Tag: commissioner

  • ಅಧಿಕಾರ ಹಸ್ತಾಂತರ – ಕಣ್ಣೀರು ಹಾಕಿ ಬೆಂಗಳೂರು ಜನತೆಗೆ ನಮಸ್ಕರಿಸಿದ ಭಾಸ್ಕರ್ ರಾವ್

    ಅಧಿಕಾರ ಹಸ್ತಾಂತರ – ಕಣ್ಣೀರು ಹಾಕಿ ಬೆಂಗಳೂರು ಜನತೆಗೆ ನಮಸ್ಕರಿಸಿದ ಭಾಸ್ಕರ್ ರಾವ್

    ಬೆಂಗಳೂರು: ಅಧಿಕಾರ ಹಸ್ತಾಂತರದ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಕಣ್ಣೀರು ಹಾಕಿ ಬೆಂಗಳೂರು ಜನರಿಗೆ ತಲೆಬಾಗಿ ನಮಸ್ಕಾರ ಮಾಡಿದ್ದಾರೆ.

    ಕಳೆದ ಒಂದು ವರ್ಷಗಳ ಕಾಲ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಶುಕ್ರವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ಭಾಸ್ಕರ್ ರಾವ್ ಅವರು ಕಮಲ್ ಪಂತ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

    ಬ್ಯಾಟನ್ ನೀಡುವ ಮೂಲಕ ಭಾಸ್ಕರ್ ರಾವ್ ಅವರು ನೂತನ ಕಮಿಷನರ್ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ಭಾವುಕರಾದ ಬಾಸ್ಕರ್ ರಾವ್ ಅವರು ಬೆಂಗಳೂರು ಜನತೆಗೆ ನಮಸ್ಕರಿಸಿ ನಿರ್ಗಮನ ಮಾಡಿದರು. ಈ ವೇಳೆ ಪೊಲೀಸರಿಂದ ನೂತನ ಕಮಿಷನರ್ ಗೆ ಗಾಡ್ ಅಪ್ ಹಾನರ್ ನೀಡಲಾಯ್ತು. ಇದಾದ ಬಳಿಕ ನಿರ್ಗಮಿತ ಕಮಿಷನರ್ ಹಾಗೂ ಹಾಲಿ ಕಮಿಷನರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

    ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್, ಸರ್ಕಾರದವರು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಸರ್ಕಾರ ಕೊಟ್ಟ ಜವಾಬ್ದಾರಿ ನಿರ್ವಹಣೆ ಮಾಡುತ್ತೇನೆ. ಕೋವಿಡ್ ಅನ್ನು ಪೊಲೀಸರು ಚೆನ್ನಾಗಿ ನಿರ್ವಹಣೆ ಮಾಡಿದ್ದಾರೆ. ಕೆಲವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡುತ್ತೇನೆ. ಜನರಿಗಾಗಿ ಒಳ್ಳೆಯ ಕೆಲಸ ಮಾಡುತ್ತೇನೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ವಹಿಸಲಾಗುವುದರ ಜೊತೆಗೆ ರೌಡಿ ಚಟುವಟಿಕೆ ತಡೆಯಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

  • ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕೊರೊನಾ ನೆಗೆಟಿವ್

    ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕೊರೊನಾ ನೆಗೆಟಿವ್

    ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ.

    ಭಾಸ್ಕರ್ ರಾವ್ ಕಳೆದ 5 ದಿನದಿಂದ ಹೋಂ ಕ್ವಾರಂಟೈನ್‍ನಲ್ಲಿದ್ದರು. ಇಂದು ಬೆಳಗ್ಗೆ ಕೊರೊನಾ ವರದಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವುದಾಗಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    “ನನ್ನ ಕೋವಿಡ್ ಟೆಸ್ಟ್ ನೆಗೆಟಿವ್ ಬಂದಿದೆ. ಇಂದಿನಿಂದ ಕೆಲಸಕ್ಕೆ ಹಾಜರಾಗುತ್ತೀನಿ. ನಿಮ್ಮೆಲ್ಲರ ಪ್ರೀತಿ, ಆಶೀರ್ವಾದಗಳಿಗೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ. ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‍ನಲ್ಲಿದ್ದರು.

