Tag: Community transmission

  • ಭಾರತದಲ್ಲಿ ಸಮುದಾಯ ಹಂತಕ್ಕೆ ಸೋಂಕು ಹೋಗಿಲ್ಲ: ತಪ್ಪು ಒಪ್ಪಿಕೊಂಡ ಡಬ್ಲ್ಯೂಎಚ್‍ಒ

    ಭಾರತದಲ್ಲಿ ಸಮುದಾಯ ಹಂತಕ್ಕೆ ಸೋಂಕು ಹೋಗಿಲ್ಲ: ತಪ್ಪು ಒಪ್ಪಿಕೊಂಡ ಡಬ್ಲ್ಯೂಎಚ್‍ಒ

    ನವದೆಹಲಿ: ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತ ತಲುಪಿದ ದೇಶಗಳ ಪಟ್ಟಿಯಲ್ಲಿ ಭಾರತವನ್ನು ತೋರಿಸಿದ್ದ ವಿಶ್ವ ಆರೋಗ್ಯ ಸಂಸ್ಥೆ, ತನ್ನ ಯಥಾಸ್ಥಿತಿ ವರದಿಯ ದೋಷವನ್ನು ಒಪ್ಪಿಕೊಂಡಿದೆ.

    ವಿಶ್ವ ಆರೋಗ್ಯ ಸಂಸ್ಥೆ ಯಥಾಸ್ಥಿತಿ ವರದಿಯಲ್ಲಿ, ‘ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ಹೋಗಿ’ ಎಂದು ಹೇಳಿತ್ತು. ಆದರೆ ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು, ಭಾರತದಲ್ಲಿ ಸೋಂಕು ಹರಡುವ ಕ್ಲಸ್ಟರ್ ಕಾಣಿಸಿಕೊಂಡಿವೆ. ಆದರೆ ಸಮುದಾಯ ಪ್ರಸರಣದ ಸ್ಥಿತಿ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

    ಈ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಸ್ಪಷ್ಟನೆ ನೀಡಿದೆ. ದೆಹಲಿಯಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ ಇನ್ನೂ ಕೊರೊನಾ ವೈರಸ್ ಮೂರನೇ ಹಂತ (ಸಮುದಾಯ ಪ್ರಸಾರ)ಕ್ಕೆ ಕಾಲಿಟ್ಟಿಲ್ಲ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಆದರೆ ಜಾಗರೂಕರಾಗಿರಿ ಮತ್ತು ಎಚ್ಚರಕೆಯಿಂದ. ಆರೋಗ್ಯ ಇಲಾಖೆ ಕೂಡ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದರು.

    ದೇಶದಲ್ಲಿ ಕೊರೊನಾ ಮಹಾಮಾರಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಮುಂದಿನ ಸೆಷ್ಟೆಂಬರ್ ವರೆಗೂ ವೈರಸ್ ಇರುವ ಸಾಧ್ಯತೆಗಳಿವೆ ಎಂದು ಚಂಡೀಗಢ ವೈದ್ಯಕೀಯ ವಿಜ್ಞಾನ ಸಂಸ್ಥೆ ವರದಿ ನೀಡಿದೆ.

    ಈ ವೈರಸ್ ಶೇ.58ರಷ್ಟು ಮಂದಿಗೆ ಕಾಡುವ ಸಾಧ್ಯತೆಗಳಿವೆ ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳಿರುವುದು ಆತಂಕ ಮೂಡಿಸಿದೆ. ಈ ತಿಂಗಳ ಅಂತ್ಯದವರೆಗೂ ಯಾವುದೇ ಹಬ್ಬ-ಹರಿದಿನ ಆಚರಣೆ ಮಾಡಲು ಅವಕಾಶ ನೀಡದಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಎಚ್ಚರಿಕೆ ನೀಡಿದೆ. ಮಧ್ಯ ಪ್ರದೇಶದ ಇಂಧೋರ್ ನಲ್ಲಿ ಇವತ್ತು ಕೂಡ ಓರ್ವ ಆರ್ಯುವೇದ ವೈದ್ಯ ನಿಧನರಾಗಿದ್ದಾರೆ.

    ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,061ಕ್ಕೆ ಏರಿದ್ದು, ಸಾವಿನ ಸಂಖ್ಯೆ 241 ಆಗಿದೆ. ಕಳೆದ 24 ಗಂಟೆಯಲ್ಲಿ 37 ಸಾವಾಗಿದ್ದು, ದಾಖಲೆಯ 896 ಜನರಿಗೆ ಸೋಂಕು ದೃಢವಾಗಿದೆ. 692 ಜನ ಡಿಸ್ಚಾರ್ಜ್ ಆಗಿದ್ದಾರೆ.

