Tag: communal riots

  • ಮತ್ತೆ ಮುಜುಗರ ಭೀತಿ – ಮಾಧ್ಯಮಗಳನ್ನು ಹೊರಗಿಟ್ಟು ನಾಗಮಂಗಲದಲ್ಲಿ ಶಾಂತಿ ಸಭೆಗೆ ಪ್ಲ್ಯಾನ್‌

    ಮತ್ತೆ ಮುಜುಗರ ಭೀತಿ – ಮಾಧ್ಯಮಗಳನ್ನು ಹೊರಗಿಟ್ಟು ನಾಗಮಂಗಲದಲ್ಲಿ ಶಾಂತಿ ಸಭೆಗೆ ಪ್ಲ್ಯಾನ್‌

    ಮಂಡ್ಯ: ನಾಗಮಂಗಲದಲ್ಲಿ (Nagamangala) ಇಂದು ಶಾಂತಿ ಸಭೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಸಭೆಗೆ ಮಾಧ್ಯಮಗಳನ್ನ (Media) ನಿರ್ಬಂಧಿಸಲು ಪ್ಲ್ಯಾನ್‌ ಮಾಡಲಾಗಿದೆ. ಈ ಮೂಲಕ ಓಲೈಕೆ ರಾಜಕಾರಣಕ್ಕೆ ಸರ್ಕಾರ ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಜಿಲ್ಲಾಡಳಿತ, ಉಸ್ತುವಾರಿ ಸಚಿವರ ಈ ನಡೆ‌ ಮತ್ತೆ ಅನುಮಾನಕ್ಕೆ ಕಾರಣವಾಗಿದೆ. ಸಭೆಯಲ್ಲಿ ವಸ್ತು ಸ್ಥಿತಿ ಬಯಲಾಗಬಹುದು ಎಂಬ ಭಯ‌ಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಜಿಲ್ಲಾಡಳಿತ ಮುಂದಾಗಿದ್ಯಾ ಎಂಬ ಪ್ರಶ್ನೆ  ಎದ್ದಿದೆ. ಇದನ್ನೂ ಓದಿ: ನಾಗಮಂಗಲ ಕೋಮು ಗಲಭೆ ತಡೆಯೋ ಅವಕಾಶವಿದ್ರೂ ವಿಫಲವಾದ ಇಲಾಖೆಗಳು

     

    ಯಾಕೆ ನಿರ್ಬಂಧ?
    ಗುರುವಾರ ನಾಗಮಂಗಲಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಂಧಿತರ ಕುಟುಂಬಸ್ಥರು ಚಲುವರಾಯಸ್ವಾಮಿಗೆ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದರು.‌ ಕಲ್ಲು, ಪೆಟ್ರೋಲ್ ಬಾಂಬ್ ಎಸೆದವರನ್ನು ಬಂಧಿಸಿಲ್ಲ‌‌. ತಪ್ಪನ್ನೇ ಮಾಡದ ಅಮಾಯಕರನ್ನು ಯಾಕೆ ಬಂಧಿಸಿದ್ದೀರಿ? ಇಷ್ಟೊಂದು ಒಲೈಕೆ ರಾಜಕರಾಣ ಯಾಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಜನರು ಪ್ರಶ್ನೆಗಳಿಗೆ ಉತ್ತರ ನೀಡಲು ವಿಫಲರಾದ ಚಲುವರಾಯಸ್ವಾಮಿಗೆ ಭಾರೀ ಮುಜುಗರವಾಗಿತ್ತು.

    ಇಂದು ನಡೆಯುವ ಸಭೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಜನರು ಮತ್ತೆ ತರಾಟೆ ತೆಗೆದುಕೊಳ್ಳುವ ಸಾಧ್ಯತೆ‌ಯಿದೆ. ಬಂಧಿತ ಕುಟುಂಬಸ್ಥರು ಸಹ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸುವುದು ಖಚಿತ. ಆ ಮುಜುಗರ ತಪ್ಪಿಸಿಕೊಳ್ಳಲು ಮಾಧ್ಯಮಗಳನ್ನ ಸಭೆಯಿಂದ ದೂರ ಇಡಲು ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

     

  • ನಾಗಮಂಗಲ ಕೋಮು ಗಲಭೆ ತಡೆಯೋ ಅವಕಾಶವಿದ್ರೂ ವಿಫಲವಾದ ಇಲಾಖೆಗಳು

    ನಾಗಮಂಗಲ ಕೋಮು ಗಲಭೆ ತಡೆಯೋ ಅವಕಾಶವಿದ್ರೂ ವಿಫಲವಾದ ಇಲಾಖೆಗಳು

    ಬೆಂಗಳೂರು: ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ (Ganesh Procession) ವೇಳೆ ನಡೆದ ಕೋಮು ಗಲಭೆಗೆ ಪೊಲೀಸ್‌ (Police) ಮತ್ತು ಗುಪ್ತಚರ ಇಲಾಖೆ (Intelligence Bureau) ವೈಫಲ್ಯವೇ ಕಾರಣ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

    ಹೌದು. ಕಳೆದ ವರ್ಷವೇ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿದ್ದ ಕಾರಣ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಆದರೆ ಮುನ್ನೆಚ್ಚರಿಕೆ ವಹಿಸದ ಕಾರಣ ಈ ಗಲಭೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ವೈಫಲ್ಯ ಹೇಗೆ?
    ನಾಗಮಂಗಲದ ಸ್ಥಿತಿಗತಿ ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ತಿಳಿಯುತ್ತದೆ. ಇದಕ್ಕೆ ಸಾಕ್ಷಿ ಪೆಟ್ರೋಲ್ ಬಾಂಬ್, ಕಲ್ಲು, ತಲವಾರ್‌ಗಳು. ಭಾರೀ ಪ್ರಮಾಣದಲ್ಲಿ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಇದರ ಜೊತೆ ಪೆಟ್ರೋಲ್‌ ಬಾಂಬ್‌ ಸಂಗ್ರಹಿಸುವ ಮೂಲಕ ಮೊದಲೇ ಗಲಭೆಗೆ ಬೇಕಾದ ವಸ್ತುಗಳನ್ನು ರಹಸ್ಯವಾಗಿ ಇಟ್ಟುಕೊಂಡಿದ್ದರು. ಜೊತೆಗೆ ಭಾರೀ ಸಂಖ್ಯೆಯಲ್ಲಿ ಯುವಕರು ಮಸೀದಿ ರಸ್ತೆಯಲ್ಲಿ ಸೇರಿದ್ದರು. ಇಷ್ಟೆಲ್ಲಾ ಪೂರ್ವಭಾವಿ ಸಿದ್ಧತೆ ಮಾಡಿದ್ದರೂ ಗುಪ್ತಚರ ಇಲಾಖೆ ಈ ವಿಚಾರ ತಿಳಿಯುವಲ್ಲಿ ವಿಫಲವಾಗಿತ್ತು. ಈ ಪೂರ್ವಭಾವಿ ವಿಚಾರ ಗೊತ್ತಾಗಿದ್ದರೆ ಗಲಭೆಯನ್ನು ಮಟ್ಟ ಹಾಕಬಹುದಿತ್ತು. ಇದನ್ನೂ ಓದಿ: ನಾನಿನ್ನೂ ವೆಬ್‌ಸೀರಿಸ್‌ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್

    ಗಲಭೆಗೂ ಮುನ್ನವೇ ಪೊಲೀಸ್ ಇಲಾಖೆ ಮೈ ಮರೆತಿತ್ತು. ಬದ್ರಿಕೊಪ್ಪಲು ಗ್ರಾಮದಿಂದ ಹೊರಟ ಮೆರವಣಿಗೆ ಮಂಡ್ಯ ವೃತ್ತಕ್ಕೆ ಬಂದಾಗ ಅನ್ಯಕೋಮಿನ ಯುವಕರು ಕ್ಯಾತೆ ಎತ್ತಿದ್ದರು. ಈ ವೇಳೆ ಮೆರವಣಿಗೆಯ ದಾರಿಯನ್ನು ಬದಲಿಸಿದರು. ಈ ಸಂದರ್ಭದಲ್ಲೇ ಪ್ರತಿಭಟನಾ ಯುವಕರಿಗೆ ತಿಳಿ ಹೇಳಬಹುದಿತ್ತು. ಆದರೆ ಪೊಲೀಸರು ಆ ಕೆಲಸ ಮಾಡಿರಲಿಲ್ಲ.

    ಪೊಲೀಸರು ಮತ್ತೆ ಮಸೀದಿ ಇರುವ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಿದ್ದರು. ಈ ವೇಳೆ ಜೈ ಗಣಪತಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದಾಗಿ ಪ್ರತಿಯಾಗಿ ಅಲ್ಲಾ-ಹು ಅಕ್ಬರ್ ಘೋಷಣೆ ಕೂಗಿ ಕಲ್ಲು ತೂರಿದ್ದಾರೆ.

    ಕಳೆದ ಬಾರಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಯಾವ ದಾರಿಯಲ್ಲಿ ಮೆರವಣಿಗೆ ಹೋಗುತ್ತದೆ? ಎಷ್ಟು ಪೊಲೀಸರನ್ನು ಭದ್ರತೆಗೆ ನಿಯೋಜಿಸಬೇಕು ಎನ್ನುವುದು ತಿಳಿದಿರಬೇಕಿತ್ತು. ಎರಡನೆಯದಾಗಿ ಪ್ರತಿಭಟನಾ ಯುವಕರಿಗೆ ಪೊಲೀಸರು ತಿಳಿ ಹೇಳಬೇಕಿತ್ತು. ಪೊಲೀಸರು ಈ ಎರಡು ಕೆಲಸ ಸರಿಯಾಗಿ ಮಾಡಿದ್ದರೆ ಗಲಭೆ ಆಗುತ್ತಿರಲಿಲ್ಲ ಎಂಬ ಮಾತು ಕೇಳಿ ಬಂದಿದೆ.

    ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್‌ ಅಧಿಕಾರಿ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ಅವರನ್ನು ಎತ್ತಗಂಡಿ ಮಾಡಲಾಗಿದೆ. ಇದರ ಜೊತೆ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ (Ashok Kumar) ಅವರನ್ನು ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ.

     

  • ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್ – ಜ.22ರಂದು ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಜೆ ಇಲ್ಲ..?

    ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್ – ಜ.22ರಂದು ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಜೆ ಇಲ್ಲ..?

    ಬೆಂಗಳೂರು: ಜನವರಿ 22ರಂದು ಸೋಮವಾರ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ.

    ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22ರಂದು ಯಾವುದೇ ಪೊಲೀಸ್ (Police) ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ. ಒಂದು ವೇಳೆ ರಜೆಯಲ್ಲಿರುವವರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಹಿರಿಯ ಅಧಿಕಾರಿಗಳು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್‌

    ಈ ಹಿಂದಿನ ಕೋಮುಗಲಭೆಗಳ (Communal Riots) ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ರೌಡಿಶೀಟರ್‌ಗಳ ಮೇಲೂ ನಿಗಾ ವಹಿಸಲಾಗಿದೆ.

    ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಧರ್ಮದ ಮುಖಂಡರನ್ನ ಕರೆಸಿ ಶಾಂತಿಪಾಲನಾ ಸಭೆ ನಡೆಸಬೇಕು. ಈ ಬಗ್ಗೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡುವಂತೆ ಸೂಚಿಸಲು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್

    ಜ.22ರಂದು ರಾಜ್ಯದಲ್ಲಿಯೂ ಯಾವುದೇ ರ‍್ಯಾಲಿಗಳಿಗೆ ಅವಕಾಶ ಇಲ್ಲ. ಆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ವಿವಿಧ ಜಿಲ್ಲೆಗಳಿಂದಲೂ ಪೊಲೀಸರನ್ನ ಕರೆಸಲಾಗಿದೆ. ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಂದಲೂ ಹೆಚ್ಚವರಿ ಪೊಲೀಸರ ನಿಯೋಜನೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದಾರೆ. ಇದನ್ನೂ ಓದಿ: ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಸಲು ನಿರ್ಧಾರ 

  • ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು – ವಾಟ್ಸಪ್ ಚಾಟ್ ಹಂಚಿಕೊಂಡ ಬಿ.ಕೆ ಹರಿಪ್ರಸಾದ್

    ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು – ವಾಟ್ಸಪ್ ಚಾಟ್ ಹಂಚಿಕೊಂಡ ಬಿ.ಕೆ ಹರಿಪ್ರಸಾದ್

    -ದೇಶದ್ರೋಹ ಕೇಸ್ ಹಾಕಲು ಒತ್ತಾಯ

    ಬೆಂಗಳೂರು: ಅಯೋಧ್ಯೆಗೆ ಹೋಗೋರಿಗೆ ರಕ್ಷಣೆ ಕೊಡ್ಬೇಕು, ಇಲ್ಲದಿದ್ದರೆ ಗೋಧ್ರಾ ಮಾದರಿ ಘಟನೆ ಆಗಬಹುದು ಎಂದಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad), ಮತ್ತೆ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ.

    ರಾಷ್ಟ್ರ ರಕ್ಷಣಾ ಪಡೆ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಪುನಿತ್ ಕೆರೆಹಳ್ಳಿ ಹಾಕಿದ್ದಾರೆ ಎನ್ನಲಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ, ಕರ್ನಾಟಕದಲ್ಲಿ ಕೋಮು ಗಲಭೆ ಎಬ್ಬಿಸೋಕೆ ಬಿಜೆಪಿ (BJP) ನಮಗೆ ಬೆಂಬಲ ಕೊಟ್ಟಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು ರೆಡಿ ಆಗಿ ಇರಿ. ಎಲ್ಲಿ ಏನು ಮಾಡ್ಬೇಕು ಅನ್ನೋದನ್ನು ನಾವು ಈ ಗ್ರೂಪ್ ಮೂಲಕ ಮಾಹಿತಿ ಕೊಡ್ತೀವಿ. 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಬರಹವಿದೆ. ಇದನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲೂ ರಾಮಮಂದಿರ ಉದ್ಘಾಟನೆ ನೇರಪ್ರಸಾರ

    ಕೋಮುಗಲಭೆಗೆ (Communal Riots) ಬಿಜೆಪಿ ತನ್ನ ಸಹೋದರ ಸಂಘಟನೆಗಳನ್ನು ರೆಡಿ ಮಾಡ್ತಿರೋದು ಇದರಿಂದ ಗೊತ್ತಾಗುತ್ತೆ. ರೌಡಿಶೀಟರ್ ಪುನಿತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿ ಕೋಮುಗಲಭೆ ನಡೆಸುವ ಫತ್ವಾ ನೀಡಿದೆ. ವಿಶ್ವಗುರುವನ್ನು ಮತ್ತೆ ಪ್ರಧಾನಿ ಮಾಡಲು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ಸಮಾಜಘಾತುಕರಿಗೆ ಇಡೀ ಬಿಜೆಪಿ ಬೆಂಬಲ ನೀಡ್ತಿದೆ ಅನ್ನೋದು ಜಗಜ್ಜಾಹೀರಾಗ್ತಿದೆ. ಕೂಡಲೇ ಸರ್ಕಾರ ಇಂತಹ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

    ಇಂತಹವರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಆದ್ರೆ, ಇದು ಸುಳ್ಳು, ಇದು ತಿರುಚಿದ ಪೋಸ್ಟ್, ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು ಕೊಡುತ್ತೇನೆ ಎಂದು ಪುನೀತ್ ಕೆರೆಹಳ್ಳಿ ಹೇಳಿದ್ದಾರೆ. ಇದನ್ನೂ ಓದಿ: ಆದಿತ್ಯ-L1 ಮಿಷನ್‌ ಸಕ್ಸಸ್‌; ನಿಗದಿತ ಕಕ್ಷೆ ತಲುಪಿದ ನೌಕೆ – ISRO ಸಾಧನೆಗೆ ಮೋದಿ ಮೆಚ್ಚುಗೆ

  • ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

    ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

    ಶಿವಮೊಗ್ಗ: ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಕಳೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ನಡೆದ ಕೋಮು ಗಲಭೆಗೆ (Communal Riots) ಸಾಕಷ್ಟು ಟ್ವಿಸ್ಟ್ ಸಿಗುತ್ತಿದೆ.

    ಈದ್ ಮಿಲಾದ್ ಮೆರವಣಿಗೆಯ ವೇಳೆ ರಾಗಿಗುಡ್ಡದ ಮುಖ್ಯ ರಸ್ತೆಯಲ್ಲಿರುವ ಶನೇಶ್ವರ ದೇವಾಲಯದ ಹತ್ತಿರ ಗಲಭೆ ಶುರುವಾಗಿತ್ತು. ಕಲ್ಲು ತೂರಾಟ (Stone Pelting) ನಡೆಸಿ ಬರಬ್ಬೋರಿ 7ಕ್ಕೂ ಹೆಚ್ಚು ಮನೆಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಆದರೆ ಈ ಗಲಭೆಗೆ ಮುನ್ನ ಎರಡು ಓಮ್ನಿ ಕಾರಿನಲ್ಲಿ ಬಂದ 15ಕ್ಕೂ ಹೆಚ್ಚು ಯುವಕರ ತಂಡ ಈ ಗಲಭೆ ಮಾಡಿದೆ. ಆ ಕಾರು ಕೆಎ 20 ನೋಂದಣಿಯ ಗಾಡಿಗಳಾಗಿದ್ದು, ಅವುಗಳಲ್ಲಿ ಮಂಗಳೂರು (Mangaluru) ಇಲ್ಲ ಉಡುಪಿ (Udupi) ಜಿಲ್ಲೆಗಳಿಂದ ಕಿಡಿಗೇಡಿಗಳು ಬಂದು ಪ್ರೀ ಪ್ಲಾನ್ ಮಾಡಿಕೊಂಡು ಗಲಭೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ವರ್ತಕರು, ಬಿಜೆಪಿ ಮುಖಂಡರು ವಿರೋಧ

    ಕಿಡಿಗೇಡಿಗಳ ಚಲನವಲನಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಲ್ಲದೇ ಪೊಲೀಸರು ಕೂಡ ಉತ್ತರ ಪ್ರದೇಶದ ನಂಬರ್ ಪ್ಲೇಟ್ ಇರುವ ಕಾರನ್ನು ವಶಕ್ಕೆ ಪಡೆದಿದ್ದು, ಈ ಕಾರು ಕೂಡ ಗಲಭೆಗೆ ಬಳಸಲಾಗಿದೆ ಎನ್ನಲಾಗುತ್ತಿದೆ. ಇದರಿಂದ ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರೀ ಪ್ಲಾನ್ಡ್ ಆಗಿ ನಡೆದಿದ್ದು ಎನ್ನುವ ಸಂಶಯ ಮೂಡಿದ್ದು, ಗಲಭೆ ಸ್ಥಳಕ್ಕೆ ಬಂದ ಓಮ್ನಿಗಳ ಜಾಡು ಹಿಡಿದು ಪೊಲೀಸರು ಹೊರಟಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕರೂ ಕೂಡ ಇದೊಂದು ಪ್ರೀ ಪ್ಲಾನ್‌ ಗಲಭೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

    ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

    ಬೆಂಗಳೂರು: ಶಿವಮೊಗ್ಗ (Shivamogga) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ (R.Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕರ್ನಾಟಕ (Karnataka) ಮತ್ತೊಂದು ಬಿಹಾರ (Bihar) ಆಗುತ್ತಿದೆ ಎಂದು ಅನಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

    ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ ಗೂಂಡಾಗಿರಿ ಶುರುವಾಗಿದೆ. ಹಿಂದೂಗಳು ಯಾವುದೇ ಗಲಾಟೆಗೆ ಹೋಗದಿದ್ದರೂ ಮನೆಗೆ ನುಗ್ಗಿ ಹೊಡೆದಿದ್ದಾರೆ. ಹಿಂದೆಯೂ ಸಿದ್ದರಾಮಯ್ಯ ಸರ್ಕಾರದಲ್ಲಿ ಟಿಪ್ಪು ಜಯಂತಿ ಮಾಡಿ ಗಲಾಟೆ ಆಗಿತ್ತು. ನಿರಪರಾಧಿಗಳ ಮೇಲೆ ಹಲ್ಲೆಯಾಗಿದೆ. ಸರ್ಕಾರದ ಕುಮ್ಮಕ್ಕೇ ಇದಕ್ಕೆ ಕಾರಣ ಎಂದು ಹರಿಹಾಯ್ದರು. ಇದನ್ನೂ ಓದಿ: ಪೊಲೀಸರ ಮೇಲೆ ಕಲ್ಲು ತೂರಾಟ ಹೊಸದೇನಲ್ಲ: ಪರಮೇಶ್ವರ್ ಬೇಜವಾಬ್ದಾರಿ ಮಾತು

    ಸರ್ಕಾರ ಕೇಸ್ ಮಾಡಲ್ಲ ಅನ್ನೋ ಧೈರ್ಯ. ಹಿಂದೆ ಕೇಸ್ ವಾಪಸ್ ತೆಗೆದುಕೊಂಡಿದ್ದಾರೆ ಅನ್ನೋ ಕಾರಣಕ್ಕೆ ಪಿಎಫ್‌ಐ (PFI) ಗ್ಯಾಂಗ್‌ನಿಂದಲೇ ಘಟನೆಯಾಗಿದೆ. ಪಿಎಫ್‌ಐ ಗ್ಯಾಂಗ್ ಗಲಾಟೆ ಮಾಡಿರೋದು. ಕಾಂಗ್ರೆಸ್ ಬಂದರೆ ಪಿಎಫ್‌ಐಗೆ ಹಬ್ಬ. ಪ್ರಚೋದನೆ ಮಾಡದೇ ಕಲ್ಲು ಹೊಡೆಯುತ್ತಾರೆ ಎಂದರೆ ಇವರ ಗೂಂಡಾಗಿರಿ ಎಂತದ್ದು. ಇಂಟೆಲಿಜೆನ್ಸ್ ಕೂಡ ಸತ್ತು ಹೋಗಿದೆ. ನಾವು ಕೇಸ್ ಮಾಡಿದರೂ ಸರ್ಕಾರ ವಾಪಸ್ ತೆಗೆದುಕೊಳ್ಳುತ್ತಾರೆ ಅನ್ನೋ ಕಾರಣಕ್ಕೆ ನಾವ್ಯಾಕೆ ಕೇಸ್ ಮಾಡೋದು ಅಂತಾ ಇಂಟೆಲಿಜೆನ್ಸ್ ಕೂಡ ಸುಮ್ಮನಿದೆ ಎಂದರು. ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಕೇಸ್ ಮಾಡಿದರೆ ನಮ್ಮನ್ನು ಎತ್ತಂಗಡಿ ಮಾಡುತ್ತಾರೆ ಅನ್ನೋ ಭಯ ಅಲ್ಲಿನ ಎಸ್‌ಪಿ ಅವರಿಗೂ ಇದೆ. ಕಾಂಗ್ರೆಸ್ ಬಂದ ಮೇಲೆ ಪೊಲೀಸರಿಗೂ ಭಯ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

    ಶಿವಮೊಗ್ಗ ಕೋಮುಗಲಭೆಗೆ ಸಂಬಂಧಪಟ್ಟಂತೆ ಗೃಹಸಚಿವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಗೃಹ ಸಚಿವರ ಹೇಳಿಕೆ ಸರಿಯಲ್ಲ. ಬೆಂಕಿ ಸಣ್ಣದಿದ್ದರೂ ದೊಡ್ಡದಾಗಬಹುದು. ಸರ್ಕಾರ ಬೇಜವಾಬ್ದಾರಿಯಾಗಿ ನಡೆದುಕೊಂಡಿರೋದು ಸ್ಪಷ್ಟವಾಗಿದೆ. ಹಿಂದೆ ಕೂಡ ಕೇರಳ, ಬಂಗಾಳ, ಬಿಹಾರ, ಬಾಂಗ್ಲಾದಿಂದ ಬಂದು ಗಲಾಟೆ ಮಾಡಿದ್ದು ಕಾಮನ್ ಆಗಿದೆ. ಕಾಂಗ್ರೆಸ್ ಬಂದ ಮೇಲೆ ಹೆಚ್ಚಾಗಿದೆ. ಕಾರಣ ಅವರು ಕೇಸ್ ಹಾಕಲ್ಲ. ಹಾಕಿದ್ರೂ ಕ್ಯಾಬಿನೆಟ್‌ನಲ್ಲಿ ವಿಥ್‌ಡ್ರಾ ಮಾಡ್ತಾರೆ ಅನ್ನೋ ಕಾರಣಕ್ಕೆ ಬಂದು ಗಲಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಬೆಂಗಳೂರು: ಶಿವಮೊಗ್ಗ (Shivamogga) ಕೋಮುಗಲಭೆ (Communal Riots) ಪ್ರಕರಣದಲ್ಲಿ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದ್ದು, ಸದ್ಯ ಶಿವಮೊಗ್ಗ ಶಾಂತಿಯುತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ರಾಗಿಗುಡ್ಡದಲ್ಲಿ (Ragigudda) ಈ ಘಟನೆ ನಡೆದಿದ್ದು, ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಕಲ್ಲು ತೂರಾಟ ಮಾಡಿದವರು, ಗಲಾಟೆ ಮಾಡಿದ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ. ಅವರ ಮೇಲೆ ಮೊಕದ್ದಮೆ ಹಾಕಲಾಗಿದೆ. ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ಲು ಎಸೆಯೋದು ಕಾನೂನು ಬಾಹಿರ ಚಟುವಟಿಕೆ. ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿ ಇದೆ. ಶಿವಮೊಗ್ಗ ಶಾಂತಿಯುತವಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡುತ್ತೇನೆ. ಶಾಂತಿ ಕಾಪಾಡಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.  ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಶೀಘ್ರದಲ್ಲೇ ಸರ್ಕಾರಿ ಉದ್ಯೋಗ

    ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಶೀಘ್ರದಲ್ಲೇ ಸರ್ಕಾರಿ ಉದ್ಯೋಗ

    * ಬಿಜೆಪಿಯವ್ರು ಹಿಂದೂಗಳಿಗೆ ಮಾತ್ರ ಪರಿಹಾರ ಕೊಟ್ರು
    * ಸಿಎಂ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ (Communal Riots) ಮೃತಪಟ್ಟವರ ಕುಟುಂಬಕ್ಕೆ ಸೋಮವಾರ ಸಿಎಂ ಸಿದ್ದರಾಮಯ್ಯ (Siddaramaiah) ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.

    ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೋಮು ಗಲಭೆಯಲ್ಲಿ ಹತ್ಯೆಯಾದ ಮಸೂದ್, ಫಾಝಿಲ್, ಜಲೀಲ್, ಸಮೀರ್ ಹಾಗೂ ದೀಪಕ್ ರಾವ್ ಕುಟುಂಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಜೊತೆಗೆ ಕುಟುಂಬದ ತಲಾ ಒಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿಯೂ ಭರವಸೆ ನೀಡಿದರು.

    ಬಳಿಕ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರ (BJP Government) ಇದ್ದಾಗ ಕೋಮುಗಲಭೆಗಳಲ್ಲಿ ಮೃತಪಟ್ಟವರಿಗೆ 25 ಲಕ್ಷ ಪರಿಹಾರ ಕೊಟ್ಟಿದಾರೆ. ಆದ್ರೆ ಬಿಜೆಪಿಯವರು ಎಲ್ಲರಿಗೂ ಪರಿಹಾರ ಕೊಟ್ಟಿಲ್ಲ, ಹಿಂದೂಗಳಿಗೆ (Hindus) ಮಾತ್ರ ಪರಿಹಾರ ಕೊಟ್ಟಿದ್ದಾರೆ. ಮುಸ್ಲಿಮರೂ ಕೋಮು ಗಲಭೆಗಳಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ಎಲ್ಲ ಧರ್ಮದವರನ್ನ ಸಮಾನವಾಗಿ ಕಾಣಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮತ್ತೆ ಬುಲ್ಡೋಜರ್ ಸದ್ದು – ರಾಜಕಾಲುವೆ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ

    ಕೋಮುಗಲಭೆಯಲ್ಲಿ ಮುಸಲ್ಮಾನರೂ (Muslims) ಸತ್ತಿದ್ದಾರೆ ಪರಿಹಾರ ಕೊಡಿ ಅಂತಾ ನಾನು ಸದನದಲ್ಲಿ ಪ್ರಸ್ತಾಪ ಮಾಡಿದ್ದೆ, ಬಿಜೆಪಿಯವರು ನೋಡ್ತೀವಿ, ಕೊಡ್ತೀವಿ ಅಂತಾ ಹೇಳಿ ಕೊಡಲೇ ಇಲ್ಲ. ಈಗ ನಮ್ಮ ಸರ್ಕಾರ ಪರಿಹಾರ ಕೊಡ್ತಿದೆ ಎಂದು ತಿಳಿಸಿದರು.

    ಬಿಜೆಪಿಯವರು ಹರ್ಷ ಮತ್ತು ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಮಾತ್ರ ತಲಾ 25 ಲಕ್ಷ ಪರಿಹಾರ ಕೊಟ್ಟಿದ್ದಾರೆ. ಕುಟುಂಬದವರಿಗೆ ಒಂದೊಂದು ಕೆಲಸವನ್ನೂ ಕೊಟ್ಟಿದ್ದಾರೆ. ಅದು ಸರಿಯಿದೆ, ಆದ್ರೆ ಬೇರೆಯವರಿಗೂ ಕೊಡಬೇಕಲ್ಲ, ಆ ಕೆಲಸ ಬಿಜೆಪಿ ಮಾಡಲಿಲ್ಲ. ಮಸೂದ್, ಫಾಜೀಲ್, ಅಬ್ದುಲ್ ಜಲೀಲ್, ಇದ್ರಿಸ್ ಪಾಷ, ಸಮೀರ್, ದೀಪಕ್ ರಾವ್ ಈ 6 ಜನರ ಕುಟುಂಬಗಳಿಗೆ ಪರಿಹಾರ ಕೊಡಲಿಲ್ಲ. ಇವರ ಕುಟುಂಬಗಳಿಗೆ ಭೇಟಿ ಕೊಟ್ಟು ಸಾಂತ್ವನ ಹೇಳುವ ಕೆಲಸವನ್ನೂ ಬೊಮ್ಮಾಯಿ ಮಾಡಲಿಲ್ಲ. ನಾವು ಈಗ ಈ 6 ಜನರ ಕುಟುಂಬಗಳಿಗೆ ಪರಿಹಾರ ಕೊಟ್ಟಿದ್ದೇವೆ. ಮುಂದೆ ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಸರ್ಕಾರಿ ಕೆಲಸವನ್ನೂ ಕೊಡ್ತೀವಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಅಪಘಾತಕ್ಕೀಡಾಗಿ ಮೆದಳು ನಿಷ್ಕ್ರಿಯ- ಮಗನ ಶವಕ್ಕೆ ಮುತ್ತಿಟ್ಟು ಅಂಗಾಂಗ ದಾನಕ್ಕೆ ತಾಯಿ ಒಪ್ಪಿಗೆ

    ಬಿಜೆಪಿ ಮಾಡಿರುವ ತಾರತಮ್ಯವನ್ನ ನಾವು ಸರಿಪಡಿಸುವ ಕೆಲಸ ಮಾಡ್ತೇವೆ. ಹತ್ಯೆಯಾದವರ ಕುರಿತು ತನಿಖೆಯನ್ನು ಪಾರದರ್ಶಕವಾಗಿ, ಕಾನೂನಾತ್ಮಕವಾಗಿ ಮಾಡ್ತೀವಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸ್ತೀವಿ. ಇನ್ಮುಂದೆ ಕೋಮು ಗಲಭೆಗಳಿಗೆ, ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕುತ್ತೇವೆ. ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡಲ್ಲ. ನಮ್ಮ ಸರ್ಕಾರ ಎಲ್ಲರ ರಕ್ಷಣೆ ಮಾಡಲಿದೆ. ಎಲ್ಲ ಧರ್ಮದವರ ರಕ್ಷಣೆ ಮಾಡ್ತೇವೆ, ಅದು ನಮ್ಮ ಜವಾಬ್ದಾರಿ. ಧರ್ಮಗಳ ನಡುವೆ ನಾವು ತಾರತಮ್ಯ ಮಾಡಲ್ಲ. ನಮಗೆ ಹಿಂದೂ ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತರು ಎಲ್ಲರೂ ಒಂದೇ. ಯಾರದ್ದೇ ಹತ್ಯೆ ಇರಲಿ ಕಾನೂನು ರೀತಿ ತನಿಖೆ ಮಾಡ್ತೀವಿ ಎಂದು ಗುಡುಗಿದರು.

    ಅಕ್ಕಿ ಕೊಟ್ಟೇ ಕೊಡ್ತೀವಿ:
    ಅಕ್ಕಿ ವಿತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆಂಧ್ರ, ತೆಲಂಗಾಣ, ಪಂಜಾಬ್ ರಾಜ್ಯಗಳಿಂದ ಅಕ್ಕಿ ಸಿಕ್ತಿಲ್ಲ. ಛತ್ತೀಸ್‌ಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾತ್ರ ಸಿಗುತ್ತೆ. ಬಡವರಿಗೆ ಅಕ್ಕಿ ಕೊಡುವ ವಿಚಾರದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ಅವರು ಏನೇ ರಾಜಕೀಯ ಮಾಡಿದ್ರು ನಾವು ರಾಜ್ಯದ ಜನರಿಗೆ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಗಿ ಎರಡು ಕೆಜಿ 6 ತಿಂಗಳವರೆಗೆ ಮಾತ್ರ ಕೊಡಬಹುದು. 5 ಕೆಜಿ ರಾಗಿ ಕೊಡಕ್ಕಾಗಲ್ಲ, ಅಷ್ಟು ಸ್ಟಾಕ್ ಇಲ್ಲ. ಹಳೇ ಮೈಸೂರು ಕಡೆ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಕಡೆ ಎರಡು ಕೆಜಿ ಗೋಧಿ ಕೊಡಬಹುದು. ಆದ್ರೆ ಉಳಿದ ಮೂರು ಕೆಜಿ ಅಕ್ಕಿ ಎಲ್ಲಿಂದ ತರೋಣ? ಈಗ ನಾವು ನಾಫೆಡ್, ಎನ್‌ಸಿಸಿಎಫ್ ಮತ್ತು ಕೇಂದ್ರಿಯ ಭಂಡಾರ್ ಗಳಿಂದ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ಈ ಮೂರೂ ಕೇಂದ್ರದ ಸಂಸ್ಥೆಗಳಿಂದ ಕೊಟೇಷನ್ ಕೇಳಿದ್ದೇವೆ. ಅವರು ಎಷ್ಟು ಅಕ್ಕಿ ಕೊಡ್ತಾರೆ ಅನ್ನೋದನ್ನ ನೋಡಿಕೊಂಡು ಮುಂದಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಶಾಸಕ ತನ್ವೀರ್ ಸೇಟ್, ಸಲೀಂ ಅಹಮದ್, ನಜೀರ್ ಅಹಮದ್ ಮತ್ತಿತರರು ಭಾಗಿಯಾಗಿದ್ದರು.

  • ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ ಹಿರಿಯ ಸರ್ಕಾರಿ ಅಧಿಕಾರಿ ಅರೆಸ್ಟ್

    ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ ಹಿರಿಯ ಸರ್ಕಾರಿ ಅಧಿಕಾರಿ ಅರೆಸ್ಟ್

    ಪಾಟ್ನಾ: ಸೋಶಿಯಲ್ ಮೀಡಿಯಾದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದಕ್ಕೆ ಹಿರಿಯ ಸರ್ಕಾರಿ ಅಧಿಕಾರಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು(ಎಡಿಜಿ) ಸಂಜಯ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ಪ್ರಕಾರ ಯಾವುದೇ ಧರ್ಮ ನಿಂದನೆ ಮಾಡುವುದು ಅಪರಾಧ. ಈ ಹಿನ್ನೆಲೆ ಬಿಹಾರದ ಆಡಳಿತ ಸೇವೆ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ಮಾಹಿತಿ ಕೊಟ್ಟರು. ಇದನ್ನೂ ಓದಿ:  ಕಲಬುರಗಿಯಲ್ಲಿ ಬುಲ್ಡೋಜರ್ ಸದ್ದು: 14 ಮನೆಗಳು ಸೇರಿದಂತೆ 17 ಟಿನ್ ಶೆಡ್ ತೆರವು 

    ಘಟನೆಯ ವಿವರ
    ಇಒಯು ಮುಸ್ಲಿಮರನ್ನು ಅವಹೇಳನ ಮಾಡುವ ವಾಟ್ಸಾಪ್ ಸಂದೇಶ ಕಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಇದರ ಮೂಲದ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಈ ವೇಳೆ ಚುನಾವಣಾ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಪಾಟ್ನಾದಲ್ಲಿ ನಿಯೋಜನೆಗೊಂಡಿರುವ ಜಾರ್ಖಂಡ್ ನಿವಾಸಿ ಅಲೋಕ್ ಕುಮಾರ್ ಅವರ ಫೋನ್‍ನಲ್ಲಿ ಇದರ ಫಾರ್ವರ್ಡ್ ಸಂದೇಶ ಪತ್ತೆಯಾಗಿದೆ.

    KILLING CRIME

    ಈ ಹಿನ್ನೆಲೆ ಅಲೋಕ್ ಕುಮಾರ್ ಅವರನ್ನು ಅವರ ಮನೆಯಲ್ಲೇ ಬಂಧಿಸಲಾಗಿದೆ. ಜೈಲಿಗೆ ಕಳುಹಿಸುವ ಮೊದಲು ಅವರನ್ನು ವಿಚಾರಣೆಗಾಗಿ ಸಚಿವಾಲಯ ಪೊಲೀಸ್ ಠಾಣೆಗೆ ಕರೆತರಲಾಗಿದೆ ಎಂದು ಸಂಜಯ್ ಸಿಂಗ್ ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್ 

    Live Tv

  • ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ ಅಹ್ಮದ್

    ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ ಅಹ್ಮದ್

    ಹಾವೇರಿ: ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಮು ಸಾಮರಸ್ಯದ ನಾಡಿನಿಂದ ಬಂದಿದ್ದಾರೆ. ಕೂಡಲೇ ಸಿಎಂ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದರು.

    ಹಾವೇರಿಯಲ್ಲಿ ಕೋಮು ಗಲಭೆ ಕುರಿತು ಮಾತನಾಡಿದ ಅವರು, ಸಮಾಜ ಒಡೆಯುವ ಸಂಘಟನೆಗಳನ್ನು ನಿಷೇಧ ಮಾಡಬೇಕು. ಅಂತಹ ಸಂಘಟನೆಗಳ ವ್ಯಕ್ತಿಗಳನ್ನು ಬಂಧಿಸಬೇಕು. ಸರ್ಕಾರ RSS ಹಿಡಿತದಲ್ಲಿದೆ. ಪ್ರತಿದಿನ ಗಲಭೆ ಮಾಡುವ ಕೆಲಸವನ್ನು ಕೆಲವರು ನಿರಂತರವಾಗಿ ಮಾಡುತ್ತಿದ್ದಾರೆ. ಈ ಸರ್ಕಾರ ಜನರ ದಾರಿ ತಪ್ಪಿಸಲು ಇಂತಹ ಕೆಲಸ ಮಾಡುತ್ತಿದೆ. ಅರ್ಕಾವತಿ ಕುರಿತು ಕಾಂಗ್ರೆಸ್ ವಿರುದ್ಧ ಯಾವುದೇ ತನಿಖೆಗೂ ಸಿದ್ಧರಿದ್ದೇವೆ. ಮೊದಲು 40% ಕಮೀಷನ್ ನಿಲ್ಲಿಸಿ. ಈಗ ನಿಮಗೆ ಅರ್ಕಾವತಿ ನೆನಪಿಗೆ ಬಂದಿತಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವರ ಧೋತಿ-ಕುರ್ತಾ ಬದಲು ಶೇರ್ವಾನಿ ಧರಿಸಿದ್ದಕ್ಕೆ ಮದುವೆ ಮನೆಯಾಯ್ತು ರಣರಂಗ

    ಪ್ರತಿದಿನ ಭ್ರಷ್ಟಾಚಾರ, ಮಂತ್ರಿಮಂಡಲ ಬಿಟ್ಟರೆ ನಿಮಗೆ ಬೇರೆ ಕೆಲಸವೇ ಇಲ್ಲದಂತೆ ಆಗಿದೆ. ಬಿಜೆಪಿ ಸರ್ಕಾರ ಲೂಟಿಕೋರರ ಸರ್ಕಾರ. ಪ್ರತಿದಿನ ರಾಜಕಾರಣಿಗಳು, ಅಧಿಕಾರಿಗಳ ಭ್ರಷ್ಟಾಚಾರ ಬರ್ತಿದೆ. ದೇಶದಲ್ಲಿ ತಲೆತಗ್ಗಿಸುವ ಕೆಲಸ ಆಗುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿ ಆಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಈ ಸರ್ಕಾರ ಕಳೆದುಕೊಂಡಿದೆ ಎಂದು ಆರೋಪಿಸಿದರು.

    ಸಿಎಂ ಸ್ಥಾನಕ್ಕೆ 2,500 ಕೋಟಿ ಕೊಡಬೇಕು ಎಂದು ಬಿಜೆಪಿ ಶಾಸಕ ಯತ್ನಾಳ್ ಹೇಳುತ್ತಿದ್ದಾರೆ. ಭ್ರಷ್ಟಾಚಾರದ ಮೂಲಕ ಉದಯಿಸಿದ ಈ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ. ಜನರು ಬಿಜೆಪಿ ಸರ್ಕಾರದ ಬಗ್ಗೆ ನೊಂದಿದ್ದಾರೆ. ಈಗಾಗಲೇ ಬಿಜೆಪಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿಯ 40% ಕಮೀಷನ್ ಸರ್ಕಾರದ ವಿರುದ್ಧ ಜನಜಾಗೃತಿ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ:  ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್ 

    ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ತೆಗೆಯುವುದು ನಮ್ಮ ಉದ್ದೇಶವಾಗಿದೆ. ಯಾರು ಸಿಎಂ ಆಗುತ್ತಾರೆ ಎಂಬುದು ಮುಂದಿನ ವಿಚಾರ. ಶಾಸಕರು ಹಾಗೂ ಹೈಕಮಾಂಡ್ ಸೇರಿಕೊಂಡು ಯಾರು ಸಿಎಂ ಆಗಬೇಕು ಎಂಬುದನ್ನು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.