Tag: Containment Zone

  • ಬೆಂಗ್ಳೂರಲ್ಲಿ ಸಾವಿರ ದಾಟಿದ ಕೊರೊನಾ- 3 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧಾರ

    ಬೆಂಗ್ಳೂರಲ್ಲಿ ಸಾವಿರ ದಾಟಿದ ಕೊರೊನಾ- 3 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧಾರ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

    ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ.

    ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ ವೈದ್ಯಕೀಯ ಆಸ್ಪತ್ರೆ, ಕಾಲೇಜುಗಳಲ್ಲಿ ಕೂಡ ಚಿಕತ್ಸೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕಂಟೈನ್ಮೆಂಟ್ ಝೋನ್‍ಗಳ ಸಂಖ್ಯೆ ಏರಿಕೆ:
    ರಾಜಧಾನಿ ಬೆಂಗಳೂರಿನ ಸುತ್ತ ಆವರಿಸಿರುವ ಕೊರೊನಾ ಸಾವಿರ ಗಡಿ ದಾಟಿದ್ದು, ಕಂಟೈನ್ಮೆಂಟ್ ಝೂನ್ ಗಳ ಸಂಖ್ಯೆ 279ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮೂಲೆ ಮೂಲೆಯಲ್ಲೂ ಕಂಟೈನ್ಮೆಂಟ್ ವಲಯಗಳು ಹುಟ್ಟಿಕೊಂಡಿವೆ.

    ಯಾವ್ಯಾವ ವಲಯದಲ್ಲಿ ಎಷ್ಟೆಷ್ಟು ಕಂಟೈನ್ಮೆಂಟ್ ಝೋನ್‍ಗಳು:
    ಬೊಮ್ಮನಹಳ್ಳಿ ವಲಯ- 38 ಕಂಟೈನ್ಮೆಂಟ್ ಝೂನ್ ಗಳು
    ದಾಸರಹಳ್ಳಿ ವಲಯ- 9 ಕಂಟೈನ್ಮೆಂಟ್ ಝೂನ್ ಗಳು
    ಬೆಂಗಳೂರು ಪೂರ್ವ ವಲಯ- 45 ಕಂಟೈನ್ಮೆಂಟ್ ಝೂನ್
    ಮಹದೇವಪುರ ವಲಯ- 31 ಕಂಟೈನ್ಮೆಂಟ್ ಝೂನ್
    ರಾಜರಾಜೇಶ್ವರಿ ನಗರ- 12 ಕಂಟೈನ್ಮೆಂಟ್ ಝೂನ್

    ಬೆಂಗಳೂರು ದಕ್ಷಿಣ ವಲಯ- 81 ಕಂಟೈನ್ಮೆಂಟ್ ಝೂನ್
    ಬೆಂಗಳೂರು ಪಶ್ಚಿಮ ವಲಯ- 38 ಕಂಟೈನ್ಮೆಂಟ್ ಝೂನ್
    ಯಲಹಂಕ ವಲಯ- 17 ಕಂಟೈನ್ಮೆಂಟ್ ಝೂನ್

  • 30ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾದ ಕಂಟೈನ್ಮೆಂಟ್ ಝೋನ್‍ಗೆ ನುಗ್ಗಿ ಕಳ್ಳತನ

    30ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾದ ಕಂಟೈನ್ಮೆಂಟ್ ಝೋನ್‍ಗೆ ನುಗ್ಗಿ ಕಳ್ಳತನ

    – ಸುಮಾರು 1 ಲಕ್ಷ ರೂ.ಚಿನ್ನಾಭರಣ ಕಳ್ಳತನ

    ದಾವಣಗೆರೆ: ಕೊರೊನಾ ಭಯವನ್ನೂ ಲೆಕ್ಕಿಸದ ಕಳ್ಳರು ಕಂಟೈನ್ಮೆಂಟ್ ಝೋನ್‍ಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

    ನಗರದ ಇಮಾಮ್ ನಗರದಲ್ಲಿ ಘಟನೆ ನಡೆದಿದ್ದು, ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಹೀಗಿದ್ದರೂ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಒಂದು ಲಕ್ಷ ರೂಪಾಯಿಗೂ ಅಧಿಕ ಬೆಲೆಯ ಚಿನ್ನ, 56 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿದ್ದಾರೆ. ಅರುಣ್ ಕುಮಾರ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಇದೇ ಏರಿಯಾದಲ್ಲಿ ಸರಣಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

    ಕಂಟೋನ್ಮೆಂಟ್ ಝೋನ್ ಮಾಡಿದ ಹಿನ್ನೆಲೆ 20 ದಿನಗಳ ಹಿಂದೆ ಅರುಣ್ ಕುಮಾರ್ ಕುಟುಂಬ ವಿನೋಬನಗರದ ತಮ್ಮ ಸಂಬಂಧಿಕರ ಮನೆಗೆ ತೆರಳಿತ್ತು. ಇದೇ ಸಮಯವನ್ನು ನೋಡಿಕೊಂಡು ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಕಂಟೋನ್ಮೆಂಟ್ ಝೋನ್ ಬಳಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇಷ್ಟೆಲ್ಲಾ ಭದ್ರತೆ ನಡುವೆಯೂ ಕಳ್ಳತನ ಮಾಡಿದ್ದಾರೆ. ಅಲ್ಲದೆ ಇಮಾಮ್ ನಗರದ ಕಂಟೋನ್ಮೆಂಟ್ ಝೋನ್‍ನಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಭಯದಿಂದಲೇ ಜನ ಕಾಲ ಕಳೆಯುತ್ತಿದ್ದಾರೆ.

    ಕಳ್ಳತನದ ಕುರಿತು ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

  • ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ ಓಪನ್

    ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ ಓಪನ್

    – ಮಾರ್ಗಸೂಚಿಯಲ್ಲಿ ಏನಿದೆ..?

    ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

    ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್‍ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್‍ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.

    ಈ ಹಿಂದೆಯೇ ಜೂನ್ 8ರಿಂದ ಮಾಲ್‍ಗಳನ್ನು ಓಪನ್ ಮಾಡಲಾಗುವುದು ಎಂದು ಹೇಳಲಾಗಿತ್ತು. ಅಂತೆಯೇ ಸರ್ಕಾರ ಈ ತೀರ್ಮಾನ ಮಾಡಿದ್ದು, 65 ವರ್ಷದೊಳಗಿನ ವೃದ್ಧರು ಹಾಗೂ 10 ವರ್ಷದೊಳಗಿನ ಮಕ್ಕಳು ಮಾಲ್‍ಗಳಿಗೆ ಪ್ರವೇಶಿಸುವಂತಿಲ್ಲ. ಜೊತೆಗೆ ಪ್ರತಿಯೊಬ್ಬರೂ ಕೂಡ 6 ಅಡಿಯಷ್ಟು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಎಂಬ ಷರತ್ತು ವಿಧಿಸಿದೆ.

    ಮಾಲ್‍ಗಳಿಗೆ ಮಾರ್ಗಸೂಚಿ
    ಮಾಲ್ ಪ್ರವೇಶಿಸುವ ಅಂಗಡಿಗಳ ನೌಕರರು, ಮಾಲ್ ಕೆಲಸಗಾರರು, ಗ್ರಾಹಕರು, ಸಿಬ್ಬಂದಿಗೆ ಫೇಸ್ ಮಾಸ್ಕ್ ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ನಿಯಮ ಪಾಲಿಸಲು ಸಿಬ್ಬಂದಿ ನೇಮಿಸಬೇಕು. ವೃದ್ಧ ನೌಕಕರು, ಗರ್ಭಿಣಿ ಕೆಲಸಗಾರು ಕೆಲಸಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಜೊತೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಬೇಕು. ಪಾರ್ಕಿಂಗ್ ಮತ್ತು ಮಾಲ್ ಆವರಣದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ನಿಭಾಯಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿಲಾಗಿದೆ.

    ಪಾರ್ಕಿಂಗ್ ಸಿಬ್ಬಂದಿಗೆ ಮಾಸ್ಕ್, ಗ್ಲವ್ಸ್ ಬಳಕೆ ಕಡ್ಡಾಯವಾಗಿರಬೇಕು. ಮಾಲ್ ಒಳಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಸೀಮಿತ ಜನರ ಪ್ರವೇಶಕ್ಕೆ ಆದ್ಯತೆ ನೀಡಬಹುದು. ಎಸ್ಕಲೇಟರ್‍ನಲ್ಲಿ ಒಂದು ಮೆಟ್ಟಿಲು ನಡುವೆ ಅಂತರ ಕಾಪಾಡಿಕೊಳ್ಳಬೇಕು. ಎಸಿ ಅವಶ್ಯಕ ಇದ್ದರೆ 24-30 ಡಿಗ್ರಿ ಬಳಕೆ ಮಾಡಬಹುದು, ಇಲ್ಲದಿದ್ದರೆ ನೈಸರ್ಗಿಕ ಗಾಳಿಗೆ ಒತ್ತು ನೀಡಬೇಕು. ದೊಡ್ಡ ಪ್ರಮಾಣ ಜನ ಸೇರಿ ಪಾರ್ಟಿ ಸಭೆ ಮಾಡುವಂತಿಲ್ಲ. ಮಾಲ್‍ನಲ್ಲಿ ಬಳಕೆಯಾದ ಎಲ್ಲ ವಸ್ತುಗಳನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಲಾಗಿದೆ.

    ಶೌಚಾಲಯಗಳನ್ನು ಆಗ್ಗಾಗ್ಗೆ ಸ್ವಚ್ಛ ಮಾಡಬೇಕು. ಫುಡ್ ಕೋರ್ಟ್ ನಲ್ಲಿ ಅಂತರ ಕಾಯ್ದುಕೊಳ್ಳಬೇಕು. ಮಾಲ್‍ನಲ್ಲಿರಿವ ರೆಸ್ಟೋರೆಂಟ್ ನಲ್ಲಿ ಶೇ.50 ಸಾರ್ಮಥ್ಯಕ್ಕೆ ಅವಕಾಶ ನೀಡಬೇಕು. ಜೊತೆಗೆ ಕೂರುವಾಗ ಅಂತರವಿರಬೇಕು. ಪ್ರತಿ ಗ್ರಾಹಕರು ಬದಲಾದ ಮೇಲೆ ಟೇಬಲ್ ಸ್ಯಾನಿಟೈಜ್ ಮಾಡಬೇಕು. ಕಿಚನ್‍ನಲ್ಲೂ ಅಂತರ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಮಾಲ್‍ನಲ್ಲಿರುವ ಗೇಮಿಂಗ್ ಸೆಂಟರ್, ಮಕ್ಕಳ ಆಟದ ಪ್ರದೇಶ, ಸಿನಿಮಾ ಮಂದಿರ ಬಂದ್ ಆಗಬೇಕು. ಒಂದು ವೇಳೆ ಮಾಲ್‍ನಲ್ಲಿ ಸೋಂಕು ಪತ್ತೆಯಾದರೆ ಸೋಂಕಿತ ಓಡಾಡಿದ ಪ್ರದೇಶ ಐಸೋಲೇಟ್ ಮಾಡಬೇಕು. ಜೊತೆಗೆ ಹತ್ತಿರದ ಆರೋಗ್ಯ ಇಲಾಖೆ ಮಾಹಿತಿ ನೀಡಬೇಕು ಎಂದು ಮಾರ್ಗ ಸೂಚಿಯಲ್ಲಿ ವಿವರಿಸಲಾಗಿದೆ.

  • ಇನ್ಮುಂದೆ ಸೀಲ್‍ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಸುಧಾಕರ್

    ಇನ್ಮುಂದೆ ಸೀಲ್‍ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಸುಧಾಕರ್

    ಉಡುಪಿ: ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

    ಉಡುಪಿಯಲ್ಲಿ ಜಿಲ್ಲಾಮಟ್ಟದ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಅವಧಿ 7 ದಿನಕ್ಕೆ ಮೊಟಕು ಮಾಡಲಾಗಿದೆ. ಸಾವಿರಾರು ಜನರನ್ನು ಕ್ವಾರಂಟೈನ್ ಮಾಡುವುದು ಕಷ್ಟ. ಕಂಟೈನ್ಮೆಂಟ್ ಝೋನ್‍ನ ವಿವರಣೆ ಬದಲಾಗಿದೆ ಎಂದರು.

    ಉಡುಪಿಯ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ರಘುಪತಿ ಭಟ್ ಈ ಸಲಹೆ ನೀಡಿದ್ದಾರೆ. ಸೋಂಕಿತನ ಮನೆಯ ಬೀದಿಯನ್ನು ಕಂಟೈನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಜೊತೆಗೆ ಸೋಂಕಿತನ ಮನೆಯನ್ನು ಮಾತ್ರ ಸೀಲ್ ಮಾಡುವ ಪ್ರಸ್ತಾವ ಇದೆ. ಉಡುಪಿಯ ಸಭೆಯಲ್ಲಿ ಶಾಸಕರು ಈ ಬಗ್ಗೆ ಒತ್ತಾಯಿಸಿದ್ದಾರೆ. ಈ ಅಭಿಪ್ರಾಯ ಪ್ರಕಟಿಸಿದ್ದಾರೆ ಎಂದರು.

    ಕ್ವಾರಂಟೈನ್‍ನಲ್ಲಿ ಜನರ ಬೇಡಿಕೆ ಬಹಳ ಇರುತ್ತದೆ. ಅಷ್ಟು ದೊಡ್ಡ ಸಂಖ್ಯೆಯ ಜನರನ್ನು ಸಂಭಾಳಿಸೋದು ಕಷ್ಟ. ಸೀಲ್ ಆದ ಮನೆಗೆ ಅಗತ್ಯ ವಸ್ತುಗಳನ್ನು ಸರ್ಕಾರವೇ ಒದಗಿಸುತ್ತದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಶೀಘ್ರ ಈ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಡಾ. ಸುಧಾಕರ್ ಹೇಳಿದರು.

  • ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ 39ಕ್ಕೆ ಏರಿಕೆ

    ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ 39ಕ್ಕೆ ಏರಿಕೆ

    ಬೆಂಗಳೂರು: ಲಾಕ್‍ಡೌನ್ ಸಡಿಲಿಕೆ ನಿಜಕ್ಕೂ ಬೆಂಗಳೂರಿಗೆ ಮಾರಕವಾಗ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದೆ. ಕಳೆದ ವಾರ 20-22 ರಷ್ಟಿದ್ದ ಸಂಖ್ಯೆ 39ಕ್ಕೆ ಏರಿಕೆ ಕಂಡಿದೆ.

    ಮಂಗಳವಾರ ಬಿಬಿಎಂಪಿ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ 39 ಕಂಟೈನ್‍ಮೆಂಟ್ ಝೋನ್ ಗಳನ್ನು ಗುರುತಿಸಿದ್ದಾರೆ. ಗ್ರೀನ್ ಝೋನ್ ಏರಿಯಾಗಳಾದ ನಾಗರಬಾವಿಯ ಸೆಕೆಂಡ್ ಸ್ಟೇಜ್, ನಗರ್ ದ ಪೇಟೆ, ದಾಸಸರಹಳ್ಳಿಯ ಚಿಕ್ಕಲಸಂದ್ರ, ಬೊಮ್ಮನಹಳ್ಳಿ ಝೋನ್‍ನ ಹೆಚ್‍ಎಸ್‍ಆರ್ ಲೇಔಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡು ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ ಏರಿಕೆಯಾಗಿದೆ.

    39 ಕಂಟೈನ್‍ಮೆಂಟ್ ಝೋನ್‍ಗಳ ಪಟ್ಟಿ
    1. ಬೊಮ್ಮನಹಳ್ಳಿ: 6 ವಾರ್ಡ್- ಹೊಂಗಸಂದ್ರ, ಮಂಗಮ್ಮನಪಾಳ್ಯ, ಬೇಗೂರು, ಪುಟ್ಟೇನಹಳ್ಳಿ, ಬೊಮ್ಮನಹಳ್ಳಿ, ಹೆಚ್‍ಎಸ್‍ಆರ್ ಲೇಔಟ್
    2. ಮಹದೇವಪುರ: 6 ವಾರ್ಡ್- ಹೂಡಿ, ಹಗದೂರ, ವರ್ತೂರು, ರಾಮಮೂರ್ತಿ ನಗರ, ಮಾರತಹಳ್ಳಿ, ಕಾಡುಗೋಡಿ
    3. ಬೆಂಗಳೂರು ಪೂರ್ವ: 7 ವಾರ್ಡ್- ನಾಗವಾರ, ಹೆಚ್‍ಬಿಆರ್ ಲೇಔಟ್, ಶಿವಾಜಿನಗರ, ವಮ್ಮಾರಪೇಟೆ, ಎಸ್.ಕೆ. ಗಾರ್ಡನ್, ಅಗ್ರಹಾರ, ಜಯಮಹಲ
    4. ಬೆಂಗಳೂರು ದಕ್ಷಿಣ: 4 ವಾರ್ಡ್- ಬಿಟಿಎಂ ಲೇಔಟ್, ಲಕ್ಕಸಂದ್ರ, ಸಿದ್ದಾಪುರ, ಹೊಸಹಳ್ಳಿ
    5. ಬೆಂಗಳುರು ಪಶ್ಚಿಮ: 11 ವಾರ್ಡ್- ಮಲ್ಲೇಶ್ವರಂ, ಪಾದರಾಯನಪುರ, ಜೆಜೆ ನಗರ, ಮಾರಪ್ಪನ ಪಾಳ್ಯ, ಚಲವಾದಿ ಪಾಳ್ಯ, ಅಗ್ರಹಾರ ದಾಸರಹಳ್ಳಿ, ಸುಭಾಶ ನಗರ, ಸುಬ್ರಮಣ್ಯ ನಗರ, ಅಝಾದ್ ನಗರ, ನಾಯಂಡಳ್ಳಿ, ರಾಯಪುರಂ
    6. ಯಲಹಂಕ: 2 ವಾರ್ಡ್- ಥಣಿಸಂದ್ರ, ಕೆಂಪೇಗೌಡ
    7. ಆರ್.ಆರ್.ನಗರ: 2 ವಾರ್ಡ್- ಹೇರೊಹಳ್ಳಿ, ಜನಭಾರತಿನಗರ
    8. ದಾಸರಹಳ್ಳಿ: 1 ವಾರ್ಡ್ – ಚೊಕ್ಕಸಂದ್ರ

  • ಕಂಟೈನ್ಮೆಂಟ್ ಝೋನ್ ತೆರವುಗೊಳಿಸುವಂತೆ ಕೂಲಿಕಾರ್ಮಿಕರ ಪ್ರತಿಭಟನೆ

    ಕಂಟೈನ್ಮೆಂಟ್ ಝೋನ್ ತೆರವುಗೊಳಿಸುವಂತೆ ಕೂಲಿಕಾರ್ಮಿಕರ ಪ್ರತಿಭಟನೆ

    ಹಾವೇರಿ: ಕಂಟೈನ್ಮೆಂಟ್ ಪ್ರದೇಶ ತೆರವು ಮಾಡುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರ ಮತ್ತು ರಾಜೀವಗಾಂಧಿ ನಗರದ ನಿವಾಸಿಗಳಿಂದ ಪ್ರತಿಭಟನೆ ನಡೆಸಿದ್ದಾರೆ.

    ಮೇ 4 ರಂದು ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಇಡೀ ಪ್ರದೇಶವನ್ನು ಜಿಲ್ಲಾಡಳಿತ ಸಂಪೂರ್ಣ ಸೀಲ್ ಡೌನ್ ಮಾಡಿತ್ತು. ಅಲ್ಲದೇ ಸೋಂಕಿತನಿಂದ ಪ್ರದೇಶದಲ್ಲಿ ಮತ್ತೆ ಮೂವರಿಗೆ ಸೋಕು ಕಾಣಿಸಿಕೊಂಡಿತ್ತು. ಸದ್ಯ ಮೂವರು ಸೋಂಕಿತರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೂ ಪ್ರದೇಶಗದಲ್ಲಿ ಸೀಲ್‍ಡೌನ್ ತೆರವು ಮಾಡದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೇ 23, ಮೇ 25 ಮತ್ತು ಜೂನ್ 1 ರಂದು ಆಸ್ಪತ್ರೆಯಿಂದ ಮೂವರು ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಕೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಕೂಡಲೇ ಕಂಟೈನ್ಮೆಂಟ್ ಝೋನ್ ತೆರವುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.

  • ಬೆಂಗ್ಳೂರಿನಲ್ಲಿ ಮಿತಿ ಮೀರುತ್ತಿದೆ ಕೊರೊನಾ ಅಟ್ಟಹಾಸ

    ಬೆಂಗ್ಳೂರಿನಲ್ಲಿ ಮಿತಿ ಮೀರುತ್ತಿದೆ ಕೊರೊನಾ ಅಟ್ಟಹಾಸ

    – 2 ವಲಯಗಳಲ್ಲಿ 24 ಕಂಟೈನ್ಮೆಂಟ್ ಝೂನ್‍ಗಳು

    ಬೆಂಗಳೂರು: ಒಂದು ಕಡೆ ಲಾಕ್‍ಡೌನ್ ಸಡಿಲಿಕೆ ಮತ್ತೊಂದು ಕಡೆ ಕೊರೊನಾ ಸ್ಫೋಟವಾಗುತ್ತಿದೆ. ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಸಂಖ್ಯೆ ಏರಿಕೆಯಾಗುತ್ತಿವೆ.

    ಮೇ 16ಕ್ಕೆ 200 ಇದ್ದದ್ದು, 12 ದಿನಕ್ಕೆ 88 ಪ್ರಕರಣ ದಾಖಲಾಗಿವೆ. ಇವತ್ತು ಅಥವಾ ನಾಳೆ ಬೆಂಗಳೂರಿನಲ್ಲಿ 300ಕ್ಕೆ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಮೂಲಕ ನಿಯಂತ್ರಣಕ್ಕೆ ಬಂದಿದ್ದ ಕೊರೊನಾ ಸ್ಫೋಟವಾಗುತ್ತಿದೆ. ಹೀಗಾಗಿ ನಗರದಲ್ಲಿ ಕಂಟೈನ್ಮೆಂಟ್ ಝೂನ್‍ಗಳು ಏರಿಕೆಯಾಗುತ್ತಿದೆ.

    ಕೊರೊನಾ ಹಬ್‍ಗಳಾದ ಶಿವಾಜಿನಗರ, ಪಾದರಾಯನ ಪುರದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಹೊಸ ಏರಿಯಾಗಳಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ.

