Tag: code of conduct

  • ಐ ಆ್ಯಮ್ ಎ ಎಜುಕೇಟೆಡ್, ಐ ನೊ ವಾಟ್ ಐ ಆ್ಯಮ್- ಸಿಂಧೂರಿ ನೋಟಿಸ್‍ಗೆ ಮಂಜು ಗರಂ

    ಐ ಆ್ಯಮ್ ಎ ಎಜುಕೇಟೆಡ್, ಐ ನೊ ವಾಟ್ ಐ ಆ್ಯಮ್- ಸಿಂಧೂರಿ ನೋಟಿಸ್‍ಗೆ ಮಂಜು ಗರಂ

    ಹಾಸನ: ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎ. ಮಂಜು ಅವರಿಗೆ ನೋಟಿಸ್ ಜಾರಿಯಾಗಿದ್ದು, ಈ ಕುರಿತು ಸಚಿವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.

    ಅರಕಲಗೂಡು ತಾಲೂಕಿನ ತಮ್ಮ ಸ್ವಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳಲ್ಲಿ ಬಂದ ಬಳಿಕ ನನ್ನ ಸ್ನೇಹಿತರು ಕರೆ ಮಾಡಿ ಡಿಸಿ ಕಚೇರಿಯಿಂದ ನೋಟಿಸ್ ಬಂದಿರುವುದಾಗಿ ನನ್ನ ಗಮನಕ್ಕೆ ತಂದ್ರು. ಆದ್ರೆ ಇಲ್ಲಿಯವರೆಗೂ ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ನೋಟಿಸ್ ಕೊಡೋಕೆ ಸಮರ್ಥರ ಎಂಬುದನ್ನು ಮೊದಲು ಅವರು ಅರ್ಥ ಮಾಡಿಕೊಳ್ಳಬೇಕು. ಯಾಕಂದ್ರೆ ಆ ಕಚೇರಿ ಎ ಮಂಜು ಕಚೇರಿಯಲ್ಲ. ಬದಲಾಗಿ ಹಾಸನ ಜಿಲ್ಲೆಯ ಉಸ್ತುವಾರಿ ಮಂತ್ರಿ ಕಚೇರಿಯಾಗಿದೆ. ಹೀಗಾಗಿ ನಾನು ಸರ್ಕಾರದ ಓರ್ವ ಪ್ರತಿನಿಧಿಯಾಗಿ ಜನಸಾಮಾನ್ಯರು ಬಂದಾಗ ಅವರ ಕಷ್ಟ-ಸುಖಗಳನ್ನು ಆಲಿಸಲೆಂದು ಸರ್ಕಾರ ಕೊಟ್ಟಿರುವ ಕಚೇರಿಯನ್ನು ಬಳಸಿಕೊಂಡಿದ್ದೇನೆ. ಅದನ್ನು ದುರುಪಯೋಗಪಡಿಸಿಕೊಳ್ಳಬಾರದೆಂದು ನನಗೆ ಅರಿವಿದೆ ಅಂದ್ರು. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲು

    ನಾನು ಕೂಡ ಎರಡು ಪದವಿಗಳನ್ನು ಪಡೆದಿದ್ದೇನೆ. ಕಾನೂನು ನನಗೂ ತಿಳಿದಿದೆ. ನೋಟಿಸ್ ಬಂದಿದೆ ಅಂತ ಸ್ನೇಹಿತರಿಂದ ತಿಳಿಯಿತು. ಹೀಗಾಗಿ ಆ ನೋಟಿಸ್ ನನ್ನ ಕೈಸೇರಿದ ಬಳಿಕ ಅದರಲ್ಲೇನಿದೆ ಅಂತ ತಿಳಿದು ಆಮೇಲೆ ಪ್ರತಿಕ್ರಿಯಿಸುತ್ತೇನೆ ಅಂತ ಹೇಳಿದ್ರು.

    ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸಿ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ನನ್ನನ್ನು ಮಂತ್ರಿಯನ್ನಾಗಿ ಮಾಡಿದೆ. ಮಂತ್ರಿಯಾದ ಬಳಿಕ ಜನಪರ ಕೆಲಸ ಮಾಡುವುದರ ಸಲುವಾಗಿ ಸರ್ಕಾರ ಕಚೇರಿ ನೀಡುತ್ತದೆ. ನಾನು ನನ್ನ ಕಚೇರಿಯನ್ನು ಸಾರ್ವಜನಿಕರ ಕೆಲಸಗಳನ್ನು ಆಲಿಸಲು ಮಾತ್ರ ಉಪಯೋಗಿಸುತ್ತೇನೆ ಹೊರತು ಯಾವುದೇ ರೀತಿಯ ರಾಜಕೀಯ ಪ್ರೇರಿತವಾಗಿ ಆ ಕಚೇರಿಯನ್ನು ಉಪಯೋಗಿಸಿಕೊಳ್ಳುವುದಿಲ್ಲ. ಅದು ನನಗೆ ತಿಳಿದಿದೆ. ಸೋ ಐ ಆ್ಯಮ್ ಎ ಎಜುಕೇಟೆಡ್. ಐ ನೋ ವಾಟ್ ಐ ಆ್ಯಮ್, ವಾಟ್ ಐ ಡಿಡ್ ಅಂತ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ.

  • ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲು

    ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲು

    ಹಾಸನ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ನೀತಿಸಂಹಿತೆ ಜಾರಿ ಬಳಿಕವೂ ಎ ಮಂಜು ಅವರು ಸರ್ಕಾರಿ ಕಟ್ಟಡ ಬಳಸಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯ ಮೇರೆಗೆ ಚುನಾವಣಾಧಿಕಾರಿ ರಾಜೇಶ್ ದೂರು ನೀಡಿದ್ದರು.

    ಮಾರ್ಚ್ 26 ರಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಂದೇ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾಗಿರುವ ಮಂಜು ವಿರುದ್ಧ ಹಾಸನ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ದೂರು ಏನಿತ್ತು?
    ಸಚಿವರ ಕಚೇರಿ ಇದ್ದ ಕಟ್ಟಡದಲ್ಲಿ ಅನಧಿಕೃತವಾಗಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೀತಿಸಂಹಿತೆ ಜಾರಿ ಬಳಿಕವೂ ಕಚೇರಿಯ ಬಾಗಿಲನ್ನು ಹೊರಗಿನಿಂದ ಬಂದ್ ಮಾಡಿ ಕೆಲ ಸಿಬ್ಬಂದಿ ಒಳಗೆ ಕೆಲಸಮಾಡುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಕೇಳಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ರೋಹಿಣಿ ಸಿಂಧೂರಿ ಅವರು ನೋಟೀಸ್ ನೀಡಿದ್ದರು.

  • ಕುಷ್ಟಗಿಯಲ್ಲಿ ನೀತಿ ಸಂಹಿತೆಗಿಲ್ಲ ಕಿಮ್ಮತ್ತು – ಗಣೇಶ್, ಸುದೀಪ್ ಫೋಟೋ ಪ್ರಚಾರಕ್ಕೆ ಬಳಕೆ

    ಕುಷ್ಟಗಿಯಲ್ಲಿ ನೀತಿ ಸಂಹಿತೆಗಿಲ್ಲ ಕಿಮ್ಮತ್ತು – ಗಣೇಶ್, ಸುದೀಪ್ ಫೋಟೋ ಪ್ರಚಾರಕ್ಕೆ ಬಳಕೆ

    ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಆದ್ರೆ ಕೊಪ್ಪಳದಲ್ಲಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್ ವುಡ್ ನಟರ ಫೋಟೋ ಬಳಕೆ ಮಾಡಿಕೊಂಡು ಅಬ್ಬರದ ಪ್ರಚಾರಕ್ಕೆ ಕೈ ಹಾಕಲಾಗಿದೆ.

    ಕುಷ್ಟಗಿ ತಾಲೂಕಿನಲ್ಲಿ ಚುನಾವಣಾ ಪ್ರಚಾರಗಳು ದಿನದಿಂದ ದಿನಕ್ಕೆ ರಂಗೇರ್ತಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಕೈ ಕಟ್ಟಿ ಹಾಕಿದ್ದಂತೆ ಆಗಿತ್ತು. ಆದ್ರೆ ಇದೀಗ ಅವರಿಗೆ ಫೇಸ್ ಬುಕ್ ವರದಾನವಾಗಿದೆ.

    ಸ್ಯಾಂಡಲ್ ವುಡ್ ಸ್ಟಾರ್ ಗಳಾದ ಗಣೇಶ್ ಮತ್ತು ಸುದೀಪ್ ಫೋಟೋಗಳನ್ನು ಬಳಸಿಕೊಂಡು ಪ್ರಚಾರ ಮಾಡೋಕೆ ಶುರು ಮಾಡಿದ್ದಾರೆ. ಅಭ್ಯರ್ಥಿಗಳ ಫೋಟೋಗಳನ್ನು ನಟರು ತಮ್ಮ ಕೈಯಲ್ಲಿ ಹಿಡಿದಂತೆ ಎಡಿಟ್ ಮಾಡಿ ಫೇಸ್ ಬುಕ್ ಅಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ಈ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ರೂ, ಚುನಾವಣಾಧಿಕಾರಿಗಳು ಮಾತ್ರ ಈವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದಾರೆ.

  • ನೀತಿಸಂಹಿತೆ ಉಲ್ಲಂಘನೆಯಡಿ ಜಪ್ತಿಯಾಗೋ ಬಾಡೂಟ, ಆಹಾರ ಏನಾಗುತ್ತೆ ಗೊತ್ತಾ?

    ನೀತಿಸಂಹಿತೆ ಉಲ್ಲಂಘನೆಯಡಿ ಜಪ್ತಿಯಾಗೋ ಬಾಡೂಟ, ಆಹಾರ ಏನಾಗುತ್ತೆ ಗೊತ್ತಾ?

    ಚಿಕ್ಕಬಳ್ಳಾಪುರ: ಹಣ-ಹೆಂಡ ಇಲ್ಲದೆ ಚುನಾವಣೆಗಳು ನಡೆಯೋದಿಲ್ಲ. ಅದರ ಜೊತೆಗೆ ಈಗ ಬಾಡೂಟ ಇಲ್ಲದೆ ಕೂಡ ಚುನಾವಣೆಗಳು ನಡೆಯೋದಿಲ್ಲ. ಮತದಾರರ ಮನಗೆಲ್ಲೋಕೆ ಎಲ್ಲೆಂದರಲ್ಲಿ ಭರ್ಜರಿಯಾಗಿ ಬಾಡೂಟಗಳ ಆಯೋಜನೆಗಳು ಸರ್ವೆ ಸಾಮಾನ್ಯ ಎಂಬಂತಾಗಿದೆ.

    ಇಂತಹ ಸಂದರ್ಭಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ಚುನಾವಣಾಧಿಕಾರಿಗಳು ವಶಪಡಿಸಿಕೊಳ್ಳೋ ಬಾಡೂಟ ಯಾರ ಹೊಟ್ಟೆಯೂ ಸೇರದೆ ಭೂ ತಾಯಿಯ ಮಡಿಲು ಸೇರುತ್ತಿದೆ. ಅಂದ್ರೆ ಮಣ್ಣುಪಾಲಾಗ್ತಿದೆ.

    ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ಮತದಾರರ ಮನಗೆಲ್ಲೋಕೆ ಅಂತ ರಾಜಕೀಯ ನಾಯಕರು ನಾನಾ ಕಸರತ್ತುಗಳನ್ನ ಮಾಡುತ್ತಿದ್ದಾರೆ. ಇಷ್ಟು ದಿನ ಹಣ, ಸೀರೆ, ಅದು, ಇದು ಅಂತ ನಾನಾ ಅಮಿಷಗಳನ್ನ ಒಡ್ಡಿದ ರಾಜಕೀಯ ನಾಯಕರು ಭರ್ಜರಿ ಬಾಡೂಟವನ್ನ ಹಾಕಿಸಿದ್ರು. ಆದ್ರೆ ಈಗ ಚುನಾವಣಾ ನೀತಿ ಸಂಹಿತೆ ಇರೋದ್ರಿಂದ ಬಾಡೂಟ ಸೇರಿದಂತೆ ಯಾವುದೇ ತೆರನಾದ ಅಮಿಷಗಳನ್ನ ಒಡ್ಡೋದು ಕಾನೂನುಬಾಹಿರವಾಗಿದೆ.

    ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನದಂದೇ ಚಿಕ್ಕಬಳ್ಳಾಪುರದ ಮಾಜಿ ಜೆಡಿಎಸ್ ನಾಯಕ, ಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಸಂತೋಷದಲ್ಲಿ ಮತದಾರರಿಗೆ ಭರ್ಜರಿ ಬಾಡೂಟವನ್ನು ಉಣಬಡಿಸಿದ್ರು. ಹೀಗಾಗಿ ಮಾಹಿತಿ ತಿಳಿದು ದಾಳಿ ನಡೆಸಿದ ಅಧಿಕಾರಿಗಳು, ಬಾಡೂಟವನ್ನು ಸವಿಯುತ್ತಿದ್ದವರನ್ನು ಅರ್ಧದಲ್ಲೇ ಎಬ್ಬಿಸಿ, ಅಳಿದುಳಿದ ಬಾಡೂಟವನ್ನೇ ಸೀಜ್ ಮಾಡಿ ಕೇಸ್ ದಾಖಲಿಸಿದ್ರು. ಜಪ್ತಿ ಮಾಡಿದ ಬಾಡೂಟವನ್ನು ನ್ಯಾಯಾಲಯದ ಆದೇಶದಂತೆ ಮಣ್ಣಿನಲ್ಲಿ ಹೂತು ಹಾಕಿ ನಾಶಪಡಿಸಿರುವುದಾಗಿ ಎಸ್ ಪಿ ಕಾರ್ತಿಕ್ ರೆಡ್ಡಿ ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಸಿದ್ದರಾಮಯ್ಯ ಹೊರಡುತ್ತಿದ್ದಂತೆಯೇ ಚಿಕ್ಕಬಳ್ಳಾಪುರದಲ್ಲಿ ಬಾಡೂಟ ಸೀಜ್

    ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮತದಾರರಿಗೆ ಯಾವುದೇ ತೆರನಾದ ಅಮಿಷ ಒಡ್ಡುವ ಆಗಿಲ್ಲ. ಇನ್ನೂ ಚುನಾವಣಾ ಸಮಯದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳೋ ಮತದಾರರಿಗೆ ಕನಿಷ್ಠ ಕುಡಿಯುವ ನೀರು ಹೊರತುಪಡಿಸಿ ಬೇರೆ ಏನನ್ನೂ ಕೊಡುವ ಆಗಿಲ್ಲ ಅನ್ನೋದು ಕಾನೂನು. ಆದ್ರೆ ಇದೆಲ್ಲವನ್ನೂ ಮೀರಿ ಹಲವು ಕಡೆ ಕದ್ದು ಮುಚ್ಚಿ ಬಾಡೂಟ ಸೇರಿದಂತ ಕೆಲ ಅಮಿಷಗಳನ್ನ ಒಡ್ಡೋದು ಕೂಡ ಮಾಮೂಲಿ. ಇನ್ನೂ ನೀತಿ ಸಂಹಿತೆ ಉಲ್ಲಂಘನೆಯಡಿ, ಆಹಾರವಾದ್ರೂ ಸರಿ ಮಣ್ಣುಪಾಲು ಮಾಡಲೇಬೇಕು.

    ಪ್ರತಿ ಬಾರಿ ಚುನಾವಣೆ ನಡೆದಾಗಲೂ ನೀತಿ ಸಂಹಿತೆ ಉಲ್ಲಂಘನೆಯಡಿ ಇಂತಹ ನೂರಾರು ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ. ಕಳೆದ ಬಾರಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ ದಾಖಲಾದ 100 ಕ್ಕೂ ಹೆಚ್ಚು ಪ್ರಕರಣಗಲ್ಲಿ ಕೇವಲ 7-8 ಪ್ರಕರಣಗಳಲ್ಲೇ ಅಷ್ಟೇ ಶಿಕ್ಷೆ ಪ್ರಕಟವಾಗಿದೆ. ಅದು ಕೇವಲ 100, 200 ರೂಪಾಯಿ ದಂಡವಷ್ಟೇ. ಉಳಿದೆಲ್ಲವೂ ಮತ್ತೊಂದು ಚುನಾವಣೆ ಬಂದ್ರೂ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ.

  • ನಾಗಮಂಡಲಕ್ಕೂ ನೀತಿಸಂಹಿತೆ ಎಫೆಕ್ಟ್- ಸಾಸ್ತಾನದಲ್ಲಿ ಅಧಿಕಾರಿಗಳ ರಾದ್ಧಾಂತ

    ನಾಗಮಂಡಲಕ್ಕೂ ನೀತಿಸಂಹಿತೆ ಎಫೆಕ್ಟ್- ಸಾಸ್ತಾನದಲ್ಲಿ ಅಧಿಕಾರಿಗಳ ರಾದ್ಧಾಂತ

    ಉಡುಪಿ: ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಚುನಾವಣಾ ನೀತಿ ಸಂಹಿತೆ ಅಡ್ಡ ಬರುತ್ತಿದೆ. ಅತ್ಯಂತ ಶೃದ್ಧೆ ಭಕ್ತಿಯಿಂದ ಆಚರಿಸುವ ನಾಗಮಂಡಲ ಸೇವೆಗೂ ಚುನಾವಣೆಯ ಬಿಸಿತಟ್ಟಿದೆ. ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ನಾಗಮಂಡಲ ನಡೆಯುತ್ತಿದ್ದಲ್ಲಿಗೆ ಬಂದ ಚುನಾವಣಾಧಿಕಾರಿಗಳು ರಾದ್ಧಾಂತ ಮಾಡಿದ್ದಾರೆ.

    ಸಾಸ್ತಾನದ ಸ್ಥಳೀಯ ಕುಟುಂಬಸ್ಥರು ಅದ್ಧೂರಿಯಾಗಿ ನಾಗ ಮಂಡಲ ಸೇವೆ ಆಯೋಜನೆ ಮಾಡಿದ್ದರು. ಹತ್ತು ಸಾವಿರಕ್ಕೂ ಅಧಿಕ ಭಕ್ತಾಧಿಗಳು ಸೇರಿದ್ದರು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಧಾರ್ಮಿಕ ಕಾರ್ಯಕ್ರಮ ಆಯೋಜನೆಯಾಗಿತ್ತು. ಚುನಾವಣೆ ಘೋಷಣೆಯಾಗುವ ಮುನ್ನವೇ ಈ ನಾಗಮಂಡಲ ನಿಗದಿಯಾಗಿತ್ತು. ಯಾವುದೇ ಪೂರ್ವ ಸೂಚನೆ ನೀಡದೆ ಚುನಾವಣಾ ಅಧಿಕಾರಿಗಳ ನಾಗಮಂಡಲ ನಡೆಯುತ್ತಿದ್ದ ಪರಿಸರಕ್ಕೆ ಬಂದು ಪರವಾನಿಗೆ ಕೇಳಿದಾಗ ಗೊಂದಲದ ವಾತಾವರಣ ನಿರ್ಮಾಣವಾಯ್ತು.

    ಚುನಾವಣಾ ನೀತಿ ಸಂಹಿತೆಯ ಹಿನ್ನೆಯಲ್ಲಿ ಎಲ್ಲಾ ಕಾರ್ಯಕ್ರಮಗಳುಗೂ ಹೊಸದಾಗಿ ಪರವಾನಿಗೆ ಪಡೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಈ ಬಗ್ಗೆ ಮಾಹಿತಿ ಇರದ ನಾಗಮಂಡಲ ಆಯೋಜಕರು ಚುನಾವಣಾಧಿಕಾರಿಗಳ ಅನಿರೀಕ್ಷಿತ ಭೇಟಿಯಿಂದ ಕೆಲಕಾಲ ಕಕ್ಕಾಬಿಕ್ಕಿಯಾದರು. ನಾಗಮಂಡಲದಲ್ಲಿ ಇದ್ದ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರಿಗೂ ಚುನಾವಣಾ ಅಧಿಕಾರಿಗಳಿಗೂ ಮಾತಿನ ಚಕಮಕಿ ನಡೆಯಿತು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆಕ್ಷೇಪಿಸಿದ ಜನರು ಯಾವುದೇ ಕಾರಣಕ್ಕೂ ಚಟುವಟಿಕೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಕೊನೆಗೆ ಆಯೋಜಕರು ಅಲ್ಲಿ ಅಳವಡಿಸಿದ್ದ ಬ್ಯಾನರ್, ಬಂಟಿಗ್ಸ್ ಗಳನ್ನು ತೆರವು ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಂತರ ನಾಗಮಂಡಲ ಸೇವೆ ಮುಂದುವರಿಯಿತು.

    ಕರಾವಳಿಯಲ್ಲಿ ಧಾರ್ಮಿಕ ಆಚರಣೆಗಳು ಈ ಸಂದರ್ಭ ಹೆಚ್ಚು ಹೆಚ್ಚು ನಡೆಯುತ್ತದೆ. ಕರಾವಳಿಯ ನಂಬಿಕೆ, ಆಚರಣೆಗಳ ಮೇಲೆ ದಾಳಿ ಮಾಡಲು ಬಂದ್ರೆ ಇಲ್ಲಿನ ಜನ ಸುಮ್ಮನಿರಲ್ಲ. ಚುನಾವಣೆಗಿಂತ ನಮಗೆ ನಮ್ಮ ಧಾರ್ಮಿಕ ನಂಬಿಕೆ ಹೆಚ್ಚು. ಚುನಾವಣೆ ಘೋಷಣೆಯಾಗುವ ಮೊದಲೇ ನಾಗಮಂಡಲ, ಯಕ್ಷಗಾನ, ಭೂತಾರಾಧನೆ ನಿಗದಿಯಾಗಿರುತ್ತದೆ. ಈ ಬಗ್ಗೆ ಜಿಲ್ಲಾಡಳಿತ ವಿನಾಯಿತಿ ಮಾಡದಿದ್ದರೆ ಜನ ಆಕ್ರೋಶಗೊಳ್ಳುತ್ತಾರೆ ಎಂದು ಜಾನಪದ ವಿದ್ವಾಂಸ ಅಲೆವೂರು ರಾಜೇಶ್ ಹೇಳಿದ್ದಾರೆ. ಚುನಾವಣಾ ಅಧಿಕಾರಿಗಳಿಗೂ ಈ ಬೆಳವಣಿಗೆ ತಲೆನೋವಾಗಿದೆ.

