Tag: communalism

  • ಮುಖ್ಯಮಂತ್ರಿಗಳೇ, ಕೋಮುಗಳ ನಡುವಿನ ವಿಭಜನೆ ತಡೆಯಿರಿ: ಕಿರಣ್‌ ಮಜುಂದಾರ್‌ ಶಾ ಒತ್ತಾಯ

    ಮುಖ್ಯಮಂತ್ರಿಗಳೇ, ಕೋಮುಗಳ ನಡುವಿನ ವಿಭಜನೆ ತಡೆಯಿರಿ: ಕಿರಣ್‌ ಮಜುಂದಾರ್‌ ಶಾ ಒತ್ತಾಯ

    ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ವಿಭಜನೆ ಬಿಕ್ಕಟ್ಟನ್ನು ಪರಿಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರು ತಾಕೀತು ಮಾಡಿದ್ದಾರೆ.

    ಜಾತ್ರೆ, ಉತ್ಸವ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಬಲಪಂಥೀಯ ಗುಂಪುಗಳ ನೀಡಿರುವ ಕರೆಗೆ ಸಂಬಂಧಿಸಿದಂತೆ ಕಿರಣ್ ಮಜುಂದಾರ್-ಶಾ ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ತಂತ್ರಜ್ಞಾನ ಕ್ಷೇತ್ರವು ಕೋಮುವಾದಿಯಾದರೆ ಅದು ಭಾರತದ ಜಾಗತಿಕ ನಾಯಕತ್ವವನ್ನು ನಾಶ ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ, RSS, VHP, ಬಜರಂಗದಳವಲ್ಲ: ಹೆಚ್.ವಿಶ್ವನಾಥ್ ಕಿಡಿ

    ಟ್ವೀಟ್‌ನಲ್ಲೇನಿದೆ?
    ಎಲ್ಲಾ ಸಮುದಾಯಗಳನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕ ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು. ಐಟಿಬಿಟಿ ಯಂತಹ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ. ಬಸವರಾಜ ಬೊಮ್ಮಾಯಿ ಅವರೇ, ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ ಎಂದು ಟ್ವೀಟ್‌ ಮಾಡಿ ಕಿರಣ್‌ ಮಜುಂದಾರ್‌ ಅವರು ಒತ್ತಾಯಿಸಿದ್ದಾರೆ.

    ಬೊಮ್ಮಾಯಿ ಮತ್ತು ಕಿರಣ್‌ ಶಾ ಅವರಿಗೆ ಟ್ಯಾಗ್‌ ಮಾಡಿ ವ್ಯಕ್ತಿಯೊಬ್ಬ, ಬೊಮ್ಮಾಯಿ ಅವರು ಕೋಮುಗಳ ನಡುವಿನ ವಿಭಜನೆಯನ್ನು ಹೆಚ್ಚಿಸುತ್ತಾರೆ. ನಮ್ಮ ಕಣ್ಣೆದುರೇ ಕರ್ನಾಟಕ ಬಿಕ್ಕಟ್ಟು ಬಗೆಹರಿಸುವಲ್ಲಿ ವಿಫಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಹಲಾಲ್ ಧಾರ್ಮಿಕ ಆಚರಣೆ, ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್

    ಇದಕ್ಕೆ ಪ್ರತಿಕ್ರಿಯಿಸಿರುವ ಕಿರಣ್‌ ಶಾ ಅವರು, ನಮ್ಮ ಮುಖ್ಯಮಂತ್ರಿಗಳು ಪ್ರಗತಿಪರ ನಾಯಕ. ಈ ಬಿಕ್ಕಟ್ಟನ್ನು ಅವರು ಪರಿಹರಿಸುತ್ತಾರೆಂಬ ಭರವಸೆಯಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

  • ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

    ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

    ತುಮಕೂರು: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ಪ್ರವಾದಿ ಮುಹಮ್ಮದ್(ಸ) ಅವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ಬರೆದ ಪ್ರೊ.ಬಿ.ಆರ್.ರಾಮಚಂದ್ರಯ್ಯ ವಿರುದ್ಧ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಪ್ರಕರಣ ದಾಖಲಿಸಿದೆ.

    ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ ‘ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್’ ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಮರನ್ನು ಮತ್ತು ಪ್ರವಾದಿ ಮುಹಮ್ಮದ್(ಸ) ಅವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆ ಮಾಡಿಕೊಂಡಿದೆ. ಇದನ್ನೂ ಓದಿ:  ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

    ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳು ನೀಡಿದ ದೂರಿನನ್ವಯ ಇದೀಗ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಚಲಾವಣೆಯಲ್ಲಿರುವ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯ ಶಿಕ್ಷಣ ಎಂಬ ಪುಸ್ತಕವನ್ನು ತಕ್ಷಣ ಸ್ಥಗಿತಗೊಳಿಸಿ, ಸಂಪೂರ್ಣವಾಗಿ ನಾಶಗೊಳಿಸಬೇಕು.

