Tag: collapse

  • ಪಾದಾಚಾರಿ ಮೇಲ್ಸೇತುವೆ ಕುಸಿತ – 4 ಸಾವು, 34 ಮಂದಿಗೆ ಗಾಯ

    ಪಾದಾಚಾರಿ ಮೇಲ್ಸೇತುವೆ ಕುಸಿತ – 4 ಸಾವು, 34 ಮಂದಿಗೆ ಗಾಯ

    ಮುಂಬೈ: 2008ರ ಭಯೋತ್ಪಾದಕ ದಾಳಿಯ ವೇಳೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರ ಅಜ್ಮಲ್ ಕಸಬ್ ಬಳಕೆ ಮಾಡಿದ್ದ ಪಾದಚಾರಿ ಮಾರ್ಗ ಕುಸಿತಗೊಂಡ ಪರಿಣಾಮ ಸುಮಾರು 4 ಮಂದಿ ಸಾವನ್ನಪ್ಪಿದ್ದು, 34ಕ್ಕೂ ಮಂದಿ ಗಾಯಗೊಂಡಿದ್ದಾರೆ.

    ಛತ್ರಪತಿ ಶಿವಾಜಿ ಮಹಾರಾಜ್ ರೈಲು ನಿಲ್ದಾಣದ ಬಳಿ ಇರುವ 20 ಅಡಿ ಎತ್ತರದ ಸೇತುವೆ ಇದಾಗಿದ್ದು, ಇಂದು ಸಂಜೆ 7.30ರ ವೇಳೆಗೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಹಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 10 ಕ್ಕೂ ಹೆಚ್ಚು ಮಂದಿಯ ಮೃತದೇಹ ಅವಶೇಷಗಳ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

    26/11 ಮುಂಬೈ ಉಗ್ರರ ದಾಳಿ ಬಳಿಕ ಈ ಪಾದಾಚಾರಿ ಮಾರ್ಗ ಕಸಬ್ ಸೇತುವೆ ಎಂದೇ ಜನರ ಮಾತಿನಲ್ಲಿ ಕೇಳಿ ಬರುತ್ತಿತ್ತು. ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ದುರ್ಘಟನೆ ನಡೆದ ಪರಿಣಾಮ ಜನಸಾಮಾನ್ಯರಿಗೆ ಈ ಮಾರ್ಗಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

    ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) 2018 ಸೆ.22 ರಂದು ನಗರದಲ್ಲಿ ಇದ್ದ ಅವಧಿ ಮೀರಿದ ಪಾದಾಚಾರಿ ಮಾರ್ಗಗಳ ಉರುಳಿಸುವ ಸಮಯವನ್ನು ವಿಸ್ತರಣೆ ಮಾಡಿದ್ದವು. ಸದ್ಯ ಈ ಅವಘಡಕ್ಕೆ ಸ್ಥಳೀಯ ಸಂಸ್ಥೆಯ ನಿರ್ಲಷವೇ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೃಹತ್ ಡ್ಯಾಮ್ ಒಡೆದು 110 ಮಂದಿ ಬಲಿ- ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

    ಬೃಹತ್ ಡ್ಯಾಮ್ ಒಡೆದು 110 ಮಂದಿ ಬಲಿ- ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

    ಬ್ರೆಜಿಲ್: ಮಿನಾಸ್ ಗಿರೈಸ್ ಪ್ರದೇಶದಲ್ಲಿರುವ ಗಣಿಗಾರಿಕೆಯ ಅಣೆಕಟ್ಟು ಒಡೆದ ಪರಿಣಾಮ 110 ಮಂದಿ ಸಾವನ್ನಪ್ಪಿದ ಭಯಾನಕ ವಿಡಿಯೋ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದೆ.

    ಕಳೆದ ಜನವರಿ 25ರಂದು ಬ್ರೆಜಿಲ್‍ನ ಮಿನಾಸ್ ಗಿರೈಸ್ ಪ್ರದೇಶದಲ್ಲಿರುವ ಕಬ್ಬಿಣದ ಗಣಿಗಾರಿಕಾ ಪ್ರದೇಶದ ಪಕ್ಕದಲ್ಲಿದ್ದ ಬೃಹತ್ ಅಣೆಕಟ್ಟು ಒಡೆದು ಹೋಗಿತ್ತು. ಈ ವೇಳೆ ಗಣಿಗಾರಿಕೆ ಪ್ರದೇಶಕ್ಕೆ ಏಕಾಏಕಿ ನೀರು ನುಗ್ಗಿದ ಪರಿಣಾಮ ಸ್ಥಳದಲ್ಲಿದ್ದ 110 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 238 ಮಂದಿ ಕಾಣೆಯಾಗಿದ್ದರು. ಈ ಭಯಾನಕ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ವಿಡಿಯೋದಲ್ಲಿ, ಡ್ಯಾಮ್ ಒಡೆದು ಗಣಿ ಪ್ರದೇಶಕ್ಕೆ ನೀರು ನುಗ್ಗಿದ ತಕ್ಷಣ ಸ್ಥಳದಲ್ಲಿದವರು ಪ್ರಾಣ ಉಳಿಸಿಕೊಳ್ಳು ಓಡುತ್ತಿರುವ ದೃಶ್ಯ ಹಾಗೂ ಕಾರು ಲಾರಿಗಳು ಸ್ಥಳದಿಂದ ದೂರ ಹೋಗಲು ಪ್ರಯತ್ನಿಸುತ್ತಿರುವ ದೃಶ್ಯಗಳು, ಅಲ್ಲದೆ ಏಕಾಏಕಿ ಡ್ಯಾಮ್ ನೀರು ಗಣಿ ಪ್ರದೇಶಕ್ಕೆ ನುಗ್ಗಿ, ಸಂಪೂರ್ಣ ಜಲಾವೃತವಾಗುತ್ತಿರುವ ದೃಶ್ಯ ಸೆರೆಯಾಗಿದೆ.

    ಈ ವಿಡಿಯೋವನ್ನು ಸ್ಥಳೀಯ ಮಾಧ್ಯಮವೊಂದು ಪ್ರಸಾರ ಮಾಡಿದ್ದು, ಸದ್ಯ ಅದರ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಮಧ್ಯಾಹ್ನದ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇಲ್ಲಿಯವರೆಗೆ ಒಟ್ಟು 110 ಮಂದಿಯ ಮೃತದೇಹವನ್ನು ಪತ್ತೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹೋಲ್‍ಸೇಲ್ ಗೋಡಾನ್‍ನಲ್ಲಿ ಅವಘಡ – ಕಾರ್ಮಿಕರ ಮೇಲೆ ಕುಸಿದ ರ‍್ಯಾಕ್

    ಹೋಲ್‍ಸೇಲ್ ಗೋಡಾನ್‍ನಲ್ಲಿ ಅವಘಡ – ಕಾರ್ಮಿಕರ ಮೇಲೆ ಕುಸಿದ ರ‍್ಯಾಕ್

    – ಕಾಡುಗೊಡಿಯಲ್ಲಿ ರಕ್ಷಣಾ ಕಾರ್ಯಾಚರಣೆ

    ಬೆಂಗಳೂರು: ನಗರದ ಹೊರವಲಯದ ಕಾಡುಗೋಡಿಯ ಶೀಗೆಹಳ್ಳಿ ಗೇಟ್‍ನಲ್ಲಿರುವ ಮಾರ್ಕೆಟಿಂಗ್ ಕಂಪನಿಯೊಂದರ ಹೋಲ್ ಸೇಲ್ ಗೋಡಾನ್‍ನಲ್ಲಿ ಅವಘಡ ಸಂಭವಿಸಿದೆ.

    ಗೋಡಾನ್ ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರ ಮೇಲೆ ಕಬ್ಬಿಣದ ರ‍್ಯಾಕ್ ಗಳು ಕುಸಿದಿವೆ. ಹಲವರು ಕಾರ್ಮಿಕರು, ಕಬ್ಬಿಣದ ರ‍್ಯಾಕ್ ಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. ಇದೂವರೆಗೆ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಎನ್‍ಡಿಆರ್‍ಎಫ್ ತಂಡ, ಶ್ವಾನ ಪಡೆ ಆಗಮಿಸಿದೆ. ನಾಲ್ಕು ಅಂಬುಲೆನ್ಸ್ ಸ್ಥಳದಲ್ಲಿ ಬೀಡುಬಿಟ್ಟಿವೆ. ಕಾರ್ಮಿಕರಲ್ಲಿ ಆತಂಕ ಮನೆ ಮಾಡಿದೆ. ರ‍್ಯಾಕ್ ನಡಿ ಸಿಲುಕಿರುವ ಕಾರ್ಮಿಕರ ಬಂಧುಗಳ ಆಕ್ರಂದನ ಮುಗಿಲುಮುಟ್ಟಿದೆ.

    ಈ ಬಗ್ಗೆ ಪ್ರತ್ಯಕ್ಷದರ್ಶಿ ಬಾಬು ಪಬ್ಲಿಕ್ ಟಿವಿ ಜೊತೆ ಮಾತನಾಡಿ, 12 ಗಂಟೆ ಸಮಯಕ್ಕೆ ನಾವು ಬಂದಾಗ ಕಬ್ಬಿಣದ ರ‍್ಯಾಕ್ ಗಳ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದರು. ರ‍್ಯಾಕ್ ಗಳು ಪ್ಲಾಸ್ಟಿಕ್ ನಿಂದ ಕವರ್ ಆಗಿದ್ದರಿಂದ ಒಂದಕ್ಕೊಂದು ಕಚ್ಚಿಕೊಂಡಿದ್ದವು. ಈ ಮಧ್ಯೆ ಕಾರ್ಮಿಕರು ಸಿಲುಕಿದ್ದರು. ಕೂಡಲೇ 4 ಮಂದಿಯನ್ನು ಅಂಬುಲೆನ್ಸ್ ನಲ್ಲಿ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು. 3, 4 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ. ಇಬ್ಬರು ಅವಶೇಷಗಳಡಿಯಿಂದ ಮಾತನಾಡುತ್ತಿರುವುದು ಕೇಳಿಸಿತ್ತು. ಹೀಗಾಗಿ ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಸಿಲುಕಿರುವ ಸಾಧ್ಯತೆಗಳಿವೆ. ರ‍್ಯಾಕ್ ಗಳ ಮಧ್ಯೆ ಗ್ಯಾಪ್ ಇದ್ರೂ ಅದನ್ನು ತೆಗೆಯಲು ಸಾಧ್ಯವಾಗುತ್ತಿಲ್ಲ. ಬಟ್ಟೆ ಹಾಗೂ ಶೂಗಳಿರುವುದರಿಂದ ರ‍್ಯಾಕ್ ಗಳನ್ನು ಕಟ್ ಮಾಡಲು ಹೊರಟ್ರೆ ಬೆಂಕಿ ಹೊತ್ತಿಕೊಂಡರೆ ಕಷ್ಟ ಅಂತ ಅವರು ವಿವರಿಸಿದ್ರು.

    ಸುಮಾರು 50ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು. ಗೋಡೌನ್ ನಲ್ಲಿ ಕಳಪೆ ಗುಣಮಟ್ಟದ ರ‍್ಯಾಕ್ ಗಳನ್ನು ಬಳಸಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇದ್ದಕ್ಕಿದ್ದಂತೆ ಬೆಂಗ್ಳೂರಿನ ನಡುರಸ್ತೆಯಲ್ಲಿ 8 ಅಡಿ ಆಳದ ಬೃಹತ್ ಹೊಂಡ ಸೃಷ್ಟಿ!

    ಇದ್ದಕ್ಕಿದ್ದಂತೆ ಬೆಂಗ್ಳೂರಿನ ನಡುರಸ್ತೆಯಲ್ಲಿ 8 ಅಡಿ ಆಳದ ಬೃಹತ್ ಹೊಂಡ ಸೃಷ್ಟಿ!

    ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಸಿಲಿಕಾನ್ ಸಿಟಿ ಎಂದು ಪ್ರಖ್ಯಾತಿ ಪಡೆದಿರುವ ಬೆಂಗಳೂರಿನ ಹೈಫೈ ರಸ್ತೆಗಳು ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅವುಗಳ ಡಾಂಬರ್ ಕಿತ್ತು ಹೋಗುವುದು ಗೊತ್ತಿರುವ ವಿಚಾರ. ಈಗ ಮತ್ತಷ್ಟು ಅಭಿವೃದ್ಧಿಯಾಗಿದ್ದು ರಸ್ತೆಯಲ್ಲೇ ಹೊಂಡ ನಿರ್ಮಾಣವಾಗಿದೆ.

    ಹೌದು. ನಗರದಲ್ಲಿನ ಕಳಪೆ ಕಾಮಗಾರಿಗಳ ರಸ್ತೆಯ ಪಟ್ಟಿಗೆ ಇಂದು ಮತ್ತೊಂದು ರಸ್ತೆ ಸೇರ್ಪಡೆಯಾಗಿದೆ. ಕಾಟನ್ ಪೇಟೆಯ ಮುಖ್ಯರಸ್ತೆ ದಿಢೀರ್ ಕುಸಿತಗೊಂಡಿದೆ. ಸುಮಾರು 8 ಅಡಿ ಆಳದ ಕಂದಕ ನಿರ್ಮಾಣವಾಗಿದ್ದು, ಪರಿಣಾಮ ಈ ಮಾರ್ಗದಲ್ಲಿ ಟ್ರಾಫಿಕ್ ಸಮಸ್ಯೆ ಕಾಣಿಸಿಕೊಂಡಿದೆ.

