Tag: Congress leader

  • ಇಡಿ, ಐಟಿ ಬೆನ್ನಲ್ಲೇ ‘ಕನಕಪುರ ಬಂಡೆಗೆ’ ಮತ್ತೊಂದು ಸಂಕಷ್ಟ

    ಇಡಿ, ಐಟಿ ಬೆನ್ನಲ್ಲೇ ‘ಕನಕಪುರ ಬಂಡೆಗೆ’ ಮತ್ತೊಂದು ಸಂಕಷ್ಟ

    ಬೆಂಗಳೂರು: ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಮಾಜಿ ಸಚಿವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

    ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಿಕ್ಕ ಹಣವು ಭ್ರಷ್ಟಾಚಾರದಿಂದ ಬಂದಿದ್ದಾ ಎನ್ನುವ ಅನುಮಾನ ಶುರುವಾಗಿದೆ. ಹೀಗಾಗಿ ಇದನ್ನು ಪತ್ತೆಹಚ್ಚಲು ಜಾರಿ ನಿರ್ದೇಶನಾಲಯ ಸಿಬಿಐ ನೆರವನ್ನು ಕೋರಿತ್ತು. ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ, ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರಕ್ಕೆ ಬರೆದಿತ್ತು. ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಗೃಹ ಇಲಾಖೆಯು ಮಾಜಿ ಸಚಿವರ ಮೇಲೆ ತನಿಖೆಗೆ ಅನುಮತಿಯನ್ನು ನೀಡಿದೆ. ಈ ಮೂಲಕ ಸಿಬಿಐ ಮೊದಲಿಗೆ ಪ್ರಾಥಮಿಕ ತನಿಖೆ ನಡೆಸಲಿದೆ ಎಂದು ತಿಳಿದು ಬಂದಿದೆ.

    ಇಡಿ ಬಂಧನಕ್ಕೆ ಒಳಗಾಗಿರುವ ಡಿ.ಕೆ.ಶಿವಕುಮಾರ್ ಅವರು ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ. ಮಾಜಿ ಸಚಿವರ ನ್ಯಾಯಾಂಗ ಬಂಧನದ ಅಕ್ಟೋಬರ್ 1ರಂದು ಮುಕ್ತಾಯವಾಗಿತ್ತು. ಹೀಗಾಗಿ ಅಂದು ಅವರನ್ನು ಕೋರ್ಟಿಗೆ ಕರೆತರಲಾಗಿತ್ತು. ಕೋರ್ಟಿನಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು ಅಕ್ಟೋಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ. ಅಕ್ಟೋಬರ್ 14ಕ್ಕೆ ದೆಹಲಿಯ ಹೈಕೊರ್ಟಿನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಗೆ ನಡೆಯಲಿದೆ.

  • ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ – ಎರಡು ತಂಡಗಳ ನಡುವೆ ಮಾರಾಮಾರಿ

    ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ – ಎರಡು ತಂಡಗಳ ನಡುವೆ ಮಾರಾಮಾರಿ

    ಮಂಗಳೂರು: ಎರಡು ತಂಡಗಳ ನಡುವೆ ಮಾರಾಮಾರಿ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ಶೂಟೌಟ್ ನಡೆಸಿದ ಘಟನೆ ಮಂಗಳೂರು ನಗರ ಹೊರವಲಯದ ಉಳ್ಳಾಲದ ಮಕ್ಕಚ್ಚೇರಿ ಕಿಲೇರಿಯಾ ನಗರದಲ್ಲಿ ನಡೆದಿದೆ.

    ಇರ್ಷಾದ್(17) ಗುಂಡೇಟಿನಿಂದ ಗಾಯಗೊಂಡ ಸ್ಥಳೀಯ ನಿವಾಸಿ. ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ ಉಂಟಾಗಿದ್ದು, ಈ ಕಾರಣದಿಂದಾಗಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆಯುತ್ತಿತ್ತು.