  • ಚುನಾವಣಾ ನೀತಿ ಸಂಹಿತೆಯಿಂದ ಪಾರಾಗಲು ಡಿಕೆಶಿ ಆಪ್ತ ಮಾಸ್ಟರ್ ಪ್ಲಾನ್

    ಚುನಾವಣಾ ನೀತಿ ಸಂಹಿತೆಯಿಂದ ಪಾರಾಗಲು ಡಿಕೆಶಿ ಆಪ್ತ ಮಾಸ್ಟರ್ ಪ್ಲಾನ್

    ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದ್ರೂ ಕೆಲ ರಾಜಕೀಯ ಮುಖಂಡರು ಮತ್ತು ಆಪ್ತರು ಸರ್ಕಾರ ನೀಡಿರುವ ಸೌಲಭ್ಯಗಳನ್ನು ಮಾತ್ರ ಹಿಂದಕ್ಕೆ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸರ್ಕಾರಿ ವಾಹನಗಳನ್ನು ಬಿಟ್ಟು, ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

    ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ. ಶೇಷಾದ್ರಿ ಈಗಲೂ ಸರ್ಕಾರಿ ವಾಹನವನ್ನೇ ಬಳಕೆ ಮಾಡ್ತಿದ್ದಾರೆ. ಆದ್ರೆ ಚುನಾವಣಾ ಅಧಿಕಾರಿಗಳಿಗೆ ತಿಳಿಯದಂತೆ ಸರ್ಕಾರಿ ವಾಹನವನ್ನು ಮಾರ್ಪಾಡು ಮಾಡಿಕೊಂಡಿದ್ದಾರೆ.

    ಏನದು ಮಾರ್ಪಾಡು?: ಸರ್ಕಾರಿ ವಾಹನ ಅಂತ ಇರೋ ಸ್ಟಿಕ್ಕರ್ ಗಳನ್ನ ತೆಗೆದು, ನಂಬರ್ ಪ್ಲೇಟ್ ನ್ನೂ ಕಿತ್ತು ಹಾಕಿ ರಾಜಾರೋಷವಾಗಿ ಓಡಾಡ್ತಿದ್ದಾರೆ. ಸ್ಟಿಕ್ಕರ್ ಗಳನ್ನು ಕಿತ್ತು ಹಾಕಿ ಸರ್ಕಾರಿ ವಾಹನದಲ್ಲಿ ಶೇಷಾದ್ರಿ ಅವರು ಪ್ರಯಾಣಿಸುವ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

  • ಚುನಾವಣಾ ನೀತಿ ಸಂಹಿತೆ ಜಾರಿಯಾದ್ರೂ ಕೊಪ್ಪಳದಲ್ಲಿ ಅಕ್ರಮ ಮದ್ಯ ಮಾರಾಟ ಫುಲ್ ಜೋರು

    ಚುನಾವಣಾ ನೀತಿ ಸಂಹಿತೆ ಜಾರಿಯಾದ್ರೂ ಕೊಪ್ಪಳದಲ್ಲಿ ಅಕ್ರಮ ಮದ್ಯ ಮಾರಾಟ ಫುಲ್ ಜೋರು

    ಕೊಪ್ಪಳ: ರಾಜ್ಯದಲ್ಲಿ ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಅಕ್ರಮ ಮದ್ಯ ಮಾರಾಟ ಜೋರಾಗಿದೆ.

    ಗಂಗಾವತಿ ತಾಲೂಕಿನಲ್ಲಿ ಮನೆ-ಮನೆಯಲ್ಲಿ ಅಕ್ರಮ ಮದ್ಯ ಸಿಗುತ್ತದೆ. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ತಾಲೂಕಿನ ಬಹುತೇಕ ಗ್ರಾಮಗಳಿಗೆ ಅಕ್ರಮ ಮದ್ಯ ಸಾಗಿಸುತ್ತಿದ್ದಾರೆ. ಗ್ರಾಮದ ಮನೆ ಮನೆಯಲ್ಲಿ ಅಕ್ರಮ ಮದ್ಯ ಮಾರಾಟದ ದಂಧೆ ಜೋರಾಗಿದೆ. ಆದ್ರೆ ಅಕ್ರಮವನ್ನು ತಡೆಯಬೇಕಾದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪಗಳು ಗಂಗಾವತಿ ತಾಲೂಕಿನಾದ್ಯಂತ ಕೇಳಿಬರುತ್ತಿದೆ.

