Tag: Congress leader

  • ಹೈದರ್ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ರಾಜಿ ಮಾಡಿಕೊಂಡು ಒಂದೇ ವರ್ಷಕ್ಕೆ ಉಸಿರು ನಿಲ್ಲಿಸಿದ ಗ್ಯಾಂಗ್‌!

    ಹೈದರ್ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ರಾಜಿ ಮಾಡಿಕೊಂಡು ಒಂದೇ ವರ್ಷಕ್ಕೆ ಉಸಿರು ನಿಲ್ಲಿಸಿದ ಗ್ಯಾಂಗ್‌!

    ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌ ಸಿಕ್ಕಿದೆ. ರಾಜಿಗೆ ಕರೆದು ವಿಶ್ವಾಸಗಳಿಸಿ ಒಬ್ಬಂಟಿಯಿದ್ದಾಗ ಅಟ್ಯಾಕ್ ಮಾಡಿ ಗ್ಯಾಂಗ್‌ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

    ದುಷ್ಮನಿ ಬೇಡ ಎಂದು ಧರ್ಮಗ್ರಂಥದ ಮೇಲೆ ಪ್ರಮಾಣ ಮಾಡಿ, ಅಬ್ಬಾಸ್, ನಾಜ್ ಹಾಗೂ ಹೈದರ್ ಅಲಿಯನ್ನ ಕರೆಸಿ ಸಂಧಾನ ಮಾಡಲಾಗಿತ್ತು. ಆದಿನ ಎಲ್ಲರೂ ಒಂದೇ ತಟ್ಟೆಯಲ್ಲಿ ಊಟ ಕೂಡ ಮಾಡಿದ್ದರು. ಹೈದರ್ ಅಲಿ ಖುದ್ದು ಅಬ್ಬಾಸ್ ಬಾಯಿಗೆ ತುತ್ತು ತಿನ್ನಿಸಿದ್ದ. ಕಳೆದ ರಂಜಾನ್ ಹಬ್ಬದ ವೇಳೆ ಮೂವರಿಗೂ ರಾಜಿ ಸಂಧಾನ ಮಾಡಿಸಲಾಗಿತ್ತು. ಆದರೆ ಈ ವರ್ಷ ರಂಜಾನ್ ಬರುವುದರೊಳಗೆ ಹೈದರ್ ಅಲಿಯ ಉಸಿರನ್ನು ಗ್ಯಾಂಗ್‌ ನಿಲ್ಲಿಸಿದೆ.

    – ವಿಚಾರಣೆ ವೇಳೆ ಸ್ಫೋಟಕ ರಹಸ್ಯ ಬಯಲು
    ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ (Shivamogga) ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ (Accused) ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ ಒಂದಷ್ಟು ಪುರಾವೆಗಳು ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

    ಬಂಧಿತ 7 ಮಂದಿ ಆರೋಪಿಗಳಲ್ಲಿ ಮತೀನ್, ಸದ್ದಾಂ ಸೇರಿ ನಾಲ್ವರು ಆರೋಪಿಗಳು ಶಿವಮೊಗ್ಗದವರಾಗಿದ್ದು, ಆರೋಪಿಗಳ ವಿರುದ್ಧ ಶಿವಮೊಗ್ಗದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಕಾರಣ ಆರೋಪಿಗಳನ್ನ ಶಿವಮೊಗ್ಗದಿಂದ ಗಡಿಪಾರು ಮಾಡಲಾಗಿತ್ತು.

    ಆರೋಪಿಗಳಿಗೆ ಶಿವಮೊಗ್ಗದಿಂದ ಗಡಿಪಾರು ಮಾಡಿದ್ದ ಕಾರಣ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು. ಈ ಹಿಂದೆ ಕೊಲೆಯಾದ ಹೈದರ್ ಅಲಿ ಆಪ್ತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಆಗ ಆರೋಪಿಗಳಿಗೆ ಹೈದರ್ ಅಲಿ ಬೆದರಿಕೆ ಹಾಕಿದ್ದ. ಆದ್ದರಿಂದ ಆರೋಪಿಗಳಿಗೆ ಹೈದರ್ ಮೇಲೆ ವೈಷ್ಯಮ್ಯ ಇತ್ತು. ಈ ವಿಚಾರ ತಿಳಿದಿದ್ದ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಪಾಷಾ ಆರೋಪಿಗಳನ್ನ ಬಳಸಿಕೊಂಡು ಹೈದರ್ ಅಲಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆಂದು ತಿಳಿದು ಬಂದಿದೆ.

    ನಾಜ್ ಮತ್ತು ಹೈದರ್ ಅಲಿ ದಶಕಗಳಿಂದ ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯುತ್ತಿದ್ದರು. ಮೃತ ಹೈದರ್, ನಾಜ್‌ನನ್ನ ಕೊಲೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾನೆಂಬ ವಿಚಾರ ತಿಳಿದ ಆರೋಪಿ ನಾಜ್, ಹೈದರ್‌ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ.

  • ʻಕೈʼಮುಖಂಡನ ಹತ್ಯೆ ಕೇಸ್‌ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ

    ʻಕೈʼಮುಖಂಡನ ಹತ್ಯೆ ಕೇಸ್‌ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ

    – ವಿಚಾರಣೆ ವೇಳೆ ಸ್ಫೋಟಕ ರಹಸ್ಯ ಬಯಲು

    ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ (Shivamogga) ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ (Accused) ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ ಒಂದಷ್ಟು ಪುರಾವೆಗಳು ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

    ಬಂಧಿತ 7 ಮಂದಿ ಆರೋಪಿಗಳಲ್ಲಿ ಮತೀನ್, ಸದ್ದಾಂ ಸೇರಿ ನಾಲ್ವರು ಆರೋಪಿಗಳು ಶಿವಮೊಗ್ಗದವರಾಗಿದ್ದು, ಆರೋಪಿಗಳ ವಿರುದ್ಧ ಶಿವಮೊಗ್ಗದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಕಾರಣ ಆರೋಪಿಗಳನ್ನ ಶಿವಮೊಗ್ಗದಿಂದ ಗಡಿಪಾರು ಮಾಡಲಾಗಿತ್ತು. ಇದನ್ನೂ ಓದಿ: ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    ಆರೋಪಿಗಳಿಗೆ ಶಿವಮೊಗ್ಗದಿಂದ ಗಡಿಪಾರು ಮಾಡಿದ್ದ ಕಾರಣ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು. ಈ ಹಿಂದೆ ಕೊಲೆಯಾದ ಹೈದರ್ ಅಲಿ ಆಪ್ತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಆಗ ಆರೋಪಿಗಳಿಗೆ ಹೈದರ್ ಅಲಿ ಬೆದರಿಕೆ ಹಾಕಿದ್ದ. ಆದ್ದರಿಂದ ಆರೋಪಿಗಳಿಗೆ ಹೈದರ್ ಮೇಲೆ ವೈಷ್ಯಮ್ಯ ಇತ್ತು. ಈ ವಿಚಾರ ತಿಳಿದಿದ್ದ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಪಾಷಾ ಆರೋಪಿಗಳನ್ನ ಬಳಸಿಕೊಂಡು ಹೈದರ್ ಅಲಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆಂದು ತಿಳಿದು ಬಂದಿದೆ. ಇದನ್ನೂ ಓದಿ: ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ನಾಜ್ ಮತ್ತು ಹೈದರ್ ಅಲಿ ದಶಕಗಳಿಂದ ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯುತ್ತಿದ್ದರು. ಮೃತ ಹೈದರ್, ನಾಜ್‌ನನ್ನ ಕೊಲೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾನೆಂಬ ವಿಚಾರ ತಿಳಿದ ಆರೋಪಿ ನಾಜ್, ಹೈದರ್‌ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟಿದ್ದಕ್ಕೆ ಸಿಟ್ಟು; ಆಕೆಯ ಗಂಡನಿಗೆ ಇರಿದು ಹತ್ಯೆ ಮಾಡಿದ ಪಾಗಲ್‌ ಪ್ರೇಮಿ

  • ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    – ತನಿಖೆಗೆ ವಿಶೇಷ ತಂಡ ರಚನೆ

    ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ (Hyder Ali) ಹತ್ಯೆ ಪ್ರಕರಣ ಸಂಬಂಧ ಮರಣೋತ್ತರ ಪರೀಕ್ಷೆ ವರದಿ (Postmortem report) ಬಂದಿದ್ದು, ದೇಹದ 56 ಕಡೆ ಮಚ್ಚಿನಿಂದ ಕೊಚ್ಚಿ, ತಲೆ ಬುರುಡೆ ಛಿದ್ರಗೊಳಿಸಿ, ಕಿವಿ ಕಟ್ ಮಾಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಬೆಂಗಳೂರಿನ ಅಶೋಕನಗರದ (Ashok Nagar) ಗರುಡ ಮಾಲ್ ಬಳಿ ಘಟನೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಿದ್ದಾರೆ. ಶವ ಪತ್ತೆಯಾದಾಗ ಮೊದಲು ಅಪರಿಚಿತ ವ್ಯಕ್ತಿ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ

    ಡಾ.ದಿಲೀಪ್ ನೇತೃತ್ವದಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಹಂತಕರು ಹೈದರ್ ಅಲಿಯ ದೇಹದ 56 ಕಡೆ ಕೊಚ್ಚಿದ್ದಾರೆ. ತಲೆ ಬುರುಡೆ ಛಿದ್ರಗೊಳಿಸಿದ್ದು, ಕಿವಿ ಕಟ್ ಮಾಡಿದ್ದಾರೆ. ದೇಹದ ಮೇಲೆಯೇ 10 ಕಡೆ ಮಚ್ಚಿನ ಗುರುತು ಪತ್ತೆಯಾಗಿದ್ದು, ಕಾಲುಗಳ ಮಾಂಸಖಂಡ ಹೊರ ಬರುವಂತೆ ಹಾಗೂ ಮುಖ ಗುರುತು ಸಿಗದ ರೀತಿಯಲ್ಲಿ ಕೊಚ್ಚಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಪಾರ್ಕ್ ಮಾಡಿದ್ದ ಕಾರಿನಲ್ಲೇ ಹೃದಯಾಘಾತದಿಂದ ಯುವಕ ಸಾವು

    ಕೊಲೆಯಾದ ಹೈದರ್ ಅಲಿಯ ಸಹೋದರ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಂತಕರ ಹುಡುಕಾಟಕ್ಕಾಗಿ ಅಶೋಕ್ ನಗರ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ – ಪಟ್ಟದ ಫೈಟ್‌ ನಡುವೆ ಪರಂ ಮಾತು

    ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ

    ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy; ಟೀಂ ಇಂಡಿಯಾ ಗೆಲುವಿಗಾಗಿ ಮಹಾ ಕುಂಭದಲ್ಲಿ ವಿಶೇಷ ಪೂಜೆ

    ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ 1 ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್ಡಿಪಿಎಸ್ ಕೇಸ್‌ಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. 2016ರಿಂದ ರೌಡಿಶೀಟರ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಗೆ ರಾಜಕೀಯ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

  • ಕೇರಳ ರಾಜಕಾರಣದಲ್ಲೂ ಕಾಸ್ಟಿಂಗ್ ಕೌಚ್ ಕೋಲಾಹಲ; ಪಕ್ಷದ ನಾಯಕರಿಂದ ಕಿರುಕುಳ – ಕಾಂಗ್ರೆಸ್ ನಾಯಕಿ ರೋಸ್‌ಬೆಲ್ ಬಾಂಬ್‌

    ಕೇರಳ ರಾಜಕಾರಣದಲ್ಲೂ ಕಾಸ್ಟಿಂಗ್ ಕೌಚ್ ಕೋಲಾಹಲ; ಪಕ್ಷದ ನಾಯಕರಿಂದ ಕಿರುಕುಳ – ಕಾಂಗ್ರೆಸ್ ನಾಯಕಿ ರೋಸ್‌ಬೆಲ್ ಬಾಂಬ್‌

    ತಿರುವನಂತಪುರಂ: ಮಲಯಾಳಂ ಚಿತ್ರೋದ್ಯಮದಲ್ಲಿ ಮಾತ್ರ ಕಾಸ್ಟಿಂಗ್ ಕೌಚ್ ಇಲ್ಲ.. ಕೇರಳ ರಾಜಕಾರಣದಲ್ಲೂ ಇದು ಹಾಸುಹೊಕ್ಕಾಗಿದ್ಯಂತೆ. ಕೇರಳ ಕಾಂಗ್ರೆಸ್ ಘಟಕದಲ್ಲಿ ಕ್ಯಾಸ್ಟಿಂಗ್ ಕೌಚ್ (Casting Couch) ರೀತಿಯ ಪರಿಸ್ಥಿತಿಗಳಿವೆ ಎಂದು ಕಾಂಗ್ರೆಸ್ ನಾಯಕಿ ಸಿಮಿ ರೋಸ್‌ಬೆಲ್ ಜಾನ್ (Simi Rosebell John) ಬಾಂಬ್‌ ಸಿಡಿಸಿದ್ದಾರೆ. ಈ ಬೆನ್ನಲ್ಲೇ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC)ಯು ರೋಸ್‌ಬೆಲ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

    ಪಕ್ಷದಲ್ಲಿ ತುಂಬಾ ಹೆಣ್ಮಕ್ಕಳು, ಪುರುಷ ನಾಯಕರಿಂದ ಆಕ್ಷೇಪಾರ್ಹವಾದ ರೀತಿ ಕಿರುಕುಳ ಎದುರಿಸ್ತಿದ್ದಾರೆ. ಉನ್ನತ ಹುದ್ದೆಗಳ ಆಸೆ ತೋರಿಸಿ ಪಕ್ಷದ ಕೆಲವು ಹಿರಿಯ ನಾಯಕರು, ಮಹಿಳಾ ನಾಯಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆ ಭಯಾನಕ ಅನುಭವಗಳನ್ನು ಕೆಲವರು ತಮ್ಮ ಬಳಿ ಹಂಚಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ಅಗತ್ಯ ಸಾಕ್ಷ್ಯಗಳು ನನ್ನ ಬಳಿಯಿವೆ. ಸಮಯ ಬಂದಾಗ ಅವುಗಳನ್ನು ಬಯಲು ಮಾಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಜಲ ಜೀವನ್ ಮಿಷನ್‌ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡ‌ರ್ ಹಣ ಮುಟ್ಟುಗೋಲು

    ಕೆಲ ಮಹಿಳಾಮಣಿಗಳು ಅರ್ಹತೆ ಇಲ್ಲದಿದ್ದರೂ ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಹೈಕಮಾಂಡ್‌ಗೆ ಆಪ್ತವಾಗಿರುವ ಮಂದಿಗೆ ಅವಕಾಶ ಸಿಕ್ತಿವೆ ಎಂದು ಆರೋಪಿಸಿದ್ದಾರೆ. ಸಿಮಿ ರೋಸ್‌ಬೆಲ್ ಮಾತು ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿವೆ. ಕಾಂಗ್ರೆಸ್‌ನಲ್ಲೂ ಆಂತರಿಕ ಸಂಘರ್ಷಕ್ಕೆ ಕಾರಣವಾಗಿವೆ. ಇದನ್ನೂ ಓದಿ: ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ – 9 ಸಾವು, ಜನಜೀವನ ಅಸ್ತವ್ಯಸ್ತ

    ಸಿಮಿ ರೋಸ್‌ಬೆಲ್ ವಿರುದ್ಧ ಕೆಪಿಸಿಸಿಯ ರಾಜಕೀಯ ವ್ಯವಹಾರಗಳ ಸಮಿತಿಯ ಮಹಿಳಾ ಮುಖಂಡರು, ಪಿಸಿಸಿಯ ಮಹಿಳಾ ಪದಾಧಿಕಾರಿಗಳು ಮತ್ತು ಮಹಿಳಾ ಕಾಂಗ್ರೆಸ್ ಮುಖ್ಯಸ್ಥರು ಹೈಕಮಾಂಡ್‌ಗೆ ದೂರು ನೀಡಿದೆ. ಆದ್ರೆ, ಈ ಆರೋಪಗಳೆಲ್ಲಾ ಸುಳ್ಳು ಎಂದು ಕೇರಳ ಕಾಂಗ್ರೆಸ್ ಘಟಕ ತಿಳಿಸಿದೆ. ಅಲ್ಲದೇ, ತನಿಖೆಗೂ ಮುಂದಾಗಿದೆ. ಇದನ್ನೂ ಓದಿ: ಮಹಾ ಮಳೆಗೆ ಅವಾಂತರ – ಸೋಮವಾರ ಬೀದರ್‌ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

  • ಉಚಿತ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ – ಬಿತ್ತು 1 ಲಕ್ಷ ದಂಡ!

    ಉಚಿತ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಕಾಂಗ್ರೆಸ್ ನಾಯಕಿ – ಬಿತ್ತು 1 ಲಕ್ಷ ದಂಡ!

    ಚಿಕ್ಕಮಗಳೂರು: ತಮ್ಮದೇ ಸರ್ಕಾರ ವಿದ್ಯುತ್ ಫ್ರೀ (Free Electricity) ಕೊಟ್ಟರೂ ಗ್ರಾಮ ಪಂಚಾಯಿತಿ ಸದಸ್ಯೆ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆಯ ತಮ್ಮ ಮೂರು ಮನೆಗಳಿಗೆ ಪಂಚಾಯ್ತಿ ಸದಸ್ಯೆ ಆಶಾ ನಾರಾಯಣ್ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ದಾಳಿ ನಡೆಸಿದ ಮೆಸ್ಕಾಂ ಅಧಿಕಾರಿಗಳು 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರಿಗೆ ನಿಂದನೆ; ಕಾಂಗ್ರೆಸ್ ನಾಯಕರ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

    ಎನ್.ಆರ್.ಪುರ ತಾಲೂಕಿನ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯೂ ಆಗಿರುವ ಆಶಾ ನಾರಾಯಣ್, ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದರು.

    ಮೆಸ್ಕಾಂ ಅಧಿಕಾರಿಗಳ ತಂಡ ಮಂಗಳೂರಿನಿಂದ ಆಗಮಿಸಿತ್ತು. ಕಾಂಗ್ರೆಸ್ ನಾಯಕಿಗೆ 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಅಕ್ರಮ ಗೊತ್ತಿದ್ದರೂ ಪ್ರಭಾವಿ ಎನ್ನುವ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಸುಮ್ಮನಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿಕೊಂಡು ಟೆಕ್ಕಿ ಆತ್ಮಹತ್ಯೆ

    ಇದೀಗ ಮಂಗಳೂರು ಅಧಿಕಾರಿಗಳಿಂದಲೇ ವಂಚನೆ ಬೆಳಕಿಗೆ ಬಂದಿದೆ. ಆಶಾ ನಾರಾಯಣ್ ಅವರು ದೇವದಾನ ಗ್ರಾಮ ಪಂಚಾಯಿತಿ ಸದಸ್ಯೆಯೂ ಆಗಿದ್ದಾರೆ.

  • Jharkhand: 35 ಕೋಟಿಗೂ ಅಧಿಕ ಹಣ ಜಪ್ತಿ – ಇಡಿಯಿಂದ ಕಾಂಗ್ರೆಸ್‌ ಸಚಿವರ ಆಪ್ತ ಕಾರ್ಯದರ್ಶಿ, ಮನೆಕೆಲಸದವನ ಬಂಧನ!

    Jharkhand: 35 ಕೋಟಿಗೂ ಅಧಿಕ ಹಣ ಜಪ್ತಿ – ಇಡಿಯಿಂದ ಕಾಂಗ್ರೆಸ್‌ ಸಚಿವರ ಆಪ್ತ ಕಾರ್ಯದರ್ಶಿ, ಮನೆಕೆಲಸದವನ ಬಂಧನ!

    ರಾಂಚಿ: ಜಾರಿ ನಿರ್ದೇಶನಾಲಯವು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಅವರನ್ನ ಸೋಮವಾರ ತಡರಾತ್ರಿ ಬಂಧಿಸಿದೆ (ED Arrests). ಇದರೊಂದಿಗೆ ದಾಳಿ ವೇಳೆ ಸಿಕ್ಕ 35 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸಂಜೀವ್ ಲಾಲ್ (Sanjeev Lal) ಮತ್ತು ಜಹಾಂಗೀರ್ ಆಲಂ ಇಬ್ಬರನ್ನೂ ರಾತ್ರಿಯಿಡೀ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ದೇಶದಲ್ಲಿ ಮೂರನೇ ಹಂತದ ಚುನಾವಣೆ – 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ

    ಏನಿದು ಪ್ರಕರಣ?
    ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಗ್ರಾಮೀಣಾಭಿವೃದ್ಧಿ ಮಂತ್ರಿಯೂ ಆಗಿರುವ ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಸಹಾಯಕನ ಮನೆಯಲ್ಲಿ ಈ ದುಡ್ಡಿನ ರಾಶಿ ಕಂಡುಬಂದಿತ್ತು. ಇದನ್ನೂ ಓದಿ: ಜಾರ್ಖಂಡ್ ಸಚಿವನ ಆಪ್ತನ ಮನೆಯಲ್ಲಿ 12 ಗಂಟೆ, 6 ಮೆಷಿನ್, 30 ಕೋಟಿ ಹಣ ಎಣಿಕೆ!

    ಯಾವುದೇ ದಾಖಲೆಗಳನ್ನು ಒಳಗೊಂಡಿರದ ಈ ಹಣವನ್ನು 12 ಗಂಟೆಗಳ ಕಾಲ 6 ಮಷಿನ್‍ಗಳ ಮೂಲಕ ಅಧಿಕಾರಿಗಳು ಎಣಿಕೆ ಮಾಡಿದ್ದರು. ಸತತ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಕೇಂದ್ರಿಯ ತನಿಖಾ ದಳ ನಡೆಸಿದ್ದ ದಾಳಿಯಲ್ಲೂ 3 ಕೋಟಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಪ್ರಜ್ವಲ್‌ ವಿದೇಶಕ್ಕೆ ಹಾರಲು ರಾಜ್ಯ ಸರ್ಕಾರವೇ ಹೊಣೆ : ಮೌನ ಮುರಿದ ಮೋದಿ

    ಮೋದಿ ಹೇಳಿದ್ದೇನು?
    ಜಾರ್ಖಂಡ್‍ನಲ್ಲಿ ದುಡ್ಡಿನ ಪರ್ವತವೇ ಪತ್ತೆಯಾಗಿದೆ. ಇದು ಜನರಿಂದ ಲೂಟಿ ಹೊಡೆದ ಹಣ. ಭ್ರಷ್ಟಾಚಾರದ ವಿರುದ್ಧ ಮೋದಿ ಕ್ರಮ ತಗೋತಾರೆ ಅನ್ನೊದಕ್ಕೇ ಇದೆ ಸಾಕ್ಷಿ. ಆದರೆ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಆಲಂಗೀರ್ ಸ್ಪಷ್ಟಪಡಿಸಿದ್ದಾರೆ. ಸಂಜೀವ್ ಲಾಲ್ ಸರ್ಕಾರ ಒದಗಿಸಿದ್ದ ಆಪ್ತ ಕಾರ್ಯದರ್ಶಿ ಅಷ್ಟೇ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ.

  • ಸಚಿವ ಪರಮೇಶ್ವರ್ ಆಪ್ತ, ಕಾಂಗ್ರೆಸ್ ನಾಯಕನ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ!

    ಸಚಿವ ಪರಮೇಶ್ವರ್ ಆಪ್ತ, ಕಾಂಗ್ರೆಸ್ ನಾಯಕನ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ!

    ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ (IT Raid) ನಡೆಸಿದೆ.

    ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ (MC Venugopal) ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: SIT ವಿಚಾರಣೆ ಎದುರಿಸಿ, ಕಾನೂನು ಹೋರಾಟ ಮಾಡಿ – ಹೈಕಮಾಂಡ್ ಖಡಕ್ ವಾರ್ನಿಂಗ್

    ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ – ಹಾಸ್ಯನಟ ಶ್ಯಾಮ್ ರಂಗೀಲಾ 

  • ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

    ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

    ರಾಯಚೂರು: ಮಾನ್ವಿಯ ಕಾಂಗ್ರೆಸ್ ಮುಖಂಡ (Congress Leader) ಪ್ರಸಾದ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಕೇಶವ, ರಾಮು ಹಾಗೂ ದೇವ ಎಂದು ಗುರುತಿಸಲಾಗಿದೆ.

    ಅ.30ರ ಮುಂಜಾನೆ ರಬಣಕಲ್ ಕ್ಯಾಂಪ್ ಬಳಿ ಜಮೀನಿಗೆ ನೀರು ಕಟ್ಟಲು ತೆರಳಿದ್ದ ಪ್ರಸಾದ್‍ನನ್ನು ಆರೋಪಿಗಳು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಪ್ರಸಾದ್‍ನನ್ನು ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಲ್ಲುಗಳನ್ನು ಕಟ್ಟಿಕೊಂಡು ಕೆರೆಗೆ ಹಾರಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

    ಕೊಲೆಯ ಬಳಿಕ ಆರೋಪಿಗಳ ಬಂಧನಕ್ಕೆ ಎಸ್‍ಪಿ ನಿಖಿಲ್.ಬಿ ಮಾರ್ಗದರ್ಶನದಲ್ಲಿ 3 ತಂಡಗಳನ್ನು ರಚನೆ ಮಾಡಲಾಗಿತ್ತು. ಮಾನ್ವಿ ಇನ್ಸ್‌ಪೆಕ್ಟರ್ ವೀರಭದ್ರಯ್ಯ ಸ್ವಾಮಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದೆ. ಇದೀಗ ಕೊಲೆ ನಡೆದ ಮೂರೇ ದಿನದಲ್ಲಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು, ಲಾರಿ ಮುಖಾಮುಖಿ ಡಿಕ್ಕಿ – ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು

    ಕಾರು, ಲಾರಿ ಮುಖಾಮುಖಿ ಡಿಕ್ಕಿ – ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು

    ರಾಯಚೂರು: ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Collision) ರಾಯಚೂರಿನ (Raichur) ಲಿಂಗಸುಗೂರಿನ ಕಾಂಗ್ರೆಸ್ ಮುಖಂಡ (Congress leader) 65 ವರ್ಷದ ಚನ್ನವೀರಪ್ಪ ಗೌಡ ಪಾಗದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಬಾಗಲಕೋಟೆಯ (Bagalkot) ಇಳಕಲ್ ಬಳಿಯ ತುಂಬಾ ಕ್ರಾಸ್‌ನಲ್ಲಿ ಅಪಘಾತ (Accident) ನಡೆದಿದೆ. ಲಿಂಗಸುಗೂರು ತಾಲೂಕಿನ ಆದಪೂರ ಗ್ರಾಮದ ಚನ್ನವೀರಪ್ಪ ಗೌಡ ಲಿಂಗಸುಗೂರಿನಿಂದ ಇಳಕಲ್ ಹೊರಟಿದ್ದಾಗ ದುರ್ಘಟನೆ ನಡೆದಿದೆ.

    ಲಿಂಗಸುಗೂರು ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಗದ, ಲಿಂಗಸುಗೂರಿನ ಬನ್ನಿಗೋಳ ತಾಲೂಕ ಪಂಚಾಯತ್‌ಗೆ 2 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಖಾಸಗಿ ಬಸ್, ಇನ್ನೋವಾ ಭೀಕರ ಅಪಘಾತ- 10 ಮಂದಿ ದುರ್ಮರಣ

    ಇಳಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಚನ್ನವೀರಪ್ಪ ಗೌಡ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಉದ್ಯೋಗ ಸಿಗದೆ ಖಿನ್ನತೆಗೊಳಗಾಗಿ ಯುವತಿ ಆತ್ಮಹತ್ಯೆ

  • ಮುಸ್ಲಿಂ ವ್ಯಕ್ತಿಯೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆ ಕ್ಯಾನ್ಸಲ್‌ ಮಾಡಿದ ಬಿಜೆಪಿ ನಾಯಕ

    ಮುಸ್ಲಿಂ ವ್ಯಕ್ತಿಯೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆ ಕ್ಯಾನ್ಸಲ್‌ ಮಾಡಿದ ಬಿಜೆಪಿ ನಾಯಕ

    ನವದೆಹಲಿ: ಮುಸ್ಲಿಂ ವ್ಯಕ್ತಿಯೊಂದಿಗೆ ಬಿಜೆಪಿ ನಾಯಕನ ಮಗಳ ಮದುವೆ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿಕೊಂಡಿವೆ.

    ಬಿಜೆಪಿ ನಾಯಕ ಯಶ್ಪಾಲ್ ಬೇನಾಂ ಅವರು ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ರದ್ದುಗೊಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ, “ಅದು ಅವರ ವೈಯಕ್ತಿಕ ವಿಚಾರ. ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ. ಪರಸ್ಪರ ಒಪ್ಪಿಗೆಯಿಂದಲೇ ಮದುವೆ ನಿಶ್ಚಯಿಸಲಾಗಿತ್ತು. ಅದರಲ್ಲಿ ತಪ್ಪೇನಿತ್ತು” ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ – ಸಭೆಯ ಮಾಹಿತಿ ರಿವೀಲ್‌ ಮಾಡಿದ ನೃಪೇಂದ್ರ ಮಿಶ್ರಾ

    ಮದುವೆಯ ಆಮಂತ್ರಣ ಪತ್ರಿಕೆಯ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾದ ನಂತರ ಬಿಜೆಪಿ ನಾಯಕ ಬೇನಾಮ್ ಅವರು ಶನಿವಾರ ಉತ್ತರಾಖಂಡದ ಪೌರಿ ಗಡ್ವಾಲ್‌ನಲ್ಲಿ ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ವರನ ಕುಟುಂಬದೊಂದಿಗೆ “ಪರಸ್ಪರ ಒಪ್ಪಿಗೆ” ಯೊಂದಿಗೆ ರದ್ದುಗೊಳಿಸಿದ್ದಾರೆ.

    ಬಿಜೆಪಿ ಮುಖಂಡರ ಮಗಳ ಮದುವೆ ಮೇ 28ರಂದು ನಡೆಯಬೇಕಿತ್ತು. ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ನಾಯಕ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

    ಸಾರ್ವಜನಿಕ ಪ್ರತಿನಿಧಿಯಾಗಿರುವ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿರಲಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದ್ದಾರೆ.

    ನನ್ನ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗಲು ಇಷ್ಟ ಪಟ್ಟಿದ್ದಳು. ಮಕ್ಕಳ ಸಂತೋಷ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎರಡೂ ಕುಟುಂಬಗಳು ಅವರಿಗೆ ಮದುವೆ ಮಾಡಲು ನಿರ್ಧರಿಸಿದ್ದೆವು. ಅದಕ್ಕಾಗಿ ಕಾರ್ಡ್‌ಗಳನ್ನು ಸಹ ಮುದ್ರಿಸಿ ಹಂಚಿಕೊಳ್ಳಲಾಗಿತ್ತು. ಆದರೆ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮದುವೆಗೆ ಹಲವು ರೀತಿಯ ಆಕ್ಷೇಪಗಳು ಬಂದಿವೆ. ಅದಕ್ಕಾಗಿ ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿದ್ದೇವೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