Tag: Committee

  • 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ವಿವಿಧ ಸಮಿತಿಗಳು ಪ್ರಕಟ

    86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ವಿವಿಧ ಸಮಿತಿಗಳು ಪ್ರಕಟ

    ಹಾವೇರಿ: ಜನವರಿ 6, 7 ಹಾಗೂ 8 ರಂದು ಹಾವೇರಿಯಲ್ಲಿ (Haveri) ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharath Kannada Sahitya Sammelana) ವಿವಿಧ ಕೆಲಸ ಕಾರ್ಯಗಳಿಗೆ ರಚಿಸಲಾದ 16 ಸಮಿತಿಗಳನ್ನು (Committee) ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಭಾನುವಾರ ಪ್ರಕಟಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಜರುಗಿದ ಸ್ವಾಗತ ಸಮಿತಿಯ ಸಭೆಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ಸಮಿತಿಗಳ ಗೌರವಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳ ಹೆಸರನ್ನು ಪ್ರಕಟಿಸಿದರು.

    ಸಮನ್ವಯ ಸಮಿತಿಯ ಗೌರವಾಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ವಿಧಾನಸಭಾ ಮಾಜಿ ಸಭಾಪತಿ ಕೆ.ಬಿ ಕೋಳಿವಾಡ, ಅಧ್ಯಕ್ಷರಾಗಿ ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್, ಉಪಾಧ್ಯಕ್ಷರಾಗಿ ಮಾಜಿ ಶಾಸಕ ಬಿ.ಎಸ್ ಬನ್ನಿಕೋಡ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ.

    ಸಮ್ಮೇಳನದ ಸಿದ್ಧತೆ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿಗೆ ಗೌರವಾಧ್ಯಕ್ಷರಾಗಿ ಸಂಸದ ಶಿವಕುಮಾರ್ ಉದಾಸಿ, ಅಧ್ಯಕ್ಷರಾಗಿ ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ಸುರೇಶ್ ಗೌಡ ಬಿ ಪಾಟೀಲ್, ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನೂ ಓದಿ: ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ: ಬಿಬಿಎಂಪಿ ಅಧಿಕಾರಿ ಮನವಿ

    ವೇದಿಕೆ ನಿರ್ಮಾಣ ಸಮಿತಿ ಗೌರವಾಧ್ಯಕ್ಷರಾಗಿ ಸಚಿವ ಸುನೀಲ್ ಕುಮಾರ್, ಅಧ್ಯಕ್ಷರಾಗಿ ಶಾಸಕ ಹಾಗೂ ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರೂ ಓಲೇಕಾರ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಇದನ್ನೂ ಓದಿ: ಸಿದ್ದು ಪ್ರವಾಸದ ಬಳಿಕ ಕೋಲಾರ ಕ್ಷೇತ್ರದಲ್ಲಿ ಚುರುಕಾದ ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ಮೌಖಿಕವಾಗಿ ಕಾಮಗಾರಿಗೆ ಆದೇಶ ನೀಡಿದರೆ ಅಧಿಕಾರಿಗಳು, ಇಂಜಿನಿಯರ್‌ ಹೊಣೆ: ಬೊಮ್ಮಾಯಿ

    ಮೌಖಿಕವಾಗಿ ಕಾಮಗಾರಿಗೆ ಆದೇಶ ನೀಡಿದರೆ ಅಧಿಕಾರಿಗಳು, ಇಂಜಿನಿಯರ್‌ ಹೊಣೆ: ಬೊಮ್ಮಾಯಿ

    ಶಿವಮೊಗ್ಗ: ಮೌಖಿಕವಾಗಿ ಯಾವುದೇ ಕಾಮಗಾರಿಗೆ ಆದೇಶ ನೀಡಬಾರದು. ಒಂದು ವೇಳೆ ಆದೇಶ ನೀಡಿದರೆ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಆಡಳಿತ ಹಾಗೂ ಪಂಚಾಯತ್ ರಾಜ್‍ನಲ್ಲಿ ಮೌಖಿಕವಾಗಿ ಕಾಮಗಾರಿ ನಡೆಯುತ್ತವೆ ಎಂಬ ಆರೋಪ ಇದೆ. ಇದರಿಂದಾಗಿ ಮೌಖಿಕವಾಗಿ ಯಾವುದೇ ಕಾಮಗಾರಿಗೆ ಆದೇಶ ನೀಡಬಾರದು. ಒಂದು ವೇಳೆ  ಆದೇಶ ನೀಡಿದರೆ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

    BASAVARJ BOMMAI (1)

    ಕಾಮಗಾರಿಯಲ್ಲಿ ಪರ್ಸೆಂಟೆಜ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಾಗೂ ಪಾರದರ್ಶಕವಾಗಿ ಕಾಮಗಾರಿ ನಡೆಸುವ ಸಲುವಾಗಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ. ಕಮಿಷನ್ ಪ್ರಕ್ರಿಯೆ ಎಸ್ಟಿಮೆಟ್ಸ್‌ ಮಾಡುವುದರಿಂದಲೇ ಪ್ರಾರಂಭವಾಗುತ್ತದೆ. ಹೀಗಾಗಿಯೇ ಟೆಂಡರ್ ನಿಯಮಗಳು ಕೆಲವೇ ಕೆಲವರಿಗೆ ಬೇಕಾದ ಹಾಗೆ ಆಗುತ್ತದೆ ಎಂಬ ದೂರಿದೆ. ಇದಕ್ಕಾಗಿ ಒಂದು ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ನಂಬಲು ಸಾಧ್ಯವಿಲ್ಲದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ: ಟಿಬಿ ಜಯಚಂದ್ರ

    ಸಮಿತಿಯಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಹಣಕಾಸು ಪರಿಣಿತರು ಹಾಗೂ ಆ ಇಲಾಖೆಯ ತಾಂತ್ರಿಕ ಪರಿಣತಿ ಪಡೆದವರು ಇರುತ್ತಾರೆ. 50 ಕೋಟಿ ಮೇಲಿನ ಕಾಮಗಾರಿಯು ಕಮಿಟಿ ಮುಂದೆ ಹೋಗುತ್ತದೆ. ಎಸ್ಟಿಮೆಟ್‌ ಎಸ್.ಆರ್. ರೇಟ್ ಪ್ರಕಾರ ಇದೆಯೋ, ಇಲ್ಲವೋ, ಅದರಲ್ಲಿ ಏನಾದರು ಪ್ಯಾಡಿಂಗ್ ಮಾಡಿದ್ದಾರಾ. ಎರಡನೇಯದಾಗಿ ಟೆಂಡರ್ ಕೆಟಿಟಿಪಿ ಕಾಯ್ದೆ ಪ್ರಕಾರ ಇದೆಯೋ, ಇಲ್ಲವೋ ಎಲ್ಲವನ್ನು ಗಮನಿಸಿ ಅನುಮೋದನೆ ನೀಡಿದ ಮೇಲೆಯೇ ಟೆಂಡರ್ ಮಾಡಬೇಕು ಎನ್ನುವಂತಹ ಪ್ರಕ್ರಿಯೆಯನ್ನು ಜಾರಿಗೆ ತರುತ್ತಿದ್ದೇವೆ ಎಂದರು. ಇದನ್ನೂ ಓದಿ: ನುಗ್ಗಿಕೇರಿ ಕಲ್ಲಂಗಡಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್

    ಈಗಾಗಲೇ ಸಮಿತಿಗೆ ಜೀವ ನೀಡಲಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಕಮಿಟಿ ಕೆಲಸ ಪ್ರಾರಂಭವಾಗುತ್ತದೆ. ಸರಳವಾಗಿ ಅವರ ಇಲಾಖೆಯಲ್ಲಿಯೇ ಮಾಡುವಂತಿಲ್ಲ. ಎಲ್ಲಾ ಇಲಾಖೆಯ 50 ಕೋಟಿ ರೂ. ಕಾಮಗಾರಿಯನ್ನು ಕಮಿಟಿ ತೀರ್ಮಾನ ಮಾಡುತ್ತದೆ. ಇನ್ನೂಂದು ವಾರದಲ್ಲಿ ಸಮಿತಿ ರಚನೆ ಆಗುತ್ತದೆ. ಸಮಿತಿಗೆ ಕಾಲಾವಧಿ ಒಳಗೆ ಟೆಂಡರ್‌ಗೆ ಅನುಮತಿ ನೀಡುತ್ತದೆ. ಅದು 15 ದಿನಗಳ ಒಳಗೆ ಅನುಮೋದನೆ ನೀಡಬೇಕು. ಸಂಖ್ಯೆ ಜಾಸ್ತಿಯಾದರೆ ಇನ್ನೂಂದು ಕಮಿಟಿ ರಚನೆ ಆಗುತ್ತದೆ ಎಂದು ಭರವಸೆ ನೀಡಿದರು.

  • ಕ್ಲಬ್‍ಗಳ ನಿಯಂತ್ರಣಕ್ಕೆ ಸದನ ಸಮಿತಿ ರಚನೆ

    ಕ್ಲಬ್‍ಗಳ ನಿಯಂತ್ರಣಕ್ಕೆ ಸದನ ಸಮಿತಿ ರಚನೆ

    ಬೆಂಗಳೂರು: ಬೌರಿಂಗ್ ಕ್ಲಬ್, ಟರ್ಫ್ ಕ್ಲಬ್, ಗಾಲ್ಫ್ ಕ್ಲಬ್ ಸೇರಿದಂತೆ ಬೆಂಗಳೂರಿನ ಕ್ಲಬ್ ಗಳ ಕುರಿತು ಇವತ್ತು ವಿಧಾನ ಪರಿಷತ್ ಕಲಾಪದಲ್ಲಿ ಪಕ್ಷಾತೀತವಾಗಿ ಚರ್ಚೆ ನಡೆಯಿತು. ಕ್ಲಬ್ ಗಳ ವರ್ತನೆಗೆ ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸಿದ ಸದಸ್ಯರು ಕ್ಲಬ್ ಗಳ ನಿಯಂತ್ರಣಕ್ಕೆ ಸದನ ಸಮಿತಿ ರಚನೆಗೆ ಒತ್ತಾಯ ಮಾಡಿದರು. ಸದಸ್ಯರ ಮನವಿಗೆ ಸ್ಪಂದನೆ ನೀಡಿದ ಸಹಕಾರ ಸಚಿವ ಸೋಮಶೇಖರ್ ಸದನ ಸಮಿತಿ ರಚನೆಯ ಘೋಷಣೆ ಮಾಡಿದರು.

    ಕಾಂಗ್ರೆಸ್ ಸದಸ್ಯ ಎಚ್.ಎಂ ರೇವಣ್ಣ ಬೆಂಗಳೂರಿನ ಕ್ಲಬ್‍ಗಳ ಬಗ್ಗೆ ಪ್ರಶ್ನೆ ಕೇಳಿದರು. ಈ ವೇಳೆ ಬೆಂಗಳೂರಿನ ಕ್ಲಬ್‍ಗಳ ಬಗ್ಗೆ ಸದನದ ರೇವಣ್ಣ ಅವರು ಮಾಹಿತಿ ಬಿಚ್ಚಿಟ್ಟರು. ಬೌರಿಂಗ್ ಕ್ಲಬ್ ಸೇರಿದಂತೆ ಇನ್ನಿತರ ಕ್ಲಬ್‍ನಲ್ಲಿ ಡ್ರೆಸ್ ಕೋಡ್ ಇದೆ. ಸೂಟ್ ಹಾಕಿಕೊಂಡು ಹೋಗಬೇಕಂತೆ. ಬಿಳಿ ಬಟ್ಟೆ ಹಾಕಿಕೊಂಡು ಹೋಗುವ ಆಗಿಲ್ಲ. ಖಾದಿ ಬಟ್ಟೆ ಹಾಕಿಕೊಂಡರೆ ಕ್ಲಬ್ ಎಂಟ್ರಿ ಇಲ್ಲವಂತೆ ಅಂತ ಕ್ಲಬ್ ಗಳ ವರ್ತನೆ ವಿರುದ್ದ ಅಸಮಾಧಾನ ಹೊರ ಹಾಕಿದರು.

