Tag: Contest

  • ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಸಲಹೆ ಕೊಟ್ಟ ಮಾಜಿ ಸಿಎಂ

    ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಸಲಹೆ ಕೊಟ್ಟ ಮಾಜಿ ಸಿಎಂ

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಎನ್ನುವುದು ಇನ್ನು ಕಗ್ಗಂಟಾಗೇ ಉಳಿದಿದೆ. ಖುದ್ದು ಗೌಡರೇ ಈ ವಿಚಾರದಲ್ಲಿ ಗೊಂದಲದಲ್ಲಿದ್ದು, ಯಾವ ಕ್ಷೇತ್ರದಿಂದ ಸ್ಪಧಿಸಿದರೆ ಉತ್ತಮ ಎನ್ನುವ ಚಿಂತೆ ಕಾಡುತ್ತಿದೆ ಎನ್ನಲಾಗುತ್ತಿದೆ.

    ಇದೀಗ ದೇವೇಗೌಡರ ಶಿಷ್ಯ ಎಂದೇ ಕರೆಸಿಕೊಳ್ಳುವ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಗುರುವಿಗೆ ಈ ವಿಚಾರವಾಗಿ ಟಿಪ್ಸ್ ನೀಡಿದ್ದಾರೆ. ನೀವು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದರೆ, ಗೆಲುವು ಸುಲಭವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ನ 5 ಜನ ಹಾಗೂ ಜೆಡಿಎಸ್ ನ ಇಬ್ಬರು ಶಾಸಕರಿದ್ದಾರೆ. ಹೀಗಾಗಿ ಎರಡು ಪಕ್ಷದವರು ಸೇರಿ ಒಟ್ಟಿಗೆ ಕೆಲಸ ಮಾಡಿದರೆ ಗೆಲ್ಲುವುದು ಗ್ಯಾರಂಟಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ ತುಮಕೂರಿನಲ್ಲೂ ನೀವು ಗೆಲ್ಲಬಹುದು ಆದರೆ ಅಲ್ಲಿ ಬೇರೊಬ್ಬ ಅಭ್ಯರ್ಥಿ ಹಾಕಿದರು ಗೆಲ್ತಾರೆ. ಆದರೆ ಬೆಂಗಳೂರು ಉತ್ತರದಲ್ಲಿ ಅಭ್ಯರ್ಥಿಗಳ ಕೊರತೆ ಇರುವುದರಿಂದ ನೀವು ಸ್ಪರ್ಧಿಸಿದರೆ ಉತ್ತಮ ಎಂದು ಸಿದ್ದರಾಮಯ್ಯ ದೇವೇಗೌಡರಿಗೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.

    ಸದ್ಯ ಈ ವಿಷಯದ ಬಗ್ಗೆ ದೇವೇಗೌಡರು ಸಹ ಯೋಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

  • ಈ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ: ದೇವೇಗೌಡ

    ಈ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ: ದೇವೇಗೌಡ

    ಹಾಸನ: ನಾನು ಈ ಬಾರಿ ಹಾಸನದಲ್ಲಿ ಚುನಾವಣೆಗೆ ನಿಲ್ಲಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದ್ದಾರೆ.

    ಹಾಸನದ ಹೊಳೆನರಸೀಪುರ ತಾ. ಮೂಡಲಹಿಪ್ಪೆಯಲ್ಲಿ ಕಾರ್ಯಕ್ರಮಕ್ಕೆ ದೇವೇಗೌಡರು ಆಗಮಿಸಿದರು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, “ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ ಎಷ್ಟು ಹಾಗೂ ಜೆಡಿಎಸ್‍ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅಂತಿಮವಾದ ಬಳಿಕ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.

    ಸದ್ಯ ರಾಹುಲ್ ಗಾಂಧಿ ಅವರು ಪ್ರಚಾರದಲ್ಲಿ ನಿರತಾಗಿದ್ದಾರೆ. ಕೇರಳ, ತಮಿಳುನಾಡು, ಒಡಿಸ್ಸಾದಲ್ಲಿ ಚುನಾವಣಾ ಪ್ರಚಾರದಲ್ಲಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ರಾಹುಲ್ ಗಾಂಧಿ ಜೊತೆ ಮತ್ತೊಮ್ಮೆ ಸಭೆ ಸೇರುತ್ತೇವೆ. ಶುಭ ಕಾರ್ಯಕ್ಕೂ ಮುನ್ನ ನಾವು ದೇವರ ದರ್ಶನ ಮಾಡುವುದು ವಾಡಿಕೆ. ರೇವಣ್ಣ ಅವರು ಯಾವಾಗಲೂ ದಿನಶುದ್ಧಿ ಬಗ್ಗೆ ಯೋಚನೆ ಮಾಡುತ್ತಾರೆ. ಇಂದು ಮೂಡಲಹಿಪ್ಪೆ ಗ್ರಾಮದಿಂದ ಪ್ರಚಾರವನ್ನು ಆರಂಭ ಮಾಡಿದ್ದೇನೆ ಎಂದು ದೇವೇಗೌಡರು ಹೇಳಿದರು.

    ಸದ್ಯ ದೇವೇಗೌಡರು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವಾ ಅಥವಾ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವೇ ಎನ್ನುವುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸುಮಲತಾಗೆ ಟಿಕೆಟ್ ಕೊಡುತ್ತಾ ಜೆಡಿಎಸ್ – ಕಾಂಗ್ರೆಸ್ ಅಸ್ತ್ರವನ್ನೇ ದೋಸ್ತಿಯತ್ತ ತಿರುಗಿಸ್ತಾರಾ ಗೌಡ್ರು..?

    ಸುಮಲತಾಗೆ ಟಿಕೆಟ್ ಕೊಡುತ್ತಾ ಜೆಡಿಎಸ್ – ಕಾಂಗ್ರೆಸ್ ಅಸ್ತ್ರವನ್ನೇ ದೋಸ್ತಿಯತ್ತ ತಿರುಗಿಸ್ತಾರಾ ಗೌಡ್ರು..?

    ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯುವ ವಿಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಮಂಡ್ಯದಿಂದ ಸುಮಲತಾ ಕಣಕ್ಕಿಳಿಯುತ್ತಾರಾ ಅನ್ನೋ ಚರ್ಚೆಯಾಗುತ್ತಿದೆ.

    ಶತಾಯಗತಾಯ ತಮ್ಮ ಪುತ್ರ ನಿಖಿಲ್‍ನನ್ನು ಕಣಕ್ಕಿಳಿಸಬೇಕೆಂದು ನಿರ್ಧರಿಸಿರುವ ಸಿಎಂ ಕುಮಾರಸ್ವಾಮಿ, ಮೈತ್ರಿಪಾಲನೆಯಲ್ಲಿ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸಿಎಂ ಪುತ್ರನ ಮಂಡ್ಯ ಪ್ರವೇಶವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಟೀಂ, ದಿವಂಗತ ಅಂಬರೀಶ್ ಪತ್ನಿ ಸುಮಲತಾ ಹೆಸರನ್ನು ತೇಲಿಬಿಟ್ಟು ಸಂಘರ್ಷಕ್ಕೆ ವೇದಿಕೆ ಸಿದ್ಧಗೊಳಿಸಿದ್ದಾರೆ.

    ಅಂಬಿ ಅಭಿಮಾನಿಗಳು ಶುಕ್ರವಾರ ಸುಮಲತಾ ಅವರನ್ನು ಭೇಟಿ ಮಾಡಿ ಸ್ಪರ್ಧಿಸುವಂತೆ ಒತ್ತಾಯಿಸಿದಾಗ ಕಣಕ್ಕಿಳಿಯುವ ಇಂಗಿತವನ್ನು ಸುಮಲತಾ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸುಮಲತಾ ಸ್ಪರ್ಧೆ ಜೆಡಿಎಸ್ ಪಾಲಿಗೆ ನುಂಗಲಾರದ ತುತ್ತಾಗಲಿದ್ದು, ಅವರನ್ನೇ ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಾಡಿ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸುವ ತಂತ್ರಕ್ಕೆ ಜೆಡಿಎಸ್ ಮುಂದಾಗುವ ಸಾಧ್ಯತೆ ಇದೆ. ಹೀಗಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿಎಂ ಪುತ್ರ ನಿಖಿಲ್ ಸ್ಪರ್ಧೆನೋ..? ಸುಮಲತಾ ರಂಗ ಪ್ರವೇಶವೋ ಎಂಬ ಚರ್ಚೆ ಜೋರಾಗಿ ನಡೆದಿದೆ. ಇದನ್ನು ಓದಿ: ರಾಜಕೀಯ ಪ್ರವೇಶದ ಬಗ್ಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ

    ಮಂಡ್ಯದಿಂದ ಸುಮಲತಾ ಸ್ಪರ್ಧೆಗೆ ಒತ್ತಡ ವಿಚಾರದ ಬಗ್ಗೆ ಸಿಎಂ ಕುಮಾರಸ್ವಾಮಿ ಸ್ಥಾನ ಬಿಡಲ್ಲ ಎಂದು ಪರೋಕ್ಷವಾಗಿ ಸೂಚನೆ ನೀಡಿದ್ದಾರೆ. ಮಂಡ್ಯ ಜೆಡಿಎಸ್‍ನ ಭದ್ರಕೋಟೆ. ಅಲ್ಲಿ ಸುಮಲತಾ ಸ್ಪರ್ಧೆ ಮಾಡಬಾರದು ಎಂದು ಏನೂ ಇಲ್ಲ. ಸ್ಪರ್ಧೆ ಮಾಡಲಿ ಬೇಡ ಎಂದು ಹೇಳೋಕೆ ಆಗುತ್ತಾ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರು ಸ್ಪರ್ಧೆ ಮಾಡಲು ಅವಕಾಶವಿದೆ. ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಆ ಸಂದರ್ಭ ಬಂದಾಗ ಟಿಕೆಟ್ ಬಗ್ಗೆ ಚರ್ಚೆ ಮಾಡೋಣ ಎಂದು ಹೇಳುತ್ತಾ ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ಕಾಂಗ್ರೆಸ್‍ಗೆ ಟಾಂಗ್ ನೀಡಿದ್ದಾರೆ.

    ಅಲ್ಲದೇ ಚುನಾವಣೆಯ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಕೂಡ ಕೇಳಬೇಕಾಗುತ್ತೆ. ಯಾರೋ ಕೇಳಿದರು ಎಂದು ನಿರ್ಧಾರ ಮಾಡೋಕೆ ಆಗಲ್ಲ. ಟಿಕೆಟ್ ಹಂಚಿಕೆ ಚರ್ಚೆ ಆಗಿಲ್ಲ. ಚರ್ಚೆಗೆ ಬಂದಾಗ ಈ ವಿಷಯದ ಬಗ್ಗೆ ತೀರ್ಮಾನ ಮಾಡುತ್ತೀವಿ. ಅಂಬರೀಶ್ ಕುಟುಂಬದವರು ನಮ್ಮ ಪಕ್ಷಕ್ಕೆ ಸೇರಿದವರಲ್ಲ. ಅವರು ಒಂದು ವೇಳೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ನಾವು ವಿರೋಧಿಸುವುದಿಲ್ಲ. ಅದು ಅವರ ವೈಯಕ್ತಿಕ ನಿರ್ಧಾರ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಲೋಕಸಭಾ ಚುನಾವಣೆಗೆ ಸ್ಪರ್ಧೆ-ಪರೋಕ್ಷವಾಗಿ ಗುಟ್ಟು ಬಿಚ್ಚಿಟ್ಟ ನಿಖಿಲ್

    ಲೋಕಸಭಾ ಚುನಾವಣೆಗೆ ಸ್ಪರ್ಧೆ-ಪರೋಕ್ಷವಾಗಿ ಗುಟ್ಟು ಬಿಚ್ಚಿಟ್ಟ ನಿಖಿಲ್

    ಮಂಡ್ಯ: ಈಗಾಗಲೇ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಸಾಕಷ್ಟು ತಯಾರಿ ನಡೆಯುತ್ತಿದ್ದು, ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈಗ ಸ್ಪರ್ಧೆ ಮಾಡುವ ಆಸೆ ಬಗ್ಗೆ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಗುಟ್ಟು ಬಿಚ್ಚಿಟ್ಟಿದ್ದಾರೆ.

    ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನನ್ನ ಅಭಿನಯದ ‘ಸೀತಾರಾಮ ಕಲ್ಯಾಣ’ ಇದೇ ಜನವರಿ 25 ರಂದು ರಿಲೀಸ್ ಆಗಲಿದೆ. ಹೀಗಾಗಿ ಪ್ರಮೋಷನ್‍ಗೆ ಬಂದಿದ್ದೇನೆ. ಜಿಲ್ಲೆಯ ಜನಪ್ರತಿನಿಧಿಗಳು ಭೇಟಿ ಮಾಡಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೇಳಿದ್ದಾರೆ. ಈ ಬಗ್ಗೆ ವರಿಷ್ಠರು, ರಾಜ್ಯಾಧ್ಯಕ್ಷರು, ಪಕ್ಷದ ಮುಖಂಡರು ತೀರ್ಮಾನ ಮಾಡಬೇಕು. ಇದು ನನ್ನ ತೀರ್ಮಾನ ಅಲ್ಲ. ನನ್ನ ಪಕ್ಷದ ತೀರ್ಮಾನವಾಗುತ್ತದೆ. ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

    ನನಗೆ ಚಿತ್ರರಂಗದಲ್ಲಿ ಡಾ. ರಾಜಕುಮಾರ್ ಅವರು ಸ್ಫೂರ್ತಿ. ರಾಜಕೀಯಕ್ಕೆ ಬರುವ ಬಗ್ಗೆ ನನ್ನ ಬಳಿ ಉತ್ತರವಿಲ್ಲ. ವರಿಷ್ಠರು ನಿರ್ಧರಿಸುತ್ತಾರೆ. ರಾಜಕೀಯಕ್ಕೆ ಬಂದರೆ ಚಿತ್ರರಂಗ, ರಾಜಕೀಯ ಎರಡರಲ್ಲೂ ಇರುತ್ತೇನೆ. ಮುಖ್ಯಮಂತ್ರಿ ಮಗನಾಗಿ ನನಗೆ ಜವಬ್ದಾರಿ ಇದೆ. ಸಮ್ಮಿಶ್ರ ಸರ್ಕಾರ 5 ವರ್ಷ ಇರುತ್ತದೆ. ಜನರಿಗಾಗಿ ಸರ್ಕಾರ ಇರಬೇಕು. ನಮ್ಮ ತಂದೆ ಭಾವನಾ ಜೀವಿ. ಸಮ್ಮಿಶ್ರ ಸರ್ಕಾರ ಬಂದಾಗ ಬಹುಮತ ಬಂದಿಲ್ಲ ಎಂದು ಸಾಲಮನ್ನಾ ವಿಚಾರವಾಗಿ ಎಸ್ಕೇಪ್ ಆಗಬಹುದಿತ್ತು. ಆದರೆ ಸರ್ಕಾರದ ಖಜಾನೆ ಬಗ್ಗೆ ಅವರಿಗೆ ಅರಿವಿದೆ. ಇವೆಲ್ಲದರ ನಡುವೆ ರೈತರ ಸಾಲಮನ್ನಾ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

    ಅಷ್ಟೇ ಅಲ್ಲದೇ ಅಭಿವೃದ್ಧಿ ಕಾರ್ಯದ ಜೊತೆಗೆ ಸಾಲಮನ್ನಾಕ್ಕೆ ಹೋರಾಟ ಮಾಡುತ್ತಿದ್ದಾರೆ. ನಮ್ಮ ಬ್ಯಾಂಕ್ ಅಕೌಂಟ್ ಬಗ್ಗೆ ನಮಗೆ ಗೊತ್ತಿರುತ್ತದೆ. ನಾವು ಸಾಲ ಮಾಡಿಕೊಂಡಿರುತ್ತೇವೆ. ನಮ್ಮ ಸಾಲದ ಬಗ್ಗೆ ನಮಗೆ ಹೇಗೆ ಅರಿವಿರುತ್ತದೆಯೋ, ಹಾಗೇ ಮುಖ್ಯಮಂತ್ರಿಗಳಿಗೂ ಖಜಾನೆ ಬಗ್ಗೆ ಅರಿವಿದೆ. ರೈತರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ನಾನು ರಾಜಕೀಯವಾಗಿ ರಾಜ್ಯಾದ್ಯಂತ ಓಡಾಡುತ್ತೇನೆ. ಕೊನೆಯವರೆಗೂ ರಾಜ್ಯದಲ್ಲಿ ಪಕ್ಷ ಕಟ್ಟಲು ನಾನು ಕೆಲಸ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನು ಗೌರವಿಸುತ್ತೇನೆ ಎಂದು ನಿಖಿಲ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳಂಕಿತರ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ- ಸಂಸತ್ ಕಾನೂನು ರೂಪಿಸಲಿ: ಸುಪ್ರೀಂ

    ಕಳಂಕಿತರ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ- ಸಂಸತ್ ಕಾನೂನು ರೂಪಿಸಲಿ: ಸುಪ್ರೀಂ

    ನವದೆಹಲಿ: ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಚುನಾವಣೆಗೆ ನಿಲ್ಲುವುದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ದೋಷಾರೋಪ ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಬೇಕೆಂದು ಸರ್ಕಾರೇತರ ಸಂಸ್ಥೆ ಮತ್ತು ಬಿಜೆಪಿ ನಾಯಕ ಅಶ್ವನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಕಳಂಕಿತರು ಚುನಾವಣೆಗೆ ಸ್ಪರ್ಧೆ ಮಾಡದಂತೆ ಸಮರ್ಪಕ ಕಾಯ್ದೆ ರೂಪಿಸುವಂತೆ ಮಂಗಳವಾರ ಸಂಸತ್ತಿಗೆ ಸೂಚಿಸಿದೆ.

    ಚಾರ್ಜ್ ಶೀಟ್ ಆಧರಿಸಿ ಜನಪ್ರತಿನಿಧಿಗಳನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕೇಂದ್ರ ಕಾಯ್ದೆ ರೂಪಿಸುವವರೆಗೂ ಕ್ರಿಮಿನಲ್ ಹಿನ್ನೆಲೆ ಹೊಂದಿದ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

    ಉತ್ತಮ ಜನರಿಂದ ಆಳ್ವಿಕೆ ಪಡೆದುಕೊಳ್ಳುವುದು ನಮ್ಮ ಹಕ್ಕು. ಈ ಕುರಿತು ಕಾಯ್ದೆ ರೂಪಿಸಲು ಅದಷ್ಟು ಬೇಗ ಕಾರ್ಯಾರಂಭ ಮಾಡಿದರೆ ಒಳಿತು ಎಂದು ಸುಪ್ರೀಂ ಈಗ ಈ ಚೆಂಡನ್ನು ಸಂಸತ್ ಅಂಗಳಕ್ಕೆ ಎಸೆದಿದೆ. ಅಲ್ಲದೇ ಜನರೇ ರಾಜಕಾರಣಿಗಳ ಭವಿಷ್ಯ ನಿರ್ಧರಿಸುವವರು ಎಂದಿದೆ.

    ರಾಜಕೀಯ ಪಕ್ಷಗಳು ಕೂಡ ತಮ್ಮ ಅಭ್ಯರ್ಥಿಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಜನರಿಗೆ ತಿಳಿಸಬೇಕು. ಅಲ್ಲದೇ ಅಭ್ಯರ್ಥಿಗಳು ಸಹ ತಮ್ಮ ಮೇಲಿರುವ ಕ್ರಿಮಿನಲ್ ಆರೋಪಗಳ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳ ವಿವರಗಳ ಕುರಿತು ವ್ಯಾಪಕ ಪ್ರಚಾರ ನೀಡಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಬಳಕೆ ಮಾಡಲು ರಾಜಕೀಯ ಪಕ್ಷಗಳಿಗೆ ಕೋರ್ಟ್ ಸೂಚನೆ ನೀಡಿದೆ.

    ಸದ್ಯ ಜಾರಿಯಲ್ಲಿರುವ ನಿಯಮಗಳ ಅನ್ವಯ ಯಾವುದೇ ವ್ಯಕ್ತಿಯ ವಿರುದ್ಧ ಆರೋಪ ಸಾಬೀತಾದರೆ ಆತನಿಗೆ 6 ವಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಆದರೆ ಅವರು ರಾಜಕೀಯ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಬಹುದಾಗಿದೆ.

    ಇದೇ ವೇಳೆ ಜನಪ್ರತಿನಿಧಿಗಳು ವಕೀಲರಾಗಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಗೆ ಕೋರ್ಟ್, ಎಲ್ಲಾ ಜನ ಪ್ರತಿನಿಧಿಗಳು ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಲು ಸಾಧ್ಯವಿಲ್ಲ. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಈ ನಿಷೇಧ ವಿಧಿಸಿಲ್ಲವದ್ದರಿಂದ ಜನಪ್ರತಿನಿಧಿಗಳು ತಮ್ಮ ಅಧಿಕಾರ ಅವಧಿಯಲ್ಲಿ ವಕೀಲರಾಗಿ ಮುಂದುವರಿಯಬಹುದು ಎಂದು ಸ್ಪಷ್ಟಪಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv