Tag: Condolences

  • ಪ್ರತಿ ವರ್ಷ ಸಂಗಿತೋತ್ಸವಕ್ಕೆ ದಂಪತಿ ಸಮೇತ ಬರುತ್ತಿದ್ದರು: ಶರಣ ಪ್ರಕಾಶ್ ಪಾಟೀಲ್ ಸಂತಾಪ

    ಪ್ರತಿ ವರ್ಷ ಸಂಗಿತೋತ್ಸವಕ್ಕೆ ದಂಪತಿ ಸಮೇತ ಬರುತ್ತಿದ್ದರು: ಶರಣ ಪ್ರಕಾಶ್ ಪಾಟೀಲ್ ಸಂತಾಪ

    ಬೆಂಗಳೂರು: ಕರ್ನಾಟಕದ ಮುತ್ಸದ್ಧಿ ರಾಜಕಾರಣಿ, ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಎಂಬ ಶ್ರೇಯಸ್ಸು ದೊರೆಯುವಂತೆ ಮಾಡಿದ ನಾಡು ಕಂಡ ಧೀಮಂತ ರಾಜಕಾರಣಿ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿಧನ ಸುದ್ದಿ ತಿಳಿದು ಅತೀವ ದುಃಖವಾಯಿತು. ಸಚಿವರು, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸಿದ್ದಾರೆ. ಕರ್ನಾಟಕದಲ್ಲಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ನೀಡಿರುವ ಕೊಡುಗೆ ಸದಾ ಸ್ಮರಣೀಯ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ಎಸ್‌ಎಂ ಕೃಷ್ಣ ಅಂತಿಮ ದರ್ಶನ ಪಡೆದ ರಮ್ಯಾ

    ಹಲವಾರು ಸಂದರ್ಭದಲ್ಲಿ ಅವರ ಮಾರ್ಗದರ್ಶನವನ್ನು ನಾನು ಪಡೆದಿದ್ದೇನೆ. ಕೃಷ್ಣ ಅವರು ಶಾಸ್ತ್ರೀಯ ಸಂಗೀತಾಸ್ತಕರಾಗಿದ್ದರು. ಪ್ರತಿ ವರ್ಷ ಚಾಮರಾಜಪೇಟೆಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವಕ್ಕೆ ದಂಪತಿ ಸಮೇತ ಬಂದು ಸಂಗೀತ ಆಲಿಸುತ್ತಿದ್ದರು. ಲಾನ್ ಟೆನಿಸ್ ಬಗ್ಗೆ ವಿಶೇಷ ವ್ಯಾಮೋಹ ಹೊಂದಿದ್ದ ಕೃಷ್ಣ ಅವರು ಬ್ಯಾಡ್ಮಿಂಟನ್ ಪ್ರಿಯರಾಗಿದ್ದು, ಪ್ರತಿ ದಿನವೂ ಆಡುತ್ತಿದ್ದುದು ಕಂಡಿದ್ದೇವೆ ಎಂದು ಸ್ಪರಿಸಿದರು.

    ಎಸ್.ಎಂ.ಕೃಷ್ಣ ಅವರ ನಿಧನದಿಂದ ವೈಯಕ್ತಿಕವಾಗಿ ಅಪಾರ ದುಃಖವಾಗಿದೆ. ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರಿಗೆ, ಬಂಧು-ಬಳಗದವರಿಗೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ.ಇದನ್ನೂ ಓದಿ: ದಣಿವರಿಯದೇ ಶ್ರಮಿಸಿದ ನಾಯಕ: ಎಸ್‌ಎಂಕೆ ನಿಧನಕ್ಕೆ ಮೋದಿ ಸಂತಾಪ

  • ಪ್ರಧಾನಿ ನರೇಂದ್ರ ಮೋದಿ ತಾಯಿ ನಿಧನಕ್ಕೆ ಸಿನಿಮಾ ಸೆಲೆಬ್ರಿಟಿಗಳ ಕಂಬನಿ

    ಪ್ರಧಾನಿ ನರೇಂದ್ರ ಮೋದಿ ತಾಯಿ ನಿಧನಕ್ಕೆ ಸಿನಿಮಾ ಸೆಲೆಬ್ರಿಟಿಗಳ ಕಂಬನಿ

    ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನಕ್ಕೆ ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಮೋದಿ ಕುಟುಂಬಕ್ಕೆ ಆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ಪ್ರಾರ್ಥಿಸಿದ್ದಾರೆ. ಮಧ್ಯರಾತ್ರಿ ನಿಧನರಾಗಿರುವ ಹೀರಾಬೆನ್ ಅವರ ತ್ಯಾಗವನ್ನೂ ಹಲವರು ಕೊಂಡಾಡಿದ್ದಾರೆ.

