Tag: Colonel

  • ಮಣಿಪುರದಲ್ಲಿ ಉಗ್ರರ ದಾಳಿ – ಕರ್ನಲ್‌, ಪತ್ನಿ, ಮಗ ಸೇರಿ 7 ಮಂದಿ ಬಲಿ

    ಮಣಿಪುರದಲ್ಲಿ ಉಗ್ರರ ದಾಳಿ – ಕರ್ನಲ್‌, ಪತ್ನಿ, ಮಗ ಸೇರಿ 7 ಮಂದಿ ಬಲಿ

    ಇಂಫಾಲ: ಉಗ್ರರು ಹೊಂಚುಹಾಕಿ ನಡೆಸಿದ ದಾಳಿಯಲ್ಲಿ ಮೂವರು ಯೋಧರು ಸಹಿತ ಅಸ್ಸಾಂ 46 ಕಮಾಂಡಿಂಗ್ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಮಣಿಪುರದ ಸಿಂಘಾತ್‍ನಲ್ಲಿ ನಡೆದಿದೆ.

    ಮಣಿಪುರ ಮೂಲದ ಉಗ್ರರ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಇದ್ದು, ಉಗ್ರರ ಗುಂಪು ಏಕಾಏಕಿ ಯೋಧರ ಮೇಲೆ ದಾಳಿ ಆರಂಭಿಸಿದೆ ದಾಳಿಯಲ್ಲಿ 7 ಜನ ಮೃತಪಟ್ಟಿದ್ದು, 3 ಮಂದಿ ಯೋಧರು ತೀವ್ರ ಗಾಯಗೊಂಡು ಸ್ಥಳೀಯ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯವರ 4 ಗಂಟೆ ಭೇಟಿಗೆ 23 ಕೋಟಿ ಖರ್ಚು- ಮಧ್ಯಪ್ರದೇಶ ಸರ್ಕಾರ

    ದಾಳಿಯ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, 46 ಅಸ್ಸಾಂ ರೈಫಲ್ಸ್ ಮೇಲೆ ಉಗ್ರರು ಹೇಡಿತನದಿಂದ ಹೊಂಚುಹಾಕಿ ದಾಳಿ ಮಾಡಿದ್ದು ಖಂಡನೀಯ. ಸಿಸಿಪುರದಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್ ಅಧಿಕಾರಿ ಮತ್ತು ಅವರ ಕುಟುಂಬ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದು, ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭಧ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಚರಣೆ ಆರಂಭಿಸಿದ್ದಾರೆ. ತಪ್ಪಿಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.  ಇದನ್ನೂ ಓದಿ: ಬೇರೆ ಗುಂಪಿನ ರಕ್ತ ಹಾಕಿದ ವೈದ್ಯರು – ಯುವತಿ ಸಾವು

  • ಗೆಳೆಯನ ಪತ್ನಿಯನ್ನ ನೋಡ್ತಿದ್ದಂತೆ ಕಾಮ ಪಿಶಾಚಿಯಾದ ಕರ್ನಲ್

    ಗೆಳೆಯನ ಪತ್ನಿಯನ್ನ ನೋಡ್ತಿದ್ದಂತೆ ಕಾಮ ಪಿಶಾಚಿಯಾದ ಕರ್ನಲ್

    – ಗೆಳೆಯನಿಗೆ ನಶೆ ಪದಾರ್ಥ ನೀಡಿ, ಪತ್ನಿಯ ಮೇಲೆ ರೇಪ್

    ಲಕ್ನೋ: ಮನೆಗೆ ಪತ್ನಿ ಜೊತೆ ಬಂದ ಗೆಳೆಯನಿಗೆ ಮದ್ಯದಲ್ಲಿ ನಶೆ ಪದಾರ್ಥ ನೀಡಿ, ಮಹಿಳೆಯನ್ನ ಅತ್ಯಾಚಾರಗೈದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರನಲ್ಲಿ ನಡೆದಿದೆ. ಪತ್ನಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪತಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸೆಂಟ್ರಲ್ ಆರ್ಡಿನೆನ್ಸ್ ಡಿಪಾರ್ಟ್‍ಮೆಂಟ್ ಕರ್ನಲ್ ಗೆಳೆಯನ ಪತ್ನಿಯನ್ನ ಅತ್ಯಾಚಾರಗೈದ ಆರೋಪಿ. ಕೆಲ ದಿನಗಳ ಹಿಂದೆ ಕರ್ನಲ್ ತನ್ನ ಸರ್ಕಾರಿ ಬಂಗಲೆಗೆ ಗೆಳೆಯ ಮತ್ತು ಆತನ ಪತ್ನಿಯನ್ನ ಔತಣಕೂಟಕ್ಕೆ ಆಹ್ವಾನಿಸಿದ್ದನು. ಗೆಳೆಯನ ಪತ್ನಿಯನ್ನ ನೋಡುತ್ತಿದ್ದಂತೆ ವಿಕೃತನಾದ ಕರ್ನಲ್ ಮದ್ಯದಲ್ಲಿ ನಶೆ ಪದಾರ್ಥ ಸೇರಿಸಿ ಸ್ನೇಹಿತನಿಗೆ ನೀಡಿದ್ದಾನೆ. ಇನ್ನು ಮದ್ಯ ಸೇವಿಸಿದ ಗೆಳೆಯ ನಿದ್ದೆಗೆ ಜಾರುತ್ತಿದ್ದಂತೆ ಆತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಸಂತ್ರಸ್ತೆ ಪತಿ ದೂರಿನನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧಿಸುವ ಪ್ರಯತ್ನದಲ್ಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನ ರಚಿಸಲಾಗಿದೆ. ರಾತ್ರಿ ಸುಮಾರು 9 ಗಂಟೆಗೆ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ ಎಂದು ಕಾನ್ಪುರ ಎಸ್.ಪಿ. ರಾಜಕುಮಾರ್ ಅಗರ್ವಾಲ್ ಹೇಳಿದ್ದಾರೆ.

  • ಗಡಿಯಲ್ಲಿ ಮತ್ತೆ ಉಗ್ರರ ಪುಂಡಾಟ- ಕರ್ನಲ್, ಮೇಜರ್ ಸೇರಿ ಐವರು ಯೋಧರು ಹುತಾತ್ಮ

    ಗಡಿಯಲ್ಲಿ ಮತ್ತೆ ಉಗ್ರರ ಪುಂಡಾಟ- ಕರ್ನಲ್, ಮೇಜರ್ ಸೇರಿ ಐವರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

    ಕರ್ನಲ್ ಆಶುತೋಷ್ ಶರ್ಮಾ, ಮೇಜರ್ ಅಂಜು, ಓರ್ವ ಲ್ಯಾನ್ಸ್ ನಾಯ್ಕ್, ರೈಫಲ್ ಮ್ಯಾನ್ ಹಾಗೂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾದವರು. ಉಗ್ರರು ಭಾರತೀಯ ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಘಟನೆ ನಡೆದಿದೆ. ಇದನ್ನೂ ಓದಿ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು, ಓರ್ವ ಸಹಚರನನ್ನು ಸದೆಬಡಿದ ಸೇನೆ

    ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರದ ಚಂಜ್‍ಮುಲ್ಲಾ ಪ್ರದೇಶದಲ್ಲಿ ಶನಿವಾರ ರಾತ್ರಿ ಉಗ್ರರು ಗುಂಡಿ ದಾಳಿ ನಡೆಸಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅಲ್ಲಿನ ನಾಗರಿಕರ ರಕ್ಷಣೆಗೆ ಮುಂದಾಗಿತ್ತು. ಆದರೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡ ಐವರು ಭದ್ರತಾ ಸಿಬ್ಬಂದಿ ಕೊನೆಯುಸಿರೆಳೆದಿದ್ದಾರೆ.

    ಕುಪ್ವಾರಾ ಜಿಲ್ಲೆಯ ಚಂದಿಮುಲ್ಲಾದಲ್ಲಿರುವ ಜನರನ್ನು ಒತ್ತೆಯಾಳು ಮಾಡಿಕೊಳ್ಳಲು ಉಗ್ರರು ಕರೆದೊಯ್ಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದರು. ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ತಂಡವು ಚಂದಿಮುಲ್ಲಾ ಪ್ರದೇಶದಿಂದ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ ಕಾರ್ಯಾಚರಣೆಯಲ್ಲಿ ಕರ್ನಲ್ ಆಶುತೋಷ್ ಶರ್ಮಾ, ಮೇಜರ್ ಅಂಜು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

    ಆಶುತೋಷ್ ಶರ್ಮಾ ಅವರು 21 ರಾಷ್ಟ್ರೀಯ ರೈಫಲ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಗಡಿಯಲ್ಲಿ ಒಳನುಸುಳುತ್ತಿರುವ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹೀರೋ ಎಂದು ಗುರುತಿಸಿಕೊಂಡಿದ್ದರು. ಈ ಹಿಂದೆ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆಶುತೋಷ್ ಶರ್ಮಾ ಅವರ ಕೂಡುಗೆ ಮಹತ್ವದ್ದಾಗಿತ್ತು.

  • ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ

    ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ

    ಮೀರತ್: ನಿವೃತ್ತ ಕರ್ನಲ್ ಮನೆಗೆ ಕಂದಾಯ ಗುಪ್ತಚರ ಮಹಾ ನಿರ್ದೇಶನಾಲಯ(ಡಿಆರ್‍ಐ) ದಾಳಿ ನಡೆಸಿ ಭಾರೀ ಪ್ರಮಾಣದ ಆಯುಧಗಳನ್ನು ವಶಪಡಿಸಿಕೊಂಡಿದೆ.

    ಶನಿವಾರ ಉತ್ತರಪ್ರದೇಶದ ಮೀರತ್ ನಲ್ಲಿರುವ ನಿವೃತ್ತ ಕರ್ನಲ್ ದೇವೇಂದ್ರ ಸಿಂಗ್ ನಿವಾಸದ ಮೇಲೆ ಡಿಆರ್‍ಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿ ವೇಳೆ 40 ರೈಫಲ್, 50 ಸಾವಿರ ಮದ್ದುಗುಂಡುಗಳು, ಪಿಸ್ತೂಲ್, 1 ಕೋಟಿ ರೂ. ನಗದು ಹಣ ಸಿಕ್ಕಿದೆ.

    16 ಗಂಟೆಗಳ ಪರಿಶೀಲನೆಯಲ್ಲಿ ಕಂಟೈನರ್‍ನಲ್ಲಿ ತುಂಬಿದ್ದ 117 ಕೆಜಿ ಮಾಂಸ, ಪ್ರಾಣಿಗಳ ತಲೆಬುರಡೆಗಳು, ಕೊಂಬುಗಳು, ಚರ್ಮಗಳು ಸಿಕ್ಕಿವೆ.

    ಬೆಳಗ್ಗೆ ದಾಳಿ ನಡೆಸಿದ್ದು, ಈ ವೇಳೆ ವಿದೇಶಿ ರೈಫಲ್ ಗಳು ಸಿಕ್ಕಿದೆ. ಈ ರೈಫಲ್‍ಗಳಿಗೆ ಯಾವುದೇ ಲೈಸನ್ಸ್ ಇಲ್ಲ. ಇದೇ ವೇಳೆ ಮಗನಾಗಿರುವ ರಾಷ್ಟ್ರಮಟ್ಟದ ಶೂಟರ್ ಪ್ರಶಾಂತ್ ಬಿಶ್ನೋಯಿ ಬಗ್ಗೆ ವಿಚಾರಿಸಿದ್ದು, ದೇವೇಂದ್ರ ಸಿಂಗ್ ಯಾವುದೇ ಮಾಹಿತಿ ನೀಡಿಲ್ಲ. ಆತ ದಾಳಿ ನಡೆದ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

    ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ. ದಾಳಿ ನಡೆಯುವ ಕೆಲವೇ ಕ್ಷಣಗಳ ಮೊದಲು ಪ್ರಶಾಂತ್ ಬಿಶ್ನೋಯಿ ಮನೆಯಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.