Tag: comedian

  • ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು

    ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು

    – ನಗುವಿನ ನಶೆ ಬಿತ್ತಿ ಹೋದ `ಕಲಿಯುಗದ ಕುಡುಕ’

    ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು ಇಡೀ ಹಾಸ್ಯ ರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಇಡೀ ಚಿತ್ರರಂಗ ಸೇರಿ, ವೃತ್ತಿ ರಂಗ ಭೂಮಿ ಇವರಿಗೆ ಅಂತಿಮ ನಮನ ಸಲ್ಲಿಸಲಾಯಿತು.

    ರಂಗನಾಯಕ ಡಾ. ರಾಜು ತಾಳಿಕೋಟೆ ಇನ್ನಿಲ್ಲ ಎಂಬುದು ಇಡೀ ನಾಟಕರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ʻಕಲಿಯುಗದ ಕುಡುಕʼನೇಎಂದೇ ಖ್ಯಾತಿಗಳಿಸಿದ್ದ ಹಿರಿಯ ನಟ, ನಿರ್ದೇಶಕ ಡಾ. ರಾಜು ತಾಳಿಕೋಟೆ ಬದುಕಿನ ನಾಟಕಕ್ಕೆ ವಿದಾಯ ಹೇಳಿದ್ದಾರೆ. ವಿಶಿಷ್ಟ ಶೈಲಿಯ ಮಾತುಗಾರ ರಾಜು ನಿನ್ನೆ ಹೃದಯಘಾತದಿಮದ ನಿಧನರಾಗಿದ್ದರೆ. ನಿನ್ನೆ ಶೈನ್ ಶೆಟ್ಟಿ ನಟನೆಯ ಶಂಕರಾಭರಣ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿ ಸಂಜೆ ವಿಶ್ರಾಂತಿ ಪಡೆಯುವ ವೇಳೆ ಹಠತ್‌ನೆ ಹೃದಯಾಘಾತ ಸಂಭವಿಸಿ ಕೊನೆ ಉಸಿರೆಳೆದಿದ್ದಾರೆ.

    ರಾಜು ತಾಳಿಕೋಟೆ ಜೀವನವೇ ಒಂದು ಅಚ್ಚರಿಯ ಬದುಕು. ಬಹಳ ಸರಳ ಸಹಜವಾಗಿ ಬದುಕಿದ್ದ ರಾಜುಕೋಟೆಯ ನಿಜ ನಾಮ ರಾಜೇಸಾಬ್ ಮುಕ್ತಂ ಸಾಬ್ ಯಂಕಂಚಿ. ಮುಕ್ತಂ ಮತ್ತು ಮೆಹಬೂಬ್ ದಂಪತಿಯ ಪುತ್ರ. ಇಸ್ಲಾಂ ಧರ್ಮದವರಾದರೂ, ರಾಜು ಎಂದೇ ಪ್ರಖ್ಯಾತಿ ಪಡೆದಿದ್ದರು. ಇದೀಗ ಇಬ್ಬರು ಪತ್ನಿಯರು, ಐವರು ಮಕ್ಕಳನ್ನು ತ್ಯಜಿಸಿ ಹೊರಟಿದ್ದಾರೆ.

