Tag: Conversion Prohibition Act

  • ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ

    ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ

    ಹಾಸನ: ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ವಿರೋಧ ವ್ಯಕ್ತಪಡಿಸಿದರು.

    ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು? ನಾನು ಪ್ರಧಾನಿಯಾಗಿದ್ದೆ, ಮುಖ್ಯಮಂತ್ರಿಯಾಗಿದ್ದೆ. ಈ ದೇಶದಲ್ಲಿ ನನ್ನ ಕಾಲದಲ್ಲಿ ಮತಾಂತರ ಆಗುವ ಒಂದು ಘಟನೆ ನಡೀತಾ? ನನ್ನ ಆಡಳಿತದಲ್ಲಿ ಹಿಂದೂಸ್ಥಾನದಲ್ಲಿ, ಕರ್ನಾಟಕದಲ್ಲಿ ಮತಾಂತರ ಆಗಿದಿಯಾ? ಈಗ ಯಾಕೇ ಅದು ಶುರುವಾಯ್ತು ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ದೆಹಲಿ, ಮುಂಬೈನಲ್ಲಿ ಶುರುವಾಯ್ತಾ ಕೊರೊನಾ ಮೂರನೇ ಅಲೆ?

    ಮತಾಂತರ ನಿಷೇಧ ಕಾಯ್ದೆ ಬಗ್ಗೆ ಕಾಂಗ್ರೆಸ್ ಕಾಲದಲ್ಲಿ ಬಿಲ್ ತಂದರೂ ಪಾಸಾಗಲಿಲ್ಲ. ಇವರು ಪಾಸ್ ಮಾಡಲು ಹೊರಟಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ತೀವ್ರವಾಗಿ ವಿರೋಧಿಸಿದ್ದಾರೆ. ರೇವಣ್ಣ, ತಿಪ್ಪೇಸ್ವಾಮಿ ವಿರೋಧಿಸಿದ್ದಾರೆ. ಯಾರೂ ಅಧಿಕಾರ ನಡೆಸುತ್ತಾರೋ ಅವರು ಎಲ್ಲರ ವಿಶ್ವಾಸ ಗಳಿಸಿಕೊಂಡರೆ ಇವೆಲ್ಲಾ ಬರಲ್ಲ ಎಂದು ಕಿಡಿಕಾರಿದರು.

    ಆಶೋಕನ ಕಾಲದಲ್ಲಿ ಬುದ್ಧಿಸಂಗೆ ಹೋದರು. ಅದಕ್ಕೆ ಕಾರಣ ಅವರ ಸಂಸಾರದಲ್ಲಿ ನಡೆದ ಅಪಾರ ಘಟನೆಗಳು. ಅದರ ಬಗ್ಗೆ ನಾನು ಓದಿದ್ದೀನೆ. ಅವರ ಬಗ್ಗೆ ತಿಳಿದುಕೊಳ್ಳಬೇಕು ಎಂದರೆ ಯೂಟ್ಯೂಬ್ ನಲ್ಲಿ ಬರುತ್ತೆ ಎಂದರು. ಇದನ್ನೂ ಓದಿ: ನೇತ್ರದಾನ ಮಾಡೋದು ರಾಜ್ ಫ್ಯಾಮಿಲಿ ಟ್ರೆಡಿಷನ್ ಆಗಿದೆ: ಡಾ.ಭುಜಂಗ ಶೆಟ್ಟಿ

    ನಾನು ಲಘುವಾಗಿ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಪಾದಯಾತ್ರೆ ಮಾಡುವುದಾದರೆ ಮಾಡಲಿ. ಅದರಿಂದ ಸಮಸ್ಯೆ ಬಗೆಹರಿದರೆ ಸಂತೋಷ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದರು.

  • ಪೈರಸಿ ಒಂದು ವೈರಸ್, ತಡೆಯವುದು ಕಷ್ಟ: ಸುಮಲತಾ ಅಂಬರೀಶ್

    ಪೈರಸಿ ಒಂದು ವೈರಸ್, ತಡೆಯವುದು ಕಷ್ಟ: ಸುಮಲತಾ ಅಂಬರೀಶ್

    ಮಂಡ್ಯ: ಪೈರಸಿ ಒಂದು ವೈರಸ್, ತಡೆಯವುದು ಕಷ್ಟ ಎಂದು ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೈರಸಿಯನ್ನು ಗೂಂಡಾ ಕಾಯ್ದೆಯಡಿ ತಂದು ತಮಿಳುನಾಡು ಯಶಸ್ವಿಯಾಗಿದೆ. ಪೈರಸಿ ಒಂದು ವೈರಸ್, ತಡೆಯವುದು ಕಷ್ಟ. ಆದರೆ ಪೈರಸಿ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

