Tag: compensation

  • ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಬೆಂಗಳೂರು: ಚಿಂತಾಮಣಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ ವಿಷಯ ತಿಳಿದು ಸಿಎಂ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

    ಅಮೆರಿಕ ಪ್ರವಾಸದಲ್ಲಿರುವ ಸಿಎಂ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇತ್ತ ಚಿಂತಾಮಣಿ ಶಾಸಕ ಹಾಗೂ ವಿಧಾನಸಭಾ ಉಪಾಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ ಅವರು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ತಲಾ 25 ಸಾವಿರ ರೂ. ಹಾಗೂ ಗಾಯಾಳುಗಳಿಗೆ 5 ಸಾವಿರ ರೂ. ಪರಿಹಾರ ಧನ ವಿತರಣೆ ಮಾಡಿದ್ದಾರೆ.

    ಮೃತ 12 ಮಂದಿಯಲ್ಲಿ 9 ಮಂದಿ ಮೃತರ ಗುರುತು ಪತ್ತೆಯಾಗಿದ್ದು, ಟಾಟಾ ಮ್ಯಾಜಿಕ್ ಚಾಲಕ ಶಾಬಾಜ್ (19), ಬೈನಹಳ್ಳಿಯ ವೆಂಕಟರಮಣಪ್ಪ (55), ಚಲಮಕೋಟೆ ಗ್ರಾಮದ ಕಿಟ್ಟಣ್ಣ(50), ದಂಡುಪಾಳ್ಯ ನಾರಾಯಣಸ್ವಾಮಿ (63), ಕೋನಪ್ಪಲ್ಲಿಯ ತಿಮ್ಮಯ್ಯ (56), ತಮಿಳುನಾಡು ಮೂಲದವರಾದ ಸಿದ್ದೀಕ್ (40), ರಂಜಿನ (35), ಗುರ್ರವಾರಂಪಲ್ಲಿಯ ಕುಮಾರ್ ಹಾಗೂ ಮುರುಗಮಲ್ಲ ಸುರೇಶ್(40) ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಆಗಿದ್ದೇನು?:
    ಹಿಂದೂ ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳವಾದ ಮುರುಗಮಲ್ಲದಿಂದ ಖಾಸಗಿ ಬಸ್ ಚಿಂತಾಮಣಿ ಕಡೆಗೆ ಆಗಮಿಸುತ್ತಿತ್ತು. ಚಿಂತಾಮಣಿ ಕಡೆಯಿಂದ ಮುರಗಮಲ್ಲದ ಕಡೆಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಮ್ಯಾಜಿಕ್ ಮುರುಗಮಲ್ಲದ ಕಡೆಗೆ ಸಾಗುತ್ತಿತ್ತು. ಈ ವೇಳೆ ಮುರಗಮಲ್ಲ ಸಮೀಪದಲ್ಲಿ ಖಾಸಗಿ ಬಸ್ ಹಾಗೂ ಟಾಟಾ ಮ್ಯಾಜಿಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಮ್ಯಾಜಿಕ್‍ನಲ್ಲಿದ್ದ 12 ಮಂದಿ ಮೃತಪಟ್ಟಿದ್ದಾರೆ.

    ಖಾಸಗಿ ಬಸ್‍ನಲ್ಲಿದ್ದ 8 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಖಾಸಗಿ ಬಸ್ ಚಾಲಕನ ಅತಿವೇಗ, ಅಜಾಗೂರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

  • ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

    ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

    ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಪರಿಹಾರ ಹಣ ತಂದ ಕ್ರೆಡಿಟ್ ಪಡೆಯುವ ಕುರಿತು ಸಂಸದೆ ಸುಮಲತಾ ಹಾಗೂ ಜೆಡಿಎಸ್ ಕಾರ್ಯಕರ್ತರ ಫೈಟ್ ಮಧ್ಯೆ ಇದೀಗ ಮಾಜಿ ಸಂಸದ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದಾರೆ.

    ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಮಧ್ಯೆ ಶಿವರಾಮೇಗೌಡ ಅವರ ಟ್ವೀಟ್ ಅಚ್ಚರಿ ಮೂಡಿಸಿದೆ. ‘ಕೇಂದ್ರಕ್ಕೆ ಪರಿಹಾರ ಹಣಕ್ಕಾಗಿ ಒತ್ತಾಯಿಸಿದ್ದು ನಾನು’ ಎಂದು ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ. ಪರಿಹಾರ ಕೋರಿ ಕೇಂದ್ರಕ್ಕೆ ಪತ್ರ ಬರೆದವನು ನಾನು, ಹಣ ಬಂದಿದ್ದು ಎರಡು ತಿಂಗಳ ಹಿಂದೆ ಎಂದು ಶಿವರಾಮೇಗೌಡ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

    ಮಂಡ್ಯದ ಕನಗನಮರಡಿ ಗ್ರಾಮದಲ್ಲಿ ನವೆಂಬರ್ 24ರಂದು ಭೀಕರ ಬಸ್ ದುರಂತ ಸಂಭವಿಸಿತ್ತು. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದರು. ಈ ವೇಳೆ ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಿತ್ತು. ಇದೀಗ ಕೇಂದ್ರ ಸರ್ಕಾರವೂ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಿದೆ.

    ಕೇಂದ್ರದ ಪರಿಹಾರ ಹಣದ ವಿಚಾರವಾಗಿ ವಾದ ವಿವಾದಗಳು ಆರಂಭವಾಗಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ ಬಳಿ ಮಾತನಾಡಿ ಪರಿಹಾರ ಹಣ ಬಿಡುಗಡೆ ಮಾಡಿಸಿದ್ದಾರೆ ಎಂದು ಸುಮಲತಾ ಬೆಂಬಲಿಗರು ಹೇಳುತ್ತಿದ್ದಾರೆ. ಕೇಂದ್ರದಿಂದ ಪರಿಹಾರ ಹಣ ತಂದಿದ್ದು ಮುಖ್ಯಮಂತ್ರಿ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುತ್ತಿದ್ದಾರೆ.

    ಈ ಮಧ್ಯೆ ಇದೀಗ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದು, ಕೇಂದ್ರಕ್ಕೆ ಪತ್ರ ಬರೆದು ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿದ್ದು ನಾನು ಎಂದು ಮಾಜಿ ಸಂಸದ ಶಿವರಾಮೇಗೌಡ ಟ್ವೀಟ್ ಮಾಡಿದ್ದಾರೆ

    https://www.youtube.com/watch?v=XpZzL4RaCWk

  • ಮಂಡ್ಯ ಬಸ್ ದುರಂತ- ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ರೂ. ಪರಿಹಾರ

    ಮಂಡ್ಯ ಬಸ್ ದುರಂತ- ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ರೂ. ಪರಿಹಾರ

    – ಸಿಎಂ, ಸಂಸದೆಯಿಂದ ಮೋದಿಗೆ ಧನ್ಯವಾದ

    ಮಂಡ್ಯ: ಜಿಲ್ಲೆಯ ಪಾಂಡವಪುರ ಕನಗನಮರಡಿನಲ್ಲಿ ಸಂಭವಿಸಿದ್ದ ಭೀಕರ ಬಸ್ ದುರಂತದಲ್ಲಿ 30 ಜನರು ಮೃತಪಟ್ಟಿದ್ದರು. ಇದೀಗ ಮೃತಪಟ್ಟ 30 ಮಂದಿಯ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಿಸಿರುವುದಕ್ಕೆ ರಾಜ್ಯದ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

    “ಕರ್ನಾಟಕ ಸರ್ಕಾರ ಮಂಡ್ಯ ಕನಗನಮರಡಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ 5 ಲಕ್ಷ ರೂ. ಪರಿಹಾರ ನೀಡಿತ್ತು. ಈಗ ಭಾರತ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ನೀಡಿದೆ. ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು” ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