    ಭಾಸ್ಕರ್ ರಾವ್ ಕಾರು ಚಾಲಕ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಪಾಸಿಟಿವ್ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಭಾಸ್ಕರ್ ರಾವ್, “ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದೇನೆ. 3 ತಿಂಗಳ ನಂತರ ಐದನೇ ಬಾರಿಗೆ ಸೋಮವಾರ ಮತ್ತೆ ಪರೀಕ್ಷೆಗೆ ಒಳಗಗಾಗಲಿದ್ದೇನೆ. ಹಲವಾರು ಪಾಸಿಟಿವ್ ಪ್ರಕರಣ ಹೊಂದಿದವರ ಜೊತೆ ಸಂವಹನ ಮಾಡಿದ್ದೇನೆ. ನಿಮ್ಮ ಶುಭ ಹಾರೈಕೆಗಳಿಂದ ಪಾಸಿಟಿವ್ ಆಗಿಲ್ಲ ಎಂದು ಬರೆದುಕೊಂಡಿದ್ದರು.

  • ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

    ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

    – ಸ್ವತಃ ವಾಹನಗಳ ಪಾಸ್‍ಚೆಕ್ ಮಾಡಿದ ಕಮೀಷನರ್

    ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್‍ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್‍ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್‍ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ.

    ದೇಶಾದ್ಯಂತ ಲಾಕ್‍ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಇದಕ್ಕೆ ತಮಿಳುನಾಡು ಕೂಡ ಹೊರತಲ್ಲ. ಈ ಹಿನ್ನೆಲೆಯಲ್ಲಿ ಖುದ್ದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಕಮಿಷನರ್ ಭಾಸ್ಕರ್ ರಾವ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಗೆ ದಿಢೀರ್ ಭೇಟಿ ನೀಡಿದ್ದಾರೆ. ಖುದ್ದು ಕಮೀಷನರ್ ವಾಹನಗಳ ತಪಾಸಣೆ ಮಾಡಿದ್ದಾರೆ.

    ಕರ್ನಾಟಕದ ಅತ್ತಿಬೆಲೆ ಗಡಿ ಭಾಗದಲ್ಲಿ ತಮಿಳುನಾಡಿನ ಪೊಲೀಸರು ಚೆಕ್ ಪೋಸ್ಟ್ ಹಾಕಿಕೊಂಡಿದ್ದರು. ಇದನ್ನು ಗಮನಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಫುಲ್ ಗರಂ ಆಗಿದ್ದರು. ತಕ್ಷಣ ತಮಿಳುನಾಡು ಪೊಲೀಸರನ್ನು ಅವರ ಗಡಿಯಲ್ಲಿ ಚೆಕ್‍ಪೋಸ್ಟ್ ಹಾಕಿಕೊಳ್ಳುವಂತೆ ಸೂಚಿಸಿ ಎತ್ತಂಗಡಿ ಮಾಡಿಸಿದ್ದಾರೆ.

    ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಮುಖ್ಯ ರಸ್ತೆಯ ಚೆಕ್ ಪೋಸ್ಟ್ ಗಳನ್ನು ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಸಾಕಷ್ಟು ನಕಲಿ ಪಾಸ್‍ಗಳಿರುವ ವಾಹನ ಸವಾರರು ಓಡಾಟ ನಡೆಸಿ, ಸಿಕ್ಕಿಬಿದ್ದಿದ್ದಾರೆ. ಅಂತಹ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದಿದ್ದಾರೆ.

    ಲಾಕ್‍ಡೌನ್ ಪಾಲನೆ ಮಾಡದೇ ಬೀದಿಗಿಳಿಯುತ್ತಿರುವ ವಾಹನ ಸವಾರರಿಗೆ ಖುದ್ದು ಗೃಹ ಸಚಿವರು ಮತ್ತು ಬೆಂಗಳೂರು ಕಮೀಷನರ್ ರಿಯಾಲಿಟಿ ಚೆಕ್ ನಡೆಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

  • ಲಾಕ್‍ಡೌನ್ ಉಲ್ಲಂಘನೆ – 154 ವಾಹನ ಸೀಜ್

    ಲಾಕ್‍ಡೌನ್ ಉಲ್ಲಂಘನೆ – 154 ವಾಹನ ಸೀಜ್

    ಮಂಗಳೂರು: ಲಾಕ್‍ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 154 ವಾಹನಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷ, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಲಾಕ್‍ಡೌನ್‍ನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮಂಗಳೂರು ನಗರ ಕಮಿಷನರ್ ವ್ಯಾಪ್ತಿಯಲ್ಲಿ ಇಂದು ಕೊರೊನಾ ಲಾಕ್‍ಡೌನ್ ಆದೇಶ ಉಲ್ಲಂಘಿಸಿದ 154 ವಾಹನಗಳನ್ನು ಸೀಜ್  ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಲಾಕ್ ಡೌನ್ ಹಿನ್ನಲೆಯಲ್ಲಿ ದ.ಕ. ಜಿಲ್ಲಾದ್ಯಂತ ದಿನಬಳಕೆ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7ರಿಂದ 12ರವರೆಗೂ ಖರೀದಿಗಾಗಿ ವಾಹನಗಳಿಗೂ ಅವಕಾಶ ನೀಡಲಾಗಿತ್ತು. ಆದರೆ ಮಧ್ಯಾಹ್ನ 12 ಗಂಟೆಯ ಬಳಿಕವೂ ಕೆಲವು ವಾಹನ ಸವಾರರು ರಸ್ತೆಯಲ್ಲಿ ಸಂಚಾರ ನಡೆಸಿ ಕೊರೊನಾ ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡಿದ್ದರು. ಪೊಲೀಸ್ ಆಯುಕ್ತರು ಮೊದಲೇ ಎಚ್ಚರಿಕೆ ನೀಡಿದ್ದರೂ ಆದೇಶ ಧಿಕ್ಕರಿಸಿದ ರಸ್ತೆಗಿಳಿದ ವಾಹನಗಳನ್ನು ಕಮಿಷನರ್ ಆದೇಶದಂತೆ ಸೀಜ್ ಮಾಡಲಾಗಿದೆ.

  • ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಭಾಸ್ಕರ್ ರಾವ್-ಸುಳ್ಳು ಹೇಳಿ ತಗ್ಲಾಕೊಂಡ ಜನ

    ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಭಾಸ್ಕರ್ ರಾವ್-ಸುಳ್ಳು ಹೇಳಿ ತಗ್ಲಾಕೊಂಡ ಜನ

    – ಗಾಡಿ ಪಾರ್ಕ್ ಮಾಡಿ, ಮನೆಗೆ ಹೋಗಿ

    ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಇಂದು ಬೆಳ್ಳಂಬೆಳಗ್ಗೆ ವಾಕಿಂಗ್ ಡ್ರೆಸ್‍ನಲ್ಲೇ ರಸ್ತೆಗಿಳಿದಿದ್ದಾರೆ. ತಾವೇ ಖುದ್ದು ವಾಹನ ತಪಾಸಣೆ ನಡೆಸಿ, ಮುಲಾಜಿಲ್ಲದೆ ವಾಹನಗಳನ್ನು ಸೀಜ್ ಮಾಡಿದ್ದಾರೆ.

    ನಗರದ ಟೌನ್ ಹಾಲ್ ಬಳಿ ಭಾಸ್ಕರ್ ರಾವ್ ಚೆಕಿಂಗ್ ಮಾಡಿದ್ದು, ಎಲ್ಲಿಂದ ಬರ್ತಾ ಇರೋದು, ಗಾಡಿ ಸೈಡ್‍ಗೆ ಹಾಕು, ಪಾಸ್ ಇದ್ಯಾ, ಗಾಡಿ ನಿಲ್ಲಿಸು. ದೂರ ನಿಲ್ಲಪ್ಪ ನೀನು ಎಂದು ಹೇಳುತ್ತಲೇ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ಸೀಜ್ ಮಾಡಿದ್ದಾರೆ. ಹೀಗೆ ಸುಖಾಸುಮ್ಮನೆ ಓಡಾಡುತ್ತಿದ್ದ ಇನ್ನೋವಾ ಕಾರನ್ನು ಮುಲಾಜಿಲ್ಲದೆ ಸೀಜ್ ಮಾಡಿದ್ದಾರೆ.