    ರೇವಣ್ಣ ಮಾತಿಗೆ ಮತ್ತೊಬ್ಬ ಸದಸ್ಯ ಪ್ರಕಾಶ್ ರಾಥೋಡ್ ಧ್ವನಿಗೂಡಿಸಿದರು. ಐಎಎಸ್ ಅಧಿಕಾರಿಗಳಿಗೆ ಕ್ಲಬ್ ಇದೆ. ಮಹಿಳೆಯರು ಕ್ಲಬ್ ಮಾಡಿಕೊಂಡಿದ್ದಾರೆ. ಶಾಸಕರಿಗೂ ಒಂದು ಕ್ಲಬ್ ಬೇಕು. ನಾವು ವ್ಯಾಯಾಮ ಮಾಡೋದು ಬೇಡವಾ? ನಾವು ರೆಸ್ಟ್ ಮಾಡೋದು ಬೇಡವಾ ಶಾಸಕರಿಗೂ ಕ್ಲಬ್ ಮಾಡಿಕೊಡಿ ಎಂದು ಸಚಿವ ಸೋಮಶೇಖರ್ ಗೆ ಪ್ರಕಾಶ್ ರಾಥೋಡ್ ಒತ್ತಾಯ ಮಾಡಿದರು.

    ಜೆಡಿಎಸ್ ಶ್ರೀಕಂಠೇಗೌಡ ಮಾತನಾಡಿ ಗಾಲ್ಫ್ ಕ್ಲಬ್ ಜಾಗದಲ್ಲಿ ಶಾಸಕರಿಗೆ ಕ್ಲಬ್ ಪ್ರಾರಂಭ ಮಾಡಿ. ನಾವು ವಾಕಿಂಗ್ ಮಾಡಬೇಕು, ಆಟ ಆಡಬೇಕು, ಊಟ ಮಾಡಬೇಕು.ನಮಗೂ ರಿಲ್ಯಾಕ್ಸ್ ಬೇಕು ಅಲ್ಲವಾ. ಹಿಂದೆ ಗಣೇಶ್ ಕಾರ್ಣಿಕ್ ಕ್ಲಬ್ ಗಾಗಿ ಹಣ ಸಂಗ್ರಹ ಮಾಡಿದರು. ಆದರೆ ಈವರೆಗೂ ಕ್ಲಬ್ ಆಗಿಲ್ಲ. ಶಾಸಕರ ಭವನಕ್ಕೂ ಹತ್ತಿರ ಇದೆ. ಗಾಲ್ಫ್ ಕ್ಲಬ್ ಜಾಗದಲ್ಲಿ ಶಾಸಕರಿಗೆ ಕ್ಲಬ್ ಮಾಡಿಕೊಡಿ ಎಂದು ಮನವಿ ಮಾಡಿದರು.

    ಇದೇ ವೇಳೆ ಜೆಡಿಎಸ್‍ನ ತಿಪ್ಪೇಸ್ವಾಮಿ ಗಾಲ್ಫ್ ಕ್ಲಬ್ ಬಗ್ಗೆ ಪ್ರಸ್ತಾಪ ಮಾಡಿದರು. ಅಧಿಕಾರಿಗಳೇ ಇವುಗಳ ನಿರ್ವಹಣೆ ಮಾಡುತ್ತಿದ್ದಾರೆ. ಬಾಡಿಗೆ ಸರಿಯಾಗಿ ಕೊಡ್ತಿಲ್ಲ. ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಅಂತ ಮನವಿ ಮಾಡಿದರು. ತಿಪ್ಪೇಸ್ವಾಮಿ ಮಾತಿಗೆ ಅಪ್ಪಾಜಿಗೌಡ, ನಾರಾಯಣಸ್ವಾಮಿ ಸೇರಿ ಹಲವರು ಧ್ವನಿಗೂಡಿಸಿದರು.ಇನ್ನು ಕಾಂಗ್ರೆಸ್ ನ ಸದಸ್ಯ ಇಟಗಿ ರೇಸ್ ಕೋರ್ಸ್ ಬಗ್ಗೆ ವಿಷಯ ಪ್ರಸ್ತಾಪ ಮಾಡಿದರು.

    ಟರ್ಫ್ ಕ್ಲಬ್ ಲೀಸ್ ಅವಧಿ ಮುಗಿದಿದೆ. ಅದನ್ನು ವಶಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಆದರೆ ಅವರು ಹೈಕೋರ್ಟ್‍ಗೆ ಹೋಗಿದರು. ಹೈಕೋರ್ಟ್ ರಾಜ್ಯದ ಪರ ತೀರ್ಪು ಕೊಟ್ಟಿದೆ. ಅವರು ಸುಪ್ರೀಂಕೋರ್ಟ್‍ಗೆ ಹೋಗಿದ್ದಾರೆ. ನಮ್ಮ ಸರ್ಕಾರದ ವಕೀಲರೇ ಕೇಸ್ ಮುಗಿಯೋವರೆಗೂ ರೇಸ್ ಕೋರ್ಸ್ ಮುಂದುವರಿಸಬಹುದು ಎಂದು ಅಫಿಡವಿಟ್ ಕೊಟ್ಟಿದ್ದಾರೆ ಇದು ನಾಚಿಕೆ ಸಂಗತಿ ಅಂತ ವಿರೋಧ ವ್ಯಕ್ತಪಡಿಸಿದರು.

    ಬೆಂಗಳೂರಿನ ಬಹುತೇಕ ಕ್ಲಬ್ ಗಳು ನಮ್ಮ ಜಾಗ, ನಮ್ಮ ನೀರು, ನಮ್ಮ ವಿದ್ಯುತ್ ತೆಗೆದುಕೊಂಡಿವೆ. ಆದ್ರು ಧಿಮಾಕು ಪ್ರದರ್ಶನ ಮಾಡ್ತೀವಿ ಅಂತ ಸದಸ್ಯರು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದರು. ಸದಸ್ಯರ ಮನವಿ ಸ್ವೀಕಾರ ಮಾಡಿದ ಸಚಿವ ಸೋಮಶೇಖರ್, ನಾನು ಸಚಿವನಾದ ಮೇಲೆ ಕ್ಲಬ್ ನವರೇ ನಮ್ಮ ಬಳಿ ಬಂದು ದೂರು ಕೊಡೋಕೆ ಬರುತ್ತಾರೆ ನೀವು ಸ್ವಲ್ಪ ನೋಡಬೇಕು ಎಂದು ಹೇಳಲು ಬಂದಿದ್ದರು. ಯಾರೇ ನಿಯಮ ಮೀರಿದರೂ ಕ್ರಮ ತಗೆದುಕೊಳ್ಳುತ್ತೇನೆ. ಯಾರನ್ನು ರಕ್ಷಣೆ ಮಾಡುವುದಿಲ್ಲ ಎಂದು ತಿಳಿಸಿದರು. ಕ್ಲಬ್‍ಗಳ ಮೇಲೆ ಕ್ರಮಕ್ಕಾಗಿ ಸದನ ಸಮಿತಿಗೆ ಸರ್ಕಾರ ಸಿದ್ದ ಎಂದು ಸದನ ಸಮಿತಿ ರಚನೆ ಮಾಡೋದಾಗಿ ಸದನದಲ್ಲಿ ಘೋಷಣೆ ಮಾಡಿದರು.