    ಕಳೆದ ಹತ್ತು ವರ್ಷದಿಂದ ಗಂಗಾವತಿ ಅಬಕಾರಿ ಇಲಾಖೆಯನ್ನ ಮನೆ ಮಾಡಿಕೊಂಡ ಮಾಜಿ ಶಾಸಕ ಅನ್ಸಾರಿಯ ಸ್ನೇಹಿತ ಚಿನ್ನಪ್ಪ, ಮಾಮೂಲಿ ಪಡೆದು ಅಕ್ರಮ ಮದ್ಯ ಮಾರಾಟಕ್ಕೆ ಸಾಥ್ ನೀಡಿದ ಆರೋಪ ಕೇಳಿ ಬಂದಿತ್ತು. ಪ್ರತಿ ಮದ್ಯದ ಅಂಗಡಿಗಳಿಂದ ತಿಂಗಳಿಗೆ ಹತ್ತು ಸಾವಿರ ಮಾಮೂಲಿ ಪಡೆದು ಚಿನ್ನಪ್ಪ ಮನೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

    ಮದ್ಯ ಮಾರಾಟದ ಕುರಿತು ಸಂಘಟನೆಗಳು ಚಿನ್ನಪ್ಪನ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತಂದ ಸಂಘಟನೆಯ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದಾರಂತೆ. ಒಟ್ಟಿನಲ್ಲಿ ಇದೀಗ ಜಿಲ್ಲಾಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ.

    https://youtu.be/y_4sS2Ug7KE

  • ಸಿದ್ದರಾಮಯ್ಯ ಹೊರಡುತ್ತಿದ್ದಂತೆಯೇ ಚಿಕ್ಕಬಳ್ಳಾಪುರದಲ್ಲಿ ಬಾಡೂಟ ಸೀಜ್

    ಸಿದ್ದರಾಮಯ್ಯ ಹೊರಡುತ್ತಿದ್ದಂತೆಯೇ ಚಿಕ್ಕಬಳ್ಳಾಪುರದಲ್ಲಿ ಬಾಡೂಟ ಸೀಜ್

    ಚಿಕ್ಕಬಳ್ಳಾಪುರ: ಕರ್ನಾಟಕ ಚುನಾವಣೆಯ ದಿನಾಂಕ ಘೋಷಣೆಯಾಗಿ, ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ರಾಜ್ಯದಲ್ಲೇ ಮೊಟ್ಟ ಮೊದಲ ಪ್ರಕರಣವೊಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

    ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರದಿಂದ ಹೊರಟ ಕೂಡಲೇ ಜಿಲ್ಲಾ ಚುನಾವಣಾಧಿಕಾರಿಗಳು ಸಿಎಂ ಭೇಟಿ ನಿಮಿತ್ತ ಆಯೋಜಿಸಿದ್ದ ಬಾಡೂಟ ಸೀಜ್ ಮಾಡಿದ್ದಾರೆ.

    ಕೋಚಿಮುಲ್ ನ ನಿರ್ದೇಶಕ ಹಾಗೂ ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ ಕೆವಿ ನಾಗರಾಜ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಾಗರಾಜ್ `ಕೈ’ ಹಿಡಿದ್ರು. ಈ ಹಿನ್ನೆಲೆಯಲ್ಲಿ ಅವರು ಕಣಜೇನಹಳ್ಳಿ ಗ್ರಾಮದಲ್ಲಿ ಸುಮಾರು 3 ಸಾವಿರ ಮಂದಿಗೆ ಬಾಡೂಟ ಆಯೋಜನೆ ಮಾಡಿದ್ದರು.

    ಆದ್ರೆ ಇತ್ತ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ಮೆಗಾಡೈರಿ ಉದ್ಘಾಟನೆಗೆ ತೆರಳಿದ್ದ ಮುಖ್ಯಮಂತ್ರಿ ಅವರು ಉದ್ಘಾಟನೆ ಮಾಡದೇ ಅಲ್ಲಿಂದ ನಾಗರಾಜ್ ಮನೆಗೆ ತೆರಳಿದ್ದಾರೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ನಾಗರಾಜ್ ಮನೆಯಲ್ಲಿ ಬಾಡೂಟ ಆಯೋಜನೆ ಮಾಡಿದ್ದರು.

    ಸಿಎಂ ಅವರು ಮನೆಯಿಂದ ವಾಪಸ್ಸಾಗುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾಧಿಕಾರಿಗಳು ನಾಗರಾಜ್ ಮನೆಗೆ ದಾಳಿ ನಡೆಸಿ ಬಾಡೂಟ ಸೀಜ್ ಮಾಡಿದ್ದಾರೆ. ಅಧಿಕಾರಿಗಳು ಬರುತ್ತಿದ್ದಂತೆಯೇ ಬಾಡೂಟ ಸವಿಯುತ್ತಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.

  • ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್ ತೆರವು

    ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್ ತೆರವು

    ತುಮಕೂರು: ಚುನಾವಣಾ ನೀತಿ ಸಂಹಿತೆ ಜಾರಿ ಆದ ಹಿನ್ನೆಲೆಯಲ್ಲಿ ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ರಾಜಕೀಯ ನಾಯಕರು ಶುಭಾಶಯ ಕೋರಿದ್ದ ಫ್ಲೆಕ್ಸ್‍ಗಳನ್ನು ತೆರವುಗೊಳಿಸಲಾಗುತ್ತಿದೆ.

    ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ರಾಜಕೀಯ ಮುಖಂಡರು ಶುಭಾಶಯ ಕೋರಿ ಫ್ಲೆಕ್ಸ್ ಹಾಕಿದ್ದರು. ಆದರೆ ಈಗ ತುಮಕೂರು ಪಾಲಿಕೆಯಿಂದ ಫ್ಲೆಕ್ಸ್ ಗಳನ್ನು ತೆರವು ಮಾಡಿಸಲಾಗಿದೆ. ಏಪ್ರಿಲ್ 1 ರಂದು ಸಿದ್ದಗಂಗಾ ಶ್ರೀಗಳ 111ನೇ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.

    ಮೂರು ಪಕ್ಷದ ರಾಜಕೀಯ ಮುಖಂಡರು ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಗಳನ್ನು ಹಾಕಿಸಿದ್ದು, ನಗರದ ಬಿ.ಎಚ್. ರಸ್ತೆ ಸೇರಿದಂತೆ ನಗರದ ಹಲವೆಡೆ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಈಗ ಚುನಾವಣಾ ನೀತಿ ಸಂಹಿತೆ ಜಾರಿ ಆದ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗುತ್ತಿದೆ.

  • ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುವಷ್ಟರಲ್ಲಿ ಜಾರಿ-ಸಂಕಷ್ಟಕ್ಕೆ ಸಿಲುಕಿದ ಇಂಧನ ಸಚಿವ

    ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುವಷ್ಟರಲ್ಲಿ ಜಾರಿ-ಸಂಕಷ್ಟಕ್ಕೆ ಸಿಲುಕಿದ ಇಂಧನ ಸಚಿವ

    ಶಿವಮೊಗ್ಗ: ಹೆಲಿಕಾಪ್ಟರ್ ಹತ್ತುವಾಗ ಇಲ್ಲದ ನೀತಿ ಸಂಹಿತೆ ಇಳಿಯುಷ್ಟರಲ್ಲಿಯೇ ಜಾರಿಯಾಗಿದ್ದರಿಂದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೆಲ ಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಇಂದು ನಡೆಯಿತು.

    ಜಕ್ಕೂರು ವಿಮಾನ ನಿಲ್ದಾಣದಿಂದ ಸಚಿವರು ಶಿವಮೊಗ್ಗದಲ್ಲಿ ನಿಗದಿಯಾಗಿ ಮೆಸ್ಕಾ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲು ಪ್ರಯಾಣ ಬೆಳೆಸಿದ್ದರು. ಸಚಿವರನ್ನು ಕರೆದೊಯ್ಯಲು ಶಿವಮೊಗ್ಗ ಹೆಲಿಪ್ಯಾಡ್ ಗೆ ಬಂದಿದ್ದ ಸರ್ಕಾರಿ ವಾಹನವನ್ನು ಜಿಲ್ಲಾಡಳಿತ ಹಿಂದೆ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಖಾಸಗಿ ಕಾರ್ ವ್ಯವಸ್ಥೆ ಮಾಡಿದ್ದರು.

    ಮಧ್ಯಾಹ್ನ 12.40ಕ್ಕೆ ಶಿವಮೊಗ್ಗ ಹೆಲಿಪ್ಯಾಡ್‍ಗೆ ಬಂದ ಸಚಿವರು ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಮಾತನಾಡಿ, ಹೌದು ನಾನು ಕಾಪ್ಟರ್ ಹತ್ತುವಾಗ ಯಾವುದೇ ನೀತಿ ಸಂಹಿತೆ ಜಾರಿಯಾಗಿರಲಿಲ್ಲ. ಆದ್ರೆ ಮಾರ್ಗ ಮಧ್ಯೆ ನೀತಿ ಸಂಹಿತೆ ಜಾರಿಯಾಗಿರುವುದು ಗೊತ್ತಾಯಿತು. ಹಾಗಾಗಿ ಹೆಲಿಪ್ಯಾಡ್ ನಿಂದ ಖಾಸಗಿ ವಾಹನದಲ್ಲಿಯೇ ತೆರಳುತ್ತಿದ್ದೇನೆ ಅಂತಾ ಹೇಳಿದ್ರು.