    ಶಿವಾಜಿನಗರ, ಕೆಜಿಹಳ್ಳಿ, ಅಸ್ಟಿಂಗ್ ಟೌನ್, ಪಾದರಾಯನಪುರ ಮತ್ತು ಯಲಹಂಕ ಏರಿಯಾಗಳಲ್ಲಿ ಸೋಂಕಿತರ ಸಂಪರ್ಕದಲ್ಲಿ ಇದ್ದವರ ರಿಸಲ್ಟ್ ಬರಬೇಕಿದೆ. ಇನ್ನೂ ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಪ್ರಯಾಣ ಮಾಡಿದ್ದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಸಂಖ್ಯೆ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾ ಸ್ಫೋಟವಾಗುತ್ತಾ ಎಂಬ ಆತಂಕ ಶುರುವಾಗಿದೆ.

    ಬೆಂಗಳೂರಿನ ಹೊಸ ಹೊಸ ಏರಿಯಾದ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗುತ್ತಿದ್ದು. ಕಂಟೈನ್ಮೆಂಟ್ ಝೂನ್‍ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮೇ 15ರವರೆಗೂ 16 ಕಂಟೈನ್ಮೆಂಟ್ ಝೂನ್‍ಗಳು. ಬುಧವಾರ 24ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಯಾವ್ಯಾವ ವಲಯದಲ್ಲಿ ಎಷ್ಟೇಷ್ಟು ಕಂಟೈನ್ಮೆಂಟ್ ಝೂನ್, ಯಾವ್ಯಾವ ವಾರ್ಡ್ ಅಂತ ನೋಡೋದಾದರೆ..

    ಬೆಂಗಳೂರಿನಲ್ಲಿ ಒಟ್ಟು 2 ವಲಯಗಳಲ್ಲಿ 24 ಕಂಟೈನ್ಮೆಂಟ್ ಝೂನ್‍ಗಳು
    1. ಬೊಮ್ಮನಹಳ್ಳಿ ವಲಯ 5 ಕಂಟೈನ್ಮೆಂಟ್ ಝೂನ್
    * ಬಿಳೇಕಲ್ಲಳ್ಳಿ – ವಾರ್ಡ್ ನಂ 188
    * ಹೋಗಸಂದ್ರ – ವಾರ್ಡ್ ನಂಬರ್ – 189
    * ಬೇಗೂರು ವಾರ್ಟ್ 192 ವಾರ್ಡ್
    * ಮಂಗಮ್ಮನ ಪಾಳ್ಯ ವಾರ್ಡ್ ನಂ 190
    * ಪುಟ್ಟೆನಹಳ್ಳಿ ವಾರ್ಡ್ ನಂ 187

    2. ಮಹಾದೇವಪುರ ವಲಯ 4 ಕಂಟೈನ್ಮೆಂಟ್ ಝೂನ್
    * ಹಗಡೂಡು ವಾರ್ಡ್ ನಂಬರ್-84
    * ಹೂಡಿ – ವಾರ್ಡ್ ನಂ 54
    * ರಾಮಮೂರ್ತಿ ನಗರ – ವಾರ್ಡ್ ನಂ 26
    * ವರ್ತೂರು – ವಾರ್ಡ್‍ನಂ 149

    3. ಪೂರ್ವ ವಲಯ- 5 ಕಂಟೈನ್ಮೆಂಟ್ ಝೋನ್
    * ಶಿವಾಜಿನಗರ ವಾರ್ಡ್ ನಂ- 92
    * ವನ್ನಾರ ಪೇಟೆ – ವಾರ್ಡ್ ನಂ 115
    * ಎಸ್.ಕೆ ಗಾರ್ಡನ್ – ವಾರ್ಡ್ ನಂ 61
    * ನಾಗಾವಾರ – ವಾರ್ಡ್ ನಂ 23
    * ಹೆಚ್.ಬಿ.ಆರ್. ಲೇಔಟ್ – ವಾರ್ಡ್ ನಂ 24

    4. ಬೆಂಗಳೂರು ದಕ್ಷಿಣ ವಲಯ- 2
    * ವಾರ್ಡ್ ನಂ-176 – ಬಿಟಿಎಂ ಲೇಔಟ್
    * ವಾರ್ಡ್ ನಂ 146 -ಲಕ್ಕಸಂದ್ರ

    5. ಬೆಂಗಳೂರು ಪಶ್ಚಿಮ ವಲಯ- 5
    * ವಾರ್ಡ್ ನಂ- 45 ಮಲ್ಲೇಶ್ವರಂ..
    * ವಾರ್ಡ್ ನಂ-235, ಪಾದರಾಯನಪುರ.
    * ವಾರ್ಡ್ ನಂ-136, ಜಗಜೀವನರಾಮನಗರ
    * ವಾರ್ಡ್ ನಂ- 139- ಕೆ ಆರ್ ಮಾರ್ಕೆಟ್
    * ವಾರ್ಡ್ ನಂ 44 – ಮಾರಪ್ಪನ ಪಾಳ್ಯ

    6. ಆರ್.ಆರ್.ನಗರ ವಲಯ- 2 ಕಂಟೈನ್ಮೆಂಟ್
    * ಹೇರೋಹಳ್ಳಿ – ವಾರ್ಡ್ ನಂ 72
    * ಜ್ಞಾನಭಾರತಿ ನಗರ – ವಾರ್ಡ್ ನಂ 129

    7. ಯಲಹಂಕ ವಲಯ 1 ಕಂಟೈನ್ಮೆಂಟ್ ಝೂನ್
    * ಥಣಿಸಂಧ್ರ – ವಾರ್ಡ್ ನಂ 06

  • ಕಂಟೈನ್ಮೆಂಟ್ ಝೋನ್‍ದಿಂದ ಬಂದ ಗರ್ಭಿಣಿಯನ್ನು ಅಡ್ಮಿಟ್ ಮಾಡ್ಕೊಳ್ಳಲು ಆಸ್ಪತ್ರೆಗಳು ನಕಾರ

    ಕಂಟೈನ್ಮೆಂಟ್ ಝೋನ್‍ದಿಂದ ಬಂದ ಗರ್ಭಿಣಿಯನ್ನು ಅಡ್ಮಿಟ್ ಮಾಡ್ಕೊಳ್ಳಲು ಆಸ್ಪತ್ರೆಗಳು ನಕಾರ

    – ನರಳಿ ನರಳಿ ಸಾವನ್ನಪ್ಪಿದ 6 ತಿಂಗಳ ಗರ್ಭಿಣಿ
    – ಖಾಸಗಿ ಆಸ್ಪತ್ರೆ ಮುಂದೆಯೇ ಪ್ರಾಣ ಬಿಟ್ಟ ಮಹಿಳೆ

    ಲಕ್ನೋ: ಕಂಟೈನ್ಮೆಂಟ್ ಝೋನ್‍ನಿಂದ ಬಂದ ಗರ್ಭಿಣಿಯನ್ನು ಖಾಸಗಿ ಆಸ್ಪತ್ರೆಗಳು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ್ದರಿಂದ 6 ತಿಂಗಳ ಗರ್ಭಿಣಿ ನರಳಿ ನರಳಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಸಾವನ್ನಪ್ಪಿದ ಗರ್ಭಿಣಿಯನ್ನು 28 ವರ್ಷದ ಅರ್ಷಿ ಎಂದು ಗುರುತಿಸಲಾಗಿದೆ. ಅರ್ಷಿ ಉತ್ತರ ಪ್ರದೇಶದ ಪಿಲಿಭಿತ್‍ನ ಫೀಲ್‍ಖಾನಾ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಆಕೆಯ ಪತಿಯನ್ನು ಶಿರಾಜುದ್ದೀನ್ ಎಂದು ಗುರುತಿಸಲಾಗಿದೆ. ಈ ವಲಸೆ ಕಾರ್ಮಿಕ ದಂಪತಿ ಈ ಪ್ರದೇಶಕ್ಕೆ ಬಂದ ನಂತರ ಅದನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿತ್ತು.

    ಆರು ತಿಂಗಳ ಗರ್ಭಿಣಿಯಾಗಿದ್ದ ಅರ್ಷಿ ರಂಜಾನ್ ತಿಂಗಳಲ್ಲಿ ಉಪವಾಸ ಮಾಡಿ ತುಂಬಾ ವೀಕ್ ಆಗಿದ್ದರು. ಈ ಕಾರಣದಿಂದ ಮನೆಯಲ್ಲಿ ಕುಸಿದು ಬಿದ್ದ ಅರ್ಷಿಯನ್ನು ಆಕೆಯ ಗಂಡ ಶಿರಾಜುದ್ದೀನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅವರು ಕಂಟೈನ್ಮೆಂಟ್ ಝೋನ್‍ನಿಂದ ಬಂದ ಕಾರಣ ಖಾಸಗಿ ಆಸ್ಪತ್ರೆ ಸಿಬ್ಬಂದಿ ನಾವು ಅಡ್ಮಿಟ್ ಮಾಡಿಕೊಳ್ಳಲ್ಲ, ಚಿಕಿತ್ಸೆ ನೀಡಲ್ಲ ಎಂದು ನಿರಾಕರಿಸಿದ್ದಾರೆ.

    ಶಿರಾಜುದ್ದೀನ್ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಈ ಸಮಯದಲ್ಲಿ ಕಂಟೈನ್ಮೆಂಟ್ ಏರಿಯಾದಿಂದ ಬಂದ ಯಾರಿಗೂ ನಾವು ಚಿಕಿತ್ಸೆ ನೀಡಲ್ಲ ಎಂದು ಹೇಳಿದ್ದಾರೆ. ಜೊತೆಗೆ ನಿಮ್ಮ ಪತ್ನಿಗೆ ಚಿಕಿತ್ಸೆ ಬೇಕು ಎಂದರೆ ಜಿಲ್ಲಾಧಿಕಾರಿಗಳ ಬಳಿ ಪತ್ರವನ್ನು ಬರೆಸಿಕೊಂಡು ಬನ್ನಿ ನಂತರ ನಾವು ಚಿಕಿತ್ಸೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಮೃತಳ ಪತಿ ಶಿರಾಜುದ್ದೀನ್, ನನ್ನ ಹೆಂಡತಿ ಪ್ರಾಣವನ್ನು ಉಳಿಸಿ ಎಂದು ನಾನು ವೈದ್ಯರನ್ನು ಬೇಡಿಕೊಂಡಿದ್ದೆ. ನಾನು ಎಷ್ಟೇ ಬೇಡಿಕೊಂಡರೂ ವೈದ್ಯರ ಮನಸ್ಸು ಕರಗಲಿಲ್ಲ. ಅವರು ನನ್ನ ಪತ್ನಿಯನ್ನು ಮುಟ್ಟಿಕೂಡ ನೋಡಲಿಲ್ಲ. ಆದ್ದರಿಂದ ನನ್ನ ಪತ್ನಿ ಖಾಸಗಿ ಆಸ್ಪತ್ರೆ ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟಳು ಎಂದು ಕಣ್ಣೀರು ಹಾಕಿದ್ದಾರೆ.

    ಈ ವಿಚಾರದ ಬಗ್ಗೆ ಖಾಸಗಿ ಆಸ್ಪತ್ರೆ ಮಾಲೀಕರು ಮಾತನಾಡಿ, ಖಾಸಗಿ ಆಸ್ಪತ್ರೆಗಳು ತುಂಬ ಒತ್ತಡದಿಂದ ಕಾರ್ಯನಿರ್ವಹಿಸುತ್ತಿವೆ. ಒಂದು ವೇಳೆ ಕೊರೊನಾ ಸೋಂಕಿತರನ್ನು ನಾವು ಚಿಕಿತ್ಸೆ ಮಾಡಿದರೆ ಜಿಲ್ಲಾಡಳಿತ ನಮ್ಮ ಮೇಲೆ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಸೀಮಾ ಅಗ್ರವಾಲ್ ತಿಳಿಸಿದ್ದಾರೆ.

  • ಕೊರೊನಾ ಕಂಟಕ – ಶಿವಮೊಗ್ಗದ ಕಂಟೈನ್ಮೆಂಟ್ ವಲಯದಲ್ಲಿ ತೀವ್ರ ಕಟ್ಟೆಚ್ಚರ

    ಕೊರೊನಾ ಕಂಟಕ – ಶಿವಮೊಗ್ಗದ ಕಂಟೈನ್ಮೆಂಟ್ ವಲಯದಲ್ಲಿ ತೀವ್ರ ಕಟ್ಟೆಚ್ಚರ

    ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಐದು ಕಂಟೈನ್ಮೆಂಟ್ ವಲಯಗಳನ್ನು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಯಾರೂ ಮನೆಯಿಂದ ಹೊರ ಬಾರದಂತೆ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಕೆ.ಬಿ ಶಿವಕುಮಾರ್ ಅವರು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಪಾಸಿಟಿವ್ ಪ್ರಕರಣಗಳು ಕಂಡು ಬಂದಿರುವ ಕಂಟೈನ್ಮೆಂಟ್ ಪ್ರದೇಶದಿಂದ ಮೆಡಿಕಲ್ ಎಮರ್ಜೆನ್ಸಿ ಪ್ರಕರಣಗಳನ್ನು ಮಾತ್ರ ಹೊರಗೆ ಬಿಡಬೇಕು. ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದ ತಕ್ಷಣ ಕಂಟೈನ್ಮೆಂಟ್ ಪ್ರದೇಶ ಗುರುತಿಸಿ ಬಂದೋಬಸ್ತು ಏರ್ಪಡಿಸಬೇಕು. ಕಂಟೈನ್ಮೆಂಟ್ ಪ್ರದೇಶದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಈ ವಲಯದಲ್ಲಿ 2 ಆಶಾ ಕಾರ್ಯಕರ್ತೆಯರು, 2 ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆ ಯಾವುದೇ ಸರ್ಕಾರಿ ಅಧಿಕಾರಿಗಳು ಅಡ್ಡಾಡಬಾರದು. ಅದೇ ರೀತಿ ಕ್ವಾರಂಟೈನ್ ಕೇಂದ್ರಗಳ ಒಳಗೆ ನಿಗದಿಪಡಿಸಿರುವ ಸಿಬ್ಬಂದಿ ಬಿಟ್ಟರೆ ಬೇರೆ ಯಾರಿಗೂ ಪ್ರವೇಶವಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.

    ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರತಿದಿನ ಆರೋಗ್ಯ ಸಮೀಕ್ಷೆ ನಡೆಸಬೇಕು. ರೋಗ ಲಕ್ಷಣಗಳು ಕಂಡು ಬಂದವರ ಗಂಟಲು ದ್ರವವನ್ನು ಸಂಗ್ರಹಿಸಿ ಕಳುಹಿಸಬೇಕು ಎಂದರು. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲು ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ತಂಡವನ್ನು ರಚಿಸಲಾಗಿದ್ದು, ಈ ತಂಡಕ್ಕೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಸಮರ್ಪಕ ಮಾಹಿತಿಯನ್ನು ತಕ್ಷಣ ಒದಗಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿದ ತಕ್ಷಣ ಅವರ ಗಂಟಲು ದ್ರವ ಸಂಗ್ರಹಿಸಿ ತಪಾಸಣೆಗೆ ಕಳುಹಿಸಬೇಕು. 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿರುವವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಹೇಳಿದರು.

    ಇನ್ನು ಜನರು ಹೆಚ್ಚು ಸೇರುವ ಸ್ಥಳಗಳನ್ನು ಈಗಾಗಲೇ ಹಾಟ್‍ಸ್ಪಾಟ್ ಎಂದು ಗುರುತಿಸಲಾಗಿದ್ದು, ಅಂತಹ ಕಡೆಗಳಲ್ಲಿ ಪ್ರತಿದಿನ ರಾತ್ರಿ ಕಡ್ಡಾಯವಾಗಿ ಸೋಂಕು ನಾಶಕ ಸಿಂಪಡಣೆ ಮಾಡಬೇಕು ಎಂದರು. ಗುರುವಾರ ಒಂದೇ ದಿನ ಶಿಮ್ಸ್ ಪ್ರಯೋಗಾಲಯದಲ್ಲಿ 781 ಗಂಟಲ ದ್ರವ ಸ್ಯಾಂಪಲ್ ಫಲಿತಾಂಶ ಬಂದಿದ್ದು, ಪ್ರಯೋಗಾಲಯದ ಸಿಬ್ಬಂದಿಗೆ ಜಿಲ್ಲಾಧಿಕಾರಿ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಶಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?

    ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?

    ಬೆಂಗಳೂರು: ಇವತ್ತಿಗೆ ಲಾಕ್‍ಡೌನ್ 3.0 ಅಂತ್ಯಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ, ಹೊಸ ಆಯಾಮದಲ್ಲಿ ಲಾಕ್‍ಡೌನ್ ಜಾರಿಯಾಗಲಿದೆ. ಈಗಾಗಲೇ ಲಾಕ್‍ಡೌನ್ 4.0 ಹೇಗಿರುತ್ತೆ ಅನ್ನೋ ಕುತೂಹಲ ದೇಶದೆಲ್ಲೆಡೆ ಮನೆಮಾಡಿದೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಬಿಗ್ ರಿಲೀಫ್ ಸಿಗುತ್ತಾ ಅಂತ ಜನ ಕಾಯುತ್ತಿದ್ದಾರೆ.

    ಲಾಕ್‍ಡೌನ್ ಟಫ್ ಇದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರೋವಾಗ 3ನೇ ಲಾಕ್‍ಡೌನ್ ಮುಗೀತಾ ಬಂದಿದೆ. ಇದರ ನಡುವೆ ಕಂಟೈನ್ಮೆಂಟ್ ಝೋನ್‍ಗಷ್ಟೇ ಲಾಕ್‍ಡೌನ್ ಎನ್ನಲಾಗುತ್ತಿದೆ. ನಾಳೆಯಿಂದ ಬೆಂಗಳೂರಿನಲ್ಲಿ ಷರತ್ತುಬದ್ಧವಾಗಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಎಲ್ಲಾ ಬಸ್ ಡಿಪೋಗಳಲ್ಲಿ ಚಾಲಕರು ಹಾಗೂ ನಿರ್ವಾಹಕರ ಫಿಟ್ನೆಸ್ ಪರೀಕ್ಷೆ ನಡೆದಿದೆ.

    ನಾಳೆಯಿಂದ ಬಿಎಂಟಿಸಿ ಬಸ್ ಸಂಚಾರ
    ನಾಳೆಯಿಂದ ಬಿಎಂಟಿಸಿ ಬಸ್‍ಗಳ ಓಡಾಟಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಮೇ 18ರಿಂದ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸಾಮಾಜಿಕ ಅಂತರ ಆಧರಿಸಿ ಬಿಎಂಟಿಸಿ ಬಸ್‍ಗಳ ಓಡಾಟಕ್ಕೆ ಸಿದ್ಧತೆ ಮಾಡಲಾಗಿದೆ. ಈಗಾಗಲೇ ಬಿಎಂಟಿಸಿಯ ಎಲ್ಲ ಸಿಬ್ಬಂದಿಗೂ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಎಲ್ಲಾ ಸಿಬ್ಬಂದಿಗೂ ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಕರು ಗುಂಪು ಗುಂಪಾಗಿ ನಿಂತುಕೊಂಡು ಪ್ರಯಾಣಿಸುವಂತಿಲ್ಲ. ಕ್ಯೂ ಆರ್ ಕೋಡ್ ಮೂಲಕ ಟಿಕೆಟ್ ನೀಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಪ್ರತಿ ಟ್ರಿಪ್ ಆದ ಮೇಲೂ ಕಡ್ಡಾಯವಾಗಿ ಬಸ್‍ಗಳಿಗೆ ಕ್ರಿಮಿನಾಶಕ ಸಿಂಪಡಣೆ ಮಾಡಬೇಕು. ಚಾಲಕ, ಡ್ರೈವರ್‍ಗೆ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಕಡ್ಡಾಯವಾಗಿದೆ.

    ಬೆಂಗಳೂರಿನಲ್ಲಿ ಲಾಕ್‍ಡೌನ್ ಸಡಿಲ ಮಾಡುವ ಸಾಧ್ಯತೆ ಇದ್ದು, ಬೇರೆ ಯಾವೆಲ್ಲಾ ಸೇವೆ ಇರಬಹುದು ಅನ್ನೋದು ಜನರ ಪ್ರಶ್ನೆಯಾಗಿದೆ. ಹೀಗಾಗಿ ನಾಳೆಯಿಂದ ಬಿಎಂಟಿಸಿ ಬಸ್ ಸಂಚಾರದ ಜೊತೆ ಉಳಿದ ಯಾವೆಲ್ಲಾ ಸೇವೆಗಳು ಸಿಗಬಹುದು ಅನ್ನೋದನ್ನ ನೊಡೋದಾದರೆ,

    ಏನೆಲ್ಲಾ ಸೇವೆ ಇರಬಹುದು?
    * ಬಸ್ ಜೊತೆ ಆಟೋ ಓಡಾಟ ಸಾಧ್ಯತೆ
    * ಟ್ಯಾಕ್ಸಿ, ಓಲಾ, ಊಬರ್ ಓಡಾಡಬಹುದು
    * ಜಿಮ್, ಸ್ಪಾ, ಸಲೂನ್ ಓಪನ್‍ಗೂ ಅನುಮತಿ ಸಾಧ್ಯತೆ

    ಇವೆಲ್ಲಾ ಅನುಮಾನ?
    * ಥಿಯೇಟರ್, ಶಾಪಿಂಗ್ ಮಾಲ್, ಕಾಂಪ್ಲೆಕ್ಸ್, ಸ್ಪೋರ್ಟ್ಸ್,
    * ದೇಗುಲ, ಜಾತ್ರೆ, ಸಂತೆ, ಧಾರ್ಮಿಕ ಉತ್ಸವ, ರಾಜಕೀಯ, ಸಾಂಸ್ಕೃತಿಕ ಕಾರ್ಯಕ್ರಮ
    * ಮೇ ಬಳಿಕವಷ್ಟೇ ಶಾಲಾ-ಕಾಲೇಜು ಆರಂಭ ಆಗಬಹುದು
    * ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗಷ್ಟೇ ಸೀಮಿತ

    ಬೆಂಗಳೂರಿನಲ್ಲಿ ಸದ್ಯ 18 ಕಂಟೈನ್ಮೆಂಟ್ ಝೋನ್‍ಗಳಿದ್ದು, ಕಂಟೈನ್ಮೆಂಟ್ ಝೋನ್‍ನಲ್ಲಷ್ಟೇ ಲಾಕ್‍ಡೌನ್ ಆಗಬಹುದು ಎನ್ನಲಾಗುತ್ತಿದೆ. ಇಲ್ಲಿ ಯಾವುದೇ ರಿಯಾಯಿತಿನೂ ಇರಲ್ಲ. 56 ದಿನದ ಬಳಿಕ ಹೊಸ ಪ್ರಪಂಚ ಶುರುವಾಗಲಿದೆ.