Tag: construction

  • ಮೆಟ್ರೋ ಕಾಮಗಾರಿ ವೇಳೆ ಗ್ಯಾಸ್ ಪೈಪ್ ಲೀಕೇಜ್ – ಸಾರ್ವಜನಿಕರಲ್ಲಿ ಆತಂಕ

    ಮೆಟ್ರೋ ಕಾಮಗಾರಿ ವೇಳೆ ಗ್ಯಾಸ್ ಪೈಪ್ ಲೀಕೇಜ್ – ಸಾರ್ವಜನಿಕರಲ್ಲಿ ಆತಂಕ

    ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ಡ್ರಿಲ್ಲಿಂಗ್ ಮಾಡುವಾಗ ಗ್ಯಾಸ್ ಪೈಪ್ ಲೀಕೇಜ್ ಆಗಿ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಿಸುವ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ಬೆಂಗಳೂರಿನ ಮಹದೇವಪುರ ಬಳಿಯ ಗರುಡಾಚಾರ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿ ವೇಳೆ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಡ್ರಿಲ್ಲಿಂಗ್ ಮಾಡುವಾಗ ಅಲ್ಲಿದ್ದಂತಹ 70 ಕಿ.ಲೋ ಫೋರ್ಸ್ ನ ಗ್ಯಾಸ್ ಪೈಪ್ ಲೈನ್ ಲೀಕೇಜ್ ಆಗಿದೆ.

    ಗ್ಯಾಸ್ ಲೀಕೇಜ್ ಬಳಿಕ ಕೆಲ ಗಂಟೆಗಳ ಕಾಲ ಅಲ್ಲಿನ ಸಾರ್ವಜನಿಕರಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿತ್ತು. ಐಟಿಪಿಎಲ್ ಪ್ರಮುಖ ರಸ್ತೆಯು ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಅವಘಡದ ಆತಂಕದಲ್ಲಿ ಅಲ್ಲಿನ ಸುತ್ತಮುತ್ತಲಿನ ಕಡೆ ಮೊಬೈಲ್ ಫೋನ್ ಸಹ ನಿಷೇಧಿಸಲಾಗಿತ್ತು.

    ಸಮಸ್ಯೆ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಲೀಕೇಜ್ ನಿಲ್ಲಿಸಲು ಹರಸಾಹಸ ಪಡಬೇಕಾಯಿತು. ನಂತರ ಕೆಲ ಗಂಟೆಗಳ ಬಳಿಕ ಗ್ಯಾಸ್ ಪೈಪ್ ಲೀಕೇಜ್  ನ್ನು ನಿಲ್ಲಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 7.78 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ 3 ತಿಂಗ್ಳಲ್ಲೇ ಬಿದ್ದೋಯ್ತು!

    7.78 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ 3 ತಿಂಗ್ಳಲ್ಲೇ ಬಿದ್ದೋಯ್ತು!

    ಭೋಪಾಲ್: ನಿರ್ಮಾಣವಾಗಿ 3 ತಿಂಗಳಲ್ಲೇ 7.78 ಕೋಟಿಯ ಸೇತುವೆಯೊಂದು ಕುಸಿದು ಬಿದ್ದ ಘಟನೆ ಶಿವಪುರಿ ಜಿಲ್ಲೆಯ ಪೊಹ್ರಿ ಟೆಹ್ಸಿಲ್ ಎಂಬಲ್ಲಿ ನಡೆದಿದೆ.

    ಕುನೋ ನದಿಗೆ ಈ ಸೇತುವೆ ನಿರ್ಮಾಣ ಮಾಡಲಾಗಿದ್ದು, 3 ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿತ್ತು. ಆದ್ರೆ ಶನಿವಾರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅರ್ಧ ಸೇತುವೆಯೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ನಗರ ಪ್ರದೇಶದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳು ನಾಶವಾಗಿದೆ ಅಂತ ಜಿಲ್ಲೆಯ ಮೂಲಗಳಿಂದ ತಿಳಿದುಬಂದಿದೆ.

    ಪ್ರವಾಹದಿಂದಾಗಿ 1 ವರ್ಷದ ಮಗುವೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಮೃತಪಟ್ಟಿದೆ. ಹಲವು ಗ್ರಾಮಗಳಿಂದ ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ರಕ್ಷಣೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ.

    ಕುನೋ ನದಿಗೆ ನಿರ್ಮಿಸಲ್ಪಟ್ಟ ಈ ಸೇತುವೆಯನ್ನು ಇದೇ ವರ್ಷ ಜೂನ್ 29ರಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡಿಕೊಟ್ಟರು. ಬಳಿಕ ಮಾತನಾಡಿದ ಅವರು, ಮಧ್ಯಪ್ರದೇಶ ಹಾಗೂ ರಾಜಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿರ್ಮಾಣ ಮಾಡಲು 778 ಲಕ್ಷ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಮೂಲಕ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯುತ್ತಿವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇದಾಗಿದೆ.

