Tag: Congress leader

  • ಕೈ ನಾಯಕರ ಆಪ್ತರ ಮನೆಯ ಮೇಲೆ ಐಟಿ ದಾಳಿ

    ಕೈ ನಾಯಕರ ಆಪ್ತರ ಮನೆಯ ಮೇಲೆ ಐಟಿ ದಾಳಿ

    ದಾವಣಗೆರೆ/ಬೆಳಗಾವಿ: ರಾಜ್ಯ ಕಾಂಗ್ರೆಸ್-ಜೆಡಿಎಸ್ ನಾಯಕರ ಆಪ್ತರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಕಳೆದ ವಾರ ಬಿಸಿ ಮುಟ್ಟಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹಾಗೂ ಮಾಜಿ ಸಚಿವ ಅನಿಲ್ ಲಾಡ್ ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ.

    ದಾವಣಗೆರೆಯ ವಿದ್ಯಾನಗರದ ವಿವೇಕಾನಂದ ಬಡಾವಣೆಯಲ್ಲಿರುವ ಉದಯ ಶಿವಕುಮಾರ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 10 ಜನ ಐಟಿ ಅಧಿಕಾರಿಗಳ ತಂಡವು ಉದಯ ಶಿವಕುಮಾರ್ ಅವರ ಮನೆಯಲ್ಲಿರುವ ಅಪಾರ ಪ್ರಮಾಣದ ಕಡತಗಳ ಪರಿಶೀಲನೆ ನಡೆಸಿದೆ.

    ಉದಯ ಶಿವಕುಮಾರ್, ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತರಾಗಿದ್ದಾರೆ. ಅವರು ದಾವಣಗೆರೆ ಜಿಲ್ಲೆಯ ಬಹುತೇಕ ಕಾಮಗಾರಿಗಳನ್ನು ಅವರು ಗುತ್ತಿಗೆ ಪಡೆದಿದ್ದಾರೆ. ಇತ್ತ ಜಾರಕಿಹೊಳಿ ಸಹೋದರರಾದ ಆಪ್ತ, ಉದ್ಯಮಿ ಜಯಶೀಲ ಶೆಟ್ಟಿ ಅವರ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಗೋವಾ ಮೂಲದವರಾಗಿದ್ದು, ದಾಖಲೆಗಳ ಪರಿಶೀಲೆ ನಡೆಸಿದ್ದಾರೆ.

    ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಬೆಂಬಲಿಗ, ಗುತ್ತಿಗೆದಾರ ಪ್ರಕಾಶ ವಂಟಮುತ್ತೆ ಅವರ ಚಿಕ್ಕೋಡಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಸದರು, ಚುನಾವಣಾ ಸಂದರ್ಭದಲ್ಲಿ ಐಟಿ ದಾಳಿ ಮಾಡಿದ್ದು ತಪ್ಪು. ಗುತ್ತಿಗೆದಾರರ ಮೇಲೆ ಐಟಿ ರೇಡ್ ಮಾಡುವ ಮೂಲಕ ಭಯ ಹುಟ್ಟಿಸುವ ಪ್ರಯತ್ನ ನಡೆದಿದೆ. ನಾನು ಇದಕ್ಕೆ ಭಯಪಡುವುದಿಲ್ಲ ಎಂದು ತಿಳಿಸಿದ್ದಾರೆ.

  • ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು: ಮೈಸೂರು ಕಾಂಗ್ರೆಸ್ ನಾಯಕ

    ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು: ಮೈಸೂರು ಕಾಂಗ್ರೆಸ್ ನಾಯಕ

    ಮೈಸೂರು: ನಮ್ಮನ್ನ ಸಸ್ಪೆಂಡ್ ಮಾಡಿದ್ರು ಪರವಾಗಿಲ್ಲ. ನಾನು ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು ಎಂದು ಮೈಸೂರಿನ ಕೆ.ಆರ್ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ.

    ಸುಮಲತಾ ಎಂಪಿ ಆಗೋಕೆ ಸೂಕ್ತ ಅಭ್ಯರ್ಥಿ. ನಾವು ಒಳ್ಳೆಯ ಅಭ್ಯರ್ಥಿ ಜೊತೆ ಕೆಲಸ ಮಾಡ್ತಿದ್ದೀವಿ. ಅದಕ್ಕಾಗಿ ನಮಗೆ ಯಾವುದೇ ಭಯ ಇಲ್ಲ. ಹಿಂದೆಯಲ್ಲ ಕಾಂಗ್ರೆಸ್ ಅಭ್ಯರ್ಥಿ ಓಡಾಡಿದ್ದೇವೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ ಅದಕ್ಕೆ ಸುಮಕ್ಕನ ಜೊತೆ ಓಡಾಡುತ್ತೇವೆ. ಬಹಿರಂಗವಾಗಿ ನಾನು ಸುಮಲತಾ ಅವರಿಗೆ ಬೆಂಬಲಿಸುತ್ತೇನೆ ಎಂದು ಹೇಳುವ ಮೂಲಕ ಮೈತ್ರಿ ಪಕ್ಷಗಳ ಸೂತ್ರಕ್ಕೆ ಡೋಂಟ್ ಕೇರ್ ಎಂದಿದ್ದಾರೆ.

    ಸಾ.ರಾ.ಮಹೇಶ್ ಎಚ್ಚರಿಕೆ:
    ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಒಮ್ಮತದಿಂದ ಕೆಲಸ ಮಾಡಬೇಕು. ಆದರೆ ನಿಖಿಲ್ ಕುಮಾರಸ್ವಾಮಿ ಹೆಸರು ಹೇಳಿದ ನಂತರ ಕಾಂಗ್ರೆಸ್ ಮುಖಂಡರು ಮತ್ತೊಬ್ಬ ಆಕಾಂಕ್ಷಿಯ ಜೊತೆ ಓಡಾಡುತ್ತಿದ್ದಾರೆ. ಆದರೆ ಅವರನ್ನು ಸ್ವಾಗತಿಸುತ್ತಿದ್ದಾರೆ. ಈ ರೀತಿ ಮಂಡ್ಯದಲ್ಲಿ ನಡೆದು ಕೊಂಡಾಗ ಮೈಸೂರು ಕಾರ್ಯಕರ್ತರ ಮೇಲೂ ಅದು ಪರಿಣಾಮ ಬೀರುತ್ತದೆ. ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ನಮ್ಮ ಗುಂಪುಗಾರಿಕೆ, ವೈಯಕ್ತಿಕ ಇಚ್ಛಾಶಕ್ತಿ ಹಾಗೂ ಭಿನ್ನಾಭಿಪ್ರಾಯ ಬಿಡಬೇಕು ಎಂದು ಹೇಳುವ ಮೂಲಕ ಸಚಿವ ಸಾ.ರಾ ಮಹೇಶ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

    ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

    ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ.

    ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಎಸ್ ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು. ಬಡ ಜನರಿಗೆ 10 ಸಾವಿರ ಮನೆಗಳನ್ನು ನೀಡಿದ್ದರು. ಅಲ್ಲದೆ ಪಕ್ಷದ ಮುಖಂಡರಿಗೆ ತಲಾ ನೂರು ಮನೆಗಳನ್ನು ಕೊಟ್ಟು ಬಡವರಿಗೆ ಹಂಚಿ ಎಂದು ಜವಾಬ್ದಾರಿ ವಹಿಸಿದ್ದರು. ಆದರೆ ಮುಖಂಡರು ಮಾತ್ರ ತನ್ನ ಹೆಂಡತಿ ಮಕ್ಕಳು ಹಾಗೂ ಅನೈತಿಕ ಸಂಬಂಧ ಹೊಂದಿರುವವರಿಗೆ ಮನೆಗಳನ್ನು ನೀಡಿದ್ದಾರೆ ಹೊರತು ಬಡವರಿಗೆ ನೀಡಿಲ್ಲ. ಮಲ್ಲಿಕಾರ್ಜುನ್ ಅವರ ಸೋಲಿಗೆ ಪಕ್ಷದ ಮುಖಂಡರೇ ಕಾರಣ ಎಂದು ವೇದಿಕೆ ಮೇಲೆಯೇ ಕಿಡಿಕಾರಿದ್ದಾರೆ.

    ಒಂದೆಡೆ ಮಾಜಿ ಸಚಿವರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಶ್ರಮಿಸುತ್ತಿದ್ದರೆ ಇನ್ನೊಂದೆಡೆ ಅವರ ಜೊತೆಗಿರುವ ಮುಖಂಡರು ಅವರ ಅಭಿವೃದ್ಧಿ ಕೆಲಸಗಳನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದಲೇ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಅನುಭವಿಸುವಂತಾಯಿತು ಎಂದು ಸ್ವ ಪಕ್ಷ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.

    ಪಕ್ಷಕ್ಕೆ ಎಲ್ಲಾ ವರ್ಗದ ಜನರು ಮತ ಹಾಕಿದ್ದಾರೆ. ನಾವು ಧರ್ಮದ ಆಧಾರದ ಮೇಲೆ ಕೆಲಸ ಮಾಡುವುದು ಬೇಡ. ಜನರಿಗಾಗಿ ಕೆಲಸ ಮಾಡಬೇಕು. ಅಷ್ಟೇ ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಮತಗಳು ಕಾಂಗ್ರೆಸ್‍ಗೆ ಬೀಳುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

    ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

    ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ರಾಜೀನಾಮೆಗೆ ಮುಂದಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರ ಮನವೊಲಿಸುವಲ್ಲಿ ಮೈತ್ರಿ ಸರ್ಕಾರದ ನಾಯಕರು ಸುಸ್ತಾಗಿದ್ದಾರಂತೆ.

    ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮನವೊಲಿಸಲು ಯತ್ನಿಸಿದ್ದಾರೆ. ನೀವು ರಾಜೀನಾಮೆ ನೀಡಿದರೆ ತಪ್ಪಾಗುತ್ತದೆ. ಆಪರೇಷನ್ ಕಮಲ ಆಡಿಯೋ ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನು ಓದು: 50 ಕೋಟಿಯ ಕಸದ ಬುಟ್ಟಿ ತಲೆ ಮೇಲೆ ಇಟ್ಕೊಂಡು ಹೊರಗೆ ಹೋಗೋಕ್ಕಾಗಲ್ಲ- ಸ್ಪೀಕರ್ ಬೇಸರ

    ಆಪರೇಷನ್ ಕಮಲದ ಆಡಿಯೋ ಪ್ರಕರಣದಲ್ಲಿ ನನ್ನ ಹೆಸರು ಪ್ರಸ್ತಾಪ ಮಾಡಿದ್ದು ಬೇಸರ ತಂದಿದೆ. ಅಷ್ಟೇ ಅಲ್ಲದೆ 50 ಕೋಟಿ ರೂ. ನೀಡುವ ವಿಚಾರವನ್ನು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ಮನಸ್ಸು ಭಾರವಾಗಿದೆ. 15 ದಿನ ನನ್ನನ್ನ ನನ್ನ ಪಾಡಿಗೆ ಬಿಟ್ಟುಬಿಡಿ. ಒಂದಿಷ್ಟು ಕಾಲ ವಿಶ್ರಾಂತಿ ಪಡೆಯುತ್ತೇನೆ. ಉಪಸಭಾಧ್ಯಕ್ಷರು ಸದನ ನಡೆಸಲಿ ಎಂದು ರಮೇಶ್ ಕುಮಾರ್ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನು ಓದು: 

