Tag: Consumers

  • ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮುಲ್ ಬಟರ್‌ಗೆ ಕೊರತೆ

    ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮುಲ್ ಬಟರ್‌ಗೆ ಕೊರತೆ

    ನವದೆಹಲಿ: ದೆಹಲಿ, ಅಹಮದಾಬಾದ್ (Ahmedabad) ಮತ್ತು ಪಂಜಾಬ್ (Punjab) ಸೇರಿದಂತೆ ವಿವಿಧ ಭಾಗಗಳ ಮಾರುಕಟ್ಟೆಯಲ್ಲಿ ಅಮುಲ್ ಬಟರ್ (Amul Butter)ಕೊರತೆ ಎದುರಾಗಿದೆ. ಈ ಬಗ್ಗೆ ಗ್ರಾಹಕರು ಟ್ವಿಟ್ಟರ್‌ನಲ್ಲಿ ಟೀಕಿಸುತ್ತಿದ್ದಾರೆ.

    ರೇಷನ್ ಆ್ಯಪ್‍ಗಳಲ್ಲಿ ಅಮುಲ್ ಬಟರ್ ಹೆಸರು ಕಾಣಿಸುತ್ತಿಲ್ಲ. ಹೀಗಾಗಿ ಮಾರುಕಟ್ಟೆಗಳಲ್ಲಿ ನಕಲಿ ಅಮುಲ್ ಬಟರ್ ಮಾರಾಟದ ಹಾವಳಿ ಹೆಚ್ಚಾಗಿದೆ. ಪ್ರಥಮವಾಗಿ ಅಹಮದಾಬಾದ್‍ನಲ್ಲಿ ಅಮುಲ್ ಬಟರ್ ಕೊರತೆ ಕಾಣಿಸಿಕೊಂಡಿತು. ದೆಹಲಿಯಲ್ಲಿ (Delhi) 20 ರಿಂದ 25 ದಿನಗಳಿಂದ ಅಮುಲ್ ಬಟರ್ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದ್ದು, ವಿತರಕರು ಅಮುಲ್ ಬಟರ್ ಪೂರೈಕೆ ಕೊರತೆಯಿದೆ ಮತ್ತು ಸರಕುಗಳನ್ನು ನಾವು ಸ್ವೀಕರಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

    ಅಹಮದಾಬಾದ್‍ನಲ್ಲಿಯೂ ಎಲ್ಲೂ ಅಮುಲ್ ಬಟರ್ ಬೆಣ್ಣೆ ಸಿಗುತ್ತಿಲ್ಲ. ಡೈರಿಗಳು ಸೇರಿದಂತೆ ಅಮುಲ್ ಕೂಡ ಬೆಣ್ಣೆಯನ್ನು ಹೆಚ್ಚಾಗಿ ಉತ್ಪಾದಿಸುತ್ತಿಲ್ಲ. ಒಂದು ವಾರದಿಂದ ಅಮುಲ್ ಬಟರ್ ಕೊರತೆಯು ಇದೆ ಎಂದು ಅಂಗಡಿಯ ಮಾಲೀಕರು ಹೇಳುತ್ತಿದ್ದಾರೆ ಎಂದು ಗ್ರಾಹಕರು ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಲೂಟಿಯಾಗಿದ್ದ 5,500 ವರ್ಷಗಳ ಪುರಾತನ ವಸ್ತುಗಳನ್ನು ಭಾರತ, ಪಾಕ್‌ಗೆ ಹಸ್ತಾಂತರಿಸಿದ ನ್ಯೂಯಾರ್ಕ್‌

    ಭಾರತದ ಅನೇಕ ರಾಜ್ಯಗಳಲ್ಲಿರುವ ಸೂಪರ್ ಮಾರ್ಕೆಟ್‍ಗಳು, ಕಿರಾಣಿ ಅಂಗಡಿಗಳು ಮತ್ತು ಡೆಲಿವರಿ ಅಪ್ಲಿಕೇಶನ್‍ಗಳಲ್ಲಿ ಅಮುಲ್ ಬ್ರಾಂಡ್ ಬೆಣ್ಣೆಯ ಪೂರೈಕೆಯ ಕೊರತೆ ಇದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದೆ. ದೀಪಾವಳಿ ಸಮಯದಲ್ಲಿ ಅಮುಲ್ ಬಟರ್ ಉತ್ಪನ್ನಕ್ಕೆ ಹೆಚ್ಚಿನ ಬೇಡಿಕೆ ಇದ್ದಿದ್ದರಿಂದ ಮಾರುಕಟ್ಟೆಗಳಲ್ಲ ಬೆಣ್ಣೆಯ ಕೊರತೆ ಎದುರಾಗಿದೆ ಎಂದು ಹೇಳಲಾಗುತ್ತಿದೆ.

    ಈ ಕುರಿತಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅಮುಲ್ ವ್ಯವಸ್ಥಾಪಕ ನಿರ್ದೇಶಕ ಆರ್‌ಎಸ್ ಸೋಧಿ ಅವರು, ಮಾರುಕಟ್ಟೆಯಲ್ಲಿ ಅಮುಲ್ ಬಟರ್ ಪೂರೈಕೆ ಮತ್ತು ಲಭ್ಯತೆ 4-5 ದಿನಗಳಲ್ಲಿ ಸಂಪೂರ್ಣವಾಗಿ ಸಾಮಾನ್ಯ ಸ್ಥಿತಿಗೆ ತಲುಪಲಿದೆ. ಈಗ ಉತ್ಪನ್ನವಾಗುತ್ತಿರುವುದಕ್ಕಿಂತಲೂ ಮುಂದೆ ಅಮುಲ್ ಬಟರ್ ಉತ್ಪಾದನೆ ಹೆಚ್ಚಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಗ್ರಾಹಕನ ಜೊತೆ ನಿರ್ಲಕ್ಷ್ಯ – SBI ಬ್ಯಾಂಕ್‌ಗೆ 1.10 ಲಕ್ಷ ರೂ. ದಂಡ

    ಗ್ರಾಹಕನ ಜೊತೆ ನಿರ್ಲಕ್ಷ್ಯ – SBI ಬ್ಯಾಂಕ್‌ಗೆ 1.10 ಲಕ್ಷ ರೂ. ದಂಡ

    ಧಾರವಾಡ: ಗ್ರಾಹಕರ ಜೊತೆ ನಿರ್ಲಕ್ಷ್ಮ ತೋರಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‍ಬಿಐ)ಗೆ 1 ಲಕ್ಷದ 10 ಸಾವಿರ ರೂ. ದಂಡವನ್ನು ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ವಿಧಿಸಿದೆ.