    ಡಿಸೆಂಬರ್ 31 ರಂದು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಮಸ್ಯೆಗೆ ಪರಿಹಾರ ಸಿಗುವುದಾದರೆ ಬಂದ್ ಮಾಡಬೇಕು. ಬಂದ್‍ನಿಂದ ಯಾರಿಗೆ ಉಪಯೋಗ? ಯಾರಿಗೆ ನಷ್ಟ ಅನ್ನೋದನ್ನ ಯೋಚನೆ ಮಾಡಬೇಕು. ವಿಚಾರಗಳ ಪರ ನಿಂತಾಗ ಕೆಲವೊಮ್ಮೆ ತ್ಯಾಗ ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: 15 ರಿಂದ 18 ವರ್ಷದವರು ಜ. 1ರಿಂದ ಕೋವಿನ್‌ನಲ್ಲಿ ಲಸಿಕೆಗೆ ಹೆಸರು ನೋಂದಾಯಿಸಬಹುದು

    ಬಂದ್‍ನಿಂದ  ಖಂಡಿತ ನಷ್ಟವಾಗುತ್ತದೆ. ಬಂದ್‍ನಿಂದ ಕೇವಲ ಸಿನಿಮಾ ಚಿತ್ರರಂಗಕ್ಕೆ  ಮಾತ್ರ ನಷ್ಟವಲ್ಲ. ಹೊಸ ವರ್ಷದ ವೇಳೆ ವ್ಯಾಪಾರಗಳು ಹೆಚ್ಚಾಗಿರುತ್ತದೆ. ಅಂದು ಬಂದ್ ಮಾಡಿದರೆ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ ಎಂದು ನುಡಿದರು.

    ಮಾನವೀಯತೆ ಇಂದ ಯೋಚನೆ ಮಾಡಬೇಕು. ಡಿಸೆಂಬರ್ 31 ರಂದೇ ಬಂದ್ ಮಾಡಬೇಕಾ ಅಥವಾ ಸರ್ಕಾರ ಏನು ಕ್ರಮವಹಿಸಿದ್ದಾಗ ಬಂದ್ ಮಾಡಬೇಕಾ ಯೋಚಿಸಬೇಕು. ಬಂದ್‌ಗೆ ನನ್ನ ಬೆಂಬಲ ಅಲ್ಲ, ಹೋರಾಟಕ್ಕೆ ನನ್ನ ಬೆಂಬಲ ಎಂದರು. ಇದನ್ನೂ ಓದಿ: ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ

    ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮತಾಂತರ ನಿಷೇಧ ಕಾಯ್ದೆ ಬಗ್ಗೆ ತಿಳಿದು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ಎಮ್‌ಇಎಸ್ ಪುಂಡಾಟಿಕೆ ಬಗ್ಗೆ ಮಾತನಾಡಲು ಶೂನ್ಯ ಅವಧಿಯಲ್ಲಿ ಮಾತನಾಡಲು ಮನವಿ ಮಾಡಿದ್ದೆ. ಆದರೆ ಈ ಬಾರಿ ಶೂನ್ಯ ಅವಧಿ ನಡೆಯಲಿಲ್ಲ. ಹೀಗಾಗಿ ಈ ವಿಷಯ ಕುರಿತು ಗೃಹಸಚಿವರಿಗೆ ಪತ್ರ ಬರೆಯುತ್ತೇನೆ ಎಂದರು.

  • ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು, ತಂದೇ ತರುತ್ತೀವಿ: ಸುಧಾಕರ್

    ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು, ತಂದೇ ತರುತ್ತೀವಿ: ಸುಧಾಕರ್

    – ಯು.ಟಿ.ಖಾದರ್ ಬಳಿ ಹೇಳಿಸಿಕೊಂಡು ತರೋ ಅಗತ್ಯವಿಲ್ಲ

    ಚಿಕ್ಕಮಗಳೂರು: ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು, ತಂದೇ ತರುತ್ತೇವೆ. ಆದರೆ ಅದನ್ನು ಯು.ಟಿ.ಖಾದರ್ ಬಳಿ ಹೇಳಿಸಿಕೊಂಡು ತರುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜು ಜಾಗದ ಸ್ಥಳ ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಎಲ್ಲಾ ಹಂತಗಳಲ್ಲಿ ಚರ್ಚೆಯಾಗಿದೆ. ಬಹುಶಃ ಮುಂದಿನ ಅಧಿವೇಶದನದಲ್ಲಿ ಜಾರಿಗೆ ತರುತ್ತೇವೆ ಎಂದರು.