    ರಮೇಶ್ ಕುಮಾರ್ ಅವರು ಇಂದು ವಿಧಾನಸಭಾ ಅಧಿವೇಶನದ ಆರಂಭದಲ್ಲೇ ಆಪರೇಷನ್ ಕಮಲದ ಆಡಿಯೋ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದರು. ಅಷ್ಟೇ ಅಲ್ಲದೆ ಸ್ಪೀಕರ್ ಸ್ಥಾನದ ಮೌಲ್ಯವನ್ನು ಶಾಸಕರಿಗೆ ತಿಳಿಸಿಕೊಡುವ ಪ್ರಯತ್ನ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

    ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

    ಹೈದರಾಬಾದ್: ಮಾನನಷ್ಟ ಹೇಳಿಕೆ ನೀಡಿದ್ದ ಆರೋಪದಡಿ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಹೈದರಾಬಾದ್ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.

    ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯವು ದಿಗ್ವಿಜಯ ಸಿಂಗ್ ಅವರಿಗೆ ವಾರೆಂಟ್ ಜಾರಿ ಮಾಡಿದೆ.

    ಏನಿದು ಪ್ರಕರಣ?:
    ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಣಕ್ಕಾಗಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಅವರು 2016ರಲ್ಲಿ ಹೇಳಿಕೆ ನೀಡಿದ್ದರು.

    ದಿಗ್ವಿಜಯ್ ಸಿಂಗ್ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅಸಾದುದ್ದೀನ್ ಓವೈಸಿ ಹೈದರಾಬಾದ್‍ನ ಕೋರ್ಟ್ ಮೆಟ್ಟಿಲೇರಿದ್ದರು. ದೂರು ದಾಖಲಿಸಿಕೊಂಡಿದ್ದ ಹೈದರಾಬಾದ್‍ನ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಆದರೆ ದಿಗ್ವಿಜಯ್ ಸಿಂಗ್ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ಗೈರು ಉಳಿದಿದ್ದರು. ಇದರಿಂದಾಗಿ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

    ದಿಗ್ವಿಜಯ್ ಸಿಂಗ್ ಅವರು ಅನೇಕ ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಾರೆಂಟ್ ಜಾರಿಯಾಗಿದ್ದು ಇದೇ ಮೊದಲೇನಲ್ಲ. 2017 ಫೆಬ್ರವರಿ 21ರಂದು ಟ್ವೀಟ್ ಮಾಡಿದ್ದ ದಿಗ್ವಿಜಯ್ ಸಿಂಗ್ ಅವರು, ‘ಮದರಸಾ ಹಾಗೂ ಆರ್‌ಎಸ್‌ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ್ ನಲ್ಲಿ ಯಾವುದಾರೂ ವ್ಯತ್ಯಾಸವಿದೆಯೇ? ನನ್ನ ಅಭಿಪ್ರಾಯದ ಪ್ರಕಾರ ಎರಡೂ ದ್ವೇಷವನ್ನೇ ಬಿತ್ತುತ್ತಿವೆ ಎಂದಿದ್ದರು. ಈ ಕುರಿತು ಕಿಡಿಕಾರಿದ್ದ ಆರ್‌ಎಸ್‌ಎಸ್ ಹಾಗೂ ಮದರಸಾ ದಿಗ್ವಿಜಯ್ ಸಿಂಗ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಮುಖಂಡನಿಂದ್ಲೇ ಮಗಳಿಗೆ ಕಿರುಕುಳ- ಪ್ರೀತ್ಸಿ ಮದ್ವೆಯಾದಾಕೆ ತಂದೆಗೆ ಮನವಿ

    ಕಾಂಗ್ರೆಸ್ ಮುಖಂಡನಿಂದ್ಲೇ ಮಗಳಿಗೆ ಕಿರುಕುಳ- ಪ್ರೀತ್ಸಿ ಮದ್ವೆಯಾದಾಕೆ ತಂದೆಗೆ ಮನವಿ

    ಹಾವೇರಿ: ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಮಗಳಿಗೆ ಕಾಂಗ್ರೆಸ್ ಮುಖಂಡನೊಬ್ಬ ಕಿರುಕುಳ ಕೊಡುತ್ತಿದ್ದು, ರಕ್ಷಣೆಕೋರಿ ಹಾವೇರಿ ಎಸ್‍ಪಿ ಕಚೇರಿಗೆ ನವಜೋಡಿ ಆಗಮಿಸಿದ್ದಾರೆ.

    ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೆರೆಮಲ್ಲಾಪುರದ ಜಯವರ್ದನ್ ಹಾಗೂ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ನಿಖಿತಾ ಮಹಾನಶೆಟ್ಟರ್ ಪರಸ್ಪರ ಪ್ರೀತಿ ಮದುವೆಯಾಗಿದ್ದಾರೆ. ನನ್ನ ತಂದೆ ಶಿವಪ್ರಕಾಶ್ ಅವರು ಕಾಂಗ್ರೆಸ್ ಮುಖಂಡ ಹಾಗೂ ಗದಗಿನ ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ. ಅವರಿಗೆ ಇರುವ ಅಧಿಕಾರ ದುರುಪಯೋಗ ಮಾಡಿಕೊಂಡು ಇಬ್ಬರಿಗೂ ಕಿರುಕುಳ ನೀಡುತ್ತಿದ್ದಾರೆ ಎಂದು ನಿಖಿತಾ ದೂರಿದ್ದಾರೆ.

    ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ. ಚೆನ್ನಾಗಿ ಬದುಕುತ್ತೇವೆ. ನಮ್ಮ ಮೇಲಿನ ದ್ವೇಷಕ್ಕೆ ಬೇರೆಯವರಿಗೆ ತೊಂದರೆ ಕೊಡಬೇಡಿ ಅಂತಾ ನಿಖಿತಾ ತಂದೆಗೆ ಮನವಿ ಮಾಡಿಕೊಂಡಿದ್ದಾಳೆ.

    ಏನಿದು ಪ್ರಕರಣ?:
    ನಾನು ಮತ್ತು ಜಯವರ್ದನ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದೇವು. ಈ ಕುರಿತು ಆರು ತಿಂಗಳ ಹಿಂದೆಯೇ ತಂದೆಗೆ ಹೇಳಿದ್ದೆ. ಆದರೆ ಅದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ನಾವು ನವಂಬರ್ 16ರಂದು ರಿಜಿಸ್ಟರ್ ಮದುವೆಯಾಗಿದ್ದೇವೆ. ನಿಖಿತಾರನ್ನು ಅಪಹರಣ ಮಾಡಲಾಗಿದೆ ಅಂತಾ ಆರೋಪಿಸಿ ಶಿವಪ್ರಕಾಶ್ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜಯವರ್ದನ್ ಅವರ ಮಾವನನ್ನು ಬಂಧಿಸಿ, ಕಿರುಕುಳ ನೀಡುತ್ತಿದ್ದಾರೆ. ರಿಜಿಸ್ಟರ್ ಆಫೀಸ್‍ನಲ್ಲಿ ನಮ್ಮ ಮದುವೆಗೆ ಸಹಿ ಹಾಕಿದವರಿಗೆ ತೊಂದರೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ನನ್ನ ಗೆಳತಿಯ ಮನೆಗೆ ಹೋಗಿ ಅವರ ತಾಯಿಯ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಅವರಿಗೆ ಇರುವ ರಾಜಕೀಯ ಶಕ್ತಿ ಬಳಸಿಕೊಂಡು ನಮಗೆ ತೊಂದರೆ ಕೊಡುತ್ತಿದ್ದಾರೆ ಎಂದು ನಿಖಿತಾ ದೂರಿದ್ದಾರೆ.

    ನಮ್ಮ ತಾಯಿಯ ತವರುಮನೆ ಬೆಳ್ಳಟ್ಟಿ. ಅಲ್ಲಿಯೇ ನಾನು ಬೆಳೆದಿದ್ದು. ಅದೇ ಊರಿನ ನಿಖಿತಾ ಜೊತೆಗೆ ಪರಿಚಯ ಕೂಡ ಆಗಿತ್ತು. ಬಳಿಕ ಪರಸ್ಪರ ಪ್ರೀತಿ ಮಾಡಿದೇವು. ಈ ಕುರಿತು ನಿಖಿತಾ ಮನೆಯವರಿಗೆ ತಿಳಿಸಲಾಗಿತ್ತು. ಆದರೆ ಅವರು ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಮನೆಯವರ ವಿರೋಧದ ನಡುವೆಯೂ ರಿಜಿಸ್ಟರ್ ಮದುವೆ ಆಗಿದ್ದಕ್ಕೆ ನಮ್ಮನ್ನು ಹತ್ಯೆ ಮಾಡಲು ಶಿವಪ್ರಕಾಶ್ ಯತ್ನಿಸಿದ್ದರು. ಇಬ್ಬರೂ ತಪ್ಪಿಸಿಕೊಂಡು ಕಾಲ ಕಳೆಯುತ್ತಿದ್ದೇವು ಎಂದು ಜಯವರ್ದನ್ ತಿಳಿಸಿದರು.

    ಶಿವಪ್ರಕಾಶ್ ಅವರು ನಮ್ಮ ಕುಟುಂಬದವರಿಗೆ ಹಾಗೂ ಸ್ನೇಹಿತರಿಗೆ ತೊಂದರೆ ಕೊಡುತ್ತಿದ್ದಾರೆ. ರಾಜಕೀಯ ಬಲ ಬಳಸಿಕೊಂಡು ನಮ್ಮನ್ನು ಶಿರಹಟ್ಟಿಗೆ ಕರೆಸಿಕೊಂಡು, ಹಲ್ಲೆ ಮಾಡಲು ಯತ್ನಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ಬೇಸತ್ತು ಜೀವ ರಕ್ಷಣೆ ಕೇಳಿಕೊಂಡು ಹಾವೇರಿ ಎಸ್‍ಪಿ ಕಚೇರಿಗೆ ಬಂದಿದ್ದೇವೆ ಎಂದು ಜಯವರ್ದನ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಜಲೀಲನಾಗಿ 5 ದಶಕಗಳ ರಂಜನೆ-ಕನ್ವರ್ ಲಾಲ್ ದರ್ಶನಕ್ಕೆ ಬಂತು ಅಭಿಮಾನಿ ಸಾಗರ

    ಜಲೀಲನಾಗಿ 5 ದಶಕಗಳ ರಂಜನೆ-ಕನ್ವರ್ ಲಾಲ್ ದರ್ಶನಕ್ಕೆ ಬಂತು ಅಭಿಮಾನಿ ಸಾಗರ

    ಬೆಂಗಳೂರು: ಜಲೀಲಲಾಗಿ ಸಿನಿಮಾರಂಗಕ್ಕೆ ಎಂಟ್ರಿಯಾದ ಎಚ್. ಅಮರನಾಥ್ ಆಮೇಲೆ ಅಂಬರೀಶನಾಗಿದ್ದು ಇತಿಹಾಸ. ತನ್ನ ತಾತ ಖ್ಯಾತ ಪಿಟೀಲು ವಾದಕರಾದ ಚೌಡಯ್ಯ ಅವರಾಗಿದ್ದರೂ ಎಂದೂ ಅದನ್ನ ಸಿನಿಮಾಗಾಗಿ ಬಳಸಿಕೊಂಡವರಲ್ಲ. 1972-73ರಲ್ಲಿ ತೆರೆಕಂಡ ಪುಟ್ಟಣ ಕಣಗಾಲ್ ಅವರ ‘ನಾಗರಹಾವು’ ಚಿತ್ರದಿಂದ ಹಿಡಿದು, ಮೊನ್ನೆ ಮೊನ್ನೆಯಷ್ಟೇ ತೆರೆಕಂಡ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದವರೆಗೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿಮಾನಿಗಳನ್ನ ರಂಜಿಸಿದ್ದಾರೆ.

    ಈ ಮೂಲಕ ತನ್ನದೇ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದವರು ಅಂಬರೀಶ್. ಇವತ್ತು ಆ ಅಭಿಮಾನಿ ಸಾಗರ ಗೋಚರಿಸ್ತು. ವಿಕ್ರಂ ಆಸ್ಪತ್ರೆ, ಜಯನಗರದ ನಿವಾಸ, ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅಂತಿಮ ದರ್ಶನಕ್ಕಾಗಿ ಅಬಾಲವೃದ್ಧರಾಗಿ ಅಭಿಮಾನಿಗಳು ಆಗಮಿಸಿದ್ದರು.

    ಬೆಳಗ್ಗಿನ ಚಳಿಯನ್ನೂ ಲೆಕ್ಕಿಸದೆ ಸೂರ್ಯ ಹುಟ್ಟೋಕೆ ಮುನ್ನವೇ ಅಭಿಮಾನಿಗಳು, ರೆಬೆಲ್‍ಸ್ಟಾರ್ ಅವರನ್ನ ಕೊನೆಯ ಬಾರಿಗಾದರೂ ಕಣ್ತುಂಬಿಕೊಳ್ಳಬೇಕು ಅಂತ ಕಂಠೀರವ ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದರು. ಕಣ್ಣೀರು ಸುರಿಸಿದ್ರು. ಆಕಂದ್ರನ ಮುಗಿಲು ಮುಟ್ಟಿತ್ತು. ಬಿಸಿಲೇರುತ್ತಿದ್ದಂತೆಯೇ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಯ್ತು. ಮಧ್ಯಾಹ್ನದ ಹೊತ್ತಿಗೆ ಅದು ನೂರ್ಮಡಿ ಆಯ್ತು. 3 ಗಂಟೆ ಹೊತ್ತಿಗೆ ಅಂಬರೀಶ್ ಅವರನ್ನು ಮಂಡ್ಯದತ್ತ ಸಾಗಿಸಲು ಟೈಮ್ ಆಯ್ತು ಅಂತ ಹೇಳುತ್ತಿದ್ದಂತೆಯೇ ನೂಕು ನುಗ್ಗಲು ಜಾಸ್ತಿ ಆಯ್ತು. ನಮಗೊಮ್ಮೆ ಅವಕಾಶ ಕೊಡಿ ಅಂತ ಅಂಗಲಾಚಿದರು. ಕರ್ಣನ ದರ್ಶನ ಸಿಗದಿದ್ದಾಗ ಹತಾಶೆಯಿಂದ ಜೋರಾಗಿ ಘೋಷಣೆ ಕೂಗಿದರು.

    ಕಬ್ಬಿಣದ ಸರಳುಗಳೇ ಬಿದ್ದೋಗುವಷ್ಟು ತಳ್ಳಾಟ ಇತ್ತು. ಪೊಲೀಸರಂತು ಅಕ್ಷರಶಃ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಅಭಿಮಾನಿ ಸಾಗರ ಅಂತ ಲಾಠಿ ಬೀಸಲು ಹೋಗಲಿಲ್ಲ. ಅಷ್ಟರ ಮಟ್ಟಿಗೆ ಎಲ್ಲವನ್ನು ಪೊಲೀಸರು ಸಹಿಸಿಕೊಂಡರು. ಎಚ್‍ಎಎಲ್ ಏರ್ ಪೋರ್ಟ್ ಗೆ ರವಾನಿಸುವಾಗ ಕಂಠೀರವ ಸ್ಟೇಡಿಯಿಂನಿಂದ ಎಚ್‍ಎಎಲ್ ಏರ್ ಪೋರ್ಟ್ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಜನಸಾಗರ ನಿಂತು ಅಭಿಮಾನ ಮೆರೆಯಿತು.

    https://www.youtube.com/watch?v=C-hQ4AFVKeo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತ್ನಿಗೆ ಕಂಡೀಷನ್ ಹಾಕ್ತೀರಾ ಪ್ರಶ್ನೆಗೆ ಅಂಬಿಯ ಪ್ರತಿಕ್ರಿಯೆ ಹೀಗಿತ್ತು

    ಪತ್ನಿಗೆ ಕಂಡೀಷನ್ ಹಾಕ್ತೀರಾ ಪ್ರಶ್ನೆಗೆ ಅಂಬಿಯ ಪ್ರತಿಕ್ರಿಯೆ ಹೀಗಿತ್ತು

    – ವ್ಯಕ್ತಿ ಸತ್ತಾಗ ನೋಡದನ್ನ, ಬದುಕಿದ್ದಾಗ ನೋಡಿದವ ನಾನು ಪುಣ್ಯವಂತ

    ಬೆಂಗಳೂರು: “ನಾನು ಎಂದು ಪತ್ನಿ ಸುಮಾಗೆ ಕಂಡಿಷನ್ ಹಾಕಲ್ಲ. ಹಾಕೋದು ಇಲ್ಲ” ಹೀಗಂತ ಹೇಳಿದ್ದು ರೆಬೆಲ್ ಸ್ಟಾರ್ ಅಂಬರೀಶ್.

    ಈ ಹಿಂದೆ ಪಬ್ಲಿಕ್ ಟಿವಿಗೆ ಆಗಮಿಸಿದ್ದ ವೇಳೆ ಅಂಬಿಗೆ, ನೀವು ಪತ್ನಿ ಸುಮಲತಾರಿಗೆ ಕಂಡೀಷನ್ ಹಾಕ್ತೀರಾ ಎಂಬ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನಾನೆಂದು ಕಂಡೀಷನ್ ಹಾಕಿಲ್ಲ, ಹಾಕೋದಿಲ್ಲ. ನೋ ಚಾನ್ಸ್. ಆಕೆಯೊಂದಿಗೆ 25 ವರ್ಷ ಸಂಸಾರ ಮಾಡಿದ್ದೇನೆ. ನಾನು ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಕುಳಿತಿದ್ದೇನೆ. ಆಕೆ ಹೈದರಾಬಾದ್ ನಲ್ಲಿ ನಡೆಯುತ್ತಿರುವ ಶೂಟಿಂಗ್ ನಲ್ಲಿ ಬ್ಯೂಸಿ ಆಗಿದ್ದಾಳೆ. ಒಬ್ಬರ ಮೇಲೆ ನಂಬಿಕೆ ಇದ್ದರೆ ಅವರಿಗೆ ಗಂಡ-ಹೆಂಡ್ತಿ ಅಂತಾರೆ ಎಂದು ಉತ್ತರಿಸಿದ್ದರು.

    ನಮ್ಮ ಕಾಲದಲ್ಲಿ ಪ್ರೇಮಿಗಳ ದಿನ ಅಂತಾ ಇರಲಿಲ್ಲ. ಇವಾಗಿನವರು ವಾಲೆಂಟೈನ್ ಡೇ ಅಂತಾ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ನಾವು ಒಂದು ದಿನ ಪ್ರೇಮಿಗಳ ದಿನ ಅಂತಾ ಆಚರಣೆ ಮಾಡಿಲ್ಲ. ಪ್ರತಿದಿನ ನಾವು ಒಬ್ಬರನ್ನೊಬ್ಬರು ಪ್ರೀತಿಸುತ್ತೇವೆ. ಒಂದು ದಿನ ಲವ್ ಮಾಡಿದ್ರೆ ಗಂಡ-ಹೆಂಡತಿ ಆಗಲ್ಲ, ಪ್ರತಿದಿನ ಅವರಲ್ಲಿ ಪ್ರೀತಿ ಇರಬೇಕು. ಆದರೆ ಪ್ರೇಮಿಗಳ ದಿನದಂದು ಹೂಗಳು ತುಂಬಾ ಖರ್ಚು ಆಗುತ್ತೆ ಎಂಬುವುದು ನನಗೆ ಗೊತ್ತಿದೆ ಎಂದು ಹೇಳಿ ನಗೆ ಚಟಾಕಿ ಹಾರಿಸಿದ್ದರು.

    ಮದುವೆಯ 25ನೇ ವಾರ್ಷಿಕೋತ್ಸವದಲ್ಲಿ ಯಾರೋ ಒಂದು ಹೂ ತಂದುಕೊಟ್ಟಿದ್ದಕ್ಕೆ, ಕೆಳಗೆ ಕುಳಿತು ಕೊಟ್ಟಿದ್ದೇನೆ. ಇದೇ ಬಣ್ಣ ಅಂತೇನಿಲ್ಲ. ನಮ್ಮ ಜೀವನದ ಪ್ರತಿ ದಿನವೂ ನಾವು ಚೆನ್ನಾಗಿಯೇ ಇದ್ದೇವೆ. ಸ್ವೀಟ್ ಮೆಮೊರಿ ಅಂತಾ ಸಿಕ್ಕಾಪಟ್ಟೆ ಇವೆ ಅಂತ ಹೇಳಿದ್ದಾರೆ.

    ವ್ಯಕ್ತಿ ಸಾವನ್ನಪ್ಪಿದಾಗ ಆತನ ಅಂತ್ಯಸಂಸ್ಕಾರ ಎಷ್ಟು ಜನರು ಸೇರ್ತಾರೆ ಎಂಬ ಲೆಕ್ಕಾಚಾರದಲ್ಲಿ ವ್ಯಕ್ತಿತ್ವವನ್ನು ಲೆಕ್ಕ ಹಾಕಲಾಗುತ್ತದೆ. ಬದುಕಿರುವಾಗ ವ್ಯಕ್ತಿಗೆ ತಾನು ಮಾಡಿದ ಆಸ್ತಿ, ಹಣ, ಕಟ್ಟಡ ಕಾಣುತ್ತೆ, ಪ್ರೀತಿ ಕಾಣಲ್ಲ ಅಂತಾ ಹೇಳುವುದುಂಟು. ನನ್ನ ಜೀವನ ತುಂಬಾ ವಿಭಿನ್ನವಾಗಿದ್ದು, ಸಿಂಗಾಪುರದಿಂದ ಚಿಕಿತ್ಸೆ ಪಡೆದು ಬಂದಾಗ ನಾನೇ ಮಂಡ್ಯಕ್ಕೆ ಬರ್ತೀನಿ ಅಂತಾ ಮೊದಲೇ ಹೇಳಿದೆ. ನನ್ನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ನನ್ನ ಹಿಂದೆ ಸುಮಲತಾ ನಿಂತಿದ್ದಳು. ಇನ್ನು ಕೆಂಗೇರಿಯಿಂದ ಮಂಡ್ಯ ಹೋಗುವ ಮಾರ್ಗದ ಉದ್ದಕ್ಕೂ ಅಭಿಮಾನಿಗಳು ನನ್ನನ್ನು ನೋಡಲು ನಿಂತಿದ್ದರು. ಅಂದು ಜೀವನದಲ್ಲಿ ನಾನು ಸಂಪಾದಿಸಿದ್ದು ಏನು ಅಂತಾ ಗೊತ್ತಾಯಿತು. ನನ್ನ ಆರೋಗ್ಯ ಸುಧಾರಿಸಲಿ ಎಂದು ಇಡೀ ರಾಜ್ಯಾದ್ಯಂತ ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆ ಮಾಡಿದ್ದಾರೆ. ವ್ಯಕ್ತಿ ಸತ್ತ ಮೇಲೆ ನೋಡುವುದನ್ನು ನಾನು ಬದುಕಿದಾಗ ನೋಡಿದ್ದೇನೆ ಎಂದು ಹೇಳಿ ಒಂದು ಕ್ಷಣ ಅಂಬರೀಶ್ ಭಾವುಕರಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಶಾಸಕ ಕದಮ್ ನಾಲಗೆ ಕತ್ತರಿಸಿದ್ರೆ 5 ಲಕ್ಷ ರೂ. ಬಹುಮಾನ: ಕಾಂಗ್ರೆಸ್ ನಾಯಕ ಘೋಷಣೆ

    ಬಿಜೆಪಿ ಶಾಸಕ ಕದಮ್ ನಾಲಗೆ ಕತ್ತರಿಸಿದ್ರೆ 5 ಲಕ್ಷ ರೂ. ಬಹುಮಾನ: ಕಾಂಗ್ರೆಸ್ ನಾಯಕ ಘೋಷಣೆ

    ಮುಂಬೈ: ಹುಡುಗಿಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮನಾಥ್ ಕದಮ್ ನಾಲಗೆ ಕತ್ತರಿಸಿದರೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸುಬೋಧ್ ಸವ್ಜಿ ಹೇಳಿದ್ದಾರೆ.

    ರಾಮನಾಥ್ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಹೀಗಾಗಿ ಅವರ ನಾಲಗೆಯನ್ನು ಕತ್ತರಿಸಲು ಮುಂದೆ ಬರುವವರಿಗೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಸುಭೋಧ್ ಸವ್ಜಿ ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಮನಾಥ್ ಕದಮ್ ತಮ್ಮ ಹೇಳಿಕೆ ಕುರಿತು ಸ್ಪಷ್ಟಿಕರಣ ನೀಡಿ, ಕ್ಷಮೆ ಕೇಳಿದ್ದಾರೆ. ಆದರೂ ಸುಬೋಧ್ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ ಎಂದು ವರದಿಯಾಗಿದೆ.

    ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡುವಂತೆ ಶಾಸಕ ರಾಮನಾಥ್ ಅವರಿಗೆ ಮಹಾರಾಷ್ಟ್ರ ಮಹಿಳಾ ಆಯೋಗವು ನೋಟಿಸ್ ನೀಡಿದೆ. ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಮ್ ಕದಮ್, ಸಾರ್ವಜನಿಕ ಕಾರ್ಯಕ್ರಮದಲ್ಲಿ ಎಲ್ಲರೂ ಸಂತೋಷದಿಂದ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಸ್ಥಳೀಯ ಯುವಕರನ್ನು ಕುರಿತು ಮಾತನಾಡಿದ್ದೇನೆ. ಆದರೆ ವೈರಲ್ ಆಗಿರುವ ವಿಡಿಯೋದಲ್ಲಿ ನಾನು ಮಾತನಾಡಿದ ಹಿಂದಿನ ಹಾಗೂ ಮುಂದಿನ ದೃಶ್ಯಗಳನ್ನು ಕಟ್ ಮಾಡಿ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದರು.

    ರಾಮನಾಥ್ ಕದಮ್ ಹೇಳಿದ್ದೇನು?
    `ದಹೀ ಹಂಡಿ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಿದ್ದರು. ಜನತೆಯನ್ನು ಕುರಿತು ಮಾತನಾಡುವಾಗ ಸ್ಥಳದಲ್ಲಿದ್ದ ಯುವಕನೋರ್ವ, ನಾನು ಒಬ್ಬ ಹುಡುಗಿಗೆ ಪ್ರಪೋಸ್ ಮಾಡಿರುವೆ. ಆದರೆ ಆಕೆ ಒಪ್ಪುತ್ತಿಲ್ಲ. ಈ ವಿಚಾರದಲ್ಲಿ ನನಗೆ ನಿಮ್ಮ ಸಹಾಯ ಬೇಕಿದೆ ಅಂತಾ ಮನವಿ ಮಾಡಿಕೊಂಡಿದ್ದನು. ಆಗ ರಾಮನಾಥ್ ಅವರು, ‘ಹುಡುಗಿಯರು ನಿಮ್ಮ ಪ್ರೀತಿಯನ್ನು ಒಪ್ಪಿಕೊಂಡಿಲ್ಲ ಅಂದ್ರೆ ನನಗೆ ಹೇಳಿ, ಆಕೆಯನ್ನು ಕಿಡ್ನಾಪ್ ನಾನು ಸಹಾಯ ಮಾಡುತ್ತೇನೆ’ ಎಂದಿದ್ದರು.

    ನಾನು ನಿನಗೆ ನೂರಕ್ಕೆ ನೂರರಷ್ಟು ಸಹಾಯ ಮಾಡುತ್ತೇನೆ. ಮೊದಲು ನನ್ನೊಂದಿಗೆ ನಿನ್ನ ಪೋಷಕರನ್ನು ಭೇಟಿ ಮಾಡಿಸು. ಅಲ್ಲಿ ಅವರು ಒಪ್ಪಿಕೊಂಡರೆ ಮುಂದೆ ಏನು ಮಾಡಬೇಕೆಂದು ನಿರ್ಣಯಿಸಬಹುದು ಅಂತಾ ಹೇಳಿದ್ದರು. ಇದೇ ಗುಂಪಿನಲ್ಲಿ ಮತ್ತೊಬ್ಬ ಯುವಕ, ಹಾಗಾದರೆ ನಾವು ಪ್ರೀತಿಸಿದ ಹುಡುಗಿ ಜೊತೆ ನಮ್ಮ ಮದುವೆ ಮಾಡಿಸುತ್ತೀರಾ ಎಂದು ಪ್ರಶ್ನಿಸಿದ್ದರು. ಕೂಡಲೇ ಶಾಸಕರು, ಆಕೆಯನ್ನು ಅಪಹರಿಸಲು ನಿಮಗೆ ಸಹಾಯ ಮಾಡುತ್ತೇನೆ. ಬೇಕಾದ್ರೆ ಎಲ್ಲ ಯುವಕರು ನನ್ನ ಮೊಬೈಲ್ ನಂಬರ್ ತೆಗೆದುಕೊಳ್ಳಿ. ಯಾವುದೇ ಸಮಯದಲ್ಲಿ ನನಗೆ ಕರೆ ಮಾಡಿ ಸಹಾಯ ಕೇಳಬಹುದು ಎಂದು ತಮ್ಮ ಮೊಬೈಲ್ ನಂಬರ್ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಾನು ಹೋಗುವಾಗ ಎದ್ದು ನಿಂತು ನಮಸ್ಕಾರ ಮಾಡದ ವೃದ್ಧನಿಗೆ `ಕೈ’ ಮುಖಂಡನಿಂದ ಹಲ್ಲೆ

    ತಾನು ಹೋಗುವಾಗ ಎದ್ದು ನಿಂತು ನಮಸ್ಕಾರ ಮಾಡದ ವೃದ್ಧನಿಗೆ `ಕೈ’ ಮುಖಂಡನಿಂದ ಹಲ್ಲೆ

    ಕಲಬುರಗಿ: ತನ್ನ ಕಾರು ಬಂದಾಗ ಎದ್ದು ನಿಂತು ಮರ್ಯಾದೆ ಕೊಡದಿರುವುಕ್ಕೆ, ವೃದ್ಧನ ಮೇಲೆ ಕಾಂಗ್ರೆಸ್ ಮುಖಂಡನೋರ್ವ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಹಸನಾಪುರ ಗ್ರಾಮದಲ್ಲಿ ನಡೆದಿದೆ.

    ಅದೇ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೀತಾರಾಂ ಸುಬೇದಾರ್ ಗ್ರಾಮದಲ್ಲಿ ಹೋಗುವಾಗ ಲಕ್ಕಪ್ಪ ಎಂಬ ವೃದ್ಧ ಎದ್ದು ನಿಂತು ನಮಸ್ಕಾರ ಮಾಡಿಲ್ಲ. ಈ ಹಿಂದೆ ನೀನು ನನ್ನಿಂದ ಹಣ ಪಡೆದಿದ್ಯಾ ಅಂತ ಕುಟುಂಬ ನೆಪ ಹೇಳಿ ಸೀತಾರಂ ಹಾಗು ಆತನ ಅಳಿಯ ಇಂದ್ರಜೀತ್ ವೃದ್ಧನ ಮೇಲೆ ದರ್ಪ ತೋರಿಸಿದ್ದಾರೆ. ಈ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ತನ್ನ ಮೇಲೆ ದರ್ಪ ತೋರಿದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ದೂರು ಕೊಡುತ್ತೇನೆ ಅಂತ ಹೇಳಿದೆ. ಈ ವೇಳೆ ಅವರು ನಿನಗೆ ಯಾವ ಪಿಎಸ್‍ಐ ಪರಿಚಯ ಇದ್ರೂ ಅವನೇನೂ ಕಿತ್ಗೋಳ್ಳಕ್ಕಾಗಲ್ಲ, ನಾನು ಯಾರೂಂತ ನಿನಗೆ ಗೊತ್ತಿಲ್ಲ ಮಗನೇ ಅಂತ ಅವಾಜ್ ಹಾಕಿ ಮೂವರು ನನಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಅವರನ್ನು ತನ್ನ ಕಾರೊಳಗೆ ಹಾಕಿ ಕರೆದುಕೊಂಡು ಹೋದ್ರು ಅಂತ ಹಲ್ಲೆಗೊಳಗಾದ ವೃದ್ಧ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.

    ದರ್ಪ ಮೆರೆದ ಕಾಂಗ್ರೆಸ್ ಮುಖಂಡ ಜೇವರ್ಗಿ ಶಾಸಕ ಅಜಯ್ ಸಿಂಗ್ ಮತ್ತು ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ ಬೆಂಬಲಿಗನಾಗಿದ್ದಾನೆ ಎನ್ನಲಾಗಿದೆ. ಸದ್ಯ ಹಲ್ಲೆಗೆ ಒಳಗಾದ ವೃದ್ಧ ಕಲಬುರಗಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    https://www.youtube.com/watch?v=MUcR_NmTNDM