    ಪಾರ್ಥಿವ ಶರೀರದ ಮುಂದೆ ಬಿಕ್ಕಳಿಸಿದ ಸಹ ಕಲಾವಿದರು
    ಯುವ ಪೀಳಿಗೆಗೆ ನಾಟಕದ ಅಭಿರುಚಿ ಹೆಚ್ಚಿಸಲು ಸ್ವತಃ ರಂಗಮಂದಿರವನ್ನು ಕಟ್ಟಿದವರು. ಧಾರವಾಡದ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಇಡೀ ರಾಜ್ಯಾದ್ಯಂತ ಸುತ್ತಿ ಹೊಸ ತಂಡವನ್ನ ರಚಿಸಿ ನಾಟಕ ಅಭಿನಯ ಮಾಡಿಸುತ್ತಿದ್ದವರು. ಇವರು ಕೇವಲ ರಂಗಭೂಮಿ ಅಷ್ಟೇ ಅಲ್ಲದೆ ಸಿನಿಮಾ ರಂಗದಲ್ಲೂ ಅಭಿಮಯಿಸಿ ಸೈ ಎನಿಸಿಕೊಂಡಿದ್ದವರು. (ಸಿನಿಮಾ ಡೈಲಾಗ್ ಪ್ಲೋ) ಇವರ ನಟನೆಗೆ ಹಾಸ್ಯ ರತ್ನಾಕರ, ಹಾಸ್ಯ ಸಾಮ್ರಾಟ, ಕಾಮಿಡ್ ಕಿಂಗ್, ಕೆಸೇಟ್ ಕಿಂಗ್ ಎಂಬೆಲ್ಲಾ ಬಿರುದುಗಳನ್ನು ಮುಡಿಗೇರಿಸಿಕೊಂಡಿದ್ದವರು.

    ಸಂಜು ಬಸಯ್ಯ ಕಣ್ಣೀರು
    ಇನ್ನು ಹಾಸ್ಯನಟ, ರಂಗಾಯಣ ನಿರ್ದೆಶಕ ರಾಜು ತಾಳಿಕೋಟಿಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ರಾಜು ತಾಳಿಕೋಟೆ ಅಂತಿಮ ದರ್ಶನವನ್ನು ಧಾರವಾಡ ಜಿಲ್ಲಾಧಿಕಾರಿ, ಸಿಇಓ ಸೇರಿ ಅನೇಕ ಕಲಾವಿದರು ಅಂತಿಮ ದರ್ಶನ ಪಡೆದುಕೊಂಡರು. ಇನ್ನು ಪಾರ್ಥಿವ ಶರೀರದ ಎದುರು ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಿಕ್ಕಿ ಬಿಕ್ಕಿ ಕಣ್ಣಿರು ಹಾಕಿದರು.

    ಇನ್ನು ತಾಳಿಕೋಟೆಯ ಧಾರವಾಡದಿಂದ ವಿಜಯಪುರಕ್ಕೆ ಕೊಂಡೋಯ್ದು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಂದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆ ವೇಳೆ ಮೃತ ಕುಟುಂಬಸ್ಥರ ಕಣ್ಣೀರು ಮುಗಿಲು ಮುಟ್ಟಿತ್ತು.

    ಒಟ್ಟಾರೆ ಇಡೀ ಕನ್ನಡ ಚಿತ್ರರಂಗವನ್ನು ಮತ್ತು ರಂಗಭೂಮಿಯನ್ನು ನಗುವಿನ ನಶೆಯಲ್ಲಿ ತೇಲಿಸುತ್ತಿದ್ದ ರಾಜೂ ತಾಳಿಕೋಟೆಯ ಸಾವು ನಿಜಕ್ಕೂ ಬರಸಿಡಿಲು ಬಡಿದಂತಾಗಿದೆ. ರಂಗಭೂಮಿಗೆ ಇವರ ಸಾವು ತುಂಬಲಾರದ ನಷ್ಟವಾಗಿದೆ.

  • ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

    ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯ

    ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ.

    ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ.

  • ಜನಪ್ರಿಯ ಪಂಜಾಬಿ ಹಾಸ್ಯನಟ ಜಸ್ವಿಂದರ್ ಭಲ್ಲಾ ನಿಧನ

    ಜನಪ್ರಿಯ ಪಂಜಾಬಿ ಹಾಸ್ಯನಟ ಜಸ್ವಿಂದರ್ ಭಲ್ಲಾ ನಿಧನ

    ಪಾಟ್ನಾ: ಜನಪ್ರಿಯ ಪಂಜಾಬಿ ನಟ-ಹಾಸ್ಯನಟ ಜಸ್ವಿಂದರ್ ಭಲ್ಲಾ (Jaswinder Bhalla) (65) ಅವರಿಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

    ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಂತಿಮ ನಮನ ಸಲ್ಲಿಸಲು ಅಭಿಮಾನಿಗಳು ಮತ್ತು ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಇದನ್ನೂ ಓದಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

    ವರದಿಗಳ ಪ್ರಕಾರ, ಭಲ್ಲಾ ಕಳೆದ ಕೆಲ ತಿಂಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಅಂತ ತಿಳಿದುಬಂದಿದೆ. ಸದ್ಯ ಭಲ್ಲಾ ಸಾವಿನ ಸುದ್ದಿ ಪಂಜಾಬಿ ಚಲನಚಿತ್ರೋದ್ಯಮ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಆಘಾತಕ್ಕೆ ದೂಡಿದೆ. ಇದನ್ನೂ ಓದಿ: ಕನ್ನಡಕ್ಕೆ ಅಜಯ್ ದೇವಗನ್ – ಜೆಪಿ ತುಮಿನಾಡ್‌ ಸಿನಿಮಾದಲ್ಲಿ ಅಭಿನಯ!

    ಜನಪ್ರಿಯ ಹಾಸ್ಯ ನಟನಾಗಿದ್ದ ಭಲ್ಲಾ ಜನರ ಮನಸ್ಸಿನಲ್ಲಿ ನೆಲೆಯೂರಿದ್ದರು. ‘ಗಡ್ಡಿ ಚಲದೀ ಹೈ ಚಲ್ಲಾ ಮಾರ್ಕೆ’, ‘ಕ್ಯಾರಿ ಆನ್ ಜಟ್ಟಾ’, ‘ಜಿಂದ್ ಜಾನ್’ ಮತ್ತು ‘ಬ್ಯಾಂಡ್ ಬಾಜೆ’ ಅವರು ಅಭಿನಯಿಸಿದ ಸ್ಮರಣೀಯ ಚಿತ್ರಗಳಾಗಿವೆ. ಇದನ್ನೂ ಓದಿ: ಪ್ರಶಾಂತ್ ನೀಲ್ ವಿಸ್ಮಯ ಲೋಕ – 15 ಕೋಟಿ ವೆಚ್ಚದ ಸೆಟ್

  • ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ

    ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ

    – ಕಿಡ್ನಿ ಕಸಿಗೆ ಆರ್ಥಿಕ ಸಹಾಯ ಮಾಡಿದ್ದ ಪವನ್‌ ಕಲ್ಯಾಣ್

    ತೆಲುಗು ಚಿತ್ರರಂಗದಲ್ಲಿ ಖಳನಾಯಕನ ಪಾತ್ರದ ಜೊತೆಗೆ ಹಾಸ್ಯ ಕಲಾವಿದರಾಗಿ ಕಾಣಿಸಿಕೊಂಡಿದ್ದ ಫಿಶ್ ವೆಂಕಟ್‌ (Fish Venkat) ನಿನ್ನೆ (ಜುಲೈ 18) ರಾತ್ರಿ ನಿಧನರಾಗಿದ್ದಾರೆ. ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಫಿಶ್ ವೆಂಕಟೇಶ್ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    ಫಿಶ್ ವೆಂಕಟೇಶ್ ಅವರ ಮೂಲಕ ಹೆಸರು ಮಂಗಳಂಪಲ್ಲಿ ವೇಂಕಟೇಶ್. ಚಿತ್ರರಂಗದಲ್ಲಿ ಫಿಶ್ ವೆಂಕಟೇಶ್ ಅಂತಲೇ ಫೇಮಸ್ ಆಗಿದ್ದವರು. ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಹೊಂದಿದ್ದಾರೆ ಫಿಶ್ ವೆಂಕಟೇಶ್. ಇದನ್ನೂ ಓದಿ: ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ

    ಇತ್ತೀಚೆಗೆ ಆರೋಗ್ಯದ ಸ್ಥಿತಿ ಗಂಭೀರವಾದ ಹಿನ್ನೆಲೆ ಎರಡೂ ಕಿಡ್ನಿಯನ್ನ ಕಸಿ ಮಾಡಲು ವೈದ್ಯರು ಸಲಹೆಯನ್ನ ನೀಡಲಾಗಿ ಅದಕ್ಕಾಗಿ ನಟ ಹಾಗೂ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆರ್ಥಿಕ ನೆರವನ್ನ ನೀಡಿದ್ದರು. ಅಲ್ಲದೇ ವೆಂಕಟೇಶ್ ಕುಟುಂಬಸ್ಥರು ಮೂತ್ರಪಿಂಡ ದಾನಿಗಳ ಮೊರೆ ಹೋಗಿದ್ದರು. ಅಷ್ಟರಲ್ಲೇ ಫಿಶ್ ವೆಂಕಟೇಶ್ 53ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ನಟನ ಸಾವಿಗೆ ತೆಲುಗು ಚಿತ್ರರಂಗ ಸಂತಾಪ ಸೂಚಿಸಿದೆ.

    ಮಂಗಳಂಪಲ್ಲಿ ವೇಂಕಟೇಶ್ ಹೈದರಾಬಾದ್‌ನ ಮುಶೀರಾಬಾದ್ ಮಾರುಕಟ್ಟೆಯಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದ ಕಾರಣ ಅವರಿಗೆ ಫಿಶ್ ವೆಂಕಟೇಶ್ ಎಂದು ಹೆಸರು ಬಂದಿದೆ. ನಟ ಶ್ರೀಹರಿ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಆದಿ, ದಿಲ್, ಬನ್ನಿ, ಅತ್ತಾರಿಂಟಿಕಿ ದಾರೇದಿ, ಡಿಜೆ ಟಿಲ್ಲು ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ ಫಿಶ್ ವೆಂಕಟೇಶ್. ಇದನ್ನೂ ಓದಿ: ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

  • ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ – ಹಾಸ್ಯನಟ ಶ್ಯಾಮ್ ರಂಗೀಲಾ

    ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ – ಹಾಸ್ಯನಟ ಶ್ಯಾಮ್ ರಂಗೀಲಾ

    – ಅಂದು ಮೋದಿ ಅಭಿಮಾನಿ, ಇಂದು ಎದುರಾಳಿಯಾಗಿದ್ದೇಕೇ?

    ಜೈಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಘೋಷಿಸಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ವಾರಣಾಸಿಯಿಂದ (Varanasi) ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೇನೆ. ನಿಮ್ಮಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿ, ಬೆಂಬಲದಿಂದ ನಾನು ಉತ್ಸುಕನಾಗಿದ್ದೇನೆ. ನಾಮಪತ್ರ ಸಲ್ಲಿಕೆ ಹಾಗೂ ಮುಂದಿನ ಮಾಹಿತಿಗಳ ಬಗ್ಗೆ ವೀಡಿಯೋ ಸಂದೇಶಗಳ ಮೂಲಕ ನಿಮಗೆ ತಿಳಿಸುತ್ತಿರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತವರಲ್ಲಿ ಚೆನ್ನೈಗೆ ಹೀನಾಯ ಸೋಲು – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ

    ಅಂದು ಅಭಿಮಾನಿ – ಇಂದು ಎದುರಾಳಿ:
    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2014ರಲ್ಲಿ ನಾನು ಮೋದಿ ಅಭಿಮಾನಿಯಾಗಿದ್ದೆ. ಪ್ರಧಾನಿಗಳನ್ನು ಬೆಂಬಲಿಸುವ ಹಲವು ವೀಡಿಯೋಗಳನ್ನು ಶೇರ್‌ ಮಾಡಿದ್ದೆ. ರಾಹುಲ್‌ ಗಾಂಧಿ (Rahul Gandhi), ಅರವಿಂದ್‌ ಕೇಜ್ರಿವಾಲ್‌ ಅವರಿಗೆ ವಿರುದ್ಧವಾದ ವೀಡಿಯೋಗಳನ್ನು ಶೇರ್‌ ಮಾಡಿದ್ದೆ. ನಾನು ಬಿಜೆಪಿ ಬಿಟ್ಟು ಬೇರೆ ಯಾವುದೇ ಪಕ್ಷಕ್ಕೆ ಮತ ಹಾಕಲ್ಲ ಎಂದು ಶಪಥ ಮಾಡಿದ್ದೆ. ಆದ್ರೆ ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಆದ್ದರಿಂದಲೇ ನಾನು ಈ ಬಾರಿ ವಾರಣಾಸಿಯಿಂದ ಪ್ರಧಾನಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

