Tag: Congress 1st list

  • ಶಿವಮೊಗ್ಗದಲ್ಲಿ ಬಾಡಿಗೆಗೆ ಮನೆ ಪಡೆದ ದೊಡ್ಮನೆ ಸೊಸೆ

    ಶಿವಮೊಗ್ಗದಲ್ಲಿ ಬಾಡಿಗೆಗೆ ಮನೆ ಪಡೆದ ದೊಡ್ಮನೆ ಸೊಸೆ

    – ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌

    ಶಿವಮೊಗ್ಗ: ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ಕುಮಾರ್‌ (Geetha Shivarajkumar) ಶಿವಮೊಗ್ಗದಲ್ಲಿ ಚುನಾವಣಾ ಕಾರ್ಯಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

    ಕಾಂಗ್ರೆಸ್‌ ಪಕ್ಷ ಶುಕ್ರವಾರ (ಫೆ.8) ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 9 ರಾಜ್ಯಗಳ 39 ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್‌ಕುಮಾರ್‌ ಅವರ ಹೆಸರನ್ನು ಘೋಷಣೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸಿದ ಟಿಡಿಪಿ, ಜೆಎಸ್‌ಪಿ – ಆಂಧ್ರದ ಲೋಕಸಭಾ, ವಿಧಾನಸಭಾ ಚುನಾವಣೆಗೆ ಮೈತ್ರಿ ಸ್ಪರ್ಧೆ

    ಟಿಕೆಟ್‌ ಘೋಷಣೆಯಾದ ಮರುದಿನವೇ ಗೀತಾ ಶಿವರಾಜ್‌ಕುಮಾರ್‌ ಅವರು, ಚುನಾವಣಾ ಕಾರ್ಯಗಳಿಗಾಗಿ ಬಾಡಿಗೆಮನೆ (Rent House) ಪಡೆದಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಗಳಿಗೆ ಸಚಿವ ಮಧು ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್‌ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಶಿವಮೊಗ್ಗದ ಕಲ್ಲಹಳ್ಳಿ ಬಡಾವಣೆಯಲ್ಲಿ ಮಧು ಬಂಗಾರಪ್ಪ ನಿವಾಸದ ಪಕ್ಕದಲ್ಲೇ ಮನೆಯೊಂದನ್ನ ಬಾಡಿಗೆಗೆ ಪಡೆದುಕೊಂಡಿದ್ದಾರೆ.

    ಇಲ್ಲಿಯೇ ವಾರ್‌ ರೂಂ ಸ್ಥಾಪಿಸಲಾಗುತ್ತದೆ. ಜೊತೆಗೆ ಚುನಾವಣಾ ಪ್ರಚಾರ ಕಾರ್ಯಗಳ ಕುರಿತು ಮಹತ್ವದ ಸಿದ್ಧತೆಗಳನ್ನು ಇಲ್ಲಿಯೇ ಮಾಡಿಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಿಮ್ಮ ರಾಮಮಂದಿರ ಸ್ಫೋಟಿಸುತ್ತೇವೆ – ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ

    ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
    ವಿಜಯಪುರ (SC) – ಹೆಚ್.ಆರ್. ಆಲಗೂರು (ರಾಜು)
    ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
    ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
    ಹಾಸನ – ಎಂ. ಶ್ರೇಯಸ್ ಪಟೇಲ್
    ತುಮಕೂರು – ಎಸ್.ಪಿ ಮುದ್ದಹನುಮೇಗೌಡ
    ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
    ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್

  • ಬೆಂಗಳೂರು ಗ್ರಾಮಾಂತರದಿಂದ ಡಿಕೆಸು ಅಖಾಡಕ್ಕೆ – ಯಾರಾಗ್ತಾರೆ ಎದುರಾಳಿ?

    ಬೆಂಗಳೂರು ಗ್ರಾಮಾಂತರದಿಂದ ಡಿಕೆಸು ಅಖಾಡಕ್ಕೆ – ಯಾರಾಗ್ತಾರೆ ಎದುರಾಳಿ?

    – ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿ ಸಂಸದ

    ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Congress 1st Lok Sabha List) ಶುಕ್ರವಾರ ಬಿಡುಗಡೆಗೊಳಿಸಿದೆ. ಕರ್ನಾಟಕ ಕಾಂಗ್ರೆಸ್‌ ಪಕ್ಷದ ಏಕೈಕ ಸಂಸದ ಡಿ.ಕೆ ಸುರೇಶ್‌ (DK Suresh) ಅವರಿಗೆ ಬೆಂಗಳೂರು ಗ್ರಾಮಾಂತರದಿಂದಲೇ ಟಿಕೆಟ್‌ ಘೋಷಣೆ ಮಾಡಲಾಗಿದೆ.

    2014, 2019ರ ಚುನಾವಣೆಗಳಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿರುವ ಡಿ.ಕೆ ಸುರೇಶ್‌, ಇದೀಗ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದ್ದಾರೆ. 2014ರಲ್ಲಿ ಡಿಕೆ ಸುರೇಶ್‌ 14,55,244 ಮತಗಳನ್ನು ಪಡೆದು, 2,31,480 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2019ರಲ್ಲಿ 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹಾಗಾಗಿ ಹೈಕಮಾಂಡ್‌ ಸತತ 3ನೇ ಬಾರಿಗೆ ಬೆಂಗಳೂರು ಗ್ರಾಮಾಂತರದಿಂದಲೇ ಟಿಕೆಟ್‌ ನೀಡಿದೆ.

    ಇನ್ನೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಹಲವು ಘಟಾನುಘಟಿ ನಾಯಕರ ಹೆಸರುಗಳು ಕೇಳಿಬರುತ್ತಿದ್ದು. ಇದೇ ವಾರದಲ್ಲಿ 2ನೇ ಪಟ್ಟಿ ಪ್ರಕಟಿಸಲಿದ್ದು, ಕುತೂಹಲಕ್ಕೆ ತೆರೆ ಎಳೆಯಲಿದೆ. ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ

    ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್‌, ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ಕೆಲಸ, ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಮನಗಂಡು ಮೂರನೆಯ ಅವಧಿಗೂ ಕ್ಷೇತ್ರದ ಜನರ ಸೇವೆಗೆ ಅವಕಾಶ ಕಲ್ಪಿಸಿದ ರಾಷ್ಟ್ರೀಯ ಕಾಂಗ್ರೆಸ್‌ಗೆ ನನ್ನ ಧನ್ಯವಾದಗಳು. ನ್ನ ಪ್ರೀತಿಯ ಕನ್ನಡಿಗರ ಹಾಗೂ ಗ್ರಾಮಾಂತರ ಜನತೆಯ ಸೇವೆ ಮಾಡಲು ಇನ್ನಷ್ಟು ಬಲ ಬಂದಂತಾಗಿದೆ ಎಂದು ಎಕ್ಸ್‌ ಖಾತೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

    ಕರ್ನಾಟದಲ್ಲಿ ಯಾರ್ಯಾರಿಗೆ ಟಿಕೆಟ್?
    ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ 9 ರಾಜ್ಯಗಳಿಂದ 39 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಫೈನಲ್ ಮಾಡಿದೆ. ಉಳಿದಂತೆ ಛತ್ತೀಸಗಢ 6, ಕೇರಳ 16, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಕ್ಷೇತ್ರಗಳಿಂದ ತಲಾ 1, ಮೇಘಾಲಯ 2, ತೆಲಂಗಾಣದಿಂದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

    ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

  • Congress 1st List: ಮಾರ್ಚ್‌ 11ರ ಬಳಿಕ ಮತ್ತಷ್ಟು ಅಭ್ಯರ್ಥಿಗಳ ಹೆಸರು ಫೈನಲ್‌ – ಡಿಕೆಶಿ

    Congress 1st List: ಮಾರ್ಚ್‌ 11ರ ಬಳಿಕ ಮತ್ತಷ್ಟು ಅಭ್ಯರ್ಥಿಗಳ ಹೆಸರು ಫೈನಲ್‌ – ಡಿಕೆಶಿ

    ಬೆಂಗಳೂರು: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಇಂದಿನ ಪಟ್ಟಿಯಲ್ಲಿ (Congress 1st List) ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. ಮಾರ್ಚ್‌ 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸ್ಥಳೀಯ ಶಾಸಕರು, ಮುಖಂಡರ ಜೊತೆಗೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನ ಪ್ರಸ್ತಾಪ ಮಾಡಿದವರು ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ಅಭ್ಯರ್ಥಿಯನ್ನ ಆಯ್ಕೆ ಮಾಡಿದ್ದೇವೆ. ಮಾರ್ಚ್ 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

    ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ CEC ಸಮಿತಿ ಸದಸ್ಯರು ಅವರದ್ದೇ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: Loksabha Elections 2024- ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ಫಸ್ಟ್‌ ಲಿಸ್ಟ್‌ನಲ್ಲಿ ರಾಜ್ಯದಿಂದ ಯಾರಿಗೆ ಟಿಕೆಟ್‌?
    ವಿಜಯಪುರ (SC) – ಹೆಚ್.ಆರ್.ಅಲಗೂರು (ರಾಜು)
    ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
    ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
    ಹಾಸನ – ಎಂ. ಶ್ರೇಯಸ್ ಪಟೇಲ್
    ತುಮಕೂರು – ಎಸ್.ಪಿ ಮುದ್ದಹನುಮೇಗೌಡ
    ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
    ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್

  • Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

    Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

    – ಕೇರಳದಲ್ಲೇ ಘಟಾನುಘಟಿಗಳ ಸ್ಪರ್ಧೆ

    ನವದೆಹಲಿ: 2024ರ ಲೋಕಸಮರಕ್ಕೆ ಕಾಂಗ್ರೆಸ್‌ ಮೊದಲ ಅಭ್ಯರ್ಥಿಗಳ ಪಟ್ಟಿ (Congress 1st Lok Sabha List) ಬಿಡುಗಡೆ ಆಗಿದ್ದು, ಈ ಬಾರಿಯೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

    ಇತ್ತೀಚೆಗಷ್ಟೇ ಉತ್ತರ ಪ್ರದೇಶದ (Uttar Pradesh) ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಹಾಗೂ ಅಮೇಥಿ ಕ್ಷೇತ್ರದಿಂದ ಮತ್ತೆ ರಾಹುಲ್‌ ಗಾಂಧಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ರಾಹುಲ್‌ ಗಾಂಧಿ ಬಿಗ್‌ ಫೈಟ್‌ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ಟ್‌ ಟ್ವಿಸ್ಟ್‌ ಕೊಟ್ಟಿದ್ದು, ರಾಹುಲ್‌ ಗಾಂಧಿ ಅವರಿಗೆ ಕೇರಳದ ವಯನಾಡಿನಿಂದಲೇ ಟಿಕೆಟ್‌ ಘೋಷಣೆ ಮಾಡಲಾಗಿದೆ. 2ನೇ ಪಟ್ಟಿಯಲ್ಲಿ ಪ್ರಿಯಾಂಕ ಗಾಂಧಿ ಅವರಿಗೆ ಕ್ಷೇತ್ರ ನಿಗದಿಪಡಿಸುವ ವಿಶ್ವಾಸವನ್ನು ಕಾಂಗ್ರೆಸ್‌ ನಾಯಕರು ವ್ಯಕ್ತಪಡಿಸಿದ್ದಾರೆ.

    4 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದುಬೀಗಿದ್ದ ರಾಗಾ:
    2019ರ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ (ಶೇಕಡವಾರು ಮತ 39.5%) ಗೆಲುವು ಸಾಧಿಸಿದ್ದರು. ಕೇರಳದ ಜತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal), ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಅವರನ್ನು ರಾಜನಾನಂದಗಾಂವ್‌ನಿಂದ ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ.

    ಕರ್ನಾಟದಲ್ಲಿ ಯಾರ್ಯಾರಿಗೆ ಟಿಕೆಟ್‌?
    ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಫೈನಲ್‌ ಮಾಡಿದೆ. ಇದನ್ನೂ ಓದಿ: Loksabha Elections 2024- ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ಉಳಿದಂತೆ ಛತ್ತೀಸಗಢ 6, ಕೇರಳ- 16, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಕ್ಷೇತ್ರಗಳಿಂದ ತಲಾ 1, ಮೇಘಾಲಯ 2, ತೆಲಂಗಾಣದಿಂದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

    ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

  • Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

    Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

    – ಮೊದಲ ಪಟ್ಟಿಯಲ್ಲಿ ಕರ್ನಾಟದ 7 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

    ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Congress 1st Lok Sabha List) ಶುಕ್ರವಾರ ಬಿಡುಗಡೆಗೊಳಿಸಿದೆ.

    ರಾಹುಲ್ ಗಾಂಧಿ (Rahul Gandhi), ಕೆ.ಸಿ ವೇಣುಗೋಪಾಲ್, ಶಶಿ ತರೂರ್ ಸೇರಿದಂತೆ ಒಟ್ಟು 9 ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ.

    ನಿರೀಕ್ಷೆಯಂತೆ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರಿಗೆ ಟಿಕೆಟ್ ನೀಡಲಾಗಿದ್ದು, ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ ಸುರೇಶ್ (DK Suresh) ಮತ್ತೆ ಕಣಕ್ಕಿಳಿಯಲಿದ್ದು, ಬಿಜೆಪಿ ನಡುವೆ ಪ್ರಬಲ ಪೈಪೋಟಿಯ ನಿರೀಕ್ಷೆಯಿದೆ.

    ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
    ವಿಜಯಪುರ (SC) – ಹೆಚ್.ಆರ್. ಅಲ್ಗೂರು (ರಾಜು)
    ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
    ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
    ಹಾಸನ – ಎಂ. ಶ್ರೇಯಸ್ ಪಟೇಲ್
    ತುಮಕೂರು – ಎಸ್.ಪಿ ಮುದ್ದಹನುಮೇಗೌಡ
    ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
    ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್