    ಸುಮಲತಾ ಅವರು, “ಮೃತ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ. ಅಂದಿನ ದುರ್ಘಟನೆ ಎಲ್ಲರಿಗೂ ನೋವುಂಟು ಮಾಡಿತ್ತು. ಒಟ್ಟಿನಲ್ಲಿ ಮಂಡ್ಯ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಕ್ಕಾಗಿ ಮೋದಿಜೀ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

    ಕನಗನಮರಡಿ ಬಳಿ ಖಾಸಗಿ ಬಸ್ ಸುಮಾರು 15 ಅಡಿ ಆಳದ ವಿಸಿ ನಾಲೆಗೆ ಉರುಳಿದ ಪರಿಣಾಮ ಮಕ್ಕಳು ಸೇರಿದಂತೆ 30 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಆಗ ಕರ್ನಾಟಕ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಈಗ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಇದೀಗ ಸಂತ್ರಸ್ತೆ ಕುಟುಂಬದವರಿಗೆ ಒಟ್ಟು 7 ಲಕ್ಷ ರೂ. ಪರಿಹಾರ ಸಿಕ್ಕಿದಂತಾಗಿದೆ.

  • ವಿದ್ಯಾರ್ಥಿನಿ ಸಾವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 1 ಲಕ್ಷ ಪರಿಹಾರ

    ವಿದ್ಯಾರ್ಥಿನಿ ಸಾವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 1 ಲಕ್ಷ ಪರಿಹಾರ

    ರಾಯಚೂರು: ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮೃತಳ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

    ಇಲಾಖೆಯಿಂದ ಮೃತಳ ಕುಟುಂಬಕ್ಕೆ ಸಿಗಬಹುದಾದ ಸ್ಥೈರ್ಯ ನಿಧಿ ಯೋಜನೆಯ ಸೌಲಭ್ಯ ನೀಡಲು ಪೋಷಕರಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ ಹಾಗೂ ಅವರ ಸಿಬ್ಬಂದಿ ದಾಖಲೆ ಸಂಗ್ರಹಿದ್ದಾರೆ. ಮರಣ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ. ದಾಖಲೆ ಪರಿಶೀಲನೆ ಬಳಿಕ ಮೃತಳ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ.

    ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ರಾಯಚೂರಿನಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ನಗರದಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದೆ.

  • ಧಾರವಾಡ ದುರಂತ – ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೊಷಣೆ

    ಧಾರವಾಡ ದುರಂತ – ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೊಷಣೆ

    ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ನಗರದಲ್ಲಿ ನಡೆದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡುವುದಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ತುಷಾರ ಗಿರಿನಾಥ ಘೋಷಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಟ್ಟಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳು ಎಷ್ಟೇ ಪ್ರಭಾವಿ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಎಷ್ಟೇ ಪ್ರಭಾವ ಇದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಟ್ಟಡ ಯಾರದ್ದು ಎನ್ನುವುದು ನಮಗೆ ಗೊತ್ತಿದೆ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ನನಗೆ ಗೊತ್ತು ಎಂದು ಎಂದು ತಿಳಿಸಿದರು.

    ಪರಿಹಾರದ ಮೊತ್ತವನ್ನು ಹೊರತು ಪಡಿಸಿ, ರಕ್ಷಣಾ ಕಾರ್ಯಾಚರಣೆಗೆ ಬಳಸಿದ ವೆಚ್ಚದ ಹಣವನ್ನು ಕಟ್ಟಡದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಪೊಲೀಸ್ ಇಲಾಖೆಯಿಂದ ಒಂದು ದೂರು, ಕಾರ್ಮಿಕ ಇಲಾಖೆಯಿಂದ ದೂರು ದಾಖಲಾಗಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಮ್ಮ ಬಳಿ ಎಲ್ಲಾ ದಾಖಲೆ ಸಂಗ್ರಹ ಇದೆ. ದಾಖಲೆಯನ್ನು ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಕ್ಕೆ ಆದೇಶ ಮಾಡಲಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಹೇಳಿದರು.

    https://www.youtube.com/watch?v=jP84MBog6ds

  • ಯೋಧ ಗುರು ಕುಟುಂಬಕ್ಕೆ 25 ಲಕ್ಷ, ಪತ್ನಿಗೆ ಸರ್ಕಾರಿ ಉದ್ಯೋಗ: ಸಿಎಂ ಎಚ್‍ಡಿಕೆ

    ಯೋಧ ಗುರು ಕುಟುಂಬಕ್ಕೆ 25 ಲಕ್ಷ, ಪತ್ನಿಗೆ ಸರ್ಕಾರಿ ಉದ್ಯೋಗ: ಸಿಎಂ ಎಚ್‍ಡಿಕೆ

    ಬೆಂಗಳೂರು: ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಅವರಿಗೆ ಸರ್ಕಾರಿ ಉದ್ಯೋಗ, ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಸಿಎಂ ಎಚ್‍ಡಿಕೆ ಘೋಷಣೆ ಮಾಡಿದ್ದಾರೆ.

    ನಗರದ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧ ಗುರು ಅವರ ಪಾರ್ಥೀವ ಶರೀರ ಬಂದಿದ್ದಾಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರು ಅವರಿಗೆ ಹೂಗುಚ್ಛವನ್ನಿಟ್ಟು ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಹುತಾತ್ಮ ಗುರು ಕುಟುಂಬಕ್ಕೆ ಪರಿಹಾರ ಧನವನ್ನು ಫೋಷಿಸಿದರು. ಹುತಾತ್ಮ ಗುರು ಕುಟುಂಬದ ಸಂಪೂರ್ಣ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

    ಹುತಾತ್ಮ ಗುರು ಅವರ ಪಾರ್ಥೀವ ಶರೀರ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಸಿಎಂ ಕುಮಾರಸ್ವಾಮಿ, ಎಂ.ಬಿ ಪಾಟೀಲ್, ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಹುತಾತ್ಮ ಗುರು ಅವರಿಗೆ ಹೂಮಾಲೆ ಅರ್ಪಿಸುವ ಮೂಲಕ ಅಂತಿಮ ನಮನ ಸಲ್ಲಿಸಿದರು.

    ಸರ್ಕಾರ ಗುರು ಶವವವನ್ನು ಸಾಗಿಸಲು ಸೇನಾ ಹೆಲಿಕಾಪ್ಟರ್ ಕೇಳಿತ್ತು. ಆದರೆ ಕೊನೆ ಕ್ಷಣದಲ್ಲಿ ಸರ್ಕಾರದಿಂದ ಈ ಮನವಿ ಬಂದಿದ್ದರಿಂದ ಹೆಲಿಕಾಪ್ಟರ್ ನೀಡಲು ಸಾಧ್ಯವಿಲ್ಲ ಎಂದು ಸೇನೆ ತಿಳಿಸಿತ್ತು. ಹೀಗಾಗಿ ಗುರು ಪಾರ್ಥೀವ ಶರೀರ ಸೇನಾ ವಾಹನದಲ್ಲಿ ರಸ್ತೆ ಮೂಲಕ ಸಾಗುತ್ತಿದ್ದು, ಜನರು ರಸ್ತೆ ಇಕ್ಕೆಲದಲ್ಲಿ ನಿಲ್ಲುವ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ.

    ಇದಕ್ಕೂ ಮೊದಲು ಮಾತನಾಡಿದ ಸಿಎಂ, ಹುತಾತ್ಮ ಯೋಧನ ಶರೀರ ಬರುವುದು ತಡವಾಗಿದೆ. ಆದಷ್ಟು ಬೇಗ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ತೆರಳುವ ವ್ಯವಸ್ಥೆ ಮಾಡಿ ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯೋಧ ಗುರು ಅವರ ಮುಖ ದರ್ಶನ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆದಷ್ಟು ಬೇಗ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. ಈಗಾಗಲೇ ಸರ್ಕಾರ, ಜಿಲ್ಲಾಡಳಿತ ಅಂತ್ಯ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ನಾನು ಸಂಜೆ ಸುಮಾರು 4.30ಕ್ಕೆ ಅಂತ್ಯ ಸಂಸ್ಕಾರಕ್ಕೆ ಹೋಗುತ್ತೇನೆ ಎಂದು ಸಿಎಂ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಇಲ್ಲಿಂದ ಹೊರ ಹೋಗಿ, ಇಲ್ಲದಿದ್ದರೆ ಐ ವಿಲ್ ಕಿಕ್ ಔಟ್- ರೈತರಿಗೆ ಏಕವಚನದಲ್ಲಿ ಲೆಕ್ಕಾಧಿಕಾರಿ ನಿಂದನೆ

    ಇಲ್ಲಿಂದ ಹೊರ ಹೋಗಿ, ಇಲ್ಲದಿದ್ದರೆ ಐ ವಿಲ್ ಕಿಕ್ ಔಟ್- ರೈತರಿಗೆ ಏಕವಚನದಲ್ಲಿ ಲೆಕ್ಕಾಧಿಕಾರಿ ನಿಂದನೆ

    ಹಾಸನ: ರೈತರು ಹಾಗೂ ಮುಖಂಡರು ಬೆಳೆ ಪರಿಹಾರದ ಬಗ್ಗೆ ಮಾಹಿತಿ ಕೇಳಲು ಹೋದಾಗ ಗ್ರಾಮ ಲೆಕ್ಕಾಧಿಕಾರಿ ಏಕವಚನದಲ್ಲಿ ನಿಂದಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

    ಅಗ್ಗುಂದ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ರೈತರು ಹಾಗೂ ಮುಖಂಡರಿಗೆ ದರ್ಪ ತೋರಿ ಆವಾಜ್ ಹಾಕಿರುವ ವಿಡಿಯೋ ವೈರಲ್ ಆಗಿದೆ. ಹೇ ನಿಮ್ಮೂರಿನ ಗ್ರಾಮ ಸಹಾಯಕನಿಗೆ ಹೇಳೋದಕ್ಕೆ ಯೋಗ್ಯತೆಯಿಲ್ಲ, ಇಲ್ಲಿ ನಮ್ಗೆ ಬಂದು ಪಾಠ ಕಲಿಸೋದಕ್ಕೆ ಬಂದಿದ್ದೀರಾ. ಇದು ನನ್ನ ಆಫೀಸ್, ಇಲ್ಲಿಂದ ಹೊರ ಹೋಗಿ. ಇಲ್ಲದಿದ್ದರೆ ಐ ವಿಲ್ ಕಿಕ್ ಔಟ್ ಎಂದು ರೈತರಿಗೆ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ರೈತರಿಗೆ ನಿಂದಿಸಿದ್ದಲ್ಲದೇ ದರ್ಪ ತೋರಿದ್ದಾರೆ.

    ವಿಎ ಜಗದೀಶ್ ಮಾಜಿ ಸೈನಿಕನೂ ಆಗಿದ್ದು, ಸಾರ್ವಜನಿಕರೊಂದಿಗೆ ಈ ನಡವಳಿಕೆ ಸರಿಯೇ ಎಂಬ ಪ್ರಶ್ನೆ ಕೇಳಿಬರುತ್ತಿದೆ. ರೈತರ ಸಮಸ್ಯೆಗೆ ಸ್ಪಂದಿಸಬೇಕಾದವರೇ ಹೀಗಾದರೆ ಹೇಗೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂಡ್ಯ ಅಪಘಾತ ಪ್ರಕರಣ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    ಮಂಡ್ಯ ಅಪಘಾತ ಪ್ರಕರಣ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    ಮಂಡ್ಯ: ಪಾದಾಚಾರಿಗಳ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ 4 ಮಂದಿ ಸಾವನ್ನಪ್ಪಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

    ಮಂಡ್ಯ ನಗರದ ಗುತ್ತಲು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ಪಾದಾಚಾರಿಗಳ ಮೇಲೆ ಹರಿದಿದ್ದು, ಏಳು ಮಂದಿ ಸಾವನ್ನಪ್ಪಿದ್ದರು. ಕಾಂಗ್ರೆಸ್ ಮುಖಂಡ, ಅಂಬರೀಶ್ ಅಭಿಮಾನಿ ರಫಿಕ್ (59), ಗಿರಿಜಮ್ಮ (45), ಶಶಾಂಕ್(18) ರಾಹುಲ್(18) ಸಾವನ್ನಪ್ಪಿದ್ದು, ನಟರಾಜ್, ಕೋಕಿಲ, ಪ್ರಸನ್ನ, ರಿಜ್ವಾನ್, ಸಯ್ಯದ್ ನ್ಯಾಮಕ್, ಜಮೀಲ್ ಖಾನ್, ವಿನಯ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಅಪಘಾತದಲ್ಲಿ ಗಾಯಗೊಂಡವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಮಾಹಿತಿ ಪಡೆದು ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಪುಟ್ಟರಾಜು ಅವರು ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು. ಬಳಿಕ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಇದಕ್ಕೂ ಮುನ್ನ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಭೇಟಿ ನೀಡಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ಲಾರಿ ಹರಿದು ಐವರು ಪಾದಚಾರಿಗಳ ದಾರುಣ ಸಾವು

    ಆಂಧ್ರ ನೊಂದಣಿಯ ಎಡಿ -0577 ನಂಬರ್‍ನ ಲಾರಿ ಚಾಲಕ ಡ್ರೈವರ್ ನದೀಮ್(24)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಪರಿಹಾರ ಘೋಷಣೆ ಮಾಡಲಾಗಿದೆ. ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಾಗಿದ್ದು, ತನಿಖೆ ನಂತರ ಪೂರ್ಣ ವಿವರ ತಿಳಿಯಲಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ ಎಂದು ಸಚಿವ ಪುಟ್ಟರಾಜು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪಘಾತ ಪರಿಹಾರ ಹಣ ನೀಡದ ಸಾರಿಗೆ ಸಂಸ್ಥೆಯ ಬಸ್ ಜಪ್ತಿ!

    ಅಪಘಾತ ಪರಿಹಾರ ಹಣ ನೀಡದ ಸಾರಿಗೆ ಸಂಸ್ಥೆಯ ಬಸ್ ಜಪ್ತಿ!

    ಚಿಕ್ಕೋಡಿ: ಅಪಘಾತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪರಿಹಾರದ ಹಣವನ್ನು ನೀಡದ ಕಾರಣ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್‍ವೊಂದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

    ಅಪಘಾತದಿಂದಾಗಿ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಹಣವನ್ನು ನೀಡದ ಕಾರಣ, ಹುಕ್ಕೇರಿ ಜೆಎಂಎಫ್‍ಸಿ ನ್ಯಾಯಾಲಯ ಬಸ್ ಜಪ್ತಿ ಮಾಡುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಗೆ ಸೇರಿದ್ದ ಬಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

    ಏನಿದು ಪ್ರಕರಣ?
    2003ರಲ್ಲಿ ಸವದತ್ತಿ ತಾಲೂಕಿನ ಹಲ್ಕಿ ಕ್ರಾಸ್ ಬಳಿ, ನಿಂತಿದ್ದ ಕ್ರೂಸರ್ ವಾಹನಕ್ಕೆ ವಾಯುವ್ಯ ಸಾರಿಗೆಯ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ವಿಜಯ್ ಉಮಾರಾಣಿ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಸಾರಿಗೆ ಸಂಸ್ಥೆಯ ವಿರುದ್ಧ ಮೃತ ಕುಟುಂಬದ ಸದಸ್ಯರು ದೂರು ನೀಡಿದ್ದರು. ದೂರು ನೀಡಿದ್ದರೂ ಸಹ ಪರಿಹಾರವನ್ನು ಮೃತ ಕುಟುಂಬಕ್ಕೆ ಸಾರಿಗೆ ಸಂಸ್ಥೆ ನೀಡಿರಲಿಲ್ಲ.

    ಪರಿಹಾರ ಮೊತ್ತ ನೀಡದ ಹಿನ್ನೆಲೆಯಲ್ಲಿ ಮೃತ ವಿಜಯ್ ಉಮಾರಾಣಿ ಪೋಷಕರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹುಕ್ಕೇರಿಯ ಜೆಎಂಎಫ್‍ಸಿ ನ್ಯಾಯಾಲಯ ಪರಿಹಾರ ಮೊತ್ತ ನೀಡಿದ ವಾಯುವ್ಯ ಸಾರಿಗೆ ಸಂಸ್ಥೆ ವಿರುದ್ಧ ಬಸ್ ಜಪ್ತಿ ಮಾಡುವಂತೆ ಆದೇಶ ನೀಡಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಅನ್ನು ಜಪ್ತಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮರ್ಯಾದಾ ಹತ್ಯೆ- ಗರ್ಭಿಣಿ ಅಮೃತಾಗೆ ಸರ್ಕಾರಿ ಉದ್ಯೋಗ, ಮನೆ, 8.25 ಲಕ್ಷ ರೂ. ಪರಿಹಾರ

    ಮರ್ಯಾದಾ ಹತ್ಯೆ- ಗರ್ಭಿಣಿ ಅಮೃತಾಗೆ ಸರ್ಕಾರಿ ಉದ್ಯೋಗ, ಮನೆ, 8.25 ಲಕ್ಷ ರೂ. ಪರಿಹಾರ

    ಹೈದರಾಬಾದ್: ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಕುಟುಂಬದವರಿಗೆ ರಾಜ್ಯ ಸರ್ಕಾರವೂ ಪರಿಹಾರ ಧನವನ್ನು ಫೋಷಿಸಿತ್ತು. ಈಗ ಮೃತ ಪ್ರಣಯ್ ಪತ್ನಿ ಅಮೃತಾಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಭರವಸೆಯನ್ನು ಕೂಡ ನೀಡಿದೆ.

    ಗುರುವಾರ ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿದ್ದು, ಸಂತಾಪ ವ್ಯಕ್ತಪಡಿಸಿದ್ದರು. ಇವರ ಜೊತೆಗೆ ತುಂಗತುರ್ತಿ ಶಾಸಕ ಗದರಿ ಕಿಶೋರ್ ಮತ್ತು ರಾಜ್ಯಸಭೆ ಸದಸ್ಯ ಬಾದುಗುಲಾ ಲಿಂಗಯ್ಯ ಯಾದವ್, ಪೊಲೀಸ್ ಅಧೀಕ್ಷಕ ಎ.ವಿ ರಂಗನಾಥ್ ಮತ್ತು ಜಿಲ್ಲಾಧಿಕಾರಿ ಗೌರವ್ ಉಪ್ಪಲ್ ಅವರು ಭೇಟಿಯಾಗಿದ್ದಾರೆ. ಇದನ್ನೂ ಓದಿ: ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ, ಇಂತಹ ಘಟನೆಗಳು ಪ್ರಸ್ತುತ ದಿನಗಳಲ್ಲಿ ಇನ್ನೂ ನಡೆಯುತ್ತಿವೆ ಎಂದು ನಾಚಿಕೆ ಆಗುತ್ತದೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

    ಮೃತ ಪ್ರಣಯ್ ಪತ್ನಿ ಅಮೃತ ವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ಅವರ ಕುಟುಂಬಕ್ಕೆ ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ಪ್ರಣಯ್ ಮತ್ತು ಅಮೃತ ಇಬ್ಬರು ಪ್ರೀತಿಸಿದ್ದು, ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರು ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ ಸೆಪ್ಟಂಬರ್ 15 ಶನಿವಾರ ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದನು ಎಂದು ತನಿಖೆ ವೇಳೆ ತಿಳಿದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv