Tag: Congress Manifesto

  • ಮಹಿಳೆಯರಿಗೆ 3,000 ರೂ., ನಿರುದ್ಯೋಗ ಯುವಕ, ಯುವತಿಯರಿಗೆ 4,000 ರೂ. ಭತ್ಯೆ; ಕಾಂಗ್ರೆಸ್‌ ʻಮಹಾʼ ಗ್ಯಾರಂಟಿ!

    ಮಹಿಳೆಯರಿಗೆ 3,000 ರೂ., ನಿರುದ್ಯೋಗ ಯುವಕ, ಯುವತಿಯರಿಗೆ 4,000 ರೂ. ಭತ್ಯೆ; ಕಾಂಗ್ರೆಸ್‌ ʻಮಹಾʼ ಗ್ಯಾರಂಟಿ!

    ಮುಂಬೈ: ಇದೇ ನವೆಂಬರ್‌ 20ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗಾಗಿ (Maharashtra Poll) ಹಿನ್ನೆಲೆ ಕಾಂಗ್ರೆಸ್‌, ಶಿವಸೇನಾ (Shiv Sena) (ಉದ್ಧವ್‌ ಠಾಕ್ರೆ ಬಣ), NCP (ಶರದ್‌ ಪವಾರ್‌ ಬಣ) ಮಹಾ ವಿಕಾಸ್‌ ಅಘಾಡಿ (MVA) ಮೈತ್ರಿ ಕೂಟವೂ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

    ಮೈತ್ರಿಕೂಟವು ಕರ್ನಾಟಕದ ಮಾದರಿಯಲ್ಲೇ ಹಲವು ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಮಹಾರಾಷ್ಟ್ರದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪ್ರಣಾಳಿಕೆಯನ್ನು (Manifesto) ಬಿಡುಗಡೆಗೊಳಿಸಿದ್ದಾರೆ. ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೊದಲ 100 ದಿನಗಳ ಕಾರ್ಯಸೂಚಿಯನ್ನು ಹಾಕಿಕೊಂಡಿದೆ. ಇದನ್ನೂ ಓದಿ: ನರೇಂದ್ರ ಮೋದಿ ಸುಳ್ಳಿನ ಸರದಾರ – ಮಲ್ಲಿಕಾರ್ಜುನ ಖರ್ಗೆ ತೀವ್ರ ತರಾಟೆ

    ಏನೇನು ಗ್ಯಾರಂಟಿ?
    ಈ ಬಾರಿ ಮಹಾ ವಿಕಾಸ್‌ ಅಘಾಡಿ ಸರ್ಕಾರ ಅಧಿಕಾರಕ್ಕೆ ಬಂದರೆ ʻಮಹಾಲಕ್ಷ್ಮಿʼ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 3,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಮಹಿಳೆಯರಿಗೆ ಕರ್ನಾಟಕದ ಮಾದರಿಯಲ್ಲೇ ಉಚಿತ ಬಸ್‌ ಸೇವೆ, 500 ರೂ. ದರದಲ್ಲಿ ವಾರ್ಷಿಕ 6 ಸಿಲಿಂಡರ್‌ ವಿತರಣೆ ಮಾಡಲಾಗುವುದು. ಅಲ್ಲದೇ ಮಹಿಳೆಯರ ಸುರಕ್ಷತೆಗಾಗಿ ಬಲವಾದ ಕಾನೂನುಗಳನ್ನು ರೂಪಿಸುವುದು, 9 ರಿಂದ 16 ವರ್ಷ ವಯಸ್ಸಿನ ಹುಡುಗಿಉರಿಗೆ ಉಚಿತ ಗರ್ಭಕಂಠದ ಕ್ಯಾನ್ಸರ್‌ ಲಸಿಕೆ, ಪ್ರತಿ ತಿಂಗಳು 2 ದಿನಗಳ ರಜೆ ನೀಡಲಾಗುವುದು ಎಂದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.

    ರೈತರಿಗೆ ʻಮಹಾʼ ಭರವಸೆ:
    ರಾಜ್ಯದಲ್ಲಿ ರೈತರ ಆತ್ಮಹತ್ಯೆ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಸಿಗುವಂತೆ ಯೋಜನೆ ಜಾರಿಗೆ ತರಲಾಗುವು. ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿಯೊಂದನ್ನ ನೇಮಕ ಮಾಡಲಾಗುವುದು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲಾಗುವುದು, ಬೆಳೆ ವಿಮೆ ಯೋಜನೆಯನ್ನೂ ಜಾರಿಗೆ ತರಲಾಗುವುದು ಎಂದು ಕೂಟವು ಭರವಸೆ ನೀಡಿದೆ. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

    ಅಲ್ಲದೇ ನಿರುದ್ಯೋಗಿ ಯುವಕರಿಗೆ ಮಾಸಿಕ 4,000 ರೂ. ಭತ್ಯೆ ನೀಡಲಾಗುವುದು, ರಾಜ್ಯ ವಿದ್ಯಾರ್ಥಿವೇತನ ಯೋಜನೆಗಳನ್ನು ವಿಸ್ತರಿಸಲಾಗುವುದು. ಆರೋಗ್ಯ ವಿಮಾ ಪಾಲಿಸಿಯನ್ನು ವಿಸ್ತರಿಸಲಾಗುವುದು. ಸಾಮಾಜಿಕ ನ್ಯಾಯದ ಅಡಿಯಲ್ಲಿ ಜಾತಿ ಜನಗಣತಿ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಇದೇ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಳೆದ 10 ವರ್ಷಗಳಿಂದ ಬಿಜೆಪಿ ಮತ್ತು ಮಹಾಯುತಿ ಮೈತ್ರಿಕೂಟ ಈ ರಾಜ್ಯಕ್ಕೆ ದ್ರೋಹ ಬಗೆದಿದೆ. ಚುನಾವಣೆ ಬಂದಿದೆ ಅಂತ ರೈತರ ಸಾಲ ಮನ್ನಾ ಮಾಡುವುದಾಗಿ ಡೋಂಗಿ ಬಿಡುತ್ತಿದೆ. ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಚನ್ನಪಟ್ಟಣದ ಅಕಿಲ್ ಷಾ ಖಾದ್ರಿ ದರ್ಗಾ ಗುರುಗಳ ಭೇಟಿಯಾದ ಹೆಚ್‌ಡಿಡಿ – ಮೊಮ್ಮಗನ ಗೆಲ್ಲಿಸುವಂತೆ ಮುಸ್ಲಿಂ ಸಮುದಾಯಕ್ಕೆ ಮನವಿ