    ಇದೇ ವಾರ ನಾನು ನಾಮಪತ್ರ ಸಲ್ಲಿಸುತ್ತೇನೆ, ನನ್ನ ನಾಮಪತ್ರ ಸಲ್ಲಿಕೆಯು ವಿಭಿನ್ನವಾಗಿ ಇರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!

  • ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್

    ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್

    ಮಹಿಳೆಯಿಂದಾಗಿ ನಾನು ಮೂರ್ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇವೆ. ಲಿವ್ ಇನ್ ರಿಲೇಷನ್ ಶಿಪ್ ನಿಂದಾಗಿ ನಾನು ಬ್ಲಾಕ್ ಮೇಲ್ ಗೆ ಒಳಗಾಗಿದ್ದೇನೆ. ಮತ್ತೆ ನನ್ನ ಮೇಲೆ ದೂರು ದಾಖಲಾಗಿದೆ ಎನ್ನುತ್ತಲೇ ಕಪಿಲ್ ಶರ್ಮಾ ಶೋ ಸೇರಿದಂತೆ ಹಲವು ಕಾಮಿಡಿ (Comedian) ಶೋಗಳಲ್ಲಿ ನಟಿಸಿರುವ ತೀರ್ಥಾನಂದ (Tirthanand Rao) ವಿಷ  (Poison) ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಹಿಂದಿಯ ಹೆಸರಾಂತ ಟಾಕ್ ಶೋ ಮಾಸ್ಟರ್ ಕಪಿಲ್ ಶರ್ಮಾ ಸೇರಿದಂತೆ ಹಲವರೊಂದಿಗೆ ತೆರೆ ಹಂಚಿಕೊಂಡಿರುವ ತೀರ್ಥಾನಂದ ರಾವ್, ಮಹಿಳೆಯೊಬ್ಬರ ಜೊತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದರಂತೆ. ಆ ಮಹಿಳೆಯೇ ಇವರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರಂತೆ. ಅಲ್ಲದೇ, ಇವರ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರಂತೆ. ಇದರಿಂದಾಗಿ ಮನನೊಂದಿದ್ದೇನೆ ಮತ್ತು ಸಾಲ ಮಾಡಿಕೊಂಡಿದ್ದೇನೆ ಎಂದು ಫೇಸ್ ಬುಕ್ ಲೈವ್ (Facebook Live) ನಲ್ಲಿ ಹೇಳಿಕೊಂಡಿದ್ದಾರೆ ತೀರ್ಥಾನಂದ. ಇದನ್ನೂ ಓದಿ:ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

    ತನ್ನ ಸಾವಿಗೆ ಆ ಮಹಿಳೆಯೇ ಕಾರಣವೆಂದೂ ಹೇಳಿರುವ ಅವರು, ವಿಷ ಕುಡಿಯುತ್ತಲೇ ಕಿಡಿಕಾರುತ್ತಾರೆ. ಇದನ್ನು ಗಮನಿಸುವ ಅವರ ಸ್ನೇಹಿತರು ಮತ್ತು ಆಪ್ತರು ಕೂಡಲೇ ಅವರ ಮನೆಗೆ ಧಾವಿಸಿ, ತೀರ್ಥಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಅಭಿಮಾನಿಗಳು ಸಹಜವಾಗಿಯೇ ಆತಂಕ ವ್ಯಕ್ತಪಡಿಸಿದ್ದಾರೆ.

    ತೀರ್ಥಾನಂದ ಈ ರೀತಿ ಮಾಡುತ್ತಾ ಇರುವುದು ಇದೇ ಮೊದಲೇನೂ ಅಲ್ಲ ಎನ್ನಲಾಗುತ್ತಿದೆ. ಮೂರು ವರ್ಷಗಳ ಹಿಂದೆ ಹೀಗೆಯೇ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರಿಗೆ ಮಾನಸಿಕ ಕಾಯಿಲೆ ಇರಬಹುದು ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

  • Breaking- ಮಲಯಾಳಂ ಖ್ಯಾತ ಹಾಸ್ಯನಟ ಮಾಮುಕೋಯ ನಿಧನ

    Breaking- ಮಲಯಾಳಂ ಖ್ಯಾತ ಹಾಸ್ಯನಟ ಮಾಮುಕೋಯ ನಿಧನ

    ಭಾರತೀಯ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಮಲಯಾಳಂ (Malayalam) ಸಿನಿಮಾ ರಂಗದ ದೈತ್ಯ ಪ್ರತಿಭೆ ಮಾಮುಕೋಯ (Mamukkoya) ನಿಧನರಾಗಿದ್ದಾರೆ. ಸೋಮವಾರ ಕಾಳಿಕಾವುನಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ವಂಡೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಆರೋಗ್ಯದ ಗಂಭೀರತೆಯನ್ನು ಅರಿತು ಕೋಝಿಕ್ಕೊಡ್ ಖಾಸಗಿ ಆಸ್ಪತ್ರೆಗೆ ನಿನ್ನೆಯಷ್ಟೇ ಸ್ಥಳಾಂತರಿಸಲಾಗಿತ್ತು.

    ಕೋಝಿಕೋಡ್ ನಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ನಿನ್ನೆಯಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಲಕ್ಷಾಂತರ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು. ಆದರೆ, ಅಭಿಮಾನಿಗಳ ಪ್ರಾರ್ಥನೆ ಈಡೇರಲಿಲ್ಲ. ಇಂದು ಚಿಕಿತ್ಸೆ ಫಲಕಾರಿಯಾಗದೇ ಹಾಗೂ ಹೃದಯಾಘಾತದಿಂದಾಗಿ (Heart Attack) ಅವರು ನಿಧನರಾಗಿದ್ದಾರೆ (Passed Away) ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:ಮತ್ತೆ ಕಿರುತೆರೆಯತ್ತ ದೀಪಿಕಾ ದಾಸ್

    ಮಲಯಾಳಂ ಸಿನಿಮಾ ರಂಗದ ಹೆಸರಾಂತ ಹಾಸ್ಯ ಕಲಾವಿದರಾಗಿದ್ದ (Comedian) ಮಾಮುಕೋಯ ಈವರೆಗೂ 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಲಯಾಳಂನ ಬಹುತೇಕ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಅಗಲಿದ ಹಿರಿಯ ನಟನ ಆತ್ಮಕ್ಕೆ ಮಲಯಾಳಂ ಸಿನಿಮಾ ರಂಗಕ್ಕೆ ಕಂಬನಿ ಮಿಡಿದಿದೆ.

  • ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ಚೆನ್ನೈ: ತಮಿಳಿನ (Tamil) ಖ್ಯಾತ ಹಾಸ್ಯ ನಟ (Comedian) ಆರ್ ಮಯಿಲ್‌ಸಾಮಿ (Mayilsamy) (57) ಅವರು ಭಾನುವಾರ ಮುಂಜಾನೆ ಹಠಾತ್ತನೆ ನಿಧನ ಹೊಂದಿದ್ದಾರೆ.