    ದಕ್ಷಿಣ ಭಾರತದ ಪ್ರಸಿದ್ಧ ಕಲಾವಿದ ಪ್ರಕಾಶ್ ರೈ, ಬಾಲಿವುಡ್ ನಟಿ ಕಂಗನಾ ರಣಾವತ್, ಸ್ಯಾಂಡಲ್ ವುಡ್ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್, ಬಾಲಿವುಡ್ ನಟರಾದ  ಅಕ್ಷಯ್ ಕುಮಾರ್, ಸೋನು ಸೂದ್, ಅನುಪಮ್ ಖೇರ್, ಅಜಯ್ ದೇವಗನ್ ಸೇರಿದಂತೆ ಸಾಕಷ್ಟು ಕಲಾವಿದರು ನಿಧನಕ್ಕೆ ಕಂಬನಿ ಮಿಡಿದು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಟಿ ತುನಿಷಾ ಶರ್ಮಾ ಸಾವು ಪ್ರಕರಣ – ಆರೋಪಿ ಶಿಜಾನ್‌ ಖಾನ್‌ ಬೆಂಬಲಕ್ಕೆ ನಿಂತ ಊರ್ಫಿ

    ಇಳಿವಯಸ್ಸಿನ ಹೀರಾಬೆನ್ ಮೋದಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೊನ್ನೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವತಃ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯವನ್ನು ವಿಚಾರಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಹೀರಾಬೆನ್ ಕೊನೆಯುಸಿರು ಬಿಟ್ಟಿದ್ದಾರೆ. ಇಂದು ಅವರ ಅಂತ್ಯಸಂಸ್ಕಾರ ಕೂಡ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

    ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

    ನವದೆಹಲಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್ ಇಂದು ಕೊನೆಯುಸಿರೆಳೆದರು. ಸೇನಾಧಿಕಾರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ದೇಶಕ್ಕಾಗಿ ಹೆಮ್ಮೆ, ಶೌರ್ಯ ಮತ್ತು ವೃತ್ತಿಪರತೆಯಿಂದ ಸೇವೆ ಸಲ್ಲಿಸಿದರು. ಅವರ ನಿಧನದಿಂದ ಮನಸ್ಸಿಗೆ ಅತೀವ ನೋವುಂಟಾಗಿದೆ. ದೇಶಕ್ಕೆ ಅವರು ನೀಡಿದ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಓಂ ಶಾಂತಿ.. ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದರು ಎಂದು ತಿಳಿದು ದುಃಖವಾಯಿತು. ಶೌರ್ಯ ಮತ್ತು ಅದಮ್ಯ ಧೈರ್ಯದ ಸೈನಿಕ ಮನೋಭಾವವನ್ನು ಪ್ರದರ್ಶಿಸಿದ ಸೇನಾಧಿಕಾರಿ. ಅವರ ಸೇವೆಗೆ ದೇಶ ಆಭಾರಿಯಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

    ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿ, ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬದವರಿಗೆ ಒದಗಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೀವನ್ಮರಣ ಹೋರಾಟ ನಡೆಸುತ್ತಿರುವ ವರುಣ್ ಸಿಂಗ್ ಬರೆದಿದ್ದ ಸ್ಫೂರ್ತಿದಾಯಕ ಪತ್ರ ವೈರಲ್

    ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ಸ್ನೇಹಿತರು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು. ಇದು ದೇಶಕ್ಕೆ ದುಃಖದ ಕ್ಷಣ. ಈ ದುಃಖದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

    ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ – ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ

    ಡಿ.8ರಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟರು.

  • ಯಾವ ತಪ್ಪಿಗೆ ನಿಮಗೆ ಈ ಶಿಕ್ಷೆ – ಜಗ್ಗೇಶ್ ಕಂಬನಿ

    ಯಾವ ತಪ್ಪಿಗೆ ನಿಮಗೆ ಈ ಶಿಕ್ಷೆ – ಜಗ್ಗೇಶ್ ಕಂಬನಿ

    – ಸಾರಾ ಗೋವಿಂದ್, ಕವಿರಾಜ್ ಸಂತಾಪ

    ಬೆಂಗಳೂರು: ಯಾವ ತಪ್ಪಿಗೆ ನಿಮಗೆ ಈ ಶಿಕ್ಷೆ ಎಂದು ಟ್ವೀಟ್ ಮಾಡುವ ಮೂಲಕ ನಟ ಜಗ್ಗೇಶ್ ಅವರು ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಸಂತಾಪ ಸೂಚಿಸಿದ್ದಾರೆ.

    ಇಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಸ್ವರಭಾಸ್ಕರ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ತನ್ನ ಗಾಯನವನ್ನು ನಿಲ್ಲಿಸಿದ್ದಾರೆ. ಈ ಮೂಲಕ 50ಕ್ಕೂ ಹೆಚ್ಚು ವರ್ಷಗಳ ಕಾಲ ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

    ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಜಗ್ಗೇಶ್ ಗೌರವಾನ್ವಿತ ವಿದಾಯ ನಿಮ್ಮಧ್ವನಿ ತಮ್ಮದಾಗಿಸಿ ನಟಿಸಿ ಚಪ್ಪಾಳೆ ಪಡೆದ ಅದೃಷ್ಟವಂತ ನಟರ ಸಾಲಲ್ಲಿ ನಾನು ಒಬ್ಬ. ನೀವು ಕಾಯಕದಲ್ಲಿ ಗಾಯಕ ಆದರೆ ನಿಮ್ಮಲ್ಲಿ ಒಬ್ಬ ಮಾತೃಹೃದಯದ ಭಾವನಾಜೀವಿ ಇದ್ದ. ಮದ್ರಾಸ್ ನಲ್ಲಿ ನಿಮ್ಮಜೊತೆ ಕಳೆದ ಆ ದಿನಗಳು ಮತ್ತೆ ಬರದು. ಮರೆಯಲಾಗದು. ಹೋದಿರಿ ಮತ್ತೆ ಬೇಗ ಬನ್ನಿ ಎಂದಿದ್ದಾರೆ.

    ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, ಯಾರ ಕಣ್ಣು ತಾಕಿತು. ಇನ್ನು ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು. ವಿಶ್ವಶಾಂತಿ ಭಂಗಕ್ಕೆ ಕೊರೊನಾ ಹರಡಿ ಮಳ್ಳಿಯಂತ ದರಿದ್ರ ದೇಶ ಚೀನವನ್ನು ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು. ನನ್ನ ನೆಚ್ಚಿನ ಹೃದಯವನ್ನು ಈ ರೀತಿ ಕಳೆದುಕೊಳ್ಳುವೆ ಎನಿಸಲಿಲ್ಲ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

    ಎಸ್.ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಂತಾಪ ಸೂಚಿಸಿದ ಸಾರಾ ಗೋವಿಂದ್ ಅವರು, ಕನ್ನಡ ಚಿತ್ರೋದ್ಯಮಕ್ಕೆ ಅವರ ಕೊಡುಗೆ ಅಪಾರವಾಗಿದೆ. ಅವರ ನಿಧನ ಸುದ್ದಿ ತಿಳಿದು ದುಃಖವಾಗುತ್ತಿದೆ. ನಟನಾಗಿ ರಾಜಕುಮಾರ್ ಹೇಗೆ ಹೆಸರು ಮಾಡಿದರು ಅದೇ ರೀತಿ ಗಾಯಕರಾಗಿ ಅವರು ಸಹ ದೊಡ್ಡ ಮಟ್ಟಕ್ಕೆ ಹೆಸರು ಮಾಡಿದರು. ಇವತ್ತು ನಮ್ಮನ್ನ ಆಗಲಿದ್ದಾರೆ ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

    https://www.facebook.com/kavi.raj.376258/posts/3715760768457932

    ಜೊತೆಗೆ ಕವಿರಾಜ್ ಅವರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ನೆಟ್ ವರ್ಕ್ ಇಲ್ಲದ ಜಾಗದಲ್ಲಿದ್ದು ಬೆಳಗ್ಗೆಯಿಂದ ಡ್ರೈವಿಂಗಿನಲ್ಲಿದ್ದೆ. ದಾರಿಯಲ್ಲಿ ಮೂರು ಟಿವಿಯವರು ಎಸ್‍ಪಿಬಿ ಸಾರ್ ಬಗ್ಗೆ ಬೈಟ್ಸ್ ಕೇಳಿದರು. ಪರಿಸ್ಥಿತಿ ಗಂಭೀರವಾಗಿದೆ ಅಂತಷ್ಟೇ ಗೊತ್ತಿತ್ತು. ಅವರು ಗುಣಮುಖರಾಗಲಿ ಅಂತ ಹಾರೈಸುವ ರೀತಿಯಲ್ಲೇ ಮಾತಾಡಿದೆ. ಟಿವಿಯವರು ವಿಷಯ ಹೇಳಲಿಲ್ಲ. ಸ್ವಲ್ಪ ಹೊತ್ತಿಗೆ ಮೊದಲು ವಿಷಯ ಗೊತ್ತಾಯಿತು. ಅವರಿಲ್ಲ ಅಂತಾ ಈಗಲೂ ಒಪ್ಪಲಾಗುತ್ತಿಲ್ಲ. ಭೂಮಿ ಮೇಲೆ ಹಾಡುಗಳಿರೋವರೆಗೂ ಅವರು ಇರುತ್ತಾರೆ. ಅವರು ಅಜರಾಮರ ಎಂದು ಕಂಬನಿಮಿಡಿದಿದ್ದಾರೆ.

  • ಸುರೇಶ್ ಅಂಗಡಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

    ಸುರೇಶ್ ಅಂಗಡಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

    ಬೆಂಗಳೂರು: ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ರಾಜ್ಯ ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಸುರೇಶ್ ಅಂಗಡಿ ಅವರು ಒಬ್ಬ ಸಜ್ಜನ ರಾಜಕಾರಣಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದ ಜನಪ್ರಿಯ ನಾಯಕರಾಗಿದ್ದರು. 2019ರಲ್ಲಿ ಭಾರತದ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆಗಳನ್ನು ತರುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದರು ಎಂದು ಸಿಎಂ ಬಿಎಸ್‍ವೈ ಸಂತಾಪ ಸೂಚಿಸಿದ್ದಾರೆ.

    ಇತ್ತೀಚೆಗಷ್ಟೆ ಬೆಂಗಳೂರಿಗೆ ಆಗಮಿಸಿ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಲ್ಲಿ ಬಾಕಿ ಇದ್ದ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿ ಅವುಗಳ ಅನುಷ್ಠಾನಕ್ಕೆ ವೇಗ ನೀಡಿದ್ದರು. ಅವರ ನಿಧನದಿಂದ ಒಬ್ಬ ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಸುರೇಶ್ ಅಂಗಡಿಯವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

    ಜೊತೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ. ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ಧಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟ ಕೊರೊನಾ ಸೋಂಕಿನಿಂದ ನಮ್ಮನ್ನಗಲಿರುವುದು. ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ. ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    ಕೇವಲ ಐದು ದಿನಗಳ ಹಿಂದೆ ಸಹಕಾರಿ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿಯವರನ್ನು ಕಳೆದುಕೊಂಡೆವು. ಇದೀಗ ಮತ್ತೊಂದು ಆಘಾತವುಂಟಾಗಿದೆ. ಸುರೇಶ್ ಅಂಗಡಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವಹೊಂದಿದ್ದರು. ಸಹೃದಯಿಯಾಗಿದ್ದರು. 4 ಬಾರಿ ಸಂಸದರಾಗಿ, ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವರು ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿ ಪಕ್ಷದ ಏಳಿಗೆಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬ ಪರಿವಾರದವರಿಗೆ ಹಾಗೂ ಅನುಯಾಯಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಿ, ಮೃತರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಇವರ ಜೊತೆಗೆ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ ಚವ್ಹಾಣ್, ರೈಲ್ವೆ ಇಲಾಖೆಯ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿಯವರ ನಿಧನ ಕರ್ನಾಟಕದ ಅಭಿವೃದ್ಧಿಗೆ ತುಂಬಲಾರದ ನಷ್ಟ. ಅತ್ಯಂತ ಸಜ್ಜನ ರಾಜಕಾರಣಿ, ಅಪ್ರತಿಮ ಸಂಸದೀಯ ಪಟು, ಉತ್ತರ ಕರ್ನಾಟಕದ ಕಟ್ಟಾಳುವಿನ ಅಕಾಲಿಕ ಅಗಲಿಕೆ ಅತೀವ ನೋವು ತಂದಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

  • ಇಹಲೋಕದ ತ್ಯಜಿಸಿದ ಚಿರಂಜೀವಿಗೆ ರಾಜಕೀಯ ಗಣ್ಯರಿಂದ ಸಂತಾಪ

    ಇಹಲೋಕದ ತ್ಯಜಿಸಿದ ಚಿರಂಜೀವಿಗೆ ರಾಜಕೀಯ ಗಣ್ಯರಿಂದ ಸಂತಾಪ

    ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

    ಇಂದು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ತಮ್ಮ 39ನೇ ವರ್ಷಕ್ಕೆ ನಟ ಚಿರಂಜೀವಿ ಸರ್ಜಾ ಅವರು ಚಿರನಿದ್ರೆಗೆ ಜಾರಿದ್ದಾರೆ. ಚಿರು ಸಾವಿಗೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಹಿರಿಯ ರಾಜಕಾರಣಿಗಳಾದ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಯಡಿಯೂರಪ್ಪನವರು, ಕನ್ನಡದ ಖ್ಯಾತ ಕಲಾವಿದ, ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರಿಗೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    ಕನ್ನಡ ಚಿತ್ರರಂಗದ ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಚಂದನವನದ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇನ್ನೂ ಬಾಳಿ, ಬದುಕಿ ನಮ್ಮೆಲ್ಲರನ್ನೂ ತನ್ನ ನಟನೆಯ ಮೂಲಕ ರಂಜಿಸಬೇಕಿದ್ದ ಈ ಯುವ ನಾಯಕ ನಟನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ನಟ ಚಿರಂಜೀವಿ ಸರ್ಜಾ ನಿಧನ ತೀವ್ರ ದುಃಖ ತರಿಸಿದೆ. ಚಿತ್ರರಂಗದಲ್ಲಿ ಬೆಳಗಬೇಕಿದ್ದ ತಾರೆಗೆ ಒದಗಿದ ಸ್ಥಿತಿ ಬೇಸರದಾಯಕ. ಕಲೆಗೆ ಇಡೀ ತಲೆಮಾರುಗಳನ್ನೇ ಮುಡುಪಾಗಿಟ್ಟ ಸರ್ಜಾ ಕುಟುಂಬದ ಕುಡಿ ಚಿರಂಜೀವಿ. ಅವರ ಕುಟುಂಬವೇ ಒಂದು ನಕ್ಷತ್ರಪುಂಜ. ಅದರಲ್ಲಿ ಬೆಳಗುತ್ತಿದ್ದ ಚಿರಂಜೀವಿ ಎಂಬ ತಾರೆಯ ದಿಢೀರ್ ಕಣ್ಮರೆ ತೀರ ನೋವಿನ ಸಂಗತಿ. ಪ್ರಖ್ಯಾತ ಕಲಾ ಕುಟುಂಬದಿಂದ ಬಂದಿದ್ದ ಚಿರಂಜೀವಿ ಸರ್ಜಾ ಕುಟುಂಬ, ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದ ಸುಂದರ್ ರಾಜ್ ಕುಟುಂಬದೊಂದಿಗೆ ಬೆರೆತಿತ್ತು. ಹಾಲು ಜೇನಿನಂತೆ ಕೂಡಿದ್ದ ಈ ಕುಟುಂಬಕ್ಕೆ ಚಿರಂಜೀವಿ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೆಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

    ಅಂತಯೇ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕ ಯು.ಟಿ ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮತ್ತು ಡಿಸಿಎಂ ಅಶ್ವಥ್ ನಾರಾಯಣ್, ಲಕ್ಷ್ಮಣ ಸವದಿ ಸೇರಿದಂತೆ ಹಲವಾರು ರಾಜಕೀಯ ಗಣ್ಯ ನಾಯಕರು ಚಿರು ಸಾವಿಗೆ ಸಂತಾಪ ಸೂಚಿಸಿದ್ದಾರೆ. ಚಿರು ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನಡೆಯಲಿದೆ.

  • ನನಗೆ ಸಚಿವ ಸ್ಥಾನ ನೀಡುವಂತೆ ಶ್ರೀಗಳು ಅಮಿತ್ ಶಾ ಗೆ ಕರೆ ಮಾಡಿದ್ದರು: ಎಚ್. ವಿಶ್ವನಾಥ್

    ನನಗೆ ಸಚಿವ ಸ್ಥಾನ ನೀಡುವಂತೆ ಶ್ರೀಗಳು ಅಮಿತ್ ಶಾ ಗೆ ಕರೆ ಮಾಡಿದ್ದರು: ಎಚ್. ವಿಶ್ವನಾಥ್

    ಮೈಸೂರು: ಪೇಜಾವರ ಶ್ರೀಗಳ ನಿಧನಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಸಂತಾಪ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಸರ್ವಜನ ಪ್ರೇಮಿ ಸಂತ. ಭಾರತದ ಉದ್ದಗಲದಲ್ಲು ಅವರ ಹೆಸರಿದೆ. ಅವರ ನಿಧನ ತುಂಬಲಾರದ ನಷ್ಟ ಎಂದು ಅವರು ತಿಳಿಸಿದ್ದಾರೆ.

    ಕನಕದಾಸರ ಬಗ್ಗೆ ಅವರು ಅಪಾರ ಅಧ್ಯಯನ ಮಾಡಿದ್ದರು. ಕನಕಪೀಠ ವಿವಾದವಾದಾಗ ಬೆಂಗಳೂರು ಪ್ರಸ್ ಕ್ಲಬ್‍ಗೆ ಬಂದಿದ್ದರು. ವಿವಾದದ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಬೇಕು ಎಂದು ಜನರ ಮುಂದೆ ಬಂದಿದ್ದರು. ಆಗ ನಾನು ಇಲ್ಲಿಗೆ ನೀವು ಬರಬಾರದಿತ್ತು ಎಂದು ಮನವಿ ಮಾಡಿದ್ದೆ. ಆದರೂ ಅವರು ನನ್ನೊಂದಿಗೆ ಪ್ರಸ್ ಕ್ಲಬ್‍ನಲ್ಲಿ ಚರ್ಚೆ ಮಾಡಿದ್ದರು. ತಳಸ್ಪರ್ಶಿ ಸಮುದಾಯಕ್ಕೆ ಅವರು ಕೆಲಸ ಮಾಡಿದ್ದರು. ಹಿಂದೂ ಧರ್ಮದಲ್ಲಿದ್ದರೂ ಮುಸ್ಲಿಂರನ್ನು ಗೌರವಿಸಿದ್ದರು ಎಂದು ವಿಶ್ವನಾಥ್ ಶ್ರೀಗಳನ್ನು ನೆನಪಿಸಿಕೊಂಡಿದ್ದಾರೆ.

    ನಿಮಗೆ ಗೊತ್ತಿದೇಯೋ ಇಲ್ಲವೋ ಅವರ ಕಾರು ಚಾಲಕ ಒಬ್ಬ ಮುಸ್ಲಿಂ ಆಗಿದ್ದಾನೆ. ನಾವು ಅಂದರೆ ಅವರಿಗೆ ಪ್ರೀತಿ. ನಮಗೆ ಕ್ಯಾಬಿನೆಟ್ ದರ್ಜೆಯ ಸ್ಥಾನ ನೀಡಬೇಕು ಎಂದು ಅಮಿತ್ ಷಾಗೆ ದೂರವಾಣಿ ಮಾಡಿದ್ದರು. ರಾಜಕಾರಣಿಗಳೆಂದರೆ ಅವರಿಗೆ ಮುಲಾಜಿಲ್ಲ. ಅವರಿಗೆ ಇದ್ದದ್ದು ದೇವರ ಮುಲಾಜು ಮಾತ್ರ ಎಂದು ಹೇಳಿದರು. ಇದನ್ನು ಓದಿ: ಹಿಂದೂ ಧರ್ಮ ಪರಿಚಾರಕ ಶ್ರೀಗಳಿಗೆ ಮುಸ್ಲಿಂ ಡ್ರೈವರ್! – ಆರಿಫ್‍ಗೆ ಕೊನೆಯಾಸೆ ಈಡೇರದ ನೋವು

    ನಾವು ಪ್ರಜಾತಂತ್ರವಾದಿಗಳು ಅನ್ನೋದು ಅವರ ನಂಬಿಕೆಯಾಗಿತ್ತು. ರಾಜಕಾರಣಿ ಮತ್ತು ಒಬ್ಬ ಸಂತ ಇಬ್ಬರು ಕೂಡ ಸಾಮಾಜಿಕ ಜವಾಬ್ದಾರಿಯಲ್ಲಿ ಸಮಾನರು ಎಂದು ಪ್ರತಿಪಾದಿಸಿದ್ದರು. ಅದಕ್ಕೆ ಅವರೆಂದರೆ ನನಗೆ ಗೌರವ ಎಂದು ತಿಳಿಸಿದ್ದಾರೆ.

  • ಸಂಸತ್ತಿನಲ್ಲಿ ಮಾತನಾಡಲು ನಿಂತ್ರೆ ಜ್ಞಾನಾರ್ಜನೆ ಆಗ್ತಿತ್ತು – ಡಿವಿಎಸ್ ಸಂತಾಪ

    ಸಂಸತ್ತಿನಲ್ಲಿ ಮಾತನಾಡಲು ನಿಂತ್ರೆ ಜ್ಞಾನಾರ್ಜನೆ ಆಗ್ತಿತ್ತು – ಡಿವಿಎಸ್ ಸಂತಾಪ

    ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಯಪೇಯಿ ರೀತಿಯ ಅಜಾತಶತ್ರುವನ್ನು ನಾವು ಕಳೆದುಕೊಂಡವು. ಸಂಸತ್ತಿನಲ್ಲಿ ಭಾಷಣ ಮಾಡಲು ನಿಂತರೆ ಜ್ಞಾನಾರ್ಜನೆ ಆಗುತಿತ್ತು ಎಂದು ಹೇಳುವ ಮೂಲಕ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಸಂತಾಪ ಸೂಚಿಸಿದ್ದಾರೆ.

    ಬಹುದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಇದು ಅತ್ಯಂತ ದುಖಃದ ದಿನ, ಅರುಣ್ ಜೇಟ್ಲಿ ಅವರು ನನ್ನ ರಾಜಕೀಯ ಜೀವನದ ಅವಿಭಾಜ್ಯ ಅಂಗವಾಗಿದ್ದರು ಎಂದು ಹೇಳಿದ್ದಾರೆ.

    ಕೇಂದ್ರದಲ್ಲಿ ಮೊದಲ ಬಾರಿಗೆ ಕಾನೂನು ಮಂತ್ರಿಯಾಗಿದ್ದಾಗ ನನಗೆ ಕಾನೂನಿನ ಬಗ್ಗೆ ಸರಿಯಾಗಿ ಗೊತ್ತಿರಲಿಲ್ಲ. ಅ ಸಮಯದಲ್ಲಿ ಅವರು ನನಗೆ ಧೈರ್ಯ ಹೇಳಿ ನಿಮಗೆ ಯಾವುದೇ ಸಮಯದಲ್ಲೂ ಬೇಕಾದ ಸಲಹೆ ನೀಡುತ್ತೇನೆ ಎಂದು ಆತ್ಮವಿಶ್ವಾಸ ತುಂಬಿದ್ದರು. ತುಂಬ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದ ಜೇಟ್ಲಿ ಅವರು ಕಲಾಪದಲ್ಲಿ ಮಾತನಾಡುತ್ತಿದ್ದರೆ ವಿರೋಧ ಪಕ್ಷದವರು ಕೂಡ ಚಕಾರ ಎತ್ತುತ್ತಿರಲಿಲ್ಲ. ವಾಯಪೇಯಿ ರೀತಿಯಲ್ಲಿ ಅರುಣ್ ಜೇಟ್ಲಿ ಕೂಡ ಆಜಾತಶತ್ರು ಆಗಿದ್ದರು ಎಂದು ನೆನಪನ್ನು ಹಂಚಿಕೊಂಡರು.

    ಅರುಣ್ ಜೇಟ್ಲಿ ಅವರು, ಸಣ್ಣ ಪದಗಳಿಂದ ದೊಡ್ಡ ವಿಚಾರವನ್ನು ಜನರಿಗೆ ಹೇಳುತ್ತಿದ್ದ ಒಳ್ಳೆಯ ವಕೀಲರು. ನಾನು ನೋಡಿದ್ದಂತೆ ಸುಪ್ರೀಂ ಕೋರ್ಟಿನಲ್ಲಿ ಇದ್ದ ಪ್ರಮಾಣಿಕ ದಕ್ಷ ವಕೀಲ ಅರುಣ್ ಜೇಟ್ಲಿ ಅವರ ಸಾವು ದೇಶಕ್ಕೆ ಬರಿಸಲಾಗದ ನಷ್ಟವಾಗಿದೆ. ನಾನು ರಾಜ್ಯದ ಅಧ್ಯಕ್ಷನಾಗಿದ್ದಾಗ ಅವರು ಕರ್ನಾಟಕದ ಉಸ್ತುವಾರಿ ವಹಿಸಿಕೊಂಡಿದ್ದರು. ಅ ಸಮಯದಲ್ಲಿ ಅರುಣ್ ಜೇಟ್ಲಿ ಅವರು ಮಾರ್ಗದರ್ಶನದಂತೆ ನಡೆದು ಯಡಿಯೂರಪ್ಪ ಅವರು ಸರ್ಕಾರ ರಚನೆ ಮಾಡಿದರು ಎಂದು ಹೇಳಿದ್ದಾರೆ.

    ಅರುಣ್ ಜೇಟ್ಲಿಯವರು ಇನ್ನಿಲ್ಲ ಅನ್ನೋದನ್ನೇ ಊಹಿಸಲಾಗುತ್ತಿಲ್ಲ. ಅವರ ಅಗಲಿಕೆ ವೈಯುಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ. ಅತ್ಯುತ್ತಮ ಆಡಳಿತಗಾರ, ನೇರ ನಿರ್ಭೀತ ನುಡಿಗಾರ, ನನ್ನ ರಾಜಕೀಯ ಜೀವನದ ಪ್ರತಿ ಹಂತದಲ್ಲಿ ಅವರ ಮಾರ್ಗದರ್ಶನ ಇತ್ತು, ಕರ್ನಾಟಕದ ಜನರ ಮೇಲೆ ವಿಶೇಷ ಅಕ್ಕರೆ ಇಟ್ಟುಕ್ಕೊಂಡಿದ್ದ ಅವರು ಭೇಟಿಯಾದಾಗೆಲ್ಲ ನಿಮ್ಮಲ್ಲಿಯ ಜನರ ಪ್ರೀತಿ ಎಲ್ಲೂ ಸಿಗಲ್ಲ ಎನ್ನುತ್ತಿದ್ದರು. ಪಕ್ಷ ದೇಶ ಎಂದರೆ ಎಲ್ಲವನ್ನು ಮರೆಯುತ್ತಿದ್ದ ಮಾನ್ಯರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಿದ್ದರು. ಸಂಸತ್ ನಲ್ಲಿ ಜೇಟ್ಲಿಯವರು ಮಾತನಾಡಲು ನಿಂತರೆಂದರೆ ಎಲ್ಲರ ಕಿವಿ ನೆಟ್ಟಗಾಗುತ್ತಿದ್ದವು. ಅಲ್ಲಿ ಜ್ಞಾನಾರ್ಜನೆ ಇರುತ್ತಿತ್ತು ಅವರಿಗೆ ಸದ್ಗತಿ ದೊರೆಯಲಿ ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ.

  • ಜನನಾಯಕಿ ಅಗಲಿಕೆಯಿಂದ ದೇಶಕ್ಕೆ ನಷ್ಟವಾಗಿದೆ: ಕ್ರೀಡಾ ತಾರೆಯರ ಕಂಬನಿ

    ಜನನಾಯಕಿ ಅಗಲಿಕೆಯಿಂದ ದೇಶಕ್ಕೆ ನಷ್ಟವಾಗಿದೆ: ಕ್ರೀಡಾ ತಾರೆಯರ ಕಂಬನಿ

    ನವದೆಹಲಿ: ಮಂಗಳವಾರ ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ನೆನೆದು ಟೀಂ ಇಂಡಿಯಾ ಆಟಗಾರರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ದೇಶಕ್ಕೆ ನಷ್ಟವನ್ನುಂಟು ಮಾಡಿದೆ ಎಂದು ದುಃಖಿಸಿದ್ದಾರೆ.

    ಮಾಜಿ ಸಚಿವೆ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಭಾರತದ ಹಿರಿಯ, ಅನುಭವಿ ರಾಜಕಾರಣಿ ಕಳೆದುಕೊಂಡಿರುವ ದುಃಖದಲ್ಲಿ ಇಡೀ ದೇಶವಿದೆ. ಗಣ್ಯರಿಂದ ಹಿಡಿದು ಜನಸಾಮಾನ್ಯರವರೆಗೂ ಸುಷ್ಮಾ ಸ್ವರಾಜ್ ನಿಧನಕ್ಕೆ ದುಃಖ ವ್ಯಕ್ತಪಡಿಸುತ್ತಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ಸುರೇಶ್ ರೈನಾ, ಮೊಹಮ್ಮದ್ ಕೈಫ್, ಗೌತಮ್ ಗಂಭೀರ್ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಟ್ವಿಟ್ ಮಾಡಿ ಕಂಬನಿ ಮಿಡಿದಿದ್ದಾರೆ.

    ಸುಷ್ಮಾ ಸ್ವರಾಜ್ ನಿಧನದಿಂದ ನಾನು ದುಃಖಿತನಾಗಿದ್ದೇನೆ. ಅವರು ಒಬ್ಬ ಹಿರಿಯ ರಾಜಕಾರಣಿ ಮತ್ತು ಬಿಜೆಪಿಯ ಆಧಾರಸ್ತಂಭ, ಅವರನ್ನು ಎಲ್ಲರೂ ಪ್ರೀತಿಸುತ್ತಿದ್ದರು. ಈಗಿನ ಕಾಲಘಟ್ಟದಲ್ಲಿ ಅತ್ಯಂತ ಸಹಾಯಕ ಮನೋಭಾವವುಳ್ಳ, ಪ್ರೀತಿಯ ರಾಜಕಾರಣಿಗಳೆಂದು ಅವರನ್ನು ಜನ ನೆನಪಿಸಿಕೊಳ್ಳುತ್ತಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಭಾರತಕ್ಕೆ ಇದು ದೊಡ್ಡ ನಷ್ಟ ಎಂದು ಗೌತಮ್ ಗಂಭೀರ್ ಪಕ್ಷದ ನಾಯಕಿಯ ಅಗಲಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಸುಷ್ಮಾಜೀ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಸುಷ್ಮಾಜೀ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಹೃದಯಪೂರ್ವಕ ಸಂತಾಪ, ಓಂ ಶಾಂತಿ ಎಂದು ಬರೆದು ಸುಷ್ಮಾ ಸ್ವರಾಜ್ ಅವರ ಫೋಟೋ ಹಾಕಿ ವಿರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿ ನಮಿಸಿದ್ದಾರೆ.

    ಸುಷ್ಮಾ ಸ್ವರಾಜ್‍ಜೀ ಅವರ ಹಠಾತ್ ನಿಧನದ ಬಗ್ಗೆ ಕೇಳಿ ತುಂಬಾ ದುಃಖವಾಯಿತು. ಸುಷ್ಮಾ ಸ್ವರಾಜ್ ಅವರಿಗೆ ಎಲ್ಲರಿಂದಲೂ ಗೌರವ ಎಂದು ನಮಸ್ಕರಿಸಿ ಬಾಕ್ಸರ್ ವಿಜೇಂದರ್ ಸಿಂಗ್ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ದಿಟ್ಟ ನಡೆ, ಜನರ ವ್ಯಕ್ತಿ ಹಾಗೂ ನಿಜವಾದ ನಾಯಕಿ ಸುಷ್ಮಾ ಸ್ವರಾಜ್ ನಿಧನರಾದ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ನಮ್ಮ ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸುರೇಶ್ ರೈನಾ ಟ್ವೀಟ್ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಸೇರಿದಂತೆ ಹಿರಿಯ ಗಣ್ಯರು ಸುಷ್ಮಾ ಸ್ವರಾಜ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.

  • ಉತ್ತಮ ಸಂಸದೀಯ ಪಟು, ಅವರಲ್ಲಿ ನಾನು ವಿಶೇಷ ಗುಣವನ್ನು ಕಂಡಿದ್ದೆ: ಡಿಕೆಶಿ ಸಂತಾಪ

    ಉತ್ತಮ ಸಂಸದೀಯ ಪಟು, ಅವರಲ್ಲಿ ನಾನು ವಿಶೇಷ ಗುಣವನ್ನು ಕಂಡಿದ್ದೆ: ಡಿಕೆಶಿ ಸಂತಾಪ

    ಬೆಂಗಳೂರು: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಚಿವ ಡಿಕೆ ಶಿವಕುಮಾರ್, ಅವರೊಬ್ಬ ಉತ್ತಮ ಸಂಸದೀಯ ಪಟು, ಅವರಲ್ಲಿ ನಾನು ವಿಶೇಷ ಗುಣವನ್ನು ಕಂಡಿದ್ದೆ ಎಂದು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಹೆಣ್ಣುಮಗಳಾಗಿ ಸವಾಲನ್ನು ಮೆಟ್ಟಿನಿಂತವರು ಸುಷ್ಮಾ ಸ್ವರಾಜ್. ಪಂಜಾಬ್, ಹರ್ಯಾಣದಲ್ಲಿ ಉತ್ತಮ ಸಂಘಟಕಿಯಾಗಿದ್ದರು. ಅವರಲ್ಲಿ ನಾನು ವಿಶೇಷ ಗುಣವನ್ನು ಕಂಡಿದ್ದೆ. ಅವರ ಆದರ್ಶ ಜೀವನ ಮುಂದಿನವರಿಗೆ ದಾರಿದೀಪ ಎಂದು ಹೇಳಿದ್ದಾರೆ.

    ಮೃತಪಡುವ ವಯಸ್ಸು ಅವರದ್ದಲ್ಲ. ದೆಹಲಿ ಚುನಾವಣೆ ವೇಳೆ ಸುಷ್ಮಾ ಸ್ವರಾಜ್ ಅವರ ಎದುರು ನಿಂತು ನಾನು ಕೆಲಸ ಮಾಡಿದ್ದೆ. ಅವರೆಂದೂ ವಿರೋಧ ಪಕ್ಷದವರನ್ನು ತುಚ್ಛವಾಗಿ ಕಂಡಿರಲಿಲ್ಲ. ನಮ್ಮ ಬಳ್ಳಾರಿಯಲ್ಲೂ ಚುನಾವಣೆಗೆ ನಿಂತಿದ್ದರು. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದರು.

    ಮಂತ್ರಿ ಮಂಡಲ ರಚನೆ ಆಗದೇ ಇರುವ ಕಾರಣ ಬಿಎಸ್‍ವೈ ಮೇಲೆ ಕಿಡಿಕಾರಿದ ಡಿಕೆಶಿ, ಇದೇ ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಅಸ್ತವ್ಯಸ್ತಗೊಂಡರೆ ಬಿಎಸ್‍ವೈ ದೆಹಲಿಯಲ್ಲಿ ಠಿಕಾಣಿ ಹಾಕಿದ್ದಾರೆ. ಇದು ಯಡಿಯೂರಪ್ಪನವರ ಸ್ಟೈಲ್. ಅವರಿಗೇ ಏನ್ ಕಷ್ಟ ಇದೆಯೋ? ಅವರು ಬಹಳ ಆತುರದಲ್ಲಿದ್ದಾರೆ. ಅವರ ಆತುರವನ್ನು ಜನ ಗಮನಿಸುತ್ತಿದ್ದಾರೆ. 10 ದಿನ ಕಳೆದರೂ ಒನ್ ಮ್ಯಾನ್ ಶೋ ಆಗಿದೆ ಸರ್ಕಾರ. ಪಾಪ ಅವರಂತೆ ನಾನು ಆತುರದಲ್ಲಿ ಏನನ್ನೂ ಹೇಳಲ್ಲ ಎಂದು ಹೇಳಿದರು.