    ರಾಮಚಂದ್ರಯ್ಯ ಅವರನ್ನು ಪ್ರೊಫೆಸರ್ ಹುದ್ದೆಯಿಂದ ತಕ್ಷಣ ವಜಾಗೊಳಿಸಬೇಕು. ವಿಸ್ಮಯ ಪಬ್ಲಿಕೇಶನ್ ವಿರುದ್ಧ ಕಠಿಣ ಕಾನೂನು ಕ್ರಮ ತಗೆದುಕೊಂಡು ಪರವಾನಿಗೆ ರದ್ದುಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸುತ್ತಿದೆ. ಇದನ್ನೂ ಓದಿ:  ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

  • ಕೈ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಕೈ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದ ಯವಕನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮಹೇಶ್ ಮದನಕರ್(22) ಎಂಬ ಯುವಕ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ ಆರ್ ಪಾಟೀಲ್ ಪರ ಗ್ರಾಮದಲ್ಲಿ ಪ್ರಚಾರ ಮಾಡಿದ್ದ. ಇದರಿಂದ ಕೆರಳಿದ್ದ ಬಿಜೆಪಿ ಕಾರ್ಯಕರ್ತರಾದ ರಾಜು ಹಾಗೂ ತಿಪ್ಪಣ್ಣ ಎಂಬವರ ಮಹೇಶನನ್ನು ಹುಡುಕಿಕೊಂಡು ಹೋಗಿ ಕೊಡಲಿಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ತೀವ್ರ ರಕ್ತಸ್ರಾವದಿಂದ ಮಹೇಶ್ ಅಲ್ಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಮಹೇಶನನ್ನು ಸ್ಥಳೀಯರು ಕಲಬುರಗಿ ಜಿಲ್ಲಾಸ್ಪತ್ರೆ ದಾಖಲಿಸಿದ್ದಾರೆ. ಈ ಘಟನೆ ಕುರಿತಂತೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

  • ಒಂದೇ ಕಲ್ಲಿನಲ್ಲಿ ಎರಡು ಪ್ರಕರಣಗಳನ್ನು ಹೊಡೆದುರುಳಿಸಿದ ಉಡುಪಿ ಪೊಲೀಸ್

    ಉಡುಪಿ: ಒಂದೇ ರಾತ್ರಿ ನಡೆದ ಎರಡು ಪ್ರಕರಣಗಳನ್ನು ಒಂದೇ ಕಲ್ಲಿನಲ್ಲಿ ಪೊಲೀಸರು ಹೊಡೆದು ಉರುಳಿಸಿದ್ದಾರೆ. ಕೋಮು ಸೂಕ್ಷ್ಮ ಪ್ರಕರಣವನ್ನು ಎರಡು ದಿನಗಳ ಒಳಗೆ ಭೇದಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಹನೀಫ್ ಮರ್ಡರ್ ಮತ್ತು ಆದಿ ಉಡುಪಿ ಮಸೀದಿ ಕಲ್ಲೆಸೆದ ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ.

    ಜನವರಿ 29 ರಂದು ಆದಿ ಉಡುಪಿಯ ನೂರಾಲ್ ಮಸೀದಿಗೆ ರಾತ್ರಿ 12 ಗಂಟೆಯ ನಂತರ ಕಲ್ಲು ಬಿದ್ದಿತ್ತು. ದುಷ್ಕರ್ಮಿಯೊಬ್ಬ ಮಸೀದಿಗೆ ಕಲ್ಲೆಸೆದು ಪರಾರಿಯಾಗಿದ್ದ. ಇದಾಗಿ ಮುಕ್ಕಾಲು ಗಂಟೆಯೊಳಗೆ ಕರಾವಳಿ ಬೈಪಾಸಿನಲ್ಲಿ ಒಂದು ಕೊಲೆಯಾಗಿತ್ತು. ಮತ್ತೊಂದು ಕೊಲೆಯತ್ನ ನಡೆದಿತ್ತು. ಎರಡೂ ಘಟನೆಗಳು ನಡೆದದ್ದು ಜನವರಿ 29ರಂದು. ಎರಡೂ ಪ್ರಕರಣದಲ್ಲಿ ಆರೋಪಿ ಪರಾರಿಯಾಗಿದ್ದ.