  • ವಿಫಲವಾದ ಕೆಐಎಡಿಬಿ ವಸತಿ ಯೋಜನೆಗೆ ಸರ್ಕಾರರಿಂದ ಮರುಜೀವ?

    ವಿಫಲವಾದ ಕೆಐಎಡಿಬಿ ವಸತಿ ಯೋಜನೆಗೆ ಸರ್ಕಾರರಿಂದ ಮರುಜೀವ?

    ರಾಯಚೂರು: ನಗರದ ಯರಮರಸ್ ಬಳಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ, ಕೆಐಎಡಿಬಿ ವತಿಯಿಂದ ನಿರ್ಮಿಸಲಾಗಿರುವ ನೂರಾರು ಮನೆಗಳು ಉದ್ಘಾಟನೆಗೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿವೆ. ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಕೈಗಾರಿಕೆಗಳ ಕಾರ್ಮಿಕರು, ಉದ್ಯೋಗಸ್ಥರಿಗಾಗಿ ನಿರ್ಮಿಸಿದ ವಿವಿಧ ಹಂತದ ನೂರಾರು ಮನೆಗಳು ಹಂಚಿಕೆಯಾಗದೆ ಹಾಗೇ ಉಳಿದಿವೆ. ಮನೆಗಳಲ್ಲಿ ಯಾರೂ ವಾಸಮಾಡದೇ ಅನೈತಿಕ ಚಟುವಟಿಕೆಗಳಿಗೆ ಪ್ರದೇಶ ಆಸರೆಯಾಗಿದೆ.

    ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಡಿ ಬರುವ ಕೆಐಎಡಿಬಿ ವತಿಯಿಂದ ಜಿಲ್ಲಾ ಕೈಗಾರಿಕಾ ಅಭಿವೃದ್ಧಿ ಕಾರ್ಯ ಮತ್ತು ರಾಯಚೂರಿನಲ್ಲಿ ವಿವಿಧ ಅಳತೆಯ ಹೌಸಿಂಗ್ ಪ್ಲಾಟ್‍ಗಳನ್ನು ನಿರ್ಮಾಣ ಮಾಡಿ ಈಗಾಗಲೇ 10 ವರ್ಷಗಳು ಕಳೆದಿದ್ದು, ಒಂದು ಮನೆಯನ್ನು ಹಂಚಿಕೆ ಮಾಡದೆ ವಿಳಂಬ ಮಾಡುತ್ತಿರುವುದರಿಂದ ವಸತಿ ಯೋಜನೆ ಸಂಪೂರ್ಣ ವಿಫಲವಾಗಿದೆ. ಮನೆಗಳು ಹಂಚಿಕೆಯಾಗದೆ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ. ಓಪನ್ ಫ್ಲ್ಯಾಟ್ ಹಾಗೂ ಮನೆಗಳಿಗೆ ಮನಸೋಇಚ್ಚೆ ಅವೈಜ್ಞಾನಿಕ ದರ ನಿಗದಿ ಮಾಡಿದ್ದರಿಂದ ಖರೀದಿಗೆ ಯಾರೂ ಮುಂದೆ ಬಂದಿರಲಿಲ್ಲ. ದರ ಇಳಿಕೆಗೆ ಸಾಕಷ್ಟು ಬಾರಿ ವಿವಿಧ ಕಾರ್ಮಿಕ, ವಾಣಿಜ್ಯೋದ್ಯಮ ಸಂಘಗಳು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

    ರಸ್ತೆ, ವಿದ್ಯುತ್ ದೀಪ ಸೇರಿದಂತೆ ಕೆಲವಾರು ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಬಳಿಕವೂ ಫ್ಲ್ಯಾಟ್, ಮನೆಗಳನ್ನ ಹಂಚಿಕೆ ಮಾಡಿಲ್ಲ. 10 ವರ್ಷಗಳಾದ್ರೂ ಇನ್ನೂ ಕೆಲಸಗಳು ಅಪೂರ್ಣವಾಗಿರುವ ಹಿನ್ನೆಲೆ ಸರ್ಕಾರ ಈಗ ಎಚ್ಚೆತ್ತಿದೆ. ರಾಜ್ಯ ವಿಧಾನಸಭೆಯ ಅಂದಾಜುಗಳ ಸಮಿತಿ ರಾಯಚೂರಿಗೆ ಭೇಟಿ ನೀಡಲಿದ್ದು ಡಿಸೆಂಬರ್ 18 ರಂದು ಪರಿಶೀಲನೆ ನಡೆಸಲಿದೆ. ಮೂಲಭೂತ ಸೌಕರ್ಯಗಳು ಹಾಗೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಬಗ್ಗೆ ವೀಕ್ಷಣೆ ನಡೆಸಿ, ಸುರಾನಾ ಕೈಗಾರಿಕೆಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಿದೆ.

    ಸಮಿತಿಯ ಅಧ್ಯಕ್ಷ ಸಿ.ಎಂ. ಉದಾಸಿ. ಸಮಿತಿಯ ಸದಸ್ಯರಾದ ರಾಮಲಿಂಗಾರೆಡ್ಡಿ, ಅಮರೇಶಗೌಡ ಲಿಂಗನಗೌಡ ಪಾಟೀಲ ಬಯ್ಯಾಪುರ, ಸತೀಶ್ ಎಲ್.ಜಾರಕಿಹೊಳಿ, ಕೌಜಲಗಿ ಮಹಾಂತೇಶ ಶಿವಾನಂದ, ಶರಣಬಸಪ್ಪಗೌಡ ದರ್ಶನಾಪುರ, ಅಭಯ್ ಪಾಟೀಲ್ ಸೇರಿ ಇತರರು ಪರಿಶೀಲನೆ ನಡೆಸಿ ಚರ್ಚೆ ಮಾಡಲಿದ್ದಾರೆ.

  • ರಕ್ಷಣಾ ಸಚಿವಾಲಯದ ಸಮಿತಿಯಲ್ಲಿ ಸಾಧ್ವಿ ಪ್ರಜ್ಞಾಗೆ ಸ್ಥಾನ

    ರಕ್ಷಣಾ ಸಚಿವಾಲಯದ ಸಮಿತಿಯಲ್ಲಿ ಸಾಧ್ವಿ ಪ್ರಜ್ಞಾಗೆ ಸ್ಥಾನ

    ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ.

    21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿಯ ನೇತೃತ್ವವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದಾರೆ. ಈ ಸಮಿತಿಯಲ್ಲಿ ಪ್ರತಿ ಪಕ್ಷದ ಸದಸ್ಯರಾದ ಫಾರೂಕ್ ಅಬ್ದುಲ್ಲಾ ಮತ್ತು ಎನ್‍ಸಿಪಿ ನಾಯಕ ಶರದ್ ಪವಾರ್ ಅವರು ಇರಲಿದ್ದಾರೆ. ಈ ಸಮಿತಿಗೆ ಸಾಧ್ವಿ ಪ್ರಜ್ಞಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕಾಂಗ್ರೆಸ್ ವಿರೋಧವನ್ನು ವ್ಯಕ್ತಪಡಿಸಿದೆ.

    ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡಿರುವ ಕಾಂಗ್ರೆಸ್, 21 ಸಂಸತ್ತಿನ ಹಿರಿಯ ಸದಸ್ಯರು ಇರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜ ಶಾಂತಿಯನ್ನು ಕದಡುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೇಂದ್ರ ಸರ್ಕಾರ ಸ್ಥಾನ ನೀಡಿರುವುದು ನಿಜಕ್ಕೂ ವಿಪರ್ಯಾಸ. ಇದನ್ನು ನಾವು ಒಪ್ಪುವುದಿಲ್ಲ ಎಂದು ಮೋದಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ.

    ವಿವಾದಾತ್ಮಕ ವ್ಯಕ್ತಿಗಳಿಗೆ ಇತರೆ ಪಕ್ಷಗಳು ಸ್ಥಾನ ನೀಡಲು ಯೋಚಿಸುವಾಗ ಬಿಜೆಪಿ ಇವರಿಗೆ ಟೆಕೆಟ್ ನೀಡಿ ಸಂಸದರನ್ನಾಗಿ ಮಾಡಿದೆ. ನ್ಯಾಯಾಲಯದಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸೇರಿಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಎಲ್ಲವೂ ಸಂವಿಧಾನದಿಂದ ಮಾರ್ಗದರ್ಶಿಸಲ್ಪಟ್ಟಿಲ್ಲ. ನೈತಿಕ ಆಧಾರದ ಮೇಲೆ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಸಂಸತ್ತಿನಲ್ಲಿ ಬಹಳ ಉತ್ತಮ ವ್ಯಕ್ತಿಗಳಿದ್ದಾರೆ. ಅವರನ್ನು ಆಯ್ಕೆ ಮಾಡಿ ಎಂದು ಕಾಂಗ್ರೆಸ್ ಕಾರ್ಯದರ್ಶಿ ಪ್ರಣವ್ ಜಾ ಒತ್ತಾಯಿಸಿದ್ದಾರೆ.

    ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿರುವ ಮಧ್ಯಪ್ರದೇಶದ ಕಾನೂನು ಸಚಿವ ಪಿಪಿ ಶರ್ಮಾ, ಬಿಜೆಪಿ ಹೇಳುವುದು ಒಂದು ಮಾಡುವುದು ಇನ್ನೊಂದು. ಆಕೆ ವಿವಾದಾತ್ಮಕ ಹೇಳಿಕೆ ನೀಡಿದಾಗ ಮೋದಿ ಅವರು ಆಕೆ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಾರೆ. ಆದರೆ ಆನೇಕ ಆರೋಪಗಳಿರುವ ಆಕೆಯನ್ನು ಒಂದು ಮಹತ್ವದ ಸಮಿತಿಗೆ ಆಯ್ಕೆ ಮಾಡಿರುವುದು ದುರದೃಷ್ಟಕರ ಎಂದಿದ್ದಾರೆ.

    ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರು. ಇದರ ಜೊತೆಗೆ ರಾಷ್ಟ್ರಪಿತ ಗಾಂಧೀಜಿಯವರನ್ನು ಕೊಂದ ನಾಥುರಾಮ್ ಗೋಡ್ಸೆ ಅವರನ್ನು ಒಬ್ಬ ದೇಶಭಕ್ತ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ಇದನ್ನು ಓದಿ: ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

  • ಧೋನಿಗಿಂತಲೂ ಹೆಚ್ಚು ಸಂಬಳ ಪಡೆಯಲಿದ್ದಾರೆ ಭುವಿ! ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಪೂರ್ಣ ಪಟ್ಟಿ

    ಧೋನಿಗಿಂತಲೂ ಹೆಚ್ಚು ಸಂಬಳ ಪಡೆಯಲಿದ್ದಾರೆ ಭುವಿ! ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಪೂರ್ಣ ಪಟ್ಟಿ

    ಮುಂಬೈ: ಬಿಸಿಸಿಐ ಸಂಸ್ಥೆಗೆ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿ(ಸಿಒಎ)ಯು ಬುಧವಾರ ಆಟಗಾರರ ಗುತ್ತಿಗೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಗುತ್ತಿಗೆಯ ವಾರ್ಷಿಕ ಒಪ್ಪಂದದ ಅನ್ವಯ ಬಿಸಿಸಿಐ ನೀಡುತ್ತಿರುವ ವೇತನದಲ್ಲಿ ಭಾರೀ ಏರಿಕೆಯಾಗಿದ್ದು ಧೋನಿಗಿಂತಲೂ ಭುವಿ ಹೆಚ್ಚಿನ ವೇತನವನ್ನು ಪಡೆಯಲಿದ್ದಾರೆ.

