Tag: collage

  • ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

    ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

    ಬೆಂಗಳೂರು: ಗಡ್ಡ ಶೇವ್ ಮಾಡಿಲ್ಲವೆಂದು ಸೀನಿಯರ್‌ಗಳು ಜೂನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದೆ. ಮೂವರು ವಿದ್ಯಾರ್ಥಿಗಳ ಮೇಲೆ ಬೆಳ್ಳಂದೂರು ಠಾಣೆಯಲ್ಲಿ ಎಫ್.ಐ.ಆರ್ (FIR) ದಾಖಲಾಗಿದೆ.

    ಹಲ್ಲೆಗೊಳಗಾದ ವಿದ್ಯಾರ್ಥಿ ಕೇರಳ (Kerala) ಮೂಲದನಾಗಿದ್ದು, ದೊಡ್ಡ ಸಿದ್ದಾಪುರದಲ್ಲಿ ಸ್ನೇಹಿತರ ಜೊತೆ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದನು. ಈತನನ್ನು ಆಗಸ್ಟ್ 30 ರಂದು ಕರೆ ಮಾಡಿ ಸಿದ್ದಾಪುರದ ಚರ್ಚ್ ಬಳಿ ಬರುವಂತೆ 3 ಬಾರಿ ಕಾಲ್ ಮಾಡಿ ಸೀನಿಯರ್‌ಗಳು ಕರೆಸಿಕೊಂಡಿದ್ದರು.  ಇದನ್ನೂ ಓದಿ: IC 814: The Kandahar Hijack : ಮುಸ್ಲಿಂ ಬದಲು ಹಿಂದೂಗಳ ಹೆಸರು | ಕೇಂದ್ರದ ಕ್ಲಾಸ್‌, ಅಪಹರಣಕಾರರ ನಿಜವಾದ ಹೆಸರು ಹಾಕಲು ಒಪ್ಪಿಕೊಂಡ ನೆಟ್‌ಫ್ಲಿಕ್ಸ್‌

    ವಿದ್ಯಾರ್ಥಿ ಬರುವಾಗಲೇ ಗಡ್ಡ ಹಾಗೂ ಮೀಸೆ ಟ್ರಿಮ್ ಮಾಡುವಂತೆ ಒತ್ತಾಯ ಮಾಡಿದ್ದು, ಇದನ್ನು ನಿರಾಕರಣೆ ಮಾಡಿದಾಗ ಆತನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ನೀವು ಬಸ್ಸು, ಟ್ರಕ್, ವ್ಯಾನ್ ಚಾಲಕರಾಗಬೇಕೇ? – ಇಲ್ಲಿದೆ ಸುವರ್ಣಾವಕಾಶ, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ

    ಹಲ್ಲೆಗೊಳಗಾದ ವಿದ್ಯಾರ್ಥಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದಲ್ಲಿ ಬೆಳ್ಳಂದೂರು (Bellandur) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಲಾಗಿದೆ. ಘಟನೆಯ ಕುರಿತಾಗಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜಮನೆತನ, ಸರ್ಕಾರ ಮಧ್ಯೆ ನಿಲ್ಲದ ಚಾಮುಂಡಿ ಪ್ರಾಧಿಕಾರ ಸಂಘರ್ಷ – ಮೊದಲ ಸಭೆಯಲ್ಲಿ ಏನೇನು ಚರ್ಚೆಯಾಗಿದೆ?

