸಿಗುತ್ತದೆ. ಕಲ್ಪರಸ ತೆಗೆಯುವ ತಜ್ಞ ಯುವಕರು ಲೀಟರ್‍ಗೆ 25 ರೂಪಾಯಿ, ಪಿಎಫ್, ಇಎಸ್.ಐ ಸೌಲಭ್ಯ ಪಡೆಯಲಿದ್ದಾರೆ.

    ಕುಂದಾಪುರ ತೆಂಗು ಬೆಳೆಗಾರ ಸೀತಾರಾಮ ಮಾತನಾಡಿ, ನಾನು ಎಂಟು ಮರ ಸೊಸೈಟಿಗೆ ಕೊಟ್ಟಿದ್ದೇನೆ. ನಿವೃತ್ತ ಜೀವನ ಸಾಗಿಸಲು ಅದರ ವರಮಾನ ಹೊಂಬಾಳೆಯಿಂದ ಪ್ರತಿದಿನ 2ರಿಂದ 3 ಬಾರಿ ಕಲ್ಪರಸ ಇಳಿಸಬಹುದು ಎಂದಿದ್ದಾರೆ.

    ನಾನು ಗಾರೆ ಕೆಲಸಕ್ಕೆ ಹೋಗುತ್ತಿದ್ದೆ. ಅಲ್ಲಿ ಪಡುವ ಶ್ರಮಕ್ಕೆ ನಮಗೆ ಸಿಗುವ ಸಂಬಳ ಬಹಳ ಕಡಿಮೆ. ಈ ವೃತ್ತಿಯಲ್ಲಿ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ದೇಹಕ್ಕೆ ವಿಶ್ರಾಂತಿಯೂ ಸಿಗುತ್ತದೆ. ಮನಸ್ಸು ಮಾಡಿದರೆ 30 ಸಾವಿರಕ್ಕಿಂತ ಹೆಚ್ಚು ಸಂಬಳ ಗಳಿಸಬಹುದು. ನಮ್ಮ ಮನೆಯ ತೋಟದ ಕೆಲಸವೂ ಮಾಡಬಹುದು ಎಂದು ಕಲ್ಪರಸ ತೆಗೆಯುವ ತಜ್ಞ ಶರತ್ ಹೇಳಿದ್ದಾರೆ.

    ಪ್ರತಿ ಗ್ರಾಮಗಳಲ್ಲಿ ಕನಿಷ್ಟ 20ರಿಂದ 30 ಮಂದಿ ರೈತರನ್ನೊಳಗೊಂಡ ಸಹಕಾರ ಸಂಘ ರಚನೆಯಾದರೆ ಪ್ರಧಾನಿ ಮೋದಿ ಹೇಳಿದಂತೆ ರೈತರ ವರಮಾನ ಡಬ್ಬಲ್ ದಾಟಲಿದೆ. ಅಬಕಾರಿ ಇಲಾಖೆ ತನ್ನ ಕಪಿಮುಷ್ಠಿ ಬಿಟ್ಟರೆ ರೈತರ ಬಾಳು ಬಂಗಾರವಾಗಲಿದೆ ಎಂದಿದ್ದಾರೆ.

  • ಸಿಡಿಲು ತಾಗಿ ಹೊತ್ತಿ ಉರಿದ ತೆಂಗಿನ ಮರ

    ಸಿಡಿಲು ತಾಗಿ ಹೊತ್ತಿ ಉರಿದ ತೆಂಗಿನ ಮರ

    ಉಡುಪಿ: ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ.

    ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಾರ ಯಶವಂತ ಕಾಮತ್ ಮನೆ ತೆಂಗಿನ ತೋಟದ ಮರವೊಂದಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಹಸಿ ತೆಂಗಿನ ಮರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇನ್ನು ಮರಕ್ಕೆ ಬೆಂಕಿ ಹತ್ತಿರುವ ಫೋಟೋ ಮತ್ತು ವಿಡಿಯೋಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಉಡುಪಿಯ ಕುಂದಾಪುರ, ಕಾರ್ಕಳ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನಕ್ಕೆ ವರುಣದೇವ ತಂಪು ನೀಡಿದ್ದಾನೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ರಾತ್ರಿ ಸಹ ಮಳೆಯಾಗುವ ಸಾಧ್ಯತೆಗಳಿವೆ.

    ಚಿಕ್ಕಮಗಳೂರುಇ ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರದಲ್ಲಿ ಮಳೆಯಾಗಿದೆ. ಮೂಡಿಗೆರೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು, ಜಾವಳಿಯಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಾಸನ, ವಿಜಯಪುರ, ಧಾರವಾಡ, ಯಾದಗಿರಿಯಲ್ಲಿಯೂ ಮಳೆಯಾಗಿದೆ.

  • ಬರೋಬ್ಬರಿ 35 ಅಡಿ ಎತ್ತರದ ತೆಂಗಿನ ಮರ ಏರಿ ಕುಳಿತ ಚಿರತೆ!

    ಬರೋಬ್ಬರಿ 35 ಅಡಿ ಎತ್ತರದ ತೆಂಗಿನ ಮರ ಏರಿ ಕುಳಿತ ಚಿರತೆ!

    ಮಂಡ್ಯ: ಆಹಾರ ಅರಸಿ ನಾಡಿಗೆ ಬಂದಿದ್ದ ಚಿರತೆಯೊಂದು ತೋಟವೊಂದರ ತೆಂಗಿನ ಮರವನ್ನು ಏರಿ ಕುಳಿತ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ನಡೆದಿದೆ.

    ಸೋಮನಾಥಪುರದ ಯೋಗೇಶ್ ಎಂಬುವರ ತೋಟದಲ್ಲಿ ಚಿರತೆ ತೆಂಗಿನ ಮರ ಏರಿ ಕುಳಿತಿದೆ. ಸುಮಾರು 30-35 ಅಡಿ ಎತ್ತರದ ತೆಂಗಿನ ಮರವನ್ನು ಚಿರತೆ ಏರಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸುತ್ತಮುತ್ತಲ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು.

    ಮರದಿಂದ ಕೆಳಗೆ ಬರಲಾಗದೇ ಚಿರತೆ ನರಳಾಡುತ್ತ ಕೂಗುತ್ತಿತ್ತು. ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುವುದಕ್ಕೆ ಚಿರತೆ ಭಯಗೊಂಡು ಮರದ ಮೇಲೆಯೇ ಕುಳಿತಿತ್ತು. ಚಿರತೆಯನ್ನು ಕೆಳಗಿಳಿಸಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾಗ ಚಿರತೆಗೆ ಮರದಿಂದ ಕೆಳಗಡೆ ಇಳಿದು ಓಡಿ ಹೋಗಿದೆ.

    ಈ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದ್ದವು. ಆದ್ರೆ ಈ ಬಾರಿ ಕಂಡುಬಂದಿರುವ ಮೊದಲ ಚಿರತೆ ಇದು ಎಂದು ಸ್ಥಳೀಯರು ಹೇಳಿದ್ದಾರೆ. ಕೆ.ಆರ್.ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚಿರತೆ ಪ್ರತ್ಯಕ್ಷದಿಂದ ಸೋಮನಾಥಪುರವಷ್ಟೇ ಅಲ್ಲದೇ ಸುತ್ತಮುತ್ತಲ ಗ್ರಾಮಸ್ಥರು ಕೂಡ ಆತಂಕಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದ ವ್ಯಕ್ತಿಯನ್ನು ಕೆಳಗಿಳಿಸಲು ಮರವನ್ನೇ ಉರುಳಿಸಿದ್ರು: ವಿಡಿಯೋ ನೋಡಿ

    3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದ ವ್ಯಕ್ತಿಯನ್ನು ಕೆಳಗಿಳಿಸಲು ಮರವನ್ನೇ ಉರುಳಿಸಿದ್ರು: ವಿಡಿಯೋ ನೋಡಿ

    ಮನಿಲಾ: ವ್ಯಕ್ತಿಯೊಬ್ಬ 3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದು, ಆತನನ್ನು ಕೆಳಗಿಳಿಸಲು ಆಗದೆ ಮರವನ್ನೇ ಉರುಳಿಸಿರುವ ಘಟನೆ ಫಿಲಿಫೈನ್ಸ್ ನಲ್ಲಿ ನಡೆದಿದೆ.

    ಅಗುಸನ್ ದೆಲ್ ಸುರ್ ನ ಗಿಲ್ ಬರ್ಟ್ ಶಾನ್ ಚೇಜ್ ಎಂಬ ವ್ಯಕ್ತಿ 3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದು, ಆತನನ್ನು ರಕ್ಷಣಾ ಸಿಬ್ಬಂದಿಯವರು ರಕ್ಷಿಸಿದ್ದಾರೆ. ಇತ್ತೀಚಿಗೆ ಮಾಧ್ಯಮವೊಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಆತನನ್ನು ರಕ್ಷಣೆ ಮಾಡಿದ ವಿಡಿಯೋವೊಂದನ್ನು ಹಾಕಿದ್ದು, ಸಾಕಷ್ಟು ವೈರಲ್ ಆಗಿದೆ.

    ಗಿಲ್ ಬರ್ಟ್ ತಲೆಗೆ ಪಿಸ್ತೂಲ್ ನಿಂದ ಏಟು ಬಿದ್ದಿದ್ದು, ಆ ದಿನದಿಂದ ಆತನು 60 ಅಡಿ ಎತ್ತರವಿರುವ ತೆಂಗಿನ ಮರದ ಮೇಲೆ ವಾಸಿಸುತ್ತಿದ್ದನು. ಹಳೆಯ ಬಟ್ಟೆಗಳ ಜೊತೆ ಮರದ ತುಂಡನ್ನು ತೆಗೆದುಕೊಂಡು ಹೋಗಿ, ಮರದ ಮೇಲೆ ತನ್ನ ಮನೆಯನ್ನು ನಿರ್ಮಿಸಿಕೊಂಡಿದ್ದನು. ಮನೆಗೆ ಗೋಡೆ ಇರದಿದ್ದರೂ ತೆಂಗಿನ ಗರಿಯಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿದ್ದನು. ಕೆಲವು ಬಟ್ಟೆಗಳು ಬಿಟ್ಟರೆ ಅವನ ಜೊತೆ ಬೇರೆ ಯಾವ ವಸ್ತು ಕೂಡ ಇರಲಿಲ್ಲ.

    ಗಿಲ್ ಬರ್ಟ್‍ನ ತಾಯಿ ವೇನೆಫ್ರೇಡ್ ಶಾನ್ ಚೇಜ್ ತನ್ನ ಮಗನ ಯೋಚನೆಯಿಂದ ಬೆಳಗ್ಗೆ ಬೇಗ ಎದ್ದು ಗಿಲ್ ಬರ್ಟ್‍ಗಾಗಿ ಅಡುಗೆ ಮಾಡಿ, ಅವನು ವಾಸವಿರುವ ಜಾಗಕ್ಕೆ ಹೋಗಿ ಊಟ ಹಾಗೂ ಸಿಗರೇಟ್ ಕೋಡುತ್ತಿದ್ದರು. ಗಿಲ್ ಬರ್ಟ್ ಉದ್ದದ ಹಗ್ಗವನ್ನು ಕೆಳಗೆ ಬಿಟ್ಟು ಅಲ್ಲಿಂದ ಊಟವನ್ನು ತೆಗೆದುಕೊಳ್ಳುತ್ತಿದ್ದನು.

    ಬಿಸಿಲು ಅಥವಾ ಮಳೆಯಿರಲ್ಲಿ ಗಿಲ್ ಬರ್ಟ್ ಎಲ್ಲರಿಂದಲ್ಲೂ ದೂರವಿರುತ್ತಿದ್ದ. ಗಿಲ್ ಬರ್ಟ್‍ನ ಸಹೋದರಿ ಪ್ರಕಾರ 2014 ರಲ್ಲಿ ನಡೆದ ಒಂದು ಜಗಳದಿಂದ ಆತನ ತಲೆಗೆ ಪಿಸ್ತೂಲ್ ನಿಂದ ಏಟು ಬಿದಿದ್ದ ಕಾರಣ ಗಿಲ್ ಬರ್ಟ್ ಈ ರೀತಿ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ.

    ಗಿಲ್ ಬರ್ಟ್ ಕೆಳಗಿಳಿಯಲ್ಲು ನಿರಾಕರಿಸಿದ್ದಾಗ, ರಕ್ಷಣಾ ಸಿಬ್ಬಂದಿ ಆತನನ್ನು ರಕ್ಷಿಸಲು ಎಲ್ಲಾ ರೀತಿಯ ಉಪಕರಣಗಳನ್ನು ತಯಾರಿ ಮಾಡಿಕೊಂಡರು. ನಂತರ ಮರವನ್ನು ಕತ್ತರಿಸಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿಕೊಂಡರು.

    ಫೇಸ್‍ ಬುಕ್ ನಲ್ಲಿ ಇದದೂವರೆಗೂ ವಿಡಿಯೋ 28 ಲಕ್ಷ ವ್ಯೂ ಕಂಡಿದ್ದು, 46 ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ.

  • ವಿಡಿಯೋ: ತೆಂಗಿನ ಮರ ಬಿದ್ದು ದೂರದರ್ಶನದ ಮಾಜಿ ನಿರೂಪಕಿ ದುರ್ಮರಣ

    ವಿಡಿಯೋ: ತೆಂಗಿನ ಮರ ಬಿದ್ದು ದೂರದರ್ಶನದ ಮಾಜಿ ನಿರೂಪಕಿ ದುರ್ಮರಣ

    ಮುಂಬೈ: ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ತಲೆ ಮೇಲೆ ತೆಂಗಿನ ಮರ ಬಿದ್ದ ಪರಿಣಾಮ ದೂರದರ್ಶನದ ಮಾಜಿ ನಿರೂಪಕಿ ಹಾಗೂ ಯೋಗ ಶಿಕ್ಷಕಿ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಮುಂಬೈನ ಚೆಂಬೂರ್‍ನಲ್ಲಿ ನಡೆದಿದೆ.

    58 ವರ್ಷದ ಕಂಚನ್ ನಾಥ್ ಮೃತ ದುರ್ದೈವಿ ಮಹಿಳೆ. ಈ ಘಟನೆ ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಕಂಚನ್ ಎಂದಿನಂತೆ ಗುರುವಾರ ಬೆಳಗ್ಗೆ ಮನೆಯ ಬಳಿ ವಾಕಿಂಗ್ ಹೋಗಿದ್ದರು. ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಆಕೆಯ ತಲೆಯ ಮೇಲೆ ಹಠಾತ್ತನೆ ತೆಂಗಿನ ಮರವೊಂದು ಬಿದ್ದಿದೆ. ಪರಿಣಾಮ ಕಂಚನ್ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಅವರ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಕಂಚನ್ ಅವರನ್ನು ತೆಂಗಿನ ಮರದಡಿಯಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಹತ್ತಿರದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಮುಂಬೈ ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ಈ ಮರ ಯಾವ ಸಮಯದಲ್ಲಾದ್ರೂ ಬೀಳಬಹುದು ಎಂದು ತಿಳಿಸಿದ್ದರೂ ಕೂಡ ಮರವನ್ನು ಕಡಿಯಲು ಸೊಸೈಟಿಗೆ ಅವಕಾಶ ನೀಡಿರಲಿಲ್ಲ ಅಂತ ಕಂಚನ್ ಅವರ ಪತಿ ರಜತ್‍ನಾಥ್ ಹೇಳಿಕೆ ನೀಡಿದ್ದಾರೆ.

    ಆದ್ರೆ ಮರ ಒಳ್ಳೆಯ ಸ್ಥಿತಿಯಲ್ಲೇ ಇದ್ದಿದ್ದರಿಂದ ಅದನ್ನು ಕಡಿಯಲು ಅನುಮತಿ ನಿರಾಕರಿಸಲಾಗಿತ್ತು ಎಂದು ಸ್ಥಳೀಯ ಕಾರ್ಪೊರೇಟರ್ ಆಶಾ ಮರಾಠೆ ಹೇಳಿದ್ದಾರೆ.

  • ಮೈಸೂರು: ತೆಂಗಿನ ಮರದಿಂದ ಬಿದ್ದು ರೈತ ಸಾವು

    ಮೈಸೂರು: ತೆಂಗಿನ ಮರದಿಂದ ಬಿದ್ದು ರೈತ ಸಾವು

    ಮೈಸೂರು: ತೆಂಗಿನ ಮರದಿಂದ ಬಿದ್ದು ರೈತರೊಬ್ಬರು ಮೃತಪಟ್ಟ ಘಟನೆ ಕೆ ಆರ್ ನಗರ ತಾಲೂಕಿನ ಮುಂಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

    ವರದನಾಯಕ (58) ಮೃತ ದುರ್ದೈವಿ ರೈತ.

    ತಮ್ಮ ಜಮೀನಿನಲ್ಲಿದ್ದ ಮರದಲ್ಲಿ ಎಳನೀರು ಕೀಳಲು ವರದನಾಯಕ ಮರ ಏರಿದ್ದರು. ಆದ್ರೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರದಿಂದ ಕಾಲುಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.