    ಸಿಒಎ ಸಮಿತಿ ನೀಡಿರುವ ಪಟ್ಟಿಯ ಅನ್ವಯ ಹೊಸದಾಗಿ `ಎ ಪ್ಲಸ್’ ಶ್ರೇಣಿ ಯನ್ನು ಹೊಸದಾಗಿ ಪಟ್ಟಿಯಲ್ಲಿ ನೀಡಲಾಗಿದೆ. ಒಪ್ಪಂದವು 2017 ಅಕ್ಟೋಬರ್ ನಿಂದ 2018 ಸೆಪ್ಟೆಂಬರ್ ವರೆಗೆ ಅನ್ವಯವಾಗಲಿದೆ. ವಿಶೇಷವಾಗಿ ಹಿರಿಯ ಮಹಿಳೆಯರ ವಿಭಾಗ ತಂಡದಲ್ಲಿ ‘ಸಿ ಗ್ರೇಡ್’ ಪರಿಚಯ ಮಾಡಲಾಗಿದೆ.

    `ಎ’ ಪ್ಲಸ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ವಾರ್ಷಿಕವಾಗಿ 7 ಕೋಟಿ ರೂ. ಪಡೆಯಲಿದ್ದಾರೆ. ನಂತರದ ಸ್ಥಾನ ಎ, ಬಿ, ಸಿ, ಪಟ್ಟಿಯಲ್ಲಿ ಆಟಗಾರರಿಗೆ ಕ್ರಮವಾಗಿ 5, 3, 1 ಕೋಟಿ ಯನ್ನು ಪಡೆಯಲಿದ್ದಾರೆ.

    ಪರಿಷ್ಕೃತ ಮೊತ್ತ ಪಟ್ಟಿ:
    ಹಿರಿಯ ಪುರುಷರ ತಂಡ
    ‘ಎ ಪ್ಲಸ್’ ಶ್ರೇಣಿ: 7 ಕೋಟಿ ರೂ.
    ‘ಎ’ ಶ್ರೇಣಿ: 5 ಕೋಟಿ ರೂ.
    ‘ಬಿ’ ಶ್ರೇಣಿ: 3 ಕೋಟಿ ರೂ.
    ‘ಸಿ’ ಶ್ರೇಣಿ: 1 ಕೋಟಿ ರೂ.

    ಹಿರಿಯ ಮಹಿಳಾ ತಂಡ
    ‘ಎ’ ಶ್ರೇಣಿ: 50 ಲಕ್ಷ ರೂ.
    ‘ಬಿ’ ಶ್ರೇಣಿ: 30 ಲಕ್ಷ ರೂ.
    ‘ಸಿ’ ಶ್ರೇಣಿ: 10 ಲಕ್ಷ ರೂ.

    ಯಾವ ಆಟಗಾರರು ಯಾವ ಪಟ್ಟಿಯಲ್ಲಿದ್ದಾರೆ?
    ಎ ಪ್ಲಸ್ ಶ್ರೇಣಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಜಸ್‍ಪ್ರೀತ್ ಬೂಮ್ರಾ ಮತ್ತು ಭುವನೇಶ್ವರ್ ಕುಮಾರ್.

    `ಎ’ ಶ್ರೇಣಿ: ಮಹೇಂದ್ರ ಸಿಂಗ್ ಧೋನಿ, ಆರ್.ಅಶ್ವಿನ್, ರವೀಂದ್ರ ಜಡೇಜ, ವೃದ್ಧಿಮಾನ್ ಸಹಾ, ಮುರಳಿ ವಿಜಯ್, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ.

    `ಬಿ’ ಶ್ರೇಣಿ: ಉಮೇಶ್ ಯಾದವ್, ಕೆ.ಎಲ್.ರಾಹುಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್.

    `ಸಿ’ ಶ್ರೇಣಿ: ಸುರೇಶ್ ರೈನಾ, ಕೇದಾರ್ ಜಾಧವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಪಾರ್ಥಿವ್ ಪಟೇಲ್ ಮತ್ತು ಜಯಂತ್ ಯಾದವ್.

    ಮಹಿಳಾ ಆಟಗಾರರ ಶ್ರೇಣಿ ಪಟ್ಟಿ:
    `ಎ’ ಶ್ರೇಣಿ: ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‍ಪ್ರೀತ್ ಕೌರ್ ಮತ್ತು ಸ್ಮೃತಿ ಮಂದಣ್ಣ

    `ಬಿ’ ಶ್ರೇಣಿ: ಪೂನಮ್ ಯಾದವ್, ವೇದಾ ಕೃಷ್ಣಮೂರ್ತಿ, ರಾಜೇಶ್ವರಿ ಗಾಯಕವಾಡ್, ಏಕ್ತಾ ಬಿಷ್ಠ್, ಶಿಖಾ ಪಾಂಡೆ ಮತ್ತು ದೀಪ್ತಿ ಶರ್ಮಾ.

    `ಸಿ’ ಶ್ರೇಣಿ: ಮಾನಸಿ ಜೋಶಿ, ಅನುಜಾ ಪಾಟೀಲ್, ಮೋನಾ ಮೆಷ್ರಮ್, ನುಜಾತ್ ಪರ್ವೀನ್, ಸುಷ್ಮಾ ವರ್ಮಾ, ಪೂನಮ್ ರೌತ್, ಜೆಮಿಮಾ ರಾಡ್ರಿಗಸ್, ಪೂಜಾ ವಸ್ತ್ರಾಕರ್ ಮತ್ತು ತಾನಿಯಾ ಭಾಟಿಯಾ.

    ಸಮಿತಿಯ ನಿರ್ಣಾಯದ ಪಟ್ಟಿಯಲ್ಲಿ ದೇಶೀಯ ಆಟಗಾರ ವೇತನದಲ್ಲಿ ಶೇ. 200ರಷ್ಟು ಹೆಚ್ಚಳವಾಗಿದೆ. ಅಲ್ಲದೇ ವಯಸ್ಸಿನ ಆಧಾರದ ಮೇಲೆ ವಿಂಗಡಿಸಿರುವ ಸಮಿತಿ ಅಂಡರ್ 23 ತಂಡದ ಆಟಗಾರರು 17,500ರೂ. ಹಾಗೂ ಹೆಚ್ಚವರಿ ಆಟಗಾರರು 8,750 ರೂ. ವೇತನ ಪಡೆಯಲಿದ್ದಾರೆ.