  • ಕೆಲ ಪ್ರದೇಶಗಳಲ್ಲಿ ಸಮುದಾಯಕ್ಕೆ ಕೊರೊನಾ ಹಬ್ಬುತ್ತಿದೆ: ಏಮ್ಸ್ ನಿರ್ದೇಶಕ

    ಕೆಲ ಪ್ರದೇಶಗಳಲ್ಲಿ ಸಮುದಾಯಕ್ಕೆ ಕೊರೊನಾ ಹಬ್ಬುತ್ತಿದೆ: ಏಮ್ಸ್ ನಿರ್ದೇಶಕ

    ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಏಕಾಏಕಿ ದೇಶದ ಕೆಲವು ಭಾಗಗಳಲ್ಲಿ ಸಮುದಾಯಕ್ಕೆ ಹಬ್ಬಿದೆ ಎಂದು ನವದೆಹಲಿಯ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

    ಮಾಧ್ಯಮ ಸಂದರ್ಶನವೊಂದಲ್ಲಿ ಮಾತನಾಡಿದ ಅವರು, ಕೆಲವು ಪ್ರದೇಶಗಳಲ್ಲಿ ಸಮುದಾಯ ಪ್ರಸರಣ ಕಂಡುಬಂದರೂ ಭಾರತ ಇನ್ನೂ 2ನೇ ಹಂತ ಮತ್ತು 3ನೇ ಹಂತದ ಮಧ್ಯದಲ್ಲಿದೆ. ಕೆಲವು ಸ್ಥಳಗಳಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆ ಕಂಡಿವೆ ಮತ್ತು ಮುಂಬೈನಂತಹ ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಸಮುದಾಯ ಹರಡುವಿಕೆ ಕೂಡ ಗಮನಕ್ಕೆ ಬಂದಿದೆ. ಭಾರತದ ಹೆಚ್ಚಿನ ಭಾಗಗಳಲ್ಲಿ ಪ್ರಸ್ತುತ ಕೊರೊನಾ ವೈರಸ್ 2ನೇ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

    ಡಾ.ರಣದೀಪ್ ಗುಲೇರಿಯಾ ಅವರು ದೇಶದ ಕೆಲವು ಹಾಟ್‍ಸ್ಪಾಟ್‍ಗಳು ಸ್ಥಳೀಯ ಸಮುದಾಯ ಹರಡುವಿಕೆಯನ್ನು ಹೊಂದಿವೆ. ಇದನ್ನು ಆರಂಭಿಕ ಹಂತದಲ್ಲಿ ನಿಲ್ಲಿಸಿದರೆ ಅಷ್ಟೊಂದು ಕೆಟ್ಟ ಪರಿಣಾಮ ಬೀರುವುದಿಲ್ಲ. ಸಮುದಾಯ ಹರಡುವಿಕೆಯು ಕೆಲವು ಪ್ರದೇಶಗಳಲ್ಲಿ ಪ್ರಾರಂಭವಾಗಿದೆ. ಆದ್ದರಿಂದ ನಾವು ಹೆಚ್ಚು ಜಾಗರೂಕರಾಗಿರುವುದು ಅವಶ್ಯಕ ಎಂದು ತಿಳಿಸಿದರು.

    ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಿಂದ ಕೊರೊನಾ ಸೋಂಕಿತರ ಹೆಚ್ಚಳಕ್ಕೆ ಕಾರಣವಾಗಿದೆ. ಜಮಾತ್ ಸಭೆಗೆ ಹಾಜರಾದ ಅಥವಾ ಭಾಗವಹಿಸಿದ್ದವರೊಂದಿಗೆ ಸಂಪರ್ಕ ಹೊಂದಿದ ಎಲ್ಲರನ್ನೂ ಪತ್ತೆಹಚ್ಚುವುದು ಬಹಳ ಮುಖ್ಯ ಎಂದು ಹೇಳಿದರು.

    ಇದೇ ವೇಳೆ ಡಾ.ರಂದೀಪ್ ಗುಲೇರಿಯಾ ಅವರು, ಈ ಸಮಯದಲ್ಲಿ ವೈದ್ಯರನ್ನು ಬೆಂಬಲಿಸುವಂತೆ ಕೇಳಿಕೊಂಡರು. ಹೆಮ್ಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವವರಿಗೆ ಚಿಕಿತ್ಸೆ ನೀಡುವುದು ಭಾರೀ ಅಪಾಯಕಾರಿ. ಹೀಗಾಗಿ ವೈದ್ಯರು ಸಹ ಭಯದಿಂದ ಬದುಕುತ್ತಿದ್ದಾರೆ. ಅವರನ್ನು ಬೆಂಬಲಿಸಿ, ಪ್ರೋತ್ಸಾಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

    21 ದಿನಗಳ ಲಾಕ್‍ಡೌನ್ ಅನ್ನು ವಿಸ್ತರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಾ.ಗುಲೇರಿಯಾ ಅವರು, ಏಪ್ರಿಲ್ 10ರ ನಂತರ ಪರಿಸ್ಥಿತಿ ಸ್ಪಷ್ಟವಾಗಲಿದೆ. ಆಗ ಮಾತ್ರ ಲಾಕ್‍ಡೌನ್ ವಿಸ್ತರಿಸಬೇಕೋ ಅಥವಾ ಬೇಡವೋ ಎಂದು ಹೇಳಲು ನಮಗೆ ಸಾಧ್ಯವಾಗುತ್ತದೆ. ಪರಿಸ್ಥಿತಿ ಸಾಮಾನ್ಯವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.