Tag: congress MLA

  • ಪ್ರದೀಪ್ ಈಶ್ವರ್ ಸಾಕು ತಾಯಿ ರತ್ನಮ್ಮ ನಿಧನ

    ಪ್ರದೀಪ್ ಈಶ್ವರ್ ಸಾಕು ತಾಯಿ ರತ್ನಮ್ಮ ನಿಧನ

    ಚಿಕ್ಕಬಳ್ಳಾಪುರ: ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ (Pradeep Eshwar) ಅವರ ಸಾಕು ತಾಯಿ ನಿಧನರಾಗಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ರತ್ನಮ್ಮ (72) (Rathnamma)ಅವರು ಇಂದು (ಶನಿವಾರ) ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ

    ತಾಯಿಯ ನಿಧನದ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಅವರು ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ.

    ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಬಳಿಕ ಪ್ರದೀಪ್ ಈಶ್ವರ್ ಅವರು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅಲ್ಲದೆ ಗುರುವಾರ ಬೆಳ್ಳಂಬೆಳಗ್ಗೆ ತಾಲೂಕಿನ ಮೈಲಪ್ಪನಹಳ್ಳಿಗೆ ಅಧಿಕಾರಿಗಳೊಂದಿಗೆ ಗ್ರಾಮದ ಮನೆ ಮನೆಗೂ ತೆರಳಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದರು.

  • ರಾಜಸ್ಥಾನದಲ್ಲಿ ಮತ್ತೆ ಆಪರೇಷನ್ ಕಮಲ ಭೀತಿ – ಕೈ ಶಾಸಕರು ರೆಸಾರ್ಟ್‍ಗೆ ಶಿಫ್ಟ್

    ರಾಜಸ್ಥಾನದಲ್ಲಿ ಮತ್ತೆ ಆಪರೇಷನ್ ಕಮಲ ಭೀತಿ – ಕೈ ಶಾಸಕರು ರೆಸಾರ್ಟ್‍ಗೆ ಶಿಫ್ಟ್

    ಜೈಪುರ: ರಾಜಸ್ಥಾನದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗಿದೆ. ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜಸ್ಥಾನದ ಕಾಂಗ್ರೆಸ್ ಅಡ್ಡ ಮತದಾನದ ಭೀತಿಯಿಂದ ತನ್ನ ಶಾಸಕರನ್ನು ಉದಯಪುರದ ಹೋಟೆಲ್‍ಗೆ ಸ್ಥಳಾಂತರಿಸಲು ನಿರ್ಧರಿಸಿದೆ.

    ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನವೇ ಬಿಜೆಪಿ ಆಪರೇಷನ್ ಕಮಲ ಪ್ರಾರಂಭಿಸುತ್ತದೆ ಎಂಬ ಆತಂಕದಿಂದ ರಾಜಸ್ಥಾನದಲ್ಲಿರುವ ತನ್ನ ಶಾಸಕರನ್ನು ಉದಯಪುರದ ಹೋಟೆಲ್‍ಗೆ ಕಾಂಗ್ರೆಸ್ ಶಿಫ್ಟ್ ಮಾಡಲಿದೆ.

    ಜೈಪುರದ ಕ್ಲಾರ್ಕ್ ಹೋಟೆಲ್‍ನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರ ಮುಗಿದ ನಂತರ ಗುರುವಾರ ಕಾಂಗ್ರೆಸ್ ತನ್ನ ಶಾಸಕರನ್ನು ಉದಯಪುರದ ಅರಾವಳಿ ರೆಸಾರ್ಟ್‍ಗೆ ಕರೆದೊಯ್ಯುವ ಸಾಧ್ಯತೆಯಿದೆ. ಅಲ್ಲದೆ ಪಕ್ಷೇತರ ಶಾಸಕರು ಮತ್ತು ಇತರ ಪಕ್ಷಗಳಿಗೆ ಸೇರಿದವರು ಹಾಗೂ ಆಡಳಿತ ಪಕ್ಷವನ್ನು ಬೆಂಬಲಿಸುವವರನ್ನು ಉದಯಪುರಕ್ಕೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ಹೇಳಿವೆ.