    ಇದೇ ವೇಳೆ ವಿದ್ಯುತ್ ದರ ಹೆಚ್ಚಳಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಸರ್ಕಾರಕ್ಕೂ ಕೂಡ ಆರ್ಥಿಕ ಇತಿಮಿತಿ ಇದೆ. ಸರ್ಕಾರ ಎಂದಾಕ್ಷಣ ಅಕ್ಷಯ ಪಾತ್ರೆಯಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸರ್ಕಾರದ ಬಳಿ ಹಣ ಇಲ್ಲ ಎಂದರು. ಸರ್ಕಾರಕ್ಕೆ ಬಹಳ ಕಠಿಣ ಸವಾಲುಗಳು ಇದೆ. ಕೋವಿಡ್‍ನ ಆರ್ಥಿಕ ದುಸ್ಥಿತಿ ಕೂಡ ಸರ್ಕಾರಕ್ಕೆ ಬರದಂತೆ ಬಡಿದಿದೆ. ಒಂದೇ ವರ್ಷದಲ್ಲಿ ಎರಡು ಬಾರಿ ಅತಿವೃಷ್ಟಿಯಾಗಿ ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದ್ದೇವೆ. ಕಳೆದ ಎಂಟು ತಿಂಗಳಿಂದ ಆರು ಕೋಟಿ ಜನರಿಗೆ ವಿವಿಧ ಬಗೆಯಲ್ಲಿ ಕೋವಿಡ್ ನಿರ್ವಹಣೆ ಮಾಡಿದ್ದೇವೆ. ಯಾವುದೇ ಸಿಬ್ಬಂದಿಗೂ ವೇತನ ಕಡಿತ ಮಾಡಿಲ್ಲ, ಎಲ್ಲಾ ಸಿಬ್ಬಂದಿಗೂ ಪರಿಪೂರ್ಣ ವೇತನ ನೀಡಿ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾಗಿದ್ದು ಎಲ್ಲಾ ರೀತಿಯಲ್ಲೂ ಹಣದ ಕ್ರೋಢೀಕರಣಕ್ಕೆ ಕಷ್ಟಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಸರ್ಕಾರ ಕೂಡ ಬೆಲೆ ಹೆಚ್ಚಳವನ್ನು ಸಂತೋಷದಿಂದ ಮಾಡುವುದಿಲ್ಲ. ಅನಿವಾರ್ಯ ಪರಿಸ್ಥಿತಿಯಿಂದ ಮಾಡುವಂತಾಗಿದೆ.

    ಕಳೆದ ಎಂಟು ತಿಂಗಳಿಂದ ಸಾರಿಗೆ ವ್ಯವಸ್ಥೆ ಮಾಡಿದ್ದೇವೆ. ನೂರಾರು ಕೋಟಿ ರೂಪಾಯಿ ನಷ್ಟದಲ್ಲಿ ನಡೆಯುತ್ತಿದೆ. ನಷ್ಟವಾಗುತ್ತಿದೆ ಎಂದು ಯಾವುದನ್ನೂ ನಿಲ್ಲಿಸಿಲ್ಲ. ಸರ್ಕಾರ ತುಂಬಾ ಕಠಿಣ ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿಗಳು ಸ್ವಲ್ಪ ಮಟ್ಟಿಗೆ ವಿದ್ಯುತ್ ದರವನ್ನ ಹೆಚ್ಚು ಮಾಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಬಗ್ಗೆ ಚಿಂತನೆ ಮಾಡಿದ್ದಾರೆಂದು ತಿಳಿದುಕೊಂಡಿದ್ದೇನೆ. ಜನ ಅದಕ್ಕೆ ಸಹಕರಿಸಬೇಕು ಎಂದರು.

    ಪಟಾಕಿ ನಿಷೇಧದ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪಟಾಕಿಯನ್ನ ಬೇರೆ ಬೇರೆ ರಾಜ್ಯ ಕೂಡ ನಿಷೇಧ ಮಾಡಿದೆ. ಜನರ ಆರೋಗ್ಯ ಹಾಗೂ ಜೀವ ಮುಖ್ಯ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಂಡಿದ್ದಾರೆ. ಪಟಾಕಿ ಹಾಗೂ ಪಟಾಕಿಯ ಹೊಗೆ ಮಾರಕ ಎಂಬುದು ವರ್ತಕರಿಗೆ ಗೊತ್ತಿಲ್ವಾ. ಕೆಲವರ ಲಾಭಕ್ಕಾಗಿ ಕೋಟ್ಯಾಂತರ ಜೀವ ಹಾಗೂ ಆರೋಗ್ಯವನ್ನ ನಿರ್ಲಕ್ಷ್ಯ ಮಾಡೋದಕ್ಕೆ ನಮ್ಮ ಸರ್ಕಾರಕ್ಕೆ ಸಾಧ್ಯವಿಲ್ಲ. ನಮಗೆ ಕರ್ನಾಟಕದ ಜನರ ಆರೋಗ್ಯದ ಕಾಳಜಿಯೇ ಮುಖ್ಯ.

    ಪರಿಸರ ಸ್ನೇಹಿ ಪಟಾಕಿಗಳಿಗೆ ಅವಕಾಶ ಕೊಟ್ಟಿದ್ದಾರೆ. ಪಟಾಕಿ ತಯಾರು ಮಾಡುತ್ತಿರುವವರಿಗೂ ಕೋವಿಡ್ ಏನೆಂದು ಗೊತ್ತಿದೆ. ಯಾಕೆ ಅವರು ತಯಾರು ಮಾಡಬೇಕಿತ್ತು ಎಂದು ಪ್ರಶ್ನಿಸಿದರು. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಡಲ್ಲ ಎಂದು ಗೊತ್ತಿರುತ್ತೆ. ಆದರೆ, ಕೆಲವರಿಗೆ ಅವರ ಲಾಭವೇ ಅವರಿಗೆ ಮುಖ್ಯ ಎಂದರು.