Tag: Compulsory

  • ಆದಾಯ ತೆರಿಗೆ ಪಾವತಿಗೆ ಆಧಾರ್ ಕಡ್ಡಾಯ

    ಆದಾಯ ತೆರಿಗೆ ಪಾವತಿಗೆ ಆಧಾರ್ ಕಡ್ಡಾಯ

    ನವದೆಹಲಿ: ಆದಾಯ ತೆರಿಗೆ ಪಾವತಿಸಲು ಇನ್ನು ಮುಂದೆ ಪಾನ್ ಕಾರ್ಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

    ದೆಹಲಿ ಹೈಕೋರ್ಟ್ ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಧಾರ್ ಕಡ್ಡಾಯವಲ್ಲ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಐಟಿ ರಿಟರ್ನ್ಸ್ ಪಾವತಿ ಮಾಡಲು 2018-19 ಸಾಲಿಗೆ ಆಧಾರ್ ಕಡ್ಡಾಯ ಮಾಡಿ ಆದೇಶ ನೀಡಿದೆ.

    ಈಗಾಗಲೇ ಪಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ ಮಾಡಲಾಗಿದ್ದು, ಸದ್ಯ ಎಲ್ಲಾ ಆದಾಯ ತೆರಿಗೆ ಪಾವತಿ ಮಾಡುವವರು ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

    ಸುಪ್ರೀಂ ಕೋರ್ಟ್ ಆಧಾರ್ ಕಾರ್ಡಿಗೆ ಇರುವ ಸಂವಿಧಾನಿಕ ಮಾನ್ಯತೆಯನ್ನು ಸೆಪ್ಟೆಂಬರ್ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು. ಆದರೂ ಬ್ಯಾಂಕ್ ಖಾತೆ, ಮೊಬೈಲ್ ಫೋನ್ ಮತ್ತು ಶಾಲಾ ಪ್ರವೇಶಕ್ಕೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಹೇಳಿತ್ತು. ಆದರೆ ಈಗ ನ್ಯಾಯಾಲಯ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡಲು ವೈಯಕ್ತಿಕ ಆಧಾರ್ ಸಂಖ್ಯೆಯನ್ನು ಒದಗಿಸುವುದನ್ನು ಕಡ್ಡಾಯ ಮಾಡಿದೆ.

    ಆಧಾರ್ ಕಾರ್ಡನ್ನು ಪಾನ್ ಕಾರ್ಡಿಗೆ ಲಿಂಕ್ ಮಾಡಲು 2019 ಮಾರ್ಚ್ 31 ರವರೆಗೂ ಸಮಯಾವಕಾಶವನ್ನು ನೀಡಿದೆ. 2018 ಏಪ್ರಿಲ್ 1 ರಂದು ಸರ್ಕಾರದ ನೀಡಿದ್ದ ಆದೇಶದ ಅನ್ವಯ ಐಟಿ ರಿಟರ್ನ್ಸ್ ಸಲ್ಲಿಕೆ ವಿಳಂಬವಾದರೆ ಕನಿಷ್ಠ 10 ಸಾವಿರ ರೂ. ಶುಲ್ಕವನ್ನು ವಿಧಿಸಬಹುದಾಗಿದೆ. ಅಲ್ಲದೇ ಆದಾಯ ತೆರಿಗೆ ಇಲಾಖೆ ಐಟಿ ರಿಟರ್ನ್ಸ್ ಸಲ್ಲಿಸದವರಿಗೆ ಸೆಕ್ಷನ್ 142(1) ಅನ್ವಯ ನೋಟಿಸ್ ಕಳುಹಿಸಲು ಅವಕಾಶವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಹುನ್ನಾರ? – ಕೇಂದ್ರ ಸಚಿವರ ಸ್ಪಷ್ಟನೆ

    ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಹುನ್ನಾರ? – ಕೇಂದ್ರ ಸಚಿವರ ಸ್ಪಷ್ಟನೆ

    ಸಾಂದರ್ಭಿಕ ಚಿತ್ರ

    ಬೆಂಗಳೂರು: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ನೆಲೆ ಊರಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದ್ಯಾ ಎನ್ನುವ ಎನ್ನುವ ಪ್ರಶ್ನೆ ಮೂಡಿದ್ದು, 8ನೇ ತರಗತಿಯವರೆಗೂ ಹಿಂದಿ ಕಲಿಕೆ ಕಡ್ಡಾಯ ಮಾಡಲು ಮಾನವ ಸಂಪನ್ಮೂಲ ಇಲಾಖೆ ಚಿಂತನೆ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಅಸ್ಸಾಂ, ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಕಲಿಕೆ ಕಡ್ಡಾಯ ಇರಲಿಲ್ಲ. ಆದರೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯ ನೂತನ ಶಿಕ್ಷಣ ನೀತಿ ಶಿಫಾರಸು ನೆಪದಲ್ಲಿ ಹಿಂದಿ ಹೇರಿಕೆಗೆ ಹುನ್ನಾರ ನಡೆಸಿದೆ ಎನ್ನಲಾಗಿದೆ.

    ಸಾಂದರ್ಭಿಕ ಚಿತ್ರ

    ಈ ಸುದ್ದಿ ಬಹಿರಂಗ ಆಗುತ್ತಲೇ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಕಾಯ್ದೆ ಜಾರಿಗೆ ಬರಬಾರದು ಎಂದು ಕನ್ನಡಪರ ಹೋರಾಟಗಾರರ ಆಗ್ರಹಿಸಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶದಿಂದಲೂ ಈ ಕುರಿತು ಅಸಮಾಧಾನ ವ್ಯಕ್ತವಾಗಿದೆ. ಪ್ರಮುಖವಾಗಿ ಮಹಾರಾಷ್ಟ್ರದ ಶಿವಸೇನೆ ಪಕ್ಷದ ಮುಖಂಡರು ಕೂಡ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತ ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದಂತೆ ಎಚ್ಚೆತ್ತ ಕೇಂದ್ರ ಮಾನವ ಸಂಪ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಭಾಷೆಯನ್ನು ಕಡ್ಡಾಯ ಮಾಡುವ ಆಲೋಚನೆ ಕೇಂದ್ರದ ಮುಂದಿಲ್ಲ. ನೂತನ ಶಿಕ್ಷಣ ನೀತಿ ಸಂಬಂಧ ಕಸ್ತೂರಿರಂಗನ್ ನೇತೃತ್ವದ ಸಮಿತಿ, ಹಿಂದಿ ಭಾಷೆ ಕಡ್ಡಾಯ ಸಂಬಂಧ ಯಾವುದೇ ಶಿಫಾರಸು ಮಾಡಿಲ್ಲ. ಕೆಲವೊಂದು ಮಾಧ್ಯಮಗಳು ತಪ್ಪು ಸುದ್ದಿಯನ್ನು ಪ್ರಕಟಿಸಿ ಗೊಂದಲ ಮೂಡಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv