Tag: Contract Reservation

  • ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿಗೆ ಗ್ರೀನ್ ಸಿಗ್ನಲ್?

    ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿಗೆ ಗ್ರೀನ್ ಸಿಗ್ನಲ್?

    ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿಗೆ ಮರುಜೀವ ಬಂದಿದೆ. ನವೆಂಬರ್‌ನಲ್ಲಿ ಪ್ರಸ್ತಾಪವಾಗಿ ವ್ಯಾಪಕ ವಿರೋಧದ ಬಳಿಕ ಸರ್ಕಾರ ಹಿಂದೆ ಸರಿದಿತ್ತು. ಆದರೆ ಈಗ ಸರ್ಕಾರ ಮತ್ತೆ ಮೀಸಲಾತಿಗೆ ಜೀವ ಕೊಡುತ್ತಿದೆ. ಇಂದು (ಮಾ.5) ಸಂಜೆ ಕ್ಯಾಬಿನೆಟ್‌ನಲ್ಲಿ ಮಹತ್ವದ ತೀರ್ಮಾನ ಮಾಡುವ ಸಾಧ್ಯತೆ ಇದೆ.

    ಕೆಟಿಟಿಪಿ ಕಾಯ್ದೆ- 1999 (2000ರ ಕರ್ನಾಟಕ ಕಾಯ್ದೆ 29)ರ ಸೆಕ್ಷನ್ 6ಕ್ಕೆ ತಿದ್ದುಪಡಿಗೆ ಸರ್ಕಾರ ಮುಂದಾಗಿದೆ. ಆರ್ಥಿಕ ಇಲಾಖೆಯು ತಿದ್ದುಪಡಿ ಮಸೂದೆಯ ಕರಡಿಗೆ ಕಾನೂನು ಇಲಾಖೆಯಿಂದಲೂ ಸಮ್ಮತಿ ಸಿಕ್ಕಿದೆ ಎನ್ನಲಾಗಿದೆ. ಕ್ಯಾಬಿನೆಟ್‌ನಲ್ಲಿ ಅನುಮೋದನೆ ಪಡೆದು ಮುಂದಿನ ವಾರ ಅಧಿವೇಶನದಲ್ಲಿ ಬಿಲ್ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.

    ಕೆಟಿಪಿಪಿ ಕಾಯ್ದೆಗೆ ಸರ್ಕಾರ ಹಿಂದೆಯೇ ತಿದ್ದುಪಡಿ ತಂದಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರಿಗೆ 50 ಲಕ್ಷ ರೂ. ವರೆಗಿನ ಕಾಮಗಾರಿಗಳಲ್ಲಿ 24.10% ರಷ್ಟು ಮೀಸಲಾತಿ ಕಲ್ಪಿಸಿತ್ತು. 2023ರ ಮಾರ್ಚ್ 29ರಂದು ಮತ್ತೆ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನ 1 ಕೋಟಿ ತನಕ ವಿಸ್ತರಣೆ ಮಾಡಿತ್ತು.

    ಹಿಂದುಳಿದ ವರ್ಗಗಳ ಪ್ರವರ್ಗ 1ಕ್ಕೆ ಸೇರಿದ ಗುತ್ತಿಗೆದಾರರಿಗೆ 4%ರಷ್ಟು ಮೀಸಲಾತಿ, 2ಎಗೆ ಸೇರಿದ ಗುತ್ತಿಗೆದಾರರಿಗೆ 15%ರಷ್ಟು ಮೀಸಲಾತಿ ನೀಡಲಾಗಿದೆ. ಇದೀಗ ಮುಸ್ಲಿಂ ಜನಪ್ರತಿನಿಧಿಗಳ ಮನವಿ ಮೇರೆಗೆ ಮುಸ್ಲಿಂ ಮೀಸಲಾತಿಗೆ ಸರ್ಕಾರ ಮುಂದಾಗಿದೆ. ಸರ್ಕಾರದ ನೀತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

  • ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡಿ: ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಬೇಡಿಕೆ

    ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡಿ: ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಬೇಡಿಕೆ

    – ಮುಸ್ಲಿಂ ಮೀಸಲಾತಿ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಿಎಂ ಕಚೇರಿ ಸ್ಪಷ್ಟನೆ

    ಬೆಂಗಳೂರು: ಮುಸ್ಲಿಂ ಸಮುದಾಯದವರಿಗೆ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವಿಚಾರ ಮುನ್ನಲೆಗೆ ಬಂದಿದೆ. 4% ಮೀಸಲಾತಿ ನೀಡುವಂತೆ ಮುಸ್ಲಿಂ ನಾಯಕರು ಬರೆದ ಪತ್ರ ಸರ್ಕಾರದ ಮುಂದಿದೆ‌‌. ಆದರೆ, ಮುಸ್ಲಿಂ ಮೀಸಲಾತಿ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟಪಡಿಸಿದೆ.

    ಅಂದಹಾಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಗುತ್ತಿಗೆ ಮೀಸಲಾತಿಗೆ ಬೇಡಿಕೆ ಕೇಳಿಬಂದಿದೆ. ಪ್ರವರ್ಗ 2 ಬಿಗೆ ಸೇರುವ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಇಲ್ಲ. ಆದರೆ, ಈಗಾಗಲೇ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 24% ಗುತ್ತಿಗೆ‌ ಮೀಸಲಾತಿ ಇದೆ. ಹಾಗಾಗಿ, ಅದೇ ಸೌಲಭ್ಯವನ್ನು ಅಲ್ಪಸಂಖ್ಯಾತ ಸಮುದಾಯಕ್ಕೂ ವಿಸ್ತರಿಸಬೇಕೆಂಬ ಕೂಗು ವ್ಯಕ್ತವಾಗಿದೆ. ಇದನ್ನೂ ಓದಿ: ಹೆಚ್‌.ಡಿ.ಕುಮಾರಸ್ವಾಮಿಗೆ ಕರಿಯ ಎಂದಿದ್ದಕ್ಕೆ ಕ್ಷಮೆಯಾಚಿಸಿದ ಜಮೀರ್

    ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಸೌಲಭ್ಯವನ್ನು ವಿಸ್ತರಿಸಿ ಸೂಕ್ತ ಆದೇಶ ನೀಡಬೇಕು ಎಂದು ಮುಸ್ಲಿಂ ಸಚಿವರು, ಶಾಸಕರ ನಿಯೋಗ ಮನವಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2024ರ ಆ.24 ರಂದು ಪತ್ರ ಬರೆದು ಬೇಡಿಕೆ ಮುಂದಿಟ್ಟಿದ್ದಾರೆ.

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಲೆಟರ್ ಹೆಡ್‌ನಲ್ಲಿ ಬರೆದಿರುವ ಪತ್ರಕ್ಕೆ, ಸಚಿವ ಜಮೀರ್ ಅಹ್ಮದ್, ರಹೀಂ ಖಾನ್ ಸೇರಿದಂತೆ ಮುಸ್ಲಿಂ ಸಮುದಾಯದ ಶಾಸಕರು, ಪರಿಷತ್ ಸದಸ್ಯರು ಸಹಿ ಹಾಕಿದ್ದಾರೆ. ಇದೇ ವೇಳೆ ಕಡತ ಮಂಡಿಸುವುದು ಎಂದು ಸಿಎಂ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಕಚೇರಿ ಅಧಿಕೃತ ಸ್ಪಷ್ಟನೆ ನೀಡಿದ್ದು, ಬೇಡಿಕೆ ಬಂದಿರುವುದು ನಿಜ. ಆದರೆ, ಮೀಸಲಾತಿ ‌ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