    ಸಾಲದ ಬಾಕಿ ಅಥವಾ ಬೇರೆ ಯಾವುದೇ ರೀತಿಯ ಹಣ ಕೊಡುವುದು ಬಾಕಿ ಇರದಿದ್ದರೂ ಗ್ರಾಹಕರೊಬ್ಬರಿಗೆ ನಿಮ್ಮ ಹೆಸರಿನಲ್ಲಿ ನಮ್ಮ ಬ್ಯಾಂಕಿನಲ್ಲಿ ಸಾಲದ ಬಾಕಿ ಇದೆ. ನೀವು ಸುಸ್ತಿ ಬಾಕಿದಾರರಾಗಿದ್ದೀರಿ ಎಂದು ಧಾರವಾಡದ ಎಚ್.ಡಿ.ಎಮ್.ಸಿ ಮತ್ತು ಹುಬ್ಬಳ್ಳಿ ಕೇಶ್ವಾಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ನೋಟಿಸ್ ಕಳಿಸಲಾಗಿತ್ತು. ಇದನ್ನೂ ಓದಿ: ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ: ಸಿದ್ದರಾಮಯ್ಯ 

    ಧಾರವಾಡದ ಯಾದಗಿರಿ ಚಾಳಿನ ಕರುಣಾಕರ ಶೆಟ್ಟಿ ಅವರಿಗೆ ಹಲವಾರು ಬಾರಿ ನೋಟಿಸ್ ಕೊಡಲಾಗಿತ್ತು. ಇದರಿಂದ ತನ್ನ ಗೌರವಕ್ಕೆ ಚ್ಯುತಿ ಬಂದಿದೆ ಮತ್ತು ತನಗೆ ಬ್ಯಾಂಕಿನವರಿಂದ ಸೇವಾ ನ್ಯೂನ್ಯತೆ ಆಗಿದೆ ಎಂದು ಬ್ಯಾಂಕ್ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಕರುಣಾಕರ ಶೆಟ್ಟಿ ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.

    Sbi Foundation Day: A Look At The Spectacular Journey Of India'S Largest Lender

    ಈ ಕುರಿತು ವಿಚಾರಣೆ ನಡೆಸಿದ ಆಯೋಗ, ಯಾವುದೇ ರೀತಿಯ ಸಾಲ ಕೊಡುವುದು ಬಾಕಿ ಇರದಿದ್ದರೂ ಗ್ರಾಹಕ ಕರುಣಾಕರ ಶೆಟ್ಟಿಗೆ ಸುಸ್ತಿ ಬಾಕಿದಾರ ಇತ್ಯಾದಿಯಾಗಿ ಹೆಸರಿಸಿ, ಹಲವು ಬಾರಿ ನೋಟಿಸ್ ನೀಡಿರುವುದರಿಂದ ಗ್ರಾಹಕನ ವರ್ಚಸ್ಸಿಗೆ ಕುಂದು ಉಂಟಾಗಿದೆ. ಇದರ ಪರಿಣಾಮವಾಗಿ ಸೇವಾ ನ್ಯೂನ್ಯತೆ ಆಗಿದೆ ಎಂದು ಅಭಿಪ್ರಾಯಪಟ್ಟು ಸ್ಟೇಟ್ ಬ್ಯಾಂಕ್ ಅವರು ದೂರುದಾರ ಕರುಣಾಕರ ಶೆಟ್ಟಿಗೆ 1,10,000 ರೂ. ಪರಿಹಾರ ಕೊಡಬೇಕು ಎಂದು ತೀರ್ಪು ನೀಡಿದೆ. ಇದನ್ನೂ ಓದಿ:  44 ಕಿಮೀ ಸುತ್ತಾಡಿ ಕಾರಿನಲ್ಲಿಯೇ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್ 

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‍ನಲ್ಲಿ ಕೆಜಿ ನಿಂಬೆಹಣ್ಣಿಗೆ 200 ರೂ. – ಗ್ರಾಹಕರು ಕಂಗಾಲು

    ಗುಜರಾತ್‍ನಲ್ಲಿ ಕೆಜಿ ನಿಂಬೆಹಣ್ಣಿಗೆ 200 ರೂ. – ಗ್ರಾಹಕರು ಕಂಗಾಲು

    ಗಾಂಧೀನಗರ: ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಿಂಬೆ ಹಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು, ನಿಂಬೆಹಣ್ಣಿನ ಬೆಲೆ ಕೂಡ ಏರಿಕೆಯಾಗಿದೆ. ಪ್ರತಿ ಕೆಜಿಗೆ 50-60ರೂ. ಇದ್ದ ನಿಂಬೆಹಣ್ಣು ಇದೀಗ 200 ರೂ.ಗೆ ಮಾರಾಟವಾಗುತ್ತಿದೆ.

    ಈ ಕುರಿತಂತೆ ಪ್ರತಿಕ್ರಿಯಿಸಿದ ಗ್ರಾಹಕರೊಬ್ಬರು, ನಿಂಬೆ ಹಣ್ಣಿನ ಬೆಲೆ ಕೆಜಿಗೆ 200 ತಲುಪುತ್ತಿದೆ. ಮೊದಲು ನಿಂಬೆ ಹಣ್ಣಿನ ಬೆಲೆ ಕೆಜಿಗೆ 50-60 ರೂ. ಇತ್ತು. ನಾವು ಎಲ್ಲವನ್ನೂ ಬಜೆಟ್‍ಗೆ ಹೊಂದಿಸಬೇಕು. ಆದರೆ ಈ ಬೆಲೆ ಏರಿಕೆ ನಮ್ಮ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಗಳು ಯಾವಾಗ ಕಡಿಮೆಯಾಗುತ್ತವೆ ಯಾವಾಗ ಹೆಚ್ಚಗುತ್ತದೆ ಎಂಬುವುದೇ ನಮಗೆ ತಿಳಿಯುತ್ತಿಲ್ಲ ಎಂದಿದ್ದಾರೆ.

    ಬೇಸಿಗೆ ಸಂದರ್ಭದಲ್ಲಿ ಉಷ್ಣತೆ ಹೆಚ್ಚಾಗುವುದರಿಂದ ಜನರು ತಮ್ಮ ಆಹಾರದಲ್ಲಿ ನಿಂಬೆ ಹಣ್ಣನ ರಸವನ್ನು ಬಳಸಲು ಬಯಸುತ್ತಾರೆ. ಏಕೆಂದರೆ ಅವುಗಳಲ್ಲಿ ವಿಟಮಿನ್ ಸಿ ಇರುವುದರಿಂದ ಜೀರ್ಣಕ್ರಿಯೆ ಸುಲಭವಾಗಿ ಆಗುತ್ತದೆ. ಹೀಗಾಗಿ ಜನ ನಿಂಬೆಹಣ್ಣನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದೆ.

    ಬಹುತೇಕ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಮಧ್ಯಮ ವರ್ಗದ ಜನರು ಬೆಲೆಬಾಳುವ ತರಕಾರಿಗಳನ್ನು ಖರೀದಿಸಲು ಕಷ್ಟ ಆಗುತ್ತಿದೆ. ಇದೀಗ ಮೊದಲು ನಾವು ಖರೀದಿಸುತ್ತಿದಷ್ಟು ನಿಂಬೆಹಣ್ಣುಗಳನ್ನು ಹೆಚ್ಚಾಗಿ ಖರೀದಿಸಲು ಸಾಧ್ಯವಾಗುತ್ತಿಲ್ಲ. ಕಳೆದ ವರ್ಷ ಮಾರ್ಚ್‍ನಲ್ಲಿ ಬೆಲೆಗಿಂತ ಈ ಬಾರಿ ನಿಂಬೆ ಹಣ್ಣಿನ ಬೆಲೆ ದ್ವಿಗುಣವಾಗಿದೆ. ಏಪ್ರಿಲ್-ಮೇನಲ್ಲಿ ಏನಾಗುತ್ತೋ ಗೊತ್ತಿಲ್ಲ ಎಂದು ಮತ್ತೊಬ್ಬ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.

  • ಎಟಿಎಂ ಒಡೆದು ಹಾಕಿ 15 ಲಕ್ಷ ದೋಚಿದ ಖದೀಮರು

    ಎಟಿಎಂ ಒಡೆದು ಹಾಕಿ 15 ಲಕ್ಷ ದೋಚಿದ ಖದೀಮರು

    ಚಿಕ್ಕಬಳ್ಳಾಪುರ: ಮಧ್ಯರಾತ್ರಿ ಎಟಿಎಂಗೆ ಎಂಟ್ರಿ ಕೊಟ್ಟ ಇಬ್ಬರು ಕಳ್ಳರು ಎಟಿಎಂ ಯಂತ್ರ ಒಡೆದು ಹಾಕಿ ಸರಿ ಸುಮಾರು 15 ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೇರೇಸಂದ್ರ ಕ್ರಾಸ್‍ನಲ್ಲಿ ನಡೆದಿದೆ.  ಇದನ್ನೂ ಓದಿ: ಹಾಸನದಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ – ಮಷಿನ್‍ ಸಂಪೂರ್ಣ ಜಖಂ

    ATM

    ಗ್ರಾಮದ ಎಸ್‍ಬಿಎಂ ಎಟಿಎಂ ಸೆಂಟರ್ ನಲ್ಲಿ ಘಟನೆ ನಡೆದಿದ್ದು, ಮುಸುಕುಧಾರಿಗಳಾಗಿ ಬಂದ ದರೋಡೆಕೋರರು ಮೊದಲು ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದು ಹಾಕಿ ಕೃತ್ಯ ನಡೆಸಿದ್ದಾರೆ. ಬೆಳಿಗ್ಗೆ ಹಣ ಡ್ರಾ ಮಾಡಲು ಬಂದ ಗ್ರಾಹಕರು ಬ್ಯಾಂಕ್ ಮ್ಯಾನೇಜರ್ ಗೆ ವಿಷಯ ತಿಳಿಸಿದ್ದು, ಬ್ಯಾಂಕ್ ಮ್ಯಾನೇಜರ್ ಪೇರೇಸಂದ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಟಿಎಂ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೇರೇಸಂದ್ರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  ಇದನ್ನೂ ಓದಿ: ಸಿಸಿಟಿವಿ ಧ್ವಂಸಗೊಳಿಸಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ

    ATM

    ಇತ್ತೀಚೆಗಷ್ಟೇ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದಲ್ಲಿ ಎಸ್‌ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ಮಾಡಿ ಹಣ ಸಿಗದೇ ದರೋಡೆಕೋರ ಬರಿಗೈಯಲ್ಲಿ ತೆರಳಿದ್ದನು. ಇನ್ನೂ ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳ್ಳತನ ಮಾಡಲು ಬಂದಿದ್ದ ಕಳ್ಳ ಸಿಸಿಟಿವಿ ಗಮನಿಸಿದ ಬಳಿಕ ಎಚ್ಚರಗೊಂಡು ಸಿಸಿಟಿವಿಯನ್ನು ಧ್ವಂಸ ಮಾಡಿ ಅಲ್ಲಿಂದ ಪರಾರಿಯಾಗಿದ್ದನು.

  • ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್ಲ

    ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್ಲ

    – ಚಿನ್ನದ ಅಂಗಡಿ ಬಂದ್‍ಗೆ ಗದಗನಲ್ಲಿ ಆಕ್ರೋಶ

    ಧಾರವಾಡ/ಗದಗ: ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಧಾರವಾಡ ಮಹಾನಗರ ಪಾಲಿಕೆ ಧಾರವಾಡ ತರಕಾರಿ ಮಾರುಕಟ್ಟೆಯನ್ನು ನಗರದ ಕೆಇ ಬೊರ್ಡ್ ಶಾಲೆಯ ಆವರಣಕ್ಕೆ ಸ್ಥಳಾಂತರಿಸಿದೆ. ಆದರೆ ಅಲ್ಲಿ ಕೊಳ್ಳವವರೂ ಬರುತ್ತಿಲ್ಲ, ಮಾರುವವರೂ ಬರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ.

    ವ್ಯಾಪಾರಕ್ಕೆ ಬರುವವರಿಗೆ ಇಗಾಗಲೇ ಪಾಲಿಕೆ ಮಾರ್ಕಿಂಗ್ ಮಾಡಿ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೆಲವೇ ಕೆಲವು ತರಕಾರಿ ವ್ಯಾಪಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ವ್ಯಾಪಾರ ಇಲ್ಲದ ಕಾರಣ ಮೊದಲಿನ ಜಾಗಕ್ಕೇ ಕಳುಹಿಸಿ ಎಂದು ಮನವಿ ಮಾಡುತಿದ್ದಾರೆ.

    ಬಿಸಿಲಿನಲ್ಲಿ ಕೂರಲು ಆಗುತ್ತಿಲ್ಲ, ಅಲ್ಲದೆ ಜನರು ಸಹ ಇತ್ತ ಬರುತ್ತಿಲ್ಲ. ವ್ಯಾಪಾರವೇ ಆಗುತ್ತಿಲ್ಲ. ಹೀಗಾಗಿ ತುಂಬಾ ಕಷ್ಟವಾಗುತ್ತಿದೆ. ನಮ್ಮನ್ನು ಮೊದಲಿನ ಜಾಗಕ್ಕೇ ಕಳುಹಿಸಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಗ್ರಾಹಕರು ಸಹ ಮಾರುಕಟ್ಟೆಯತ್ತ ಬಾರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ.

    ಚಿನ್ನದ ಅಂಗಡಿ ಬಂದ್ ಗೆ ಆಕ್ರೋಶ

    ಸರ್ಕಾರದ ಆಫ್ ರೂಲ್ಸ್ ನಿರ್ಧಾರದ ವಿರುದ್ಧ ಗದಗ ಜಿಲ್ಲೆಯ ಅನೇಕ ಚಿನ್ನದ ಅಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಕೋವಿಡ್ ನಿಯಮಗಳನ್ನು ಪಾಲಿಸುತ್ತೇವೆ. ಅಂಗಡಿ ತೆರೆಯಲು ಅವಕಾಶ ಕಲ್ಪಿಸಿ ಕೊಡಿ ಎಂದು ಚಿನ್ನದ ಅಂಗಡಿಯ ಅನೇಕ ಮಾಲೀಕರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಅನೇಕ ಕಡೆಗಳಲ್ಲಿ ಮಾರ್ಕೆಟ್ ಓಪನ್ ಇದೆ. ಗದಗನಲ್ಲಿ ಮಾತ್ರ ಬಂದ್ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಳೆದ 2 ವರ್ಷಗಳಿಂದ ವ್ಯಾಪಾರ ಕುಂಠಿತದಿಂದ ಸಾಕಷ್ಟು ತೊಂದರೆಯಲ್ಲಿದ್ದೆವೆ. ಜೀವನ ನಡೆಸುವುದು ದುಸ್ತರವಾಗಿದೆ. ರಾಜಕಾರಣಿಗಳು ಚುನಾವಣೆ, ಸಭೆ, ಸಮಾರಂಭಗಳಂತಹ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಅವರಿಗಿಲ್ಲದ ಕಾನೂನು ಸಣ್ಣಪುಟ್ಟ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಯಾಕೆ ಎಂದು ಸರ್ಕಾರದ ವಿರುದ್ಧ ಗುಡುಗಿದರು. ಮದುವೆ, ಶುಭ ಸಮಾರಂಭಗಳ ಈ ಸೀಸನ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದರೆ ಬದುಕೊದು ಹೇಗೆ ಎಂದು ಪ್ರಶ್ನಿಸಿದರು. ವೀಕೆಂಡ್ ಲಾಕ್‍ಡೌನ್ ಬಿಟ್ಟು ಉಳಿದ ದಿನಗಳಲ್ಲಿ, ಕೋವಿಡ್ ನಿಯಮ ಪಾಲಿಸುತ್ತೇವೆ ದಿನಕ್ಕೆ 4 ಗಂಟೆ ವರೆಗೆಯಾದರೂ, ಅಂಗಡಿ ತೆರೆಯಲು ಅನುಮತಿ ಕೊಡಿ ಎಂದು ಚಿನ್ನದ ಅಂಗಡಿ ಮಾಲೀಕರು ಬೇಡಿಕೆ ಇಟ್ಟಿದ್ದಾರೆ.

  • ಸಂತೆಗಳ ವ್ಯಾಪಾರಿಗಳಿಂದಲೇ  ಕೋವಿಡ್ ಸೇಲ್

    ಸಂತೆಗಳ ವ್ಯಾಪಾರಿಗಳಿಂದಲೇ ಕೋವಿಡ್ ಸೇಲ್

    ಮಡಿಕೇರಿ: ರಾಜ್ಯದಲ್ಲಿ ಕೊರೊನಾ ಸುನಾಮಿ ತಾಂಡವಾಡುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸಹ ಕಳೆದ ಒಂದು ವಾರದಿಂದ ಶತಕದ ಆಸುಪಾಸಿನಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಿದ್ದರೂ ಸಂತೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕೊರೊನಾಗೆ ಡೋಂಟ್ ಕೇರ್ ಎನ್ನುತ್ತಿದ್ದು, ವ್ಯಾಪಾರಿಗಳು ಮಾಸ್ಕ್ ಧರಿಸದೆ ಹಣ್ಣು, ತರಕಾರಿಗಳನ್ನು ಮಾರಾಟ ಮಾಡುತ್ತಿದ್ದಾರೆ.

