Tag: Columbia Asia

  • ದರ್ಶನ್ ಆರೋಗ್ಯ ಸ್ಥಿರ: ಹೆಲ್ತ್ ಬುಲೆಟಿನ್ ಬಿಡುಗಡೆ

    ದರ್ಶನ್ ಆರೋಗ್ಯ ಸ್ಥಿರ: ಹೆಲ್ತ್ ಬುಲೆಟಿನ್ ಬಿಡುಗಡೆ

    ಮೈಸೂರು: ಅನಾರೋಗ್ಯದ ಕಾರಣ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಆರೋಗ್ಯ ಕುರಿತು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

    ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರೋ ಎಂಟರಾಲಜಿಸ್ಟ್ ತಜ್ಞರಾದ ಡಾ.ಅನೂಪ್ ಆಳ್ವಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇಂದು ಮುಂಜಾನೆ 4 ಗಂಟೆ ವೇಳೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸ್ಪೆಷಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಗ್ರಾಸ್ಟ್ರಿಕ್ ಪರಿಣಾಮ ತೀವ್ರ ತರವಾದ ಹೊಟ್ಟೆನೋವಿನಿಂದಾಗಿ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದರ್ಶನ್ ಅವರಿಗೆ ಒಂದು ದಿನ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಆಸ್ಪತ್ರೆಯಲ್ಲೇ ಡಿ ಬಾಸ್ ಉಳಿದಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನ ವಿಶ್ರಾಂತಿ ಪಡೆಯುತ್ತಿದ್ದಾರೆ.

  • ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

    ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

    ಮೈಸೂರು: ಹಲ್ಲೆಗೆ ಒಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಿನ್ನೆ ರಾತ್ರಿಯಿಂದ ಶಾಸಕರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆದು ಹಾಕಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಭಾನುವಾರ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿದ್ದ ತನ್ವೀರ್ ಸೇಠ್ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿತ್ತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರಗೆ ದಾಖಲು ಮಾಡಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯರು ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟಿದ್ದರು.

    ಈ ವಿಚಾರವಾಗಿ ಸೋಮವಾರ ಮಾತನಾಡಿದ್ದ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯ ಡಾ ಉಪೇಂದ್ರ ಶಣೈ, ಅವರಿಗೆ ಕುತ್ತಿಗೆ ಭಾಗಕ್ಕೆ ಚಾಕು ಹಾಕಿರುವ ಕಾರಣ ತೀವ್ರವಾಗಿ ಪೆಟ್ಟಾಗಿದೆ. ಅವರ ರಕ್ತನಾಳ ನರಗಳಿಗೆ ತೀವ್ರ ಗಾಯವಾಗಿದೆ. ಬಿಪಿ ಶುಗರ್ ಅನ್ನು ಸಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಆಗಲೇ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದೇವೆ. ಮುಂದಿನ 48 ಗಂಟೆಯವರೆಗೂ ಏನನನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

    ಇಂದು ಆರೋಗ್ಯ ಸ್ಥಿತಿ ಸುಧಾರಿಸಿದ್ದು, ನಿನ್ನೆ ರಾತ್ರಿಯಿಂದ ತನ್ವೀರ್ ಸೇಠ್‍ಗೆ ಅಳವಡಿಸಿದ್ದ ವೆಂಟಿಲೇಟರ್ ತೆರವು ಮಾಡಲಾಗಿದೆ. ಸೇಠ್ ಅವರು ವೆಂಟೆಲೇಟರ್ ಇಲ್ಲದೆ ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಇಂದು ಇಡೀ ದಿನ ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ಮಾಡಿ ಆರೋಗ್ಯದಲ್ಲಿ ಚೇತರಿಕೆ ಕಂಡರೆ ವಾರ್ಡ್‍ಗೆ ಶಿಫ್ಟ್ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

    ಭಾನುವಾರ ರಾತ್ರಿ ಮೈಸೂರಿನ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

  • ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

    ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

    ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

    ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆ ನಡೆಸಿ ದರ್ಶನ್ ಕೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ. ಅಲ್ಲದೇ ಅವರನ್ನು ಶೀಘ್ರವೇ ವಾರ್ಡ್ ಗೆ ಸ್ಥಳಾಂತರಿಸುತ್ತಿರುವುದಾಗಿ ಆಸ್ಪತ್ರೆ ತಿಳಿಸಿದೆ. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ

    ಸೋಮವಾರ ಬೆಳಗ್ಗೆ ರಸ್ತೆ ಅಪಘಾತದಲ್ಲಿ ನಟ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಆಂಥೋನಿ ಎಂಬವರು ಗಾಯಗೊಂಡು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವರಾಜ್ ಅವರಿಗೆ ಎಡ ಬೆರಳುಗಳ ಮೂಳೆ ಮುರಿದಿದ್ದು, ಈಗಾಗಲೇ ಶಸ್ತ್ರಚಿಕಿತ್ಸೆ ನಡೆದಿದೆ. ಅಲ್ಲದೇ ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಹಾಗೂ ರಾಯ್ ಆಂಥೋನಿ ಎಂಬವರಿಗೆ ಬಲಗೈ ಮೂಳೆ ಮುರಿದಿದ್ದು, ಎಲ್ಲರಿಗೂ ಚಿಕಿತ್ಸೆ ಮುಂದುವರಿದಿದೆ. ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಕಾರ್ ಅಪಘಾತದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಹೀಗಂದ್ರು

    ಈ ಕುರಿತು ಪ್ರತಿಕ್ರಿಯಿಸಿರುವ ವೈದ್ಯ ಡಾ. ಉಪೇಂದ್ರ ಶಣೈ, ದರ್ಶನ್‍ರವರ ಬಲಗೈ ಮೂಳೆ ಮುರಿದಿದ್ದು, ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆ ನಡೆದಿದ್ದು, ಯಾವುದೇ ಪ್ರಾಣಾಪಾಯವಿಲ್ಲ. ಶೀಘ್ರವೇ ಅವರನ್ನು ಶಸ್ತ್ರಚಿಕಿತ್ಸೆಯ ಬಳಿಕ ಐಸಿಯಗೆ ಸ್ಥಳಾಂತರಿಸಲಾಗುತ್ತದೆ. ಒಂದು ದಿನ ಆಸ್ಪತ್ರೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದು, ಆರೋಗ್ಯ ಸುಧಾರಿಸಿದ ಮೇಲೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪಘಾತದ ಬಳಿಕ ನಾಪತ್ತೆಯಾಗಿದ್ದ ದರ್ಶನ್ ಕಾರ್ ಪತ್ತೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv