Tag: compound collapse

  • ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

    ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ (Woman) ಸಾವನ್ನಪ್ಪಿದ ಘಟನೆ ಮಹದೇವಪುರದ (Mahadevapura) ಚನ್ನಸಂದ್ರದಲ್ಲಿ ನಡೆದಿದೆ.

    ಶಶಿಕಲಾ (35) ಮೃತ ಮಹಿಳೆ. ಇಂದು ಬೆಳಗ್ಗೆ ವೈಟ್ ಫೀಲ್ಡ್‌ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಘಟನೆಯ ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

    ಸದ್ಯ ವೈಟ್‌ಫೀಲ್ಡ್ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಯಾದಗಿರಿಯ ಶಹಾಪುರ ಮೂಲದ ಶಶಿಕಲಾ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು, ಡಿಸಿಪಿ ಶಶಿಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Ramanagara | 2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ KSRTC ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

  • ಮನೆಗೆ ಮಳೆ ನೀರು ನುಗ್ಗಿತೆಂದು UPS ಆಫ್ ಮಾಡಲು ಹೋಗಿ ಮಹಿಳೆ ಸಾವು

    ಮನೆಗೆ ಮಳೆ ನೀರು ನುಗ್ಗಿತೆಂದು UPS ಆಫ್ ಮಾಡಲು ಹೋಗಿ ಮಹಿಳೆ ಸಾವು

    ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರೀ ಮಳೆ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ವಿದ್ಯುತ್ ಶಾಕ್‍ನಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆಯೂ ನಡೆದಿದೆ.

    ಕೆ.ಆರ್.ಪುರ ಆರ್.ಎಂ.ಎಸ್ ಬಡಾವಣೆಯ ಮನೆಯೊಂದಕ್ಕೆ ನೀರು ನುಗ್ಗಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಮೀನಮ್ಮ ಎಂದು ಗುರುತಿಸಲಾಗಿದೆ. ಮನೆಗೆ ನೀರು ನುಗ್ಗಿದ ಸಂದರ್ಭದಲ್ಲಿ ಯುಪಿಎಸ್ ಸ್ವಿಚ್ ಆಫ್ ಮಾಡಲು ಹೋದಾಗ ಘಟನೆ ನಡೆದಿದೆ. ವಿಷಯ ತಿಳಿದ ಸ್ಥಳೀಯ ಶಾಸಕ ಬಿ.ಎ.ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

    ಕೊಚ್ಚಿ ಹೋದ ಅಂಗಡಿಗಳು: ಭಾರೀ ಮಳೆಯಿಂದ ನೆಲಮಂಗಲ ತಾಲೂಕಿನ ಅಮಾನಿಕೆರೆ, ಬಿನ್ನಮಂಗಲ, ದಾಸನಪುರ ಕರೆಗೆಗಳು ಭರ್ತಿಯಾಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ. ರಸ್ತೆಯ ಮೇಲೆ ಸುಮಾರು ಮೂರು ಅಡಿ ನೀರು ನಿಂತಿದ್ದು, ನೀರಿನ ರಭಸಕ್ಕೆ ಹಲವು ಅಂಗಡಿಗಳು ಕೊಚ್ಚಿ ಹೋಗಿವೆ. ರಸ್ತೆ ದಾಟಲಾಗದೆ ವಾಹನ ಸವಾರರು ಪರದಾಟ ಅನುಭವಿಸುತ್ತಿದ್ದಾರೆ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‍ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸ್ಥಳೀಯ ಜನರು ತೆರವು ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ.

    ಗೋಡೆ ಕುಸಿತ: ಮಳೆಯ ಅರ್ಭಟಕ್ಕೆ ನೆಲಮಂಗಲ ಸಮೀಪದ ಹಿಮಾಲಯ ಡ್ರಗ್ ಕಂಪನಿಯ ಒಳ ಕಾಂಪೌಂಡ್ ಕುಸಿತವಾಗಿದೆ. ಬಿನ್ನಮಂಗಲ ಕೆರೆ ಕೋಡಿ ಒಡೆದ ಪರಿಣಾಮ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಿಂದ ಕಂಪನಿಯ ಒಳಗೆ ನೀರು ಹರಿದುಬಂದಿದೆ. ಕಂಪನಿಯ ಕೆಲವು ಸ್ಥಳಗಳು ಜಲಾವೃತಗೊಂಡಿದೆ.