Tag: construction work

  • ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣಕ್ಕೆ ಅನುಮತಿ

    ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣಕ್ಕೆ ಅನುಮತಿ

    – ಐಸ್‍ಕ್ರೀಂ, ಜ್ಯೂಸ್, ಪುಸ್ತಕ ಮಾರಾಟಕ್ಕೆ ಗ್ರೀನ್ ಸಿಗ್ನಲ್

    ಬೆಂಗಳೂರು: ಕೇಂದ್ರ ಸರ್ಕಾರದ ಬುಧವಾರ ನೀಡಿದ್ದ ಮಾರ್ಗಸೂಚಿಗಳ ಅನ್ವಯ ಒಂದಿಷ್ಟು ಕೊರೊನಾ ಲಾಕ್‍ಡೌನ್ ನಿಯಮಗಳನ್ನು ಸಡಿಲ ಮಾಡಿದ್ದ ರಾಜ್ಯ ಸರ್ಕಾರ, ಇವತ್ತು ಇನ್ನೊಂದಿಷ್ಟು ವಿನಾಯಿತಿ ನೀಡಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.

    ಬೆಂಗಳೂರು ಸೇರಿದಂತೆ ನಗರ ಹಲವು ನಗರಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗದಿದ್ದರೂ ರಾಜ್ಯ ಸರ್ಕಾರ ರಿಸ್ಕ್ ತೆಗೆದುಕೊಂಡಂತೆ ಕಾಣುತ್ತಿದೆ. ಮೊಬೈಲ್ ಅಂಗಡಿ, ಜ್ಯೂಸ್ ಅಂಗಡಿ, ಕಟ್ಟಡ ನಿರ್ಮಾಣ ಹೀಗೆ ಹಲವುಗಳಿಗೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಷರತ್ತುಬದ್ಧ ಅನುಮತಿ ನೀಡಿದೆ.

    ಬೆಂಗಳೂರು ಸೇರಿದಂತೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಬುಧವಾರ ಅವಕಾಶ ನೀಡಿರಲಿಲ್ಲ. ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ನೇತೃತ್ವದ ಸರ್ಕಾರ ಮಣಿದಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ಇವತ್ತು ನೀಡಿರುವ ಲಾಕ್‍ಡೌನ್ ವಿನಾಯ್ತಿಗಳನ್ನು ಘೋಷಿಸಿದೆ.

    ಲಾಕ್‍ಡೌನ್‍ನಿಂದ ಮತ್ತಷ್ಟು ವಿನಾಯ್ತಿ..!
    * ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ
    * ಕಾರ್ಮಿಕರು ಸೈಟ್‍ನಲ್ಲಿಯೇ ಇರಬೇಕು (ಕಾರ್ಮಿಕರಿಗೆ ಅಲ್ಲಿಯೇ ಉಳಿದುಕೊಳ್ಳಲು ಅಗತ್ಯ ಸೌಲಭ್ಯ ಕಲ್ಪಿಸಬೇಕು, ಹೊರಗಿನಿಂದ ಕಾರ್ಮಿಕರನ್ನು ಕರೆಸುವಂತಿಲ್ಲ)
    * ನೀರು ಪೂರೈಕೆ ಮತ್ತು ಒಳಚರಂಡಿ ರಿಪೇರಿ
    * ಟೆಲಿಕಾಮ್, ಕೇಬಲ್ ಸಂಬಂಧಿ ಕೆಲಸಗಳು

    * ಬ್ಯಾಂಕೇತರ ಹಣಕಾಸು ಸಂಸ್ಥೆಗಳು
    * ಸಹಕಾರ ಬ್ಯಾಂಕ್/ಸೊಸೈಟಿಗಳು
    * ಸ್ಟೇಷನರಿ ಮತ್ತು ಬುಕ್ ಶಾಪ್
    * ಎಲೆಕ್ಟ್ರಿಕ್ ಅಂಗಡಿ (ಫ್ಯಾನ್ ಮಾರಲು ಅವಕಾಶ)
    * ನಗರ ಪ್ರದೇಶದಲ್ಲಿ ಆಹಾರ ಸಂಸ್ಕರಣೆ ಘಟಕ (ಬ್ರೆಡ್, ಹಾಲು, ಬೇಳೆ, ಫ್ಲೋರ್‍ಮಿಲ್)
    * ಪ್ರಿಪೇಡ್ ಮೊಬೈಲ್ ರಿಚಾರ್ಜ್‍ಗೆ ಅಂಗಡಿ
    * ಐಸ್ ಕ್ರರೀಂ, ಡ್ರೈ ಫ್ರೂಟ್ಸ್, ಜ್ಯೂಸ್ ಅಂಗಡಿ (ಪಾರ್ಸಲ್‍ಗಷ್ಟೇ ಅವಕಾಶ)
    * ಹಿರಿಯ ನಾಗರಿಕರು ಇರುವ ಮನೆಗಳಿಗೆ ಸಹಾಯಕಿಯರು

  • ಗುರುವಾರದಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲ- ಏನಿದೆ, ಏನಿಲ್ಲ?

    ಗುರುವಾರದಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲ- ಏನಿದೆ, ಏನಿಲ್ಲ?

    – ಮದ್ಯ ಪ್ರಿಯರಿಗೆ ಸಿಗಲ್ಲ ಎಣ್ಣೆ

    ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಗುರುವಾರದಿಂದ ಭಾಗಶಃ ಸಡಿಲಗೊಳ್ಳಲಿದೆ.

    ನಾಳೆಯಿಂದ ಕಟೈಂನ್‍ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್‍ಡೌನ್ ನಿಯಮ ಸಡಿಲಗೊಳ್ಳಲಿದೆ. ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲ ಸರ್ಕಾರಿ ಕಚೇರಿಗಳು ತೆರೆಯಲಿವೆ. ಆದರೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ.

    ಏನಿರುತ್ತೆ?:
    ಸೇಫ್ ಝೋನ್‍ನಲ್ಲಿ ಕಟ್ಟಡ ನಿರ್ಮಾಣ, ರಸ್ತೆ ಕಾಮಗಾರಿಗೆ ಅನುಮತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಸಿಮೆಂಟ್, ಜೆಲ್ಲಿ, ಗೂಡ್ಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ವೈಯಕ್ತಿಕ ಪಾಸ್ ಇದ್ದರೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಸ್ವ ಉದ್ಯೋಗ ಮಾಡುವ ವ್ಯಕ್ತಿಗಳಿಗೆ, ಎಲೆಕ್ಟ್ರೀಷಿಯನ್ಸ್, ಐಟಿ ರಿಪೇರಿ, ಪ್ಲಂಬರ್, ಮೋಟಾರ್ ಮೆಕಾನಿಕ್ಸ್, ಕಾರ್ಪೆಂಟರ್ಸ್ ಗಳಿಗೆ ಕೆಲಸ ನಿರ್ವಹಿಸಲು ಅವಕಾಶ ನೀಡಿಲಾಗಿದೆ.

    ಗೂಡ್ಸ್ ರೈಲುಗಳ ಮೂಲಕ ಅಗತ್ಯ ವಸ್ತು ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ತುರ್ತು ಅಗತ್ಯ ಸೇವೆಗಳ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ತುರ್ತು ಸೇವೆಗಳಿಗಾಗಿ ವಾಹನ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಕಾರಿನಲ್ಲಿ ಕೇವಲ ಇಬ್ಬರು ಮಾತ್ರ ಪ್ರಯಾಣಿಸಬೇಕು.

     

    ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ. ಅಗತ್ಯ ಸರ್ಕಾರಿ ಇಲಾಖೆಗಳನ್ನು ತೆರೆಯಬೇಕು. ಆದರೆ ಶೇ.33ರಷ್ಟು ಸಿಬ್ಬಂದಿ ಮಾತ್ರ ಕೆಲಸ ನಿರ್ವಹಿಸಬೇಕು. ಅಗತ್ಯವಸ್ತುಗಳನ್ನು ಆನ್‍ಲೈನ್‍ನಲ್ಲಿ ಖರೀದಿ ಮಾಡಬಹುದು.

    ಏನಿಲ್ಲ?:
    ಮೆಟ್ರೋ, ರೈಲು, ಬೈಕ್ ಸಂಚಾರ ಇರುವುದಿಲ್ಲ. ಮೇ 3ರವರೆಗೆ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಬಸ್ ಸಂಚಾರ ಇರುವುದಿಲ್ಲ. ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಮದ್ಯ ಮಾರಾಟ ಮೇ 3ರವರೆಗೂ ಇರುವುದಿಲ್ಲ. ಹೋಟೆಲ್, ರೆಸ್ಟೋರೆಂಟ್‍ಗಳನ್ನು ತೆರೆಯುವಂತಿಲ್ಲ. ಯಾವುದೇ ಸಭೆ, ಕಾರ್ಯಕ್ರಮ ನಡೆಸುವಂತಿಲ್ಲ. ಅಂತರ ಜಿಲ್ಲೆ ಸಂಚಾರ ಇರುವುದಿಲ್ಲ.

    ಈ ಮೊದಲು ಐಟಿ-ಬಿಟಿ ಕಂಪನಿ ತೆರೆಯಲು ಸರ್ಕಾರ ಅನುಮತಿ ನೀಡಿರಲಿಲ್ಲ. ಆದರೆ ಹೊಸ ಪ್ರಕಟಣೆ ಹೊರಡಿಸಿರುವ ಸರ್ಕಾರವು ಕನಿಷ್ಠ ಸಿಬ್ಬಂದಿ ಆಧಾರದ ಮೇಲೆ  ಕಂಪನಿ ತೆರೆಯಬಹುದು ಎಂದು ತಿಳಿಸಿದೆ.

  • ಟಿನ್ ಫ್ಯಾಕ್ಟರಿ ಬಳಿ ಮೆಟ್ರೋ ಕಾಮಗಾರಿಗಾಗಿ ತೆರದಿದ್ದ ಹಳ್ಳಕ್ಕೆ ಬಿತ್ತು ಟಿಪ್ಪರ್ ಲಾರಿ

    ಟಿನ್ ಫ್ಯಾಕ್ಟರಿ ಬಳಿ ಮೆಟ್ರೋ ಕಾಮಗಾರಿಗಾಗಿ ತೆರದಿದ್ದ ಹಳ್ಳಕ್ಕೆ ಬಿತ್ತು ಟಿಪ್ಪರ್ ಲಾರಿ

    ಬೆಂಗಳೂರು: ಚಾಲಕನ ಅಜಾಗರೂಕತೆಯಿಂದ ಮೆಟ್ರೋ ಕಾಮಗಾರಿಗಾಗಿ ತೆರದಿದ್ದ ಹಳ್ಳಕ್ಕೆ ಟಿಪ್ಪರ್ ಲಾರಿಯೊಂದು ಉರುಳಿಬಿದ್ದ ಘಟನೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ.

    ಇಂದು ಬೆಳಗಿನ ಜಾವ 4:30 ರ ಸುಮಾರಿನಲ್ಲಿ ಹೊಸಕೋಟೆ ಕಡೆಯಿಂದ ಮರಳು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿ ಟಿನ್ ಫ್ಯಾಕ್ಟರಿ ಬಸ್ ಸ್ಟಾಪ್ ಸಮೀಪ ಅಳವಡಿಸಿದ್ದ ಮೆಟ್ರೋ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್ ಪಕ್ಕದಲ್ಲಿ ಕಾರ್ಮಿಕರು ತಂಗಲು ಇರಿಸಿದ್ದ ಕಂಟೇನರ್ ಗೂ ಡಿಕ್ಕಿ ಹೊಡೆದಿದ್ದರಿಂದ ಕಂಟೇನರ್ ಕೂಡ ಗುಂಡಿಗೆ ಬಿದ್ದಿದೆ.

    ಗುಂಡಿಗೆ ಬಿದ್ದಿರುವ ಲಾರಿ ಹಾಗೂ ಕಂಟೇನರ್ ಕ್ರೇನ್ ಮೂಲಕ ಹೊರ ತೆಗೆಯುವ ಕಾರ್ಯದಲ್ಲಿ ಬಿಎಂಆರ್‍ಸಿಎಲ್ ಸಿಬ್ಬಂದಿ ನಿರತರಾಗಿದ್ದು ಲಾರಿ ಚಾಲಕ ಮಣಿ ಎಂಬವನ ಸ್ಥಿತಿ ಗಂಭೀರವಾಗಿದೆ. ಕಂಟೇನರ್‍ನಲ್ಲಿ ಓರ್ವ ಕಾರ್ಮಿಕ ನಿದ್ರಿಸುತ್ತಿದ್ದು ಕಂಟೇನರ್ ನಲ್ಲಿ ಸಿಲುಕಿರುವ ಸಾಧ್ಯತೆ ಇರುವುದರಿಂದ ಗ್ಯಾಸ್ ಕಟಿಂಗ್ ಮೂಲಕ ಕಂಟೇನರ್ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

    ಘಟನೆಯಿಂದಾಗಿ ಟಿನ್ ಫ್ಯಾಕ್ಟರಿ ಯಿಂದ ಕೆ.ಆರ್. ಪುರದ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆ.ಆರ್. ಪುರ ಸಂಚಾರಿ ಪೊಲೀಸರು ಹರಸಾಹಸ ಪಟ್ಟು ಟ್ರಾಫಿಕ್ ಜಾಮ್ ನಿಯಂತ್ರಿಸಿದ್ದಾರೆ.