    ವರದಿಗಳ ಪ್ರಕಾರ ಮಯಿಲ್‌ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದು, ಬಳಿಕ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಇದನ್ನೂ ಓದಿ: ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

    ಮಯಿಲ್‌ಸಾಮಿ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಹಾಸ್ಯ ಮತ್ತು ಅನೇಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ಟ್ಯಾಂಡ್ ಅಪ್ ಹಾಸ್ಯನಟ, ನಿರೂಪಕ, ರಂಗಭೂಮಿ ಕಲಾವಿದರಾಗಿಯೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

    ಹಾಸ್ಯ ಕಾರ್ಯಕ್ರಮವೊಂದರ ನಿರೂಪಕ ಹಾಗೂ ತೀರ್ಪುಗಾರರಾಗಿ ಮೊದಲ ಬಾರಿಗೆ ಅವರು ದೂರದರ್ಶನಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ 1984ಲ್ಲಿ ಬಿಡುಗಡೆಯಾದ ನಿರ್ಮಾಪಕ ಹಾಗೂ ನಟ ಕೆ ಭಾಗ್ಯರಾಜ್ ಅವರ ಚಿತ್ರ ಧವನಿ ಕನವುಗಲ್ ಮೂಲಕ ಹಾಸ್ಯ ನಟರಾಗಿ ತಮಿಳು ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದನ್ನೂ ಓದಿ: ಅಂಗಾಂಗ ದಾನ ಮಾಡಿದ ಅಭಿಮಾನಿ ಕುಟುಂಬಕ್ಕೆ ಧ್ರುವ ಸರ್ಜಾ ನೆರವು

    ಇದೀಗ ಮಯಿಲ್‌ಸಾಮಿ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ್ ಸ್ಥಿತಿ ಗಂಭೀರ; ಮೆದುಳು ಕೆಲಸ ಮಾಡುತ್ತಿಲ್ಲ ಎನ್ನುತ್ತಿವೆ ಮೂಲಗಳು

    ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ್ ಸ್ಥಿತಿ ಗಂಭೀರ; ಮೆದುಳು ಕೆಲಸ ಮಾಡುತ್ತಿಲ್ಲ ಎನ್ನುತ್ತಿವೆ ಮೂಲಗಳು

    ಬಾಲಿವುಡ್ ಖ್ಯಾತ ಕಾಮಿಡಿಯನ್, ಸ್ಟ್ಯಾಂಡಪ್ ಕಾಮಿಡಿ ಮೂಲಕ  ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ರಾಜು ಶ್ರೀವಾತ್ಸವ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎನ್ನಲಾಗುತ್ತಿದೆ. ದಿನದಿಂದ ದಿನಕ್ಕೆ ಅವರು ಆರೋಗ್ಯ ಸ್ಥಿತಿ ಇಳಿಮುಖದತ್ತ ಹೆಜ್ಜೆ ಹಾಕುತ್ತಿದ್ದು, ಇದೀಗ ಗಂಭೀರ ಸ್ಥಿತಿಯಲ್ಲಿ ಅವರು ಇದ್ದಾರೆ ಎನ್ನಲಾಗುತ್ತಿದೆ. ಅವರು ಬದುಕುಳಿಯಲು ಪವಾಡವೇ ನಡೆಯಬೇಕು ಎನ್ನುವ ಮಾತು ಕೇಳಿ ಬರುತ್ತಿದೆ.

    ಆಗಸ್ಟ್ 10 ರಂದು ರಾಜು ಅವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ದೆಹಲಿ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜು ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಇಲ್ಲ ಎಂದು ಹೇಳಲಾಗುತ್ತಿದೆ. ಈಗಾಗಲೇ ಮೆದುಳು ತನ್ನ ಕೆಲಸವನ್ನು ನಿಲ್ಲಿಸಿದೆ ಎನ್ನುತ್ತವೆ ಮೂಲಗಳು. ಆದರೂ, ವೈದ್ಯರು ತಮ್ಮ ಕೆಲಸವನ್ನು ಮುಂದುವರೆಸಿದ್ದಾರಂತೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್ ಗುರೂಜಿ