    ವ್ಯಾಪಾರಿಗಳು ಜಿಲ್ಲೆಯ ವಿವಿಧ ಸಂತೆಗಳಲ್ಲಿ ಹಣ್ಣು ತರಕಾರಿಗಳ ಜೊತೆಗೆ ಕೊರೊನಾ ಸೇಲ್ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ನಡೆಯುವ ಮಡಿಕೇರಿ, ಕುಶಾಲನಗರ ಮತ್ತು ಸುಂಟಿಕೊಪ್ಪದ ಪ್ರಮುಖ ಮೂರು ಸಂತೆಗಳಲ್ಲಿ ಈ ವ್ಯಾಪಾರಿಗಳು ಇರುತ್ತಾರೆ. ಆದರೆ ಮಾಸ್ಕ್ ಸೇರಿದಂತೆ ಕೊರೊನಾ ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಸಂತೆಗಳಿಗೆ ಬರುವ ನೂರಾರು ಗ್ರಾಹಕರಿಗೆ ಹಣ್ಣು, ತರಕಾರಿ ಮತ್ತು ದಿನಸಿ ವಸ್ತುಗಳ ಜೊತೆಗೆ ವ್ಯಾಪಾರಿಗಳು ಕೊರೊನಾ ವೈರಸ್ ನ್ನೂ ಸೇಲ್ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

    ವ್ಯಾಪಾರಿಗಳು ಮಾಸ್ಕ್ ಧರಿಸದೇ ವ್ಯಾಪಾರ ಮಾಡುತ್ತಿರುವುದು ನಮಗೂ ಆತಂಕವಿದೆ ಎಂದು ಗ್ರಾಹಕರು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಬೇಕಾದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಪೊಲೀಸರು ಸಂತೆಗಳತ್ತ ತಿರುಗಿ ನೋಡುತ್ತಿಲ್ಲ.

  • ಸಂಕಷ್ಟಕ್ಕೀಡಾಗಿದ್ದ ಈರುಳ್ಳಿ ಬೆಳೆಗಾರರು- ಬೆಲೆ ಏರಿಕೆಯಿಂದ ಕೊಂಚ ಸಂತಸ

    ಸಂಕಷ್ಟಕ್ಕೀಡಾಗಿದ್ದ ಈರುಳ್ಳಿ ಬೆಳೆಗಾರರು- ಬೆಲೆ ಏರಿಕೆಯಿಂದ ಕೊಂಚ ಸಂತಸ

    ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ.

    ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ.

    ಈ ಬಾರಿಯ ಮುಂಗಾರು ಮಳೆ ರಾಜ್ಯದ ರೈತರಲ್ಲಿ ಭಾರೀ ನಿರೀಕ್ಷೆಗಳನ್ನ ಹುಟ್ಟು ಹಾಕಿತ್ತು. ಆದರೆ ಅತೀವೃಷ್ಟಿಯಿಂದಾಗಿ ಅನ್ನದಾತರ ಆಸೆಗಳೆಲ್ಲ ಕಣ್ಣೀರಾಗಿ ಕರಗಿ ಹೋಗಿವೆ. ಇಂತಹ ಕಷ್ಟದ ಸಮಯದಲ್ಲಿ ಈರುಳ್ಳಿ ಬೆಲೆ ಹೆಚ್ಚಿರುವುದು ರೈತರಲ್ಲಿ ಸ್ವಲ್ಪ ಸಮಾಧಾನ ತಂದಿದೆ. ಬೆಳೆದ ಬೆಳೆಯಲ್ಲಿ ಅರ್ಧದಷ್ಟು ಮಳೆಗೆ ಹಾಳಾಗಿದ್ದರೂ ಇನ್ನರ್ಧ ಬೆಳೆಗೆ ಬಂಗಾರದ ಬೆಲೆ ಬಂದಿದೆ. ಹೀಗಾಗಿ ರಾಯಚೂರಿನಲ್ಲಿ ಈರುಳ್ಳಿ ಬೆಳೆದ ರೈತರು ತಕ್ಕಮಟ್ಟಿಗೆ ಸಮಾಧಾನದಲ್ಲಿದ್ದಾರೆ.

    ಕ್ವಿಂಟಾಲ್ ಈರುಳ್ಳಿ ಬೆಲೆ 5 ರಿಂದ 6 ಸಾವಿರ ರೂಪಾಯಿ ತಲುಪಿದ್ದು. ಜಮೀನಿಗೆ ಖರ್ಚು ಮಾಡಿದ ಹಣವಾದರೂ ಮರಳಿ ಬಂತಲ್ಲ ಎಂದು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಚಿಕ್ಕಗಡ್ಡೆಗೆ 3 ರಿಂದ 4 ಸಾವಿರ ರೂಪಾಯಿ ಸಿಗುತ್ತಿದೆ. ಜಿಲ್ಲೆಯಲ್ಲಿ ಈಗ ಹೊರಗಡೆಯಿಂದ ಬರುವ ಈರುಳ್ಳಿ ಪ್ರಮಾಣ ಕಡಿಮೆಯಾಗಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮೊದಲೇ ಈರುಳ್ಳಿ ಸಂಗ್ರಹಿಸಿಟ್ಟುಕೊಂಡಿದ್ದವರಿಗೆ ಉತ್ತಮ ಲಾಭ ಸಿಗುತ್ತಿದೆ. ಬೆಳೆ ಇನ್ನೂ ಜಮೀನಿನಲ್ಲಿದ್ದವರು ಬೆಳೆನಷ್ಟ ಅನುಭವಿಸಿದ್ದಾರೆ. ಅತೀಯಾದ ಮಳೆಗೆ ಜಿಲ್ಲೆಯ ಲಿಂಗಸಗೂರು , ರಾಯಚೂರು ತಾಲೂಕಿನಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಈರುಳ್ಳಿ ಹಾಳಾಗಿದೆ.

    ಬೆಲೆ ಹೆಚ್ಚಳದ ಜೊತೆಗೆ ತರಕಾರಿ ಮಾರುಕಟ್ಟೆಗೆ ಈರುಳ್ಳಿ ಬರುತ್ತಿಲ್ಲ. ಹೀಗಾಗಿ ಪ್ರತಿದಿನ ಐದಾರು ಕ್ವಿಂಟಾಲ್ ಈರುಳ್ಳಿ ಮಾರುತ್ತಿದ್ದ ತರಕಾರಿ ವ್ಯಾಪಾರಿಗಳು ಈಗ ಒಂದೆರಡು ಕ್ವಿಂಟಾಲ್ ಮಾರಿದರೆ ಹೆಚ್ಚು ಎನ್ನುವಂತಾಗಿದೆ. ಮಹಾರಾಷ್ಟ್ರದ ನಾಂದೆಡ್, ಔರಂಗಬಾದ್, ನಾಸಿಕ್, ಪುಣೆಯಿಂದ ಬರುತ್ತಿದ್ದ ಈರುಳ್ಳಿ ಪ್ರಮಾಣ ಮಳೆಯಿಂದ ತಗ್ಗಿದೆ. ಹೀಗಾಗಿ ಈರುಳ್ಳಿ ಬೆಲೆ ತರಕಾರಿ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 60 ರಿಂದ 120 ರೂ.ವರೆಗೆ ನಡೆಯುತ್ತಿದೆ. ಸಣ್ಣ ಗಡ್ಡೆ ಸಹ ಉತ್ತಮ ಬೆಲೆಗೆ ಮಾರಾಟವಾಗುತ್ತಿದೆ.

    ರೈತರಿಗೆ ಸಂತೋಷವಾದರೆ ಹಬ್ಬದ ಸಮಯದಲ್ಲಿ ಈರುಳ್ಳಿ ದುಬಾರಿಯಾಗಿರುವುದು ಗ್ರಾಹಕರಿಗೆ ಬೇಸರ ಮೂಡಿಸಿದೆ. ಈರುಳ್ಳಿ ಜೊತೆಗೆ ಬಹುತೇಕ ಎಲ್ಲ ತರಕಾರಿ ಬೆಲೆ ಏರಿಕೆಯಾಗಿರುವುದು ಗ್ರಾಹಕರಿಗೆ ಹೊರೆಯಾಗಿದೆ.

  • ಎಟಿಎಂನಿಂದ ಬಂತು ತುಕ್ಕು ಹಿಡಿದ 2 ಸಾವಿರದ ನೋಟು

    ಎಟಿಎಂನಿಂದ ಬಂತು ತುಕ್ಕು ಹಿಡಿದ 2 ಸಾವಿರದ ನೋಟು

    ಧಾರವಾಡ: ಸಾಮಾನ್ಯವಾಗಿ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡರೆ ಹೊಸ ನೋಟುಗಳು ಬರುತ್ತವೆ. ಆದರೆ ಧಾರವಾಡದ ಎಟಿಎಂ ಒಂದರಲ್ಲಿ ತುಕ್ಕು ಹಿಡಿದ ನೋಟು ಬರುತ್ತಿವೆ.

    ಅದೂ 100 ಹಾಗೂ 500 ರೂ. ನೋಟಲ್ಲ, ಬದಲಾಗಿ ಎರಡು ಸಾವಿರದ ನೋಟುಗಳು. ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಎಸ್‍ಬಿಐ ಎಟಿಎಂನಲ್ಲಿ ಈ ನೋಟುಗಳು ಬಂದಿದ್ದರಿಂದ ಡ್ರಾ ಮಾಡಿದ ವ್ಯಕ್ತಿ ಹೌಹಾರಿದ್ದಾನೆ. ಗೌಸ್ ನವಲೂರ ಎಂಬ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಈ ಎಸ್‍ಬಿಐ ಎಟಿಎಂನಲ್ಲಿ 10 ಸಾವಿರ ರೂಪಾಯಿ ಡ್ರಾ ಮಾಡಿದ್ದರು.

    ಆದರೆ ಅವುಗಳು ಕಲರ್ ಕಲರ್ ಆಗಿದ್ದನ್ನು ನೋಡಿ, ಚೆಕ್ ಮಾಡಿದ್ರೆ ತುಕ್ಕು ಹಿಡಿದ ಕಬ್ಬಿಣದಂತೆ ನೋಟಿನ ಮೇಲೆ ಬಣ್ಣ ಹತ್ತಿದೆ. ಆಸ್ಪತ್ರೆಗೆ ಹಣ ಬೇಕು ಎಂದು ಡ್ರಾ ಮಾಡಿದ್ದ ಈ ವ್ಯಕ್ತಿಗೆ ಬೇರೆ ಕಡೆ ಹೋಗಿ ನೋಟು ಬದಲಾವಣೆ ಮಾಡಲು ಅವಕಾಶ ಇರಲಿಲ್ಲ. ಹೀಗಾಗಿ ಈ ರೀತಿಯ ನೋಟು ಬಂದಿದ್ದರಿಂದ ಈ ವ್ಯಕ್ತಿ ಪರದಾಟ ನಡೆಸಬೇಕಾಯಿತು. ಅದಕ್ಕೆ ಈ ರೀತಿಯ ನೋಟು ಹಾಕುವವರು ನೋಡಿ ಎಟಿಎಂನಲ್ಲಿ ಹಾಕಬೇಕು. ಇಲ್ಲದೇ ಇದ್ದಲ್ಲಿ ತುರ್ತು ಪರಿಸ್ಥಿತಿ ಇದ್ದವರಿಗೆ ಇದು ದೊಡ್ಡ ಕಷ್ಟ ಎಂದು ಹೇಳಿದ್ದಾರೆ.

  • ಕೊರೊನಾ ಸಂಕಷ್ಟದ ನಡುವೆ ಗ್ರಾಹಕರಿಗೆ ಶಾಕ್ – ಗಗನಕ್ಕೇರಿದ ತರಕಾರಿ ಬೆಲೆ

    ಕೊರೊನಾ ಸಂಕಷ್ಟದ ನಡುವೆ ಗ್ರಾಹಕರಿಗೆ ಶಾಕ್ – ಗಗನಕ್ಕೇರಿದ ತರಕಾರಿ ಬೆಲೆ

    ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಕೂಡ ತರಕಾರಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಆಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ದಿನೇ ದಿನೇ ರಾಕೆಟ್ ವೇಗದಲ್ಲಿ ಹೆಚ್ಚಾಗುತ್ತಿದೆ ತರಕಾರಿ ಬೆಲೆ ಕಂಡು ಗ್ರಾಹಕರು ಸುಸ್ತಾಗಿದ್ದಾರೆ. ಕಳೆದ ಮೂರು ದಿನಗಳಿಂದ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಹೋಟೆಲ್ ಉದ್ಯಮ, ವ್ಯಾಪಾರಿಗಳಿಗೆ ಮತ್ತು ಗ್ರಾಕರಿಗೆ ತಲೆನೋವಾಗಿದೆ. ಇದನ್ನು ಓದಿ: ಕೋಲಾರ ಟೊಮೆಟೊಗೆ ಅಂತರ್ ರಾಜ್ಯ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ

    ರಾಜ್ಯದ ಹಲವಾರು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ತರಕಾರಿ ಬೆಲೆ ಜಾಸ್ತಿಯಾಗುತ್ತಿದೆ ಎನ್ನಲಾಗಿದೆ. ಏಕೆಂದರೆ ರೈತರು ಬೆಳೆದಿದ್ದ ಬೆಳೆಯೆಲ್ಲ ವರುಣ ದೇವನ ಅಟ್ಟಹಾಸಕ್ಕೆ ಕೊಚ್ಚಿಹೋಗಿವೆ. ರಾಯಚೂರು, ಬೀದರ್, ಬಳ್ಳಾರಿ ಮತ್ತು ಕಲಬುರಗಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಬೆಳೆ ಎಲ್ಲ ತೋಟದಲ್ಲೇ ನಾಶವಾಗುತ್ತಿರೋ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಮುಂದಿನ ತಿಂಗಳವರೆಗೂ ಬೆಲೆ ಕಡಿಮೆಯಾಗೋದು ಡೌಟ್ ಎಂದು ಅಂದಾಜಿಸಲಾಗಿದೆ.

    ಯಾವುದಕ್ಕೆ ಏಷ್ಟು ಬೆಲೆ? – ಸದ್ಯ ಬೆಂಗಳೂರಿನಲ್ಲಿ ತರಕಾರಿ ಬೆಲೆಯನ್ನು ನೋಡುವುದಾದರೆ, ಬಟಾಣಿ ಕೆಜಿಗೆ 227 ರೂ., ಬೀನ್ಸ್-100 ರೂ., ಮೆಣಸಿನಕಾಯಿ-69 ರೂ., ಬೆಂಡೆಕಾಯಿ-50 ರೂ., ಊಟಿ ಕ್ಯಾರಟ್- 94 ರೂ., ಹೀರೇಕಾಯಿ-60 ರೂ., ಮೂಲಂಗಿ-40 ರೂ., ಟೊಮ್ಯಾಟೊ-60 ರೂ., ಬೀಟ್‍ರೂಟ್-40 ರೂ., ಸೌತೆಕಾಯಿ-40 ರೂ., ನುಗ್ಗೆಕಾಯಿ-120 ರೂ., ದಪ್ಪ ಮೆಣಸಿನಕಾಯಿ-60 ರೂ., ಎಲೆಕೋಸು-40 ರೂ., ಆಲೂಗಡ್ಡೆ-40 ರೂ. ಗೆಣಸು-60 ರೂ., ಬದನೆಕಾಯಿ-40 ರೂ. ಮತ್ತು ಈರುಳ್ಳಿ ಕೆಜಿಗೆ 40ರೂ. ಆಗಿದೆ.

  • ಕೋಲಾರ ಟೊಮೆಟೊಗೆ ಅಂತರ್ ರಾಜ್ಯ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ

    ಕೋಲಾರ ಟೊಮೆಟೊಗೆ ಅಂತರ್ ರಾಜ್ಯ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ

    – ಸೇಬು ಬೆಲೆಗೆ ಮಾರಾಟವಾಗುತ್ತಿದೆ ಟೊಮೆಟೊ

    ಕೋಲಾರ: ಅಡುಗೆಗೆ, ಊಟಕ್ಕೆ ಟೊಮೆಟೊ ಅತ್ಯವಶ್ಯಕವಾಗಿದ್ದು, ಈ ಕಿಚನ್ ಕ್ವೀನ್ ಇಲ್ಲದೆ ಅಡುಗೆ ಸಪ್ಪೆ. ಆದರೆ ಇದೀಗ ಟೊಮಾಟೊ ಬೆಲೆ ಗಗನಕ್ಕೇರಿದೆ. ದೇಶದ ಅತ್ಯಂತ ದೊಡ್ಡ ಟೊಮೆಟೊ ಮಾರುಕಟ್ಟೆಯಲ್ಲಿ ಸೇಬು ಬೆಲೆಗೆ ಮಾರಾಟವಾಗುತ್ತಿದೆ.

    ಕೋಲಾರ ಸೇರಿದಂತೆ ಸುತ್ತಲಿನ ರೈತರಿಗೆ ಇದರಿಂದಾಗಿ ಅಪಾರ ಲಾಭವಾಗುತ್ತಿದ್ದು, 15 ಕೆ.ಜಿ. ತೂಕದ ಒಂದು ಟೊಮೆಟೊ ಕ್ರೇಟ್‍ನ ಬೆಲೆ ಈಗ 800 ರೂಪಾಯಿಯ ಗಡಿ ದಾಟಿದೆ. ಒಂದು ಕೆ.ಜಿ. ಟೊಮೆಟೊ ಬೆಲೆ ಈಗ ಹೋಲ್‍ಸೇಲ್ ದರದಲ್ಲಿ 65 ರೂಪಾಯಿ ಧಾರಣೆಯಾಗಿದ್ದು, ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ 15 ಕೆ.ಜಿ. ತೂಕದ ಒಂದು ಬಾಕ್ಸ್ ಟೊಮೆಟೊ 800 ರೂ.ಗಳಿಗೆ ಏರಿಕೆ ಆಗಿದೆ. ಕೊರೊನಾ ಸಂದರ್ಭದಲ್ಲಿ ಸೂಕ್ತ ಬೆಲೆ ಸಿಗದೆ ಟೊಮ್ಯಾಟೊ ಬೆಳೆದಿದ್ದ ರೈತರು ಕಂಗಾಲಾಗಿದ್ದರು.

    ನೀರಿನ ಅಭಾವ, ಅಂತರ್ಜಲ ಮಟ್ಟ ಕುಸಿದಿದ್ದರೂ, 1,500 ಅಡಿ ಆಳದಿಂದ ನೀರು ತೆಗೆದು ಕಷ್ಟಪಟ್ಟು ಬೆಳೆಯುತ್ತಿದ್ದಾರೆ. ಹೀಗಾಗಿ ಇಲ್ಲಿನ ಟೊಮೆಟೊಗೆ ನೆರೆಯ ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಪಶ್ಚಿಮಬಂಗಾಳ, ದೆಹಲಿ ಮುಂತಾದ ರಾಜ್ಯಗಳು. ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶಗಳಲ್ಲಿ ಹೆಚ್ಚಾಗಿ ಬೇಡಿಕೆ ಇದೆ. ಇದರಿಂದಾಗಿ ಈ ಸೀಸನ್‍ನಲ್ಲಿ ಸ್ಥಳೀಯ ಟೊಮೆಟೊಗೆ ಉತ್ತಮ ಬೆಲೆ ಸಿಗುತ್ತಿದ್ದು, ಟನ್‍ಗಟ್ಟಲೆ ಟೊಮೆಟೊ ರಫ್ತು ಮಾಡಲಾಗುತ್ತದೆ. ಹೊರ ರಾಜ್ಯಗಳಲ್ಲಿ ಮಳೆಯಿಂದ ಟೊಮೆಟೊ ಬೆಳೆ ಇಲ್ಲ. ಹೀಗಾಗಿ ಈ ಸೀಸನ್‍ನಲ್ಲಿ ಕೋಲಾರದ ಟೊಮೆಟೊ ಬೆಲೆ ಗಗನಕ್ಕೇರಿದೆ.

    ಜಿಲ್ಲೆಯಲ್ಲಿ ಸೀಡ್ಸ್ ಮತ್ತು ನಾಟಿ ಟೊಮೆಟೊ ಬೆಳೆಯಲಾಗುತ್ತದೆ. ಈ ಎರಡು ಉತ್ತಮ ತಳಿಗಳು ಒಂದು ವಾರ ಕಾಲ ಕೆಡದಂತೆ ಇರುತ್ತದೆ. ಪ್ರತಿನಿತ್ಯ 14 ರಿಂದ 15 ಸಾವಿರ ಕ್ವಿಂಟಾಲ್ ನಷ್ಟು ಟೊಮೆಟೊ ಮಾರುಕಟ್ಟಗೆ ಬರುತ್ತಿದ್ದು, ನಿತ್ಯ ಸರಾಸರಿ 3 ಕೋಟಿಯಷ್ಟು ವಹಿವಾಟು ನಡೆಯುತ್ತದೆ. ಮಾರ್ಚ್ ತಿಂಗಳಿನಿಂದ ಸೆಪ್ಟಂಬರ್ ತಿಂಗಳವರೆಗೆ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಟೊಮೆಟೊ ಬೆಳೆಯಲು ಕಷ್ಟವಾಗುತ್ತದೆ. ಈ ರಾಜ್ಯಗಳಲ್ಲಿ ಹೆಚ್ಚು ಬಿಸಿಲು, ಒಂದು ಕಡೆ ಮಳೆ ಇರುವುದರಿಂದ ಟೊಮೆಟೊ ಬೆಳೆಯಲು ಪೂರಕ ವಾತಾವರಣ ಇಲ್ಲ. ಹೀಗಾಗಿ ರಾಜ್ಯದಲ್ಲಿ ಬೆಳೆದ ಬೆಳೆಗೆ ಹೆಚ್ಚು ಬೇಡಿಕೆ.

    ಕೋಲಾರ ಜಿಲ್ಲೆಯಲ್ಲಿ ಈ ಅವಧಿಯಲ್ಲಿ ಹೆಚ್ಚು ಟೊಮೆಟೊ ಬೆಳೆಯಲಾಗುತ್ತದೆ. ಈ ಬಾರಿ ಬಿಸಿಲು ಹೆಚ್ಚಾಗಿದ್ದರಿಂದ ಬೆಳೆ ಕೂಡ ಉತ್ತಮವಾಗಿದೆ, ಇದರಿಂದ ಬೆಲೆ ಏರಿಕೆ ಹೆಚ್ಚಾಗಿದೆ. ಹೊರ ರಾಜ್ಯಗಳಲ್ಲಿ ಕೊರೊನಾ ಭೀತಿ ಇರುವುದರಿಂದ ಬೆಲೆ ಏರಿಕೆ ನಿಧಾನಗತಿಯಲ್ಲಿ ಏರುತ್ತಿದೆ. ಇನ್ನು 15 ದಿನಗಳ ನಂತರ ಟೊಮೆಟೊ ಬೆಲೆ ಒಂದು ಬಾಕ್ಸ್‍ಗೆ 1000 ರೂ.ಗಳಿಗೆ ಏರಿಕೆ ಆದಲಿದೆ ಎಂದು ಅಂದಾಜಿಸಲಾಗಿದೆ.

    ಕೋಲಾರದ ರೈತರಿಗೆ ಟೊಮೆಟೊ ಬೆಳೆ ಲಾಟರಿಯಂತಾಗಿದ್ದು, ಒಮ್ಮೆ ಬೆಲೆ ಸಿಕ್ಕರೆ, ಮತ್ತೊಮ್ಮೆ ಬೆಲೆ ಕುಸಿಯುತ್ತದೆ. ಈ ವೇಳೆ ಬೀದಿಗೆ ಸುರಿಯುತ್ತಾರೆ. ಆದರೆ ಈ ಬಾರಿ ಬೆಳೆದ ರೈತರಿಗೆ ಭರ್ಜರಿ ಬೆಲೆಯೇ ಸಿಕ್ಕಿದೆ.