  • ನಿಮ್ಮ ಮಕ್ಕಳ ಆಸ್ತಿ ಉಳಿಯಬೇಕೋ, ಮುಸ್ಲಿಮರಿಗೆ ಸೇರಬೇಕೋ ನಿರ್ಧರಿಸಿ: ಅನುರಾಗ್‌ ಠಾಕೂರ್‌

    ನಿಮ್ಮ ಮಕ್ಕಳ ಆಸ್ತಿ ಉಳಿಯಬೇಕೋ, ಮುಸ್ಲಿಮರಿಗೆ ಸೇರಬೇಕೋ ನಿರ್ಧರಿಸಿ: ಅನುರಾಗ್‌ ಠಾಕೂರ್‌

    – ತುಕ್ಡೆ-ತುಕ್ಡೆ ಗ್ಯಾಂಗ್ ಸಿದ್ಧಾಂತವನ್ನ ಕಾಂಗ್ರೆಸ್‌ ಹೈಜಾಕ್‌ ಮಾಡಿದೆ ಎಂದ ಸಚಿವ

    ಶಿಮ್ಲಾ: ತುಕ್ಡೆ-ತುಕ್ಡೆ ಗ್ಯಾಂಗ್ (Tukde Tukde gang) ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ಸುತ್ತುವರಿದಿದೆ. ಅವರ ಸಿದ್ಧಾಂತವನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿದೆ. ನಿಮ್ಮ ಮಕ್ಕಳಿಗೆ ಸೇರಬೇಕಾದ ಆಸ್ತಿ ಅವರ ಬಳಿಯೇ ಉಳಿಯಬೇಕೋ ಅಥವಾ ಮುಸ್ಲಿಮರಿಗೆ ಸೇರಬೇಕೋ ಅನ್ನೋದನ್ನ ನೀವು ನಿರ್ಧರಿಸಬೇಕು ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ಹೇಳಿದ್ದಾರೆ.

    ಹಿಮಾಚಲ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ (Congress Manifesto) ಸಿದ್ಧಪಡಿಸುವಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಸಂವಿಧಾನ ವಿರುದ್ಧವಾಗಿ ಒಬಿಸಿ ಮೀಸಲಾತಿ ಮುಸ್ಲಿಮರ ಪಾಲು – ಕಾಂಗ್ರೆಸ್‌ ವಿರುದ್ಧ ಮತ್ತೆ ಮೋದಿ ಕಿಡಿ

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನಿಮ್ಮ ಮಕ್ಕಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚುವುದು, ಈ ದೇಶದ ಅಣ್ವಸ್ತ್ರಗಳನ್ನು ನಾಶಪಡಿಸುವುದು, ಜಾತಿವಾದ ಮತ್ತು ಪ್ರಾದೇಶಿಕತೆಯ ಮೇಲೆ ದೇಶವನ್ನು ವಿಭಜನೆ ಮಾಡುವುದು, ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ದೇಶವನ್ನು ಆಳುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ನಾವು ಮುಸ್ಲಿಮರಿಗೆ (Muslims) ಎಲ್ಲಾ ಹಕ್ಕುಗಳನ್ನು ಸಮಾನವಾಗಿ ನೀಡಿದ್ದೇವೆ. ಆದ್ರೆ ಅದನ್ನು ಧರ್ಮದ ಆಧಾರದಲ್ಲಿ ನೀಡಿಲ್ಲ. ನಿಮ್ಮ ಮಕ್ಕಳ ಆಸ್ತಿ ನಿಮ್ಮ ಬಳಿ ಉಳಿಯಬೇಕೋ ಅಥವಾ ಮುಸ್ಲಿಮರ ಪಾಲಾಗಬೇಕೋ ನಿರ್ಧರಿಸಿ ಎಂದು ಎಚ್ಚರಿಸಿದ್ದಾರೆ.

    ಇತ್ತೀಚೆಗಷ್ಟೇ ಪ್ರಧಾನಿ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲ ವರ್ಗವನ್ನು ಒಬಿಸಿಗೆ ಸೇರಿಸಿ ಆದೇಶ ಹೊರಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮಾನ್ಯತೆ ನೀಡುವ ಮೂಲಕ ಒಬಿಸಿ ಜನರ ಅವಕಾಶಗಳನ್ನು ಕಳ್ಳತನದಿಂದ ಕಿತ್ತುಕೊಂಡಿದೆ. ಸಂವಿಧಾನ ಮತ್ತು ಕಾನೂನು ವಿರುದ್ಧವಾಗಿ ಒಬಿಸಿ ಮೀಸಲಾತಿಯನ್ನು ನೀಡಲಾಗಿದೆ. ಒಬಿಸಿ ಸಮುದಾಯಕ್ಕೆ ಸಿಗುವ ಲಾಭವನ್ನು ಲೂಟಿ ಮಾಡಿ ಮುಸ್ಲಿಮರಿಗೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

  • ಭೇಟಿಗೆ ಸಮಯ ಕೇಳಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

    ಭೇಟಿಗೆ ಸಮಯ ಕೇಳಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

    – 2 ಪುಟಗಳ ಪತ್ರದಲ್ಲಿ ಏನಿದೆ?

    ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿ ಮಾಡಲು ಸಮಯ ಕೇಳಿದ್ದಾರೆ.

    ಸುಮಾರು 2 ಪುಟಗಳ ಪತ್ರ ಬರೆದಿರುವ ಖರ್ಗೆ (Mallikarjun Kharge), ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.

