Tag: Condition

  • ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ ಓಪನ್

    ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ ಓಪನ್

    – ಮಾರ್ಗಸೂಚಿಯಲ್ಲಿ ಏನಿದೆ..?

    ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

    ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್‍ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್‍ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.

    ಈ ಹಿಂದೆಯೇ ಜೂನ್ 8ರಿಂದ ಮಾಲ್‍ಗಳನ್ನು ಓಪನ್ ಮಾಡಲಾಗುವುದು ಎಂದು ಹೇಳಲಾಗಿತ್ತು. ಅಂತೆಯೇ ಸರ್ಕಾರ ಈ ತೀರ್ಮಾನ ಮಾಡಿದ್ದು, 65 ವರ್ಷದೊಳಗಿನ ವೃದ್ಧರು ಹಾಗೂ 10 ವರ್ಷದೊಳಗಿನ ಮಕ್ಕಳು ಮಾಲ್‍ಗಳಿಗೆ ಪ್ರವೇಶಿಸುವಂತಿಲ್ಲ. ಜೊತೆಗೆ ಪ್ರತಿಯೊಬ್ಬರೂ ಕೂಡ 6 ಅಡಿಯಷ್ಟು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಎಂಬ ಷರತ್ತು ವಿಧಿಸಿದೆ.

    ಮಾಲ್‍ಗಳಿಗೆ ಮಾರ್ಗಸೂಚಿ
    ಮಾಲ್ ಪ್ರವೇಶಿಸುವ ಅಂಗಡಿಗಳ ನೌಕರರು, ಮಾಲ್ ಕೆಲಸಗಾರರು, ಗ್ರಾಹಕರು, ಸಿಬ್ಬಂದಿಗೆ ಫೇಸ್ ಮಾಸ್ಕ್ ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ನಿಯಮ ಪಾಲಿಸಲು ಸಿಬ್ಬಂದಿ ನೇಮಿಸಬೇಕು. ವೃದ್ಧ ನೌಕಕರು, ಗರ್ಭಿಣಿ ಕೆಲಸಗಾರು ಕೆಲಸಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಜೊತೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಬೇಕು. ಪಾರ್ಕಿಂಗ್ ಮತ್ತು ಮಾಲ್ ಆವರಣದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ನಿಭಾಯಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿಲಾಗಿದೆ.

    ಪಾರ್ಕಿಂಗ್ ಸಿಬ್ಬಂದಿಗೆ ಮಾಸ್ಕ್, ಗ್ಲವ್ಸ್ ಬಳಕೆ ಕಡ್ಡಾಯವಾಗಿರಬೇಕು. ಮಾಲ್ ಒಳಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಸೀಮಿತ ಜನರ ಪ್ರವೇಶಕ್ಕೆ ಆದ್ಯತೆ ನೀಡಬಹುದು. ಎಸ್ಕಲೇಟರ್‍ನಲ್ಲಿ ಒಂದು ಮೆಟ್ಟಿಲು ನಡುವೆ ಅಂತರ ಕಾಪಾಡಿಕೊಳ್ಳಬೇಕು. ಎಸಿ ಅವಶ್ಯಕ ಇದ್ದರೆ 24-30 ಡಿಗ್ರಿ ಬಳಕೆ ಮಾಡಬಹುದು, ಇಲ್ಲದಿದ್ದರೆ ನೈಸರ್ಗಿಕ ಗಾಳಿಗೆ ಒತ್ತು ನೀಡಬೇಕು. ದೊಡ್ಡ ಪ್ರಮಾಣ ಜನ ಸೇರಿ ಪಾರ್ಟಿ ಸಭೆ ಮಾಡುವಂತಿಲ್ಲ. ಮಾಲ್‍ನಲ್ಲಿ ಬಳಕೆಯಾದ ಎಲ್ಲ ವಸ್ತುಗಳನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಲಾಗಿದೆ.

