Tag: Congrees

  • ಮುತಾಲಿಕ್‌ನ ನಾನು ಕೇರ್ ಮಾಡಲ್ಲಾ, ಅವನಿಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೇನು ಗೊತ್ತಿಲ್ಲ: ಪ್ರಸಾದ್ ಅಬ್ಬಯ್ಯ

    ಮುತಾಲಿಕ್‌ನ ನಾನು ಕೇರ್ ಮಾಡಲ್ಲಾ, ಅವನಿಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೇನು ಗೊತ್ತಿಲ್ಲ: ಪ್ರಸಾದ್ ಅಬ್ಬಯ್ಯ

    ಹುಬ್ಬಳ್ಳಿ: ಪ್ರಮೋದ್ ಮುತಾಲಿಕ್ (Pramod Muthalik) ತಾಕತ್ತು ನಾನು ನೋಡುವುದು ಬೇಕಾಗಿಲ್ಲ. ಅವನ ಎಲ್ಲಾ ತಾಕತ್ತು ನಾನು ನೋಡಿದ್ದೇನೆ. ಅವನಿಗೆ ಬೆಂಕಿ ಹಚ್ಚುವುದು ಬಿಟ್ಟರೆ ಬೇರೇನು ಗೊತ್ತಿಲ್ಲ. ಅವನ್ನು ನಾನು ಕೇರ್ ಮಾಡಲ್ಲಾ ಎಂದು ಕಾಂಗ್ರೆಸ್ (Congress) ಶಾಸಕ ಹಾಗೂ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ (Prasad Abbayya) ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿ ಮಂಟೂರು ರಸ್ತೆಯಲ್ಲಿನ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ಹಿಂದೂ ಸ್ಮಶಾನದಲ್ಲಿ ಕ್ಯಾಂಟೀನ್ ಕಟ್ಟುವುದಲ್ಲ. ಅಬ್ಬಯ್ಯಗೆ ತಾಕತ್ತು ಇದ್ದರೆ ಕಬರಸ್ತಾನದಲ್ಲಿ ಕ್ಯಾಂಟೀನ್ ಕಟ್ಟಲಿ ಎಂದು ಮುತಾಲಿಕ್ ಸವಾಲು ಹಾಕಿದ್ದರು. ಇದನ್ನೂ ಓದಿ: ಬ್ರಿಟಿಷರಂತೆ ಕಾಂಗ್ರೆಸ್‌ – ಸಿಜೆಐ ನಿವಾಸದಲ್ಲಿ ಗಣೇಶ ಪೂಜೆಗೆ ಹೋಗಿದ್ದನ್ನು ಟೀಕಿಸಿದವರಿಗೆ ಮೋದಿ ತಿರುಗೇಟು

    ಈ ಕುರಿತು ಪ್ರತಿಕ್ರಿಯೆ ನೀಡುವಾಗ ಮುತಾಲಿಕ್ ಮೇಲೆ ವಾಗ್ದಾಳಿ ನಡೆಸಿದ ಅಬ್ಬಯ್ಯ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮೇಲೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅವನೆಲ್ಲಾ ನಾನು ತಲೆಗೆ ತೆಗೆದುಕೊಳ್ಳೊದಿಲ್ಲ. ಪ್ರಮೋದ್ ಮುತಾಲಿಕ್ ದೊಡ್ಡ ಇಂಟರ್ ನ್ಯಾಷನಲ್ ಲೀಡರ್ ಅಲ್ಲ. ಅವನು ಹೇಳಿದ ತಕ್ಷಣ ನಾನು ತಾಕತ್ತು ತೋರಿಸೋದು ಬೇಕಿಲ್ಲ. ನನಗೆ ನನ್ನ ಜನ ಬೇಕು. ನನ್ನ ಲೀಡರ್ ಬೇಕು. ನನ್ನನ್ನು ಜನ ಆರಿಸಿದ್ದು. ಮುತಾಲಿಕ್ ಅಲ್ಲಾ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ – ಸಿಸಿಟಿವಿಯಲ್ಲಿ ಓಡಾಟದ ದೃಶ್ಯ ಸೆರೆ

  • ಅಲೆಮಾರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿ: ಈಶ್ವರಪ್ಪ

    ಅಲೆಮಾರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿ: ಈಶ್ವರಪ್ಪ

    ಶಿವಮೊಗ್ಗ: ಕ್ಷೇತ್ರಕ್ಕಾಗಿ ಅಲೆಮಾರಿಯಂತೆ ಹುಡುಕಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ರಾಜಕೀಯ ನಿವೃತ್ತಿ (Political Retirement) ಪಡೆದುಕೊಳ್ಳೋದು ಒಳ್ಳೆಯದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಲೇವಡಿ ಮಾಡಿದ್ದಾರೆ.

    ಶಿವಮೊಗ್ಗದಲ್ಲಿಂದು (Shivamogga) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಚುನಾವಣೆಯಲ್ಲಿ (Election 2023) ಸ್ಪರ್ಧಿಸಲು ಕ್ಷೇತ್ರಕ್ಕಾಗಿ ಹುಡುಕಾಡುತ್ತಾ ಅಲೆಮಾರಿಯಾಗಿಬಿಟ್ಟಿದ್ದಾರೆ. ಎಲ್ಲಿಂದ ಸ್ಪರ್ಧೆ ಮಾಡ್ತೀಯಾ ಅನ್ನೋದಾದ್ರೂ ಹೇಳು ಎಲ್ಲರೂ ಕಾಯ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತೈಗೈದ

    ಸಿದ್ದರಾಮಯ್ಯಗೆ ಚುನಾವಣೆಯಲ್ಲಿ (Election) ಗೆಲ್ಲುತ್ತೀನಾ, ಇಲ್ವಾ ಅನ್ನೋ ಭಯದಿಂದ ಎರಡೆರಡು ಕಡೆ ಸಮೀಕ್ಷೆ ಮಾಡಿಸಿದ್ದಾರೆ. ಈ ಭಯ, ಗೊಂದಲ ಇದ್ರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ವಾಸ ಮಾಡುವ ಪ್ರತಿಯೊಬ್ಬರು ಹಿಂದೂಗಳೇ: ಮೋಹನ್ ಭಾಗವತ್

    ಇನ್ನೂ ಕಾಂಗ್ರೆಸ್ (Congress) ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿದೆ. ಈಗಾಗಿಯೇ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ್ದಾರೆ. ಏಕೆ ನಿಮಗೆ ಒಳ್ಳೆಯ ಅಭ್ಯರ್ಥಿ ಸಿಗುತ್ತಿಲ್ವಾ ಅಥವಾ ಹಣ ಸಂಗ್ರಹ ಮಾಡಿಕೊಳ್ಳೊ ಉದ್ದೇಶವಾ? ಕಾಂಗ್ರೆಸ್ ಟಿಕೇಟ್‌ಗೆ ಸಿದ್ದರಾಮಯ್ಯ ಅವರೇ ಅರ್ಜಿ ಹಾಕಿಲ್ಲ. ಕೆಪಿಸಿಸಿ (KPCC) ಅಧ್ಯಕ್ಷ ಡಿಕೆಶಿ (DK Shivakumar) ಅವರ ಆದೇಶವನ್ನು ಸಿದ್ದರಾಮಯ್ಯ ಅವರೇ ಪಾಲಿಸುತ್ತಿಲ್ಲ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]