Tag: Congress MP

  • ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್

    ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್

    ನವದೆಹಲಿ: ವಾಕಿಂಗ್ ಹೋಗಿದ್ದ ಕಾಂಗ್ರೆಸ್ (Congress) ಸಂಸದೆ ಸುಧಾ ರಾಮಕೃಷ್ಣನ್ (Sudha Ramakrishnan) ಅವರ ಸರ ದೋಚಿ ಪರಾರಿಯಾಗಿದ್ದ ಕಳ್ಳರನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ಆಗಸ್ಟ್ 4ರಂದು ತಮಿಳುನಾಡಿನ ಮೈಲಾಡುತುರೈನ ಸಂಸದೆ ಸುಧಾ ಅವರು ಚಾಣಕ್ಯಪುರಿಯ ಪೋಲೆಂಡ್ ರಾಯಭಾರ ಕಚೇರಿಯ ಬಳಿ ಡಿಎಂಕೆ ಶಾಸಕಿ ರಾಜತಿ ಅವರ ಜೊತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಹೆಲ್ಮೆಟ್ ಧರಿಸಿದ್ದ ವ್ಯಕ್ತಿ ಸುಧಾ ಅವರ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದ. ಇದನ್ನೂ ಓದಿ: ಡಿಕೆಶಿ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

    ಈ ಸಂಬಂಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವನ್ನು ಸಹ ಬರೆದಿದ್ದರು. ಇದೀಗ ಪೊಲೀಸರು ಖದೀಮನನ್ನು ಬಂಧಿಸಿದ್ದು, ಆತನಿಂದ ಚಿನ್ನದ ಸರವನ್ನೂ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಓಖ್ಲಾ ನಿವಾಸಿಯೆಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ- ಕೈ ಸಂಸದ ವಿವಾದಾತ್ಮಕ ಹೇಳಿಕೆ

    ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ- ಕೈ ಸಂಸದ ವಿವಾದಾತ್ಮಕ ಹೇಳಿಕೆ

    ತಿರುವನಂತಪುರಂ: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣಾ (Loksabha Elections 2024) ದಿನಾಂಕ ಘೋಷಣೆಯಾಗಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಲು ಶುರುಮಾಡಿದ್ದಾರೆ. ಅಂತೆಯೇ ಕೇರಳದಲ್ಲಿ ಕಾಂಗ್ರೆಸ್‌ ಸಂದರೊಬ್ಬರು ಹೇಳಿಕೆಯೊಂದನ್ನು ನೀಡುವ ಮೂಲಕ ಇದೀಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಸಂಸದ ಆಂಟೊ ಆಂಟೋನಿ (Anto Antony), ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಲಿದಾನದ ಲಾಭ ಪಡೆದು 2019ರಲ್ಲಿ ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ. ಜೊತೆಗೆ ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಅಂತಾನೂ ಹೇಳಿದ್ದಾರೆ. ಸಂಸದರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹುಟ್ಟುಹಾಕಿದೆ.

    ಕ್ರಮಕ್ಕೆ ಬಿಜೆಪಿ ಆಗ್ರಹ: ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆಂಟನಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದೆ. ಪುಲ್ವಾಮಾ ದಾಳಿಯಲ್ಲಿ (Pulwama Attack) ಪಾಕಿಸ್ತಾನದ ಪಾತ್ರವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್ ಸಂಸದರು ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಕಿಡಿಕಾರಿದ್ದಾರೆ. ಆ್ಯಂಟನಿ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

    ಪುಲ್ವಾಮಾ ದಾಳಿ: 2019 ರ ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪುಲ್ವಾಮಾದಲ್ಲಿ ಭಯೋತ್ಪಾದಕರು ಸಿಆರ್‌ಪಿಎಫ್ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು. ಇದರಲ್ಲಿ ಸುಮಾರು 40 ಸೈನಿಕರು ಹುತಾಮರಾಗಿದ್ದರು. ಈ ದಾಳಿಯಲ್ಲಿ ಪಾಕಿಸ್ತಾನದೊಂದಿಗೆ (Pakistan) ನಂಟು ಹೊಂದಿರುವ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಹೆಸರು ಬೆಳಕಿಗೆ ಬಂದಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಕೂಡ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