    ಶೌಚಾಲಯಗಳನ್ನು ಆಗ್ಗಾಗ್ಗೆ ಸ್ವಚ್ಛ ಮಾಡಬೇಕು. ಫುಡ್ ಕೋರ್ಟ್ ನಲ್ಲಿ ಅಂತರ ಕಾಯ್ದುಕೊಳ್ಳಬೇಕು. ಮಾಲ್‍ನಲ್ಲಿರಿವ ರೆಸ್ಟೋರೆಂಟ್ ನಲ್ಲಿ ಶೇ.50 ಸಾರ್ಮಥ್ಯಕ್ಕೆ ಅವಕಾಶ ನೀಡಬೇಕು. ಜೊತೆಗೆ ಕೂರುವಾಗ ಅಂತರವಿರಬೇಕು. ಪ್ರತಿ ಗ್ರಾಹಕರು ಬದಲಾದ ಮೇಲೆ ಟೇಬಲ್ ಸ್ಯಾನಿಟೈಜ್ ಮಾಡಬೇಕು. ಕಿಚನ್‍ನಲ್ಲೂ ಅಂತರ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಮಾಲ್‍ನಲ್ಲಿರುವ ಗೇಮಿಂಗ್ ಸೆಂಟರ್, ಮಕ್ಕಳ ಆಟದ ಪ್ರದೇಶ, ಸಿನಿಮಾ ಮಂದಿರ ಬಂದ್ ಆಗಬೇಕು. ಒಂದು ವೇಳೆ ಮಾಲ್‍ನಲ್ಲಿ ಸೋಂಕು ಪತ್ತೆಯಾದರೆ ಸೋಂಕಿತ ಓಡಾಡಿದ ಪ್ರದೇಶ ಐಸೋಲೇಟ್ ಮಾಡಬೇಕು. ಜೊತೆಗೆ ಹತ್ತಿರದ ಆರೋಗ್ಯ ಇಲಾಖೆ ಮಾಹಿತಿ ನೀಡಬೇಕು ಎಂದು ಮಾರ್ಗ ಸೂಚಿಯಲ್ಲಿ ವಿವರಿಸಲಾಗಿದೆ.

  • 14 ದಿನದ ಷರತ್ತಿಗೆ ಒಪ್ಪುವುದಾದ್ರೆ ಉಡುಪಿಗೆ ಸ್ವಾಗತ: ಜಿಲ್ಲಾಧಿಕಾರಿ ಜಿ. ಜಗದೀಶ್

    14 ದಿನದ ಷರತ್ತಿಗೆ ಒಪ್ಪುವುದಾದ್ರೆ ಉಡುಪಿಗೆ ಸ್ವಾಗತ: ಜಿಲ್ಲಾಧಿಕಾರಿ ಜಿ. ಜಗದೀಶ್

    ಉಡುಪಿ: ಹೊರ ದೇಶ ಮತ್ತು ಹೊರ ರಾಜ್ಯದಿಂದ ಬರುವವರು ಸರ್ಕಾರಿ ಕ್ವಾರಂಟೈನ್ ಒಪ್ಪುವುದಾದರೆ ಉಡುಪಿ ಜಿಲ್ಲೆಗೆ ನಿಮಗೆ ಸ್ವಾಗತ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.

    ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೊರ ದೇಶ ಮತ್ತು ಹೊರ ರಾಜ್ಯದಿಂದ ಉಡುಪಿ ಜಿಲ್ಲೆಗೆ ಬರುವವರು ಸೇವಾ ಸಿಂಧು ಆ್ಯಪ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಿ. ನಿಮ್ಮ ಮೊಬೈಲ್‍ಗೆ ಈ ಪಾಸ್ ಬರುತ್ತದೆ. ತಪಾಸಣೆ ಮಾಡಿ ಉಡುಪಿ ಜಿಲ್ಲಾ ಪ್ರವೇಶ ಮಾಡಬಹುದು ಎಂದು ಡಿಸಿ ಜಗದೀಶ್ ಮಾಹಿತಿ ನೀಡಿದರು.

    ಉಡುಪಿ ಜಿಲ್ಲೆಯಲ್ಲಿ ಕಳೆದ ನಲವತ್ತು ದಿನಗಳಿಂದ ಯಾವುದೇ ಪಾಸಿಟಿವ್ ಕೇಸುಗಳು ಇಲ್ಲ. ಹಾಗಾಗಿ ಕೇಂದ್ರ ಸರ್ಕಾರ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಎಂದು ಘೋಷಣೆ ಮಾಡಿದೆ. ಜಿಲ್ಲೆಯನ್ನು ಗ್ರೀನ್ ಝೋನ್ ವ್ಯಾಪ್ತಿಯಲ್ಲಿ ಮುಂದುವರಿಸಲು ಹೊರ ರಾಜ್ಯ ಮತ್ತು ಹೊರ ದೇಶದಿಂದ ಬರುವವರು ಸಹಕರಿಸಿ ಎಂದು ವಿನಂತಿ ಮಾಡಿದ್ದಾರೆ. ಈ ಪಾಸ್ ತೆಗೆದುಕೊಂಡು ಬಂದವರನ್ನು ಹದಿನಾಲ್ಕು ದಿನ ಕಡ್ಡಾಯವಾಗಿ ಸರ್ಕಾರ ಕ್ವಾರಂಟೈನ್ ಮಾಡುತ್ತೇವೆ. ಈಗಾಗಲೇ ಹಾಸ್ಟೆಲ್ ಗಳನ್ನು ನಿಗದಿ ಮಾಡಿದ್ದೇವೆ. ಉಪಹಾರ ಮತ್ತು ಊಟವನ್ನು ಉಚಿತವಾಗಿ ಕೊಡುತ್ತೇವೆ. ಕ್ವಾರಂಟೈನ್ ಅವಧಿ ಮುಗಿಸಿ ಅವರು ಸೇಫ್ ಆಗಿ ಮನೆಗೆ ಹೋಗಬಹುದು ಎಂದು ಡಿಸಿ ಹೇಳಿದರು.

