Tag: communal violence

  • ಅಸ್ಸಾಂ | ಧುಬ್ರಿಯಲ್ಲಿ ಗೋವಿನ ತಲೆ ಪತ್ತೆ ಕೇಸ್ – 30ಕ್ಕೂ ಹೆಚ್ಚು ಜನ ಅರೆಸ್ಟ್‌

    ಅಸ್ಸಾಂ | ಧುಬ್ರಿಯಲ್ಲಿ ಗೋವಿನ ತಲೆ ಪತ್ತೆ ಕೇಸ್ – 30ಕ್ಕೂ ಹೆಚ್ಚು ಜನ ಅರೆಸ್ಟ್‌

    ದಿಸ್ಪುರ್:‌ ಅಸ್ಸಾಂನ (Assam) ಧುಬ್ರಿಯಲ್ಲಿ ಇತ್ತೀಚೆಗೆ ಹಸುವಿನ ತಲೆ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ. ಇನ್ನೂ ಲಖಿಂಪುರ ಜಿಲ್ಲೆಯಲ್ಲಿಯೂ ಇದೇ ರೀತಿಯ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

    ಗುವಾಹಟಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಧುಬ್ರಿಯಲ್ಲಿ ಹಸುವಿನ ತಲೆಪತ್ತೆಯಾದ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಲಖಿಂಪುರದಲ್ಲಿ, ನಾಮ್‌ಘರ್ (ವೈಷ್ಣವ ಪ್ರಾರ್ಥನಾ ಮಂದಿರ) ಮುಂದೆ ಮೂರು ಹಸುಗಳ ತಲೆಗಳನ್ನು ಇರಿಸಿದ್ದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ. ಇದು ಗಂಭೀರ ವಿಚಾರವಾಗಿದ್ದು, ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡಲ್ಲಿ ಮಳೆಯಬ್ಬರ – ಕಬಿನಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ಒಳಹರಿವು

    ಒಂದು ನಿರ್ದಿಷ್ಟ ಸಮುದಾಯದ ಜನರು ಮಾತ್ರ ಈ ರೀತಿ ಗೋಮಾಂಸವನ್ನು ಇಟ್ಟುಕೊಳ್ಳುತ್ತಾರೆ. ಒಬ್ಬ ಹಿಂದೂ ಮಾಂಸವನ್ನು ಇಟ್ಟುಕೊಳ್ಳಲು ಬಯಸಿದರೆ, ಅವರು ಗೋಮಾಂಸವನ್ನಲ್ಲ, ಹಂದಿಮಾಂಸವನ್ನು ಇಟ್ಟುಕೊಳ್ಳುತ್ತಾರೆ. ಇನ್ನೂ ಈ ತರಹದ ವಿಚಾರಗಳು ರಾಹುಲ್ ಗಾಂಧಿಯವರ ವಿಷಕಾರಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಇದೇ ವೇಳೆ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

    ಇದೇ ವೇಳೆ, ಬಾಂಗ್ಲಾದೇಶ ಬೆಂಬಲಿತ ಸಂಘಟನೆಯಾದ ನೋಬಿನ್ ಬಾಂಗ್ಲಾ, ಧುಬ್ರಿ ದೇಶದ ಭಾಗವಾಗಬೇಕೆಂದು ಒತ್ತಾಯಿಸಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಾಕಿದ್ದರು. ಈ ಪೋಸ್ಟರ್‌ಗಳು ಧುಬ್ರಿಯಲ್ಲಿ ಬಾಂಗ್ಲಾದೇಶ ಬೆಂಬಲಿತ ಕೋಮುವಾದಿ ಗುಂಪು ಸಕ್ರಿಯವಾಗಿದೆ. ಧುಬ್ರಿಯಲ್ಲಿ ಈದ್ ಅಲ್-ಅಧಾ ಹಬ್ಬಕ್ಕೂ ಮುನ್ನ ಸಾವಿರಾರು ಪ್ರಾಣಿಗಳನ್ನು ಖರೀದಿಸಲಾಗಿದೆ. ಇದು ಹೊಸ ʻಗೋಮಾಂಸ ಮಾಫಿಯಾʼ ಹುಟ್ಟಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

    ಈ ಹೇಳಿಕೆಗಳನ್ನು ವಿರೋಧ ಪಕ್ಷಗಳ ನಾಯಕರು ಬಲವಾಗಿ ಟೀಕಿಸಿದ್ದಾರೆ. ಅಸ್ಸಾಂನಲ್ಲಿ ಈಗಾಗಲೇ ಕೋಮು ಉದ್ವಿಗ್ನತೆ ಹೆಚ್ಚಾಗಿದೆ. ಈ ಸಮಯದಲ್ಲಿ ಅವರ ಹೇಳಿಕೆಗಳು ಪ್ರಚೋದನಕಾರಿಯಾಗಿವೆ ಎಂದು ಕಿಡಿಕಾರಿದ್ದಾರೆ.

    ಕಳೆದ ವಾರ ಧುಬ್ರಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಈ ವೇಳೆ ಕಂಡಲ್ಲಿ ಗುಂಡು ಹಾರಿಸುವ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

  • ಮಂಗಳೂರು, ನಾಗಮಂಗಲ ಎಲ್ಲಾ ಕಡೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ: ದಿನೇಶ್ ಗುಂಡೂರಾವ್

    ಮಂಗಳೂರು, ನಾಗಮಂಗಲ ಎಲ್ಲಾ ಕಡೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಮಂಗಳೂರಿನಲ್ಲಿ (Mangaluru) ಈದ್ ಮಿಲಾದ್ (Eid Milad) ಗಲಾಟೆ, ನಾಗಮಂಗಲದ (Nagamangala) ಎಲ್ಲಾ ಕಡೆಯು ಪೊಲೀಸರು ಕಟ್ಟುನಿಟ್ಟಾಗಿ ಕ್ರಮ ಕೈಗೊಂಡಿದ್ದಾರೆ ಎಂದು ಮಂಗಳೂರು ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ.