  • ಶುಕ್ರವಾರದ ಸಭೆಯಲ್ಲಿ ಶಾಲೆ ಪುನಾರಂಭದ ಬಗ್ಗೆ ನಿರ್ಧಾರ ಮಾಡುತ್ತೇವೆ: ಬಿ.ಸಿ ನಾಗೇಶ್

    ಶುಕ್ರವಾರದ ಸಭೆಯಲ್ಲಿ ಶಾಲೆ ಪುನಾರಂಭದ ಬಗ್ಗೆ ನಿರ್ಧಾರ ಮಾಡುತ್ತೇವೆ: ಬಿ.ಸಿ ನಾಗೇಶ್

    ಬೆಂಗಳೂರು: ಕೊರೊನಾ ಸೋಂಕು ಮತ್ತೆ ಹೆಚ್ಚಾಗಿದ್ದ ಪರಿಣಾಮ ಬೆಂಗಳೂರು ಸಹಿತ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು. ಇದೀಗ ನಾಳೆ ನಡೆಯಲಿರುವ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆಯಲ್ಲಿ ಪುನಾರಂಭದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಲೂ ಎಲ್ಲೂ ಕೂಡಾ ಸಂಪೂರ್ಣ ಶಾಲೆ ಕ್ಲೋಸ್ ಆಗಿಲ್ಲ. ಕೊರೊನಾ ಸೋಂಕು ಹೆಚ್ಚು ಇರುವ ಕಡೆ ಡಿಸಿಗಳು ರಜೆ ಘೋಷಣೆ ಮಾಡಿದ್ದಾರೆ. 85% ಶಾಲೆಗಳು ಈಗಾಗಲೇ ರಜೆ ಇಲ್ಲದೆ ರಾಜ್ಯದಲ್ಲಿ ನಡೆದಿದೆ. ಮೂರು ಡಿಜಿಟ್ ಇದ್ದ ಸೋಂಕು ಈಗ 4 ಡಿಜಿಟ್‍ನಲ್ಲಿ ಶಾಲೆಗಳಲ್ಲಿ ಕಾಣಿಸುತ್ತಿದೆ. ಹೀಗಾಗಿ ನಾಳೆ ತಜ್ಞರ ಮುಂದೆ ಎಲ್ಲಾ ಅಂಕಿ ಅಂಶಗಳನ್ನು ಮುಂದೆ ಇಡುತ್ತೇವೆ ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಕೊರೊನಾ ಕುರಿತು ಹಾಡು ಹಾಡಿದ ನ್ಯಾಯಾಧೀಶ!

    ಈಗಾಗಲೇ 70% ಸಿಲಬಸ್ ಮುಗಿಸಲಾಗಿದೆ. ಇನ್ನು 10% ಮಾತ್ರ ಸಿಲಬಸ್ ಬಾಕಿ ಇದೆ. ಸಂಪೂರ್ಣ ಶಾಲೆಯೇ ಪಾಸಿಟಿವ್ ಆಗಿರುವ ಕೇಸ್ ಇಲ್ಲ. ಸೋಂಕು ಬಂದ ಕೂಡಲೇ ರಾಂಡಮ್ ಚೆಕ್ ಮಾಡಲಾಗಿದೆ. ತಾಂತ್ರಿಕಾ ಸಲಹಾ ಸಮಿತಿ ಒಪ್ಪಿಗೆ ಕೊಟ್ಟರೆ ಮಹಾ ನಗರಗಳಲ್ಲೂ ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಿದ್ದ. ನಾಳೆ ತಜ್ಞರ ಮುಂದು ಶಾಲೆ ಅಂಕಿ ಅಂಶಗಳು ಇಡುತ್ತೇವೆ. ನಾಳೆಯ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡ್ತೀವಿ. ತಜ್ಞರು ಕೊಡೋ ಅಭಿಪ್ರಾಯವೇ ಅಂತಿಮ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    10, 11 ಮತ್ತು 12ನೇ ತರಗತಿ ಮಕ್ಕಳಲ್ಲಿ ಪಾಸಿಟಿವಿಟಿ ದರ ಕಡಿಮೆ ಇದೆ. ಉತ್ತಮವಾದ ಹಾಜರಾತಿ ಶಾಲೆಗಳಲ್ಲಿ ದಾಖಲಾಗಿದೆ. ಮಕ್ಕಳ ಕಲಿಕೆ ನಾವು ನೋಡಬೇಕು. ಈ ಹಿನ್ನಲೆ ಶಾಲೆ ನಡೆಸಬೇಕು ಅನ್ನೋದು ನಮ್ಮ ಇಲಾಖೆ ಅಭಿಪ್ರಾಯ. ಆರೋಗ್ಯ ಇಲಾಖೆ ಪ್ರಕಾರ ಜನವರಿಯಿಂದ ಇಲ್ಲಿಯವರೆಗೂ ಒಟ್ಟಾರೆ ಮಕ್ಕಳಿಗೆ ಕೊರೊನಾ ಬಂದಿರುವ ಅಂಕಿಅಂಶಗಳನ್ನು ಗಮನಿಸಿದರೆ, 0-5 ವರ್ಷದ ಮಕ್ಕಳು – 13.01% ಪಾಸಿಟಿವ್, 6-15 ವರ್ಷದ ಮಕ್ಕಳು – 5.94% ಪಾಸಿಟಿವ್, 16-20 ವರ್ಷದ ಮಕ್ಕಳು – 8.17% ಪಾಸಿಟಿವ್ ಬಂದಿದೆ. ಇದುವರೆಗೂ ಕೋವಿಡ್ ಕೇಸ್ ಹಿನ್ನೆಲೆ 146 ಶಾಲೆಗಳನ್ನು ಈವರೆಗೂ ಕ್ಲೋಸ್ ಮಾಡಲಾಗಿದೆ ಎಂದು ತಿಳಿಸಿದರು.

  • ಉಡುಪಿಯಲ್ಲಿ ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

    ಉಡುಪಿಯಲ್ಲಿ ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

    ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ರತ್ನಶ್ರೀ ಆರೋಗ್ಯಧಾಮ ಉಡುಪಿಯ ಆಯುರ್ವೇದ ಆಸ್ಪತ್ರೆಯನ್ನು ಕೇಂದ್ರ ಆಯುಷ್, ಬಂದರು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ ಉದ್ಘಾಟಿಸಿದರು.

    ಉಡುಪಿಯ ಕುತ್ಪಾಡಿ ಯಲ್ಲಿರುವ ಎಸ್‍ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವಠಾರದಲ್ಲಿ ನೂತನ ಸುಸಜ್ಜಿತ ಆಯುರ್ವೇದ ಆಸ್ಪತ್ರೆ ಸೇವಾರಂಭ ಆಗಿದೆ. ಆಸ್ಪತ್ರೆ ಉದ್ಘಾಟನೆ ನಂತರ ಸಭಾಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆಯುಷ್ ಇಲಾಖೆ ಸಚಿವರು, ಪ್ರಧಾನಿ ಮೋದಿ ಆಯುಷ್ ಇಲಾಖೆಗೆ ಶಕ್ತಿಕೊಟ್ಟಿದ್ದಾರೆ. 2014ರ ನಂತರ ದೇಶಾದ್ಯಂತ ಆಯುಷ್ ಇಲಾಖೆ ವಿಸ್ತಾರಗೊಂಡಿದೆ. ಎಸ್‍ಡಿಎಂ ಸಂಸ್ಥೆ ಆಯುರ್ವೇದ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಶ್ರಮದ ಫಲದಿಂದ ಧರ್ಮಸ್ಥಳ ಸಂಸ್ಥೆ ಸಾಧನೆ ಮಾಡುತ್ತಿದೆ ಸೇವಾ ಸಮರ್ಪಣೆ ಮತ್ತು ವೀರೇಂದ್ರ ಹೆಗ್ಗಡೆಯವರ ಮನೋಭಾವದಿಂದ ಇಷ್ಟೆಲ್ಲಾ ಸಾಧನೆ ಸಾಧ್ಯ ಆಗಿದೆ ಎಂದು ಶ್ಲಾಘಿಸಿದರು.

    ಆಯುರ್ವೇದ ವೈದ್ಯ ಪದ್ಧತಿಯಿಂದ ಸ್ವಸ್ಥ ಸಮಾಜ ನಿರ್ಮಾಣ ಆಗಲಿದೆ. ಎಲ್ಲಾ ಚಿಕಿತ್ಸಾ ಪದ್ಧತಿಗಳ ದೇಹ ಒಂದೇ ಆಗಿರುತ್ತದೆ ಆದರೆ ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಕಳೆದ ಏಳು ವರ್ಷದಲ್ಲಿ ಆಯುಷ್ ಇಲಾಖೆ ದೇಶಾದ್ಯಂತ ಬಹಳ ವಿಸ್ತಾರವಾಗಿ ಬೆಳೆದಿದೆ. ಎಲ್ಲಾ ರೋಗಗಳಿಗೂ ಆಯುರ್ವೇದ ಚಿಕಿತ್ಸೆ ಫಲಕಾರಿ. ದೇಶಾದ್ಯಂತ ಸಂಶೋಧನೆಗಳು, ಪ್ರಯೋಗಗಳು ಈ ನಿಟ್ಟಿನಲ್ಲಿ ನಡೆಯುತ್ತಿದೆ ಎಂದರು. ಇದನ್ನೂ ಓದಿ: ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

    ಆಯುರ್ವೇದದ ವಿಶ್ವಾಸಾರ್ಹತೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಜನರಿಗೆ ಆಯುರ್ವೇದದ ಮೇಲೆ ನಂಬಿಕೆ ಬರುತ್ತಿದೆ. ಆಯುರ್ವೇದ ಚಿಕಿತ್ಸೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನವಭಾರತ ನಿರ್ಮಾಣಕ್ಕೆ ಕೈ ಜೋಡಿಸೋಣ. ನರೇಂದ್ರ ಮೋದಿ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ದೇಶದ ಯೋಗ, ಆಯುರ್ವೇದ, ನ್ಯಾಚುರೋಪತಿ ವಿಶ್ವಕ್ಕೆ ಮಾದರಿಯಾಗುತ್ತಿದೆ. ಪ್ರಕೃತಿ ವಿರುದ್ಧವಾದ ಯಾವುದೇ ವೈದ್ಯಕೀಯ ಚಿಕಿತ್ಸೆಗಳಿಗೆ ಜನ ಒಳಗಾಗಬಾರದು. ಪ್ರಕೃತಿಗೆ ಪೂರಕವಾದ ಚಿಕಿತ್ಸೆಯ ಪಡೆಯೋಣ ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹರ್ಷೇಂದ್ರ ಕುಮಾರ್, ಡಾ. ಸುರೇಂದ್ರ ಕುಮಾರ್, ಡಾ. ಮಮತಾ ಮತ್ತು ಎಸ್‍ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹುಟ್ಟುಹಬ್ಬದ ಪಾರ್ಟಿಗೆ ಆಗಮಿಸಿದ ಟೆಕ್ಕಿ ಸಾವು

  • ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್- ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

    ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್- ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

    – ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ

    ಬೆಂಗಳೂರು: ರಾಜ್ಯದಲ್ಲಿ ಸ್ಕೂಲ್ ಆರಂಭದ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಮತ್ತೊಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ.

    ಮಾರ್ಗಸೂಚಿಗಳು: ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಧರಿಸಬೇಕು. ಅವಶ್ಯಕತೆ ಇದ್ದರೆ ಪಾಳಿ ವ್ಯವಸ್ಥೆಯಲ್ಲಿ ಬೋಧನಾ ವ್ಯವಸ್ಥೆಯನ್ನ ಕಾಲೇಜುಗಳು ಮಾಡಿಕೊಳ್ಳಬಹುದು. ಕೆಮ್ಮು, ಜ್ವರ ಲಕ್ಷಣಗಳು ಇದ್ದರೆ ಕಾಲೇಜು ಪ್ರವೇಶಕ್ಕೆ ನಿರ್ಬಂಧ. ಪ್ರವೇಶ, ನಿರ್ಗಮನ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು.

    ಕಾಲೇಜ್ ಆವರಣದಲ್ಲಿ ಲೈಬ್ರರಿ, ಕ್ಯಾಂಟೀನ್ ತೆರೆಯುವಂತಿಲ್ಲ. ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಮನೆಯಿಂದಲೇ ಊಟ, ನೀರಿನ ಬಾಟಲಿ ತರಬೇಕು. ವಿದ್ಯಾರ್ಥಿಗಳು ಸಹ ಕಾಲೇಜ್‍ನಲ್ಲಿ ದೈಹಿಕ ಅಂತರಕ್ಕೆ ಅಗತ್ಯ ಕ್ರಮವಹಿಸಬೇಕು. ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು. ಕಾಲೇಜ್‍ಗೆ ಬರಲು ಇಚ್ಚಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಮಾಡುವಂತಿಲ್ಲ. ಕಾಲೇಜ್‍ಗೆ ಬರಲು ಇಚ್ಚಿಸದ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿ ನೀಡಬೇಕು. ಕಾಲೇಜ್ ಆವರಣದಲ್ಲಿ ಗುಂಪು ಸೇರುವಂತಿಲ್ಲ. ಕಾಲೇಜ್‍ಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಎನ್‍ಸಿಸಿ, ಎನ್‍ಎಸ್‍ಎಸ್ ಚಟುವಟಿಕೆ ಬಂದ್