    ಈ ವೇಳೆ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಏಳು ಮಂದಿ ಸಹಚರರೊಂದಿಗೆ ಆಗಮಿಸಿದ್ದಾನೆ. ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಸುಹೈಲ್ ಕಂದಕ್ ತಂಡದ ಮೇಲೆ 5 ಸುತ್ತು ಫೈರ್ ಮಾಡಿದ್ದಾನೆ. ಸುಹೈಲ್ ಫೈರಿಂಗ್ ಮಾಡುತ್ತಿದ್ದಂತೆ ಸ್ಥಳೀಯರು ಆತನ ಕಾರನ್ನು ಪುಡಿಗಟ್ಟಿದ್ದಾರೆ.

    ಈ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ರಾಷ್ಟ್ರಪತಿಗಳಿಂದ ತುಘಲಕ್ ದರ್ಬಾರ್: ರೇಣುಕಾಚಾರ್ಯ ಎಡವಟ್ಟು

    ರಾಷ್ಟ್ರಪತಿಗಳಿಂದ ತುಘಲಕ್ ದರ್ಬಾರ್: ರೇಣುಕಾಚಾರ್ಯ ಎಡವಟ್ಟು

    – ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ
    – ಅಹರ್ನ ಶಾಸಕರ ಬಗ್ಗೆ ಗೌರವ, ವಿಶ್ವಾಸವಿದೆ

    ದಾವಣಗೆರೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ರಾಷ್ಟ್ರಪತಿಗಳು ತುಘಲಕ್ ದರ್ಬಾರ್ ನಡೆಸಿದರು ಎಂದು ಎಡವಟ್ಟು ಮಾಡಿಕೊಂಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಅಂತ ಅಸಮಾಧಾನದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 17 ಜನ ಶಾಸಕರು ರಾಜೀನಾಮೆ ನೀಡಿದರು. ಸುಪ್ರೀಂಕೋರ್ಟ್ ಇದನ್ನು ಎತ್ತಿ ಹಿಡಿದಿದೆ. ಆದರೆ ರಾಜೀನಾಮೆಯನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸದೆ ಕಾಂಗ್ರೆಸ್ ಏಜೆಂಟ್‍ರಂತೆ ವರ್ತಿಸಿ ಶಾಸಕರನ್ನು ಅನರ್ಹಗೊಳಿಸಿದರು. ಆದರೆ ನಾನು ಮಾತ್ರ ಅವರನ್ನು ಅನರ್ಹರು ಅಂತ ಕರೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಕುಚು-ಕುಚು ಮಾಡಿ ಅಧಿಕಾರಕ್ಕೆ ಬಂದಿತ್ತು

    ಬಿಜೆಪಿಗೆ ಸಂಘಟನೆ ಹಾಗೂ ಚುನಾವಣೆ ಹೊಸದೇನಲ್ಲ. ಪಕ್ಷದ ಸಂಘಟನೆ ಯಾವತ್ತೂ ನಿಂತ ನೀರಲ್ಲ. ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಉಪಚುನಾವಣೆಯ 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷ ತೀರ್ಮಾನ ಮಾಡುತ್ತದೆ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ಜನರು ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅನರ್ಹ ಶಾಸಕರ ಬಗ್ಗೆ ವಿಶ್ವಾಸ, ಗೌರವ ಇದೆ. 17 ಜನ ರಾಜೀನಾಮೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಆದರೂ ಮಾಜಿ ಸ್ಪೀಕರ್ ತುಘಲಕ್ ದರ್ಬಾರ್ ನಡೆಸಿ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಶಾಸಕರ ಪರ ತೀರ್ಪು ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

    ಎಚ್‍ಡಿಕೆ ಲಾಟರಿ ಸಿಎಂ:
    ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬ ರಾಜಕಾರಣ ಮುಗಿದ ಅಧ್ಯಾಯ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಲಾಟರಿ ಮುಖ್ಯಮಂತ್ರಿ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳನ್ನು ರಾಜ್ಯದ ಜನರು ತಿರಸ್ಕರಿಸಿದ್ದಾರೆ. ಹೀಗಾಗಿ ಉಪ ಚುನಾವಣೆಯಲ್ಲಿಯೂ ಎರಡು ಪಕ್ಷಗಳ ಅಭ್ಯರ್ಥಿಗಳನ್ನು ಮತದಾರರು ಕೈಬಿಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

  • ಮನೆಗೋ? ಜೈಲಿಗೋ? ಇಡಿ ಕಸ್ಟಡಿಗೋ? – ಇಂದು ಡಿಕೆಶಿ ಭವಿಷ್ಯ ನಿರ್ಧಾರ

    ಮನೆಗೋ? ಜೈಲಿಗೋ? ಇಡಿ ಕಸ್ಟಡಿಗೋ? – ಇಂದು ಡಿಕೆಶಿ ಭವಿಷ್ಯ ನಿರ್ಧಾರ

    ನವದೆಹಲಿ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಮನೆಗೋ, ಜೈಲಿಗೋ, ಇಡಿ ಕಸ್ಟಡಿಗೋ ಎನ್ನುವುದು ಇಂದು ನಿರ್ಧಾರವಾಗಲಿದೆ.

    ಇಡಿ ಕಸ್ಟಡಿ ಅವಧಿ ಇಂದು ಅತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಶಿವಕುಮಾರ್ ಅವರನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇಂದೇ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯಲಿದೆ.

    ಇಡಿ ವಾದ ಏನಿರಬಹುದು?
    ಪುತ್ರಿ ಐಶ್ವರ್ಯ ವಿಚಾರಣೆ ನಿನ್ನೆಯಿಂದ ಆರಂಭಗೊಂಡಿದೆ. ಐಶ್ವರ್ಯ ನೀಡಿದ ಉತ್ತರಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು ಪ್ರಶ್ನಿಸಬೇಕು. ಹೀಗಾಗಿ ಮತ್ತೆ 4 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಬಹುದು.

    ಡಿಕೆ ವಕೀಲರ ವಾದ ಏನಿರಬಹುದು?
    ಕಕ್ಷಿದಾರರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಬಾರಿಯೇ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿಸಲಾಗಿತ್ತು. ಈಗ ಮತ್ತಷ್ಟು ಹೆಚ್ಚಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಬಹುದು.

    ಕೋರ್ಟ್ ಏನು ಮಾಡಬಹುದು?
    ಇಡಿ ವಾದವನ್ನು ಪುರಸ್ಕರಿಸಿ ಮತ್ತೆ 4 ದಿನ ಕಸ್ಟಡಿಗೆ ನೀಡಬಹುದು. ಆರೋಗ್ಯ ಸಮಸ್ಯೆ ಇರುವ ಕಾರಣ ಮಧ್ಯಂತರ ಜಾಮೀನು ಮಂಜೂರು ಮಾಡಬಹುದು. ಮಧ್ಯಂತರ ಜಾಮೀನು ಮಂಜೂರು ಮಾಡುವುದು ಕಷ್ಟ ಎನ್ನಲಾಗುತ್ತಿದೆ. ಒಂದು ವೇಳೆ ಜಾಮೀನು ನೀಡದೇ ಮತ್ತು ಇಡಿ ಕಸ್ಟಡಿ ನೀಡದೇ ಇದ್ದರೆ ನ್ಯಾಯಾಂಗ ಬಂಧನ ವಿಧಿಸುತ್ತದೆ. ನ್ಯಾಯಾಂಗ ಬಂಧನ ವಿಧಿಸಿದರೆ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ. ಜಾಮೀನು ಅರ್ಜಿಯ ವಿಚಾರಣೆ ನಡೆದರೆ ವಾದ, ಪ್ರತಿವಾದ ಮಾಡಬೇಕಾಗುತ್ತದೆ. ಬಳಿಕ ಕೆಲ ದಿನಗಳ ನಂತರ ಜಾಮೀನು ಆದೇಶ ಪ್ರಕಟವಾಗಬಹುದು. ಅಲ್ಲಿಯವರೆಗೆ ಡಿಕೆಶಿ ತಿಹಾರ್ ಜೈಲಿನಲ್ಲಿರಬೇಕಾಗುತ್ತದೆ.

    ನಿನ್ನೆ ಒಂದು ಕಡೆ ಐಶ್ವರ್ಯ ವಿಚಾರಣೆ ನಡೆದಿದ್ದರೆ ಮಗದೊಂದು ಕಡೆ ಡಿಕೆಶಿ ವಿಚಾರಣೆ ನಡೆಯಿತು. ಆದರೆ, ವಿಚಾರಣೆ ವೇಳೆ ಡಿಕೆಶಿಗೆ ಹೈಬಿಪಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲೇ ಇದ್ದ ಸಂಬಂಧಿ ಶಾಸಕ, ಡಾ. ರಂಗನಾಥ್ ಅವರು ತಪಾಸಣೆ ಮಾಡಿದರು. ನಂತರ ಡಿಕೆಶಿ ಅವರನ್ನು ಹತ್ತಿರದ ಆರ್‌ಎಂಎಲ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ, ಡಿಕೆ ಸುರೇಶ್ ಆಪ್ತ ವೈದ್ಯ ಜುಬಿನ್ ಸಲಹೆ ಮೇರೆಗೆ ಡಿಕೆಶಿಗೆ ಔಷಧಿ ತಂದುಕೊಟ್ಟರು. ಬಳಿಕ ಇಸಿಜಿ ಮಾಡಿದ್ದು, ಡಿಕೆಶಿ ವಿಶ್ರಾಂತಿ ಪಡೆಯುತ್ತಿದ್ದಾರೆ.

  • ಅಲ್ಪಸಂಖ್ಯಾತರ ದ್ವೇಷದಿಂದ ಬಿಜೆಪಿ ಟಿಪ್ಪು ಜಯಂತಿ ರದ್ದುಗೊಳಿಸಿದೆ: ಸಿದ್ದರಾಮಯ್ಯ

    ಅಲ್ಪಸಂಖ್ಯಾತರ ದ್ವೇಷದಿಂದ ಬಿಜೆಪಿ ಟಿಪ್ಪು ಜಯಂತಿ ರದ್ದುಗೊಳಿಸಿದೆ: ಸಿದ್ದರಾಮಯ್ಯ

    ಬೆಂಗಳೂರು: ಬಿಜೆಪಿಯವರು ದುರುದ್ದೇಶದಿಂದ, ಅಲ್ಪಸಂಖ್ಯಾತರ ಮೇಲಿನ ದ್ವೇಷದಿಂದ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ಟಿಪ್ಪು ದಿನಾಚರಣೆ ರದ್ದು ಮಾಡಿದ್ದು ದೊಡ್ಡ ಅಪರಾಧ. ಟಿಪ್ಪು ಅಲ್ಪಸಂಖ್ಯಾತರಿಗೆ ಸಿಮಿತವಾದ ರಾಜನಲ್ಲ. ಮೈಸೂರಿನ ರಾಜನಾಗಿ ಬ್ರಿಟಿಷರ ಜೊತೆಗೆ ಹೋರಾಡಿದ ಅಪ್ರತಿಮ ದೇಶಪ್ರೇಮಿ. ಕೆಆರ್‍ಎಸ್ ನಿರ್ಮಾಣಕ್ಕೆ ಬುನಾದಿ ಹಾಕಿದ್ದೆ ಟಿಪ್ಪು ಎಂದು ಹೇಳಿದರು.

    ಮೈಸೂರು ಭಾಗದಲ್ಲಿ ಕೈಗಾರಿಕೆಗೆ, ಕೃಷಿ, ವಾಣಿಜ್ಯಕ್ಕೆ ಟಿಪ್ಪು ಅನೇಕ ಕೊಡುಗೆ ನೀಡಿದ್ದಾರೆ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ಅವರ ಜಯಂತಿ ಆರಂಭಿಸಿದೇವು. ಇದರ ಹೊರತಾಗಿ ಬೇರೆ ಉದ್ದೇಶವನ್ನು ನಾವು ಹೊಂದಿರಲಿಲ್ಲ ಎಂದು ತಿಳಿಸಿದರು.

    ಟಿಪ್ಪು ಜಯಂತಿ ರದ್ದುಗೊಳಿಸಿದ್ದು ಅತ್ಯಂತ ದೊಡ್ಡ ಅಪರಾಧ. ಇದು ಅಲ್ಪಸಂಖ್ಯಾತರ ವಿರೋಧಿ ನೀತಿ. ಇದಕ್ಕೆ ನಾನು ವಿರೋಧ ಮಾಡುತ್ತೇನೆ ಎಂದು ಹೇಳಿದರು.

    2016 ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಮೊದಲು ಟಿಪ್ಪು ಜಯಂತಿಯನ್ನ ಅಲ್ಪಸಂಖ್ಯಾತ ಇಲಾಖೆಯಿಂದ ಆಚರಣೆ ಮಾಡಲಾಗುತ್ತಿದ್ದು, ಆ ಬಳಿಕ ಕನ್ನಡ ಸಂಸ್ಕøತಿ ಇಲಾಖೆಯಿಂದ ಜಯಂತಿ ಆಚರಿಸಲಾಗುತ್ತಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರವೂ ಆಚರಣೆಯನ್ನು ಮುಂದುವರಿಸಿತ್ತು.

    2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವುದಾಗಿ ಹೇಳಿತ್ತು. ಅಷ್ಟೇ ಅಲ್ಲದೇ ಸರ್ಕಾರದ ವತಿಯಿಂದಲೇ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಿಸುತ್ತಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದರು.

  • ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕೈ ಮುಖಂಡ ಅರೆಸ್ಟ್

    ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕೈ ಮುಖಂಡ ಅರೆಸ್ಟ್

    ಶಿವಮೊಗ್ಗ: ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕಾಂಗ್ರೆಸ್ ಮುಖಂಡನ ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷ ಕಲೀಂವುಲ್ಲಾ ಬಂಧಿತ ಆರೋಪಿ. ಈತ ಕಾಂಗ್ರೆಸ್ ಸೇರುವ ಮುನ್ನ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದನು. ಉದ್ಯಮಿ ಹಬೀಬ್ ಎಂಬವರ ಜೊತೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಲೀಂ ತೊಡಗಿದ್ದನು. ಈ ವ್ಯವಹಾರದ ಹಣಕಾಸಿನ ವಿಷಯದಲ್ಲಿ ಕಲೀಂ ಹಾಗೂ ಹಬೀಬ್ ಇಬ್ಬರ ನಡುವೆ ವಿವಾದ ತಲೆದೋರಿತ್ತು.

    ಇದೇ ಕಾರಣದಿಂದ ಹಬೀಬ್ ಅವರನ್ನು ಮುಗಿಸಲು ಕಲೀಂವುಲ್ಲಾ ರೌಡಿಶೀಟರ್ ಸಾತು ಎಂಬಾತನಿಗೆ ಸುಪಾರಿ ನೀಡಿದ್ದ. ಸುಪಾರಿ ಪಡೆದ ಸಾತು, ಹಬೀಬ್ ಸಾಗುವ ಮಾರ್ಗದಲ್ಲಿ ಅವರ ಕಾರಿನಲ್ಲೇ ಮುಗಿಸಲು ವಿಫಲ ಯತ್ನ ನಡೆಸಿದ್ದ. ಈ ಬಗ್ಗೆ ಹಬೀಬ್ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಸಾತುನನ್ನು ಬಂಧಿಸಿದಾಗ ಕಲೀಂ ಸುಪಾರಿ ಕೊಟ್ಟದ್ದಲ್ಲದೆ ರಿವಾಲ್ವರ್ ನೀಡಿದ್ದ ವಿಷಯ ಬೆಳಕಿಗೆ ಬಂದಿದೆ. ಈ ಸುಪಾರಿ ಕೊಲೆ ಮಾಡಲು ನೀಡಿದ್ದ ಹಣ ಹಾಗೂ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಇಬ್ಬರು ಅರೆಸ್ಟ್

    ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಇಬ್ಬರು ಅರೆಸ್ಟ್

    ಚಂಡೀಗಢ: ಹರ್ಯಾಣ ಕಾಂಗ್ರೆಸ್ ಮುಖಂಡ ವಿಕಾಸ್ ಚೌಧರಿ ಅವರ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಓರ್ವ ಮಹಿಳೆ ಹಾಗೂ ಪುರುಷನನ್ನು ಹರ್ಯಾಣ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

    ಕೊಲೆಯಾದ ವಿಕಾಸ್ ಚೌಧರಿ ಅವರು ಹರ್ಯಾಣ ಕಾಂಗ್ರೆಸ್ ವಕ್ತಾರರಾಗಿದ್ದರು. ಫರಿದಾಬಾದ್‍ನಲ್ಲಿ ಕಾರಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ವಿಕಾಸ್ ಚೌಧರಿ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಗುಂಡು ತಗುಲಿ ಗಂಭೀರ ಗಾಯಗೊಂಡಿದ್ದ ಚೌಧರಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿಯೇ ವಿಕಾಸ್ ಚೌಧರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.

    ಬಿಳಿ ಬಣ್ಣದ ಮಾರುತಿ ಸುಜುಕಿ ಎಸ್‍ಎಕ್ಸ್4 ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 10ಕ್ಕೂ ಹೆಚ್ಚು ಗುಂಡು ಹಾರಿಸಿದ್ದರು. ಪರಿಣಾಮ ವಿಕಾಸ್ ಅವರ ಕುತ್ತಿಗೆ ಹಾಗೂ ಎದೆ ಭಾಗಗಕ್ಕೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು.

    ಈ ಸಂಬಂಧ ತನಿಖೆ ತನಿಖೆ ಚುರುಕುಗೊಳಿಸಿದ ಪೊಲೀಸರು, ಆರೋಪಿಗಳಿಗೆ ಶೋಧ ಕಾರ್ಯ ನಡೆಸಿದ್ದರು. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದ ಪೊಲೀಸರು, ಇದೊಂದು ಪೂರ್ವಯೋಜಿತ ಹತ್ಯೆ ಎಂದು ತಿಳಿಸಿದ್ದರು.

    ಮುಖಂಡ ವಿಕಾಸ್ ಚೌಧರಿ ಕೊಲೆಯನ್ನು ಖಂಡಿಸಿರುವ ಹರ್ಯಾಣ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ತನ್ವಾರ್ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕು. ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ಯಾಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

  • ಗುಂಡಿಕ್ಕಿ ಹರ್ಯಾಣ ಕಾಂಗ್ರೆಸ್ ನಾಯಕನ ಹತ್ಯೆ

    ಗುಂಡಿಕ್ಕಿ ಹರ್ಯಾಣ ಕಾಂಗ್ರೆಸ್ ನಾಯಕನ ಹತ್ಯೆ

    ಚಂಡೀಗಢ: ಜಿಮ್‍ಗೆ ತೆರಳಿದ್ದ ಹರ್ಯಾಣ ಕಾಂಗ್ರೆಸ್ ವಕ್ತಾರ, ನಾಯಕ ವಿಕಾಸ್ ಚೌಧರಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಿಗ್ಗೆ ಫರಿದಾಬಾದ್‍ನಲ್ಲಿ ನಡೆದಿದೆ.

    ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಚೌಧರಿ ಅವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ. ಗುಂಡು ತಗುಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿಯೇ ವಿಕಾಸ್ ಚೌಧಿರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ವಿಕಾಸ್ ಚೌಧರಿ ಅವರು ಎಂದಿನಂತೆ ಇಂದು ಜಿಮ್‍ಗೆ ಹೋಗುತ್ತಿದ್ದರು. ಇದನ್ನು ಅರಿತು ಪ್ಲಾನ್ ರೂಪಿಸಿದ್ದ ದುಷ್ಕರ್ಮಿಗಳು, ಗುರುವಾರ ಬೆಳಿಗ್ಗೆ 9 ಗಂಟೆಗೆ ಕಾರಿನಿಂದ ಇಳಿದ ವಿಕಾಸ್ ಅವರ ಮೇಲೆ ದಾಳಿ ಮಾಡಿದ್ದಾರೆ. ಘಟನೆಯ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಬಿಳಿ ಬಣ್ಣದ ಮಾರುತಿ ಸುಜುಕಿ ಎಸ್‍ಎಕ್ಸ್4 ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 10ಕ್ಕೂ ಹೆಚ್ಚು ಗುಂಡು ಹಾರಿಸಿದ್ದಾರೆ. ಪರಿಣಾಮವಿಕಾಸ್ ಅವರ ಕುತ್ತಿಗೆ ಹಾಗೂ ಎದೆ ಭಾಗಗಕ್ಕೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಸಮೀಪದ ಸರ್ವೋದಯ ಆಸ್ಪತ್ರೆಗೆ ಸಾಗಿಸಲಾಗಿತ್ತು.

    ಈ ಸಂಬಂಧ ತನಿಖೆ ಆಂಭವಾಗಿದ್ದು, ಆರೋಪಿಗಳಿಗ ಶೋಧ ಕಾರ್ಯ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದೊಂದು ಪೂರ್ವಯೋಜಿತ ಹತ್ಯೆ ಎಂದು ಡಿಸಿಪಿ ಜೈವೀರ್ ರಥಿ ಹೇಳಿದ್ದಾರೆ.

    ಮುಖಂಡ ವಿಕಾಸ್ ಚೌಧರಿ ಕೊಲೆಯನ್ನು ಖಂಡಿಸಿರುವ ಹರ್ಯಾಣ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ತನ್ವಾರ್ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕು. ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಒತ್ತಾಯಿಸಿದ್ದಾರೆ.

  • ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಕಾರಿಂದಿಳಿದು ರಾಹುಲ್ ಜಿಂದಾಬಾದ್ ಅಂದ್ರು ಬೇಳೂರು!

    ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಕಾರಿಂದಿಳಿದು ರಾಹುಲ್ ಜಿಂದಾಬಾದ್ ಅಂದ್ರು ಬೇಳೂರು!

    ಶಿವಮೊಗ್ಗ: ಲೋಕಸಭಾ ಚುನಾವಣೆ ಮುಗಿದರೂ ಮೋದಿ ಘೋಷಣೆಯ ಅಬ್ಬರ ಮುಗಿಯಲಿಲ್ಲ. ಸಾಗರದಲ್ಲಿ ಕಾಂಗ್ರೆಸ್ ಮುಖಂಡ ಕಾರಿಗೆ ಅಡ್ಡ ಹಾಕಿ ಮೋದಿ ಎಂದು ಘೋಷಣೆ ಕೂಗಲಾಗಿದೆ.

    ಶುಕ್ರವಾರ ರಾತ್ರಿ ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಕಾರಿಗೆ ಅಡ್ಡಹಾಕಿ ಮೋದಿ ಮೋದಿ ಎಂದು ಘೋಷಣೆ ಕೂಗಲಾಗಿತ್ತು. ಈ ವೇಳೆ ಬೇಳೂರು ಗೋಪಾಲಕೃಷ್ಣ ಕಾರಿಂದ ಇಳಿದು, ರಾಹುಲ್ ಜಿಂದಾಬಾದ್, ಕಾಂಗ್ರೆಸ್ ಪಾರ್ಟಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.

    ಗೋಪಾಲಕೃಷ್ಣ ಅವರು ರಾಹುಲ್ ಜಿಂದಾಬಾದ್ ಹೇಳುತ್ತಿದ್ದಂತೆ ಮೋದಿ ಪರ ಘೋಷಣೆ ಇನ್ನಷ್ಟು ಜಾಸ್ತಿ ಆಗಿದೆ. ಘೋಷಣೆ ಜಾಸ್ತಿ ಆಗುತ್ತಿದ್ದಂತೆ ಬೆಂಬಲಿಗರು ಬೇಳೂರು ಅವರನ್ನು ಒತ್ತಾಯದಿಂದ ಕಾರತ್ತಿಸಿದ್ದಾರೆ. ಬೇಳೂರು ಜೊತೆಗಿದ್ದವರ ಒತ್ತಾಯಕ್ಕೆ ಕಾರು ಹತ್ತಿ ತೆರಳಿದ್ದರು.

    ಗೋಪಾಲಕೃಷ್ಣ ಅವರು ಹೋದ ಮೇಲೂ ಮುಂದುವರಿದ ಮೋದಿ ಮೋದಿ ಎಂಬ ಘೋಷಣೆ ಕೂಗಲಾಯಿತು.

  • ಆಸ್ತಿಗಾಗಿ ಹೆತ್ತವರನ್ನೇ ಕೂಡಿ ಹಾಕಿ ಹೊಡೆಯುತ್ತಿದ್ದ ಕಾಂಗ್ರೆಸ್ ಮುಖಂಡ!

    ಆಸ್ತಿಗಾಗಿ ಹೆತ್ತವರನ್ನೇ ಕೂಡಿ ಹಾಕಿ ಹೊಡೆಯುತ್ತಿದ್ದ ಕಾಂಗ್ರೆಸ್ ಮುಖಂಡ!

    – ಸಹೋದರಿಯರಿಂದ ಸಹೋದರನ ಮೇಲೆ ಆರೋಪ

    ಬೆಂಗಳೂರು: ಆಸ್ತಿಯನ್ನು ಬರೆದುಕೊಡದ್ದಕ್ಕೆ ಸಿಟ್ಟಾಗಿ ತಂದೆ, ತಾಯಿಯನ್ನು ಗೃಹ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ ಆರೋಪ ಕಾಂಗ್ರೆಸ್ ಮುಖಂಡನ ಮೇಲೆ ಕೇಳಿ ಬಂದಿದೆ.

    ಸಹೋದರನಾದ ತೇಜುಮೂರ್ತಿ ನಮ್ಮ ತಂದೆ ಹಿರಪ್ಪ(80), ತಾಯಿ ಲಕ್ಷ್ಮಮ್ಮ(67) ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಹೋದರಿಯರು ಆರೋಪಿಸಿದ್ದಾರೆ.

    ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ನಿವಾಸಿ ತೇಜುಮೂರ್ತಿ ಆಸ್ತಿ ನೀಡದ್ದಕ್ಕೆ ಪೋಷಕರನ್ನು ಗೃಹ ಬಂಧನದಲ್ಲಿ ಇರಿಸಿದ್ದಾನೆ. ಈ ವಿಚಾರವನ್ನು ಪ್ರಶ್ನಿಸಲು ಬಂದಿದ್ದಕ್ಕೆ ನಮ್ಮ ಮೇಲೆಯೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಸಹೋದರಿಯರು ಹೇಳಿದ್ದಾರೆ. ತೇಜುಮೂರ್ತಿ ಹಲ್ಲೆ ನಡೆಸುವ ದೃಶ್ಯ ಮೊಬೈಲಿನಲ್ಲಿ ಸೆರೆ ಆಗಿದೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಠಾಣೆಯಲ್ಲಿ ದೂರು ದಾಖಲಿಸಿಸಲು ಹಿರಪ್ಪನ ಪುತ್ರಿಯರು ಹೋಗಿದ್ದರು. ಆದರೆ ತೇಜುಮೂರ್ತಿಯ ಒತ್ತಡಕ್ಕೆ ಮಣಿದ ಪೊಲೀಸರು ಕಾಟಾಚಾರಕ್ಕೆ ದೂರು ದಾಖಲಿಸಿಕೊಂಡಿದ್ದಾರೆ ಎಂದು ಹಿರಪ್ಪನ ಪುತ್ರಿ ಆರೋಪಿಸಿದ್ದಾರೆ.

    ಸದ್ಯ ಪುತ್ರಿಯರು ಪೋಷಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.