Tag: cofee

  • ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ಹಾಸನ: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಮಗುವನ್ನು ಹೊಡೆದು ಸಾಯಿಸಿ ಶವವನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಆದರೆ ಮಗು ಅನಾರೋಗ್ಯದಿಂದಾಗಿ ಮೃತಪಟ್ಟಿದೆ ಎಂಬುದು ಪೋಷಕರ ವಾದವಾಗಿದೆ. ಇದನ್ನೂ ಓದಿ: ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್‍ಡಿ.ರೇವಣ್ಣ, ಶಿವಲಿಂಗೇಗೌಡ

    ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಒಂದೂವರೆ ವರ್ಷದ ಗಂಡು ಮಗುವಿನ ಮೃತದೇಹ ಹೊರತೆಗೆದು ಪರಿಶೀಲನೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಮಾರ್ಗದರ್ಶನ ದಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಹೂತಿರುವ ಶವವನ್ನು ಹೊರ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

  • ಬತ್ತಿದ ಲಕ್ಷ್ಮಣ ತೀರ್ಥ: ಕಾಫಿ ಬೆಳೆ ಬಿಟ್ಟು ಹೋಂ ಸ್ಟೇ ಆರಂಭಿಸಲು ಮುಂದಾದ ಜನ!

    ಬತ್ತಿದ ಲಕ್ಷ್ಮಣ ತೀರ್ಥ: ಕಾಫಿ ಬೆಳೆ ಬಿಟ್ಟು ಹೋಂ ಸ್ಟೇ ಆರಂಭಿಸಲು ಮುಂದಾದ ಜನ!

    ಮಡಿಕೇರಿ: ಕಾವೇರಿ ತವರಲ್ಲೂ ಬರದ ಛಾಯೆ ಎದ್ದಿದೆ. ಕಾವೇರಿಯ ಒಡಲು ಬತ್ತುತ್ತಿದೆ. ಪ್ರಕೃತಿಯ ಮಡಿಲಲ್ಲಿ ನೀರಿಗೆ ಹಾಹಾಕಾರ. ಬೇಸಿಗೆಗೂ ಮುನ್ನ ತತ್ತರಿಸಿದ ಕಾವೇರಿ ತವರಿನ ಜನರು. ದಕ್ಷಿಣ ಕೊಡಗಿನ ಜೀವ ನದಿಯಾದ ಲಕ್ಷಣ ತೀರ್ಥ ನದಿಯು ಬತ್ತಿಹೋಗಿದ್ದು ನೇರೆ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

    ಕಾವೇರಿ ತವರು ಪ್ರಾಕೃತಿಕ ಸೌಂದರ್ಯದ ನೆಲೆವೀಡು ಕೊಡಗು ಜಿಲ್ಲೆಯಲ್ಲಿ ಈಗ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಜೀವನಾಡಿ ಕಾವೇರಿ ಹಾಗು ಲಕ್ಷ್ಮಣ ತೀರ್ಥ ನದಿ ಬತ್ತಿದ್ದು, ಜಿಲ್ಲೆಯ ಪ್ರಮುಖ ಉದ್ಯಮವಾಗಿರುವ ಕಾಫಿ ಶೇ.30 ಭತ್ತ ಶೇ.50 ರಷ್ಟು ಕುಸಿತ ಕಂಡಿದ್ದು ಬೆಳೆಗಾರನ ಬದುಕು ದುಸ್ತರವಾಗಿದೆ.

    ಈ ಬಾರಿ ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಉದ್ಭವಿಸಿದ್ದು ಬೇಸಿಗೆಯಲ್ಲಿ ಮತ್ತಷ್ಟು ಭೀಕರವಾಗುವ ಸಾಧ್ಯತೆಗಳಿದೆ. ಕೊಡಗು ಜಿಲ್ಲೆ ಸತತವಾಗಿ ಎರಡು ವರ್ಷ ಬರಗಾಲವನ್ನು ಎದುರಿಸುತ್ತಿದೆ. ಜೀವನದಿ ಕಾವೇರಿ ಹರಿದು ಹೋಗುವ ವ್ಯಾಪ್ತಿಯಲ್ಲೂ ಬರದ ಛಾಯೆ ಉದ್ಭವಿಸಿದೆ. ಈಗ ಲಕ್ಷ್ಮಣ ತೀರ್ಥ ನದಿಯು ಇದೀಗ ಸಂಪೂರ್ಣವಾಗಿ ಬತ್ತಿಹೋಗಿದೆ.

    ಕೊಡಗಿನ ಬಾಳೆಲೆ ಕುಟ್ಟ ಮಾಯಮುಡಿ ಹಾಗೂ ಪಕ್ಕದ ಜಿಲ್ಲೆಯದ ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಗಳ ರೈತರು ಈ ಲಕ್ಷ್ಮಣ ತೀರ್ಥ ನದಿಯ ನೀರನ್ನೆ ಅವಲಂಬಿಸಿದ್ದು ಈಗ ಭಾರೀ ಕಷ್ಟವಾಗಿದೆ ಎಂದು ರೈತ ಬೋಪಯ್ಯ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈ ಭಾಗದ ಜನ-ಜಾನುವಾರುಗಳು ಸಮಸ್ಯೆಯಿಂದ ನರಳುವುದು ಮಾತ್ರ ತಪ್ಪುವುದಿಲ್ಲ. ಹವಾಮಾನದ ವೈಪರೀತ್ಯದಿಂದಾಗಿ ಮಳೆಯೂ ಈ ವರ್ಷ ಕೈಕೊಟ್ಟಿದೆ. ಪರಿಣಾಮ ಲಕ್ಷ್ಮಣ ತೀರ್ಥ ನದಿ ಸೇರಿದಂತೆ, ಸಣ್ಣಪುಟ್ಟ ಹೊಳೆಗಳು, ಕೆರೆಗಳು ಈಗಾಗಲೇ ಬತ್ತಿ ಹೋಗಿದೆ.

    ಗ್ರಾಮೀಣ ಭಾಗದಲ್ಲೂ ಸೇರಿದಂತೆ ನಗರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದೆ. ದುರಾದೃಷ್ಟಕರ ಸಂಗತಿ ಎಂದರೆ ಕಾಫಿ ಬೆಳೆ ಕೈಕೊಟ್ಟಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕೆಲವು ಕಾಫಿ ಬೆಳೆಗಾರರು ಈಗ ಹೋಂಸ್ಟೇ ಆರಂಭಿಸಿದ್ದು, ಕೃಷಿಯನ್ನು ಮರೆತಿದ್ದಾರೆ. ಈ ಹಿನ್ನೆಲೆ ಹೋಂಸ್ಟೇ ಸಂಸ್ಕøತಿಗೆ ಕೊಡಗಿನ ಬಹುತೇಕ ಬೆಳೆಗಾರರು ಮಾರು ಹೋಗಿದ್ದಾರೆ. ಇದರಿಂದ ಪರಿಸರ ನಾಶ, ಅನಗತ್ಯ ಯೋಜನೆಗಳು ಜಿಲ್ಲೆಯ ಪರಿಸರವನ್ನು ಹಾಳು ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ.

    ಹೈಟೆನ್ಷನ್ ಮಾರ್ಗ, ಅಕ್ರಮ ರೆಸಾರ್ಟ್ ತಲೆ ಎತ್ತಿರುವುದು, ಮರಳು ದಂಧೆ, ಮರ ಮಾಫಿಯಾ, ಅರಣ್ಯ ನಾಶದಿಂದ ಕೊಡಗಿನ ಪ್ರಾಕೃತಿಕ ಪರಿಸರವೇ ಬದಲಾಗಿದೆ. ಈ ಪರಿಣಾಮದಿಂದಾಗಿ ಜಿಲ್ಲೆಯಲ್ಲಿ ಬರದ ತಾಂಡವ ಹೆಚ್ಚಾಗಿದೆ. ಇವುಗಳಿಗೆ ತುರ್ತಾಗಿ ಕಡಿವಾಣ ಹಾಕಬೇಕಿದೆ ಎಂದು ಕೊಡಗು ಜಿಲ್ಲೆಯ ರೈತಸಂಘದ ಅಧ್ಯಕ್ಷ ಮನು ಸೋಮಯ್ಯ ಹೇಳಿದ್ದಾರೆ.