    ಬೆಂಗಳೂರಿನಲ್ಲಿ(Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಕೆಲ ಕೋಮುವಾದಿ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪರಿಸ್ಥಿತಿಯನ್ನು ಶಾಂತಿಯುತವಾಗಿ ಇಥ್ಯರ್ತ ಮಾಡಿದ್ದಾರೆ. ಕೆಲ ಮುಖಂಡರ ಮಾತಿನಿಂದ ಉದ್ವೇಗಕ್ಕೆ ಒಳಗಾಗಿ ಈ ರೀತಿ ಘಟನೆ ಸಂಭವಿಸಿದೆ. ಬಂಟ್ವಾಳದಲ್ಲಿ ಕಲ್ಲು ತೂರಾಟ ನಡೆದಿದೆ. ಮಂಗಳೂರು ಸೂಕ್ಷ್ಮ ಪ್ರದೇಶ, ಈ ರೀತಿಯ ಘಟನೆಗಳಿಗೆ ಪ್ರಚೋದನೆ ಇದ್ದೇ ಇರುತ್ತದೆ. ಎಲ್ಲಾ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರ ಈಗ ಸುರಕ್ಷಿತವಾಗಿರುವುದರಿಂದ ರಾಹುಲ್‌ ಬಾಬಾ ಐಸ್‌ಕ್ರೀಂ ತಿಂದಿದ್ದಾರೆ, ಬೈಕ್‌ ರೈಡ್‌ ಮಾಡಿದ್ದಾರೆ: ಅಮಿತ್‌ ಶಾ

    ಶಾಂತಿಭಂಗ ಯಾರೂ ಮಾಡಬಾರದು. ಕೆಲ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕೆಲವರು ಪ್ರಚೋದನೆ ಮಾಡುತ್ತಾರೆ. ಅವರಿಗೆ ಶಾಂತಿ ನೆಮ್ಮದಿ ಇರಬಾರದು. ಅತಿಯಾದ ಕೋಮುವಾದದ ಮನಸ್ಥಿತಿಯಿಂದ ಹೀಗಾಗುತ್ತದೆ. ಘಟನೆ ಆದಾಗ ಕಾನೂನು ಪ್ರಕಾರ ಕ್ರಮಕ್ಕೆ ಪೊಲೀಸ್ ಮುಂದಾಗುತ್ತಾರೆ. ಇದು ಇಂಟಲಿಜೆನ್ಸ್ ಫೈಲ್ಯೂರ್ ಅಲ್ಲ.ಎಲ್ಲಾ ಕಡೆ ಪೊಲೀಸರು ಇರಲು ಸಾಧ್ಯವಿರಲ್ಲ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ನಿಫಾ ವೈರಸ್ ಭೀತಿ, ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್: ದಿನೇಶ್ ಗುಂಡೂರಾವ್

    ನಾಗಮಂಗಲ ಪ್ರಕರಣದಲ್ಲಿ ಪೊಲೀಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಎರಡು ಕಡೆ ಹೇಳಿಕೆಯನ್ನು ಪಡೆದಿದ್ದಾರೆ. ನಮ್ಮ ಇಲಾಖೆಯವರು ಶಾಂತಿ ತರುವ ಪ್ರಯತ್ನ ಮಾಡುತ್ತಿದ್ದಾರೆ. ಆರ್ ಅಶೋಕ್ (r Ashok) ಅವರಿಗೆ ಒಂದೇ ಕೋಮಿನ ಮೇಲೆ ಅತಿಯಾದ ಪ್ರೀತಿ. ಅವರು ಒಂದೇ ಕೋಮಿನ ಮೇಲೆ ದ್ವೇಷ ಮಾಡುತ್ತಾರೆ. ಹಿಂದೂಗಳು ಏನು ಮಾಡಿದರೂ ಅವರಿಗೆ ಸರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ನಮ್ಮ ಸರ್ಕಾರಕ್ಕೆ ಎಲ್ಲಾ ಜನಾಂಗದವರು ಬೇಕು. ತಪ್ಪು ಮಾಡುವವರು ಎಲ್ಲಾ ಪಕ್ಷ, ಎಲ್ಲಾ ಜನಾಂಗದಲ್ಲೂ ಇರುತ್ತಾರೆ. ನಮ್ಮ ಸರ್ಕಾರ ಯಾವುದೇ ಪಕ್ಷಪಾತ ಮಾಡುವುದಿಲ್ಲ. ರಾಜಕೀಯ ಮಾಡಿ ಲಾಭ ಪಡೆದುಕೊಳ್ಳುವ ಪಕ್ಷ ಯಾವುದು ಎಂದು ಜನರಿಗೆ ತಿಳಿದಿದೆ. ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ ಅನುಮತಿ ಕೊಡೋದು ತಪ್ಪು ಅಂತ ಹೇಳಲಾಗುವುದಿಲ್ಲ. ನಾಗಮಂಗಲ ಪ್ರಕರಣದಲ್ಲಿ ಎಫ್‌ಐಆರ್‌ನಲ್ಲಿರುವ ಇಬ್ಬರು ಅರೆಸ್ಟ್ ಆಗಿದ್ದಾರೆ ಎನ್ನಲಾಗಿದೆ. ಉದ್ದೇಶ ಪೂರ್ವಕವಾಗಿ ಗಲಭೆ ಮಾಡಿಸಿರಲು ಸಾಧ್ಯವಿಲ್ಲ. ಕೋಮವಾದದಲ್ಲಿ ನಂಬಿಕೆ ಇಟ್ಟವರು ಹೀಗೆ ಮಾಡಿಸುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

    ಗುಜರಾತ್‌ನಲ್ಲಿ (Gujarat) ಆದ ಪ್ರಕರಣದ ಬಗ್ಗೆ ಮೋದಿ ಅವರು ಮಾತನಾಡುವುದಿಲ್ಲ. ಆದರೆ ನಾಗಮಂಗಲದ ಬಗ್ಗೆ ಮಾತನಾಡುತ್ತಾರೆ. ಮಣಿಪುರ ಬೆಂಕಿ ಹಚ್ಚಿ ಉರಿತಿದೆ. ಈ ತನಕ ಪಿಎಂ ಒಂದೇ ಒಂದು ಮಾತಾನಾಡಲಿಲ್ಲ. ಅವರು ರಾಜ್ಯದಲ್ಲಿ ಆಗುವ ದುರ್ಘಟನೆ ಬಗ್ಗೆ ಮಾತಾಡಲ್ಲ, ನಮ್ಮ ರಾಜ್ಯದಲ್ಲಿ ಆಗುವ ಗಲಭೆ ಅವರಿಗೆ ರಾಷ್ಟ್ರೀಯ ಸುದ್ದಿ. ಬಂಟ್ವಾಳದಲ್ಲಿ (Bantwal) ಶಾಂತಿಯುತ ಮೆರವಣಿಗೆ ನಡೆದಿದೆ. ಸುರತ್ಕಲ್‌ನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ ಆಗಿದೆ. ಕೃತ್ಯವೆಸಗಿದವರನ್ನು ಪೊಲೀಸ್ ಅರೆಸ್ಟ್ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್

    ನನ್ನ ಮನವಿ ಏನೆಂದರೆ ಯಾರು ಕೂಡ ಅನವಶ್ಯಕವಾಗಿ ಗೊಂದಲ ಸೃಷ್ಟಿಸಬಾರದು. ಶಾಂತಿಭಂಗ ಪ್ರಯತ್ನ ಮಾಡಬಾರದು, ಯಾರೋ ಮಾಡೋ ತಪ್ಪಿನಿಂದ ಸಮಾಜದಲ್ಲಿ ಹೀಗೆ ಆಗುತ್ತದೆ. ಬಂಟ್ವಾಳದ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟವರನ್ನು ಬಂಧಿಸಲಾಗಿದೆ. ನಾಗಮಂಗಲ ಪ್ರಕರಣದ ಬಗ್ಗೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಯಾರೇ ಕಿಡಿಗೇಡಿಗಳು ಇರಲಿ ಕ್ರಮ ತೆಗೆದುಕೊಳ್ಳಲು ನಮ್ಮ ಇಲಾಖೆ ಇದೆ. ಅಶೋಕ್ ಅವರು ಒಂದೇ ಕೋಮಿನ ಮೇಲೆ ದ್ವೇಷ ಸಾಧಿಸುತ್ತಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಇರಲಿ ಯಾರು ತಪ್ಪು ಮಾಡಿದರೂ ನಾವು ಕ್ರಮ ಕೈಗೊಳ್ಳುತ್ತೇವೆ ತಿಳಿಸಿದರು. ಇದನ್ನೂ ಓದಿ: ಮಂಗಳವಾರ ಸಚಿವ ಸಂಪುಟ ಸಭೆ – ಇಂದೇ ಕಲಬುರಗಿ ತಲುಪಿದ ಸಿಎಂ

    ಅಶೋಕ್ ಅವರಿಗೆ ಹಿಂದುಗಳ ಬಗ್ಗೆ ಯಾವ ಆಲೋಚನೆಯೂ ಇರುವುದಿಲ್ಲ. ಅವರು ಏನಾದರು ಮಾಡಲಿ ಎಂದು ಮಾತನಾಡುತ್ತಾರೆ. ಆದರೆ ನಮಗೆ ಹಾಗಲ್ಲ, ನಮಗೆ ರೂಲ್ ಆಫ್ ಲಾ ಇರಬೇಕು. ನಾಗಮಂಗಲದಲ್ಲಿ ನಮ್ಮ ಪಕ್ಷದವರು ಕೂಡ ಇದ್ದಾರೆ ಎಂದು ಗೊತ್ತಾಯಿತು. ಹಿಂದೆ ಮುಂದೆ ನೋಡದೇ ಕೂಡಲೇ ಕ್ರಮ ಕೈಗೊಂಡಿದ್ದೇವೆ. ತಪ್ಪು ಮಾಡುವವರು ಎಲ್ಲಾ ಪಕ್ಷದಲ್ಲೂ ಇರ್ತಾರೆ. ಕಾನೂನಿನ ಕ್ರಮ ಇದ್ದಾಗಷ್ಟೇ ಜನರಿಗೆ ವಿಶ್ವಾಸ ಹುಟ್ಟುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

  • ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

    ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

    ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal Violence) ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ (Nagamangala Violence) ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ (Congress) ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ಅರೆಸ್ಟ್‌: ಮುನಿರತ್ನ

    ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ. ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್

    ಮುನಿರತ್ನರನ್ನು ತಕ್ಷಣ ಬಂಧನ ಮಾಡಿದ್ದೇಕೆ?
    ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ (Muniratna) ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲಾ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ

    ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ (BJP) ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ

  • ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ

    ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯದ ನಾಗಮಂಗಲ (Nagamangala Violence) ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ (Congress) ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ- ಸಿಎಂ ವಿರುದ್ಧ ಸೂಲಿಬೆಲೆ ಗರಂ

    ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿಸಿದ ಅವರು ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಕಲ್ಲು, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ: ಪ್ರತಾಪ್ ಸಿಂಹ

    ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?
    ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ

    ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ:
    ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಹರಿಹಾಯ್ದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್‌ ಲಘು ಹೇಳಿಕೆ

  • ಕಲ್ಲು ತೂರಾಟ, ತಲವಾರ್‌ ಪ್ರದರ್ಶನ, ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ – ನಾಗಮಂಗಲ ಧಗಧಗಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ಸುದ್ದಿ

    ಕಲ್ಲು ತೂರಾಟ, ತಲವಾರ್‌ ಪ್ರದರ್ಶನ, ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ – ನಾಗಮಂಗಲ ಧಗಧಗಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ಸುದ್ದಿ

    ಮಂಡ್ಯ: ಉದ್ರಿಕ್ತರ ಕಿಚ್ಚಿಗೆ ನಾಗಮಂಗಲ (Nagamangala) ಉದ್ವಿಘ್ನಗೊಂಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಶನಿವಾರದವರೆಗೆ 144 ಸೆಕ್ಷನ್‌ ಹಾಕಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ.

    ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ಹೇಗೆ? ಶಾಂತವಾಗಿದ್ದ ನಾಗಮಂಗಲ ಧಗಧಗಿಸಿದ್ದು (Communal Violence) ಹೇಗೆ ಎನ್ನುವುದರ ಸಂಪೂರ್ಣ ವಿವರವವನ್ನು ಇಲ್ಲಿ ನೀಡಲಾಗಿದೆ.

    ಮೆರವಣಿಗೆ ಆರಂಭ
    ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಮೆರವಣಿಗೆ (Ganpati Idol Procession) ಮೂಲಕ ತರಲಾಗುತ್ತಿತ್ತು. ಅದ್ದೂರಿ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆಗೆ ಆಯೋಜಕರು ಸಜ್ಜಾಗಿದ್ದರು.

    ಕಲ್ಲು ತೂರಾಟ ಆರಂಭ
    ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬರುತ್ತಿದ್ದಂತೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ದರ್ಗಾ ಬಳಿ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಮಾಡಿ ಕಲ್ಲು ತೂರಿದ್ದಾರೆ. ಈ ವೇಳೆ ಎರಡು ಗುಂಪಿನ ಯುವಕರ ಮಧ್ಯೆ ವಾಕ್ಸಮರ ಶುರುವಾಗಿದೆ. ನೋಡನೋಡುತ್ತಿದ್ದಂತೆ ತಳ್ಳಾಟ, ನೂಕಾಟ ನಡೆದಿದೆ.

    ಗಣೇಶ ಮೂರ್ತಿ ನಿಲ್ಲಿಸಿ ಪ್ರತಿಭಟನೆ
    ಕಿಡಿಗೇಡಿಗಳ ಕೃತ್ಯ ಖಂಡಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿಯನ್ನು ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಬೇಕು, ಕ್ರಮ ಜರುಗಿಸಬೇಕು ಅಂತ ಆಗ್ರಹಿಸಿದ್ದಾರೆ.  ಇದನ್ನೂ ಓದಿ: ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

    ತಲವಾರ್ ಪ್ರದರ್ಶನ
    ಈ ಸಂದರ್ಭದಲ್ಲಿ ಕಿಡಿಗೇಡಿಗಳ ಗುಂಪು ತಲವಾರ್ ಪ್ರದರ್ಶಿಸಿ, ಜೀವ ಬೆದರಿಕೆ ಹಾಕಿದೆ. ದರ್ಗಾ ಬಳಿ ಗಣೇಶ ಮೆರವಣೆಗೆ ಬಂದರೆ ನಿಮ್ಮನ್ನು ಉಳಿಸುವುದಿಲ್ಲ ಎಂಬಂತೆ ಜೀವ ಬೆದರಿಕೆ ಹಾಕಿ ತಲವಾರ್‌ಗಳನ್ನು ತೋರಿಸಿದ್ದಾರೆ.

    ಘರ್ಷಣೆ; ಲಾಠಿ ಚಾರ್ಜ್
    ಯಾವಾಗ ತಲವಾರ್ ಪ್ರದರ್ಶಿಸಿ ಕಿರಿಕ್‌ ಮಾಡಿದರೋ ಆಗ ಎರಡು ಗುಂಪಿನ ಯುವಕರ ಮಧ್ಯೆ ಘರ್ಷಣೆ ಶುರುವಾಗಿ ಪರಸ್ಪರ ಹೊಡೆದಾಟ ನಡೆದಿದೆ. ಘಟನಾ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು ಜಮಾಯಿಸಿದ್ದರಿಂದ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

    ಮತ್ತೆ ಕಲ್ಲು ತೂರಾಟ, ಪೋಲಿಸರಿಗೂ ಗಾಯ
    ಲಾಠಿ ಚಾರ್ಜ್ ಆದ ಬಳಿಕ ಮತ್ತೆ ಕಿಡಿಗೇಡಿಗಳ ಗ್ಯಾಂಗ್ ಕಲ್ಲು ತೂರಾಟ ನಡೆಸಿ ಉದ್ದಟತನ ಮೆರೆದಿದೆ. ಕಲ್ಲು ತೂರಾಟದ ವೇಳೆ ಪೊಲೀಸ್ ಕಾನ್‌ಸ್ಟೇಬಲ್‌ ಅವರಿಗೂ ಗಾಯಗಳಾಗಿವೆ. ಇದನ್ನೂ ಓದಿ: ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ತಲವಾರ್ ವಶಕ್ಕೆ
    ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಕಿಡಿಗೇಡಿಗಳ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬಳಿಕ ಅವರ ಬಳಿಯಿದ್ದ ತಲವಾರ್‌ ಅನ್ನು ವಶಕ್ಕೆ ಪಡೆದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದರು.

    ಅಂಗಡಿಗಳ ಮೇಲೆ ಕಲ್ಲು:
    ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಎನ್ನುವಷ್ಟರಲ್ಲಿ ಉದ್ರಿಕ್ತರ ಗುಂಪಿನಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿ ಮತ್ತೆ ಕಿಡಿಗೇಡಿ ಕೃತ್ಯಕ್ಕೆ ಮುಂದಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಿಡಿಗೇಡಿಗಳು ಸೇರಿದ ನಂತರ ಅಲ್ಲೇ ಇದ್ದ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರು ನಿರಂತರವಾಗಿ ಕಲ್ಲು ತೂರಾಟ ನಡೆಸುವ ಮೂಲಕ ಗಲಭೆಯನ್ನು ಮತ್ತಷ್ಟು ಜಾಸ್ತಿ ಮಾಡಿದ್ದಾರೆ.

    ಪೆಟ್ರೋಲ್ ಬಾಂಬ್ ದಾಳಿ
    ಕಲ್ಲು ತೂರಾಟ ನಡೆಸುವುದರ ಜೊತೆ ಕಿಡಿಗೇಡಿ ಯುವಕರು ಪೆಟ್ರೋಲ್ ಬಾಂಬ್ ದಾಳಿ ಮಾಡಿ, ಅಂಗಡಿಗಳಿಗೆ ವಾಹನಗಳಿಗೂ ಬೆಂಕಿ ಹಚ್ಚಿ ಕ್ರೌರ್ಯ ಮೆರೆದಿದ್ದಾರೆ. ಇದರ ಜೊತೆಗೆ ಅಲ್ಲೇ ಇದ್ದ ಗುಜರಿ ಅಂಗಡಿಯೊಂದು ಕಿಡಿಗೇಡಿಗಳ ಅಟ್ಟಹಾಸಕ್ಕೆ ಸುಟ್ಟು ಭಸ್ಮವಾಗಿದೆ.

    ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ
    ಅಂಗಡಿ, ಮುಂಗಟ್ಟು ಮಾತ್ರವೇ ಅಲ್ಲ, ರಸ್ತೆಯಲ್ಲಿ ಸಿಕ್ಕ-ಸಿಕ್ಕ ವಾಹನಗಳ ಮೇಲೂ ಪೆಟ್ರೋಲ್ ಬಾಂಬ್ ದಾಳಿ ಮಾಡಿದ್ದಾರೆ. ನೋಡನೋಡುತ್ತಿದ್ದಂತೆ ಅಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿದೆ.

    ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿ
    ಇಷ್ಟೆಲ್ಲಾ ಘಟನೆ ನಂತರ ನಾಗಮಂಗಲದಲ್ಲಿ ಉದ್ವಿಗ್ನ ವಾತಾವರಣ ಮತ್ತಷ್ಟು ಹೆಚ್ಚಾಯಿತು. ಎತ್ತ ನೋಡಿದರೂ ಬೆಂಕಿಯ ಜ್ವಾಲೆ ಜೋರಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಇದನ್ನೂ ಓದಿ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ

     

    ಬಿಲ್ಡಿಂಗ್ ಒಳಗಡೆಯಿಂದ ಕಲ್ಲು ತೂರಾಟ
    ಇದಾದ ಬಳಿಕ ಮತ್ತೆ ಬಿಲ್ಡಿಂಗ್ ಒಳಗಡೆಯಿಂದ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಒಬ್ಬೊಬ್ಬರಾಗಿ ಹಿಂದೂ ಯುವಕರ ಮೇಲೆ ಕಲ್ಲಿನ ದಾಳಿಯೇ ಮಾಡುತ್ತಾರೆ. ಶಾಂತವಾಗಿದ್ದ ಯುವಕರ ಮೇಲೆ ಮತ್ತೆ ಕಲ್ಲು ತೂರಾಟ ಮಾಡುವ ಮೂಲಕ ಪರಿಸ್ಥಿತಿಯನ್ನು ಮತ್ತೆ ಉದ್ವಿಗ್ನ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಾರೆ.

    ವಾಹನಗಳ ಮೇಲೆ ರಾಡ್‌ನಿಂದ ದಾಳಿ
    ಇದಷ್ಟೆ ಅಲ್ಲದೆ ರಸ್ತೆ ಬದಿ ನಿಂತಿದ್ದ ವಾಹನಗಳ ಮೇಲೂ ರಾಡ್‌ನಿಂದ ದಾಳಿ ಮಾಡಿ ಜಖಂಗೊಳಿಸುತ್ತಾರೆ. ಕಾರು, ಬೈಕ್, ಸ್ಕೂಟರ್‌ಗಳ ಮೇಲೆ ದಾಳಿ ಮಾಡುತ್ತಾರೆ. ಮತ್ತೆ ಉದ್ದಟತನ ಪ್ರದರ್ಶಿಸಿದ ಗ್ಯಾಂಗ್ ಹಿಂದೂಗಳ ವಾಹನಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಾರೆ. ಅಲ್ಲದೇ ಹಿಂದೂ ಯುವಕರ ಮೇಲೂ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೆಲ ಯುವಕರಿಗೆ ಗಾಯಗಳಾದ ಘಟನೆಯೂ ನಡೆದಿದೆ.

    ಪೊಲೀಸ್ ಭದ್ರತೆ ಹೆಚ್ಚಳ
    ಪರಿಸ್ಥಿತಿಯನ್ನು ನಿಯಂತ್ರಣ ಮಾಡಲೇಬೇಕು ಎಂದು ಪಣತೊಟ್ಟ ಖಾಕಿ ಟೀಂ ಭದ್ರತೆ ಹೆಚ್ಚಳ ಮಾಡಿ ನಾಗಮಂಗಲಕ್ಕೆ ಬರುವ ನಾಲ್ಕು ದಿಕ್ಕಿನಲ್ಲೂ ವಾಹನಗಳನ್ನ ತಡೆದು, ನಾಗಮಂಗಲಕ್ಕೆ ಎಂಟ್ರಿಕೊಡಂತೆ ವಾರ್ನ್ ಮಾಡಿ ನಾಕಬಂದಿ ಹಾಕ್ತಾರೆ.

    ಮತ್ತೆ ಲಾಠಿ ಚಾರ್ಜ್; ಪರಿಸ್ಥಿತಿ ಕಂಟ್ರೋಲ್
    ಯಾವಾಗ ಪೊಲೀಸ್ ಭದ್ರತೆ ಹೆಚ್ಚಾಗುತ್ತದೋ ಅವಾಗ ಅಸಲಿ ಆಟಕ್ಕೆ ಬ್ರೇಕ್ ಬಿತ್ತು. ಫೀಲ್ಡ್‌ಗೆ ಇಳಿದ ಪೊಲೀಸರು ಗಲ್ಲಿಗಲ್ಲಿಗೂ ನುಗ್ಗಿ ಕಿಡಿಗೇಡಿಗಳ ಮೇಲೆ ಲಾಠಿ ಚಾರ್ಜ್ ಮಾಡುವ ಮೂಲಕ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುತ್ತಾರೆ.

    ಹಣ್ಣುಗಳ ಅಂಗಡಿ ಚೆಲ್ಲಾಪಿಲ್ಲಿ
    ಅನ್ಯಕೋಮಿನ ಕಿಡಿಗೇಡಿಗಳ ಅಟ್ಟಹಾಸ ಹೇಗಿತ್ತು ಅಂದರೆ ಹಣ್ಣುಗಳ ಅಂಗಡಿಗಳ ಮೇಲೂ ದಾಳಿ ಮಾಡಿದ್ದಾರೆ. ಹಣ್ಣುಗಳೆಲ್ಲಾ ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

    ಎಸ್‌ಪಿ, ಡಿಸಿ, ಐಜಿಪಿ ಭೇಟಿ, ರೌಂಡ್ಸ್
    ಇದಾದ ಬಳಿಕ ಘಟನಾ ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ, ಐಜಿಪಿ ಬೋರಲಿಂಗಯ್ಯ ಸೇರಿದಂತೆ ಜಿಲ್ಲಾಧಿಕಾರಿ ಕೂಡ ಭೇಟಿ ಕೊಟ್ಟು ನಾಗಮಂಗಲ ಪಟ್ಟಣವನ್ನು ಒಂದು ರೌಂಡ್ಸ್ ಹಾಕಿ ಪರಿಶೀಲನೆ ನಡೆಸುತ್ತಾರೆ.

    ಠಾಣೆ ಪಕ್ಕದ ಅಂಗಡಿಗೆ ಬೆಂಕಿ
    ಪೊಲೀಸರು ರೌಂಡ್ಸ್ ಹಾಕಿ ತೆರಳಿದ ಬಳಿಕವೂ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಅಂಗಡಿಗೆ ಬೆಂಕಿ ಹಚ್ಚಿ ಉದ್ದಟತನ ಮೆರೆದಿದ್ದಾರೆ.

     

  • ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

    ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

    ಮಂಡ್ಯ: ಗಣೇಶ ವಿಸರ್ಜನೆ ವೇಳೆ (Ganpati Idol Procession) ಕೋಮುಗಲಭೆ (Communal Violence) ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ (Nagamangala town) 144 ಸೆಕ್ಷನ್‌ ಜಾರಿ ಮಾಡಲಾಗಿದೆ.

    ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ

     

    ನಾಗಮಂಗಲ ಬಂದ್‌: ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್‌ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು  ಕರೆ ನೀಡಿವೆ.

  • ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

    ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

    ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ನಡೆದಿರುವುದು ಕೋಮುಗಲಭೆಯಲ್ಲ (Communal Violence), ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿದ್ದಾರೆ. ಉಳಿದ ಎಲ್ಲಾ ಕಡೆ ಹಬ್ಬ ಚೆನ್ನಾಗಿಯೇ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಎರಡು ಒಂದೇ ದಿನ ಇತ್ತು. ಈ ಬಗ್ಗೆ ಸಭೆ ಮಾಡಿದ್ದೆವು. ಈ ವೇಳೆ ಮುಸ್ಲಿಂ ಬಾಂಧವರು ಭಾನುವಾರ ಮೆರವಣಿಗೆ ಮಾಡುವುದಾಗಿ ಹೇಳಿದ್ದರು. ಇಲ್ಲಿ ಒಂದೇ ರಸ್ತೆಯಲ್ಲಿ ಮೆರವಣಿಗೆ ಆಗುತ್ತದೆ. ಈ ವೇಳೆ ಹಿಂದೂ ಹಬ್ಬ ಆದರೆ ಮುಸ್ಲಿಮರು ಹೋಗ್ತಾರೆ. ಹಾಗೆಯೇ ಮುಸ್ಲಿಮರ ಹಬ್ಬ ಆದರೆ ಹಿಂದೂಗಳು ಹೋಗುತ್ತಾರೆ. ಈ ವೇಳೆ ಯಾರೋ ಒಂದೆರಡು ಜನ ಕಿಡಿಗೇಡಿಗಳು ಈ ರೀತಿ ಗಲಾಟೆ ಮಾಡಿದ್ದಾರೆ. ಮನೆಗಳಿಗೂ ನುಗ್ಗಿ ಗಲಭೆ ಮಾಡಿದ್ದಾರೆ. ಈ ರೀತಿ ಬರೀ ರಾಗಿಗುಡ್ಡದಲ್ಲಿ ಮಾತ್ರ ನಡೆದಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಗಲಾಟೆ ಮಾಡಲು ಹೊರಗಡೆಯಿಂದ ಬಂದಿದ್ದರು ಎಂದು ಸ್ಥಳೀಯ ಶಾಸಕರು ಹೇಳುತ್ತಿದ್ದಾರೆ. ಈ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ಯಾರೂ ಕೊಡಬಾರದು. ಅವರಿಗೆ ಈ ಮಾಹಿತಿ ಗೊತ್ತಿದೆಯಾ? ನಾನು ಎಲ್ಲಾ ವಿಚಾರದಲ್ಲೂ ರಾಜಕೀಯ ಮಾತಾಡಲು ಹೋಗುವುದಿಲ್ಲ. ಈ ರೀತಿ ಮಾತಾಡಲು ಖುಷಿ ಆಗುತ್ತದೆಯೇ? ಈ ರೀತಿ ಮಾತನಾಡಲು ಮನಸ್ಸಿಗೆ ಬೇಜಾರಾಗುತ್ತದೆ. ಹಬ್ಬ ಎಂದರೆ ಭಕ್ತಿ ಹಾಗೂ ಸಂಪ್ರದಾಯ ಅವುಗಳಿಗೆ ಗೌರವ ಕೊಡಬೇಕು ಎಂದಿದ್ದಾರೆ.

    ಸ್ಥಳೀಯ ಶಾಸಕರು ಕಾರ್ ನಂಬರ್ ಬಗ್ಗೆ ಮಾತಾಡುತ್ತಿದ್ದಾರೆ. ಅವರಿಗೆ ಎಲ್ಲಾ ಮಾಹಿತಿ ಬಂದಿದೆಯೇ? ಹಿಂದೆ ಇದೆಲ್ಲ ಮಾಡಿ ಅನುಭವ ಇದೆಯಂತಾ ಅವರಿಗೆ? ಜವಾಬ್ದಾರಿ ಸ್ಥಾನದಲ್ಲಿ ಇರುವವರು ಹಾಗೆಲ್ಲ ಮಾತನಾಡಬಾರದು. ಟಿಪ್ಪು ಫೋಟೋ ಇರುವುದೇ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಅದಕ್ಕೆಲ್ಲ ಈಗ ಉತ್ತರ ಕೊಡಲು ಆಗುವುದಿಲ್ಲ ಎಂದಿದ್ದಾರೆ.

    ಬೇರೆ ಎಲ್ಲಾ ಕಡೆ ಹಬ್ಬಗಳು ಚೆನ್ನಾಗಿ ನಡೆದಿದೆ. ಇಲ್ಲಿ ವೈಯುಕ್ತಿಕವಾಗಿ ಆಗಿದೆ ಅಷ್ಟೇ. ಯಾರೇ ಆದರೂ ಕಾನೂನು ಮೀರಿ ಹೋದರೆ ಏನು ಶಿಕ್ಷೆ ಕೊಡಬೇಕೋ ಅದನ್ನು ಕೊಡುತ್ತೇವೆ. ಈ ಬಗ್ಗೆ ಎಸ್‍ಪಿ ಅವರಿಗೂ ಸೂಚನೆ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದ್ದಾರೆ.

    ಶಿವಮೊಗ್ಗದಲ್ಲಿ ಮರಳಿ ಶಾಂತಿ ನೆಲೆಸುತ್ತಿದೆ. ಇಂದು ಅಥವಾ ನಾಳೆ ಅಲ್ಲಿಗೆ ಹೋಗುತ್ತೇನೆ. ಈಗಾಗಲೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಸಿಎಂ ಇಬ್ರಾಹಿಂ ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ವಿಚಾರದ ಪ್ರಶ್ನೆಗೆ, ಪಕ್ಷಕ್ಕೆ ಬರುವುದಾಗಿ ಅವರು ನನಗೇನು ಹೇಳಿಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಿಮಗೆ ಈ ಬಗ್ಗೆ ಹೇಳಿದ್ದಾರೇನೋ ನನಗಂತೂ ಗೊತ್ತಿಲ್ಲ. ಅವರಿಗೆ ನೋವಾಗಿದ್ದರೆ ಪಕ್ಷ ಮತ್ತು ಅವರು ನಿರ್ಧಾರ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಬೆಂಗಳೂರು: ಶಿವಮೊಗ್ಗ (Shivamogga) ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು ನಡೆದಿವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

    ಮೂರು ಠಾಣೆಗಳ ವ್ಯಾಪ್ತಿಯಲ್ಲೇ ಈ ರೀತಿಯ ಗಲಭೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಆ ಮೂರು ಠಾಣೆಗಳಿಗೆ ಸೂಕ್ತ ಅಧಿಕಾರಿಗಳನ್ನು ನಿಯೋಜಿಸುತ್ತಿಲ್ಲ. ಪದೇ ಪದೇ ವರ್ಗಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಸುಳ್ಳು ಹೇಳಿ, ಸುಳ್ಳು ಆಶ್ವಾಸನೆ ಕೊಟ್ಟು ಜನರ ದಾರಿ ತಪ್ಪಿಸುವುದೇ ಕಾಂಗ್ರೆಸ್‍ನ (Congress) ಕೆಲಸವಾಗಿದೆ. ಸರ್ಕಾರ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಸರ್ಕಾರವೇ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಕೊಡುವುದನ್ನು ಬಿಡಬೇಕು. ಈ ಗಲಾಟೆ ಹಿಂದೆ ಓಲೈಕೆ ರಾಜಕಾರಣ ಇದೆ. ಪೊಲೀಸರು ಲಾಠಿ ಚಾರ್ಜ್ ಮಾಡುವ ಪರಿಸ್ಥಿತಿ ಬರಬಾರದಿತ್ತು. ಸರ್ಕಾರ ದಮನಕಾರಿ ನೀತಿ ಬಿಡಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

    ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

    ನವದೆಹಲಿ: ವಿಶ್ವದಲ್ಲಿ 57 ಮುಸ್ಲಿಂ ರಾಷ್ಟ್ರಗಳಿವೆ (Muslim Nations), ಅಲ್ಲಿ ಮುಸ್ಲಿಮೇತರರೂ ಇದ್ದಾರೆ. ಅಲ್ಲಿ ಯಾರಿಗೂ ತೊಂದರೆ ಆಗುತ್ತಿಲ್ಲ. ಆದ್ರೆ ಭಾರತದಲ್ಲಿ ಹಿಂದೂ ಮುಸ್ಲಿಮರ ನಡುವಿನ ಸಂಬಂಧ ಅಪಾಯದಲ್ಲಿದೆ. ದೇಶದಲ್ಲಿ ಏಕೆ ಮುಸ್ಲಿಮರನ್ನ ಕಂಡರೆ ಇಷ್ಟೊಂದು ದ್ವೇಷ? ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಮುಸ್ಲಿಮರ ಮನದ ಮಾತನ್ನೂ ಕೇಳಿ, ಅವರ ಸಮಸ್ಯೆಗಳನ್ನ ಬಗೆಹರಿಸಬೇಕು ಎಂದು ಜಾಮಾ ಮಸೀದಿಯ ಮೌಲ್ವಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ (Shahi Imam Syed Ahmed Bukhari) ಮನವಿ ಮಾಡಿದ್ದಾರೆ.

    ಹರಿಯಾಣದ ನುಹ್‌ ಜಿಲ್ಲೆಯ (Nuh Communal Violence) ಗಲಭೆಗಳು ಹಾಗೂ ಚಲಿಸುತ್ತಿದ್ದ ರೈಲಿಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಗಳನ್ನ ಉಲ್ಲೇಖಿಸಿ ಜಾಮಾ ಮಸೀದಿಯಲ್ಲಿ ನಡೆದ ಧರ್ಮೋಪದೇಶದಲ್ಲಿ ಮಾತನಾಡಿದ್ದಾರೆ. ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ರೇಪ್ – ಕರಾಳ ದಿನದ ಕಹಿ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

    ದೇಶದ ಪರಿಸ್ಥಿತಿ ಚಿಂತಾಜನಕವಾಗಿದೆ. ದ್ವೇಷದ ಅಲೆಗಳು ದೇಶದ ಶಾಂತಿ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತಿವೆ. ಮೋದಿ ಅವರೇ ನೀವು ಮನ್‌ ಕಿ ಬಾತ್‌ ಹೇಳುತ್ತೀರಿ, ಅದೇ ರೀತಿ ಮುಸ್ಲಿಮರ ಮನ್‌ ಕಿ ಬಾತ್‌ ಅನ್ನೂ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ

    ಇತ್ತೀಚಿನ ಘಟನೆಗಳಿಂದ‌ ದೇಶದ ಮುಸ್ಲಿಮರು ತೊಂದರೆಗೀಡಾಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ದ್ವೇಷ ಮತ್ತು ಹಿಂಸಾಚಾರ ಎದುರಿಸುವಲ್ಲಿ ಕಾನೂನು ದುರ್ಬಲವಾಗಿದೆ ಎಂದು ಸಾಬೀತುಪಡಿಸುತ್ತಿದೆ. ಒಂದು ಧರ್ಮದ ಜನರಿಗೆ ಬಹಿರಂಗವಾಗಿ ಬೆದರಿಕೆ ಹಾಕಲಾಗುತ್ತಿದೆ. ಮುಸ್ಲಿಮರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಅವರೊಂದಿಗೆ ವ್ಯಾಪಾರ ವಹಿವಾಟು ನಡೆಸದಂತೆ ಬಹಿಷ್ಕರಿಸಲಾಗುತ್ತಿದೆ. ವಿಶ್ವದಾದ್ಯಂತ 57 ಮುಸ್ಲಿಂ ರಾಷ್ಟ್ರಗಳಿದ್ದು, ಅಲ್ಲಿ ಮುಸ್ಲಿಮೇತರರೂ ವಾಸಿಸುತ್ತಿದ್ದಾರೆ. ಆದ್ರೆ ಅವರಿಗೆ, ಅವರ ಜೀವನೋಪಾಯಕ್ಕೆ ಯಾವುದೇ ಬೆದರಿಕೆ ಒಡ್ಡುತ್ತಿಲ್ಲ ಎಂದು ಹೇಳಿದ್ದಾರೆ.

    ಭಾರತದಲ್ಲಿ ಮಾತ್ರ ಹಿಂದೂ-ಮುಸ್ಲಿಮರ ನಡುವಿನ ಸಂಬಂಧ ಅಪಾಯದಲ್ಲಿದೆ. ಭಾರತದಲ್ಲಿ ಮಾತ್ರ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ? ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಸಹ ಹೋರಾಡಿದ್ದಾರೆ. ಈಗ ಯಾಕೆ ಮತ್ತೆ ಹಿಂದೂ ಮುಸ್ಲಿಮರನ್ನು ಪ್ರತ್ಯೇಕಿಸುತ್ತಿದ್ದಾರೆ? ಪರಿಸ್ಥಿತಿಯನ್ನು ನಿಯಂತ್ರಿಸುವುದು ಸರ್ಕಾರದ ಕೈಯಲ್ಲಿದೆ ಎಂದು ಅಹ್ಮದ್ ಬುಖಾರಿ ಹೇಳಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲ್ಮೈ ಹೇಗಿದೆ ನೋಡಿ – Chandrayaan-3 ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ

    ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ

    ಚಂಡೀಗಢ: ಹರಿಯಾಣದಲ್ಲಿ ಕೋಮು ಸಂಘರ್ಷ (Haryana Communal Violence) ದಿನದಿಂದ ದಿನಕ್ಕೆ ಉದ್ವಿಗ್ನಗೊಳ್ಳುತ್ತಿದೆ. ಈ ನಡುವೆ ಇಲ್ಲಿನ ಮೂರು ಜಿಲ್ಲೆಗಳ 14 ಹಳ್ಳಿಗಳಿಗೆ ಮುಸ್ಲಿಮರನ್ನ ಬಹಿಷ್ಕರಿಸಲು (Boycott Muslims) ನಿರ್ಧರಿಸಿರುವುದಾಗಿ 14 ಗ್ರಾಮ ಪಂಚಾಯಿತಿಗಳು ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ ಬರೆದಿವೆ.

    ಕಳೆದ ಜುಲೈ 31 ರಂದು ಆರಂಭವಾದ ಕೋಮು ಘರ್ಷಣೆಯಿಂದ ಮಹೇಂದ್ರಗಢ, ಜಜ್ಜರ್‌ ಮತ್ತು ರೇವಾರಿ ಜಿಲ್ಲೆಗಳಲ್ಲೂ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ 14 ಗ್ರಾಮ ಪಂಚಾಯಿತಿಗಳು ಮುಸ್ಲಿಮರನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿವೆ. ಕೋಮು ಘರ್ಷಣೆ ನಂತರ ಮುಸ್ಲಿಮರಿಗೆ ಮನೆ ಮತ್ತು ಅಂಗಡಿಗಳನ್ನ ಬಾಡಿಗೆಗೆ ನೀಡದಂತೆ ನಿರ್ಧಾರ ತೆಗೆದುಕೊಂಡಿದ್ದು ಪೊಲೀಸ್‌ ಇಲಾಖೆ (Police Department) ಹಾಗೂ ಜಿಲ್ಲಾಡಳಿತಕ್ಕೆ ಪತ್ರದ ಮೂಲಕ ತಿಳಿಸಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ

    ನುಹ್‌ ಜಿಲ್ಲೆಯಲ್ಲಿ ಸಂಭವಿಸಿದ ಕೋಮು ಸಂಘರ್ಷ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಗುರುಗ್ರಾಮ್‌, ಸೋನಿಪತ್‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿತ್ತು. ಗಲಭೆಕೋರರ ಗುಂಪು ವಿವಿಧ ಪ್ರದೇಶಗಳಿಗೆ ನುಗ್ಗಿ ಹಾನಿಯುಂಟುಮಾಡಿತ್ತು. ಈವರೆಗೆ 50ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದು 200ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ. ಇದರೊಂದಿಗೆ ಹಿಂಸಾಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    14 ಹಳ್ಳಿಗಳ ಹಿಂದೂ ಮುಖಂಡರು ಬರೆದಿರುವ ಪತ್ರದಲ್ಲಿ ಮುಸ್ಲಿಂ ಸಮುದಾಯದ ಜನರಿಗೆ ಬಾಡಿಗೆ ಮನೆ, ಅಂಗಡಿಗಳನ್ನು ಬಾಡಿಗೆ ನೀಡುವುದಿಲ್ಲ. ಇಲ್ಲಿನ ಸಂಸ್ಥೆಗಳಲ್ಲೂ ಕೆಲಸ ನೀಡುವುದನ್ನ ನಿರಾಕರಿಸುವಂತೆ ಮನವಿ ಮಾಡಿದ್ದೇವೆ. ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತದೆ. ಹಿಂದೆಯೂ ಈ ರೀತಿ ಘೋಷಣೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

    ಈ ನಡುವೆ ಗುರುಗ್ರಾಮ್‌ ನಗರ ಪಾಲಿಕೆ ಕೌನ್ಸಿಲರ್‌ ಬ್ರಹ್ಮ್ ಯಾದವ್, ಜನರು ತಮ್ಮ ಆಸ್ತಿಯನ್ನು ಇತರರಿಗೆ ಬಾಡಿಗೆ ಅಥವಾ ಮಾರಾಟ ಮಾಡುವ ಮುನ್ನ ಗುರುತಿನ ಸಾಕ್ಷಿಗಳನ್ನ ಪರಿಶೀಲಿಸಬೇಕು. ಜಿಲ್ಲೆಯ ವಾಲ್ಮೀಕಿ ಜನಾಂಗದವರೇ ಮಾಂಸದ ಅಂಗಡಿಗಳನ್ನ ನಡೆಸಬೇಕು. ಮುಸ್ಲಿಮರು ನಡೆಸುತ್ತಿರುವ ಅಂಗಡಿಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]