    ಸ್ಕೂಲ್ ಆರಂಭದ ಬಗ್ಗೆ ಗೊಂದಲ ಮುಂದುವರಿದಿದ್ದು, ಶಾಲೆ ಆರಂಭದ ಸಾಧ್ಯತೆ ಸದ್ಯಕ್ಕೆ ಕ್ಷೀಣವಾಗಿದೆ. ಡಿಸೆಂಬರ್ 2ನೇ ವಾರದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯು ತರಗತಿಯಷ್ಟೇ ಆರಂಭವಾಗಬಹುದು. ಜನವರಿ ನಂತರ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಕ್ಲಾಸ್ ಓಪನ್ ಆಗಲಿದ್ದು, ಸದ್ಯಕ್ಕೆ 1ರಿಂದ 9ನೇ ತರಗತಿ ಕ್ಲಾಸ್ ಡೌಟ್ ಎನ್ನಲಾಗ್ತಿದೆ. ಯಾಕಂದ್ರೆ ಶಿಕ್ಷಣ ಸಚಿವರಿಗೆ ಇನ್ನೂ ಶಿಕ್ಷಣ ಇಲಾಖೆ ಆಯುಕ್ತರ ವರದಿ ಸಲ್ಲಿಕೆ ಆಗಿಲ್ಲ. ಇವತ್ತು ಸಲ್ಲಿಕೆ ಆಗಬೇಕಿತ್ತು. ಆದರೆ ವರದಿ ಅಂತಿಮ ರೂಪುರೇಷೆ ಸಿದ್ಧತೆ ವಿಳಂಬವಾಗಿರೋ ಕಾರಣ ಈ ವಾರದಲ್ಲಿ ಮುಖ್ಯಮಂತ್ರಿ ನಿರ್ಧಾರ ಸಾಧ್ಯತೆ ಇದೆ.

    ಶಾಲೆ ಆರಂಭದ ಬಗ್ಗೆ ಸರ್ಕಾರವೇ ಇನ್ನೂ ಸ್ಪಷ್ಟ ನಿಲುವು ತಳೆದಿಲ್ಲ. ಅದಾಗಲೇ ಕೊಪ್ಪಳದ ಗಂಗಾವತಿಯ ಖಾಸಗಿ ಶಾಲೆಯಲ್ಲಿ 8, 9ನೇ ತರಗತಿಗೆ ಪರೀಕ್ಷೆ ನಡೆದಿದೆ. ನಿಯಮಗಳನ್ನು ಉಲ್ಲಂಘಿಸಿ, ಸೆಂಟ್‍ಪೌಲ್ ಅನ್ನೋ ಶಾಲೆ ಪರೀಕ್ಷೆ ನಡೆಸಿದೆ. ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ, ಶಾಲೆಗೆ ನೋಟಿಸ್ ನೀಡಲು ನಿರ್ಧರಿಸಿದ್ದಾರೆ. ಶಾಲೆಯ ಕಾರ್ಯದರ್ಶಿ ಸರ್ವೇಶ್ ವಸ್ತ್ರದ್ ಕ್ಷಮೆಯನ್ನೂ ಕೇಳಿದ್ದಾರೆ.

  • ನವೆಂಬರ್ 17ರಿಂದ ಪದವಿ ಕಾಲೇಜು ಆರಂಭ

    ನವೆಂಬರ್ 17ರಿಂದ ಪದವಿ ಕಾಲೇಜು ಆರಂಭ

    ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ನವೆಂಬರ್ 17ರಿಂದ ಎಲ್ಲಾ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ.

    ಇಂದು ಸಿಎಂ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ನಿರ್ಣಯಿಸಲಾಗಿದೆ. ಮಾರ್ಗಸೂಚಿ ಪಾಲನೆಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಹೆಗಲಿಗೆ ಹಾಕಲಾಗಿದೆ. ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ನವೆಂಬರ್ 17 ರಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

    ಆನ್ ಲೈನ್, ಆಫ್ ಲೈನ್ ತರಗತಿ ಪಡಿಯೋ ಅವಕಾಶ ವಿದ್ಯಾರ್ಥಿಗೆ ಬಿಟ್ಟಿದ್ದಾಗಿದೆ. ಕಾಲೇಜಿಗೆ ಬರೋರು ರಿಜಿಸ್ಟರ್ ಮಾಡಿಕೊಳ್ಳಬೇಕು. ಅಲ್ಲದೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಕಾಲೇಜು ಬರೋರಿಗೆ ಇಲಾಖೆ ವ್ಯವಸ್ಥೆ ಮಾಡುತ್ತೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮದ ವ್ಯವಸ್ಥೆ ಮಾಡುವುದಾಗಿ ನಿರ್ಧರಿಸಲಾಯಿತು.

    ಪ್ರಾಕ್ಟಿಕಲ್ ಕ್ಲಾಸ್‍ಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಯುಜಿಸಿ ನಿಯಮದ ಪ್ರಕಾರ ಕಾಲೇಜು ಪ್ರಾರಂಭ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಒತ್ತಾಸೆ ಮೇರೆಗೆ ಕಾಲೇಜು ಪ್ರಾರಂಭ ಮಾಡುವ ನಿರ್ಧಾರ ಸಭೆಯಲ್ಲಿ ಮಾಡಲಾಯಿತು. ಪ್ರತಿ ಕಾಲೇಜಿನಲ್ಲಿ ಟಾಸ್ಕ್ ಫೋರ್ಸ್ ಇರುತ್ತೆ. ಅಲ್ಲದೆ ಪ್ರತಿ ಜಿಲ್ಲೆಗೆ ಡಿಸಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಯಾರಿಗೂ ಒತ್ತಾಯ ಮಾಡಲ್ಲ. ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಕಲಿಕೆಗೆ ಒತ್ತು ನೀಡುವ ಕೆಲಸ ಸರ್ಕಾರ ನೀಡ್ತಿದೆ ಎಂದು ಚರ್ಚಿಸಲಾಯಿತು.

    ಸಭೆಯಲ್ಲಿ ಡಿಸಿಎಂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಲಹೆಗಾರ ದೊರೆಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

  • ಮೈಸೂರಿನ ಪ್ರತಿಷ್ಠಿತ ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ: ಮುತಾಲಿಕ್ ಗಂಭೀರ ಆರೋಪ

    ಮೈಸೂರಿನ ಪ್ರತಿಷ್ಠಿತ ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ: ಮುತಾಲಿಕ್ ಗಂಭೀರ ಆರೋಪ

    ಮೈಸೂರು: ಜಿಲ್ಲೆಯ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳ ಆವರಣದಲ್ಲಿ ಡ್ರಗ್ಸ್ ಸಿಗುತ್ತದೆ. ಮೈಸೂರಿನ ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ. ಇದು ಪೋಷಕರು, ಪಾಲಕರು, ಶಿಕ್ಷಕರಿಗೆ ಗೊತ್ತಿದೆ. ಆದ್ರೆ ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಹೇಳಿದರು.

    ಹೊರ ದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಕಾಲೇಜು ಸೇರುತ್ತಾರೆ. ಈಗಲೂ ಹಾಸ್ಟೆಲ್‍ಗಳ ಮೇಲೆ ದಾಳಿ ಮಾಡಿ. ಹಾಸ್ಟೆಲ್‍ಗಳನ್ನು ಚೆಕ್ ಮಾಡಿದರೆ ಡ್ರಗ್ಸ್, ಹೆರಾಯಿನ್ ಎಲ್ಲವೂ ಸಿಗುತ್ತವೆ ಎಂದು ಸವಾಲೆಸೆದರು.

    ಲವ್ ಜಿಹಾದ್ ಮಾದರಿಯಲ್ಲಿಯೇ ಡ್ರಗ್ಸ್ ಜಿಹಾದ್ ನಡೆಯುತ್ತಿದೆ. ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ. ಪಂಜಾಬ್, ಗುಜರಾತ್, ಗೋವಾ ಮೂಲಕ ಡ್ರಗ್ಸ್ ದೇಶಕ್ಕೆ ಪ್ರವೇಶಿಸುತ್ತಿದೆ. ಇದರಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ ಎಂದರು.

    ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೆ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ದೆಹಲಿ ಪೊಲೀಸರು ಬಂದು ದಾಳಿ ಮಾಡುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಗುಪ್ತಚರ ಇಲಾಖೆಯವರು ಕತ್ತೆ ಕಾಯುತ್ತಿದ್ರಾ ಎಂದು ಪ್ರಶ್ನಿಸುವ ಮೂಲಕ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.

  • ಮರಳು ಚೀಲದ ಮೇಲೆ ಮೆಡಿಕಲ್ ಕಾಲೇಜು ಬಸ್ ಹತ್ತಿ ಪಲ್ಟಿ: ಓರ್ವನಿಗೆ ಗಾಯ

    ಮರಳು ಚೀಲದ ಮೇಲೆ ಮೆಡಿಕಲ್ ಕಾಲೇಜು ಬಸ್ ಹತ್ತಿ ಪಲ್ಟಿ: ಓರ್ವನಿಗೆ ಗಾಯ

    ಧಾರವಾಡ: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿಯಾದ ಘಟನೆ ಧಾರವಾಡ ಹೊರವಲಯದ ಓಝೋನ್ ಹೋಟೆಲ್ ಬಳಿ ನಡೆದಿದೆ.

    ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಬಿ ಡಿ ಜತ್ತಿ ವೈದ್ಯಕೀಯ ಕಾಲೇಜಿಗೆ ಸೇರಿದ ಬಸ್‍ನಲ್ಲಿ ಬಿಎಚ್‍ಎಂಎಸ್ ವಿದ್ಯಾರ್ಥಿಗಳು ಎಸ್‍ಡಿಎಂ ಕಾಲೇಜಿಗೆ ಪರೀಕ್ಷೆ ಬರೆಯಲು ಹೋಗುವ ವೇಳೆ ಈ ಘಟನೆ ನಡೆದಿದೆ.

    ರಸ್ತೆ ಕಾಮಗಾರಿ ನಡೆಯುತ್ತಿರುವ ಈ ರಸ್ತೆಯಲ್ಲಿ ಮರಳು ಚೀಲದ ಮೇಲೆ ಬಸ್ ಹತ್ತಿದ್ದರಿಂದ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಬಸ್‍ನಲ್ಲಿ 20 ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದ್ದು, ವಿದ್ಯಾರ್ಥಿಗೆ ಸಣ್ಣ ಪುಟ್ಟ ಗಾಯವಾಗಿತ್ತು. ಆತನನ್ನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಪರೀಕ್ಷೆಗೆ ಕಳಿಸಿಕೊಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸರು ಬಿದ್ದ ಬಸ್ ತೆರವುಗೊಳಿಸಿದರು.

  • ಇಂಟರ್ನಲ್ ಮಾರ್ಕ್ಸ್ ಕೇಳಿದ್ರೆ ಸರಸಕ್ಕೆ ಕರೀತಾನೆ ಶಿಕ್ಷಕ!

    ಇಂಟರ್ನಲ್ ಮಾರ್ಕ್ಸ್ ಕೇಳಿದ್ರೆ ಸರಸಕ್ಕೆ ಕರೀತಾನೆ ಶಿಕ್ಷಕ!

    – ಕಾಲೇಜು ಬಿಟ್ಟು ವಿದ್ಯಾರ್ಥಿನಿಯರ ಪ್ರತಿಭಟನೆ

    ಕಲಬುರಗಿ: ಇಂಟರ್‍ನಲ್ ಮಾರ್ಕ್ಸ್ ಕೊಡಲು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ, ಕಲಬುರಗಿ ನಗರದ ಎಚ್‍ಕೆಇ ಸಂಸ್ಥೆಯ ಮಲಕರೆಡ್ಡಿ ಹೋಮಿಯೊಪತಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

    ಕಾಲೇಜಿನ ಫಿಜಿಯಾಲಾಜಿ ಉಪನ್ಯಾಸಕ ಸಿದ್ದಲಿಂಗ ಮಾಲಿಪಾಟೀಲ್ ಇಂತಹ ಹೀನ ಕೆಲಸ ಮಾಡಿದ್ದಾನೆ. ಇದರಿಂದ ನೊಂದ ವಿದ್ಯಾರ್ಥಿನಿ ಕಾಲೇಜಿನ ಪ್ರಾಂಶುಪಾಲರಿಗೆ ಲಿಖಿತ ದೂರು ನೀಡಿದ್ದಾರೆ.

    ನಿತ್ಯ ಮದ್ಯಪಾನ ಮಾಡಿ ಬರುವ ಈ ಕಾಮಿ ಶಿಕ್ಷಕ ಪ್ರತಿ ವಿದ್ಯಾರ್ಥಿನಿಯನ್ನೂ ಸಹ ಕಾಮದ ದೃಷ್ಟಿಯಿಂದ ನೋಡುತ್ತಾನಂತೆ. ಉಪನ್ಯಾಸಕನ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಗಳು ಮೂರು ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಆಡಳಿತ ಮಂಡಳಿಯ ಒತ್ತಡಕ್ಕೆ ಮಣಿದ ಶಿಕ್ಷಣ ಸಂಸ್ಥೆ ಕಾಮುಕ ಉಪನ್ಯಾಕನ ವಿರುದ್ಧ ಕ್ರಮ ಜರುಗಿಸಿಲ್ಲ ಎನ್ನುವ ಮಾತು ಕೇಳಿ ಬಂದಿದೆ.