  • ಬಿಜೆಪಿಯೇತರ ಪ್ರತಿಪಕ್ಷಗಳ ಆಧಾರ ಸ್ತಂಭ ಮಮತಾ ಬ್ಯಾನರ್ಜಿ: ಕಾಂಗ್ರೆಸ್‌ ಸಂಸದ ಬಣ್ಣನೆ

    ಬಿಜೆಪಿಯೇತರ ಪ್ರತಿಪಕ್ಷಗಳ ಆಧಾರ ಸ್ತಂಭ ಮಮತಾ ಬ್ಯಾನರ್ಜಿ: ಕಾಂಗ್ರೆಸ್‌ ಸಂಸದ ಬಣ್ಣನೆ

    ಲಕ್ನೋ: ಮಮತಾ ಬ್ಯಾನರ್ಜಿ ಅವರು ದೇಶದ ಬಿಜೆಪಿಯೇತರ ಪ್ರತಿಪಕ್ಷಗಳ ಆಧಾರ ಸ್ತಂಭ ಎಂದು ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಬಣ್ಣಿಸಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಜೆಪಿಯೇತರ ಪ್ರತಿಪಕ್ಷ ಇಂದಿನ ಅಗತ್ಯವಾಗಿದೆ. ಈ ಪ್ರತಿಪಕ್ಷಕ್ಕೆ ಮಮತಾ ಬ್ಯಾನರ್ಜಿ ಅವರೇ ಆಧಾರ ಸ್ತಂಭ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ವಿಭಜನೆಯಾಗುವುದನ್ನು ತಡೆಗಟ್ಟಲು ಪ್ರತಿ ರಾಜ್ಯಗಳಲ್ಲೂ ಪ್ರತಿಪಕ್ಷಗಳು ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಮೋದಿ ಫೋಟೋ ಹಾಕಿದ ಮುಸ್ಲಿಂ ವ್ಯಕ್ತಿಗೆ ಮಾಲೀಕ ಬೆದರಿಕೆ

    ಬಿಜೆಪಿಯ ಅತ್ಯುತ್ತಮ ಗೆಲುವು ಶೇ.39 ಮತಗಳನ್ನು ಮೀರುವುದಿಲ್ಲ. ಬಿಜೆಪಿಯೇತರ ಜಾಗವನ್ನು ಒಗ್ಗೂಡಿಸಲು ಮಮತಾ ಮತ್ತು ಉಳಿದವರೆಲ್ಲರೂ ಮುಂದಾಗಬೇಕು ಎಂದು ಟ್ವೀಟ್‌ ಮಾಡಿ ಅಭಿಪ್ರಾಯಪಟ್ಟಿದ್ದಾರೆ.

    ಬಿರ್‌ಭೂಮ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ಗಧಾಪ್ರಹಾರ ನಡೆಸುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯನ್ನು ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಂದಾಗಬೇಕು ಎಂದು ಎಲ್ಲಾ ಪ್ರತಿಪಕ್ಷಗಳಿಗೆ ಮಮತಾ ಬ್ಯಾನರ್ಜಿ ಅವರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

  • ಡಿ.ಕೆ.ಸುರೇಶ್‍ಗಾಗಿ ಕನ್ನಡ ಕಲಿತ ಲಡಾಖ್ ಬಿಜೆಪಿ ಸಂಸದ

    ಡಿ.ಕೆ.ಸುರೇಶ್‍ಗಾಗಿ ಕನ್ನಡ ಕಲಿತ ಲಡಾಖ್ ಬಿಜೆಪಿ ಸಂಸದ

    -‘ಬಿಜೆಪಿ ಸೇರ್ಕೊಳ್ಳಿ’ ಅಂತ ಬರೆದು ಟ್ಟೀಟ್

    ನವದೆಹಲಿ: ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರನ್ನು ಬಿಜೆಪಿ ಸೇರಿಸಿಕೊಳ್ಳಲು ಲಡಾಖ್ ಸಂಸದ ಜಮ್‍ಯಾಂಗ್ ಟ್ಸೆರಿಂಗ್ ನಮ್‍ಯಾಂಗ್ ಕನ್ನಡ ಕಲಿತಿದ್ದಾರೆ.

    ದೆಹಲಿಯಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರದ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಮಂಗಳವಾರ ಸಂಸತ್ತಿನ ಪ್ರಕ್ರಿಯೆಗಳು ಅಸ್ತವ್ಯಸ್ತಗೊಂಡವು. ಆದರೆ ರಾಜಕೀಯ ಪ್ರತಿಸ್ಪರ್ಧಿಗಳಲ್ಲಿ ಇನ್ನೂ ಸ್ನೇಹ ಇದೆ ಎಂದು ಬಿಜೆಪಿ ಸಂಸದರು ತೋರಿಸಿದ್ದಾರೆ. ಲಡಾಖ್ ಸಂಸದ ಜಮ್‍ಯಾಂಗ್ ಟ್ಸೆರಿಂಗ್ ನಮ್‍ಯಾಂಗ್ ಅವರು ಕರ್ನಾಟಕದ ಮೂವರು ಸಂಸದರೊಂದಿಗೆ ಇರುವ ಫೋಟೋವನ್ನು ಮಂಗಳವಾರ ಟ್ವೀಟ್ ಮಾಡಿದ್ದಾರೆ.

    ಸಂಸದ ನಮ್‍ಯಾಂಗ್ ಅವರಿಗೆ ಕರ್ನಾಟಕದ ಮೂವರು ಸಂಸದರು ಕನ್ನಡ ಕಲಿಸಿದ್ದಾರೆ. ಆದರೆ ಕನ್ನಡ ಕಲಿತ ನಮ್‍ಯಾಂಗ್ ಡಿಕೆ ಸುರೇಶ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಫೋಟೋದಲ್ಲಿ ನಮ್‍ಯಾಂಗ್ ಅವರು ಕರ್ನಾಟಕದ ಬಿಜೆಪಿ ಸಂಸದರಾದ ಪ್ರತಾಪ್ ಸಿಂಹಾ, ತೇಜಸ್ವಿ ಸೂರ್ಯ ಹಾಗೂ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಅವರು ಎಷ್ಟು ಕನ್ನಡ ಕಲಿತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲವಾದರೂ, ಕಾಂಗ್ರೆಸ್ ಸಂಸದರಿಗೆ ಹೇಳಲು ಸಾಕಷ್ಟು ಕಲಿತಿದ್ದೇನೆ ಎಂದು ನಮ್‍ಯಾಂಗ್ ಹೇಳಿದ್ದಾರೆ. ನಾನು ಡಿ.ಕೆ.ಸುರೇಶ್ ಅವರಿಗೆ ‘ಬಿಜೆಪಿ ಸೇರಿಕೊಳ್ಳಿ’ ಅಂತ ಹೇಳಿದೆ ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ವಿಶೇಷವೆಂದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆದ್ದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಆಗಿದ್ದಾರೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರ, ಪಕ್ಷೇತರ ಅಭ್ಯರ್ಥಿ ಹಾಗೂ ಜೆಡಿಎಸ್ ಅಭ್ಯರ್ಥಿ ತಲಾ ಒಂದು ಕ್ಷೇತ್ರದಲ್ಲಿ ಗೆದ್ದಿದ್ದರು.

    ಸಂಸದ ನಮ್‍ಯಾಂಗ್ ಅವರ ಟ್ವೀಟ್ ಭಾರೀ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದು, ಕೆಲ ನೆಟ್ಟಿಗರು ಸೂಪರ್ ಸರ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು, ‘ಈ ಪುಣ್ಯಾತ್ಮ ಪೂರ್ತಿ ಕನ್ನಡ ಕಲಿಯೋದು ಬೇಡ ದೇವ್ರೇ. ಮಾತಾಡಿ ಮಾತಾಡಿನೇ ಎಲ್ಲರನ್ನೂ ಬಿಜೆಪಿಗೆ ಸೇರಿಸುವ ಹಾಗೆ ಮಾಡಿ ಬಿಡ್ತಾನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

  • ಎಸ್‍ಪಿ ವಿರುದ್ಧ ಡಿಕೆ ಸುರೇಶ್ ಮತ್ತೆ ಗರಂ: ಡಿಸಿ- ಶಾಸಕ ಮಂಜುನಾಥ್ ಮಾತಿನ ಚಕಮಕಿ

    ಎಸ್‍ಪಿ ವಿರುದ್ಧ ಡಿಕೆ ಸುರೇಶ್ ಮತ್ತೆ ಗರಂ: ಡಿಸಿ- ಶಾಸಕ ಮಂಜುನಾಥ್ ಮಾತಿನ ಚಕಮಕಿ

    ರಾಮನಗರ: ರಾಮನಗರದ ಎಸ್‍ಪಿ ಅನೂಪ್ ಶೆಟ್ಟಿ ವಿರುದ್ಧ ಕಳೆದ ನವೆಂಬರ್‌ನಲ್ಲಿ ಗರಂ ಆಗಿ ವಾರ್ನ್ ನೀಡಿದ್ದ ಸಂಸದ ಡಿ.ಕೆ.ಸುರೇಶ್ ಇಂದು ಕೂಡ ಗರಂ ಆಗಿದ್ದಲ್ಲದೇ, ಸಭೆಗೆ ಬರುವಂತೆ ಹೇಳಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಪ್ರಸಂಗ ರಾಮನಗರದ ಜಿಲ್ಲಾ ಪಂಚಾಯತ್‍ನಲ್ಲಿ ನಡೆಯಿತು.

    ಒಂದೆಡೆ ಎಸ್‍ಪಿ ವಿರುದ್ಧ ಸಂಸದ ಸುರೇಶ್ ಗರಂ ಆಗಿದ್ದರೆ, ಅದೇ ಸಭೆಯಲ್ಲಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ವಿರುದ್ಧ ಕಿಡಿಕಾರಿದರು. ಅಷ್ಟೇ ಅಲ್ಲದೆ ದಿಶಾ ಸಭೆಯಲ್ಲಿಯೇ ನೇರಾನೇರವಾಗಿ ಮಾತಿನ ಚಕಮಕಿ ಸಹ ನಡೆಯಿತು. ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಕರೆದಿದ್ದ ಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವಿನ ಕಾದಾಟಕ್ಕೆ ದಿಶಾ ಸಭೆ ವೇದಿಕೆಯಾಗಿತ್ತು.

    ಜಿಲ್ಲಾಡಳಿತದಿಂದ ಜನಪ್ರತಿನಿಧಿಗಳನ್ನ ನಿರ್ಲಕ್ಷ್ಯ ಮಾಡಲಾಗುತ್ತಿದೆ. ತಮ್ಮ ಕ್ಷೇತ್ರದಲ್ಲಿ ನಡೆಯುವ ಕೆಲಸಗಳನ್ನು ಸಹ ತಮ್ಮ ಗಮನಕ್ಕೆ ತರದೇ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದರೆ ತಮ್ಮ ಅನುದಾನದಲ್ಲಿ ಕೆಲಸ ಮಾಡುತ್ತಿರುವುದಲ್ಲ ಅದರ ಬಗ್ಗೆ ಮಾಹಿತಿ ನೀಡಬೇಕೆಂದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದು ಎ.ಮಂಜುನಾಥ್ ಅಸಮಧಾನ ವ್ಯಕ್ತಪಡಿಸಿದರು.

    ಶಾಸಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು, ನಾನು ಹೇಳಿರುವುದನ್ನು ತಿರುಚಿ ಹೇಳುವುದಲ್ಲ. ಗದರಿ ಮಾತನಾಡಬೇಡಿ ಎಲ್ಲವನ್ನೂ ತಮ್ಮ ಗಮನಕ್ಕೆ ತಂದು ಕೆಲಸ ಮಾಡಬೇಕೆಂದೇನಿಲ್ಲ ಎಂದು ಪ್ರತ್ಯುತ್ತರ ನೀಡಿದರು. ಇಬ್ಬರ ಮಾತಿನ ಚಕಮಕಿ ನೋಡಿ ಸಂಸದ ಸುರೇಶ್ ಕೂಡ ಕೆಲಕಾಲ ತಬ್ಬಿಬ್ಬಾದರು.

    ಸಭೆಗೆ ಹಾಜರಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ಸಂಸದ ಡಿ.ಕೆ.ಸುರೇಶ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಲು ತಡಬಡಾಯಿಸಿದರು. ಅಧಿಕಾರಿಗಳಿಗೆ ಸಭೆಯಲ್ಲಿಯೇ ಚಳಿ ಬಿಡಿಸುವ ಮೂಲಕ ಸಂಸದ ಖಡಕ್ ಕ್ಲಾಸ್ ತೆಗೆದುಕೊಂಡರು.

    2019ರ ನವೆಂಬರ್‌ನಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ರಾಮನಗರ ಎಸ್‍ಪಿ ಅನೂಪ್ ಎ ಶೆಟ್ಟಿ ಇಂದು ಕೂಡ ಗೈರಾಗಿದ್ದರು. ಹೀಗಾಗಿ ಎಸ್‍ಪಿ ಅನೂಪ್ ಶೆಟ್ಟಿ ವಿರುದ್ಧ ಗರಂ ಆದ ಡಿ.ಕೆ.ಸುರೇಶ್ ಅವರು, ಜಿಲ್ಲೆಯಲ್ಲಿ ಕ್ರೈಂ ರೇಟ್ ಜಾಸ್ತಿ ಇದೆ ಅಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಹೋಟೆಲ್, ಅಂಗಡಿಗಳನ್ನು ರಾತ್ರಿ 11 ಗಂಟೆ ನಂತರ ಬಂದ್ ಮಾಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡುವಂತೆ ಎಸ್‍ಪಿಯನ್ನ ಸಭೆಗೆ ಕರೆಸಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಸ್ವತಃ ಜಿಲ್ಲಾಧಿಕಾರಿಯೇ ಎಸ್‍ಪಿಗೆ ಕರೆ ಮಾಡಿ ಬರುವಂತೆ ಮನವಿ ಮಾಡಿದರೂ ಎಸ್‍ಪಿ ಅನೂಪ್ ಶೆಟ್ಟಿ ಮಾತ್ರ ಸಭೆಗೆ ಬರಲೇ ಇಲ್ಲ.

    ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಲು ಕರೆಯಲಾಗಿದ್ದ ದಿಶಾ ಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವಿನ ಮಾತಿನ ಸಮರಕ್ಕೂ ವೇದಿಕೆಯಾಯಿತು. ಜಿಲ್ಲೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವಿನ ಸಮನ್ವಯತೆ ಇಲ್ಲ ಎಂಬುದು ಎದ್ದು ಕಾಣುತ್ತಿತ್ತು.

  • ಅದೃಷ್ಟ ಅನ್ನೋದು ರೇಪ್‍ನಂತೆ, ಬಂದಾಗ ಆನಂದಿಸಲು ಪ್ರಯತ್ನಿಸಿ: ಸಂಸದನ ಪತ್ನಿ

    ಅದೃಷ್ಟ ಅನ್ನೋದು ರೇಪ್‍ನಂತೆ, ಬಂದಾಗ ಆನಂದಿಸಲು ಪ್ರಯತ್ನಿಸಿ: ಸಂಸದನ ಪತ್ನಿ

    ತಿರುವನಂತಪುರ: ಕೇರಳದ ಕಾಂಗ್ರೆಸ್ ಸಂಸದ ಹಿಬಿ ಇಡನ್ ಪತ್ನಿ ಅನ್ನಾ ಲಿಂಡಾ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

    ಫೇಸ್‍ಬುಕ್ ಪೋಸ್ಟ್: ಅದೃಷ್ಟ ಅನ್ನೋದಿ ರೇಪ್ ತರಹ. ಈ ಅದೃಷ್ಟವನ್ನ ವಿರೋಧಿಸಲು ಸಾಧ್ಯವಾಗದಿದ್ದರೆ, ಆನಂದಿಸಲು ಪ್ರಯತ್ನಿಸಬೇಕು ಎಂಬ ಸಾಲುಗಳನ್ನು ಬರೆದುಕೊಂಡಡು ಪ್ರವಾಹ ಪರಿಸ್ಥಿತಿ ಮತ್ತು ಐಸ್ ಕ್ರೀಂ ತಿನ್ನುವ ಫೋಟೋ ಪೋಸ್ಟ್ ಮಾಡಿದ್ದರು. ಪೋಸ್ಟ್ ಗೆ ಆಕ್ರೋಶ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿದ್ದಾರೆ.

    ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿರುವ ಲಿಂಡಾ ಸದಾ ಪೋಸ್ಟ್ ಮಾಡುತ್ತಿರುತ್ತಾರೆ. ಹಿಬಿ ಇಡನ್ ಪತ್ನಿ ಲಿಂಡಾ ಇಡನ್ ಫೇಸ್‍ಬುಕ್ ಪೋಸ್ಟ್ ಸದ್ಯ ಚರ್ಚೆಗೆ ಕಾರಣವಾಗಿದೆ. ಲಿಂಡಾರ ಪೋಸ್ಟಿಗೆ ಆಕ್ರೋಶ ವ್ಯಕ್ತವಾಗಿದ್ದು, ಕ್ಷಮೆ ಕೇಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಲೋಕಸಭಾ ಚುನಾವಣೆ ವೇಳೆ ಹಿಬಿ ಇಡನ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹಿಬಿ ಇಡನ್ ಅವರ ಎರ್ನಾಕುಲಂ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಪೋಸ್ಟ್ ಡಿಲೀಟ್ ಮಾಡಿದ ಬಳಿಕ ಲಿಂಡಾ ಇದೂವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.