Tag: Congress MLC Ravi

  • ಬಿಜೆಪಿ, ಜೆಡಿಎಸ್ ಒಳ ಒಪ್ಪಂದ – ಎಚ್‍ಡಿಕೆ ಸುಳ್ಳೇಶ್ವರ ಎಂದ ಎಂಎಲ್‍ಸಿ ರವಿ

    ಬಿಜೆಪಿ, ಜೆಡಿಎಸ್ ಒಳ ಒಪ್ಪಂದ – ಎಚ್‍ಡಿಕೆ ಸುಳ್ಳೇಶ್ವರ ಎಂದ ಎಂಎಲ್‍ಸಿ ರವಿ

    ರಾಮನಗರ: ಈ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂದು ಬೆಂಗಳೂರು ಗ್ರಾಮಾಂತರ ನೂತನ ಎಂಎಲ್‍ಸಿ ಎಸ್.ರವಿ ಹೇಳಿದರು.

    ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಕುಮಾರಸ್ವಾಮಿಯರ ನಡುವೆ ಬೆಂಗಳೂರು ಗ್ರಾಮಾಂತರದಲ್ಲಿ ಒಳ ಒಪ್ಪಂದವಾಗಿತ್ತು. ಎಂಟಿಬಿ ನಾಗರಾಜ್ ರವರೇ ಈ ಒಳ ಒಪ್ಪಂದವನ್ನು ಅನುಷ್ಠಾನ ಮಾಡಿದ್ದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!

    ಈ ಒಪ್ಪಂದ ಚನ್ನಪಟ್ಟಣದಲ್ಲಿ ಅದು ಸಫಲವಾಗಲಿಲ್ಲ. ಚನ್ನಪಟ್ಟಣದ ಬಿಜೆಪಿ ಸದಸ್ಯರು ನಮಗೆ ಮತ ನೀಡಿದ್ದಾರೆ. ಹೆಚ್‍ಡಿಕೆ ವಿರೋಧಕ್ಕೆ ನಮಗೆ ಮತ ನೀಡಿದ್ದಾರೆ. ನಾನು ಕರ್ನಾಟಕ ಪ್ರವಾಸೋದ್ಯಮ ಪರಿಸರ ಮತ್ತು ಪರಿಸರ ಇಲಾಖೆ ಸಚಿವ ಯೋಗೇಶ್ವರ್ ಗೆ ಬೆಂಬಲ ಕೇಳಿರಲಿಲ್ಲ ಎಂದರು.

    ಯೋಗೆಶ್ವರ್ ಖಾಸಗಿ ಕಾರ್ಯಕ್ರಮದಲ್ಲಿ ಸಿಕ್ಕಿದ್ದಾಗ ಮಾತನಾಡಿದ್ದೆ ಅಷ್ಟೇ. ಆದರೆ ನಮಗೆ ಚನ್ನಪಟ್ಟಣದಲ್ಲಿ ಬಿಜೆಪಿ ಮತ ಸಿಕ್ಕಿದೆ. ಇನ್ನು ಕಾಂಗ್ರೆಸ್, ಬಿಜೆಪಿ ಒಳ ಒಪ್ಪಂದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಸುಳ್ಳೇಶ್ವರ ಹಾಗಾಗಿ ಹೇಳಿರಬಹುದು ಅಷ್ಟೇ. ಜೆಡಿಎಸ್ ಪಕ್ಷ ಯಾರ ಜೊತೆಗಾದರೂ ಹೋಗಲಿದೆ. ಆದರೆ ಕಾಂಗ್ರೆಸ್ ಬಿಜೆಪಿ ಎಂದಿಗೂ ಒಂದಾಗಲೂ ಸಾಧ್ಯವಿಲ್ಲ ಎಂದು ನುಡಿದರು. ಇದನ್ನೂ ಓದಿ: ಪ.ಬಂಗಾಳದಲ್ಲಿ 7 ವರ್ಷದ ಬಾಲಕನಿಗೆ ಓಮಿಕ್ರಾನ್‌ ಸೋಂಕು- ತೆಲಂಗಾಣದಲ್ಲೂ 2 ಪ್ರಕರಣ ದೃಢ

    ಈ ಚುನಾವಣೆಯಲ್ಲಿ ಕುಮಾರಸ್ವಾಮಿ ಹಣದ ಹೊಳೆಯನ್ನೇ ಹರಿಸಿದ್ದಾರೆ. ಆದರೆ ಚುನಾಯಿತ ಪ್ರತಿನಿಧಿಗಳು ನಮ್ಮ ಕೈಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಮನಗರ ಜಿಲ್ಲೆ ಹಾಗೂ ಅಕ್ಕ ಪಕ್ಕದಲ್ಲಿಯೂ ಕಾಂಗ್ರೆಸ್ ಹವಾ ಇರಲಿದೆ ಎಂದರು.

    ಭವಿಷ್ಯದಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಅದು ಯಾರು, ಯಾವ ಪಕ್ಷ ಎಂದು ಈಗಲೇ ಹೇಳಲಾಗಲ್ಲ. ಡಿಕೆ ಶಿವಕುಮಾರ್ ರವರ ನಾಯಕತ್ವ ನಂಬಿ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

     

  • ವಿಧಾನ ಪರಿಷತ್‍ನಲ್ಲಿ ಸಂವಿಧಾನ ರಚನೆಯ ಇಂಟ್ರಸ್ಟಿಂಗ್ ವಿಷಯಗಳ ಪ್ರಸ್ತಾಪ

    ವಿಧಾನ ಪರಿಷತ್‍ನಲ್ಲಿ ಸಂವಿಧಾನ ರಚನೆಯ ಇಂಟ್ರಸ್ಟಿಂಗ್ ವಿಷಯಗಳ ಪ್ರಸ್ತಾಪ

    ಬೆಂಗಳೂರು: ವಿಧಾನ ಮಂಡಲದ ಅಧಿವೇಶನದಲ್ಲಿ ಐತಿಹಾಸಿವಾಗಿ ಸಂವಿಧಾನ ಮೇಲೆ ಚರ್ಚೆ ನಡೆಯುತ್ತಿದೆ. ಪ್ರತಿಯೊಬ್ಬ ಶಾಸಕರು ಸಂವಿಧಾನದ ಮೇಲೆ ಅರ್ಥ ಗರ್ಭೀತವಾಗಿ ಚರ್ಚೆ ಮಾಡುತ್ತಿದ್ದಾರೆ. ಸಂವಿಧಾನದ ಚರ್ಚೆಯಲ್ಲಿ ಹೊಸ ಹೊಸ ಇತಿಹಾಸದ ವಿಷಯಗಳ ಬೆಳಕಿಗೆ ಬರುತ್ತಿವೆ. ಇವತ್ತು ಕೂಡ ವಿಧಾನ ಪರಿಷತ್‍ನಲ್ಲಿ ನಡೆದ ಸಂವಿಧಾನದ ಚರ್ಚೆ ವೇಳೆ ಕಾಂಗ್ರೆಸ್ ಸದಸ್ಯ ರವಿ ಅವರು ಸಂವಿಧಾನ ರಚನೆಯ ಕುತೂಹಲಕಾರಿ ಅಂಶಗಳನ್ನು ಸದನಕ್ಕೆ ತಿಳಿಸಿದರು.

    ಭಾರತದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಯಾರು ಮರೆಯುವಂತಹದ್ದಲ್ಲ. ಸಂವಿಧಾನ ಶಿಲ್ಪ ಅಂಬೇಡ್ಕರ್ ಭಾರತ ಸಂವಿಧಾನದ ಜೀವಾಳ ಇದ್ದಂತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಇದರ ಜೊತೆ ಜೊತೆಗೆ ಈ ಸಂವಿಧಾನವನ್ನು ತಮ್ಮ ಸುಂದರವಾದ ಕೈಬರಹದ ಮೂಲಕ ಬರೆದವರ ಕುತೂಹಲಕಾರಿ ಅಂಶವನ್ನು ಸದಸ್ಯ ರವಿ ಬಿಚ್ಚಿಟ್ಟರು.

    479 ಪುಟಗಳ ಭಾರತ ಸಂವಿಧಾನವನ್ನು ತಮ್ಮ ಸುಂದರವಾದ ಕೈಬರಹದಿಂದ ಬರೆದವರು ಪ್ರೇಮ್ ಬಿಹಾರಿ ನಾರಾಯಣ ರಾಯ್ಜಾದಾ. ದೆಹಲಿಯ ಸೆಂಟ್ ಸ್ಟೀಫನ್ ಸನ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದರು. ಅವರ ಸುಂದರ ಬರಹವನ್ನು ಮೆಚ್ಚಿದ್ದ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರೇ ಸಂವಿಧಾನವನ್ನು ಬರೆದು ಕೊಡುವಂತೆ ಪ್ರೇಮ್ ಬಿಹಾರಿ ಅವರಿಗೆ ಮನವಿ ಮಾಡಿದ್ದರು. ನೆಹರು ಮನವಿಗೆ ಒಪ್ಪಿದ ಪ್ರೇಮ್ ಬಿಹಾರಿ ಅವರು ಸಂವಿಧಾನ ಬರೆದುಕೊಡಲು ಒಪ್ಪಿದರು.

    ಕೈ ಬರಹದ ಮೂಲಕ ಪ್ರೇಮ್ ಬಿಹಾರಿ ನಾರಾಯಣ ರಾಯ್ಜಾದಾ ಸಂವಿಧಾನ ಬರೆಯಲು ಸುಮಾರು 6 ತಿಂಗಳು ಸಮಯ ತೆಗೆದುಕೊಂಡರಂತೆ. ಈ ಸಂವಿಧಾನ ಬರೆಯಲು ಸುಮಾರು 254 ಪೆನ್ ನಿಬ್ಬುಗಳನ್ನ ಬಳಸಲಾಗಿದೆ ಅಂತೆ. ವಿಶೇಷ ಅಂದ್ರೆ ಸಂವಿಧಾನವನ್ನ ಕೈಬರಹದ ಮೂಲಕ ಬರೆದುಕೊಡಲು ಪ್ರೇಮ್ ಬಿಹಾರಿ ಅವರು ಯಾವುದೇ ಸಂಭಾವನೆ ಪಡೆದಿಲ್ಲ. ಗೌರವ ಧನ ಸ್ವೀಕಾರ ಮಾಡುವಂತೆ ನೆಹರು ಅವರು ಕೇಳಿದರೂ ಅದಕ್ಕೆ ಪ್ರೇಮ್ ಬಿಹಾರಿ ಬೇಡ ಅಂತ ನಿರಾಕರಿಸಿದ್ದರಂತೆ.

    ಗೌರವ ಧನದ ಬದಲಾಗಿ ಸಂವಿಧಾನದ ಪ್ರತಿ ಪುಟದ ಅಂತ್ಯದಲ್ಲಿ ತಮ್ಮ ಹೆಸರನ್ನು ಹಾಗೂ ಕೊನೆಯ ಪುಟದಲ್ಲಿ ತಮ್ಮ ಹೆಸರು ಜೊತೆ ತಮ್ಮ ತಾತನ ಹೆಸರು ಬರೆಯಲು ಅನುಮತಿ ಕೊಡಿ ಅಂತ ನೆಹರು ಬಳಿ ಕೇಳಿದ್ದರು. ನೆಹರು ಅವರು ಕೂಡ ಇದಕ್ಕೆ ಒಪ್ಪಿಗೆ ನೀಡಿದ್ದಂತೆ.

    ಇನ್ನೊಂದು ಇಂಟ್ರಸ್ಟಿಂಗ್ ವಿಷಯ ಅಂದ್ರೆ ಸಂವಿಧಾನಕ್ಕೆ ಸುಂದರ ಕಲೆ ಸ್ಪರ್ಶ ನೀಡಿದವರು ನಂದಲಾಲ್ ಬೋಸ್ ಅವರು. ರವೀಂದ್ರನಾಥ ಠಾಗೂರ್ ಅವರಿಂದ ಪ್ರೇರಣೆ ಪಡೆದಿದ್ದ ನಂದಲಾಲ್ ಅವರು ಶಾಂತಿನಿಕೇತನದ ಪ್ರಾಂಶುಪಾಲರಾಗಿದ್ದರು. ದೇಶದ ಮಹಾನ್ ಕಲಾವಿದರಲ್ಲಿ ಒಬ್ಬರಾದ ನಂದಲಾಲ್ ಅವರು ತಮ್ಮ ಶಿಷ್ಯರನ್ನ ಒಳಗೂಡಿ ಸಂವಿಧಾನಕ್ಕೆ ಚಿತ್ತಾರ ಮಾಡಿದ್ದರಂತೆ.