    ಡಿಸಿ ಶಿಲ್ಪಿ ಗುಪ್ತಾ ಈ ಬಗ್ಗೆ ರಾಷ್ಟ್ರೀಯ ಪತ್ರಕೆಯೊಂದಕ್ಕೆ ಮಾತನಾಡಿ, ಪಿಡಬ್ಲ್ಯುಡಿ ಅವರು ಈ ಸೇತುವೆಯನ್ನು ನಿರ್ಮಾಣ ಮಾಡಿದ್ದಾರೆ. ಹೀಗಾಗಿ ನಾನು ಅವರಿಂದ ಈ ಕುರಿತು ಸೋಮವಾರ ವರದಿ ಸಂಗ್ರಹಿಸುತ್ತೇನೆ. ಬಳಿಕ ತನಿಖೆ ನಡೆಸಲು ಶಿಫಾರಸ್ಸು ಮಾಡುತ್ತೇನೆ ಅಂತ ಹೇಳಿದ್ದಾರೆ.

    ಕಳಪೆ ಗುಣಮಟ್ಟದ ಕಾಮಗಾರಿಯೇ ಘಟನೆಗೆ ಕಾರಣವಾಗಿದ್ದು, ಹೀಗಾಗಿ ಈ ಬಗ್ಗೆ ಸಂಬಂಧಪಟ್ಟವರು ಪ್ರತಿಕ್ರಿಯಿಸಬೇಕು. ಇಲ್ಲವೆಂದಲ್ಲಿ ಈ ಕುರಿತು ಗ್ರಾಮಸ್ಥರು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ದೂರು ದಾಖಲಿಸುತ್ತಾರೆ ಅಂತ ತಿಳಿಸಿದ ಸ್ಥಳೀಯ ಬಿಜೆಪಿ ಶಾಸಕ ಪ್ರಹ್ಲಾದ್ ಭಾರ್ತಿ, ಕಳಪೆ ಕಾಮಗಾರಿ ಹಾಗೂ ಮುಂದೆ ಸಮಸ್ಯೆ ಆಗುವ ಭಯದಲ್ಲಿ ಗ್ರಾಮಸ್ಥರಿದ್ದಾರೆ ಅಂತ ಹೇಳಿದ್ರು.

    ಶನಿವಾರ ಸುರಿದ ಭಾರೀ ಮಳೆಯಿಂದಾಗಿ ನದಿ ಸೇತುವೆಯ ಮೇಲೆ ನೀರು ಹರಿದು ಹೋಗಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಕುಸಿದಿದೆ. ನನ್ನ ಕ್ಷೇತ್ರದಲ್ಲಿ ಕೇವಲ ಒಂದು ಗ್ರಾಮದಲ್ಲಿ ಮಾತ್ರ ಮಳೆಯಿಂದ ಹಾನಿಯಾಗಿದ್ದು, ಹೀಗಾಗಿ ಹಾನಿಯಾದ ಸಂಬಂಧ ತನಿಖೆ ನಡೆಸಬೇಕು ಅಂತ ಭಾರ್ತಿ ಆಗ್ರಹಿಸಿದ್ರು.

    ಮಳೆಯಿಂದಾಗಿ ಶಿಯೋಪುರ್ ಹಾಗೂ ಶಿವಪುರಿ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೊಂಡಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಚಾಲಕರು ಪರದಾಡುತ್ತಿದ್ದಾರೆ. 2 ಅಡಿಗಳಷ್ಟು ಗುಂಡಿಗಳು ರಸ್ತೆಯಲ್ಲಿ ನಿರ್ಮಾಣವಾಗಿದೆ. ಈ ರಸ್ತೆ ಕೂಡ ಇದೇ ವರ್ಷದ ಆರಂಭದಲ್ಲಿ ನಿರ್ಮಾಣವಾಗಿದ್ದು, ಇಷ್ಟು ಬೇಗ ಮಳೆಗೆ ಹಾಳಾಗಿರುವುದು ವಿಷಾದನೀಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಕಂಟ್ರಾಕ್ಟರ್

    ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಕಂಟ್ರಾಕ್ಟರ್

    ಕೊಪ್ಪಳ: ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ವಿದ್ಯಾರ್ಥಿಗಳನ್ನೇ ಬಳಸಿಕೊಂಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮ ಪಂಚಾಯಿತಿ ಕಡೆಯಿಂದ ವಣಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಪೌಂಡ್ ನಿರ್ಮಾಣದ ಕಾಮಗಾರಿಗೆ ಕೆಲಸವನ್ನು ಸ್ಥಳೀಯ ಗುತ್ತಿಗೆದಾರನೊಬ್ಬನಿಗೆ ಆಡಳಿತ ಮಂಡಳಿ ನೇಮಿಸಿದೆ. ಆದರೆ ಆ ಗುತ್ತಿಗೆದಾರ ಕಾಂಪೌಂಡ್ ನಿರ್ಮಾಣಕ್ಕೆ ಶಾಲಾ ಮಕ್ಕಳನ್ನೆ ಬಳಸಿಕೊಂಡಿದ್ದಾನೆ.

    ಕಾರ್ಮಿಕರನ್ನು ಕರೆದುಕೊಂಡು ಕಾಮಗಾರಿ ನಡೆಸಿದರೆ, ಕೂಲಿ ನೀಡಬೇಕಾಗುತ್ತದೆ ಎಂಬ ದುರಾಲೋಚನೆಯಿಂದ ಗುತ್ತಿಗೆದಾರ ಈ ಕಾರ್ಯಕ್ಕೆ ಮುಂದಾಗಿದ್ದಾನೆ. ಗುತ್ತಿಗೆದಾರನ ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮಕ್ಕಳನ್ನು ಕಾಮಗಾರಿಗೆ ಬಳಸಿಕೊಂಡಿದ್ದಕ್ಕೆ ಪೋಷಕರು ಗುತ್ತಿಗೆದಾರನ ವಿರುದ್ಧ ಆಕ್ರೋಶ ಹೊರಹಾಕಿದ್ದು, ಇದಕ್ಕೆ ಕುಮ್ಮಕ್ಕು ನೀಡಿದ ಶಾಲಾ ಸಿಬ್ಬಂದಿಯ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • 2019 ಲೋಕಸಭಾ ಚುನಾವಣೆ ವೇಳೆಗೆ ರಾಮಮಂದಿರ ನಿರ್ಮಾಣ ಆರಂಭ – ಶಾ ವಿರುದ್ಧ ಓವೈಸಿ ವಾಗ್ದಾಳಿ

    2019 ಲೋಕಸಭಾ ಚುನಾವಣೆ ವೇಳೆಗೆ ರಾಮಮಂದಿರ ನಿರ್ಮಾಣ ಆರಂಭ – ಶಾ ವಿರುದ್ಧ ಓವೈಸಿ ವಾಗ್ದಾಳಿ

    ಹೈದರಾಬಾದ್: 2019ರ ಲೋಕಾಸಭಾ ಚುನಾವಣೆ ವೇಳೆಗೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ ಮಾಡುವ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಈ ಹೇಳಿಕೆ ವಿರುದ್ಧ ಸದ್ಯ ಓವೈಸಿ ವಾಗ್ದಾಳಿ ನಡೆಸಿದ್ದು, 2019ರ ಬಳಿಕ ಈ ತೀರ್ಪು ನೀಡಲು ಹೇಳಿದೆ.

    ತೆಲಂಗಾಣ ಪ್ರವಾಸ ಕೈಗೊಂಡಿದ್ದ ಅಮಿತ್ ಶಾ ಅವರು, ಹೈದರಾಬಾದ್ ನಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದರು ಎಂದು ವರದಿಯಾಗಿತ್ತು. ಆದರೆ ಈ ಬಳಿಕ ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಬಿಜೆಪಿ ಇಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿತ್ತು.

    ತೆಲಂಗಾಣದಲ್ಲಿ ನಡೆದ ಪಕ್ಷದ ನಾಯಕರ ಸಭೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಅಮಿತ್ ಶಾ ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಅಜೆಂಡಾದ ಚಿಂತನೆಯೂ ನಮ್ಮಲ್ಲಿ ಇಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದೆ.

    ಸದ್ಯ ಬಿಜೆಪಿ ಸ್ಪಷ್ಟನೆ ನಡುವೆಯೇ ರಾಮಮಂದಿರ ನಿರ್ಮಾಣ ಹೇಳಿಕೆ ಕುರಿತು ಅಸಮಾಧಾನ ಹೊರ ಹಾಕಿರುವ ಎಐಎಂಐಎಂ (ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ) ಪಕ್ಷದ ಮುಖ್ಯಸ್ಥ ಅಸಾದುದ್ದಿನ್ ಓವೈಸಿ, ಸದ್ಯ ರಾಮ ಮಂದಿರ ನಿರ್ಮಾಣದ ಪ್ರಕರಣ ವಿಚಾರಣೆ ಸುಪ್ರೀ ಕೋರ್ಟ್ ನಲ್ಲಿದ್ದು, ಅಮಿತ್ ಶಾ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ. ಅದ್ದರಿಂದ ನ್ಯಾಯೋಚಿತ ಚುನಾವಣೆ ನಡೆಸಲು ಪ್ರಕರಣದ ಕುರಿತ ತೀರ್ಪು ಲೋಕಸಭಾ ಚುನಾವಣೆಗೂ ಬಳಿಕ ಬಂದರೆ ಉತ್ತಮ ಎಂದು ಟ್ವೀಟ್ ಮಾಡಿದ್ದಾರೆ.

    ಸದ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಕಪಿಲ್ ಸಿಬಲ್ ಸೇರಿದಂತೆ ಹಲವು ಪಕ್ಷಗಳ ನಾಯಕರು ಸಹ ರಾಮ ಮಂದಿರ ಕುರಿತ ತೀರ್ಪು ಚುನಾವಣೆಯ ಬಳಿಕ ಪ್ರಕಟಗೊಂಡರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇದರ ನಡುವೆಯೇ ಮುಸ್ಲಿಂ ಶಿಯಾ ವಕ್ಫ್ ಬೋರ್ಡ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಬೇಕೇ ಹೊರತು ಮಸೀದಿ ಅಲ್ಲ, ರಾಮ ಮಂದಿರ ವಿವಾದವನ್ನು ಶಾಂತಿಯುವಾಗಿ ಬಗೆಹರಿಸಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ಶುಕ್ರವಾರ ತಿಳಿಸಿದೆ.

  • ಕಾಮಗಾರಿ ವೇಳೆ ಕಾರ್ಮಿಕರ ನಿರ್ಲಕ್ಷ್ಯ: ನಾಯಿಯ ಮೇಲೆಯೇ ರಸ್ತೆ ನಿರ್ಮಾಣ!

    ಕಾಮಗಾರಿ ವೇಳೆ ಕಾರ್ಮಿಕರ ನಿರ್ಲಕ್ಷ್ಯ: ನಾಯಿಯ ಮೇಲೆಯೇ ರಸ್ತೆ ನಿರ್ಮಾಣ!

    ಲಕ್ನೋ: ರಸ್ತೆ ಬದಿ ಮಲಗಿದ್ದ ನಾಯಿಯ ದೇಹದ ಮೇಲೆಯೇ ರಸ್ತೆ ನಿರ್ಮಾಣ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾ ನಗರದಲ್ಲಿ ನಡೆದಿದೆ.

    ಆಗ್ರಾದ ಪತೇಹಾಬಾದ್‍ನ ರಸ್ತೆಗಳಿಗೆ ಮಂಗಳವಾರ ರಾತ್ರಿ ಡಾಂಬರೀಕರಣ ಕಾಮಗಾರಿ ನಡೆಸುತ್ತಿದ್ದರು. ಈ ವೇಳೆ ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆಯೇ ಬಿಸಿ ಟಾರ್ ಅನ್ನು ಹಾಕಿಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ ಸಾರ್ವಜನಿಕರಿಗೆ ನಾಯಿಯ ಪರಿಸ್ಥಿತಿಯನ್ನು ನೋಡಿ ಕಾಮಗಾರಿ ಕಂಪನಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ವೇಳೆ ನಾಯಿ ಅರಚಿದ್ದರೂ ಗಮನಿಸದೆ, ರಸ್ತೆ ನಿರ್ಮಾಣ ಮಾಡಿಕೊಂಡು ಹೋಗಿದ್ದಾರೆ.

    ಸಾಮಾಜಿಕ ಕಾರ್ಯಕರ್ತ ಗೋವಿಂದ ಪರಶಾರ್ ಎಂಬುವರು ಮಾತನಾಡಿ, ಕಾಲಿನ ಮೇಲೆ ರಸ್ತೆ ನಿರ್ಮಾಣವಾಗಿದ್ದರಿಂದ ನೋವಿನಿಂದ ನಾಯಿ ಸಾವನ್ನಪ್ಪಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಾಯಿಯ ದೇಹವನ್ನು ಜೆಸಿಬಿಯಿಂದ ತೆಗೆಸಿ ಅಂತ್ಯಸಂಸ್ಕಾರ ಮಾಡುವ ತೀರ್ಮಾನ ತೆಗೆದುಕೊಂಡಿದ್ದೇನೆ. ಅಲ್ಲದೇ ರಸ್ತೆ ನಿರ್ಮಾಣ ಮಾಡಿದ ಕೆಲಸದವರು ಈ ಘಟನೆ ಕುರಿತು ಪಾಠ ಕಲಿಯಬೇಕು. ಇಂತಹ ಘಟನೆಗಳು ಮರುಕಳಿಸಿಬಾರದು ಈ ಬಗ್ಗೆ ಕಾಮಗಾರಿ ಕಂಪನಿಗೆ ದೂರು ನೀಡುವುದಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅನೇಕ ಸಂಘ-ಸಂಸ್ಥೆಗಳು ಸ್ಥಳಕ್ಕಾಗಿಮಿಸಿ ಕಾಮಗಾರಿ ನಡೆಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಓರ್ವ ಕಾರ್ಮಿಕ ರಾತ್ರಿ ಕಾಮಗಾರಿ ನಡೆಯುವ ವೇಳೆ ಕತ್ತಲಿದ್ದರಿಂದ ಯಾವುದೇ ನಾಯಿ ಕಾಣಿಸಿಲ್ಲವೆಂದು ಹೇಳಿಕೆ ನೀಡಿದ್ದಾನೆ.

    ಘಟನೆ ಕುರಿತು ಮಾತನಾಡಿದ ಸಾರ್ವಜನಿಕ ಕಾಮಗಾರಿ ಎಂಜಿನೀಯರ್ ನರೇಶ್ ಕುಮಾರ್ ಆರ್ ಪಿ ಅವರು ಇನ್ಫ್ರಾವೆಂಚೂರ್ ಕಂಪನಿಗೆ ನೋಟೀಸ್ ನೀಡಿ ಎಚ್ಚರಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

  • ದರ್ಗಾ ಜಾತ್ರೆಗಾಗಿ ರಸ್ತೆ ನಿರ್ಮಾಣ ಮಾಡಿ ಐಕ್ಯತೆ ಮೆರೆದ ಗ್ರಾಮಸ್ಥರು

    ದರ್ಗಾ ಜಾತ್ರೆಗಾಗಿ ರಸ್ತೆ ನಿರ್ಮಾಣ ಮಾಡಿ ಐಕ್ಯತೆ ಮೆರೆದ ಗ್ರಾಮಸ್ಥರು

    ಕಲಬುರುಗಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಜಾತಿ ಜಾತಿಗಳ ಮಧ್ಯೆ ವೈಮನಸ್ಸು ಮೂಡುವುದು ಸಾಮಾನ್ಯ, ಆದರೆ ಜಿಲ್ಲೆಯ ತರಕಸಪೇಟ ಗ್ರಾಮದ ದರ್ಗಾ ಜಾತ್ರೆಗಾಗಿ ಹಿಂದು-ಮುಸ್ಲಿಮರು ಐಕ್ಯತೆ ಮೆರೆದಿದ್ದು, ತಾವೇ ರಸ್ತೆ ನಿರ್ಮಿಸಿಕೊಂಡು, ಜನಪ್ರತಿನಿಧಿಗಳಿಗೆ ಪಾಠ ಕಲಿಸಿದ್ದಾರೆ.

    ಜಿಲ್ಲೆ ಚಿತ್ತಾಪುರ ತಾಲೂಕಿನ ತರಕಸಪೇಟದ ಈ ಗ್ರಾಮದ ಹೊರವಲಯದ ಶಾಪೀರ್ ವಲಿ-ಗೈಪೀರ್ ವಲಿ ದರ್ಗಾದ ಬೃಹತ್ ಜಾತ್ರೆ ನಡೆಯುತ್ತದೆ. ಜಾತ್ರೆಯಲ್ಲಿ ಹಿಂದು-ಮುಸ್ಲಿಮರು ಒಟ್ಟಿಗೆ ಸೇರುತ್ತಾರೆ. ಆದರೆ ಗ್ರಾಮದಿಂದ ಒಂದೂವರೆ ಕಿ.ಮೀ. ದೂರದ ದರ್ಗಾಕ್ಕೆ ರಸ್ತೆ ನಿರ್ಮಾಣವಾಗಿಲ್ಲ. ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಇದರಿಂದ ರೋಸಿಹೋದ ತರಕಸಪೇಟದ ಗ್ರಾಮಸ್ಥರು ತಮ್ಮಲ್ಲೇ ಹಣ ಸಂಗ್ರಹಿಸಿ ಕಚ್ಚಾ ರಸ್ತೆ ನಿರ್ಮಿಸಿಕೊಂಡಿದ್ದಾರೆ.

    ಗ್ರಾಮದ ಜನ ನಿರ್ಮಿಸಿರುವ ರಸ್ತೆ ಚಿಕ್ಕದಾದರೂ ಇವರ ಭಾವೈಕತೆಯ ಮನಸ್ಸು ಮಾತ್ರ ದೊಡ್ಡದು. ಈ ಕಚ್ಚಾ ರಸ್ತೆಗೆ ಮುಂಬರುವ ದಿನಗಳಲ್ಲಿ ಡಾಂಬರೀಕರಣ ಮಾಡಲು ಸಹ ಗ್ರಾಮಸ್ಥರೇ ಸಿದ್ಧತೆ ಕೈಗೊಂಡಿದ್ದಾರೆ.

  • ಲಕ್ಷ ಲಕ್ಷ ಖರ್ಚು ಮಾಡಿ ಮನೆ ನಿರ್ಮಾಣ- ಗೃಹಪ್ರವೇಶಕ್ಕೂ ಮುನ್ನ ಬಂದು ಕುಳಿತ ನಾಗಪ್ಪ

    ಲಕ್ಷ ಲಕ್ಷ ಖರ್ಚು ಮಾಡಿ ಮನೆ ನಿರ್ಮಾಣ- ಗೃಹಪ್ರವೇಶಕ್ಕೂ ಮುನ್ನ ಬಂದು ಕುಳಿತ ನಾಗಪ್ಪ

    ಮಂಡ್ಯ: ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಮನೆಯ ಗೃಹಪ್ರವೇಶಕ್ಕೂ ಮುನ್ನ ನಾಗಪ್ಪ ಬಂದು ಮನೆಯಲ್ಲಿ ನೆಲೆಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬಿದರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮಹೇಶ್ ಎಂಬವರು ತಮ್ಮ ಜಮೀನಿನಲ್ಲಿ 8 ವರ್ಷಗಳ ಹಿಂದೆ ಮನೆ ಕಟ್ಟಲು ಆರಂಭಿಸಿದ್ದರು. ಆದರೆ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಹುತ್ತ ಬೆಳೆಯಲಾರಂಭಿಸಿತ್ತು. ಮೊದಲಿಗೆ ಮಹೇಶ್ ಹುತ್ತವನ್ನು ಕಿತ್ತು ಹಾಕಿ ಮನೆ ನಿರ್ಮಾಣದ ಕಡೆ ಗಮನಕೊಟ್ಟರು. ಆದರೆ ನಂತರ ಮಹೇಶ್ ಅವರ ಆರ್ಥಿಕ ಸಂಕಷ್ಟ ಹೆಚ್ಚಿ, ಮಕ್ಕಳಿಗೆ ಆರೋಗ್ಯದ ಸಮಸ್ಯೆ ಶುರುವಾಗಿತ್ತು.

    ಇದರಿಂದ ಹೆದರಿರೋ ಮಹೇಶ್ ಮನೆಯೊಳಗೆ ಬೆಳೆದ ಹುತ್ತವನ್ನು ಹಾಗೇ ಬಿಟ್ಟಿದ್ದಾರೆ. ಒಂದು ಬಾರಿ ಹಾವು ಕಾಣಿಸಿಕೊಂಡಿದ್ದು, ಹುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಅರ್ಧದಷ್ಟು ಪೂರ್ಣಗೊಂಡಿರುವ ಮನೆಯಲ್ಲಿ ಕಳೆದೊಂದು ವರ್ಷದಿಂದ ವಾಸಿಸುತ್ತಿದ್ದು, ಹುತ್ತಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ.

  • ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟು ಈಗ ನಿರ್ಮಾಣ ಅನಧಿಕೃತ ಎಂದ ಪಾಲಿಕೆ

    ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟು ಈಗ ನಿರ್ಮಾಣ ಅನಧಿಕೃತ ಎಂದ ಪಾಲಿಕೆ

    ತುಮಕೂರು: ಗುಡಿಸಲಲ್ಲಿದ್ದ ಆ ಕುಟುಂಬ ಹಾಗೋ ಹೀಗೋ ಪುಟ್ಟ ಸೂರೊಂದನ್ನು ಕಟ್ಟಿಕೊಳ್ಳುತ್ತಿತ್ತು. ಆದರೆ ಈಗ ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟ ಪಾಲಿಕೆಯೇ ಮನೆ ನಿರ್ಮಾಣ ಅನಧಿಕೃತ ಎಂದು ಹೇಳುತ್ತಿದೆ.

    ತುಮಕೂರಿನ ಮಾರುತಿ ನಗರದಲ್ಲಿ ಮೋಸಸ್ ಅರೋನ್ ಎಂಬವರು 30*40 ಸೈಟ್ ನಲ್ಲಿ ಮನೆ ಕಟ್ಟಲು ಮಹಾನಗರ ಪಾಲಿಕೆ ಅನುಮತಿ ಕೊಟ್ಟಿತ್ತು. ಆದರೆ ಈಗ ಪಾಲಿಕೆ ಅಧಿಕಾರಿಗಳೇ ನಿರ್ಮಾಣ ಅನಧಿಕೃತ ಎನ್ನುತ್ತಿದ್ದಾರೆ. ಮನೆ ನಿರ್ಮಾಣದ ಸಲಕರಣೆಗಳನ್ನು ಜಪ್ತಿ ಮಾಡಿದ್ದಾರೆ.

    2014ರಲ್ಲೇ ಮೋಸಸ್ ಅರೋನ್ ಪರವಾನಗಿಗಾಗಿ 3,400 ರೂ. ಶುಲ್ಕ ಕಟ್ಟಿದ್ದು, ಪರವಾನಗಿ ಪತ್ರವನ್ನೂ ಕೊಟ್ಟಿದ್ದರು. ಅದರೆ ಈಗ ಪಾಲಿಕೆ ಅಧಿಕಾರಿಯನ್ನು ಪ್ರಶ್ನಿಸಿದಾಗ ಜಾಗ ಟುಡಾ ಅಪ್ರೂವಲ್ ಆಗಿಲ್ಲ. ಹಾಗಾಗಿ ಪರವಾನಗಿ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ.

    ಹಾಗಾದರೆ ಶುಲ್ಕ ಕಟ್ಟಿಸಿಕೊಂಡಿದ್ಯಾಕೆ ಎಂದರೆ ಅದಕ್ಕೆ ಉತ್ತರ ಇಲ್ಲ. ಇದರ ಮಧ್ಯೆ ಶಾಸಕ ರಫೀಕ್ ಅಹಮದ್ ಹೆಸರೇಳಿಕೊಂಡು ಫಾರುಕ್ ಎಂಬ ವ್ಯಕ್ತಿ ಮನೆ ಕಟ್ಟಲು ಸುಖಾಸುಮ್ಮನೆ ಅಡ್ಡಿಪಡಿಸುತ್ತಿದ್ದು, ನಕಲಿ ಕರಾರು ಪತ್ರ ಮಾಡಿಸಿಕೊಂಡು ಮೋಸಸ್ ಕುಟುಂಬಕ್ಕೆ ಧಮ್ಕಿ ಹಾಕುತ್ತಿದ್ದಾನೆ. ಕೊಲೆ ಮಾಡ್ತೀನಿ ಎಂದು ಬೆದರಿಕೆ ಹಾಕುತ್ತಿದ್ದು ಮೋಸಸ್ ಕುಟುಂಬ ಜೀವ ಭಯದಲ್ಲಿ ಬದುಕುತ್ತಿದೆ.

  • ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ತೆಗೆದ ಗುಂಡಿಯಲ್ಲಿ ಬಿದ್ದ ಗೋವುಗಳು- ಸ್ಥಳೀಯರಿಂದ ರಕ್ಷಣೆ

    ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ತೆಗೆದ ಗುಂಡಿಯಲ್ಲಿ ಬಿದ್ದ ಗೋವುಗಳು- ಸ್ಥಳೀಯರಿಂದ ರಕ್ಷಣೆ

    ಗದಗ: ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆಂದು ತೆಗೆದ ಆಳವಾದ ಗುಂಡಿಯಲ್ಲಿ ಬಿದ್ದು ನರಳಾಡುತ್ತಿದ್ದ ಗೋವುಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ಬೆಟಗೇರಿಯಲ್ಲಿ ನಡೆದಿದೆ.

    ಮಾರುಕಟ್ಟೆಯ ಆವರಣದಲ್ಲಿ ಕಾಲಮ್ ನಿರ್ಮಾಣಕ್ಕಾಗಿ 15 ಅಡಿ ಆಳದ ಗುಂಡಿ ತೆಗೆಯಲಾಗಿದೆ. ಈ ಗುಂಡಿಯಲ್ಲಿ ಬೆಳಗಿನ ಜಾವ ಎರಡು ಆಕಳು ಬಿದ್ದು ಒದ್ದಾಡುತ್ತಿದ್ದವು. ಕೊನೆಗೆ ಸ್ಥಳೀಯರು ಗುಂಡಿಯಲ್ಲಿ ಇಳಿದು ಗೋವುಗಳ ಕಾಲಿಗೆ ಹಗ್ಗ ಕಟ್ಟಿ ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ.

    ಮಾರ್ಚ್ 1 ರಂದು ಎರಡು ಆಕಳುಗಳು ಇದೇ ಗುಂಡಿಯಲ್ಲಿ ಬಿದ್ದಿದ್ದವು. ಅಂದು ಕೂಡ ಸ್ಥಳೀಯರೇ ರಕ್ಷಿಸಿದ್ದರು. ಎರಡು ಗಂಟೆಗಳಿಂದ ಮೂಕ ಪ್ರಾಣಿಗಳು ನರಳಾಡಿದ್ರೂ ರಕ್ಷಣೆಗೆ ಬಾರದ ನಗರಸಭೆ ಸಿಬ್ಬಂದಿ ಹಾಗೂ ಗುತ್ತಿಗೆದಾರರ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.

    ಸಾಕಷ್ಟು ಬಾರಿ ಆಕಳು ಹಾಗೂ ನಾಯಿ ಹೀಗೆ ಅನೇಕ ಪ್ರಾಣಿಗಳು ಗುಂಡಿಯಲ್ಲಿ ಬೀಳುತ್ತಿವೆ. ಅಧಿಕಾರಿಗಳು ಮಾತ್ರ ಇದರತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ. ಮಾರುಕಟ್ಟೆಗೆ ಬರುವ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಗುಂಡಿಯಲ್ಲಿ ಬಿದ್ದರೆ ಯಾರು ಹೊಣೆ? ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು. ಇಲ್ಲವಾದ್ರೆ ಮುಂದಾಗುವ ಅನಾಹುತಗಳಿಗೆ ನಗರಸಭೆ ಹಾಗೂ ಗುತ್ತಿಗೆದಾರರೇ ಕಾರಣವಾಗಬೇಕಾಗುತ್ತದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

     

  • 2 ವರ್ಷಗಳ ಕಾಲ ಬಿಳಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಸ್ಥಾನ ಬಂದ್

    2 ವರ್ಷಗಳ ಕಾಲ ಬಿಳಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಸ್ಥಾನ ಬಂದ್

    ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥ್ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಈ ತಿಂಗಳ 15 ರಿಂದ ಮುಂದಿನ ಎರಡು ವರ್ಷಗಳ ಕಾಲ ದೇವಾಲಯವನ್ನು ಮುಚ್ಚಲಾಗುತ್ತಿದೆ.

    ಸುಮಾರು 500 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ದೇವಾಲಯ ಶಿಥಿಲಗೊಂಡಿರುವುದರಿಂದ ದೇವಾಲಯವನ್ನು ಸದ್ಯ 2.90 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ಥಿ ಮಾಡಲಾಗುತ್ತಿದೆ. ರಾಜ್ಯ ಪುರಾತತ್ವ ಇಲಾಖೆಯಿಂದ ಈಗಾಗಲೇ ಹಣ ಬಿಡುಗಡೆಯಾಗಿದ್ದು, ಮುಂದಿನ ವಾರದಿಂದ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಪ್ರಾರಂಭವಾಗಲಿದೆ.

    ದೇವಸ್ಥಾನದ ಕಾಮಗಾರಿ ಹಿನ್ನೆಲೆಯಲ್ಲಿ ಭಕ್ತಾದಿಗಳು ಮಾರ್ಚ್ 15 ರವರೆಗೆ ರಂಗನಾಥ್ ಸ್ವಾಮಿಯ ದರ್ಶನವನ್ನು ಪಡೆಯಬಹುದಾಗಿದೆ. ಮಾರ್ಚ್ 15ರ ನಂತರ ಪೂಜೆ ವಿಧಿವಿಧಾನಗಳ ಮೂಲಕ ದೇವರ ಹಾಗೂ ಅಮ್ಮನವರ ವಿಗ್ರಹಗಳನ್ನು ಮುಚ್ಚಿಡಲಾಗುತ್ತದೆ. ಮಾರ್ಚ್ 18 ರಂದು ಧಾರ್ಮಿಕ ದತ್ತಿ ಇಲಾಖೆಗೆ ದೇವಾಲಯವನ್ನು ಹಸ್ತಾಂತರ ಮಾಡಲಾಗುತ್ತದೆ. ಈ ಹಿಂದೆ ಇದ್ದ ಪ್ರಾಚೀನ ಶೈಲಿಯ ಮಾದರಿಯಲ್ಲಿ ದೇವಾಲಯವನ್ನು ನಿರ್ಮಾಣ ಮಾಡಲಾಗುತ್ತದೆ. ಮುಂದಿನ ಎರಡು ವರ್ಷಗಳ ಕಾಲ ದೇವಾಲಯದಲ್ಲಿ ನಡೆಯುವ ಚಿಕ್ಕ ಮತ್ತು ದೊಡ್ಡ ರಥೋತ್ಸವಗಳನ್ನು ಕೂಡ ರದ್ದುಗೊಳಿಸಲಾಗಿದೆ.