    ಬಾಜಿಗರ್, ಬಾಂಬೆ ಟು ಗೋವಾ, ಮೈನೆ ಪ್ಯಾರ್ ಕಿಯಾ ಸೇರಿದಂತೆ ಸಾಕಷ್ಟು ಹಿಂದಿ ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ನಟಿಸಿರುವ ರಾಜು, ತಮ್ಮದೇ ಆದ ಮ್ಯಾನರಿಸಂ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿ ನಗಿಸಿದ್ದಾರೆ. ಅಲ್ಲದೇ, ಹಿಂದಿ ಬಿಗ್ ಬಾಸ್ ಶೋ ಗೂ ಇವರು ಸ್ಪರ್ಧಿಯಾಗಿ ಹೋಗಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸಿರುವ ರಾಜು, ಬೇಗ ಗುಣಮುಖರಾಗಿ ಬರಲಿ ಎನ್ನುವುದು ಅವರ ಅಭಿಮಾನಿಗಳ ಆಸೆ.

    Live Tv
    [brid partner=56869869 player=32851 video=960834 autoplay=true]

  • ಗಂಡು ಮಗುವಿನ ತಾಯಿಯಾದ ಕಾಮಿಡಿ ಕ್ವೀನ್ ಭಾರತಿ

    ಗಂಡು ಮಗುವಿನ ತಾಯಿಯಾದ ಕಾಮಿಡಿ ಕ್ವೀನ್ ಭಾರತಿ

    ಕಾಮಿಡಿಯನ್, ನಿರೂಪಕಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿರುವ ಕಾಮಿಡಿ ಕ್ವೀನ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಭಾರತಿ ಸಿಂಗ್ ಗಂಡು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಹರ್ಷ ಲಿಂಬಾಚಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಇಟ್ಸ್ ಎ ಬಾಯ್ (ಇದು ಗಂಡು ಮಗು) ಎಂದು ಬರೆದಿರುವ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೂ ಸರ್ಪೈಸ್ ನೀಡಿದ್ದಾರೆ. ಇದನ್ನೂ ಓದಿ: ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ಯಾಗಿ ಅಗ್ನಿಸಾಕ್ಷಿ ವೈಷ್ಣವಿ ಮೋಡಿ

    ಇತ್ತೀಚೆಗೆ ಭಾರತಿ ಸಿಂಗ್ ತಮ್ಮ ಗರ್ಭಾವಸ್ಥೆ ಕ್ಷಣಗಳ ಫೊಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು ಭಾರೀ ಸುದ್ದಿಯಾಗಿದ್ದರು. ಆನೆ ವಾಲೇ ಬೇಬಿ ಕಿ ಮಮ್ಮಿ(ಬರಲಿರುವ ಮಗುವಿನ ತಾಯಿ) ಎಂಬ ಮಜವಾದ ಶೀರ್ಷಿಕೆ ನೀಡಿದ ಪೋಸ್ಟ್ ಅನ್ನು ಅಭಿಮಾನಿಗಳು ಅತಿಯಾಗಿ ಮೆಚ್ಚಿಕೊಂಡಿದ್ದರು. ಇದನ್ನೂ ಓದಿ: ಜಾನ್ ಅಬ್ರಾಹಾಂ ಹೊಸ ಚಿತ್ರದಲ್ಲಿ ಬಿಟೌನ್ ಕಿಲಾಡಿ

    ಜನಪ್ರಿಯ ಶೋಗಳನ್ನು ನಿರೂಪಣೆ ಮಾಡುವ ಭಾರತಿ ತುಂಬು ಗರ್ಭಿಣಿಯಾಗಿದ್ದಾಗಲೂ ಹೆರಿಗೆ ವರೆಗೂ ಆ್ಯಕ್ಟಿವ್ ಆಗಿರಲು ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ ಎಂದು ತಿಳಿಸಿದ್ದರು.