    ಆರೋಪಿ ಅಂಕಿತ್ ಕುಂಪಲ

    ಹೈವೇ ಗಲಾಟೆಯಲ್ಲಿ ಆಟೋ ಚಾಲಕ ಹನೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಎರಡೂ ಘಟನೆಗಳು ಕೋಮು ಸೂಕ್ಷ್ಮವಾಗಿದ್ದರಿಂದ ಪೊಲೀಸರು ರಾತ್ರೋ ರಾತ್ರಿ ಕಾರ್ಯಪ್ರವೃತ್ತರಾಗಿದ್ದರು. ಘಟನೆ ನಡೆದು 48 ಗಂಟೆಗಳ ಒಳಗೆ ಎರಡೂ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಂಕಿತ್ ಕುಂಪಲ ಎಂಬತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೊದಲು ಮಸೀದಿಗೆ ಕಲ್ಲೆಸೆದು ನಂತರ ಆರೋ ಚಾಲಕನ ಜೊತೆ ಜಗಳವಾಡಿ ತನ್ನ ಜೊತೆಯಲ್ಲಿದ್ದ ಚಾಕುವಿನಿಂದ ಇರಿದಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಉಡುಪಿಯಲ್ಲಿ ಎಎಸ್‍ಪಿ ವಿಷ್ಣುವರ್ಧನ್ ಪ್ರೆಸ್ ಮೀಟ್ ಮಾಡಿದರು.

    ಮೊದಲು ಮಸೀದಿಗೆ ಕಲ್ಲೆಸೆದು ಅಂಕಿತ್ ತನ್ನ ಸ್ಟಾರ್ ಸಿಟಿ ಬೈಕ್‍ನಲ್ಲಿ ಪರಾರಿಯಾಗಿದ್ದ. ಅಲ್ಲಿಂದ ಹೈವೇಗೆ ಬಂದಾಗ ಅಲ್ಲಿ ಆಟೋ ವನ್ ವೇಯಲ್ಲಿ ಬಂದಿದೆ. ಬೈಕ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅಂಕಿತ್ ಹನೀಫ್‍ಗೆ ಇರಿದಿದ್ದ. ಜಗಳ ಬಿಡಿಸಲು ಬಂದ ಹನೀಫ್ ಸಂಬಂಧಿ ಶಬ್ಬೀರ್‍ಗೂ ಚೂರಿ ಅಂಕಿತ್ ಇರಿದು ಪರಾರಿಯಾಗಿದ್ದ.

    ಆರೋಪಿ ಅಂಕಿತ್ ಕುಂಪಲ

    ಎರಡೂ ಪ್ರಕರಣಗಳಿಗೆ ತಲಾ ನಾಲ್ಕು ತಂಡಗಳನ್ನು ಪೊಲೀಸರು ರಚನೆ ಮಾಡಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಮಾಹಿತಿಗಳು ಸಿಗಲಾರಂಬಿಸಿತು. ಅಂಕಿತ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಕೇಸುಗಳಿವೆ. ಉಳ್ಳಾಲದಲ್ಲಿ ಮಸೀದಿಗೆ ಕಲ್ಲೆಸೆತ, ಗುಂಪು ಘರ್ಷಣೆಯಲ್ಲಿ ಅಂಕಿತ್ ಫೇಮಸ್ ಆಗಿದ್ದನಂತೆ. ಗುಂಪು ಗಲಾಟೆಗಳು ಜಾಸ್ತಿಯಾದಾಗ ತನ್ನ ಮನೆಯಿಂದ ದೊಡ್ಡಮ್ಮನ ಉಡುಪಿಯ ಮನೆಗೆ ಬಂದಿದ್ದ ಎನ್ನಲಾಗಿದೆ. ಇಲ್ಲೂ ತನ್ನ ಕೂಟವನ್ನು ಬೆಳೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಸೀದಿಗೆ ಕಲ್ಲೆಸೆದ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರಿಗೆ ಮರ್ಡರ್ ಆರೋಪಿಯೂ ಸಿಕ್ಕಿಬಿದ್ದ. ಈ ಮೂಲಕ ಪ್ರಕರಣ ಕೋಮುಸೂಕ್ಷ್ಮತೆಯತ್ತ ವಾಲುವ ಮೊದಲೇ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಪತ್ತೆಯ ಜವಾಬ್ದಾರಿಯನ್ನು ಉಡುಪಿ ಡಿವೈಎಸ್‍ಪಿ ಕುಮಾರಸ್ವಾಮಿ ಮತ್ತು ಟೀಂ ಹೊತ್ತಿತ್ತು. ಉಡುಪಿ ನಗರ, ಬ್ರಹ್ಮಾವರ ಡಿಸಿಐಬಿ, ಮಣಿಪಾಲ ಪೊಲೀಸರು ಸಾಥ್ ಕೊಟ್ಟಿದ್ದಾಗಿ ಎಎಸ್‍ಪಿ ವಿಷ್ಣುವರ್ಧನ್ ಹೇಳಿದರು.