Tag: commission allegation

  • 40% ಕಮಿಷನ್ ಆರೋಪ ಪ್ರಕರಣ- ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ

    40% ಕಮಿಷನ್ ಆರೋಪ ಪ್ರಕರಣ- ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ

    ಬೆಂಗಳೂರು: ಗುತ್ತಿಗೆದಾರರಿಂದ 40% ಕಮಿಷನ್ (40% Commission) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವಾರದಲ್ಲಿ ವಿಚಾರಣಾ ಆಯೋಗ ತನಿಖೆ ಮುಗಿಯದಿದ್ದಲ್ಲಿ 100% ಬಿಲ್ ಮಂಜೂರಿಗೆ ಆದೇಶ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.

    40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ಇಂದು ಹೈಕೋರ್ಟ್‍ನ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೀತು. ಈ ವೇಳೆ ಫೆ. 6ರೊಳಗೆ ಆಯೋಗ ವಿಚಾರಣೆ ಪೂರ್ಣಗೊಳಿಸಬೇಕಿತ್ತು. 45 ದಿನ ಆದರೂ ತನಿಖೆ ಯಾಕೆ ನಡೆಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ (Highcourt) ಪ್ರಶ್ನೆ ಮಾಡಿತು.

    ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿಯವರು ಗುತ್ತಿಗೆಯ 75% ಹಣವನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಸಾಲ ಮಾಡಿ ಕಾಮಗಾರಿ ಮಾಡಿದ್ದಾರೆ, ಆದರೂ ಹಣ ಬಿಡುಗಡೆ ಮಾಡಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಅಂತ ಹಣ ತಡೆ ಹಿಡಿದಿಲ್ಲ, ಕೆಲವು ವಿಚಾರ ಕೇಳಿ ನಮಗೆ ಆಘಾತವಾಗಿದೆ. ಆ ವಿಚಾರಗಳನ್ನ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಜ.3 ರಂದು ಆಯೋಗಕ್ಕೆ 45 ಕಾಮಗಾರಿಗಳ ದಾಖಲೆ ನೀಡಲಾಗಿದೆ ಎಂದು ಹೈಕೋರ್ಟ್ ಗೆ ತಿಳಿಸಿದರು.

    ಈ ವೇಳೆ ಜಡ್ಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಕೆಲಸ ಆಗಿದೆ ಎಂದು ಹಣ ಬಿಡುಗಡೆ ಮಾಡಿಲ್ವಾ?. ವಿಚಾರಣೆಗಾಗಿ ರಚಿಸಿರುವ ಏಕಸದಸ್ಯ ಆಯೋಗಕ್ಕೆ ಮಾಹಿತಿ ನೀಡಿ. ಕೆಲಸ ಮಾಡಿಸಿಕೊಂಡು ಹಣ ನೀಡಲು ಏಕೆ ಸಮಸ್ಯೆ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈಗ ಪರ್ಸಂಟೇಜ್ ಕಡಿಮೆ ಆಗಿದೆ, ಆದ್ರೆ ಎಷ್ಟಾಗಿದೆ ಗೊತ್ತಿಲ್ಲ- ಉಲ್ಟಾ ಹೊಡೆದ ಕೆಂಪಣ್ಣ

    ಸರ್ಕಾರದ ವಿಳಂಬ ನೀತಿಗೆ ನ್ಯಾ.ಎಂ. ನಾಗಪ್ರಸನ್ನ ಅಸಮಾಧಾನ ವ್ಯಕ್ತಪಡಿಸಿದ್ದು, ಆಯೋಗದ ವಿಚಾರಣೆ ಪೂರ್ಣಗೊಳಿಸಲು 45 ಸಾಕಾಗುವುದಿಲ್ಲವೇ..?, ಫೆ. 6 ರೊಳಗೆ ಆಯೋಗ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆಯೋಗಕ್ಕೆ ದಾಖಲೆ ಒದಗಿಸಲು ಅಧಿಕಾರಿಗಳು ತಡ ಮಾಡಿದ್ದೇಕೆ ಎಂದು ಪ್ರಶ್ನಿಸಿದರು. ಜೊತೆಗೆ ಬಿಬಿಎಂಪಿ ಎಂಜಿನಿಯರ್ ಇನ್ ಚೀಫ್ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು. ಕೆಲಸ ಮಾಡದ ಅಧಿಕಾರಿಗಳನ್ನು ಬದಲಾಯಿಸಿ. ಕಾಮಗಾರಿ ಮಾಡದೇ ಬಿಲ್ ಕೇಳಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

    ಪೀಠ ಆರು ತಿಂಗಳುಗಳಿಂದ ಯಾಕೆ ತನಿಖೆ ಮಾಡಿಲ್ಲ. ಬೇಗ ತನಿಖೆ ಮಾಡಿ. 45 ದಿನಗಳಲ್ಲಿ ಏನು ಮಾಡಿಲ್ಲ. ನಿಮಗೆ ಇದರ ಬಗ್ಗೆ ಉತ್ಸಾಹ ಇಲ್ಲ ಅನಿಸ್ತಾ ಇದೆ. 6 ವಾರದಲ್ಲಿ ವಿಚಾರಣಾ ಆಯೋಗ ತನಿಖೆ ಮುಗಿಯದಿದ್ದಲ್ಲಿ 100% ಬಿಲ್ ಮಂಜೂರಿಗೆ ಆದೇಶ ಮಾಡಬೇಕಾಗುತ್ತದೆ ಹೈಕೋರ್ಟ್ ಎಚ್ಚರಿಕೆ ನೀಡಿತು.

  • ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

    ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

    ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ (Pay DCM) ಹೆಸರಿನಲ್ಲಿ ಕಮಿಷನ್‌ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಸರ್ಕಾರದ ವಿರುದ್ಧ ಮತ್ತೆ ಕಮಿಷನ್‌ ಬಾಂಬ್‌ ಸಿಡಿಸಿದ್ದಾರೆ.

    ವಿಧಾನಸಭೆ ಕಲಾಪ (Belagavi Session) ಶೂನ್ಯವೇಳೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್‌, ಟೆಂಡರ್/ಕಾಮಗಾರಿ ಬಾಕಿ ಬಿಲ್‌ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ (Corruption Allegation) ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

    ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸರ್ಕಾರ ಕಾಮಗಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರಿಗೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಿಲ್ಲ, ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್‌ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಯತ್ನಾಳ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಯತ್ನಾಳ್‌ ಆರೋಪಗಳಿಗೆ ಕಾಂಗ್ರೆಸ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಂತರ ಕೆಲಕಾಲ ಸದನದಲ್ಲಿ ಗದ್ದಲ, ಕೋಲಾಹಲ ನಡೆಯಿತು. ಬಳಿಕ ಸ್ಫೀಕರ್‌ ಗದ್ದಲವನ್ನು ಸಹಜ ಸ್ಥಿತಿಗೆ ತಂದರು. ಇದನ್ನೂ ಓದಿ: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ಅಲ್ಲದೇ ವಿಜಯಪುರದಲ್ಲಿ ಕುಡಿಯುವ ನೀರಿಗೆ ಬಹಳ ತೊಂದರೆಯಾಗುತ್ತಿದೆ. 15 ದಿನಕ್ಕೊಮ್ಮೆ ನೀರು ಬರುತ್ತಿದೆ. ಬೇಸಿಗೆಯಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು 52 ಕೋಟಿ ರೂ. ಅಂದಾಜು ವೆಚ್ಚದ ಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಿತ್ತು. ವಿಜಯನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ ಮಾಡಿ ಸಮಸ್ಯೆಗೆ ಪರಿಹಾರ ಕೊಡಬೇಕು ಮನವಿ ಮಾಡಿದರು.

  • ಕಮಿಷನ್ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಡಿ.ಕೆ ಶಿವಕುಮಾರ್

    ಕಮಿಷನ್ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಡಿ.ಕೆ ಶಿವಕುಮಾರ್

    ಬೆಂಗಳೂರು: ನಾನು 15% ಕಮೀಷನ್ ಕೇಳಿದ್ದೇನೆ ಅಂತ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬೊಮ್ಮಾಯಿ (Basavaraj Bommai) ಅಶೋಕ್ (R Ashok) ಅವರಿಗೆ ಒಂದು ಪ್ರಶ್ನೆ ಕೇಳ್ತೀನಿ. 5 ಸಾವಿರ ಕೋಟಿ 3 ಸಾವಿರ ಕೋಟಿ ಬಿಲ್ ಏಕೆ ಉಳಿಸಿಕೊಂಡ್ರಿ. ನಿಮ್ಮ ಅವಧಿಯಲ್ಲಿ ಏಕೆ ಬಿಲ್ ನಿಲ್ಲಿಸಿದ್ರಿ?. ಮುಖ್ಯಮಂತ್ರಿಗಳು ಕೆಂಪಣ್ಣ ನೈಜತೆ ನೋಡಿದ್ದಾರೆ. ಕೆಂಪಣ್ಣ ನಮ್ರತೆಯಿಂದ ಮನವಿ ಮಾಡಿಕೊಂಡ್ರು. ಐಎಎಸ್ ಆಫೀಸರ್ ನೇತೃತ್ವದಲ್ಲಿ ಕಮಿಟಿ ಏರ್ಪಡಿಸಲಾಗಿದೆ. ಈಗ ಯಾಕೆ ಅಜೆರ್ಂಟ್ ಮಾಡ್ತಿದ್ದಾರೆ?. ಯಾಕೆ ನೀವು ಬಿಲ್ ಕೊಡಲಿಲ್ಲಾ..? ಅವರು ಫಸ್ಟ್ ಉತ್ತರ ಕೊಡಬೇಕು. 10-15 ಪ್ರಶ್ನೆ ಕೇಳಿದ್ರು, ಮೊದಲು ಯಾರು ಕೇಳಿದ್ರು ಹೇಳಿ ಎಂದು ವಾಗ್ದಾಳಿ ನಡೆಸಿದರು.

    ನನಗೆ ನನ್ನದೇ ಆದ ವ್ಯಕ್ತಿತ್ವ ಇದೆ. ತನಿಖೆ ಎಲ್ಲಾ ಕಡೆ ಮಾಡುತ್ತಾರೆ. ಕೆಲಸ ಮಾಡಿದ್ರೆ ಹಣ ಕೊಡುತ್ತಾರೆ. ಬಿಜೆಪಿ (BJP) ಅಧಿಕಾರದಲ್ಲಿ ಮೂರನಾಲ್ಕು ವರ್ಷ ತಡೆದುಕೊಂಡಿದ್ದಾರೆ. ಈಗ ಯಾಕೆ ಅರ್ಜೆಂಟ್. ಪ್ರಜಾಪ್ರಭುತ್ವದಲ್ಲಿ ಕೇಳುವ ಹಕ್ಕಿದೆ. ಯಾರು ಆ ದುಡ್ಡು ಕೇಳಿದ್ದು..? ನಮ್ಮ ಆಫೀಸರ್ ಗೆ ರಿಪೋರ್ಟ್ ಕೇಳಿದ್ದೀನಿ. ಯಾರು ಯಾರು ಮಾತಾಡ್ತಿದ್ದಾರೆ.. ಯಾರು ಯಾರ ಹಿಂದಿದ್ದಾರೆ ಎಲ್ಲಾ ಗೊತ್ತು. ಸಾಮ್ರಾಟ್ ಅಶೋಕ್ ಏನು ಮಾತನಾಡಿದರು, ಬೊಮ್ಮಾಯಿ ಏನು ಮಾತನಾಡಿದರು, ಕುಮಾರಣ್ಣ ಹೋ ಅಣ್ಣ ಅನ್ನೋ ಹಾಗಿಲ್ವಲ್ಲ. ಕುಮಾರಸ್ವಾಮಿ (HD Kumaraswamy)  ಅವರು ಏನು ಮಾತಾಡಿದರು ಯಾಕೆ ಮಾತನಾಡಿದರು..? ಬೊಮ್ಮಾಯಿ, ಅಶೋಕ್ ಅವರ ಅವಧಿಯಲ್ಲಿ ಯಾಕೆ ಹಣ ಬಿಡುಗಡೆ ಮಾಡಲಿಲ್ಲ. ಕೆಂಪಣ್ಣ ಎಲ್ಲೂ ಅಧಿಕಾರಿಗಳು ಹಣ ಕೇಳಿದ್ದಾರೆ ಅಂತ ಹೇಳಿಲ್ಲ. ಹಾಗೇನಾದರು ಯಾರಾದರು ಕೇಳಿದರೆ ಆ ಅಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದರು.

    ಅಜ್ಜಯ್ಯನ ಸನ್ನಿಧಿಯಲ್ಲಿ ಪ್ರಮಾಣ ಮಾಡಲಿ ಎಂಬ ಗುತ್ತಿಗೆದಾರರ ಸವಾಲಿಗೆ ಪ್ರತಿಕ್ರಿಯಿಸಿದ ಡಿಸಿಎಂ, ರಸ್ತೆಯಲ್ಲಿ ಹೋಗುವವರ ಪ್ರಶ್ನೆಗೆಲ್ಲ ಉತ್ತರ ಕೊಡಲ್ಲ. ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದು ಆಕ್ರೋಶ ಹೊರಹಾಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]