    ಮತ್ತೊಂದೆಡೆ ಹರಿಯಾಣ ಕಾಂಗ್ರೆಸ್ ಶಾಸಕರನ್ನೂ ಜೈಪುರಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ಜೈಸಲ್ಮೇರ್‍ನ ಸೂರ್ಯಗಢದಲ್ಲಿ 40 ಕೊಠಡಿಗಳನ್ನು ಬುಕ್ ಮಾಡಲಾಗಿದೆ. ನಾಳೆ ಬಿಜೆಪಿಯು ತನ್ನ ಶಾಸಕರನ್ನು ಹೊಟೇಲ್‍ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ:  ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್ – 2 ಬಾರಿ ಅಬಾರ್ಷನ್ ಮಾಡಿಸಿದ್ದ ರೇಖಾ

    bjp - congress

    ಬಲಾಬಲ ಹೇಗಿದೆ?
    ವಿಧಾನಸಭೆಯಲ್ಲಿ ಕಾಂಗ್ರೆಸ್ 108 ಶಾಸಕರ ಬಲವನ್ನು ಹೊಂದಿದ್ದು ನಾಲ್ಕು ಸ್ಥಾನಗಳ ಪೈಕಿ ಎರಡನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಅಭ್ಯರ್ಥಿ ಗೆಲ್ಲಲು 41 ಮತಗಳ ಅಗತ್ಯವಿದ್ದು 26 ಹೆಚ್ಚುವರಿ ಮತಗಳಿದ್ದು 3ನೇ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು 15 ಮತಗಳ ಕೊರತೆಯಿದೆ.

    ಬಿಜೆಪಿ 71 ಶಾಸಕರ ಬಲವನ್ನು ಹೊಂದಿದ್ದು 1 ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ನಂತರ 30 ಹೆಚ್ಚುವರಿ ಮತಗಳಿವೆ. ಹೀಗಾಗಿ ಅಡ್ಡ ಮತದಾನ ಭೀತಿ ಕಾಂಗ್ರೆಸ್ಸಿಗಿದೆ. ಇದನ್ನೂ ಓದಿ:  ಅಮೆರಿಕದ ಆಸ್ಪತ್ರೆ ಆವರಣದಲ್ಲಿಯೇ ಗುಂಡಿನ ದಾಳಿ – ನಾಲ್ವರು ಸಾವು

    13 ಪಕ್ಷೇತರ ಶಾಸಕರ ಪೈಕಿ ಮಂಗಳವಾರ 10 ಮಂದಿ ಜೊತೆ ಸಿಎಂ ಗೆಹ್ಲೋಟ್ ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

  • ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

    ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಭೂ ಕಬಳಿಕೆ ಆರೋಪದಡಿ ನ್ಯಾಯಾಲಯದ ಆದೇಶದ ಮೇರೆಗೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಹಾಗೂ ಸಹೋದರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಜಮೀರ್‌ ಹಾಗೂ ಸಹೋದರರ ವಿರುದ್ಧ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ವರ್ಷ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾರಿಂದ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್‌ ಮಾಲೀಕರು ಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡರ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲು

    ಚೊಕ್ಕನಹಳ್ಳಿ ಬಡಾವಣೆಯ ಸೈಟ್ ನಂ. 5, 6 ರ ವ್ಯಾಜ್ಯ ಸಂಬಂಧ ಜಮೀರ್ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2015 ರಲ್ಲಿ ಶಾಹಿತಾ ನಾಸೀನ್, ತಸೀಮಾ ಫಾತೀಮಾ ಅವರು ಜಮೀರ್ ಕುಟುಂಬಸ್ಥರಿಂದ ಸೈಟ್ ಖರೀದಿಸಿದ್ದರಂತೆ.‌ ಚಾಮರಾಜಪೇಟೆ ಶಾಸಕ ಜಮೀರ್ ಸಹೋದರ ಹಾಗೂ ಕುಟುಂಬಸ್ಥರೇ ಮಾರಾಟ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದ ಮತ್ತೊಂದು ಸೈಟ್ ಖರೀದಿಸಿದ್ದಾಗಿ ಶಾಹೀತಾ ನಾಸೀನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

    ಜೆಸಿ ನಗರ ನಿವಾಸಿಗಳಾಗಿದ್ದ ಶಾಹೀತಾ ನಾಸೀನ್ ಸೈಟ್‌ಗಳ ಕಡೆ ಗಮನ ಹರಿಸಿರಲಿಲ್ಲ. ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್‌ಗಳ ಕಬಳಿಕೆ ಯತ್ನಿಸಿದ್ದಾರೆ. ಅದನ್ನು ಪ್ರಶ್ನಿಸಿದ್ದಕ್ಕೆ ನಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಹೀತಾ ನಾಸೀನ್ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