    ಸರ್ಕಾರಿ ವ್ಯವಸ್ಥೆಯಲ್ಲಿ ಉಳಿದುಕೊಳ್ಳುವ ಇಚ್ಛೆ ಇಲ್ಲದಿದ್ದರೆ ಹೋಟೆಲ್ ಅಥವಾ ಲಾಡ್ಜಿಂಗ್ ಅರೇಂಜ್ಮೆಂಟ್ ಮಾಡುತ್ತೇವೆ. ಅಲ್ಲಿನ ಸಂಪೂರ್ಣ ವೆಚ್ಚವನ್ನು ಅವರೇ ಭರಿಸತಕ್ಕದ್ದು ಎಂದು ಅವರು ತಿಳಿಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು, ವೈದ್ಯರ ತಂಡ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿರುವುದಾಗಿ ಅವರು ಹೇಳಿದರು.

  • ಷರತ್ತು ವಿಧಿಸಿ ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ ಅನುಮತಿ

    ಷರತ್ತು ವಿಧಿಸಿ ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ ಅನುಮತಿ

    ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತು ವಿಧಿಸಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

    ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಪ್ರಕಟಿಸಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಮಾತ್ರ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

    ಕಳೆದ ತಿಂಗಳು ಸುರಿದ ಮಹಾಮಳೆಯಿಂದಾಗಿ ಗುಡ್ಡ ಕುಸಿದು, ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿತ್ತು. ಹೀಗಾಗಿ ಆಗಸ್ಟ್ 9 ರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಬಂದ್ ಆಗಿದ್ದರಿಂದ ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತವಾಗಿತ್ತು.

    ಬಿರುಗಾಳಿ ಸಹಿತ ಭಾರೀ ಮಳಯಾದ ಪರಿಣಾಮ ಹಾಳಾದ ರಸ್ತೆಯನ್ನು ಶಾಶ್ವತವಾಗಿ ದುರಸ್ತಿ ಮಾಡಲು ಸುಮಾರು 300 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.

    ಷರತ್ತು ಏನು?
    ಘಾಟಿಯಲ್ಲಿ ಪ್ರತಿ ಗಂಟೆಗೆ 20 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವುದು, ಭೂ ಕುಸಿತದಿಂದ ರಸ್ತೆಗೆ ಸಮಸ್ಯೆ ಆಗಿರುವುದರಿಂದ ಜಾಗರೂಕತೆಯಿಂದ ಚಾಲನೆ ಮಾಡುವುದು, ಫೋಟೋಗ್ರಫಿ, ಸೆಲ್ಫಿ ತೆಗೆಯುವುದಕ್ಕೆ ನಿಷೇಧ ವಿಧಿಸಲಾಗಿದೆ.

    ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್‍ಸಿವಿ(ಮಿನಿ ವ್ಯಾನ್), ಅಂಬುಲೆನ್ಸ್, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬುಲೆಟ್ ಟಾಂಕರ್ಸ್, ಷಿಪ್ ಕಾರ್ಗೋ ಕಾಂಟೈನರ್, ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಸಾರ್ವಜನಿಕರು ಸಂಚರಿಸುವ ಎಲ್ಲ ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವನ್ನು ನಿಷೇಧಿಸಲಾಗಿದೆ.

  • ಷರತ್ತು ಒಡ್ಡಿ ಬಿಎಸ್‍ವೈ ಪ್ರಮಾಣ ವಚನಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

    ಷರತ್ತು ಒಡ್ಡಿ ಬಿಎಸ್‍ವೈ ಪ್ರಮಾಣ ವಚನಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

    ಬೆಂಗಳೂರು: ಬಿ.ಎಸ್.ಯಡಿಯೂರಪ್ಪಗೆ ಸರ್ಕಾರ ರಚನೆಗೆ ಹೈಕಮಾಂಡ್ ದಿಢೀರ್ ಅನುಮತಿ ನೀಡಿದೆ. ಗುರುವಾರದವರೆಗೆ ಸ್ಪೀಕರ್ ನಡೆಯನ್ನು ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದ ಬಿಜೆಪಿ ಹೈಕಮಾಂಡ್ ಈಗ ಕೆಲ ಷರತ್ತುಗಳನ್ನು ಒಡ್ಡಿ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡಿದೆ.

    ಹೌದು. ರಾಜ್ಯ ಪರವಾಗಿ ಜಗದೀಶ್ ಶೆಟ್ಟರ್, ಮಾಧುಸ್ವಾಮಿ, ವಿಜಯೇಂದ್ರ ಅವರು ದೆಹಲಿಗೆ ತೆರಳಿ ಅಮಿತ್ ಶಾ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಅತೃಪ್ತರ ಬಗ್ಗೆ ಹಲವು ಚರ್ಚೆ ನಡೆದು ಕೊನೆಗೆ ಇಂದು ಬೆಳಗ್ಗೆ ಸರ್ಕಾರ ನಡೆಸಲು ಶಾ ಅನುಮತಿ ನೀಡಿದ್ದಾರೆ.

    ಷರತ್ತು ಏನು?
    ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಜವಾಬ್ದಾರಿ ಸಂಪೂರ್ಣವಾಗಿ ನೀವೇ ನಿಭಾಯಿಸಬೇಕು. ಈಗ ಮೂವರು ಶಾಸಕರನ್ನು ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಸದನದ ಬಲ 221 ಕ್ಕೆ ಕುಸಿದಿದೆ. ಇದರಿಂದ ಬಹುಮತಕ್ಕೆ 112 ಸಂಖ್ಯೆ ಬೇಕಾಗುತ್ತದೆ. ಆದರೆ ಬಿಜೆಪಿ ಬಳಿ ಒಬ್ಬ ಪಕ್ಷೇತರ ಶಾಸಕ ಸೇರಿ ಒಟ್ಟು 106 ಇದೆ. ಇನ್ನುಳಿದ ಸಂಖ್ಯೆಯನ್ನು ನೀವೇ ನಿಭಾಯಿಸಬೇಕು ಎಂದು ಮೊದಲ ಷರತ್ತು ವಿಧಿಸಿದೆ.

    ಅತೃಪ್ತ ಶಾಸಕರು ತಮ್ಮ ನಿಲುವನ್ನು ಬದಲಿಸದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀವೇ ಹೊರಬೇಕು. 2018ರಲ್ಲಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಹುಮತ ಸಾಬೀತು ಪಡಿಸಲು ವಿಫಲರಾಗಿದ್ದೇವೆ. ಹೀಗಾಗಿ ಈ ಬಾರಿ ಯಾವುದೇ ಎಡವಟ್ಟು ಆಗದಂತೆ ನೋಡಿಕೊಳ್ಳಬೇಕು. ಮುಂದೆ ಏನಾದರೂ ಎಡವಟ್ಟುಗಳಾದರೆ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಡ್ಯಾಮೇಜ್ ಆಗಬಹುದು. ಎಲ್ಲಾ ಜವಾಬ್ದಾರಿ ನಿಮ್ಮದೇ ಎಂದು ಯಡಿಯೂರಪ್ಪ ಪಾಳಯಕ್ಕೆ ಹೈಕಮಾಂಡ್ ಎಚ್ಚರಿಕೆ ಕೊಟ್ಟಿದೆ.

    ಎಲ್ಲ ಷರತ್ತುಗಳನ್ನು ಒಪ್ಪಿ ಕೇಳಿದ ಪ್ರಶ್ನೆಗಳಿಗೆ ಸರಿಯಾದ ರೀತಿಯಲ್ಲಿ ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಸರ್ಕಾರ ರಚಿಸಲು ಬಿಎಸ್‍ವೈಗೆ ಅನುಮತಿ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

  • ಡಿವಿಎಸ್‍ಗೆ ಆಶೀರ್ವಾದ ಮಾಡಿ ಷರತ್ತು ವಿಧಿಸಿದ ಬಿಎಸ್‍ವೈ

    ಡಿವಿಎಸ್‍ಗೆ ಆಶೀರ್ವಾದ ಮಾಡಿ ಷರತ್ತು ವಿಧಿಸಿದ ಬಿಎಸ್‍ವೈ

    ನವದೆಹಲಿ: ಪ್ರಧಾನಿ ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗುತ್ತಿರುವ ಹಿನ್ನೆಲೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಎಸ್ ಯಡಿಯೂರಪ್ಪ ಷರತ್ತು ವಿಧಿಸಿ ಆಶೀರ್ವಾದಿಸಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಂಸದರಾದ ಸದಾನಂದ ಗೌಡ ಅವರಿಗೆ ಕರೆ ಮಾಡಿ ಸಂಜೆ 5 ಗಂಟೆಗೆ ಮಾನ್ಯ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸದಾನಂದಗೌಡರು ಆರ್ಶೀವಾದ ಪಡೆದರು.

    2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿರುವ ಮೋದಿ ಸಂಪುಟದಲ್ಲಿ ಸಚಿವರಾಗುತ್ತಿರುವುದು ಖಚಿತವಾಗುತ್ತಿದಂತೆ ಸದಾನಂದ ಗೌಡರು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಬಿಎಸ್‍ವೈರನ್ನ ಭೇಟಿ ಮಾಡಿ, ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಇತ್ತ ಬಿಎಸ್‍ವೈ, ಸದಾನಂದಗೌಡರಿಗೆ ಸಿಹಿ ತಿನಿಸಿ ಶುಭಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್‍ವೈ, ಸದಾನಂದಗೌಡರೇ ನಿಮಗೆ ಸಿಹಿ ತಿನಿಸುವ ಮೊದಲು ಒಂದು ಷರತ್ತು ಇದೆ. ನೀವು ದೆಹಲಿಯಲ್ಲಿ ದಿವಂಗತ ಅನಂತಕುಮಾರ್ ಅವರ ಸ್ಥಾನವನ್ನು ತುಂಬಬೇಕು. ಅನಂತಕುಮಾರ್ ಅವರ ರೀತಿಯಲ್ಲೇ ಕೆಲಸ ಮಾಡಬೇಕು. ರಾಜ್ಯದ ಜನರಿಗೆ ದೆಹಲಿಯಲ್ಲಿ ಸ್ಪಂದಿಸಬೇಕು ಎಂದು ಷರತ್ತುಗಳನ್ನು ವಿಧಿಸಿದರು. ಬಿಎಸ್‍ವೈರ ಷರತ್ತುಗಳಿಗೆ ಒಪ್ಪಿಕೊಂಡ ಸದಾನಂದ ಗೌಡರು ಬಳಿಕ ಸಿಹಿ ತಿನ್ನಿಸಿದರು.

  • ‘ರಾಬರ್ಟ್’ ಸಿನಿಮಾ ಸೆಟ್‍ನಲ್ಲಿ ಷರತ್ತುಗಳು ಅನ್ವಯ!

    ‘ರಾಬರ್ಟ್’ ಸಿನಿಮಾ ಸೆಟ್‍ನಲ್ಲಿ ಷರತ್ತುಗಳು ಅನ್ವಯ!

    ಬೆಂಗಳೂರು: ನಟ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಈ ಸಿನಿಮಾವನ್ನು ‘ಚೌಕ’ ಸಿನಿಮಾ ಖ್ಯಾತಿಯ ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದು, ಶೂಟಿಂಗ್ ಸೆಟ್ ನಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.

    ಸಿನಿಮಾ ಸೆಟ್‍ನಲ್ಲಿ ಮೊಬೈಲ್ ಬಳಸಬಾರದು ಎಂಬ ಷರತ್ತು ಹಾಕಿದ್ದಾರೆ. ಚಿತ್ರೀಕರಣದಿಂದ ಸುಮಾರು 50 ಮೀಟರ್ ನಷ್ಟು ದೂರದವರೆಗೂ ಮೊಬೈಲ್ ಬಳಸಬಾರದು. ಈ ನಿಯಮವು ಕಲಾವಿದರು ಮತ್ತು ತಂತ್ರಜ್ಞರಿಗೆ ಇಬ್ಬರಿಗೂ ಅನ್ವಯಿಸುತ್ತದೆ ಎಂದು ನಿರ್ದೇಶಕರು ಕಟ್ಟುನಿಟ್ಟಿನ ಆದೇಶವನ್ನು ಜಾರಿ ಮಾಡಿದ್ದಾರೆ.

    ಸೆಟ್‍ನಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿದರೆ ಕಲಾವಿದರು, ತಂತ್ರಜ್ಞರು ಎಲ್ಲರು ಸಿನಿಮಾ ಕಡೆ ಗಮನಹರಿಸುತ್ತಾರೆ. ಜೊತೆ ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ನಿರ್ದೇಶಕರ ಆಶಯವಾಗಿದೆ. ಇನ್ನೊಂದು ಅನಗತ್ಯ ಫೋಟೋಗಳು ಅಥವಾ ವಿಡಿಯೋಗಳನ್ನು ಸೆರೆಹಿಡಿಯಬಾರದು. ಜೊತೆಗೆ ಅದನ್ನು ಪಬ್ಲಿಕ್ ಮಾಡಬಾರದು. ಈ ಮೂಲಕ ನಮ್ಮ ಶೂಟಿಂಗ್ ಸೆಟ್ ಅನ್ನು ವೃತ್ತಿಪರವಾದ ಸೆಟ್ ಆಗಿ ಮಾಡುವ ಉದ್ದೇಶದಿಂದ ಈ ಷರತ್ತು ವಿಧಿಸಲಾಗಿದೆ ಎಂದು ಹೇಳಿದ್ದಾರೆ.

    ಶೂಟಿಂಗ್ ಸೆಟ್‍ಗೆ ಅಭಿಮಾನಿಗಳು ಬರಬಹುದು. ತಮ್ಮ ನೆಚ್ಚಿನ ನಟನನ್ನು ಭೇಟಿಯಾಗಬಹುದು ಮತ್ತು ಚಿತ್ರೀಕರಣವನ್ನು ವೀಕ್ಷಿಸಬಹುದು. ಆದರೆ ಯಾವುದೇ ರೀತಿಯ ಫೋಟೋಗಳನ್ನು ತೆಗೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಸುಧೀರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ತಯಾರಕರು ಈ ನಿಯಯದ ಒಪ್ಪಂದಕ್ಕೆ ತಂತ್ರಜ್ಞರೊಂದಿಗೆ ಸಹಿ ಮಾಡಿಸಿಕೊಂಡಿದ್ದಾರೆ. ಜೊತೆಗೆ ಚಿತ್ರೀಕರಣದ ಸಮಯದಲ್ಲಿ ಯಾವುದೇ ರೀತಿಯ ವಿಷಯವನ್ನು ಲೀಕ್ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

  • ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

    ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

    ಪಾಟ್ನಾ: ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುಂಚೆ ವಧು ಷರತ್ತು ಹಾಕುವುದು ಸಾಮಾನ್ಯವಾಗಿದೆ. ಅದೇ ರೀತಿ ವಧುವೊಬ್ಬಳು ತಾನು ಮದುವೆಯಾಗುವ ವರನಿಗೆ ಎರಡು ಷರತ್ತುಗಳನ್ನು ವಿಧಿಸಿ ಸುದ್ದಿಯಾಗಿದ್ದಾಳೆ.

    ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ನವೆಂಬರ್ 19 ರಂದು ಅಂದರೆ ನಾಳೆ ವರ ಕೈಸರ್ ಹಾಗೂ ವಧು ಸೋನಿ ಜೋಡಿಯ ಮದುವೆ ನಿಶ್ಚಯವಾಗಿದೆ. ಆದರೆ ವಧು ಮದುವೆಗೂ ಮುನ್ನ ವರನಿಗೆ ಎರಡು ಷರತ್ತುಗಳನ್ನು ಹಾಕಿದ್ದಾಳೆ.

    ಮನೆಯಲ್ಲಿ ಶೌಚಾಲಯ ನಿರ್ಮಾಣವಾಗಬೇಕು. ಇದು ಆಕೆಯ ಮೊದಲನೇಯ ಷರತ್ತು. ಮದುವೆಯ ಪತ್ರಿಕೆಯಲ್ಲಿ ಕುಟುಂಬ ಯೋಜನೆ (ಫ್ಯಾಮಿಲಿ ಪ್ಲ್ಯಾನಿಂಗ್) ಬಗ್ಗೆ ಸಂದೇಶ ನೀಡಬೇಕು ಎರಡನೇ ಷರತ್ತು ಹಾಕಿದ್ದಾಳೆ. ಎರಡನೇ ಕಂಡೀಷನ್ ಕೇಳಿ ವರ ನಾಚಿಕೊಂಡು ನಕ್ಕಿದ್ದಾನೆ.

    ವಧು ಸೋನುವಿನ ಎರಡು ಷರತ್ತಿಗೂ ವರ ಒಪ್ಪಿಗೆ ಸೂಚಿಸಿದ್ದಾನೆ. ಅಷ್ಟೇ ಅಲ್ಲದೇ ವಧು ಮದುವೆ ಕಾರ್ಡ್ ನಲ್ಲಿ ಕುಟುಂಬ ಯೋಜನೆ ಸ್ಲೋಗನ್ ಜೊತೆ ಸ್ವಚ್ಛತೆ ಬಗ್ಗೆ ಜಾಗೃತಿ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಬಗ್ಗೆ ಸಂದೇಶ ಹಾಕಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.

    ವರ ಕೈಸರ್ ಭಾವಿ ಪತ್ನಿಯ ಎಲ್ಲ ಮನವಿ ಹಾಗೂ ಷರತ್ತಿಗೂ ಖುಷಿಯಾಗಿ ಒಪ್ಪಿಕೊಂಡಿದ್ದಾನೆ. ವಧು ಸೋನು ಈ ರೀತಿಯ ಜಾಗೃತಿಯ ಸಂದೇಶವನ್ನು ಸಾರಲು ಮುಂದಾಗಿದ್ದಕ್ಕೆ ವರ ಕೈಸರ್ ತುಂಬಾ ಸಂತಸವನ್ನು ವ್ಯಕ್ತಪಡಿಸಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಿರ್ಮಾಪಕರಿಗೆ ಷರತ್ತು ಹಾಕಿ ಸಿನಿಮಾ ಒಪ್ಪಿಕೊಂಡ ದಚ್ಚು

    ನಿರ್ಮಾಪಕರಿಗೆ ಷರತ್ತು ಹಾಕಿ ಸಿನಿಮಾ ಒಪ್ಪಿಕೊಂಡ ದಚ್ಚು

    ಬೆಂಗಳೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ಮಾಪಕರೊಬ್ಬರಿಗೆ ಷರತ್ತು ಹಾಕಿ ಅವರ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.

    ದರ್ಶನ್ ಮತ್ತು ಹೆಬ್ಬುಲಿ ನಿರ್ಮಾಪಕ ಉಮಾಪತಿ ಕಾಂಬಿನೇಷನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಉಮಾಪತಿ ಅವರೇ ಸ್ಪಷ್ಟಪಡಿಸಿದ್ದರು. ನಿರ್ಮಾಪಕ ಉಮಾಪತಿ ನಟ ದರ್ಶನ್ ಗೆ ಕಥೆ ಹೇಳಿದ್ದಾರೆ. ಕಥೆ ಕೇಳಿ ಒಪ್ಪಿಕೊಂಡ ದರ್ಶನ್ ನಿರ್ಮಾಪಕ ಉಮಾಪತಿ ಅವರ ಜೊತೆ ಸಿನಿಮಾ ಮಾಡಲು ಕಾಲ್ ಶೀಟ್ ಕೊಟ್ಟಿದ್ದಾರೆ. ಆದರೆ ಈ ವೇಳೆ ದರ್ಶನ್ ನಿರ್ಮಾಪಕರಿಗೆ ಒಂದು ಷರತ್ತು ಹಾಕಿದ್ದಾರೆ.

    ಉಮಾಪತಿ ಅವರ ಚಿತ್ರದಲ್ಲಿ 96% ರಷ್ಟು ಸಾಧ್ಯವಾದರೆ 100% ರಷ್ಟು ಕನ್ನಡದವರನ್ನೇ ಹಾಕಿಕೊಂಡು ಕೆಲಸ ಮಾಡಬೇಕು. ಜೊತೆಗೆ ಕಲಾವಿದರು ಮತ್ತು ತಂತ್ರಜ್ಞರು ಎಲ್ಲರೂ ಕನ್ನಡದವರಿಗೆ ಅವಕಾಶ ಕೊಡಬೇಕು ಎಂದು ದರ್ಶನ್ ನಿರ್ದೇಶಕರಿಗೆ ಹೇಳಿದ್ದಾರಂತೆ.

    ನಿರ್ಮಾಪಕ ಉಮಾಪತಿ ಮತ್ತು ದರ್ಶನ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಕ್ಕೆ ಈಗಾಗಲೇ `ಕಾಟೇರ’ ಮತ್ತು `ರಾಬರ್ಟ್’ ಎರಡು ಟೈಟಲ್ ಅಂತಿಮವಾಗಿದೆ. ಈ ಹಿಂದೆ ದರ್ಶನ್ `ಚೌಕಾ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ದರ್ಶನ್ ಹೆಸರು ರಾಬರ್ಟ್ ಆಗಿತ್ತು. ಆದ್ದರಿಂದ ಈ ಹೆಸರನ್ನು ನಿರ್ಮಾಪಕರು ಅಂತಿಮ ಮಾಡಿ ನೊಂದಣಿ ಕೂಡ ಮಾಡಿಸಿದ್ದಾರೆ.

    ಈ ಸಿನಿಮಾಕ್ಕೆ ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಗಾಗಿ ತರುಣ್ ಅವರ ಬಳಿ ಎರಡು ಕಥೆಗಳು ರೆಡಿ ಇದೆ. ಇಬ್ಬರು ಸೇರಿ ಯಾವುದನ್ನು ಆಯ್ಕೆ ಮಾಡುತ್ತಾರೂ ಆ ಸಿನಿಮಾವನ್ನು ಮಾಡುತ್ತೀವಿ ಎಂದು ನಿರ್ಮಾಪಕ ತಿಳಿಸಿದ್ದಾರೆ. ಸಿನಿಮಾ ಮಾಡುವುದು ಅಂತಿಮಾವಾದರೆ ಸೆಪ್ಟಂಬರ್ ಅಥವಾ ಅಕ್ಟೋಬರ್ ನಲ್ಲಿ ಚಿತ್ರದ ಮುಹೂರ್ತ ನಡೆಯಲಿದ್ದು, ನವೆಂಬರ್  ಗೆ ಶೂಟಿಂಗ್ ಶುರುಮಾಡುವ ಯೋಜನೆ ಚಿತ್ರತಂಡ ಹಾಕಿಕೊಂಡಿದೆ ಎಂದು ತಿಳಿದು ಬಂದಿದೆ.

  • ಅಭಿಮಾನಿಗಳಿಗೆ ಷರತ್ತು ವಿಧಿಸಿದ ಚಾಲೆಂಜಿಂಗ್ ಸ್ಟಾರ್!

    ಅಭಿಮಾನಿಗಳಿಗೆ ಷರತ್ತು ವಿಧಿಸಿದ ಚಾಲೆಂಜಿಂಗ್ ಸ್ಟಾರ್!

    ಬೆಂಗಳೂರು: ಶನಿವಾರ ಸಂಜೆ ಆರ್ ಆರ್ ನಗರದ ತಮ್ಮ ನಿವಾಸಕ್ಕೆ ಫಾನ್ಸ್ ಗಳನ್ನು ಕರೆದು ಸಭೆ ನಡೆಸಿ, ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಷರತ್ತು ಹಾಕಿದ್ದಾರೆ.

    ಅಭಿಮಾನಿಗಳೊಂದಿಗೆ ನೇರವಾಗಿ ಮಾತನಾಡಿದ ದರ್ಶನ್, ಯಾವುದೇ ಬೇರೆ ನಟರ ವಿರುದ್ಧ ಕಮೆಂಟ್ ಮಾಡೋದು, ಟ್ರೋಲ್ ಮಾಡೋದು ಅಥವಾ ನೆಗೆಟೀವ್ ಹೇಳಿಕೆಗಳನ್ನು ನೀಡಬಾರದು ಎಂದು ಬುದ್ಧಿ ಮಾತು ಹೇಳಿದ್ದಾರಂತೆ.

    ಸ್ಯಾಂಡಲ್‍ವುಡ್ ‘ಬಾಸ್` ಯಾರು ಎಂಬುದರ ಬಗ್ಗೆ ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ನಟರ ಅಭಿಮಾನಿಗಳು ಬೇರೆ ಕಲಾವಿದರ ಬಗ್ಗೆ ಕೆಟ್ಟದಾಗಿ ಕಮೆಂಟ್, ಟ್ರೋಲ್ ಮಾಡತೊಡಗಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ತಮ್ಮ ಅಭಿಮಾನಿಗಳು ಶಿಸ್ತಿನಿಂದ ನಡೆದುಕೊಳ್ಳುವಂತೆ ಹೇಳಿದ್ದಾರೆ.

    ಸಭೆಯಲ್ಲಿ ಭಾಗವಹಿಸಿದ್ದ 40ಕ್ಕೂ ಹೆಚ್ಚು ಅಭಿಮಾನಿಗಳು ದರ್ಶನ್ ಹೇಳಿದಂತೆ ನಡೆದುಕೊಳ್ಳುವುದಾಗಿ ಅಂತಾ ಮಾತು ನೀಡಿ ಹಿಂದಿರುಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

  • ಸಿದ್ದರಾಮಯ್ಯ ವಿರುದ್ಧ ದೂರು ನೀಡಿ ಕಾಂಗ್ರೆಸ್ಸಿಗೆ 3 ಷರತ್ತು ವಿಧಿಸಿದ ದೇವೇಗೌಡರು!

    ಸಿದ್ದರಾಮಯ್ಯ ವಿರುದ್ಧ ದೂರು ನೀಡಿ ಕಾಂಗ್ರೆಸ್ಸಿಗೆ 3 ಷರತ್ತು ವಿಧಿಸಿದ ದೇವೇಗೌಡರು!

    ಬೆಂಗಳೂರು: ಜೆಡಿಎಸ್ ನ ವರಿಷ್ಠ ಅಧಿಕಾರಿ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ಹೈಕಮಾಂಡ್ ಗೆ ಮೂರು ಷರತ್ತು ವಿಧಿಸಿದ್ದಾರೆ.

    ತಮ್ಮ ಮಗ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ಹೈಕಮಾಂಡ್‍ಗೆ ದೂರು ನೀಡಿ ಮೂರು ಷರತ್ತುಗಳನ್ನು ವಿಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇವೇಗೌಡ ಕಂಡೀಷನ್ ಲೆಕ್ಕಚಾರಕ್ಕೆ ಕೈ ಹೈಕಮಾಂಡ್  ಗೆ ತಲೆ ಬಿಸಿಯಾಗಿದೆ. ಇದನ್ನೂ ಓದಿ: ಒಂದು ಕಾಲ್, ಒಂದು ಡೋಸ್, ಒಂದು ಒಪ್ಪಂದ- ಚೆಕ್ ಕೊಟ್ಟು ಗೆದ್ದ ಎಚ್‍ಡಿಡಿ

    ದೇವೇಗೌಡರ ಷರತ್ತು:
    ಷರತ್ತು 1
    ಸಿದ್ದರಾಮಯ್ಯ ಬೇಕೋ? ಲೋಕಸಭೆ ಚುನಾವಣೆ ಬೇಕೋ? ಈ ಆಯ್ಕೆ ಕಾಂಗ್ರೆಸ್ ಹೈಕಮಾಂಡಿಗೆ.

    ಷರತ್ತು 2:
    ಸಮನ್ವಯ ಸಮಿತಿ ಎಲ್ಲದಕ್ಕೂ ಅನ್ವಯವಾಗಲ್ಲ. ಪ್ರಮುಖ ವಿಚಾರಗಳು ಮಾತ್ರ ಇಲ್ಲಿ ಚರ್ಚೆಯಾಗಲಿ. ಉಳಿದ ವಿಚಾರಗಳನ್ನು ಸಿಎಂ, ಡಿಸಿಎಂ ನಿರ್ಧರಿಸಬೇಕು.

    ಷರತ್ತು 3:
    ನಿಮ್ಮ ನಾಯಕರಿಗೂ ನಮಗೂ ಸಂಬಂಧವಿಲ್ಲ. ನಿಮ್ಮವರನ್ನ ನೀವೇ ನಿಯಂತ್ರಿಸಬೇಕು. ಹೈಕಮಾಂಡ್ ಮಟ್ಟದಲ್ಲಿ ಮಾತ್ರ ಒಪ್ಪಂದ, ಜಾರಿ ನಿಮ್ಮ ಕರ್ತವ್ಯ

    https://www.youtube.com/watch?v=Q32J9Q7ZATk