Tag: College Campus

  • ನೇಹಾ ಹತ್ಯೆಗೆ ಭುಗಿಲೆದ್ದ ಆಕ್ರೋಶ- ಪಾತಕಿ ಎನ್‍ಕೌಂಟರ್‌ಗೆ ಹಿಂದೂಪರ ಸಂಘಟನೆಗಳ ಆಗ್ರಹ

    ನೇಹಾ ಹತ್ಯೆಗೆ ಭುಗಿಲೆದ್ದ ಆಕ್ರೋಶ- ಪಾತಕಿ ಎನ್‍ಕೌಂಟರ್‌ಗೆ ಹಿಂದೂಪರ ಸಂಘಟನೆಗಳ ಆಗ್ರಹ

    – ರಾಜ್ಯ ಸರ್ಕಾರದ ವಿರುದ್ಧ ಜೋಶಿ, ಟೆಂಗಿನಕಾಯಿ ಕಿಡಿ

    ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‍ನಲ್ಲಿಯೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ  (Neha Hiremath) ಹತ್ಯೆಗೆ ಇದೀಗ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ.

    ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ನೂರಾರು ಕಾರ್ಯಕರ್ತರು ವಿದ್ಯಾನಗರ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ್ದಾರೆ. ಪರಿಣಾಮ ವಿದ್ಯಾನಗರ ಪೆÇಲೀಸ್ ಠಾಣೆ ಎದುರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನೇಹಾ ಕೊಂದವನನ್ನು ಎನ್‍ಕೌಂಟರ್ ಮಾಡಬೇಕೆಂದು ವಿವಿಧ ಹಿಂದೂಪರ ಸಂಘಟನೆಗಳು ಠಾಣೆ ಎದುರು ಆಗ್ರಹಿಸುತ್ತಿವೆ. ಇದನ್ನೂ ಓದಿ: ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು?

    ಇನ್ನೊಂದೆಡೆ ನೇಹಾ ಕೊಲೆ ಖಂಡಿಸಿ ಎನ್‍ಎಸ್‍ಯುಐ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಮುಂಭಾಗ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ, ಆಕ್ರೋಶ ಹೊರಹಾಕಿದೆ. ಅಲ್ಲದೇ ಕೊಲೆ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದೆ. ಇದನ್ನೂ ಓದಿ: ನಮ್ಮನೆ ಮಕ್ಕಳು ಸುರಕ್ಷಿತವಾಗಿ ಮನೆಗೆ ಹಿಂದಿರುಗುವ ಗ್ಯಾರಂಟಿ ಯಾವಾಗ ಕೊಡ್ತೀರಿ? – ಸಿಎಂಗೆ ಸಿ.ಟಿ ರವಿ ಪ್ರಶ್ನೆ

    ಕಿಮ್ಸ್ ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ, ಬೆಲ್ಲದ್ ಟೆಂಗಿನಕಾಯಿ ಭೇಟಿ ಕೊಟ್ಟು ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣದಿಂದಲೇ ಇಂಥ ಘಟನೆ ನಡೆದಿದೆ. ಸರ್ಕಾರ ತಮ್ಮ ಬೆಂಬಲಕ್ಕಿದೆಯೆಂದು ಇಂತಹ ಘಟನೆ ಮರುಕಳಿಸುತ್ತವೆ. ಹಾಡಹಗಲೇ ಕೊಲೆ ಮಾಡುವ ಮನಸ್ಥಿತಿಗೆ ತಲುಪಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ಅಗಬೇಕು ಎಂದು ಆಗ್ರಹಿಸಿದರು.

  • ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್‍ಲೈನ್ಸ್

    ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್‍ಲೈನ್ಸ್

    ಬೆಂಗಳೂರು: ಪ್ರತಿಷ್ಠಿತ ಕಾಲೇಜು ಅವರಣ (College Campus) ದಲ್ಲಿ ನಡೆದ ವಿದ್ಯಾರ್ಥಿನಿ ಲಯಸ್ಮಿತಾ ಕೊಲೆ ಇಡೀ ಬೆಂಗಳೂರನ್ನೆ ನಡುಗಿಸಿತ್ತು. ಕಾಲೇಜಿಗೆ ತಮ್ಮ ಮಕ್ಕಳನ್ನ ಕಳುಹಿಸಲು ಪೋಷಕರು ಭಯಪಡುವಂತಾಗಿತ್ತು. ಇದರಿಂದ ಎಚ್ಚೆತ್ತಿರುವ ಪೊಲೀಸರು ಇಲಾಖೆ ಬೆಂಗಳೂರು ಗ್ರಾಮಾಂತರದ ಠಾಣಾ ವ್ಯಾಪ್ತಿಗಳಲ್ಲಿ ಬರುವ ಎಲ್ಲಾ ಕಾಲೇಜುಗಳಿಗೆ ಹೊಸ ಗೈಡ್ ಲೈನ್ (New Guidelines For College) ಹೊರಡಿಸಿದೆ. ಕಾಲೇಜು ಆಡಳಿತ ಮಂಡಳಿಗಳು ಇನ್ಮುಂದೆ ಈ ಹೊಸ ಗೈಡ್ ಲೈನ್ಸ್ ಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪೊಲೀಸರು ತಾಕೀತು ಮಾಡಿದ್ದಾರೆ.

    ಲಯಸ್ಮಿತಾ (Layasmitha) ಕೊಲೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡು ಬಂದಿದ್ದರಿಂದ ಪೊಲೀಸರು ಒಂದಷ್ಟು ಅಂಶಗಳನ್ನ ಫೈಂಡೌಟ್ ಮಾಡಿ ಪಬ್ಲಿಕ್ ಸೇಪ್ಟಿ ಆಕ್ಟ್ ಅಡಿಯಲ್ಲಿ ಹೊಸ ಗೈಡ್ ಲೈನ್ ಹೊರಡಿಸಿದ್ದಾರೆ. ಇದನ್ನೂ ಓದಿ: ನಗರ ಭಾಗದಲ್ಲೂ ಕಂಬಳ ಕಹಳೆ- ಕಾಂತಾರದಿಂದ ಮತ್ತಷ್ಟು ರಂಗೇರಿದ ಹವಾ

    ಕಾಲೇಜುಗಳಿಗೆ ನಯಾ ಗೈಡ್‍ಲೈನ್ಸ್: ಕಾಲೇಜು ಅವರಣದಲ್ಲಿ, ಪಾರ್ಕಿಂಗ್ ಲಾಟ್‍ನಲ್ಲಿ ಸಿಸಿಟಿವಿ ಕಡ್ಡಾಯವಾಗಿರಬೇಕು. ಹೊರಗಡೆಯಿಂದ ಬೈಕ್‍ನಲ್ಲಿ ಬರುವವರನ್ನ ಪರಿಶೀಲಿಸಬೇಕು. ಎಂಟ್ರಿ-ಎಕ್ಸಿಟ್ ಗೇಟ್‍ನಲ್ಲಿ ಭದ್ರತೆಯನ್ನ ಹೆಚ್ಚಿಸಿ ಕೊಡಬೇಕು. ಐಡಿ ಕಾರ್ಡ್ ಇರದೇ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಾರದು. ಗಲಾಟೆ ಸಂದರ್ಭ ಎದುರಾದರೆ ಪೊಲೀಸರಿಗೆ ತಿಳಿಸಬೇಕು. ಇಷ್ಟಲ್ಲದೇ ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸರು ಕೂಡ ಪಬ್ಲಿಕ್ ಸೆಪ್ಟಿ ಆಕ್ಟ್ ಅಡಿಯಲ್ಲಿ ಸೂಕ್ತ ಭದ್ರತೆಗೆ ಸಿದ್ಧಮಾಡಿಕೊಂಡಿದ್ದಾರೆ.

    ಹೀಗೆ ಲಯಸ್ಮಿತಾ ಕೊಲೆಯ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಖಾಕಿ ಪಡೆ ಹೊಸ ಗೈಡ್ ಲೈನ್ಸ್ ಹೊರಡಿಸಿದೆ. ಹಾಗೆ ಕಡ್ಡಾಯವಾಗಿ ಎಲ್ಲಾ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಗೈಡ್‍ಲೈನ್ಸ್ ಪಾಲನೆ ಮಾಡಬೇಕು. ಒಂದು ವೇಳೆ ಗೈಡ್‍ಲೈನ್ಸ್ ಉಲ್ಲಂಘನೆ ಮಾಡುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನ ಪೊಲೀಸರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗಳನ್ನು ಕಾಲೇಜಿಗೆ ಬಿಡಲು ಗಳಗಳನೇ ಅತ್ತ ತಂದೆ – ಹೃದಯಸ್ಪರ್ಶಿ ವೀಡಿಯೋ ವೈರಲ್

    ಮಗಳನ್ನು ಕಾಲೇಜಿಗೆ ಬಿಡಲು ಗಳಗಳನೇ ಅತ್ತ ತಂದೆ – ಹೃದಯಸ್ಪರ್ಶಿ ವೀಡಿಯೋ ವೈರಲ್

    ನವದೆಹಲಿ: ತಂದೆ-ಮಗಳ ಬಾಂಧವ್ಯ ಮಧುರವಾದದ್ದು, ಆಕೆ ಕೇಳಿದನ್ನೆಲ್ಲಾ ಕೊಡಿಸುವ, ಆಕೆಯ ಆಸೆ, ಕನಸುಗಳನ್ನು ಈಡೇರಿಸುವ, ಅವಳ ಭವಿಷ್ಯಕ್ಕಾಗಿ ಹಗಲಿರುಳು ದುಡಿಯುವ ಶ್ರಮ ಜೀವಿ ಎಂದರೆ ಅದು ಅಪ್ಪ. ಸದಾ ಅವಳ ಬೆನ್ನುಲುಬಾಗಿ ನಿಂತು, ಬೆಂಬಲ ಹಾಗೂ ಪ್ರೋತ್ಸಾಹ ನೀಡುವ ತಂದೆಯೇ ಮಗಳಿಗೆ ಮೊದಲ ಹೀರೋ. ತಂದೆ-ಮಗಳ ಬಾಂಧವ್ಯ ಗಟ್ಟಿಯಾದರೆ, ಅದು ಮಗಳ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿದಂತೆ. ಆಕೆಯ ಬದುಕಿನಲ್ಲಿ ಇದರಿಂದ ಹೆಚ್ಚುವರಿ ಲಾಭಗಳಾದರೆ, ತಂದೆಯೂ ಸವಿನೆನಪಿನ ಬುತ್ತಿ ಹೊತ್ತು ಸಾಗಬಹುದು. ಸದ್ಯ ತಂದೆ ಮಗಳ ಬಾಂಧವ್ಯ ಎಷ್ಟು ಗಾಢವಾಗಿರುತ್ತದೆ ಎಂಬುವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೋ ಮತ್ತೊಂದು ಸಾಕ್ಷಿ ಎಂದೇ ಹೇಳಬಹುದು.

    ಹೌದು, ಮೊದಲ ಬಾರಿಗೆ ಮಗಳನ್ನು ಕಾಲೇಜಿಗೆ ಬಿಡಲು ಹೋಗುವಾಗ ತಂದೆಯೊಬ್ಬ ದಾರಿಯುದ್ದಕ್ಕೂ ಗಳಗಳನೇ ಅಳುತ್ತಿರುವ ಭಾವನಾತ್ಮಕ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವೀಡಿಯೋವನ್ನು ಪ್ರೇಕ್ಷ ಅವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬಹಳ ದಿನದಿಂದ ನಾನು ಕನಸ್ಸು ಹೊಂದಿದ್ದ ಮಿರಾಂಡಾ ಹೌಸ್ ಕಾಲೇಜ್ (Miranda House College), ದೆಹಲಿ ವಿಶ್ವವಿದ್ಯಾಲಯಕ್ಕೆ (Delhi University) ನನ್ನನ್ನು ಬಿಡಲು ಪೋಷಕರು ಬಂದಿದ್ದರು. ಮೊದಲ ಬಾರಿಗೆ ಕಾಲೇಜಿಗೆ ಹೋಗುತ್ತಿದ್ದರಿಂದ ಕಾಲೇಜಿನ ಕ್ಯಾಂಪಸ್ ನೋಡಲು ನನ್ನ ಜೊತೆಯಲ್ಲೇ ಬರುತ್ತಿದ್ದ ವೇಳೆ, ಇದ್ದಕ್ಕಿದ್ದಂತೆ ನನ್ನ ತಂದೆಯ ಕಣ್ಣುಗಳಲ್ಲು ಕಣ್ಣೀರು ಬರುತ್ತಿರುವುದನ್ನು ಗಮನಿಸಿದೆ.

     

    View this post on Instagram

     

    A post shared by Preksha (@pre.xsha)

    ಅವರು ಸಂತಸದ ಅಲೆಯಲ್ಲಿ ಮುಗಿದ್ದರು. ಅವರ ಭಾವನೆಗಳು ಹೇಳ ತೀರದ್ದು. ನಾನು ಮಾಡಿದ ಎಲ್ಲಾ ತ್ಯಾಗ, ಶ್ರಮದಿಂದ ಇಂದು ಇಂದು ಕನಸು ನನಸಾಗುತ್ತಿದೆ. ಕೊನೆಗೂ ಪ್ರತಿಯೊಂದು ಇಂದಿಗೆ ಸಾರ್ಥಕವಾಯಿತು ಎಂಬುವುದು ಅವರ ಕಣ್ಣಿನಲ್ಲಿ ಕಾಣಿಸುತ್ತಿತ್ತು. ನಿಮ್ಮ ನಗು ಮುಖ ಮತ್ತು ಕಾಂತಿಯ ಕಣ್ಣುಗಳನ್ನು ನೋಡಲು ನಾನು ಏನು ಬೇಕಾದರೂ ಮಾಡುತ್ತೇನೆ ಅಂತ ಮಾತ್ರ ನಾನು ಹೇಳಬಲ್ಲೇ. ಧನ್ಯವಾದಗಳು ಅಪ್ಪ, ಅಪ್ಪ. ಐ ಲವ್ ಯೂ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಂಟು ಮಿಲಿಯನ್‍ಗಿಂತಲೂ ಹೆಚ್ಚು ಮಂದಿ ವೀಕ್ಷಿಸಿದ್ದು, 958,000ಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಜೊತೆಗೆ ತಂದೆ, ಮಗಳ ಬಾಂಧವ್ಯಕ್ಕೆ ಮನಸೋತ ನೆಟ್ಟಿಗರಿಂದ ಕಾಮೆಂಟ್‍ಗಳ ಸುರಿಮಳೆಯೇ ಹರಿದುಬರುತ್ತಿದೆ. ಇದನ್ನೂ ಓದಿ: ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    Live Tv
    [brid partner=56869869 player=32851 video=960834 autoplay=true]

  • ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ

    ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ

    ಚೆನ್ನೈ: ಕೆಲವೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ‌ (Social Media) ಕಂಡು ಬರುವ ಮುಗ್ದ ಪ್ರಾಣಿಗಳ ವೀಡಿಯೋಗಳು (Animal Video) ಜನರನ್ನು ನಕ್ಕು ನಗಿಸದೇ ಇರಲಾರದು. ಪ್ರಾಣಿಗಳ ಆಟಾಟೋಪಗಳನ್ನು ನೋಡುವುದು ಜನರ ಖಿನ್ನತೆಗೆ ರಾಮಬಾಣವೂ ಹೌದು. ಇಂತಹುದೇ ಒಂದು ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಎಂದಾದರೂ ನೀವು ಜಿಂಕೆಯ (Deer) ಮೇಲೆ ಕೋತಿ (Monkey) ಸವಾರಿ ಮಾಡಿರುವುದನ್ನು ನೋಡಿದ್ದೀರಾ? ಇಲ್ಲ ಎಂದಾದರೆ ಇಲ್ಲೊಂದು ಅಂತಹುದೇ ವೀಡಿಯೋ ವೈರಲ್ ಆಗುತ್ತಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (IIT Madras) ಕ್ಯಾಂಪಸ್‌ನಲ್ಲಿ ಸೆರೆಹಿಡಿಯಲಾದ ಈ ವೀಡಿಯೋ ನೆಟ್ಟಿಗರ ಮನ ಗೆದ್ದಿದೆ.

    ವೀಡಿಯೋದಲ್ಲಿ ಜಿಂಕೆಯೊಂದು ಕ್ಯಾಂಪಸ್‌ನ ಕಟ್ಟಡಗಳ ಸಮೀಪ ಹುಲ್ಲನ್ನು ಮೇಯಲು ಅಡ್ಡಾಡುತ್ತಿದೆ. ಅದರ ಮೇಲೆ ಆರಾಮವಾಗಿ ಕುಳಿತ ಕೋತಿಯೊಂದು ಆ ಗಳಿಗೆಯನ್ನು ಆನಂದಿಸುತ್ತಿದೆ. ತನ್ನ ಮೇಲೆ ಮಂಗ ಸವಾರಿ ಮಾಡುತ್ತಿದ್ದರೂ ಜಿಂಕೆ ಕಿಂಚಿತ್ತೂ ವಿಚಲಿತವಾಗದೇ ಹಾಯಾಗಿ ಓಡಾಡಿಕೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿ `108′ ಸಮಸ್ಯೆ – 2 ತಿಂಗಳಲ್ಲಿ ಬಗೆಹರಿಯಲಿದೆ ಎಂದ ಸುಧಾಕರ್

    ಇದೀಗ ವೀಡಿಯೋ ಭಾರೀ ವೈರಲ್ ಆಗುತ್ತಿರುವುದು ಮಾತ್ರವಲ್ಲದೇ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಐಐಟಿ ಮದ್ರಾಸ್‌ನಲ್ಲಿ ಮಂಗಗಳು ಹೀಗಿರುತ್ತವೆ ಎಂದು ಕೆಲವರು ಹೇಳಿದರೆ, ಇನ್ನೊಬ್ಬರು, ಮಂಗಗಳು ಮನುಷ್ಯರಂತೆ ಪ್ರಾಣಿಗಳ ಮೇಲೆ ಸವಾರಿ ಮಾಡಲು ಹೇಗೆ ಸಾಧ್ಯ ಎಂದು ಆಶ್ಚರ್ಯಪಟ್ಟಿದ್ದಾರೆ. ಇನ್ನೊಬ್ಬರು ಅದು ಐಐಟಿ ಕ್ಯಾಂಪಸ್‌ನ ಮಂಗ, ಹೀಗಾಗಿ ಇಷ್ಟೊಂದು ಸ್ಮಾರ್ಟ್ ಆಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

    ಐಐಟಿ ಮದ್ರಾಸ್ ಕ್ಯಾಂಪಸ್ ಅನ್ನು ಚೆನ್ನೈನ ಗಿಂಡಿ ರಾಷ್ಟ್ರೀಯ ಉದ್ಯಾನವನದ ಬಳಿ ನಿರ್ಮಿಸಲಾಗಿದ್ದು, ಅದರ ಹೆಚ್ಚಿನ ಭಾಗ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ. ಹೀಗಾಗಿ ಅಲ್ಲಿನ ಕ್ಯಾಂಪಸ್‌ನಲ್ಲಿ ಜಿಂಕೆ, ಕೋತಿ ಸೇರಿದಂತೆ ಅನೇಕ ಜಾತಿಯ ಪ್ರಾಣಿಗಳು ಕಂಡುಬರುವುದು ಸರ್ವೇಸಾಮಾನ್ಯವಾಗಿದೆ. ಇದನ್ನೂ ಓದಿ: ಅಪ್ಪು ಗುಣಗಳನ್ನ ಅಳವಡಿಸಿಕೊಳ್ಳಬೇಕು ಎಂದು ಫ್ಯಾನ್ಸ್‌ಗೆ ಉಪ್ಪಿ ಸಂದೇಶ

    Live Tv
    [brid partner=56869869 player=32851 video=960834 autoplay=true]

  • ಕಾಲೇಜ್ ಕ್ಯಾಂಪಸ್‍ನಲ್ಲಿ ನಮಾಜ್ ಮಾಡಿದ ಶಿಕ್ಷಕ-  ಕ್ರಮಕ್ಕೆ ಯುವ ಬಿಜೆಪಿ ಆಗ್ರಹ

    ಕಾಲೇಜ್ ಕ್ಯಾಂಪಸ್‍ನಲ್ಲಿ ನಮಾಜ್ ಮಾಡಿದ ಶಿಕ್ಷಕ- ಕ್ರಮಕ್ಕೆ ಯುವ ಬಿಜೆಪಿ ಆಗ್ರಹ

    ಲಕ್ನೋ: ಅಲಿಗಢದ ಕಾಲೇಜು ಕ್ಯಾಂಪಸ್‍ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ ಹರಿದಾಡುತ್ತಿದೆ. ವೀಡಿಯೋ ನೋಡಿದ ಬಿಜೆಪಿ ಯುವ ಮೋರ್ಚಾ ಮುಖಂಡರು ಇದಕ್ಕೆ ಆಕ್ಷೀಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮೋರ್ಚಾದ ಮಹಾನಗರ ಘಟಕದ ಉಪಾಧ್ಯಕ್ಷ ಅಮಿತ್ ಗೋಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ಮೇ 27 ರಂದು ಅಲಿಗಢದ ಶ್ರೀವರ್ಷಿಣಿ ಕಾಲೇಜಿಗೆ ಆಗಮಿಸಿ, ಈ ಕುರಿತು ವಿಚಾರಣೆ ನಡೆಸಿದ್ದಾರೆ. ಅದಕ್ಕೆ ಕಾಲೇಜು ಪ್ರಾಂಶುಪಾಲರು, ಸಮಿತಿ ರಚಿಸಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರ ಮುಖ ಮಾತ್ರ ರಾಮನದ್ದು, ಬುದ್ಧಿ ರಾವಣನದು: ಕಟೀಲ್

    ಈ ಕುರಿತು ಮಾತನಾಡಿದ ಅಮಿತ್ ಗೋಸ್ವಾಮಿ, ಇದು ನಮಾಜ್ ಓದಲು ಧಾರ್ಮಿಕ ಸ್ಥಳವಲ್ಲ. ಪ್ರಾಧ್ಯಾಪಕರು ಮಕ್ಕಳಿಗೆ ತರಗತಿ ಮಾಡುವುದನ್ನು ಬಿಟ್ಟು, ಶಿಕ್ಷಣ ಸಂಸ್ಥೆಯಲ್ಲಿ ಪ್ರಾರ್ಥನೆ ಸಲ್ಲಿಸುವುದು ಹೇಗೆ? ಹಿಂದೂಗಳು, ಮುಸ್ಲಿಮರು, ಸಿಖ್ಖರು ಸೇರಿದಂತೆ ಎಲ್ಲ ಧರ್ಮೀಯರು ಶಿಕ್ಷಣ ಸಂಸ್ಥೆಗಳಿಗೆ ಬರುವುದರಿಂದ ಅವರನ್ನೂ ಸಮಾನವಾಗಿ ಪರಿಗಣಿಸಬೇಕು. ಅದಕ್ಕೆ ನಮಾಜ್ ಮಾಡಿದ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸದರು.

    ಪರಿಸ್ಥಿತಿಯ ಬಗ್ಗೆ ವಿವರಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ಅನಿಲ್ ಕುಮಾರ್ ಗುಪ್ತಾ, ಈ ವಿಷಯಕ್ಕೆ ಸಂಬಂಧಿಸಿದಂತೆ, ನಾನು 28 ರಂದು ಬೆಳಗ್ಗೆ ಪ್ರಯಾಗ್‍ರಾಜ್‍ನಿಂದ ಹಿಂತಿರುಗಿದ್ದೇನೆ. ನಾನು ನನ್ನ ಹಾಲಿ ಪ್ರಾಂಶುಪಾಲರನ್ನು ಕರೆದು ವಿಷಯದ ಬಗ್ಗೆ ವಿಚಾರಿಸುತ್ತೇನೆ. ಈ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು. ಮುಂದೆ ಇಂತಹ ಧಾರ್ಮಿಕ ವಿವಾದ ಸೃಷ್ಟಿಯಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡುತ್ತೇನೆ ಎಂದರು. ಇದನ್ನೂ ಓದಿ:  29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್ 

  • ದೇಶ ವಿದೇಶಗಳಿಂದ ಬಂದ ಲಕ್ಷಾಂತರ ವಿದ್ಯಾರ್ಥಿಗಳಿಂದ ಕಾಲೇಜ್ ಕ್ಯಾಂಪಸ್‍ ನಲ್ಲೇ ದೀಪಾವಳಿ ಆಚರಣೆ

    ದೇಶ ವಿದೇಶಗಳಿಂದ ಬಂದ ಲಕ್ಷಾಂತರ ವಿದ್ಯಾರ್ಥಿಗಳಿಂದ ಕಾಲೇಜ್ ಕ್ಯಾಂಪಸ್‍ ನಲ್ಲೇ ದೀಪಾವಳಿ ಆಚರಣೆ

    ಮಂಗಳೂರು: ಜಿಲ್ಲೆಗೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಇವರೆಲ್ಲರಿಗೂ ದೀಪಾವಳಿಯ ಸಂಭ್ರಮ ಮನೆಯವರ ಜೊತೆ ಇರಲ್ಲ. ಅದಕ್ಕೆ ಶಿಕ್ಷಣ ಸಂಸ್ಥೆಗಳು ಕಾಲೇಜು ಕ್ಯಾಂಪಸ್‍ ನಲ್ಲೇ ದೀಪಾವಳಿ ಆಚರಣೆ ಮಾಡುತ್ತಾರೆ.

    ನೋಡಿ, ನಿಜವಾದ ದೀಪಾವಳಿ ಅಂದರೆ ಇದಲ್ವಾ. ಈ ದೃಶ್ಯ ಕಂಡುಬಂದಿದ್ದು ಮಂಗಳೂರಿನ ಕೊಟ್ಟಾರದ ಕರಾವಳಿ ಗ್ರೂಪ್ ಆಫ್ ಕಾಲೇಜ್‍ ನಲ್ಲಿ. ದೀಪಾವಳಿ ರಜೆಯಲ್ಲಿ ಊರಿಗೆ ಹೋಗಲಾಗದ ವಿದ್ಯಾರ್ಥಿಗಳು ವ್ಯಥೆ ಪಡಬಾರದೆಂದು ಕಾಲೇಜಿನ ಆವರಣದಲ್ಲೇ ಅದ್ಧೂರಿಯಾಗಿ ದೀಪಾವಳಿ ಆಚರಣೆ ಮಾಡಿದ್ರು. ದೀಪ ಹಚ್ಚೋದ್ರ ಜೊತೆ ಭರ್ಜರಿಯಾಗಿ ಡ್ಯಾನ್ಸ್ ಕೂಡ ಮಾಡಿದ್ರು.

    ಕೆಲವರು ಜಾನಪದ ಹಾಡಿಗೆ ಹೆಜ್ಜೆ ಹಾಕಿದ್ರೆ, ಇನ್ನೂ ಕೆಲವರು ಸಿನಿಮಾ ಹಾಡಿಗೆ ಮೈ-ಕೈ ಕುಣಿಸಿದ್ರು, ಡ್ರಾಮಾ ಮಾಡಿದ್ರು. ಜಾತಿ-ಮತದ ಬೇಧ ಮರೆತು ದೀಪ ಉರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ಪರಿಸರ ಮಾಲಿನ್ಯ ಆಗಬಾರದು ಅಂತ ಸಣ್ಣ ಪ್ರಮಾಣದಲ್ಲಿ ಪಟಾಕಿ ಸಿಡಿಸಿ ಖುಷಿಪಟ್ರು.