    ಖಾಸಗಿ ದೂರು ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ಕಬಳಿಕೆ ಮಾಡಿರುವ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಕೋರ್ಟ್‌ ಆದೇಶಿಸಿದೆ. ಆದರೆ ಕೋರ್ಟ್‌ನಿಂದ ತಡೆಯಾಜ್ಞೆ ಬಂದರೂ ಜಮೀರ್‌ ಕುಟುಂಬಸ್ಥರು ಸೈಟ್‌ ಬಿಟ್ಟುಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ದೂರುದಾರರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

  • ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್

    ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್

    ಕಲಬುರಗಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ‌.

    ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಲ್ಲಿ ಮೂರು ದಿನಗಳ ಕಾಲ ಸಕ್ರಿಯವಾಗಿ ಭಾಗವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಸೋಂಕು ತಗುಲಿದ್ದು, ಅವರೊಟ್ಟಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವರಲ್ಲಿ ಆತಂಕ ಮನೆಮಾಡಿದೆ. ಸದ್ಯ ಸೋಂಕು ದೃಢಪಟ್ಟ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಹೋಂ ಐಸೋಲೇಷನ್​​ಲ್ಲಿದ್ದಾರೆ.

    ಈ ಕುರಿತು ಸ್ವತಃ ಶಾಸಕ ಪ್ರಿಯಾಂಕ್ ಖರ್ಗೆ ಅವರೇ ಟ್ವೀಟ್ ಮಾಡಿದ್ದಾರೆ. ಮೊದಲ ಹಾಗೂ ಎರಡನೇ ಅಲೆಯಲ್ಲಿ ನಾನು ಪಾರಾಗಿದ್ದೆ. ಅಲ್ಲದೇ ಒಮ್ಮೆ ಸುಳ್ಳು ಪಾಸಿಟಿವ್ ವರದಿ ಕೂಡಾ ಬಂದಿತ್ತು. ಜೊತೆಗೆ ಹಲವಾರು ಬಾರಿ ನೆಗೆಟಿವ್ ವರದಿ ನಂತರ ಈಗ ಪಾಸಿಟಿವ್ ವರದಿ ಬಂದಿದೆ. ನನ್ನ ಸಿಬ್ಬಂದಿಗೆ ಪರೀಕ್ಷೆ ಮಾಡಿದಾಗ ಅವರಿಗೆ ನೆಗೆಟಿವ್ ವರದಿ ಬಂದಿರುತ್ತದೆ‌ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ತಮ್ಮ ಜೊತೆ ಸಂಪರ್ಕ ಹೊಂದಿರುವ ಎಲ್ಲರೂ ಕೂಡಾ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಗೆದ್ದ ಒಂದು ತಿಂಗಳ ಮಗು – ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕಲಬುರಗಿ ‌ಜನಪ್ರತಿನಿಧಿಗಳಿಗೆ ಬೆಂಬಿಡದ ಕೋವಿಡ್
    ಈಗಾಗಲೇ ಅವರ ತಂದೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್​​​ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿತ್ತು. ಇನ್ನೊಂದೆಡೆ ಜೇವರ್ಗಿ ಶಾಸಕ ಡಾ.ಅಜಯ್​​ ಸಿಂಗ್, ಸೇಡಂ ಶಾಸಕ ರಾಜಕುಮಾರ್​ ಪಾಟೀಲ್ ತೇಲ್ಕೂರ್​​​ಗೂ ಸಹ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಇದನ್ನೂ ಓದಿ: ಪಾದಯಾತ್ರೆಯಲ್ಲಿ ಒಬ್ಬರಾದರೂ ಪೊಲೀಸರು ಕೆಲಸ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ

  • ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

    ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

    ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಮಾಜಿ ಸಚಿವ ರೋಷನ್ ಬೇಗ್ ಜಾರಿ ನಿರ್ದೇಶನಾಲಯದ ಬಂಧನದ ಭೀತಿಯಲ್ಲಿದ್ದಾರೆ. ಇಂದು ಬೆಳಗ್ಗೆ ಇಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

    ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡಿದ್ದರು. 2.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು 5 ಕೋಟಿ ರೂ.ಗೆ ಮಾರಿದ್ದರು. ಇದೇ ನಿವೇಶನ ಜಮೀರ್ ಅಹ್ಮದ್ ಅವರಿಗೆ ಕಂಟಕವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಸಂಬಂಧ ಎಸ್‍ಐಟಿ ಮತ್ತು ಸಿಬಿಐ ವಿಚಾರಣೆಗೂ ಜಮೀರ್ ಅಹ್ಮದ್ ಹಾಜರಾಗಿದ್ದರು. ಇದನ್ನೂ ಓದಿ: ಐಎಂಎ ದೋಖಾಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್-ಮನ್ಸೂರ್ ಖಾನ್ ಜೊತೆಗೆ ಸಚಿವ ಜಮೀರ್ ಗೂ ನಂಟು?

    ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯಲ್ಲಿರುವ ನೂತನ ಬಂಗಲೆ, ಯುಬಿಸಿಟಿಯಲ್ಲಿರು ಫ್ಲ್ಯಾಟ್, ಕಲಾಸಿಪಾಳ್ಯದಲ್ಲಿಯ ನ್ಯಾಷನಲ್ ಟ್ರಾವೆಲ್ ಕಚೇರಿ ಮತ್ತು ದೆಹಲಿ, ಮುಂಬೈನಲ್ಲಿರುವ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇತ್ತ ಜಮೀರ್ ಅಹ್ಮದ್ ನಿವಾಸದ ದಾಳಿಯ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯಾಹ್ನ 12 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಇದನ್ನೂ ಓದಿ: ಐಎಂಎ ಬಹುಕೋಟಿ ವಂಚನೆ ಪ್ರಕರಣ – ಮಾಜಿ ಸಚಿವ ಜಮೀರ್ ಗೆ ಭರ್ತಿ 10 ಗಂಟೆ ಡ್ರಿಲ್

  • ಐಟಿ ಅಲ್ಲ ಇಡಿ ದಾಳಿ – ಜಮೀರ್ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ

    ಐಟಿ ಅಲ್ಲ ಇಡಿ ದಾಳಿ – ಜಮೀರ್ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ

    – ಜಮೀರ್ ಅಹ್ಮದ್ ಇಡಿ ವಶಕ್ಕೆ

    ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಎಂಬ ಖಚಿತ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಆರಂಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದಲೇ ದಾಳಿ ನಡೆದಿದೆ ಎಂಬಂತೆ ಇಡೀ ಪ್ರಕರಣ ಬಿಂಬಿತವಾಗಿತ್ತು. ಇದೀಗ ಜಾರಿ ನಿರ್ದೇಶನಾಲಯ ಜಮೀರ ಅಹ್ಮದ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಐಎಂಎ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಬಲವಾಗಿ ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ವಿಚಾರಣೆಗೆ ಹಾಜರಾಗಿದ್ದರು. ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿವೆ. ಇಡಿ ವಶದಲ್ಲಿರುವ ಜಮೀರ್ ಅಹ್ಮದ್ ವಿಚಾರಣೆ ನಡೆಸಲಾಗುತ್ತಿದೆ.

    ಮನ್ಸೂರ್ ಅಲಿ ಖಾನ್ ಗೆ ಜಮೀರ್ ಅಹ್ಮದ್ ಖಾನ್ ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿಯ ನಿವೇಶನ ಮಾರಾಟ ಮಾಡಿದ್ದರು. ಶಾಸಕರಾಗಿರುವ ಜಮೀರ್ ಅಹ್ಮದ್ ವಿದೇಶದಲ್ಲಿ ಕ್ಯಾಸಿನೋ ಬಾರ್ ಗಳು, ಸೇರಿದಂತೆ ಬೇರೆ ಬೇರೆ ವ್ಯವಹಾರಗಳು ನಡೆಸ್ತಿರೊ ಬಗ್ಗೆ ಮಾಹಿತಿ ಐಟಿ ಇಲಾಖೆಗೆ ಲಭ್ಯವಾಗಿದ್ದ ಎನ್ನಲಾಗಿದೆ.

    ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯಲ್ಲಿರುವ ನೂತನ ಬಂಗಲೆ, ಯುಬಿಸಿಟಿಯಲ್ಲಿರು ಫ್ಲ್ಯಾಟ್, ಕಲಾಸಿಪಾಳ್ಯದಲ್ಲಿಯ ನ್ಯಾಷನಲ್ ಟ್ರಾವೆಲ್ ಕಚೇರಿ ಮತ್ತು ದೆಹಲಿ, ಮುಂಬೈನಲ್ಲಿರುವ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ದೋರನಹಳ್ಳಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಕಾರಣ: ಕೈ ಶಾಸಕ

    ದೋರನಹಳ್ಳಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಕಾರಣ: ಕೈ ಶಾಸಕ

    ಯಾದಗಿರಿ: ದೋರನಹಳ್ಳಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಕಾರಣ ಅಂತ ಶಹಪುರ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಗಂಭೀರ ಆರೋಪ ಮಾಡಿದ್ದಾರೆ.

    ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಸಮಯದಲ್ಲಿ ಸರ್ಕಾರ ರೈತರಲ್ಲಿ ಮೂಡಿಸಿದ ದಂದ್ವ ನೀತಿ ಮತ್ತು ನಿರ್ಲಕ್ಷ್ಯ ರಾಜ್ಯದ ರೈತರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಲ್ಲಿ ದೋರನಹಳ್ಳಿಯ ರೈತರ ಕುಟುಂಬವೂ ಕೂಡ ಒಂದು. ಒಂದು ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದಾಗ ಮನುಷ್ಯ, ಆತ್ಮಹತ್ಯೆಯ ನಿರ್ಧಾರ ತೆಗೆದುಕೊಳ್ಳುತ್ತಾನೆ. ಇಂತಹ ಪರಿಸ್ಥಿತಿ ಆ ಕುಟುಂಬ ಎದುರಿಸಿದ ಪರಿಣಾಮ ಆತ್ಮಹತ್ಯೆಗೆ ಶರಣಾಗಿದೆ. ಇದಕ್ಕೆ ಸರ್ಕಾರದ ದಂದ್ವ ನೀತಿ ಕಾರಣ ಎಂದಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್ ಸಂಕಷ್ಟ – ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ

    ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಗ್ರಾಮದ ರೈತ ಭೀಮರಾಯ ಶಿವಪ್ಪ ಸುರುಪುರ ದಂಪತಿ ನಾಲ್ಕು ಮಕ್ಕಳ ಸಮೇತವಾಗಿ ಜೂನ್ 28ರಂದು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

  • ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    – ಸುಟ್ಟು ಕರಕಲಾದ ಮೂರು ಅಂತಸ್ತಿನ ಮನೆ

    ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕಾವಲ್‌ ಭೈರಸಂದ್ರ ಉದ್ವಿಗ್ನ – ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದ ಪುಂಡರು

    ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದಾರೆ.

    ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರು ಮೇಲೂ ದಾಳಿ ಮಾಡಿದ್ದು, ಸಿಕ್ಕ ಸಿಕ್ಕ ವಸ್ತುಗಳಿಗೆಲ್ಲಾ ಬೆಂಕಿ ಹಚ್ಚಿದ್ದರು. ಕೊನೆಗೆ ರಾತ್ರಿಯೆಲ್ಲಾ ಫೀಲ್ಡ್‌ಗೆ ಇಳಿದಿದ್ದ ಪೊಲೀಸರು 110 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದ್ದು, ಗಾಯಗೊಂಡ ಪೊಲೀಸರಿಗೆ ನಗರದ ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಬೆನ್ನು, ಮುಖಕ್ಕೆ ಸೇರಿದಂತೆ ಹಲವು ಕಡೆ ಗಂಭೀರ ಗಾಯಗಳಾಗಿವೆ.

    ಅಲ್ಲದೇ ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಆರೋಪಿಗಳಿಗೆ ಗಾಯವಾಗಿದ್ದು, 10 ಜನರಲ್ಲಿ 6 ಜನ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರು ಜನ ಪರಾರಿಯಾಗಿದ್ದಾರೆ. ಈಗಾಗಲೇ ಪೊಲೀಸರ ಗೋಲಿಬಾರ್‌ಗೆ ಮೂರು ಬಲಿಯಾಗಿದ್ದಾರೆ.

    ಇಡೀ ಗಲಭೆಗೆ ಕಾರಣವಾಗಿದ್ದ ಆರೋಪಿ ನವೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಿಕ್ಕಿದರೆ ಹಲ್ಲೆ ಮಾಡುತ್ತಾರೆ ಎಂದು ಪೊಲೀಸರು ಬುರ್ಖಾ ಹಾಕಿ ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.

  • ಕಾಲು ಜಾರಿ ತೊರೆಯೊಳಗೆ ಬಿದ್ದ ಕೈ ಶಾಸಕ – ಬೆಂಬಲಿಗರಿಂದ ರಕ್ಷಣೆ

    ಕಾಲು ಜಾರಿ ತೊರೆಯೊಳಗೆ ಬಿದ್ದ ಕೈ ಶಾಸಕ – ಬೆಂಬಲಿಗರಿಂದ ರಕ್ಷಣೆ

    ಡೆಹರಡೂನ್: ಪ್ರವಾಹ ವೀಕ್ಷಣೆಗೆ ತೆರಳಿದ ಕಾಂಗ್ರೆಸ್ ಶಾಸಕರೊಬ್ಬರು ಕಾಲು ಜಾರಿ ತೊರೆಯೊಳಗೆ ಬಿದ್ದಿರುವ ಘಟನೆ ನೇಪಾಳ ಗಡಿ ಸಮೀಪದ ಪಿತ್ತೋರ್ಗಢದ ಧಾರ್ಚಾಲ್ ಪ್ರದೇಶದಲ್ಲಿ ನಡೆದಿದೆ.

    ಉತ್ತರಖಂಡದ ಕಾಂಗ್ರೆಸ್ ಶಾಸಕ ಹರೀಶ್ ಧಾಮಿ ಅವರು, ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ವಾಪಸ್ ಬರುತ್ತಿರುವಾಗ ಈ ಘಟನೆ ನಡೆದಿದೆ. ಕಾಲು ಜಾರಿ ತೊರೆಯೊಳಗೆ ಬಿದ್ದಿದ್ದಾರೆ. ನಂತರ ಸ್ವಲ್ಪ ದೂರ ನೀರಿನಲ್ಲಿ ತೇಲಿಕೊಂಡು ಹೋಗಿದ್ದಾರೆ. ಆದರೆ ತಕ್ಷಣ ಜೊತೆಗಿದ್ದ ಬೆಂಬಲಿಗರು ಅವರನ್ನು ನೀರಿನಿಂದ ಮೇಲೆ ಎತ್ತಿ ರಕ್ಷಿಸಿದ್ದಾರೆ.

    ಧಾಮಿಯವರು ಹೋಗಿದ್ದ ಪಿತ್ತೋರ್ಗಢದ ಧಾರ್ಚಾಲ್ ಪ್ರದೇಶ ಭಾರೀ ಮಳೆಗೆ ತುತ್ತಾಗಿ ಜಲಾವೃತವಾಗಿತ್ತು. ಇದನ್ನು ಪರಿಶೀಲನೆ ಮಾಡಲು ಹರೀಶ್ ಧಾಮಿ ಹೋಗಿದ್ದಾರೆ. ಪ್ರವಾಹ ಸ್ಥಳ ವೀಕ್ಷಿಸಿ ಅಲ್ಲಿನ ಜನರಿಗೆ ಧೈರ್ಯ ಹೇಳಿ ವಾಪಸ್ ಬರುತ್ತಿದ್ದರು. ಜೊತೆಗೆ ಮಳೆ ಬಂದು ಅವರು ಬರುವ ದಾರಿ ಕೆಸರು ತುಂಬಿಕೊಂಡಿತ್ತು. ಈ ದಾರಿಯಲ್ಲಿ ಬರುವಾಗ ಹರೀಶ್ ಅವರ ಆಯತಪ್ಪಿ ನೀರಿನೊಳಗೆ ಬಿದ್ದಿದ್ದಾರೆ. ಈ ವೇಳೆ ಅವರು ನೀರಿನಲ್ಲಿ ತೇಲಿಕೊಂಡು ಹೋಗಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಶಾಸಕ ಹರೀಶ್ ಧಾಮಿಯವರು, ರಸ್ತೆ ತುಂಬಾ ಕೆಸರಿನಿಂದ ಕೂಡಿತ್ತು. ಜೊತೆಗೆ ನೀರು ಕೂಡ ಹೆಚ್ಚಾಗಿತ್ತು. ಇದರಿಂದ ನಾನು ಸ್ವಲ್ಪ ಆಯತಪ್ಪಿ ಬಿದ್ದೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಸ್ವಲ್ಪ ದೂರು ನೀರಿನಲ್ಲಿ ಕೊಚ್ಚಿಕೊಂಡು ಹೋದೆ. ಆದರೆ ಅಷ್ಟರಲ್ಲಿ ನನ್ನ ಜೊತೆಯಲ್ಲಿದ್ದ ಬೆಂಬಲಿಗರು ಸಹಾಯಕ್ಕೆ ಬಂದರು. ಅವರು ಬಂದು ನನ್ನ ದಡಕ್ಕೆ ಕರೆ ತಂದರು. ಈ ವೇಳೆ ನನಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ಹೇಳಿದ್ದಾರೆ.

  • ರಾಜಸ್ಥಾನದ ‘ಕೈ’ ಶಾಸಕರಿಗೆ ಬಿಜೆಪಿಯ 25 ಕೋಟಿಯ ಬಲೆ!

    ರಾಜಸ್ಥಾನದ ‘ಕೈ’ ಶಾಸಕರಿಗೆ ಬಿಜೆಪಿಯ 25 ಕೋಟಿಯ ಬಲೆ!

    ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಲಾಗುತ್ತಿರುವ ಸಂಬಂಧ ಎಸ್‍ಓಜಿ (ಸ್ಪೆಷಲ್ ಆಪರೇಷನ್ ಗ್ರೂಪ್) ಪ್ರಕರಣ ದಾಖಲಿಸಿಕೊಂಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಯಾರಿಗೆ ಸಿಎಂ ಪಟ್ಟಕ್ಕೇರಲು ಇಷ್ಟವಿರಲ್ಲ ಹೇಳಿ. ಆದ್ರೆ ಇದು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಸಚಿನ್ ಪೈಲಟ್‍ಗೆ ತಿರುಗೇಟು ನೀಡಿದ್ದಾರೆ.

    ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ರಾಜಸ್ಥಾನದ ಜನತೆ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನಾವು ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಿಗಿದ್ದರೆ ಬಿಜೆಪಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿಸುವ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

    ಇಬ್ಬರು ಶಾಸಕರಿಗೆ ಬಿಜೆಪಿ 25 ಕೋಟಿಯ ಆಫರ್ ನೀಡಿದೆ ಎಂದು ವರದಿಯಾಗಿದೆ. ಕಾಂಗ್ರೆಸ್ ಶಾಸಕರ ಖರೀದಿಯಲ್ಲಿ ಡಿಸಿಎಂ ಸಚಿವ ಪೈಲಟ್ ಹಸ್ತಕ್ಷೇಪವಿದೆ ಎಂಬ ಮಾತುಗಳು ರಾಜಸ್ಥಾನದ ರಾಜಕೀಯ ಅಂಗಳದಲ್ಲಿ ಕೇಳಿ ಬರುತ್ತಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಸ್‍ಓಜಿ, ಸಿಎಂ ಅಶೋಕ್ ಗೆಹ್ಲೋಟ್, ಡಿಸಿಎಂ ಸಚಿನ್ ಪೈಲಟ್ ಮತ್ತು ಸರ್ಕಾರದ ಮುಖ್ಯ ಸಚೇತಕ ಮಹೇಶ್ ಜೋಶಿ ಅವರಿಗೆ ಹೇಳಿಕೆ ದಾಖಲಿಸಲು ಕರೆದಿದೆ.

    ಫೋನ್ ಮೂಲಕ ಕುದುರೆ ವ್ಯಾಪಾರ ನಡೆಸಿ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪದಡಿ ಎಸ್‍ಓಜಿ ಪ್ರಕರಣ ದಾಖಲಿಸಿಕೊಂಡಿದೆ. ರಾಜಸ್ಥಾನದ ವಿಧಾನಸಭೆ 200 ಶಾಸಕರ ಪೈಕಿ ಕಾಂಗ್ರೆಸ್ ಬಳಿ 107 ಬಲವಿದೆ. 13 ಪಕ್ಷೇತರ ಪೈಕಿ 12 ಶಾಸಕರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಬಿಜೆಪಿ 72 ಶಾಸಕರನ್ನು ಹೊಂದಿದೆ.