    ಪ್ರಧಾನಿ ಮೋದಿ ನಮ್ಮ ಪ್ರಣಾಳಿಕೆ (Congress Manifesto) ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುವುದು ಬೇಡ. ಕಾಂಗ್ರೆಸ್‌ನ ‘ನ್ಯಾಯ ಪತ್ರ’ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಮತ್ತು ಎಲ್ಲಾ ಜಾತಿಗಳು ಮತ್ತು ಸಮುದಾಯಗಳ ಅಂಚಿನಲ್ಲಿರುವ ಜನರಿಗೆ ನ್ಯಾಯ ಒದಗಿಸುವ ಗುರಿಯನ್ನು ಹೊಂದಿದೆ. ಕೋಮು ವಿಭಜನೆಯನ್ನು ಸೃಷ್ಟಿಸುವುದು ನಿಮಗೆ ಅಭ್ಯಾಸವಾಗಿದೆ. ನೀವು ಈ ರೀತಿ ಮಾತನಾಡುವ ಮೂಲಕ ಕುರ್ಚಿಯ ಘನತೆಯನ್ನು ಕಡಿಮೆ ಮಾಡುತ್ತಿದ್ದೀರಿ ಎಂದು ಅವರು ಹೇಳಿದರು. ಇದನ್ನೂ ಓದಿ: ಮುಸ್ಲಿಮರ 4% ಮೀಸಲಾತಿ ಮುಂದುವರಿಸೋದಾಗಿ ಬಿಜೆಪಿ ಸುಪ್ರೀಂಗೆ ಹೇಳಿತ್ತು: ಸಿದ್ದರಾಮಯ್ಯ ತಿರುಗೇಟು

    ಪ್ರಧಾನಿಯವರು ತಮ್ಮ ಇತ್ತೀಚಿನ ಭಾಷಣಗಳಲ್ಲಿ ಬಳಸಿದ ಭಾಷೆಯಿಂದ ನನಗೆ ಆಘಾತವಾಗಲೀ ಅಥವಾ ಆಶ್ಚರ್ಯವಾಗಲೀ ಆಗಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಪ್ರದರ್ಶನವನ್ನು ನೋಡಿದ ನಂತರ ನೀವು ಮತ್ತು ನಿಮ್ಮ ಪಕ್ಷದ ಇತರ ನಾಯಕರು ಈ ರೀತಿ ಮಾತನಾಡಲು ಪ್ರಾರಂಭಿಸುತ್ತೀರಿ ಎಂದು ನಿರೀಕ್ಷಿಸಲಾಗಿತ್ತು ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

  • ತಾಲಿಬಾನ್‍ಗಳ ಪ್ರೇರಣೆ, ನಗರ ನಕ್ಸಲಿಯರ ಸಹಾಯದಿಂದ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದೆ: ಸಿಟಿ ರವಿ

    ತಾಲಿಬಾನ್‍ಗಳ ಪ್ರೇರಣೆ, ನಗರ ನಕ್ಸಲಿಯರ ಸಹಾಯದಿಂದ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದೆ: ಸಿಟಿ ರವಿ

    – ಚುನಾವಣೆ ನಂತ್ರ ಜನರೇ ರಾಹುಲ್ ಗಾಂಧಿಗೆ ಕಡ್ಡಾಯ ರಜೆ ಕೊಡುತ್ತಾರೆ

    ಮೈಸೂರು: ಲೋಕಸಭಾ ಚುನಾವಣೆಯ (Loksabha Elections 2024) ಬಳಿಕ ದೇಶದ ಜನರೇ ರಾಹುಲ್ ಗಾಂಧಿಗೆ ಕಡ್ಡಾಯ ರಜೆ ಕೊಡುತ್ತಾರೆ. ತಾಲಿಬಾನ್ ಗಳ ಪ್ರೇರಣೆ ಹಾಗೂ ನಗರ ನಕ್ಸಲಿಯರ ಸಹಾಯದಿಂದ ಕಾಂಗ್ರೆಸ್ ತನ್ನ ಪ್ರಣಾಳಿಕೆ ಸಿದ್ಧಪಡಿಸಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ (CT Ravi) ಹೇಳಿಕೆ ಕೊಟ್ಟಿದ್ದಾರೆ.

    ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಅತೀ ಹೆಚ್ಚು ಅನುದಾನ, ತೆರಿಗೆ ಪಾಲು ಕೊಟ್ಟಿರುವುದು ಮೋದಿ ಸರ್ಕಾರ. ಚರ್ಚೆ ಬೇಕಾದರೆ ಕಾಂಗ್ರೆಸ್ ನಡೆಸಲಿ. ನಾವು ಕಾಂಗ್ರೆಸ್‍ನ ದೃಷ್ಟಿದೋಷ ನಿವಾರಿಸುತ್ತೇವೆ. ಕಾಂಗ್ರೆಸ್ ಗೆ ವಿಭಜನೆ ರೋಗ ಆವರಿಸಿದೆ. ದೇಶ ವಿಭಜಿಸುವ ರೋಗ ಕಾಂಗ್ರೆಸ್‍ಗೆ ಬಹು ಹಿಂದಿನಿಂದ ಇದೆ, ಈಗಲೂ ಇದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್‌ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್‌ ಪ್ರಣಾಳಿಕೆ

    ಕಾಂಗ್ರೆಸ್‍ಗೆ ಸವಾಲು: ಕಾಂಗ್ರೆಸ್ ಈ ಚುನಾವಣೆಯಲ್ಲಿ ಡಬಲ್ ಡಿಜಿಟ್ ಕೂಡ ದಾಟಲ್ಲ. ಹೀಗಾಗಿ ಇವರ ವಿಭಜನೆಯ ಯೋಚನೆ ಪ್ರಣಾಳಿಕೆಯಲ್ಲಿಯೇ ಸತ್ತು ಹೋಗುತ್ತದೆ. ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ನಡೆದ ಹಗರಣಗಳಿಗೆ ಕಾರಣರು ಯಾರು? ಮೋದಿ ರಾಜ್ಯಕ್ಕೆ ಕೊಟ್ಟ ತೆರಿಗೆ ಹಣ, ಅನುದಾನ ಎಷ್ಟು? ಮನಮೋಹನ್ ಸಿಂಗ್ ಸರ್ಕಾರ ರಾಜ್ಯಕ್ಕೆ ಕೊಟ್ಟಿದ್ದು ಎಷ್ಟು ಚರ್ಚೆಗೆ ಬನ್ನಿ. ನಾವು ಸಿದ್ಧ ಎಂದು ಸಿಟಿ ರವಿ ಸವಾಲೆಸೆದರು.