    ಕಮೀಷನರ್ ಎದುರೇ ಪಾಸ್ ಇಲ್ಲದೆ ವಾಹನಗಳ ಓಡಾಟ ಹೆಚ್ಚಾಗಿದ್ದು, ಹಲವು ಬೈಕ್, ಕಾರುಗಳನ್ನು ಜಪ್ತಿ ಮಾಡಿಸಿದ್ದಾರೆ. ಕೆಎಸ್‍ಆರ್‍ಟಿಸಿ ಸಿಬ್ಬಂದಿ, ಆರ್ಮಿ ಪ್ಲೇಟ್ ಹಾಕಿದ್ದ ವಾಹನಗಳು ಸೇರಿ ಹಲವು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

    ಬೈಕ್ ನಲ್ಲಿ ದೇವಸ್ಥಾನಕ್ಕೆ ಹೊರಟವರು, ಅಂತ್ಯಕ್ರಿಯೆಗೆ ಹೊರಟವರು, ತರಕಾರಿಗೆ ಹೊರಟವರು, ನೆಂಟರ ಮನೆಗೆ ಹೊರಟವರು ಕಮೀಷನರ್‍ಗೆ ಸಿಕ್ಕಿ ಬಿದ್ದಿದ್ದಾರೆ. ಇದನ್ನು ಗಮನಿಸಿದ ಕಮಿಷನರ್ ಸಾರ್ವಜನಿಕರ ಓಡಾಟ ಹೆಚ್ಚಾಗಿದೆ. ವಾಹನ ತಪಾಸಣೆ ಸರಿಯಾಗಿ ಅಗ್ತಿಲ್ಲ. ಮತ್ತಷ್ಟು ಬಿಗಿಗೊಳಿಸಿ ಚೆಕಿಂಗ್ ಮಾಡಬೇಕು ಎಂದು ಕಂಟ್ರೋಲ್ ರೂಂ ಮೂಲಕ ಮತ್ತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಕಿ ಟಾಕಿ ಮೂಲಕ ವಾಹನಗಳನ್ನು ಸರಿಯಾಗಿ ತಪಾಸಣೆ ಮಾಡಿ. ಬಹುತೇಕ ಮಂದಿ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದಾರೆ. ಆದರೂ ತಪಾಸಣೆ ಸರಿಯಾಗಿ ಅಗ್ತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪೌರಕಾರ್ಮಿಕರ ಹಣ ಕೀಳ್ತಿದ್ದ ಅಧಿಕಾರಿಗಳ ವಿರುದ್ಧ ಎಫ್‍ಐಆರ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪೌರಕಾರ್ಮಿಕರ ಹಣ ಕೀಳ್ತಿದ್ದ ಅಧಿಕಾರಿಗಳ ವಿರುದ್ಧ ಎಫ್‍ಐಆರ್

    ಬೆಂಗಳೂರು: ಕಸ ಗುಡಿಸಿ ನಗರವನ್ನು ಸ್ವಚ್ಛವಾಗಿ ಇಡುವ ಪೌರಕಾರ್ಮಿಕರ ಬಳಿ ಕೆಲ ಅಧಿಕಾರಿಗಳು ಹಣ ಕೀಳುತ್ತಿದ್ದಾರೆ ಎಂದು ಇಂದು ಬೆಳಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈಗ ಪಬ್ಲಿಕ್ ಟಿವಿ ವರದಿಗೆ ಫಲ ಸಿಕ್ಕಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸುವುದಾಗಿ ಮೇಯರ್ ಗೌತಮ್ ಕುಮಾರ್ ಮತ್ತು ಕಮಿಷನರ್ ಅನಿಲ್ ಕುಮಾರ್ ಹೇಳಿದ್ದಾರೆ.

    ಪೌರಕಾರ್ಮಿಕರಿಂದ ತಿಂಗಳಿಗೆ 80 ಲಕ್ಷ ಹಫ್ತಾ ವಸೂಲಿಯಾಗುವುದನ್ನು ಕಂಡು ಬಿಬಿಎಂಪಿ ಮೇಯರ್, ಕಮಿಷನರ್ ಹಾಗೂ ವಿರೋಧ ಪಕ್ಷ ಬೆಚ್ಚಿಬಿದ್ದಿದೆ. ಹಣ ವಸೂಲಿ ಮಾಡುತ್ತಿದ್ದ ಅಧಿಕಾರಿಗಳ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇದು ಪಬ್ಲಿಕ್ ಟಿವಿ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ. ಈ ಸಂಬಂಧ ನಗರದ 198 ವಾರ್ಡ್ ಗಳಲ್ಲೂ ತನಿಖೆ ಮಾಡಲು ಸೂಚಿಸಿದ್ದು, ಸಂಪಂಗಿರಾಮನಗರ ವಾರ್ಡ್ ನ ಕಿರಿಯ ಆರೋಗ್ಯಾಧಿಕಾರಿ ಶ್ರೀನಿವಾಸ್ ಅನ್ನು ಕೆಲಸದಿಂದ ವಜಾಗೊಳಿಸಿ ಕಮಿಷನರ್ ಅನಿಲ್ ಕುಮಾರ್ ಆದೇಶಿಸಿದ್ದಾರೆ.

    ಈ ವಿಚಾರವಾಗಿ ಭ್ರಷ್ಟರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೂಚಿಸಲಾಗಿದ್ದು, ಇತ್ತ ಪಬ್ಲಿಕ್ ಟಿವಿ ಮುಂದೆ ಸತ್ಯ ಬಾಯಿಬಿಟ್ಟಿದಕ್ಕೆ ಇಂದು ಪೌರಕಾರ್ಮಿಕರ ಬಯೋಮೆಟ್ರಿಕ್ ಹಾಜರಾತಿಯನ್ನು ಕದಿರೇನಹಳ್ಳಿ ವಾರ್ಡ್‍ನಲ್ಲಿ ತಡೆಹಿಡಿದಿದ್ದರು. ಇದನ್ನೂ ತನಿಖೆಗೆ ಒಳಪಡಿಸಿದ್ದು, ಪೌರಕಾರ್ಮಿಕರ ದುಡ್ಡು ವಸೂಲಿ ಹೀನಾಯ, ಅವಮಾನೀಯ ಕೃತ್ಯ ಎಂದು ಮೇಯರ್ ಮತ್ತು ಕಮಿಷನರ್ ಬೇಸರ ಹೊರಹಾಕಿದರು.

    ಈ ಮೂಲಕ ಪೌರಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಕೆಲ ಅಧಿಕಾರಿಗಳಿಗೆ ವಜಾದ ಶಿಕ್ಷೆಯಾಗಿದೆ. ಇದು ಪಬ್ಲಿಕ್ ಟಿವಿ ವರದಿಯ ಬಿಗ್ ಇಂಪ್ಯಾಕ್ಟ್ ಅಗಿದ್ದು, ಈ ಹಣ ವಸೂಲಿ ದಂಧೆಯ ಬಗ್ಗೆ ಬಿಬಿಎಂಪಿ ಮಾಸಿಕ ಸಭೆಯಲ್ಲೂ ಪ್ರಸ್ತಾಪ ಮಾಡಲಾಗಿದೆ.