    ಪುರುಷ ತಂಡದ ಆಟಗಾರರ ದೈನಂದಿನ ವೇತನ ಪಟ್ಟಿ:
    ಈ ಪಟ್ಟಿಯಲ್ಲಿ ಎರಡು ವಿಭಾಗವಿದ್ದು ತಂಡಕ್ಕೆ ಆಯ್ಕೆಯಾಗಿ ಅಂತಿಮ 11ರ ಪಟ್ಟಿಯಲ್ಲಿ ಆಡದ ಆಟಗಾರರನ್ನು ಮೀಸಲು ಆಟಗಾರರು ಎಂದು ಗುರುತಿಸಲಾಗಿದ್ದು, ಅವರಿಗೆ ಆಟಗಾರರ ಸಂಬಳದ ಅರ್ಧ ಹಣವನ್ನು ನೀಡಲಾಗುತ್ತದೆ.

    ಹಿರಿಯರು: 35,000 ರೂ. ಮೀಸಲು: 17,500 ರೂ.
    ಅಂಡರ್ 23: 17,500 ರೂ. ಮೀಸಲು: 8,750 ರೂ.
    ಅಂಡರ್ 19: 10,500 ರೂ. ಮೀಸಲು: 5,250 ರೂ.
    ಅಂಡರ್ 16: 3,500 ರೂ. ಮೀಸಲು: 1,750 ರೂ.

    ಗುತ್ತಿಗೆ ಪಟ್ಟಿಯಿಂದ ಮಹಮದ್ ಶಮಿ ಔಟ್:
    ಟೀಂ ಇಂಡಿಯಾ ವೇಗದ ಬೌಲರ್ ಮಹಮ್ಮದ್ ಶಮಿ ಅವರನ್ನು ಬಿಸಿಸಿಐ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ. ಶಮಿ ತಮ್ಮ ಪತ್ನಿ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ. ಪತಿಯ ದೌರ್ಜನ್ಯದ ಕುರಿತು ದೂರು ನೀಡಿರುವ ಜಹಾನ್, ಸಾಮಾಜಿಕ ಜಾಲತಾಣಗಳಲ್ಲೂ ಈ ಮಾಹಿತಿಯನ್ನು ಹರಿಯಬಿಟ್ಟಿದ್ದರು. ಅದ್ದರಿಂದ ಗುತ್ತಿಗೆ ಪಟ್ಟಿ ಸೇರ್ಪಡೆಗೆ ಶಮಿ ಅವರ ಹೆಸರಿಗೆ ತಡೆ ನೀಡಲಾಗಿದೆ. ಆದರೆ ಶಮಿ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಬಿಸಿಸಿಐ ಉಳಿದಂತೆ 26 ಆಟಗಾರ ಪಟ್ಟಿ ಬಿಡುಗಡೆ ಮಾಡಿದೆ.

    ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾದ ಸರಣಿಯಲ್ಲಿ ಮಹಮಮ್ಮದ್ ಶಮಿ ಉತ್ತಮ ಪ್ರದರ್ಶನ ನೀಡಿದ್ದರು. ಶಮಿ ಪತ್ನಿ ಹಸೀನ್ ಜಹಾನ್ ಕೌಟುಂಬಿಕ ದೌರ್ಜನ್ಯ ದೂರು ನೀಡಿದ ಕಾರಣ ಶಮಿ ಅವರ ಗುತ್ತಿಗೆ ನವೀಕರಿಸಲು ಮಂಡಳಿ ಮುಂದಾಗಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

     

  • ಕೇಂದ್ರ ಸರ್ಕಾರದ ಬಳಿ ಒಟ್ಟು ಎಷ್ಟು ಭೂಮಿ ಇದೆ ಗೊತ್ತಾ?

    ಕೇಂದ್ರ ಸರ್ಕಾರದ ಬಳಿ ಒಟ್ಟು ಎಷ್ಟು ಭೂಮಿ ಇದೆ ಗೊತ್ತಾ?

    ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಹೊಂದಿರುವ ಒಟ್ಟು ಭೂಮಿಯ ವಿಸ್ತೀರ್ಣ ಎಷ್ಟು ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿದ್ದು, ರಾಷ್ಟರ ರಾಜಧಾನಿ ದೆಹಲಿಗಿಂತ ಸುಮಾರು 9 ಪಟ್ಟು ದೊಡ್ಡದಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಅಂಕಿ ಅಂಶಗಳು ತಿಳಿಸಿವೆ.

    ಕೇಂದ್ರ ಸರ್ಕಾರ 51 ಸಚಿವಾಲಯಗಳ ಪೈಕಿ 41 ಕೇಂದ್ರ ಸಚಿವಾಲಯಗಳು ಹಾಗೂ 22 ರಾಜ್ಯ ಸಚಿವಾಲಯಗಳು ತಮ್ಮ ಇಲಾಖೆಯ ಅಧೀನದಲ್ಲಿರುವ ಭೂಮಿಯ ಕುರಿತು ಮಾಹಿತಿಯನ್ನು ನೀಡಿವೆ.

    ಸಚಿವಾಲಯಗಳು ನೀಡಿರುವ ಮಾಹಿತಿಯಂತೇ ದೇಶಾದ್ಯಂತ ಒಟ್ಟು 13,505 ಚದರ ಕಿ.ಮೀ ಪ್ರದೇಶದ ಭೂಮಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಅಂದರೆ ರಾಜಧಾನಿ ದೆಹಲಿ (1,483 ಚದರ ಕಿ.ಮೀ) 9 ಪಟ್ಟು ಹೆಚ್ಚಿನ ಭೂಮಿ ಕೇಂದ್ರ ಸರ್ಕಾರದ ಒಡೆತನದಲ್ಲಿದೆ.

    ಕೇಂದ್ರವು ಹೊಂದಿರುವ ಒಟ್ಟು ಭೂ ಪ್ರದೇಶದಲ್ಲಿ ಹೆಚ್ಚಿನ ಪ್ರದೇಶವು ರೈಲ್ವೇ ಇಲಾಖೆ(2,929.6 ಚದರ ಕಿ.ಮೀ)ಗೆ ಸಂಬಂಧಿಸಿದೆ. ಇನ್ನುಳಿದಂತೆ ರಕ್ಷಣಾ ಇಲಾಖೆ ಎರಡನೇ ಸ್ಥಾನದಲ್ಲಿದ್ದು, ದೇಶದ ರಕ್ಷಣಾ ದೃಷ್ಟಿಯಿಂದ ಈ ಮಾಹಿತಿಯನ್ನು ಬಹಿರಂಗೊಳಿಸಿಲ್ಲ. ರಕ್ಷಣಾ ಇಲಾಖೆಯ ಸಂಬಂಧಿಸಿದಂತೆ ಕೇವಲ 383.62 ಚದರ ಕಿ.ಮೀ ಪ್ರದೇಶದ ಮಾಹಿತಿಯನ್ನು ಮಾತ್ರ ನೀಡಿದೆ. ಈ ಹಿಂದೆ 2010-11 ನೇ ಸಾಲಿನಲ್ಲಿ ಸರ್ಕಾರದ ವರದಿ ರಕ್ಷಣಾ ಇಲಾಖೆಯು ಸುಮಾರು 7 ಸಾವಿರ ಚದರ ಕಿ.ಮೀ ಭೂಮಿಯನ್ನು ಹೊಂದಿದೆ ಎಂದು ತಿಳಿಸಿತ್ತು.

    ಕೇಂದ್ರ ತನ್ನ ಇಲಾಖೆಗಳ ಅಧೀನದಲ್ಲಿರುವ ಭೂ ವಿಸ್ತೀರ್ಣದ ಬಗ್ಗೆ ಮಾಹಿತಿಯನ್ನು ಪಡೆಯಲು 2012 ರಲ್ಲಿ ಮಾಜಿ ಹಣಕಾಸು ಕಾರ್ಯದರ್ಶಿ ವಿಜಯ್ ಕೇಲ್ಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಿತ್ತು. ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ಹಲವು ರಾಜ್ಯಗಳು ಕೇಂದ್ರ ಭೂಮಿಯನ್ನು ಬಾಡಿಗೆಗೆ ನೀಡುವುದರ ಮೂಲಕ ಆಧಾಯವನ್ನು ಪಡೆಯುತ್ತಿದ್ದವು.

    ಸರ್ಕಾರ ಈ ಪ್ರದೇಶಗಳು ದೇಶದ ಸಾರ್ವಜನಿಕರ ಸೇರಿದ ಅಮೂಲ್ಯ ಪ್ರದೇಶಗಳಾಗಿದ್ದು ಈ ಕುರಿತು ಸ್ಪಷ್ಟ ಮಾಹಿತಿಯನ್ನು ಹೊಂದಿರಬೇಕಿದೆ ಎಂದು ಭಾರತದ ಸ್ವತಂತ್ರ ಸಂಶೋಧನಾ ಸಂಸ್ಥೆಯ ನಿರ್ದೇಶಕರು ಹಾಗೂ ಸ್ಥಾಪಕರದ ಶುಭಾಸಿಸ್ ಗಂಗೋಪಾಧ್ಯಾಯ ತಿಳಿಸಿದ್ದಾರೆ.

    ಸರ್ಕಾರಿ ಪ್ರದೇಶಗಳ ಸೂಕ್ತ ಬಳಕೆಯ ಕುರಿತು ಸಾರ್ವಜನಿಕರಿಂದ ಸಲಹೆಗಳನ್ನು ‘ರೈಟ್ ಟು ಕಾಂಟೆಸ್ಟ್’ ಎಂಬ ಯೋಜನೆಯ ಮೂಲಕ ಮಾಹಿತಿಯನ್ನು ನೀಡುವಂತೆ ಕೇಳಲಾಗಿದೆ ಎಂದು ತಿಳಿಸಿದರು.

    ಇನ್ನುಳಿದಂತೆ ಕಲ್ಲಿದ್ದಲು ಗಣಿ 2,580.92 ಚದರ ಕಿ.ಮೀ., ಇಂಧನ ಇಲಾಖೆಯ 1,806.69 ಚದರ ಕಿ.ಮೀ, ಬೃಹತ್ ಉದ್ಯಮಗಳು ಹಾಗೂ ಸಾರ್ವಜನಿಕ ಉದ್ಯಮ ಇಲಾಖೆ 1,209.49 ಚದರ ಕಿ.ಮೀ ವಿಸ್ತೀರ್ಣದ ಪ್ರದೇಶಗಳನ್ನು ಹೊಂದಿವೆ.

    ಸರ್ಕಾರ ದೊರೆತಿರುವ ಭೂಮಿ ಒಂದು ಭಾಗವನ್ನು ಹಣಗಳಿಕೆ, ವಸತಿ ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಯಾವ ಸಚಿವಾಲಯದಲ್ಲಿ ಎಷ್ಟು?
    ರೈಲ್ವೇ – 2,929.6 ಚದರ ಕಿ.ಮೀ
    ಕಲ್ಲಿದ್ದಲು ಗಣಿ – 2,580.92 ಚದರ ಕಿ.ಮೀ
    ಇಂಧನ ಇಲಾಖೆ – 1,806.69 ಚದರ ಕಿ.ಮೀ
    ಬೃಹತ್ ಉದ್ಯಮಗಳು ಹಾಗೂ ಸಾರ್ವಜನಿಕ ಉದ್ಯಮ ಇಲಾಖೆ – 1,209.49 ಚದರ ಕಿ.ಮೀ
    ನೌಕ ಇಲಾಖೆ – 1,146 ಚದರ ಕಿ.ಮೀ
    ಸ್ಟಿಲ್ – 608.02 ಚದರ ಕಿ.ಮೀ
    ಕೃಷಿ – 589.07 ಚದರ ಕಿ.ಮೀ
    ಗೃಹ ಸಚಿವಾಲಯ – 443.12 ಚದರ ಕಿ.ಮೀ
    ಮಾನವ ಸಂಪನ್ಮೂಲ ಅಭಿವೃದ್ಧಿ – 409.43 ಚದರ ಕಿ.ಮೀ
    ರಕ್ಷಣೆ – 383.62 ಚದರ ಕಿ.ಮೀ