    ಸಿಎಂ ವಿರುದ್ಧ ಕಿಡಿ: ಮೈಸೂರು ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ಕೊಟ್ಟಿದ್ದೇವೆ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಾರನ್ನೋ ಕರೆದುಕೊಂಡು ಬಂದು ಇವನು ಒಕ್ಕಲಿಗ ಅಂದರೆ ಹೇಗೆ? ಸಂಸ್ಕಾರ ಇಲ್ಲದವರನ್ನು ಒಕ್ಕಲಿಗರು ನಾಯಕ ಅಂತಾ ಒಪ್ಪಿಕೊಳ್ಳಲ್ಲ. ಕಾಂಗ್ರೆಸ್ ನವರೇ ನಿಮ್ಮ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಲೂಸ್ ಟಾಕರ್ ಅಂತಾ ಹೇಳುತ್ತಿದ್ದಾರೆ. ನಿಮಗೆ ಗತಿ ಇಲ್ಲದೇ ನಾಲ್ಕು ಚುನಾವಣೆ ಸೋತವರನ್ನು ಮೈಸೂರು ಅಭ್ಯರ್ಥಿ ಮಾಡಿದ್ದೀರಿ. ಮಂತ್ರಿಗಳು ಬರಗೆಟ್ಟವರ ಥರ ಯಾವುದನ್ನು ಬಿಡದೆ ಎಲ್ಲದಕ್ಕೂ ಬಾಯಿ ಹಾಕುತ್ತಾ ಇರೋದು ಈ ಚುನಾವಣೆಯಲ್ಲಿ ಚರ್ಚೆ ಆಗುತ್ತೆ ಎಂದು ಸಿಟಿ ರವಿ ಹೇಳಿದರು.

  • ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ

    ನವದೆಹಲಿ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ (Muslim League) ಮುದ್ರೆಯನ್ನು ಹೊಂದಿದೆ, ಅದರಲ್ಲಿ ಎಡಪಂಥೀಯರ ಪ್ರಾಬಲ್ಯ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದ್ದಾರೆ.

    ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪ್ರಣಾಳಿಕೆಯು (Congress Manifesto) ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಚಿಂತನೆಗಳನ್ನೇ ಪ್ರತಿಬಿಂಬಿಸುತ್ತದೆ. ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆ ಹೊಂದಿದೆ ಮತ್ತು ಪ್ರಣಾಳಿಕೆಯ ಉಳಿದ ಭಾಗವು ಎಡಪಂಥೀಯರ ಪ್ರಾಬಲ್ಯ ಹೊಂದಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ – ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಕಮಿಷನ್ ಗಳಿಸುವುದರ ಮೇಲೆ ಕೇಂದ್ರೀಕೃತವಾಗಿತ್ತು. I.N.D.I.A ಮೈತ್ರಿಕೂಟವೂ ಅಧಿಕಾರಕ್ಕೆ ಬಂದ ನಂತರ ಕಮಿಷನ್ ಗಳಿಸುವ ಗುರಿ ಹೊಂದಿದೆ. ಆದರೆ NDA ಮತ್ತು ಮೋದಿ ಸರ್ಕಾರವು ಮಿಷನ್‌ನಲ್ಲಿದೆ. ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದನ್ನು ತಡೆಯಲು ಪ್ರತಿಪಕ್ಷಗಳು ಹೋರಾಡುತ್ತಿವೆ. ಸಮಾಜವಾದಿ ಪಕ್ಷವು ಪ್ರತಿ ಗಂಟೆಗೆ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್‌ನಲ್ಲಿ (Congress) ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಧೈರ್ಯ ಮಾಡುತ್ತಿಲ್ಲ. I.N.D.I.A ಒಕ್ಕೂಟವು ಅಸ್ಥಿರತೆ ಮತ್ತು ಅನಿಶ್ಚಿತತೆಗೆ ಸಮಾನಾರ್ಥಕವಾಗಿದೆ ಮತ್ತು ದೇಶದ ಜನರು ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಶಕ್ತಿ ವಿರುದ್ಧ ಹೋರಾಡುವ ಬಗ್ಗೆ ವಿರೋಧ ಪಕ್ಷಗಳ ಒಕ್ಕೂಟ ಮಾತನಾಡುತ್ತಿರುವುದು ದೇಶದ ದೌರ್ಭಾಗ್ಯ. ಶಕ್ತಿಯನ್ನು ಆರಾಧಿಸುವುದು ನಮ್ಮ ನೈಸರ್ಗಿಕ ಆಧ್ಯಾತ್ಮಿಕ ಜೀವನದ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್‌ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್‌ ಪ್ರಣಾಳಿಕೆ

    ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದ 8 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸಹರಾನ್‌ಪುರ್, ಕೈರಾನಾ, ಮುಜಾಫರ್‌ನಗರ, ಬಿಜ್ನೋರ್, ನಗೀನಾ, ಮೊರಾದಾಬಾದ್, ರಾಂಪುರ್ ಮತ್ತು ಪಿಲಿಭಿತ್ ನಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಬೆಳಗ್ಗೆದ್ದು ಸೆಲ್‌ ಕ್ಲೀನ್‌, ಯೋಗ ನಂತ್ರ 2 ಪೀಸ್‌ ಬ್ರೆಡ್-‌ ಜೈಲಲ್ಲಿರೋ ಕೇಜ್ರಿವಾಲ್‌ ದಿನಚರಿ ಹೇಗಿದೆ?

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು
    – ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ (ರೈಲು ಮತ್ತು ರಸ್ತೆ) ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮರುಜಾರಿ
    – ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು/ಆಸ್ಪತ್ರೆ
    – ಆಶಾ,ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕೇಂದ್ರದ ಪಾಲು ದ್ವಿಗುಣ
    – 2500ಕ್ಕಿಂತ ಜನಸಂಖ್ಯೆ ಜಾಸ್ತಿ ಇರುವ ಹಳ್ಳಿಗಳಲ್ಲಿ ಎರಡನೇ ಆಶಾ ಕಾರ್ಯಕರ್ತೆ ನೇಮಕ
    – 12ನೇ ತರಗತಿಯವರೆಗೆ ಮಧ್ಯಾಹ್ನದ ಬಿಸಿಯೂಟ
    – ರಾಜ್ಯಗಳ ಜೊತೆ ಚರ್ಚಿಸಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಬದಲಾವಣೆ
    – ಪಬ್ಲಿಕ್ ಶಾಲೆಗಳಲ್ಲಿ ಸ್ಪೆಷಲ್‌ ಫೀಸ್ ಗಳು ರದ್ದು
    – ಶಿಕ್ಷಕರನ್ನು ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಲ್ಲ
    – ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳ ಸಂಖ್ಯೆ ರಾಜ್ಯಗಳ ಜೊತೆ ಚರ್ಚಿಸಿ ಹೆಚ್ಚಳ
    – ಪ್ರತಿ ತಾಲೂಕಿನಲ್ಲಿ ಸರ್ಕಾರಿ ಕಮ್ಯುನಿಟಿ ಕಾಲೇಜು (ಹಾಸ್ಪಿಟಾಲಿಟಿ, ಪ್ರವಾಸೋದ್ಯಮ, ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್ ಇತ್ಯಾದಿ ಕಲಿಕೆ)
    – 9 ರಿಂದ 12ನೇ ತರಗತಿಯ ಮಕ್ಕಳಿಗೆ ಮೊಬೈಲ್ ಫೋನ್ (ಶಾಲೆ, ಕಾಲೇಜು ಕ್ಯಾಂಪಸ್‌ನಲ್ಲಿ ಉಚಿತ ಅನ್ ಲಿಮಿಟೆಡ್ ಇಂಟರ್‌ನೆಟ್)
    – 21 ವರ್ಷದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.ಗಳ ಕ್ರೀಡಾ ಸ್ಕಾಲರ್ ಶಿಪ್
    – ಮಹಾಲಕ್ಷ್ಮಿ ಯೋಜನೆಯಡಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ.
    – ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ
    – ಮಹಿಳೆಯರು ಇಲ್ಲದಿದ್ದರೆ ಕುಟುಂಬದ ಅತಿ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ
    – ವಿವಿಧ ಹಂತಗಳಲ್ಲಿ ಮಹಾಲಕ್ಷ್ಮಿ ಯೋಜನೆ ಜಾರಿ. ಬಡತನ ನಿರ್ಮೂಲನೆಗೆ ಸಹಾಯವಾಗಿದೆಯಾ ಎಂದು ಕಾಲಕಾಲಕ್ಕೆ ಯೋಜನೆಯ ಅವಲೋಕನ
    – ಮಹಿಳಾ ಮೀಸಲಾತಿ 2025ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೇ ಜಾರಿ
    – 2025ರಿಂದ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಜಾರಿ
    – ಒಂದು ದೇಶ, ಒಂದು ಚುನಾವಣೆ ತಿರಸ್ಕಾರ
    – ಇವಿಎಂ ಮೂಲಕವೇ ಮತದಾನ ನಡೆಯಬೇಕು. ಆದರೆ ಬ್ಯಾಲಟ್ ಪೇಪರ್ ನಲ್ಲಿ ಪಾರದರ್ಶಕತೆ. ಮತದಾರನೇ ತನ್ನ ಕೈಯಾರೆ ಇವಿಎಂ ಮತದಾನದ ಬಳಿಕ ಯಂತ್ರವು ನೀಡುವ ವೋಟರ್ ಸ್ಲಿಪ್ ವಿವಿಪ್ಯಾಟ್ ಯೂನಿಟ್ ಗೆ ಹಾಕಲು ವ್ಯವಸ್ಥೆ. ಎಲೆಕ್ಟ್ರಾನಿಕ್ ವೋಟ್ ಮತ್ತು ವಿವಿಪ್ಯಾಟ್ ಸ್ಲಿಪ್ ಟ್ಯಾಲಿ ಆಗಲೇಬೇಕು.
    – ಶಾಸಕ ಅಥವಾ ಸಂಸದ ಪಕ್ಷ ಬದಲಾಯಿಸಿದರೆ (ಗೆದ್ದ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋದರೆ) ಆಟೋಮ್ಯಾಟಿಕ್ ಆಗಿ ಶಾಸಕ ಅಥವಾ ಸಂಸದನ ಸ್ಥಾನ ಅನರ್ಹತೆ. ಇದಕ್ಕಾಗಿ 10ನೇ ಶೆಡ್ಯೂಲ್‌ಗೆ ತಿದ್ದುಪಡಿ.

  • ಲೋಕಸಭೆ ಚುನಾವಣೆ 2024 – ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ

    ಲೋಕಸಭೆ ಚುನಾವಣೆ 2024 – ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ

    ನವದೆಹಲಿ: 2024ರ ಲೋಕಸಭಾ ಚುನಾವಣೆಗೆ (Lok Sabha Elections) ತಯಾರಿ ಶುರು ಮಾಡಿರುವ ಕಾಂಗ್ರೆಸ್‌ (Congress) ಪಕ್ಷವು ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದಲ್ಲಿ 16 ಜನರ ಪ್ರಣಾಳಿಕೆ ಸಮಿತಿಯನ್ನ ಪ್ರಕಟ ಮಾಡಿದೆ. ಪ್ರಣಾಳಿಕೆಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿದೆ.

    ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆಯ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಅವರು, ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷವು ಶೀಘ್ರದಲ್ಲೇ ಸಮಿತಿಗಳನ್ನು ರಚಿಸಲಿದೆ ಎಂದು ಹೇಳಿದ್ದರು. ಲೋಕಸಭೆ ಸ್ಥಾನಕ್ಕೆ ವೀಕ್ಷಕರನ್ನು ನೇಮಿಸುವುದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷವು ಸ್ಕ್ರೀನಿಂಗ್ ಸಮಿತಿ ಸಹ ರಚಿಸುವುದಾಗಿ ಅವರು ತಿಳಿಸಿದ್ದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳೆಗೆ ಬಿಜೆಪಿ ಸೇರ್ತಾರಾ ಜನಾರ್ದನ ರೆಡ್ಡಿ?

  • ಅತ್ತೆ-ಸೊಸೆ ಜಗಳವಾಡುವ ಕೆಲಸವನ್ನು ಕಾಂಗ್ರೆಸ್ ಪ್ರಣಾಳಿಕೆ ಮಾಡಿದೆ: ಸಿಎಂ ಇಬ್ರಾಹಿಂ

    ಅತ್ತೆ-ಸೊಸೆ ಜಗಳವಾಡುವ ಕೆಲಸವನ್ನು ಕಾಂಗ್ರೆಸ್ ಪ್ರಣಾಳಿಕೆ ಮಾಡಿದೆ: ಸಿಎಂ ಇಬ್ರಾಹಿಂ

    ರಾಮನಗರ: ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಅತ್ತೆ-ಸೊಸೆ ಜಗಳವಾಡುವ ಕೆಲಸ ಮಾಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ವ್ಯಂಗ್ಯವಾಡಿದ್ದಾರೆ.

    ಚನ್ನಪಟ್ಟಣ (Channapatna) ದ ಶೇರು ಸರ್ಕಲ್ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಜರಂಗದಳ (Bajarangdal) ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಐದು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಜರಂಗದಳ ನೆನಪಾಗಲಿಲ್ವಾ.? ಸರ್ವಜನಾಂಗದ ಶಾಂತಿಯ ತೋಟ ಮಾಡಬೇಕು ಅಂದ್ರೆ ಅದು ಜೆಡಿಎಸ್ (JDS) ನಿಂದ ಮಾತ್ರ ಸಾಧ್ಯ ಎಂದರು.

    ಕಾಂಗ್ರೆಸ್ ಪ್ರಣಾಳಿಯಲ್ಲಿ ಜೆಡಿಎಸ್ ಪ್ರಣಾಳಿಕೆ ಅಂಶ ಕಾಪಿಮಾಡಿರುವ ವಿಚಾರಕ್ಕೆ ರಿಯಾಕ್ಟ್ ಮಾಡಿ, ಅದು ನೂರಕ್ಕೆ ನೂರರಷ್ಟು ಸತ್ಯ. ಅವರು ನಮ್ಮನ್ನೇ ಅನುಕರಣೆ ಮಾಡಬೇಕು. ಅದನ್ನ ಬಿಟ್ರೆ ಹೇಳೋಕೆ ಬೇರೆ ಏನಿದೆ?. ಎಕರೆಗೆ 10 ಸಾವಿರ, ಒಂದು ಮನೆಗೆ 2 ಸಾವಿರ ಕೊಡ್ತೀನಿ ಅಂತ ಹೇಳಿ ಅತ್ತೆ ಸೊಸೆಗೆ ಗಲಾಟೆ ತಂದಿಡ್ತಿದ್ದಾರೆ. ಅತ್ತೆಗೆ ಕೊಡ್ತಾರೋ, ಸೊಸೆಗೆ ಕೊಡ್ತಾರೋ. ಈಗ ನಾವು 65 ವರ್ಷ ವಯಸ್ಸಾದ ಮೇಲೆ 5 ಸಾವಿರ ಕೊಡ್ತೀವಿ ಅಂತ ಅಂದರು.

    ಜೆಡಿಎಸ್‍ಗೆ ವೋಟ್ ಹಾಕಿದ್ರೆ ಅದು ಕಾಂಗ್ರೆಸ್ ಗೆ ವೋಟ್ ಹಾಕಿದ ಹಾಗೆ ಎಂಬ ಮೋದಿ ಹೇಳಿಕೆ ಕುರಿತು ಮಾತನಾಡಿ, ಬಿಜೆಪಿ-ಕಾಂಗ್ರೆಸ್ ಇಬ್ರೂ ದಾಯಾದಿಗಳ ಮಕ್ಕಳು. ಜನಕ್ಕೆ ಎಲ್ಲವೂ ಗೊತ್ತಾಗುತ್ತೆ. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಕನ್ನಡ ನಾಡಿನ ಕನ್ನಡಿಗರು. ಕನ್ನಡಿಗರ ಸ್ವಾಭಿಮಾನ ಉಳಿಯಬೇಕು ಎಂದು ಹೇಳಿದರು. ಇದನ್ನೂ ಓದಿ: ನಾನು ಹಿಂದೂ, ನಾನು ಆಂಜನೇಯನ ಭಕ್ತ, ರಾಮನ ಭಕ್ತ, ಶಿವಭಕ್ತ – ಡಿಕೆಶಿ

    ಚನ್ನಪಟ್ಟಣಕ್ಕೆ ನೀರು ಕೊಟ್ಟಿದ್ದು ಯಾರು?, ಬೆಂಗಳೂರಿಗೆ ಕಾವೇರಿ ನೀರು ಕೊಟ್ಟಿದ್ದು ಯಾರು..?, 92 ವರ್ಷ ವಯಸ್ಸಾದರೂ ರಾಜ್ಯದ ಜನತೆಗೆ ಇಂದಿಗೂ ಹೋರಾಡುತ್ತಿದ್ದಾರೆ. ಚನ್ನಪಟ್ಟಣ ಕುಮಾರಸ್ವಾಮಿ ಕ್ಷೇತ್ರ. ಚನ್ನಪಟ್ಟಣ ಮತ್ತೊಮ್ಮೆ ಕರ್ನಾಟಕದ ಕಿರೀಟ ಆಗಬೇಕು. ದೇಶದ ಭೂಪಟದಲ್ಲಿ ಚನ್ನಪಟ್ಟಣ ರಾರಾಜಿಸಬೇಕು. ಅತ್ತೆ ಸೊಸೆ ಜಗಳವಾಡು ಕೆಲವಸನ್ನ ಕಾಂಗ್ರೆಸ್ ಪ್ರಣಾಳಿಕೆ ಮಾಡಿದೆ. ಯೋಗೇಶ್ವರ್ (Yogeshwar) ನೀನು ಯಾವ ಪಾರ್ಟಿಯಲ್ಲಿರು ಆದರೆ ಗೌಡರಿಗೆ ಗೌರವ ಕೊಡುವುದನ್ನ ಕಲಿ. ಮೋದಿ ರೀತಿ ನಾವು ರೋಡ್ ಶೋ ಮಾಡಲು ಸಾಧ್ಯವಿಲ್ಲ. ಹಳ್ಳಿ ಹಳ್ಳಿಯಲ್ಲೂ ನಾನು ಕುಮಾರಸ್ವಾಮಿ ಸುತ್ತಾಡಿದ್ದೇವೆ. ಮುಸ್ಲಿಮರು ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ ಎಂದು ಮನವಿ ಮಾಡಿಕೊಂಡರು.

    ಕುಮಾರಸ್ವಾಮಿ (HD Kumaraswamy) ಯನ್ನ ಬೆಂಬಲಿಸದರೆ ಮುಸ್ಲಿಂ ಪರ ನಿಲ್ಲಲಿದ್ದಾರೆ. ಮುಸ್ಲಿಮರಿಗೆ 4% ಮೀಸಲಾತಿ ಕೊಟ್ಟಿದ್ದು, ಹುಬ್ಬಳ್ಳಿ ಈದ್ಗಾ ಮೈದಾನ (Hubballi Idgha Maidan) ವಿವಾದ ಬಗ್ಗೆ ಹರಿಸಿದ್ದು ದೇವೇಗೌಡ್ರು. ಮೀಸಲಾತಿ, ಹಿಜಬ್, ಹಲಾಲ್ ನಿಷೇಧ ಹೇರುವುದನ್ನ ವಿರೋಧಿಸಿದ್ದು ಕುಮಾರಸ್ವಾಮಿ ಎಂದರು.

  • ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ – ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು

    ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ – ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು

    ಬೆಂಗಳೂರು: ನಿಮಗೆ ತಾಕತ್‌ ಇದ್ರೆ ಭಜರಂಗದಳ (Bajrang Dal) ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್‌ (Congress) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಸವಾಲು ಹಾಕಿದ್ದಾರೆ.

    ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿತು. ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ. ಇದನ್ನೂ ಓದಿ: ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ- ಕಾಂಗ್ರೆಸ್‍ನಿಂದ ಪ್ರಣಾಳಿಕೆ ರಿಲೀಸ್

    ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್‌ನ ವಿನಾಶ ಕಾಲ‌ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.

    ಆರ್‌ಎಸ್ಎಸ್‌ನ ಒಂದು ಭಾಗ ಬಿಜೆಪಿ. ಆರ್‌ಎಸ್ಎಸ್‌ನ ಯುವಕರ ದಳ ಭಜರಂಗದಳ. ಇವತ್ತು ಭಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟಿದೆ ಕಾಂಗ್ರೆಸ್. ದೇಶದ್ರೋಹಿ ಪಿಎಫ್ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

    ನೀವು PFIನ್ನು ಭಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಭಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ. ಆಗ ನಾವೂ ದೇಶಾದ್ಯಂತ ತೋರಿಸುತ್ತೇವೆ. ಭಜರಂಗದಳದ ನಿಷೇಧವನ್ನು‌ ಹಿಂದೂ ಸಮಾಜ ಒಪ್ಪಲ್ಲ. ಮುಸಲ್ಮಾನರ ಮುಖವಾಡ ಸಿದ್ದರಾಮಯ್ಯ ಅಂತ ನಾನು ಹಿಂದೆ ಹೇಳಿದ್ದೆ. ಅದು ಇವತ್ತು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

    ನಾನೂ ಭಜರಂಗದಳದ ಕಾರ್ಯಕರ್ತೆ. ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಗುಡುಗಿದ್ದಾರೆ.

  • ಆರ್ಥಿಕ ಸುಧಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನ ಕದ್ದೊಯ್ದು ಓದಲಿ: ಮೋದಿಗೆ ರಾಹುಲ್ ಗಾಂಧಿ ಟಾಂಗ್

    ಆರ್ಥಿಕ ಸುಧಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನ ಕದ್ದೊಯ್ದು ಓದಲಿ: ಮೋದಿಗೆ ರಾಹುಲ್ ಗಾಂಧಿ ಟಾಂಗ್

    ನವದೆಹಲಿ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತಕ್ಕೆ ಪರಿಹಾರ ಹುಡುಕುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಕದ್ದೊಯ್ಯಲಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾರತವು ಸಂಕಷ್ಟದಲ್ಲಿದೆ ಹಾಗೂ ಆರ್ಥಿಕತೆ ಹಳಿ ತಪ್ಪಿದೆ. ಕೇಂದ್ರ ಸರ್ಕಾರದ ಸುಳಿವು ಸಿಗುತ್ತಿಲ್ಲ. ಹೀಗಾದರೆ ಏನು ಮಾಡಬೇಕು? ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವಶ್ಯವಾಗಿ ಬೇಕಾದ ಯೋಜನೆಗಳು, ಪರಿಹಾರಗಳು ಕಾಂಗ್ರೆಸ್ ಪ್ರಣಾಳಿಕೆಯಲ್ಲಿವೆ. ಅದನ್ನು ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಕದ್ದೊಯ್ದು ಓದಬೇಕು ಎಂದು ವ್ಯಂಗ್ಯಾವಾಡಿದ್ದಾರೆ. ಇದನ್ನೂ ಓದಿ: ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ರಾಹುಲ್ ಗಾಂಧಿ

    ಹರ್ಯಾಣದ ಮಹೇಂದ್ರಘರ್ ನಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಥಶಾಸ್ತ್ರದ ಬಗ್ಗೆ ತಿಳುವಳಿಕೆ ಇಲ್ಲ. 2014ರ ನಂತರ ಯುಎಸ್‍ನ 2-3 ಪ್ರಸಿದ್ಧ ಅರ್ಥಶಾಸ್ತ್ರಜ್ಞರನ್ನು ಭೇಟಿಯಾಗಿದ್ದೆ. 2004-2014ರ ಅವಧಿಯಲ್ಲಿ ಭಾರತದ ಆರ್ಥಿಕತೆಯ ವೇಗದ ಬೆಳವಣಿಗೆಗೆ ಕಾರಣ ಮನ್ರೆಗಾ (ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ) ಹಾಗೂ ಕೃಷಿ ಸಾಲ ಮನ್ನಾ ಎಂದು ಅವರು ನನಗೆ ಮನವರಿಕೆ ಮಾಡಿದರು ಹೇಳಿದ್ದರು. ಇದನ್ನೂ ಓದಿ: ಆರ್ಥಿಕತೆ ಸರಿಪಡಿಸಲು ವಿಪಕ್ಷಗಳನ್ನ ದೂಷಿಸಿದ್ರೆ ಸಾಕಾಗಲ್ಲ: ಸೀತಾರಾಮನ್‍ಗೆ ಸಿಂಗ್ ತಿರುಗೇಟು

    ಇತ್ತ ಆರ್ಥಿಕ ಕುಸಿತದ ವಿಚಾರವಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗ ಭಾರತದ ಆರ್ಥಿಕ ನೀತಿ ವಿಚಾರದ ಬಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಉಪನ್ಯಾಸ ನೀಡಿದ್ದರು. ಈ ವೇಳೆ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವಧಿಯಲ್ಲಿ ಬ್ಯಾಂಕ್‍ಗಳು ದುಸ್ಥಿತಿಗೆ ತಲುಪಿದ್ದವು. ಈಗ ನಮ್ಮ ಸರ್ಕಾರ ಬ್ಯಾಂಕ್‍ಗಳಿಗೆ ಜೀವ ನೀಡಿ ಹೊಸ ಚೈತನ್ಯ ನೀಡುತ್ತಿದೆ ಎಂದು ತಿಳಿಸಿದ್ದರು.

    ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಮನಮೋಹನ್ ಸಿಂಗ್, ವಿತ್ತ ಸಚಿವರ ಹೇಳಿಕೆಗಳನ್ನು ನಾನು ನೋಡಿದ್ದೇನೆ. ಆ ವಿಚಾರವಾಗಿ ಟೀಕೆ ಮಾಡಲು ಇಷ್ಟಪಡುವುದಿಲ್ಲ. ಆದರೆ ಕೇಂದ್ರ ಸರ್ಕಾರ ಆರ್ಥಿಕ ಕುಸಿತದ ಸಮಸ್ಯೆಗೆ ಪರಿಹಾರ ಹುಡುಕುವುದರ ಬದಲು ವಿಪಕ್ಷಗಳ ವಿರುದ್ಧ ಆರೋಪ ಮಾಡುತ್ತಿದೆ. ಇದರಿಂದ ದೇಶದ ಆರ್ಥಿಕತೆಯ ಸುಧಾರಣೆ ಆಗುವುದಿಲ್ಲ ಎಂದು ಕುಟುಕಿದ್ದರು.

  • ಕಾಂಗ್ರೆಸ್‍ನಿಂದ ಚುನಾವಣಾ ಪ್ರಣಾಳಿಕೆ ರಿಲೀಸ್ – ರಾಜ್ಯದ ಜನತೆಗೆ ಭರವಸೆಗಳ ಮಹಾಪೂರ

    ಕಾಂಗ್ರೆಸ್‍ನಿಂದ ಚುನಾವಣಾ ಪ್ರಣಾಳಿಕೆ ರಿಲೀಸ್ – ರಾಜ್ಯದ ಜನತೆಗೆ ಭರವಸೆಗಳ ಮಹಾಪೂರ

    ಮಂಗಳೂರು: ಮುಂದಿನ ಐದು ವರ್ಷಗಳಿಗೆ ಕಾಂಗ್ರೆಸ್ ನ ಭರವಸೆ ಮತ್ತು ಮುನ್ನೋಟಗಳನ್ನು ಇಂದು ನಗರದ ಟಿಎಂಎಪೈ ಹಾಲ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕರು ಸೇರಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರು.
    2013ರ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದ ಶೇಕಡಾ 95ರಷ್ಟು ಕೆಲಸಗಳನ್ನು ಮಾಡಿದ್ದೇವೆ. ಎಲ್ಲ ಪಕ್ಷಗಳು ಕೂಡ ಚುನಾವಣೆ ಪೂರ್ವ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಆದ್ರೆ ಎಲ್ಲ ಪಕ್ಷಗಳಿಗಿಂತೂ ಕಾಂಗ್ರೆಸ್ ಸಂಪೂರ್ಣ ಭಿನ್ನವಾಗಿದೆ. ನಾವು ಬಜೆಟ್ ಮಂಡಿಸುವಾಗ ಪ್ರಣಾಳಿಕೆಯನ್ನು ಪಕ್ಕದಲ್ಲಿಟ್ಟುಕೊಂಡು ರಚಿಸುತ್ತೇವೆ. ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದ ಮೇಲೆ ಪ್ರಣಾಳಿಕೆಯನ್ನು ಕಸದ ಬುಟ್ಟಿಗೆ ಹಾಕುತ್ತವೆ ಅಂತಹ ಘಟನೆಗಳನ್ನು ನಾನು ನೋಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ರು.
    ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು:
    1. ಪ್ರತಿ ಮೂರು ಜಿಲ್ಲೆಗೂಂದು  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
    2. ಮುಂದಿನ 5 ವರ್ಷಗಳಲ್ಲಿ ಕೃಷಿಗೆ 1.25 ಕೋಟಿ ಹಣ ಮೀಸಲು.
    3. ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ.
    4. 75 ಟಿಎಂಸಿ ಕಾವೇರಿ ನೀರು ಸದ್ಬಳಕೆಗೆ ನೀಲ ನಕ್ಷೆ ರಚನೆ.
    5. ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತು.
     6. 2 ಸಾವಿರ ಜನಸಂಖ್ಯೆಯುಳ್ಳ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.
    7. ತಾಲೂಕು, ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಮುಂದಿನ ಬಜೆಟ್‍ನಲಿ ಹೆಚ್ಚಿನ ಅನುದಾನ ಮೀಸಲು.
    8. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ.
    9. ಪ್ರತಿ ಹಳ್ಳಿಗೂ 24 ಗಂಟೆ ವಿದ್ಯುತ್ ಪೂರೈಕೆಯ ಭರವಸೆ.
     10. ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ,ಪುನರ್ವಸತಿ ಭರವಸೆ.
    11. ಮುಂದಿನ 10 ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲಿ 10 ಲಕ್ಷ ಮನೆಗಳ ನಿರ್ಮಾಣದ ಗುರಿ.
    12. 2025ರೊಳಗೆ ನವಕರ್ನಾಟಕ ನಿರ್ಮಾಣಕ್ಕೆ ಒತ್ತು.
    13. ತಮಿಳುನಾಡು ಮಾದರಿಯಲ್ಲಿಯೇ ಕನ್ನಡಿಗರಿಗೆ ಉಚಿತ ಮಾಂಗಲ್ಯ ಭಾಗ್ಯ.
    14. ಚುನಾವಣೆಯಲ್ಲಿ ಗೆದ್ದರೆ 18 ವರ್ಷಗಳ ಕಾಲ ಉಚಿತ ಶಿಕ್ಷಣ ಭಾಗ್ಯ, ಈ ಮೊದಲು 10 ವರ್ಷಗಳಿಗೆ ಮಾತ್ರ ಆಗಿತ್ತು.
    15. ರಾಜ್ಯದಲ್ಲಿ  ಕೃಷಿ ಕಾರಿಡಾರ್ ನಿರ್ಮಾಣ