  • ಕಮಿಷನರ್ ಭಾಸ್ಕರ್ ರಾವ್ ಸಾಚಾ ಅಲ್ಲ: ನಮ್ಮ ಕರವೇ ಅಧ್ಯಕ್ಷ ಜಯರಾಜು ನಾಯ್ಡು

    ಕಮಿಷನರ್ ಭಾಸ್ಕರ್ ರಾವ್ ಸಾಚಾ ಅಲ್ಲ: ನಮ್ಮ ಕರವೇ ಅಧ್ಯಕ್ಷ ಜಯರಾಜು ನಾಯ್ಡು

    ಬೆಂಗಳೂರು: ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸಾಚನಾ? ಅವರ ಮೇಲೆ ಆಡಿಯೋ ಹಗರಣ ಇದೆ. ಇದನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ನಮ್ಮ ನಮ್ಮ ಕರವೇ ಅಧ್ಯಕ್ಷ ಜಯರಾಜು ನಾಯ್ಡು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ನಗರದ ಮೌರ್ಯ ಸರ್ಕಲ್ ಬಳಿ ಮಾತನಾಡಿದ ಅವರು, ನಿನ್ನೆ ರಾತ್ರಿ ಮಿನರ್ವ ಸರ್ಕಲ್ ಬಳಿ ನಾವೆಲ್ಲ ಇದ್ದೆವು. ಅಲ್ಲಿ ಪೊಲೀಸ್ ಸರ್ಪಗಾವಲು ಇತ್ತು. ತಾಕತ್ತಿದ್ರೆ ನಮ್ಮನ್ನು ಬಂಧಿಸಿ ನೋಡೋಣ ಎಂದು ಕಮಿಷನರ್ ಭಾಸ್ಕರ್ ರಾವ್‍ಗೆ ನೇರ ಸವಾಲು ಹಾಕಿದರು. ಕಮಿಷನರ್ ಬಿಜೆಪಿ ಪರ ಕೆಲಸ ಮಾಡೋದಿದ್ರೆ ಡ್ರೆಸ್ ಬಿಚ್ಚಿ, ಆರ್‍ಎಸ್‍ಎಸ್‍ಗೆ ಇಲ್ಲ, ಬಿಜೆಪಿಗೆ ಸೇರಿ ಎಂದು ಕಿಡಿಕಾರಿದರು.

    ಇನ್ನೂ ಸಿಎಂ ಮೇಲೆಯೂ ಕಿಡಿಕಾರಿ, ಸಿಎಂ ನಾಲಾಯಕ್ ರೀತಿ ನಡೆದುಕೊಳ್ಳುತ್ತಿದ್ದಾರೆ. ಕನ್ನಡಿಗರ ಹೋರಾಟದ ಬಗ್ಗೆ ಕಾಳಜಿ, ಬದ್ಧತೆ ಇದ್ದರೆ ಪ್ರತಿಭಟನಾ ಸ್ಥಳಕ್ಕೆ ಬರಬೇಕಿತ್ತು ಎಂದು ಜಯರಾಜು ನಾಯ್ಡು ತಮ್ಮ ಆಕ್ರೋಶವನ್ನು ಹೊರಹಾಕಿದರು.

    ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಲಾಗಿದೆ.

  • ವಿಶ್ವದ ಸಂಚಾರ ದಟ್ಟಣೆಯಲ್ಲಿ ಬೆಂಗಳೂರಿಗೆ ಮೊದಲನೇ ಸ್ಥಾನ – ಒಪ್ಪಿಕೊಂಡ ಭಾಸ್ಕರ್ ರಾವ್

    ವಿಶ್ವದ ಸಂಚಾರ ದಟ್ಟಣೆಯಲ್ಲಿ ಬೆಂಗಳೂರಿಗೆ ಮೊದಲನೇ ಸ್ಥಾನ – ಒಪ್ಪಿಕೊಂಡ ಭಾಸ್ಕರ್ ರಾವ್

    -ತಜ್ಞರು, ಟಾಮ್ ಟಾಮ್ ಸಿಬ್ಬಂದಿಯ ಜೊತೆ ಕಮೀಷನರ್ ಸಭೆ

    ಬೆಂಗಳೂರು: ಸಿಲಿಕಾನ್ ಸಿಟಿ ವಿಶ್ವದ 57 ರಾಷ್ಟ್ರಗಳ 416 ನಗರಗಳಲ್ಲಿ ಸಂಚಾರ ದಟ್ಟಣೆಯಲ್ಲಿ ಮೊದಲ ಸ್ಥಾನ ಪಡೆದಿದೆ. ತೀವ್ರ ಸಂಚಾರ ದಟ್ಟಣೆ ಹಾಗೂ ಜನರ ಸಮಯವನ್ನು ಹಾಳು ಮಾಡುವ ವಿಶ್ವದ 10 ನಗರಗಳಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ.

    ಟಾಮ್ ಟಾಮ್ ಸಂಸ್ಥೆಯ ವರದಿಯಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಯ ಬೆಳಕು ಚೆಲ್ಲಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಹ ಒಪ್ಪಿಕೊಂಡಿದ್ದಾರೆ. ಗುರುವಾರ ಈ ಬಗ್ಗೆ ತಜ್ಞರು ಮತ್ತು ಟಾಮ್ ಟಾಮ್ ಸಿಬ್ಬಂದಿಯ ಜೊತೆ ಕಮೀಷನರ್ ಸಭೆ ನಡೆಸಿದ್ದಾರೆ.

    ನಗರದಲ್ಲಿ ಬಹುತೇಕ ಕಡೆ ಮೆಟ್ರೊ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಸಂಚಾರ ದಟ್ಟಣೆ ಅಧಿಕವಾಗಿದೆ. ಶೇ. 65ಕ್ಕಿಂತ ಹೆಚ್ಚು ಟೂ ವೀಲರ್ ಗಳು ರಸ್ತೆಗಿಳಿಯುತ್ತಿವೆ. ಸಾರ್ವಜನಿಕ ಸಾರಿಗೆಯನ್ನು ಸಹ ಪರಿಣಾಮಕಾರಿಯಾಗಿ ಬಳಸಿಕೊಳ್ಳದಿರುವುದು ಸಮಸ್ಯೆಗೆ ಕಾರಣ.

    ಒಂದು ಮನೆಯಲ್ಲಿ ಮೂರು ನಾಲ್ಕು ಕಾರುಗಳು ಇರುವುದು. ಒಬ್ಬರಿಗೇ ಕಾರು ಎತ್ತುವುದು ಸಹ ಟ್ರಾಫಿಕ್ ಕಿರಿಕಿರಿಗೆ ಕಾರಣವಾಗಿದೆ ಎಂದು ಕಮೀಷನರ್ ಹೇಳಿದ್ದಾರೆ. ವಿಶ್ವದಲ್ಲಿ ಅತೀ ಸಂಚಾರ ದಟ್ಟಣೆಯ ನಗರ ಎನ್ನುವ ಕುಖ್ಯಾತಿಗೆ ಬೆಂಗಳೂರಿಗೆ ಅಂಟಿಕೊಂಡಿದೆ.

  • ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕೆಂದು ಕುಣಿದು ಕುಪ್ಪಳಿಸಿದ ಮೇಯರ್, ಕಮಿಷನರ್

    ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕೆಂದು ಕುಣಿದು ಕುಪ್ಪಳಿಸಿದ ಮೇಯರ್, ಕಮಿಷನರ್

    ಬೆಂಗಳೂರು: ಸಿಲಿಕಾನ್ ಸಿಟಿಯ ಮೇಯರ್ ಮತ್ತು ಕಮಿಷನರ್ ಕಬ್ಬನ್ ಪಾರ್ಕ್‍ನಲ್ಲಿ ಮಸ್ತ್ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ.

    ಇಂದು ಸ್ವಚ್ಛ ಸರ್ವೇಕ್ಷಣಾ ಜಾಗೃತಿ ಅಭಿಯಾನ ಕಬ್ಬನ್ ಪಾರ್ಕ್ ನಲ್ಲಿ ನಡೆಯಿತು. ಬೆಂಗಳೂರು ನಗರಿಯ ಸ್ವಚ್ಛತೆಯ ಬಗ್ಗೆ ಸಾರ್ವಜನಿಕಕರಿಗೆ ಅರಿವು ಹಾಗೂ ಸ್ವಚ್ಛ ಅಭಿಯಾನದ ಆಪ್ ಬಿಡುಗಡೆ ಕಾರ್ಯಕ್ರಮವೂ ನಡೆಯಿತು.

    ಈ ವೇಳೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಕಿ ಕಬ್ಬನ್ ಪಾರ್ಕ್ ನಲ್ಲಿ ಮಸ್ತ್ ಮಸ್ತ್ ಸ್ಟೆಪ್ ಹಾಕಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಕಮಿಷನರ್ ಅನಿಲ್ ಕುಮಾರ್ ವಿಭಿನ್ನವಾಗಿ ಜಾಗೃತಿ ಅಭಿಯಾನ ನಡೆಸಿದರು. ಮೇಯರ್ ಕಮಿಷನರ್ ಭರ್ಜರಿ ಸ್ಟೆಪ್‍ಗೆ ಖುಷ್ ಆದ ಸಿಬ್ಬಂದಿ ವರ್ಗದವರು ಕೂಡ ಡ್ಯಾನ್ಸ್ ಗೆ ಸಾಥ್ ನೀಡಿದರು.

  • ಅವರೆಕಾಯಿ ಮೇಳಕ್ಕೆ ಅನುಮತಿ ನಿರಾಕರಿಸಿದ ಪಾಲಿಕೆ ಆಯುಕ್ತ

    ಅವರೆಕಾಯಿ ಮೇಳಕ್ಕೆ ಅನುಮತಿ ನಿರಾಕರಿಸಿದ ಪಾಲಿಕೆ ಆಯುಕ್ತ

    ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್‍ನಲ್ಲಿ ನಡೆಯಲಿರುವ ಅವರೆಕಾಯಿ ಮೇಳ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಈ ವರ್ಷ ಅವರೆಕಾಯಿ ಮೇಳ ನಡೆಯುವುದು ಅನುಮಾನ. ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಮೇಳ ನಡೆಸಲು ಅನುಮತಿ ನಿರಾಕರಿಸಿದ್ದಾರೆ.

    ಅವರೆಕಾಳು ಮೇಳ ಕಳೆದ ಹಲವು ವರ್ಷಗಳಿಂದ ನಡೆಯುತ್ತಲೇ ಇದೆ. ಆದರೆ ಈ ಬಾರಿ ಸ್ಥಳೀಯ ವೆಲ್‍ಫೇರ್ ಅಸೋಸಿಯೇಷನ್ ಹಾಗೂ ಪಾಲಿಕೆ ಸದಸ್ಯ ಕಮೀಷನರ್ ಗೆ ಮನವಿ ಮಾಡಿದ್ದು, ಮೇಳ ನಡೆಯಲು ಅವಕಾಶ ನೀಡಬಾರದೆಂದು ಮನವಿ ಮಾಡಿದ್ದಾರೆ ಎಂದು ಖುದ್ದು ಕಮೀಷನರ್ ಅನಿಲ್ ಕುಮಾರ್ ಹೇಳಿದರು.

    ಮೇಳದಿಂದ ಒಂದು ಕುಟುಂಬಕ್ಕೆ ಮಾತ್ರ ಸಹಾಯವಾಗುತ್ತಿದೆ. ಅವರೆ ಮಿಕ್ಸಚರ್, ಅವರೆ ದೋಸೆ, ಹಲ್ವಾ, ಪೇಡಾ ಎಲ್ಲ ತಯಾರಾಗುತ್ತಿತ್ತು. ಹಾಗೇ ಅದು ಒಂದು ಕುಟುಂಬದ ಲಾಭವಾಗಿತ್ತು. ಜೊತೆಗೆ ಸ್ವಚ್ಛತೆಯನ್ನು ಕಾಪಾಡುತ್ತಿರಲಿಲ್ಲ. ಹೀಗಾಗಿ ಅವರೆ ಮೇಳಕ್ಕೆ ಅನುಮತಿ ನೀಡಿಲ್ಲ ಎಂದು ಕಮೀಷನರ್ ತಿಳಿಸಿದರು.

    ಬಿಬಿಎಂಪಿ ಮೂಲಗಳ ಮಾಹಿತಿಯಂತೆ ಅವರೆ ಮೇಳದಿಂದ ರೈತರಿಗೆ ಸಹಾಯವಾಗುತ್ತದೆ ಅನುಮತಿ ನೀಡಿ ಎಂದು ಶಿಫಾರಸ್ಸುಗಳ ಸುರಿಮಳೆಯಾಗಿದೆ. ಉಪಮುಖ್ಯಮಂತ್ರಿ, ಮೇಯರ್, ಶಾಸಕರು, ವಿಧಾನ ಪರಿಷತ್ ಸದಸ್ಯರೆಲ್ಲ ಆಯುಕ್ತರಿಗೆ ಕರೆ ಮಾಡಿದ್ದಾರೆ.