    ಇಂದು ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ರಸ್ತೆ ಮಧ್ಯದಲ್ಲಿಯೇ ದೊಡ್ಡ ಕಂದಕ ನಿರ್ಮಾಣವಾಗಿದೆ. ನಡು ರಸ್ತೆಯಲ್ಲಿ ಕಂದಕ ನಿರ್ಮಾಣವಾದ ಕಾರಣ ಈ ಮಾರ್ಗದಲ್ಲಿ ಓಡಾಡುವ ವಾಹನ ಸವಾರರು ಪರದಾಟ ಅನುಭವಿಸುತ್ತಿದ್ದಾರೆ.

    ಬಸ್ ರಸ್ತೆಯಲ್ಲಿ ಮುಂದೆ ಚಲಿಸುತ್ತಿದಂತೆ ರಸ್ತೆ ಕುಸಿತ ಆಗಿದ್ದು, ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದೆ. ಅಲ್ಲದೇ ಏಕಾಏಕಿ ಭಾರೀ ಪ್ರಮಾಣದಲ್ಲಿ ರಸ್ತೆ ಕುಸಿತ ಸಂಭವಿಸಿದ ಕಾರಣ ಸ್ಥಳೀಯರಲ್ಲಿ ಹೆಚ್ಚಿನ ಆತಂಕಕ್ಕೆ ಕಾರಣವಾಗಿತ್ತು. ರಸ್ತೆ ಕುಸಿತ ಬಗ್ಗೆ ಮಾಹಿತಿ ಪಡೆದ ಬಿಬಿಎಂಪಿ ಸಿಬ್ಬಂದಿ ಪೊಲೀಸರು ಸುತ್ತಲು ಬ್ಯಾರಿಕೇಡ್ ಹಾಕಿದ್ದು, ಜೆಸಿಬಿ ಮೂಲಕ ರಿಪೇರಿ ಕಾರ್ಯ ನಡೆಸಿದೆ. ಆದರೆ ಈ ಮಾರ್ಗವಾಗಿ ಸಂಚಾರಿಸುವ ವಾಹನ ಸವಾರರು ಮಾತ್ರ ಭಯದಿಂದಲೇ ಸಾಗುತ್ತಿದ್ದಾರೆ.

    https://www.youtube.com/watch?v=sbIef5So8qI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕಾಲುವೆ ಒಡೆದು ನೀರು ನುಗ್ಗಿದ್ದರಿಂದ ಕೆರೆಯಂತಾದ ನೂರಾರು ಎಕ್ರೆ ಜಮೀನು!

    ಕಾಲುವೆ ಒಡೆದು ನೀರು ನುಗ್ಗಿದ್ದರಿಂದ ಕೆರೆಯಂತಾದ ನೂರಾರು ಎಕ್ರೆ ಜಮೀನು!

    ಗದಗ: ಕಾಲುವೆ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗಿದ್ದರಿಂದ ನೂರಾರು ಎಕರೆ ಜಮೀನು ಕೆರೆಯಂತೆ ಭಾಸವಾಗುತ್ತಿರುವ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.

    ಕದಡಿ ಗ್ರಾಮದ ಬಳಿಯಿರುವ ಮಲಪ್ರಭಾ ಬಲದಂಡೆ ಕಾಲುವೆ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಹತ್ತಿರದ ಜಮೀನುಗಳಿಗೆ ನುಗ್ಗಿದೆ. ಪರಿಣಾಮ ನೂರಾರು ಎಕರೆ ಜಮೀನುಗಳು ಕೆರೆಯಂತೆ ನಿರ್ಮಾಣವಾಗಿದೆ. ಅಲ್ಲದೇ ಜಮೀನುಗಳಲ್ಲಿ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣ ಬೆಳೆ ನಷ್ಟವಾಗಿದೆ.

    ಮಾಹಿತಿಗಳ ಪ್ರಕಾರ ಕಾಲುವೆ ಗುಣಮಟ್ಟಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ದರಿಂದ, ಕಾಲುವೆ ಒಡೆದಿದೆ ಎಂದು ಹೇಳಲಾಗುತ್ತಿದೆ. ಕಾಲುವೆ ಒಡೆಯಲು ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಕಾಲುವೇ ಒಡೆದಿರುವ ಬಗ್ಗೆ ನೀರಾವರಿ ನಿಗಮದ ಅಧಿಕಾರಿಗಳಿಗೆ ರೈತರು ಮಾಹಿತಿ ನೀಡಿದ್ದರೂ, ನೀರನ್ನು ಸ್ಥಗಿತಗೊಳಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

     

  • ನಿರ್ಮಾಣ ಹಂತದ ಮೂರಂತಸ್ತಿನ ಕಟ್ಟಡ ಕುಸಿತ- ಅವಶೇಷಗಳಡಿ ಮೂವರು ಸಿಲುಕಿರುವ ಶಂಕೆ

    ನಿರ್ಮಾಣ ಹಂತದ ಮೂರಂತಸ್ತಿನ ಕಟ್ಟಡ ಕುಸಿತ- ಅವಶೇಷಗಳಡಿ ಮೂವರು ಸಿಲುಕಿರುವ ಶಂಕೆ

    ಬೆಂಗಳೂರು: ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಮೂವರು ಸಿಲುಕಿ ಹಾಕಿಕೊಂಡಿರುವ ಘಟನೆ ರಾಜಧಾನಿಯ ತ್ಯಾಗರಾಜನಗರದಲ್ಲಿ ನಡೆದಿದೆ.

    ತ್ಯಾಗರಾಜನಗರದಲ್ಲಿ ಇಂದು ಮಧ್ಯಾಹ್ನ 4.30ರ ವೇಳೆಗೆ ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಕಟ್ಟಡದ ಅವಶೇಷಗಳಡಿ ಮೂವರು ಸಿಲುಕಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಮುಂದಾಗಿದ್ದಾರೆ.

    ನಿರ್ಮಾಣ ಹಂತದ ಕಟ್ಟಡದಲ್ಲಿ ಸುಹೇಲ್ ಹಾಗೂ ಶಬ್ಬೀರ್ ಎಂಬ ವೆಲ್ಡೀಂಗ್ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಟ್ಟಡದ ಒಳಗೆ ಸುಹೇಲ್ ಕೆಲಸ ಮಾಡುತ್ತಿದ್ದರೇ, ಕಟ್ಟಡದ ಹೊರಗೆ ಶಬ್ಬೀರ್ ಕೆಲಸ ಮಾಡುತ್ತಿದ್ದರು. ಕಟ್ಟಡ ಏಕಾಏಕಿ ನೆಲಕ್ಕಪ್ಪಳಿಸುತ್ತಿದ್ದಂತೆ ಶಬ್ಬೀರ್ ಓಡಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಆದರೆ ಕಟ್ಟಡದಲ್ಲಿದ್ದ ಸುಹೇಲ್ ಏನಾಗಿದ್ದರೆಂಬ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

    ನಿರ್ಮಾಣ ಹಂತದ ಕಟ್ಟಡ ಬಿಲ್ಡ್ ಬೆಂಗಳೂರು ಇನ್ಫ್ರ ಪ್ರಾಜೆಕ್ಟ್ ಎಂಬವರಿಗೆ ಸೇರಿದ್ದಾಗಿದೆ. ಕಟ್ಟಡದ ಪಕ್ಕದಲ್ಲೇ ಖಾಲಿ ಸೈಟಿನಲ್ಲಿ ನಡೆಯುತ್ತಿದ್ದ ಕಾಮಗಾರಿಯಿಂದ ಕಟ್ಟಡ ಕುಸಿದು ಬಿದ್ದಿದೆ. ಪಕ್ಕದ ಖಾಲಿ ಸೈಟಿನವರು ಕಟ್ಟಡ ನಿರ್ಮಾಣಕ್ಕಾಗಿ ತುಂಬಾ ಆಳವಾಗಿ ಪಾಯ ತೆಗೆದಿದ್ದರು. ಆಳವಾಗಿ ಪಾಯ ತೆಗೆದಿದ್ದರಿಂದ ಪಕ್ಕದಲ್ಲಿನ ಕಟ್ಟಡ ಉರುಳಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜಕ್ಕೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ: 1 ಸಾವು

    ಜಕ್ಕೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ: 1 ಸಾವು

    ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣಿನ ಗೋಡೆ ಕುಸಿದು ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಕ್ಕೂರು ಬಳಿಯ ನವ್ಯ ಲೇಔಟ್‍ನಲ್ಲಿ ನಡೆದಿದೆ.

    ಮಧು (24) ಸೈಟ್ ಇಂಜಿನಿಯರ್ ಮೃತಪಟ್ಟ ದುರ್ದೈವಿ. ನಬೀಬ್ ಸಾಬ್ (56) ಗಂಭೀರವಾಗಿ ಗಾಯಗೊಂಡಿದ್ದಾರೆ. ಜಕ್ಕೂರಿನ ನವ್ಯನಗದಲ್ಲಿ ಚಂದ್ರಶೇಖರ್ ಎಂಬವರಿಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿತ್ತು. ಕಟ್ಟಡ ನಿರ್ಮಾಣ ಸಂಬಂಧ ನಾಲ್ಕು ಕಡೆ ಮಣ್ಣನ್ನು ತೋಡಿದ್ದರು. ಅಲ್ಲದೇ ಮಣ್ಣು ತೋಡಿರುವ ನಾಲ್ಕು ಕಡೆ ಕಾಂಕ್ರೀಟ್ ವಾಲ್ ನಿರ್ಮಿಸಬೇಕಿತ್ತು.

    ಆದರೆ ಎಂಜಿನಿಯರ್ ಹಾಗೂ ಗುತ್ತಿಗೆದಾರ ಕೇವಲ ಮೂರು ಕಡೆ ಕಾಂಕ್ರೀಟ್ ಗೋಡೆ ಕಟ್ಟಿ, ಮತ್ತೊಂದು ಕಡೆ ಕೇವಲ ಇಟ್ಟಿಗೆಯಿಂದ ಜೋಡಿಸಿದ್ದರು. ಇಟ್ಟಿಗೆಯಿಂದ ಜೋಡಿಸಿದ್ದ ಗೋಡೆಯು ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಕಟ್ಟಡದ ಕೆಳಗಡೆ ಇದ್ದ ಎಂಜಿನಿಯರ್ ಮಧು ಹಾಗೂ ನಬೀಬ್ ಸಾಬ್ ಮೇಲೆ ಮಣ್ಣಿನಡಿ ಸಿಲುಕಿಕೊಂಡಿದ್ದರು.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಇಬ್ಬರನ್ನು ಮಣ್ಣಿನಡಿಯಿಂದ ಹೊರತೆಗೆದಿದ್ದಾರೆ. ಆದರೆ ಎಂಜಿನಿಯರ್ ಮಧು ಮಣ್ಣು ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟರೆ, ನಬೀಬ್ ಸಾಬ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ನಬೀಬ್ ಸ್ಥಿತಿ ಚಿಂತಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಜಯಪುರ-ಅಥಣಿ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕುಸಿತ: ತಪ್ಪಿದ ಭಾರೀ ದುರಂತ

    ವಿಜಯಪುರ-ಅಥಣಿ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕುಸಿತ: ತಪ್ಪಿದ ಭಾರೀ ದುರಂತ

    ವಿಜಯಪುರ: ವಿಜಯಪುರ ಹಾಗೂ ಅಥಣಿ ನಡುವಿನ ರಾಜ್ಯ ಹೆದ್ದಾರಿಯಲ್ಲಿನ ಸೇತುವೆ ಕುಸಿದು ಬಿದ್ದಿರುವ ಘಟನೆ ತಾಲೂಕಿನ ರತ್ನಾಪೂರ ಗ್ರಾಮದ ಬಳಿ ನಡೆದಿದೆ.

    ವಿಜಯಪುರ ಹಾಗೂ ಅಥಣಿ ನಡುವಿನ ರಾಜ್ಯ ಹೆದ್ದಾರಿಯ ರತ್ನಾಪುರ ಗ್ರಾಮದ ಬಳಿಯಿರುವ ಸೇತುವೆಯೊಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಕುಸಿದು ಬಿದ್ದಿದೆ. ಸೇತುವೆ ಕುಸಿದು ಬೀಳುವ ವೇಳೆ ಯಾವುದೇ ವಾಹನಗಳು ಸಂಚರಿಸದೇ ಇರುವುದರಿಂದ ಆಗಬಹುದಾಗಿದ್ದ ಭಾರೀ ಅನಾಹುತವೊಂದು ಕ್ಷಣಮಾತ್ರದಲ್ಲಿ ತಪ್ಪಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಾಜ್ಯ ಹೆದ್ದಾರಿ ಮಾರ್ಗವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ. ಅಲ್ಲದೇ ಈ ಮಾರ್ಗದ ಬದಲಾಗಿ ರತ್ನಾಪೂರ ಹಾಗೂ ತಿಕೋಟ ಮಾರ್ಗವಾಗಿ ಸಂಚಾರವನ್ನು ಬದಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

    ಮಾಹಿತಿಗಳ ಪ್ರಕಾರ ಸೇತುವೆ 2002 ರಲ್ಲಿ ನಿರ್ಮಾಣವಾಗಿತ್ತು. ಆದರೆ ನಿರ್ಮಾಣವಾದ 16 ವರ್ಷದಲ್ಲೇ ಕುಸಿದು ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸೇತುವೆ ಕುಸಿದ ಪರಿಣಾಮ ವಾಹನ ಸವಾರು ಹಾಗೂ ಸ್ಥಳೀಯರು ತೀವ್ರ ಪರದಾಟ ನಡೆಸಿದ್ದಾರೆ. ಅಲ್ಲದೇ ಸೇತುವೆ ಕುಸಿದ ಪರಿಣಾಮ ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೂರಂತಸ್ತಿನ ಕಟ್ಟಡ ಕುಸಿತ- ನಾಲ್ವರು ಮಕ್ಕಳು ಸೇರಿದಂತೆ ಐವರು ಸಾವು!

    ಮೂರಂತಸ್ತಿನ ಕಟ್ಟಡ ಕುಸಿತ- ನಾಲ್ವರು ಮಕ್ಕಳು ಸೇರಿದಂತೆ ಐವರು ಸಾವು!

    ನವದೆಹಲಿ: ರಾಷ್ಟ್ರ ರಾಜಧಾನಿಯ ಉತ್ತರ ದೆಹಲಿಯ ಅಶೋಕ್ ವಿಹಾರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಓರ್ವ ಮಹಿಳೆ ಸಾವನಪ್ಪಿ ಹಲವಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.

    ಸವಾನ್ ಪಾರ್ಕ್ ಸಮೀಪದ ಮೂರಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಮಕ್ಕಳು ಸೇರಿದಂತೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಕಟ್ಟಡ ಕುಸಿದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಇಲ್ಲಿಯವರೆಗು ಒಟ್ಟು 8 ಮಂದಿಯನ್ನು ಅವಶೇಷಗಳ ಅಡಿಯಿಂದ ಹೊರಕ್ಕೆ ತೆಗೆಯಲಾಗಿದೆ. ಇದರಲ್ಲಿನ ಒಟ್ಟು ಮೂರು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

    ಕಟ್ಟಡದಲ್ಲಿ ಬಹುತೇಕ ಬಾಡಿಗೆದಾರರು ವಾಸವಾಗಿದ್ದು, ಕಟ್ಟಡವು ಶಿಥಿಲಾವಸ್ಥೆ ತಲುಪಿತ್ತು. ಅಲ್ಲದೇ ಇತ್ತೀಚೆಗಷ್ಟೆ ಬಿರುಕು ಕಾಣಿಸಿಕೊಂಡಿತ್ತು. ಕಳೆದ ಒಂದು ವರ್ಷದ ಹಿಂದೆಯೇ ದೆಹಲಿ ಮಹಾನಗರ ಪಾಲಿಕೆಯು ಕಟ್ಟಡದ ಮಾಲೀಕರಿಗೆ ನೋಟಿಸ್ ನೀಡಿತ್ತು ಎಂದು ಪ್ರತ್ಯಕ್ಷದರ್ಶಿ ಹಾಗೂ ಬಾಡಿಗೆದಾರರಾದ ಸುನಿಲ್ ಕುಮಾರ್ ಗುಪ್ತರವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಲಿಕೆ ಅಧಿಕಾರಿಗಳು, ಕಟ್ಟಡ ಶಿಥಿಲಾವಸ್ಥೆಯ ಬಗ್ಗೆ ಈಗಾಗಲೇ ನೋಟಿಸ್ ನೀಡಿತ್ತು. ಆದರೂ ಕಟ್ಟಡ ಮಾಲೀಕರು ಬೇಜವಾಬ್ದಾರಿ ಪ್ರದರ್ಶಿಸಿ, ಅವಘಡಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 7.78 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ 3 ತಿಂಗ್ಳಲ್ಲೇ ಬಿದ್ದೋಯ್ತು!

    7.78 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ 3 ತಿಂಗ್ಳಲ್ಲೇ ಬಿದ್ದೋಯ್ತು!

    ಭೋಪಾಲ್: ನಿರ್ಮಾಣವಾಗಿ 3 ತಿಂಗಳಲ್ಲೇ 7.78 ಕೋಟಿಯ ಸೇತುವೆಯೊಂದು ಕುಸಿದು ಬಿದ್ದ ಘಟನೆ ಶಿವಪುರಿ ಜಿಲ್ಲೆಯ ಪೊಹ್ರಿ ಟೆಹ್ಸಿಲ್ ಎಂಬಲ್ಲಿ ನಡೆದಿದೆ.

    ಕುನೋ ನದಿಗೆ ಈ ಸೇತುವೆ ನಿರ್ಮಾಣ ಮಾಡಲಾಗಿದ್ದು, 3 ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿತ್ತು. ಆದ್ರೆ ಶನಿವಾರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅರ್ಧ ಸೇತುವೆಯೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ನಗರ ಪ್ರದೇಶದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳು ನಾಶವಾಗಿದೆ ಅಂತ ಜಿಲ್ಲೆಯ ಮೂಲಗಳಿಂದ ತಿಳಿದುಬಂದಿದೆ.

    ಪ್ರವಾಹದಿಂದಾಗಿ 1 ವರ್ಷದ ಮಗುವೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಮೃತಪಟ್ಟಿದೆ. ಹಲವು ಗ್ರಾಮಗಳಿಂದ ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ರಕ್ಷಣೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ.

    ಕುನೋ ನದಿಗೆ ನಿರ್ಮಿಸಲ್ಪಟ್ಟ ಈ ಸೇತುವೆಯನ್ನು ಇದೇ ವರ್ಷ ಜೂನ್ 29ರಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡಿಕೊಟ್ಟರು. ಬಳಿಕ ಮಾತನಾಡಿದ ಅವರು, ಮಧ್ಯಪ್ರದೇಶ ಹಾಗೂ ರಾಜಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿರ್ಮಾಣ ಮಾಡಲು 778 ಲಕ್ಷ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಮೂಲಕ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯುತ್ತಿವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇದಾಗಿದೆ.

    ಡಿಸಿ ಶಿಲ್ಪಿ ಗುಪ್ತಾ ಈ ಬಗ್ಗೆ ರಾಷ್ಟ್ರೀಯ ಪತ್ರಕೆಯೊಂದಕ್ಕೆ ಮಾತನಾಡಿ, ಪಿಡಬ್ಲ್ಯುಡಿ ಅವರು ಈ ಸೇತುವೆಯನ್ನು ನಿರ್ಮಾಣ ಮಾಡಿದ್ದಾರೆ. ಹೀಗಾಗಿ ನಾನು ಅವರಿಂದ ಈ ಕುರಿತು ಸೋಮವಾರ ವರದಿ ಸಂಗ್ರಹಿಸುತ್ತೇನೆ. ಬಳಿಕ ತನಿಖೆ ನಡೆಸಲು ಶಿಫಾರಸ್ಸು ಮಾಡುತ್ತೇನೆ ಅಂತ ಹೇಳಿದ್ದಾರೆ.

    ಕಳಪೆ ಗುಣಮಟ್ಟದ ಕಾಮಗಾರಿಯೇ ಘಟನೆಗೆ ಕಾರಣವಾಗಿದ್ದು, ಹೀಗಾಗಿ ಈ ಬಗ್ಗೆ ಸಂಬಂಧಪಟ್ಟವರು ಪ್ರತಿಕ್ರಿಯಿಸಬೇಕು. ಇಲ್ಲವೆಂದಲ್ಲಿ ಈ ಕುರಿತು ಗ್ರಾಮಸ್ಥರು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ದೂರು ದಾಖಲಿಸುತ್ತಾರೆ ಅಂತ ತಿಳಿಸಿದ ಸ್ಥಳೀಯ ಬಿಜೆಪಿ ಶಾಸಕ ಪ್ರಹ್ಲಾದ್ ಭಾರ್ತಿ, ಕಳಪೆ ಕಾಮಗಾರಿ ಹಾಗೂ ಮುಂದೆ ಸಮಸ್ಯೆ ಆಗುವ ಭಯದಲ್ಲಿ ಗ್ರಾಮಸ್ಥರಿದ್ದಾರೆ ಅಂತ ಹೇಳಿದ್ರು.

    ಶನಿವಾರ ಸುರಿದ ಭಾರೀ ಮಳೆಯಿಂದಾಗಿ ನದಿ ಸೇತುವೆಯ ಮೇಲೆ ನೀರು ಹರಿದು ಹೋಗಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಕುಸಿದಿದೆ. ನನ್ನ ಕ್ಷೇತ್ರದಲ್ಲಿ ಕೇವಲ ಒಂದು ಗ್ರಾಮದಲ್ಲಿ ಮಾತ್ರ ಮಳೆಯಿಂದ ಹಾನಿಯಾಗಿದ್ದು, ಹೀಗಾಗಿ ಹಾನಿಯಾದ ಸಂಬಂಧ ತನಿಖೆ ನಡೆಸಬೇಕು ಅಂತ ಭಾರ್ತಿ ಆಗ್ರಹಿಸಿದ್ರು.

    ಮಳೆಯಿಂದಾಗಿ ಶಿಯೋಪುರ್ ಹಾಗೂ ಶಿವಪುರಿ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೊಂಡಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಚಾಲಕರು ಪರದಾಡುತ್ತಿದ್ದಾರೆ. 2 ಅಡಿಗಳಷ್ಟು ಗುಂಡಿಗಳು ರಸ್ತೆಯಲ್ಲಿ ನಿರ್ಮಾಣವಾಗಿದೆ. ಈ ರಸ್ತೆ ಕೂಡ ಇದೇ ವರ್ಷದ ಆರಂಭದಲ್ಲಿ ನಿರ್ಮಾಣವಾಗಿದ್ದು, ಇಷ್ಟು ಬೇಗ ಮಳೆಗೆ ಹಾಳಾಗಿರುವುದು ವಿಷಾದನೀಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv