Tag: convicts

  • ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಸೇರಿ ಮರಕುಂಬಿಯ 99 ಅಪರಾಧಿಗಳಿಗೆ ಜಾಮೀನು

    ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಸೇರಿ ಮರಕುಂಬಿಯ 99 ಅಪರಾಧಿಗಳಿಗೆ ಜಾಮೀನು

    ಧಾರವಾಡ/ಕೊಪ್ಪಳ: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ (Dharwad) ಹೈಕೋರ್ಟ್ (High Court) ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ನೀಡಿದೆ.

    ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಆದರೆ ಇದೀಗ 99 ಜನ ಅಪರಾಧಿಗಳ ಪೈಕಿ 98 ಜನರಿಗೆ ಧಾರವಾಡದ ಹೈಕೋರ್ಟ್ ಜಾಮೀನು ನೀಡಿದೆ.ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ ದಾಖಲು

    ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ 98 ಜನ ಅಪರಾಧಿಗಳು ಅ.28 ರಂದು ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಕುರಿತಂತೆ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠವು 98 ಜನ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ.

    ಇದಕ್ಕೆ ಸಂಬಂಧಿಸಿದಂತೆ ವಕೀಲರು ಮಾತನಾಡಿ, ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ಧಾರವಾಡ ಹೈಕೋರ್ಟ್, ಪ್ರಕರಣದ ಎ1 ಆರೋಪಿ ಮಂಜುನಾಥ ಎಂಬುವವರನ್ನು ಹೊರತುಪಡಿಸಿ, ಉಳಿದ ಎಲ್ಲ ಅಪರಾಧಿಗಳಿಗೆ ಜಾಮೀನು ನೀಡಿದೆ. ಮಂಜುನಾಥ ಜಾಮೀನಿಗೆ ಅರ್ಜಿ ಹಾಕದೇ ಇದ್ದಿದ್ದರಿಂದ ಆತನಿಗೆ ಜಾಮೀನು ದೊರೆತಿಲ್ಲ ಎಂದು ಹೇಳಿದರು.

    ಪ್ರಕರಣದ ಆರೋಪಿಗಳು ಹತ್ತು ವರ್ಷಗಳಿಂದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ. ಘಟನೆ ಹಾಗೂ ಎಫ್‌ಐಆರ್ ದಾಖಲಾದ ಸಮಯದ ವ್ಯತ್ಯಾಸ ಮತ್ತು ಆರೋಪಿಗಳ ಗುರುತು ಪತ್ತೆ ಮಾಡಿಲ್ಲ ಎಂಬ ಅಂಶಗಳನ್ನು ಹೈಕೋರ್ಟ್ ಪ್ರಮುಖವಾಗಿ ಪರಿಗಣಿಸಿದೆ. ಪ್ರತಿಯೊಬ್ಬರಿಗೂ 50 ಸಾವಿರ ರೂ. ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಹೈಕೋರ್ಟ್ ಷರತ್ತು ವಿಧಿಸಿದೆ ಎಂದು ತಿಳಿಸಿದರು.ಇದನ್ನೂ ಓದಿ: ಹಿಪ್ಪರಗಿ ಕಬಡ್ಡಿ ವೈಭವ – ಕಣ್ಮನ ಸೆಳೆದ ಅಂತರ್ ರಾಜ್ಯ ಮಹಿಳಾ ಟೂರ್ನಿ

  • ನಿರ್ಭಯಾ ದೋಷಿಗಳನ್ನ ಕೈಯಾರ ಗಲ್ಲಿಗೇರಿಸಿದ್ದು ಖುಷಿ ತಂದಿದೆ: ಪವನ್ ಜಲ್ಲಾದ್

    ನಿರ್ಭಯಾ ದೋಷಿಗಳನ್ನ ಕೈಯಾರ ಗಲ್ಲಿಗೇರಿಸಿದ್ದು ಖುಷಿ ತಂದಿದೆ: ಪವನ್ ಜಲ್ಲಾದ್

    – ಅಪರಾಧಿಗಳನ್ನು ಗಲ್ಲಿಗೇರಿಸಿದ್ದನ್ನು ವಿವರಿಸಿದ ಪವನ್
    – ನನ್ನ ಮಕ್ಕಳು ಗಲ್ಲಿಗೇರಿಸುವ ವೃತ್ತಿಗೆ ಬರುವುದು ನನಗಿಷ್ಟವಿಲ್ಲ

    ಲಕ್ನೋ: ನಾನು ನನ್ನ ಧರ್ಮವನ್ನು ಪಾಲಿಸಿದ್ದೇನೆ. ಇದು ನಮ್ಮ ಪೂರ್ವಜರ ಕೆಲಸ. ಅಪರಾಧಿಗಳನ್ನು ನೇಣಿಗೆ ಹಾಕುವ ಮುನ್ನ ಪಶ್ಚಾತ್ತಾಪ ಪಡಬೇಕಿತ್ತು. ಆದರೆ ಹಾಗೆ ಮಾಡಲಿಲ್ಲ ಎಂದು ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ ಪವನ್ ಜಲ್ಲಾದ್ ಹೇಳಿದ್ದಾರೆ.

    ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ 5:30ಕ್ಕೆ ಗಲ್ಲಿಗೇರಿಸಲಾಯಿತು. ನೇಣು ಹಾಕುವ ಮನೆಯಲ್ಲಿ ಮಾತನಾಡಲು ಯಾರಿಗೂ ಅವಕಾಶವಿಲ್ಲ. ಆದ್ದರಿಂದ ಕೆಲಸವು ಸನ್ನೆಗಳ ಮೂಲಕ ಮಾತ್ರ ನಡೆಯಿತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: “ನಾಲ್ವರಲ್ಲಿ ಕೊನೆಯಾಸೆ ಹೇಳಿದ್ದು ವಿನಯ್ ಮಾತ್ರ”

    ನಾನು ಮಾರ್ಚ್ 17ರಂದು ತಿಹಾರ್ ಜೈಲಿಗೆ ಹೋಗಿದ್ದೆ. ಬಳಿಕ ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧತೆ ನಡೆಸಲಾಯಿತು. ಗುರುವಾರ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ನೇಣುಗಳನ್ನು ಸರಿಪಡಿಸಲಾಗಿತ್ತು. ಬಳಿಕ ಅಪರಾಧಿಗಳನ್ನು ಅಲ್ಲಿಗೆ ತಂದು ನಿಲ್ಲಿಸಲಾಗಿತ್ತು. ಮೊದಲು ಅಕ್ಷಯ್ ಮತ್ತು ಮುಖೇಶ್, ನಂತರ ಪವನ್ ಹಾಗೂ ವಿನಯ್‍ನನ್ನು ಹಲಗೆಯ ಮೇಲೆ ಕರೆದೊಯ್ಯಲಾಗಿತ್ತು. ಬಳಿಕ ಅಧಿಕಾರಿಗಳು ಸನ್ನೆಯ ಮೂಲಕ ಆಜ್ಞೆ ನೀಡಿದಾಗ ನೇಣು ಹಾಕಲಾಯಿತು ಎಂದು ಪವನ್ ಜಲ್ಲಾದ್ ವಿವರಿಸಿದ್ದಾರೆ.

    ನನ್ನ ಮಟ್ಟಿಗೆ, ಅಪರಾಧಿಗಳನ್ನು ನೇಣಿಗೆ ಹಾಕುವುದು ಸಮಾಜದಿಂದ ಕೆಟ್ಟ ಜನರನ್ನು ತೆಗೆದುಹಾಕುವ ದೊಡ್ಡ ವೃತ್ತಿಯಾಗಿದೆ. ನಾನು ಕೂಡ ಓರ್ವ ಮಗಳ ತಂದೆ. ಆದ್ದರಿಂದ ಯುವತಿಯ ಮೇಲೆ ಅತ್ಯಾಚಾರಿ ಎಸಗಿ, ಕೊಲೆಗೈದವರನ್ನು ಗಲ್ಲಿಗೇರಿಸಿದ್ದು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿರ್ಭಯಾ ಪ್ರಕರಣದ ಅಪರಾಧಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಗಲ್ಲು ಶಿಕ್ಷೆ ಅಪರಾಧಿಗಳಿಗೆ ನೇಣು ಹಾಕುವ ಕೆಲಸವನ್ನು ಮಾಡುತ್ತಿರುವ ಪವನ್ ಜಲ್ಲಾದ್ ಅವರ ಕುಟುಂಬದಲ್ಲಿ ಮೂರನೇ ವ್ಯಕ್ತಿ. ಈ ಕುರಿತು ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆಗೈದಿದ್ದವರಿಗೆ ನಮ್ಮ ಅಜ್ಜ ನೇಣು ಹಾಕಿದ್ದರು. ಅವರು ಕೊನೆಯದಾಗಿ ಅಪರಾಧಿಯೊಬ್ಬನನ್ನು 1989ರ ಜನವರಿಯಲ್ಲಿ ಗಲ್ಲಿಗೇರಿಸಿದ್ದರು. ಬಳಿಕ ನಮ್ಮ ತಂದೆ ಮಮ್ಮು ಜುಲ್ಲಾದ್ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಅಫ್ಜಲ್‍ಗೆ ನೇಣುಹಾಕಲು ಉತ್ಸುಕರಾಗಿದ್ದರು. ಆದರೆ ದುರದೃಷ್ಟವಶಾತ್ ಅಫ್ಜಲ್ ಮರಣದಂಡನೆಗೂ ಒಂಬತ್ತು ತಿಂಗಳ ಮೊದಲು ಅವರು ಫೆಬ್ರವರಿ 2013ರಲ್ಲಿ ನಿಧನರಾಗಿದ್ದರು. ನನ್ನ ತಂದೆ ತಮ್ಮ 47 ವರ್ಷಗಳ ಸೇವೆಯಲ್ಲಿ 12 ಕೈದಿಗಳನ್ನು ಗಲ್ಲಿಗೇರಿಸಿದ್ದಾರೆ ಎಂದು ತಿಳಿಸಿದ್ದಾರೆ.

    ‘ಭಾರತದಲ್ಲಿ ನೇಣು ಹಾಕುವ ವ್ಯಕ್ತಿಗಳಲ್ಲಿ ಹೆಚ್ಚಿನವರು ತಲಾತಲಾಂತದಿಂದ ಬಂದವರಾಗಿದ್ದಾರೆ. ಆದರೆ ನನ್ನ ಮಕ್ಕಳು ನನ್ನ ಹೆಜ್ಜೆಗಳನ್ನು ಅನುಸರಿಸಬೇಕೆಂದು ನಾನು ಬಯಸುವುದಿಲ್ಲ ಎಂದು ಪವನ್ ಜಲ್ಲಾದ್ ಹೇಳಿದ್ದಾರೆ. ಇದನ್ನೂ ಓದಿ: ನನ್ನ ಮಗನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ: ವೈರಲ್ ಆಯ್ತು ಅಪರಾಧಿ ತಾಯಿಯ ವಿಡಿಯೋ

  • ಅತ್ಯಾಚಾರದಂತಹ ಅಪರಾಧ ತಡೆಯಲು ಯೋಗ, ನೈತಿಕ ಶಿಕ್ಷಣ ಪಠ್ಯದ ಭಾಗವಾಗಬೇಕು: ಬಾಬಾ ರಾಮ್‍ದೇವ್

    ಅತ್ಯಾಚಾರದಂತಹ ಅಪರಾಧ ತಡೆಯಲು ಯೋಗ, ನೈತಿಕ ಶಿಕ್ಷಣ ಪಠ್ಯದ ಭಾಗವಾಗಬೇಕು: ಬಾಬಾ ರಾಮ್‍ದೇವ್

    – ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು
    – ಪೋಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು

    ನವದೆಹಲಿ: ಮಹಿಳೆಯರ ಮೇಲಿನ ಹಲ್ಲೆ ಹಾಗೂ ಅತ್ಯಾಚಾರದಂತಹ ಭೀಕರ ಅಪರಾಧಗಳನ್ನು ತಡೆಯಲು ಸರ್ಕಾರ ಯೋಗ ಮತ್ತು ನೈತಿಕ ಶಿಕ್ಷಣವನ್ನು ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಭಿಪ್ರಾಯಪಟ್ಟಿದ್ದಾರೆ.

    ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಅಪರಾಧಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಯೋಗ ಮತ್ತು ನೈತಿಕ ಶಿಕ್ಷಣವನ್ನು ಪಠ್ಯದ ಭಾಗವಾಗಿಸಬೇಕು. ಪೋಷಕರು ಸಹ ತಮ್ಮ ಮಕ್ಕಳಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

    ನರಭಕ್ಷಕರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ನ್ಯಾಯಾಂಗವು ಇತಿಹಾಸ ನಿರ್ಮಿಸಿದೆ. ಇಂತಹ ಕೃತ್ಯ ಎಸಗಿದವರಿಗೆ ಯಾವ ರೀತಿಯ ಶಿಕ್ಷೆಯಾಗುತ್ತದೆ ಎಂಬುದನ್ನು ತೋರಿಸಿದೆ. ಅಲ್ಲದೆ ಮುಂದೆ ಯಾರಾದರೂ ಇಂತಹ ಘೋರ ಅಪರಾಧಗಳನ್ನು ಮಾಡುವವರಿಗೆ ಭಯ ಹುಟ್ಟಿಸುವಂತೆ ಮಾಡಿದೆ. ಈ ಪ್ರಕರಣವು ವಿಶ್ವ ಮಟ್ಟದಲ್ಲಿ ನಮ್ಮ ದೇಶದ ಚಿತ್ರಣವನ್ನು ಬಿಂಬಿಸಿದೆ ಎಂದು ಬಾಬಾ ರಾಮ್‍ದೇವ್ ಅಭಿಪ್ರಾಯಪಟ್ಟಿದ್ದಾರೆ.

    2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ.

    ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟಿಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು.

    ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತು. ಇತ್ತ ಅರ್ಜಿ ವಜಾಗೊಳ್ಳುತ್ತಿದ್ದಂತೆ ತಿಹಾರ್ ಜೈಲಿನ ಮುಂದೆ ಜನ ಸೇರಲು ಆರಂಭಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಿಹಾರ ಜೈಲಿನ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

  • ನಿರ್ಭಯಾ ಪ್ರಕರಣದ ಅಪರಾಧಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ನಿರ್ಭಯಾ ಪ್ರಕರಣದ ಅಪರಾಧಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ನವದೆಹಲಿ: ನಿರ್ಭಯಾಳನ್ನು ಅತ್ಯಾಚಾರಿಗಳು ಎಷ್ಟರ ಮಟ್ಟಿಗೆ ಕ್ರೌರ್ಯ ಮೆರೆದಿದ್ದರೆಂದರೆ, ಆಕೆಯ ಬಟ್ಟೆಗಳನ್ನು ಕಳಚಿ ಬಸ್ ಅನ್ನು ಸ್ವಚ್ಛಗೊಳಿಸಿದ್ದರು. ಆಗ ಬಟ್ಟೆ ಹರಿದು ಹೋಗಿತ್ತು. ಅಷ್ಟೇ ಅಲ್ಲದೆ ದೋಷಿಗಳು ಯುವತಿ ಮತ್ತು ಸ್ನೇಹಿತನ ಎಲ್ಲ ವಸ್ತುಗಳನ್ನು ಸಹ ಲೂಟಿ ಮಾಡಿದ್ದರು. ಕೆಲವು ವಸ್ತುಗಳು ಬಿಹಾರದ ಔರಂಗಾಬಾದ್‍ನಿಂದ ಮತ್ತು ಕೆಲವು ರಾಜಸ್ಥಾನದ ಕರೌಲಿ ಗ್ರಾಮದಲ್ಲಿ ಪೊಲೀಸರಿಗೆ ದೊರೆತಿದ್ದವು. ಜೊತೆಗೆ ದೆಹಲಿಯ ಕೊಳೆಗೇರಿಯಲ್ಲಿರುವ ರವಿದಾಸ್ ಶಿಬಿರದಿಂದ ಪೊಲೀಸರು ಅನೇಕ ವಿಷಯಗಳನ್ನು ವಶಪಡಿಸಿಕೊಂಡಿದ್ದರು.

    ಯಾರೋ ಫೋನ್ ಇಟ್ಟುಕೊಂಡ್ರೆ, ಯಾರೋ ಶೂ ತೆಗೆದುಕೊಂಡ್ರು:
    16 ಡಿಸೆಂಬರ್ 2012ರಂದು ಯುವತಿ ತನ್ನ ಸ್ನೇಹಿತನೊಂದಿ ರಾತ್ರಿ 9 ಗಂಟೆಗೆ ಬಸ್ ಹತ್ತಿದ ಕೂಡಲೇ ದುಷ್ಕರ್ಮಿಗಳು ಅವರನ್ನು ಸ್ನೇಹಿತರು ಅವಳನ್ನು ನಿಂದಿಸಲು ಪ್ರಾರಂಭಿಸಿದ್ದರು. ಎಲ್ಲಾ 6 ಅಪರಾಧಿಗಳು ಆ ರಾತ್ರಿ ಹೆಚ್ಚು ಮಾದಕ ವ್ಯಸನಿಯಾಗಿದ್ದರು. ಓರ್ವ ಯುವತಿಯ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದ. ಮತ್ತೊಬ್ಬ ಯುವತಿಯನ್ನು ಹಿಡಿದ್ದ. ನಂತರ ಎಲ್ಲರೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಷ್ಟೇ ಅಲ್ಲದೆ ಅಪರಾಧಿಗಳು ಅವರಿಂದ ಎಲ್ಲವನ್ನೂ ದೋಚಿದ್ದರು.

    ಹಣ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳನ್ನು ದೋಚಿದ್ದ ಕ್ರೂರಿಗಳು ಯುವತಿ ಹಾಗೂ ಸ್ನೇಹಿತನನ್ನು ಬಸ್ಸಿನಿಂದ ಕೆಳಕ್ಕೆ ಎಸೆದಿದ್ದರು. ನಂತರ ಎಲ್ಲಾ ವಸ್ತುಗಳನ್ನು ತಮ್ಮೊಳಗೆ ಹಂಚಿಕೊಂಡಿದ್ದರು. ಅಪರಾಧಿ ಅಕ್ಷಯ್ ಯುವತಿಯ ಸ್ನೇಹಿತನ ಬೆಳ್ಳಿ ಮತ್ತು ಚಿನ್ನದ ಉಂಗುರದೊಂದಿಗೆ ಬಿಹಾರಕ್ಕೆ ಹೋಗಿದ್ದ. ಮುಖೇಶ್ ಸಿಂಗ್ ಯುವಕನ ಸ್ಮಾರ್ಟ್ ಫೋನ್ ತೆಗೆದುಕೊಂಡು ರಾಜಸ್ಥಾನದ ಕರೌಲಿಯಲ್ಲಿರುವ ತನ್ನ ಹಳ್ಳಿಗೆ ತೆರಳಿದ್ದ. ಮುಖ್ಯ ಅಪರಾಧಿ ರಾಮ್ ಸಿಂಗ್ ಯುವತಿಯ ತಾಯಿಯ ಡೆಬಿಟ್ ಕಾರ್ಡ್ ಇಟ್ಟುಕೊಂಡಿದ್ದರೆ, ಅಪ್ರಾಪ್ತ ಅತ್ಯಾಚಾರಿ ಯುವತಿಯ ಬಳಿಯಿದ್ದ ಹಣವನ್ನು ಇಟ್ಟುಕೊಂಡಿದ್ದ. ಮತ್ತೊರ್ವ ಅಪರಾಧಿ ವಿನಯ್ ಶರ್ಮಾ ಯುವಕನ ಶೂ, ಯುವತಿಯ ನೋಕಿಯಾ ಮೊಬೈಲ್ ಫೋನ್ ಹಾಗೂ ಪವನ್ ಗುಪ್ತಾ ಯುವಕನ ಸೊನಾಟಾ ವಾಚ್ ಮತ್ತು 1,000 ರೂ. ಇಟ್ಟುಕೊಂಡಿದ್ದ.

    ಸಾಮೂಹಿಕ ಅತ್ಯಾಚಾರದ ಮೂರು ದಿನಗಳ ನಂತರ ಅಂದ್ರೆ 2012ರ ಡಿಸೆಂಬರ್ 19ರಂದು ಮಧ್ಯಾಹ್ನ 3:30 ಕ್ಕೆ ಯುವತಿಯ ಸ್ನೇಹಿತ ತನ್ನ ಹೇಳಿಕೆಯನ್ನು ದಾಖಲಿಸಿದ್ದ. ತನ್ನ ಹೇಳಿಕೆಯಲ್ಲಿ ಯುವಕ, ‘ಅಪರಾಧಿಗಳು ಆತನಿಂದ ಸ್ಯಾಮ್‍ಸಂಗ್ ಸ್ಮಾರ್ಟ್‍ಫೋನ್‍ಗಳು, 1000 ರೂ. ಇದ್ದ ವ್ಯಾಲೆಟ್, ಸಿಟಿಬ್ಯಾಂಕ್‍ನ ಕ್ರೆಡಿಟ್ ಕಾರ್ಡ್, ಐಸಿಐಸಿಐ ಬ್ಯಾಂಕಿನ ಡೆಬಿಟ್ ಕಾರ್ಡ್, ಕಂಪನಿ ಐಡಿ ಕಾರ್ಡ್, ದೆಹಲಿ ಮೆಟ್ರೊದ ಸ್ಮಾರ್ಟ್ ಕಾರ್ಡ್ ಅನ್ನು ಕಿತ್ತುಕೊಂಡಿದ್ದಾರೆ. ಇದರೊಂದಿಗೆ ಚಿನ್ನ ಮತ್ತು ಬೆಳ್ಳಿಯ ಉಂಗುರ, ಬಟ್ಟೆ ಮತ್ತು ಶೂಗಳನ್ನು ಸಹ ತೆಗೆದುಕೊಂಡು ಹೋಗಿದ್ದಾರೆ. ಸ್ನೇಹಿತೆಯ ನೋಕಿಯಾ ಮೊಬೈಲ್ ಮತ್ತು ಪರ್ಸ್ ಅನ್ನು ದುಷ್ಕರ್ಮಿಗಳು ಕಸಿದುಕೊಂಡಿದ್ದಾರೆ’ ಎಂದು ತಿಳಿಸಿದ್ದ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿ ಮೊಬೈಲ್ ಫೋನ್ ಟ್ರ್ಯಾಪ್ ಮಾಡಿದ್ದಾಗ ಅಪರಾಧಿಗಳು ಸಿಕ್ಕಿಬಿದ್ದಿದ್ದರು. ಬಳಿಕ ಅಪರಾಧಿಗಳಿಂದ ಯುವತಿ ಹಾಗೂ ಆಕೆಯ ಸ್ನೇಹಿತನಿಂದ ದೋಚಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

  • ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ನವದೆಹಲಿ: ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವ ಮೂಲಕ ಕೋಟ್ಯಂತರ ಜನರ ಅಭಿಲಾಶೆ ನೆರವೇರಿದೆ. ಸೂರ್ಯ ಹುಟ್ಟೋ ಮೊದಲೇ ಕೀಚಕರ ವಧೆಯಾಗಿದೆ. 7 ವರ್ಷಗಳ ಬಳಿಕ ನಿರ್ಭಯಾ ಹಂತಕರಿಗೆ ನೇಣು ಕುಣಿಕೆ ಬಿದ್ದಿದೆ. ಒಟ್ಟೊಟ್ಟಿಗೆ ಮಾಡಿದ ಪಾಪಕ್ಕೆ ನಾಲ್ವರು ಒಟ್ಟಿಗೆ ಶಿಕ್ಷೆ ಅನುಭವಿಸಿದ್ದಾರೆ.

    ಮೊದಲೇ ನಿಗದಿ ಆಗಿದ್ದಂತೆ ಮುಂಜಾನೆ 5.30ಕ್ಕೆ ಸರಿಯಾಗಿ ತಿಹಾರ್ ಜೈಲಿನಲ್ಲಿ ಪಾತಕಿಗಳಾದ ಪವನ್ ಗುಪ್ತಾ, ವಿನಯ್ ಶರ್ಮಾ, ಮುಖೇಶ್ ಸಿಂಗ್ ಹಾಗೂ ಅಕ್ಷಯ್ ಸಿಂಗ್‍ರನ್ನ ವದಾ ಸ್ಥಳಕ್ಕೆ ಕರೆತಂದು ಮುಖಕ್ಕೆ ಕಪ್ಪು ಬಟ್ಟೆ ಹಾಕಿ, ನೇಣುಗಂಬಕ್ಕೆ ಏರಿಸಲಾಯಿತು. ಕುರ್ತಾ-ಪೈಜಾಮ ಧಾರಿಯಾಗಿದ್ದ ಕೀಚಕರ ವಧೆಯಾಯ್ತು. ಬೆಳಗ್ಗೆ 6.00 ಗಂಟೆ ಸುಮಾರಿಗೆ ಪಾಪಿಗಳು ಸತ್ತಿರುವುದನ್ನು ಜೈಲಾಧಿಕಾರಿಗಳು ದೃಢಪಡಿಸಿದರು.

    ಸದ್ಯ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಂಬಂಧಿಕರಿಗೆ ಮೃತದೇಹ ನೀಡುವುದು ಅನುಮಾನವಾಗಿದೆ. ಕಾನೂನು ಸುವ್ಯವಸ್ಥೆಯ ಸಲುವಾಗಿ ಸಾಮೂಹಿಕ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಗಳಿವೆ.

    ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?
    22 ವರ್ಷದ ಪವನ್ ಗುಪ್ತಾ ಬಸ್ ಕ್ಲೀನರ್ ಆಗಿದ್ದು, ಅರ್ಧಕ್ಕೆ ಶಾಲೆಯಿಂದ ಡ್ರಾಪ್‍ಔಟ್ ಆಗಿದ್ದನು. ಹಣ್ಣಿನ ವ್ಯಾಪಾರಿ ಹಾಗೂ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಬಿಕಾಂ ಪದವಿದರನಾದ ವಿನಯ್ ಶರ್ಮಾ(23) ಜಿಮ್ ಇನ್‍ಸ್ಟ್ರಕ್ಟರ್ ಆಗಿದ್ದನು. ಅಲ್ಲದೆ ಐಎಎಫ್ ಕ್ಲರ್ಕ್ ಪರೀಕ್ಷೆಗೆ ಕೋರ್ಟ್ ಅನುಮತಿ ಕೋರಿದ್ದನು. ಇನ್ನು ಮುಖೇಶ್ ಸಿಂಗ್(29) ನಿರುದ್ಯೋಗಿ ಆಗಿದ್ದು, ಆತನ ಸಹೋದರ ರಾಮ್‍ಸಿಂಗ್ ಬಸ್ ಚಾಲಕನಾಗಿದ್ದನು. ಆತ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದನು. ವಿವಾಹಿತನಾಗಿರುವ ಅಕ್ಷಯ್ ಸಿಂಗ್(31) ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.

    ಗಲ್ಲು ವಿಧಿಸುವ ದಿನ ಪ್ರಕ್ರಿಯೆ ಹೇಗಿರುತ್ತೆ?
    1. ಮರಣದಂಡನೆ ವಿಧಿಸುವ ದಿನ ಜೈಲು ಎಸ್‍ಪಿ, ಡಿಎಸ್‍ಪಿ ಕೈದಿ ಇರುವ ಸೆಲ್‍ಗೆ ಹೋಗಿ ಈತನೇ ಮರಣದಂಡನೆಗೆ ಗುರಿಯಾಗಿರುವ ಕೈದಿ ಎಂದು ಖಚಿತಪಡಿಸಿಕೊಳ್ಳಬೇಕು.
    2. ಕೈದಿ ಎದುರು ಮರಣದಂಡನೆ ಜಾರಿ ಆದೇಶ ಪ್ರತಿಯನ್ನು ಓದಬೇಕು.
    3. ಇದಾದ ತರುವಾಯ ಕೈದಿಯಿಂದ ದಾಖಲೆಗಳಿಗೆ ಸಹಿ ಪಡೆದುಕೊಳ್ಳಬೇಕು.
    4. ಕೈದಿಯ 2 ಕಾಲುಗಳನ್ನು ಕಬ್ಬಿಣದ ಸಂಕೋಲೆಯಿಂದ ಬಂಧಿಸಿದ್ದಲ್ಲಿ ಅದನ್ನು ತೆಗೆಯಬೇಕು.
    5. ಕೈದಿಯನ್ನು ಗಲ್ಲು ಪೀಠದ ಕಡೆಗೆ ಕರೆದೊಯ್ಯುವ ಹೊಣೆ ಡಿಎಸ್‍ಪಿಯದ್ದು.
    6. ಕೈದಿಗೆ ಜೈಲಿನ ಹೆಡ್ ವಾರ್ಡರ್ ಮತ್ತು ಆರು ಮಂದಿ ವಾರ್ಡರ್ ಕಾವಲು
    7. ವಾರ್ಡರ್ ಗಳಲ್ಲಿ ಇಬ್ಬರು ಕೈದಿಯ ಹಿಂಭಾಗದಲ್ಲೂ, ಇಬ್ಬರು ಮುಂಭಾಗದಲ್ಲೂ. ಉಳಿದಿಬ್ಬರು ಕೈದಿಯ ಎರಡೂ ಕೈಗಳನ್ನು ಬಿಗಿಯಾಗಿ ಹಿಡಿದುಕೊಂಡು ವಧಾಪೀಠದ ಬಳಿಗೆ ಕರೆದುಕೊಂಡು ಬರುತ್ತಾರೆ.
    8. ಕೈದಿಯನ್ನು ನಿಖರವಾಗಿ ನೇಣಿನ ಕೆಳಗೆ ನಿಲ್ಲಿಸುತ್ತಾರೆ.
    9. ಗಲ್ಲಿಗೂ ಮೊದಲು ಕೊನೆಯದಾಗಿ ಕೈದಿಗೆ ಮರಣದಂಡನೆ ಜಾರಿ ಆದೇಶವನ್ನು ಓದಿ ಹೇಳಲಾಗುತ್ತದೆ.
    10. ನಂತರ ಕೈದಿಯ ಎರಡೂ ಕಾಲುಗಳನ್ನು ಬಿಗಿಯಾಗಿ ಕಟ್ಟಿ ಆತನ ತಲೆಗೆ ಕಪ್ಪು ಬಣ್ಣದ ಬಟ್ಟೆ ಹಾಕಲಾಗುತ್ತದೆ.
    11. ಕೈದಿ ಕುತ್ತಿಗೆಗೆ ನೇಣು ಹಗ್ಗವನ್ನು ಇಳಿಸಲಾಗುತ್ತದೆ
    12. ಈ ನೇಣು ಹಗ್ಗ ಕುತ್ತಿಗೆಯ ಮಧ್ಯ ಭಾಗದ 1.5 ಇಂಚು ಎಡ ಅಥವಾ ಬಲ ಭಾಗಕ್ಕೆ ವಾಲಿರಬೇಕು.
    13. ಈ ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ವಾರ್ಡರ್ ಗಳು ಕೈದಿಯನ್ನು ವಧಾ ಸ್ಥಳದಲ್ಲಿ ಬಿಟ್ಟು ತೆರಳುತ್ತಾರೆ.
    14. ಎಸ್‍ಪಿ ಸಿಗ್ನಲ್ ಕೊಟ್ಟ ನಂತರ ವಧಾಕಾರ (ಹ್ಯಾಂಗ್ ಮ್ಯಾನ್) ಗಲ್ಲು ಬಿಗಿಗೊಳಿಸುತ್ತಾರೆ.
    15. ಗಲ್ಲು ಶಿಕ್ಷೆ ವಿಧಿಸಿದ 30 ನಿಮಿಷದವರೆಗೂ ದೇಹವನ್ನು ಮೇಲೆತ್ತುವಂತಿಲ್ಲ
    16. ಜೈಲಿನ ವೈದ್ಯಾಧಿಕಾರಿ ಪ್ರಾಣ ಹೋಗಿದೆಯೆಂದು ಧೃಡಪಡಿಸಿದ ನಂತರ ದೇಹ ಮೇಲಕ್ಕೆತ್ತಲಾಗುತ್ತದೆ
    17. ಕೈದಿಯ ಮೃತದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.
    18. ಒಂದು ವೇಳೆ ಕೈದಿಯ ಕುಟುಂಬಸ್ಥರು ಶವವನ್ನು ತೆಗೆದುಕೊಳ್ಳದೇ ಇದ್ದಲ್ಲಿ ಆಗ ಜೈಲಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

  • ಕೊರೊನಾದಿಂದಾಗಿ ಜೆರಾಕ್ಸ್ ಆಗಿಲ್ಲ – ಮಧ್ಯರಾತ್ರಿ ಹೈಡ್ರಾಮಾ, ನಿರ್ಭಯಾ ರೇಪಿಸ್ಟ್‌ಗಳ ಅರ್ಜಿ ವಜಾ

    ಕೊರೊನಾದಿಂದಾಗಿ ಜೆರಾಕ್ಸ್ ಆಗಿಲ್ಲ – ಮಧ್ಯರಾತ್ರಿ ಹೈಡ್ರಾಮಾ, ನಿರ್ಭಯಾ ರೇಪಿಸ್ಟ್‌ಗಳ ಅರ್ಜಿ ವಜಾ

    ನವದೆಹಲಿ: ಕೊನೆಯ ಕ್ಷಣದಲ್ಲಿ ಮಧ್ಯರಾತ್ರಿಯ ವೇಳೆ ನಿರ್ಭಯಾ ರೇಪಿಸ್ಟ್‌ಗಳು ಹೈಡ್ರಾಮಾ ಮಾಡಿದ್ದರೂ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

    ಪಟಿಯಾಲ ಕೋರ್ಟಿನಲ್ಲಿ ನಮ್ಮ ಅರ್ಜಿ ವಜಾಗೊಂಡಿದೆ. ಹೀಗಾಗಿ ತುರ್ತಾಗಿ ನಮ್ಮ ಅರ್ಜಿಯನ್ನು ವಿಚಾರಣೆ ನಡೆಸಿ ಶುಕ್ರವಾರ ಬೆಳಗ್ಗೆ ನಿಗದಿಯಾಗಿರುವ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಮನವಿ ಮಾಡಿದರು. ಆದರೆ ಈ ಮನವಿಯನ್ನು ಪುರಸ್ಕರಿಸದ ನ್ಯಾ. ಮನಮೋಹನ್ ಅವರು ಅರ್ಜಿಯನ್ನು ವಜಾಗೊಳಿಸಿದರು. ಇದನ್ನೂ ಓದಿ: ನಿರ್ಭಯಾ ದೋಷಿಗಳಿಗೆ ನಾಳೆಯೇ ಗಲ್ಲು- ಕಾನೂನು ತಜ್ಞರು ಏನು ಹೇಳುತ್ತಾರೆ?

    ದೆಹಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ ವಾದಿಸಿದರೆ ಅಪರಾಧಿಗಳ ಪರ ಎ.ಪಿ ಸಿಂಗ್ ವಾದ ಮಂಡಿಸಿದರು.

    ವಿಚಾರಣೆ ಹೀಗಿತ್ತು:
    ಪಟಿಯಾಲ ಕೋರ್ಟ್ ನಮ್ಮ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ರಾತ್ರಿ ನಮ್ಮ ಕಕ್ಷಿದಾರರ ಅರ್ಜಿಯನ್ನು ವಿಚಾರಣೆ ನಡೆಸಬೇಕೆಂದು ಎಪಿ ಸಿಂಗ್ ವಾದ ಮಂಡಿಸಿದರು.

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಹುಲ್ ಮೆಹ್ರಾ ಎಲ್ಲ ಕಾನೂನು ಹೋರಾಟಗಳು ಅಂತ್ಯಗೊಂಡಿದೆ. ಹೈಕೋರ್ಟ್ ಮುಂದೆ ಗಲ್ಲು ಶಿಕ್ಷೆಗೆ ತಡೆ ಕೇಳುವಂತಿಲ್ಲ. ಸುಪ್ರೀಂಕೋರ್ಟ್ ಜನವರಿಯಲ್ಲೇ ಆದೇಶವನ್ನು ಎತ್ತಿ ಹಿಡಿದಿದೆ. ಡೆತ್ ವಾರೆಂಟ್ ತಡೆ ಕೋರಿ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಬಹುದು ಎಂದು ದೆಹಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ ವಾದಿಸಿದರು.

    ಈ ವೇಳೆ ಎಪಿ ಸಿಂಗ್ ಕೋರ್ಟ್ ಮುಂದೆ ದೋಷಿಗಳಿಗೆ ವಿವಿಧ ಅರ್ಜಿಗಳ ಬಾಕಿ ಉಳಿದಿರುವ ಬಗ್ಗೆ ಮಾಹಿತಿ ನೀಡಿದರು. ಅಷ್ಟೇ ಅಲ್ಲದೇ ಅಕ್ಷಯ್ ಕುಮಾರ್ ಪತ್ನಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಲ್ಲೇಖಿಸಿದರು. ಇದಕ್ಕೆ ರಾಹುಲ್ ಮೆಹ್ರಾ, ಈ ಪ್ರಕರಣಕ್ಕೂ ವಿಚ್ಛೇದನಕ್ಕೂ ಸಂಬಂಧ ಇಲ್ಲ ಎಂದು ಹೇಳಿದರು. ಈ ಆಕ್ಷೇಪಕ್ಕೆ ನ್ಯಾ.ಮನಮೋಹನ್ ಅವರು ಒಪ್ಪಿಗೆ ಸೂಚಿಸಿದರು.

    ನಂತರ ದೋಷಿಗಳಿಗೆ ಯಾವುದೇ ಕ್ರಿಮಿನಲ್ ಪ್ರಕರಣದ ಹಿನ್ನೆಲೆ ಇಲ್ಲ. ಸಾಕ್ಷಿ ವಿರುದ್ಧ ನಡೆಸಿದ ಕುಟುಕು ಕಾರ್ಯಚರಣೆಯನ್ನು ಪ್ರಸಾರ ಮಾಡಲು ಅವಕಾಶ ಸಿಕ್ಕಿಲ್ಲ. ಪ್ರಕರಣ ಮೇಲೆ ಪರಿಣಾಮ ಬೀರುವ ಕಾರಣ ನೀಡಿ ಪ್ರಸಾರ ಮಾಡಿಲ್ಲ. ಈ ಪ್ರಕರಣ ಹೈಕೋರ್ಟಿನಲ್ಲಿ ಬಾಕಿ ಉಳಿದಿದೆ ಎಂದು ಎ.ಪಿ ಸಿಂಗ್ ವಾದ ಮಾಡಿದರು.

    ಅಷ್ಟೇ ಅಲ್ಲದೇ ನನ್ನ ಹತ್ತಿರ ಎಲ್ಲ ದಾಖಲೆಗಳಿದೆ. ಅದನ್ನು ಈಗ ನ್ಯಾಯಾಲಯಕ್ಕೆ ನೀಡಲು ಸಾಧ್ಯವಾಗುತ್ತಿಲ್ಲ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜೆರಾಕ್ಸ್ ಅಂಗಡಿ ತೆರೆಯದ ಕಾರಣ ದಾಖಲೆ ತರಲು ಸಾಧ್ಯವಾಗಿಲ್ಲ. ಮೂರು ದಿನ ಅವಕಾಶ ನೀಡಿ ಎಂದು ಮತ್ತೊಂದು ಬಲವಾದ ಕಾರಣ ನೀಡಿದರು. ಈ ಕಾರಣಕ್ಕೆ ಸಿಟ್ಟಾದ ನ್ಯಾಯಾಧೀಶರು ಇದೊಂದು ಅಡಿಪಾಯ ಇಲ್ಲದ ಅರ್ಜಿ ಎಂದು ಹೇಳಿ ಚಾಟಿ ಬೀಸಿದರು.

    ಸಮಯ ರಾತ್ರಿ 11 ಆಗುತ್ತಿದೆ. ಬೆಳಗ್ಗೆ 5:30ಕ್ಕೆ ಶಿಕ್ಷೆ ಇದೆ. ಗಲ್ಲು ಶಿಕ್ಷೆಗೆ ತಡೆ ನೀಡಲು ಯಾವುದಾದರೂ ಒಂದು ಮುಖ್ಯ ಅಂಶವನ್ನು ತಿಳಿಸಿ ಎಂದು ನ್ಯಾಯಾಧೀಶರು ವಕೀಲರಿಗೆ ಸೂಚಿಸಿದರು. ಇದಕ್ಕೆ ಎಪಿ ಸಿಂಗ್ ಒಮ್ಮೆ ಅಪರಾಧಿಗಳ ಕುಟುಂಬನ್ನು ಗಮನಿಸಿ, ಅಷ್ಟೇ ಅಲ್ಲದೇ ಹಿಂದೆ ಇವರು ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಿಲ್ಲ. ಉದ್ದೇಶಪೂರ್ವಕವಾಗಿ ತಪ್ಪು ಮಾಡಿಲ್ಲ ಎಂದು ಹೇಳಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಮನವಿ ಮಾಡಿದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ನ್ಯಾ. ಮನಮೋಹನ್ ಅರ್ಜಿಯನ್ನು ವಜಾಗೊಳಿಸಿದರು.

     

  • ನಿರ್ಭಯಾ ದೋಷಿಗಳಿಗೆ ನಾಳೆಯೇ ಗಲ್ಲು- ಕಾನೂನು ತಜ್ಞರು ಏನು ಹೇಳುತ್ತಾರೆ?

    ನಿರ್ಭಯಾ ದೋಷಿಗಳಿಗೆ ನಾಳೆಯೇ ಗಲ್ಲು- ಕಾನೂನು ತಜ್ಞರು ಏನು ಹೇಳುತ್ತಾರೆ?

    ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳು ಕೃತ್ಯ ಎಸಗಿ 2012ರ ಡಿಸೆಂಬರ್ 16ರಿಂದ ಇಂದಿನವರೆಗೆ ಅಂದ್ರೆ 7 ವರ್ಷ 3 ತಿಂಗಳು, 3 ದಿನಗಳು ಕಳೆದಿವೆ. ಮುಖೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಅಕ್ಷಯ್ ಠಾಕೂರ್ ಈವರೆಗೂ ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳುತ್ತಲೇ ಬಂದಿದ್ದಾರೆ. ಆದರೆ ನಾಳೆ ಬೆಳಗ್ಗೆ ನಾಲ್ವರನ್ನೂ ಗಲ್ಲಿಗೆ ಏರಿಸುವುದು ಖಚಿತವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ನಾಲ್ಕನೇ ಬಾರಿ ಸಾವಿನ ಬಾಗಿಲಲ್ಲಿ ನಿಂತಿರುವ ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳು ನೇಣಿಗೆ ಕೊರೊಳುಡ್ಡುವ ಕಡೆಯ ಕ್ಷಣದವರೆಗೂ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ. ಮಾರ್ಚ್ 20ರ ಬೆಳಗ್ಗೆ 5:30ಕ್ಕೆ ನಿಗದಿಯಾಗಿರುವ ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ದೆಹಲಿಯ ಪಟಿಯಾಲ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿ ವಿಚಾರಣೆಗೆ ನಡೆಯಲಿದೆ. ನಿನ್ನೆ ಅರ್ಜಿ ಸಲ್ಲಿಸಿರುವ ನಾಲ್ವರು ದೋಷಿಗಳು ಶಿಕ್ಷೆಗೆ ತಡೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಪ್ರಕರಣದ ನಾಲ್ವರು ದೋಷಿಗಳ ಕಾನೂನು ಹೋರಾಟ ಬಾಕಿ ಉಳಿದಿದ್ದು, ಅದಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

    ಕ್ಷಮಾದಾನ ಅರ್ಜಿ ವಜಾ ಮಾಡಿರುವುದನ್ನು ಪುನರ್ ಪರಿಶೀಲನೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿ ಇನ್ನು ಬಾಕಿ ಇದ್ದು, ಈ ಅರ್ಜಿ ಇತ್ಯರ್ಥವಾಗಬೇಕಿದೆ. ಘಟನೆ ನಡೆದ ವೇಳೆ ಬಾಲಾಪರಾಧಿಯಾಗಿದ್ದೆ. ಹೀಗಾಗಿ ಶಿಕ್ಷೆ ಕಡಿತಗೊಳಿಸಬೇಕೆಂದು ಕೋರಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಕ್ಯುರೆಟಿವ್ ಅರ್ಜಿ ಬಾಕಿ ಇದೆ. ಅಲ್ಲದೆ ತಿಹಾರ್ ಜೈಲು ಸಿಬ್ಬಂದಿ ಥಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಬೇಕಿದ್ದು, ಈ ವೇಳೆ ಗಲ್ಲು ಶಿಕ್ಷೆಗೆ ಒಳಪಡಿಸುವುದು ಸರಿಯಲ್ಲ ಎಂದು ದೋಷಿ ಪವನ್ ಗುಪ್ತಾ ಅರ್ಜಿಯಲ್ಲಿ ಮನವಿ ಮಾಡಿದ್ದಾನೆ.

    ಪ್ರಕರಣದ ಮತ್ತೊರ್ವ ಆರೋಪಿ ಅಕ್ಷಯ್ ಕುಮಾರ್ ಪತ್ನಿ ವಿಚ್ಛೇದನ ನೀಡುವಂತೆ ಬಿಹಾರದಲ್ಲಿ ಕೊರ್ಟ್ ಮೊರೆ ಹೋಗಿದ್ದು, ಅದರ ವಿಚಾರಣೆ ಸಹ ನಡೆಬೇಕಿದೆ. ವಿನಯ್ ಶರ್ಮಾ ತನ್ನ ಕ್ಷಮದಾನ ಅರ್ಜಿ ವಜಾ ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಕುರಿತು ವಿಚಾರಣೆ ನಡೆಬೇಕಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.

    ಇಷ್ಟು ಮಾತ್ರವಲ್ಲದೆ ಮೂವರು ದೋಷಿಗಳು ಅಂತರರಾಷ್ಟ್ರೀಯ ಕೋರ್ಟ್ ಮೊರೆ ಹೋಗಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಈ ಎಲ್ಲ ಪ್ರಕರಣಗಳು ವಿಚಾರಣೆ ನಡೆಯಬೇಕಿದ್ದು, ಇದಕ್ಕೂ ಮುನ್ನ ಅಪರಾಧಿಗಳನ್ನು ಶಿಕ್ಷಿಸುವುದು ಸರಿಯಲ್ಲ ಎಂದು ವಕೀಲ ಎ.ಪಿ.ಸಿಂಗ್ ಪಟಿಯಾಲ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಿದ್ದಾರೆ.

    ಇಂದು ಈ ಅರ್ಜಿ ನ್ಯಾ.ಧರ್ಮೇಂದ್ರ ರಾಣಾ ಪೀಠದ ಮುಂದೆ ವಿಚಾರಣೆಗೆ ಬರಲಿದ್ದು, ಈಗಾಗಲೇ ನಾಲ್ಕು ಬಾರಿ ಜೀವದಾನ ಸಿಕ್ಕಿರುವ ನಾಲ್ವರು ದೋಷಿಗಳಿಗೆ ಸಾವಿನ ಕಡೆಯ ದಿನ ಐದನೇ ಬಾರಿ ಜೀವದಾನ ಸಿಕ್ಕುತ್ತಾ, ಅಥವಾ ಗಲ್ಲು ನಿಶ್ಚಿತವೇ ಎಂಬುದನ್ನು ಕಾದು ನೋಡಬೇಕಿದೆ.

    ವಿಚ್ಛೇದನ ಅರ್ಜಿ:
    ಗಲ್ಲಿಗೇರಿಸುವ ಎರಡು ದಿನಗಳ ಮೊದಲು ತಪ್ಪಿತಸ್ಥ ಅಕ್ಷಯ್ ಪತ್ನಿ ಪುನಿತಾ ವಿಚ್ಛೇದನ ಕೋರಿ ಬಿಹಾರದ ಔರಂಗಾಬಾದ್ ಜಿಲ್ಲೆಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಳು. ನಾನು ವಿಧವೆಯಾಗಿ ಬದುಕಲು ಬಯಸುವುದಿಲ್ಲ. ಆದ್ದರಿಂದ ನೇಣು ಹಾಕುವ ಮೊದಲು ನಾವು ಕಾನೂನುಬದ್ಧವಾಗಿ ವಿಚ್ಛೇದನ ಪಡೆಯುತ್ತೇನೆ ಎಂದು ಅರ್ಜಿಯಲ್ಲಿ ತಿಳಿಸಿದ್ದಳು.

    ಈ ಅರ್ಜಿಯಿಂದಾಗಿ ಅಪರಾಧಿಗಳ ಗಲ್ಲಿಗೇರಿಸುವುದನ್ನು ಮುಂದೂಡಬಹುದೇ ಎಂಬ ಪ್ರಶ್ನೆ ಎದ್ದಿತ್ತು. ಆದರೆ ವಿಚ್ಛೇದನವು ಸಿವಿಲ್ ಪ್ರಕರಣಗಳಲ್ಲಿ ಬರುತ್ತದೆ. ಹೀಗಾಗಿ ಆ ಅರ್ಜಿ ಕ್ರಿಮಿನಲ್ ಪ್ರಕರಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕಾರಣಕ್ಕಾಗಿ ಮಾರ್ಚ್ 20ರಂದು ಬೆಳಗ್ಗೆ 5:30ಕ್ಕೆ ಅಪರಾಧಿಗಳನ್ನು ಗಲ್ಲಿಗೇರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಕಾನೂನು ತಜ್ಞರು ತಿಳಿಸಿದ್ದಾರೆ.

    ದೋಷಿಗಳಿಗೆ ಎಲ್ಲಾ ಮಾರ್ಗ ಬಂದ್:
    ಡೆತ್ ವಾರಂಟ್ ಮತ್ತು ಮರಣದಂಡನೆ ದಿನಾಂಕದ ನಡುವೆ 14 ದಿನಗಳ ವ್ಯತ್ಯಾಸ ಇರಬೇಕು ಎಂದು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು ಹೇಳುತ್ತವೆ. ಮಾರ್ಚ್ 5ರಂದು ಅಪರಾಧಿಗಳ ಡೆತ್ ವಾರಂಟ್ ಹೊರಡಿಸಲಾಗಿದೆ. ಅಷ್ಟೇ ಅಲ್ಲದೆ ಅಪರಾಧಿಗಳಿಗೆ ಎಲ್ಲಾ ಕಾನೂನು ಮಾರ್ಗಗಳು ಸಹ ಮುಗಿದಿವೆ. ಮರಣದಂಡನೆಗೆ ಗುರಿಯಾದ ಅಪರಾಧಿಗೆ ಎಲ್ಲಾ ಕಾನೂನು ಮಾರ್ಗಗಳನ್ನು ಬಳಸುವ ಹಕ್ಕಿದೆ. ಈ ನಿಟ್ಟಿನಲ್ಲಿ ನಾಲ್ವರು ಸಹ ತಮ್ಮ ಎಲ್ಲಾ ಕಾನೂನು ಹಕ್ಕುಗಳನ್ನು ಸಹ ಬಳಸಿದ್ದಾರೆ. ನಾಲ್ವರ ಪರಿಶೀಲನಾ ಅರ್ಜಿಗಳು ಮತ್ತು ಕ್ಷಮಾದಾನ ಅರ್ಜಿಗಳನ್ನು ಸಹ ವಜಾಗೊಂಡಿವೆ.

    ಅಪರಾಧಿಗಳು ಗಲ್ಲಿಗೇರಿಸುವುದನ್ನು ತಪ್ಪಿಸಲು ಇಂದು ಕೂಡ ಅರ್ಜಿಯನ್ನು ಹಾಕಿದರೂ ಅವರನ್ನು ಗಲ್ಲಿಗೇರಿಸುವುದನ್ನು ತಪ್ಪಿಸುವುದು ತುಂಬಾ ಕಡಿಮೆ. ಏಕೆಂದರೆ ಭಯೋತ್ಪಾದಕ ಯಾಕೂಬ್ ಮೆಮನ್ ನೇಣು ಹಾಕುವ ಒಂದು ದಿನ ಮೊದಲು ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರ ವಕೀಲರು ರಾತ್ರಿ ಸುಪ್ರೀಂ ಕೋರ್ಟಿಗೆ ತಲುಪಿದರು. ಆದರೆ ಇದರ ಹೊರತಾಗಿಯೂ ಅವನ ನೇಣು ನಿಲ್ಲಲಿಲ್ಲ.

  • ಸಾವಿನ ಕಡೆಯ ದಿನವೂ ನಿರ್ಭಯಾ ಅತ್ಯಾಚಾರಿಗಳಿಂದ ಕಾನೂನು ಹೋರಾಟ

    ಸಾವಿನ ಕಡೆಯ ದಿನವೂ ನಿರ್ಭಯಾ ಅತ್ಯಾಚಾರಿಗಳಿಂದ ಕಾನೂನು ಹೋರಾಟ

    ನವದೆಹಲಿ: ನಾಲ್ಕನೇ ಬಾರಿ ಸಾವಿನ ಬಾಗಿಲಲ್ಲಿ ನಿಂತಿರುವ ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳು ನೇಣಿಗೆ ಕೊರೊಳುಡ್ಡುವ ಕಡೆಯ ಕ್ಷಣದ ವರೆಗೂ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ.

    ಮಾರ್ಚ್ 20ರ ಬೆಳಗ್ಗೆ 5:30ಕ್ಕೆ ನಿಗದಿಯಾಗಿರುವ ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ದೆಹಲಿಯ ಪಟಿಯಾಲ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ನಾಳೆ ಈ ಅರ್ಜಿ ವಿಚಾರಣೆಗೆ ಬರಲಿದೆ. ಇಂದು ಅರ್ಜಿ ಸಲ್ಲಿಸಿರುವ ನಾಲ್ವರು ದೋಷಿಗಳು ಶಿಕ್ಷೆಗೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ಪ್ರಕರಣದ ನಾಲ್ವರು ದೋಷಿಗಳ ಕಾನೂನು ಹೋರಾಟ ಬಾಕಿ ಉಳಿದಿದ್ದು, ಅದಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

    ಕ್ಷಮಾದಾನ ಅರ್ಜಿ ವಜಾ ಮಾಡಿರುವುದನ್ನು ಪುನರ್ ಪರಿಶೀಲನೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿ ಇನ್ನು ಬಾಕಿ ಇದ್ದು, ಈ ಅರ್ಜಿ ಇತ್ಯರ್ಥವಾಗಬೇಕಿದೆ. ಘಟನೆ ನಡೆದ ವೇಳೆ ಬಾಲಾಪರಾಧಿಯಾಗಿದ್ದೆ. ಹೀಗಾಗಿ ಶಿಕ್ಷೆ ಕಡಿತಗೊಳಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಕ್ಯುರೆಟಿವ್ ಅರ್ಜಿ ಬಾಕಿ ಇದೆ. ಅಲ್ಲದೆ ತಿಹಾರ್ ಜೈಲು ಸಿಬ್ಬಂದಿ ಥಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಬೇಕಿದ್ದು, ಈ ವೇಳೆ ಗಲ್ಲು ಶಿಕ್ಷೆಗೆ ಒಳಪಡಿಸುವುದು ಸರಿಯಲ್ಲ ಎಂದು ದೋಷಿ ಪವನ್ ಗುಪ್ತಾ ಅರ್ಜಿಯಲ್ಲಿ ಮನವಿ ಮಾಡಿದ್ದಾನೆ.

    ಪ್ರಕರಣದ ಮತ್ತೊರ್ವ ಆರೋಪಿ ಅಕ್ಷಯ್ ಕುಮಾರ್ ಪತ್ನಿ ವಿಚ್ಛೇದನ ನೀಡುವಂತೆ ಬಿಹಾರದಲ್ಲಿ ಕೊರ್ಟ್ ಮೊರೆ ಹೋಗಿದ್ದು, ಅದರ ವಿಚಾರಣೆ ಸಹ ನಡೆಬೇಕಿದೆ. ಇನ್ನು ವಿನಯ್ ಶರ್ಮಾ ತನ್ನ ಕ್ಷಮದಾನ ಅರ್ಜಿ ವಜಾ ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಕುರಿತು ವಿಚಾರಣೆ ನಡೆಬೇಕಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.

    ಇಷ್ಟು ಮಾತ್ರವಲ್ಲದೆ ಮೂವರು ದೋಷಿಗಳು ಅಂತರಾಷ್ಟ್ರೀಯ ಕೋರ್ಟ್ ಮೊರೆ ಹೋಗಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಈ ಎಲ್ಲ ಪ್ರಕರಣಗಳು ವಿಚಾರಣೆ ನಡೆಯಬೇಕಿದ್ದು, ಇದಕ್ಕೂ ಮುನ್ನ ಅಪರಾಧಿಗಳನ್ನು ಶಿಕ್ಷಿಸುವುದು ಸರಿಯಲ್ಲ ಎಂದು ವಕೀಲ ಎ.ಪಿ.ಸಿಂಗ್ ಪಟಿಯಾಲ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಿದ್ದಾರೆ.

    ಗುರುವಾರ ಈ ಅರ್ಜಿ ನ್ಯಾ.ಧರ್ಮೇಂದ್ರ ರಾಣಾ ಪೀಠದ ಮುಂದೆ ವಿಚಾರಣೆಗೆ ಬರಲಿದ್ದು, ಈಗಾಗಲೇ ನಾಲ್ಕು ಬಾರಿ ಜೀವದಾನ ಸಿಕ್ಕಿರುವ ನಾಲ್ವರು ದೋಷಿಗಳಿಗೆ ಸಾವಿನ ಕಡೆಯ ದಿನ ಐದನೇ ಬಾರಿ ಜೀವದಾನ ಸಿಕ್ಕುತ್ತಾ, ಅಥವಾ ಗಲ್ಲು ನಿಶ್ಚಿತವೇ ಎಂಬುದನ್ನು ಕಾದು ನೋಡಬೇಕಿದೆ.

  • ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

    ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

    ನವದೆಹಲಿ: ಕೊನೆಗೂ ದೆಹಲಿ ಕೋರ್ಟ್ ನಿರ್ಭಯಾ ಅತ್ಯಾಚಾರಿಗಳಿಗೆ ಡೆತ್ ವಾರೆಂಟ್ ಜಾರಿಗೊಳಿಸಿದ್ದು, ಮಾರ್ಚ್ 20ರ ಬೆಳಗ್ಗೆ 5:30ಕ್ಕೆ 4 ಮಂದಿ ದೋಷಿಗಳನ್ನು ಗಲ್ಲಿಗೇರಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

    ಪ್ರತಿ ಬಾರಿ ಗಲ್ಲಿಗೇರಿಸುವ ದಿನಾಂಕವನ್ನು ನಿಗದಿಗೊಳಿಸಿದಾಗಲೂ ಒಂದಲ್ಲಾ ಒಂದು ಕಾರಣ ಹೇಳಿ ಅತ್ಯಾಚಾರಿಗಳು ನೇಣು ಕುಣಿಕೆಯಿಂದ ಬಚಾವ್ ಆಗುತ್ತಾ ಬಂದಿದ್ದರು. ಗಲ್ಲು ಶಿಕ್ಷೆಯಿಂದ ಪಾರಾಗಲು ದೋಷಿಗಳು ನಡೆಸಿದ್ದಾ ಎಲ್ಲಾ ಪ್ರಯತ್ನವೂ ವಿಫಲವಾಗಿದ್ದು, ಇಂದು ದೆಹಲಿ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿಗೊಳಿಸಿದೆ.

    ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಿರಸ್ಕರಿಸಿದ ಬೆನ್ನಲ್ಲೇ ತಿಹಾರ್ ಜೈಲು ಆಡಳಿತ ಹಾಗೂ ದೆಹಲಿ ಸರ್ಕಾರ ಪಟಿಯಾಲ ಕೋರ್ಟ್ ಮೊರೆ ಹೋಗಿತ್ತು.

    ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ ಆಗಿದ್ದು, ನಾಲ್ವರು ದೋಷಿಗಳ ಬಹುತೇಕ ಕಾನೂನು ಹೋರಾಟ ಅಂತ್ಯವಾಗಿದೆ. ಹಾಗಾಗಿ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    ಮಾರ್ಚ್ 3ರಂದು ಪಟಿಯಾಲಾ ಕೋರ್ಟ್ ಮೂರನೇ ಬಾರಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಆದರೆ ಕಡೆ ಗಳಿಗೆಯಲ್ಲಿ ದೋಷಿ ಪವನ್ ಗುಪ್ತಾ ರಾಷ್ಟ್ರಪತಿಗೆ ತಿರಸ್ಕೃತಗೊಂಡ ಕ್ಷಮದಾನ ಅರ್ಜಿ ಮರುಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದನು. ದಿಢೀರ್ ಬೆಳವಣಿಗೆಯಿಂದ ಮಾರ್ಚ್ 3ರಂದು ನಡೆಬೇಕಿದ್ದ ಗಲ್ಲು ಶಿಕ್ಷೆಗೆ ಪಟಿಯಾಲ ಕೋರ್ಟ್ ತಡೆ ನೀಡಿತ್ತು.

  • ರಾಷ್ಟ್ರಪತಿಗಳಿಂದ ನಿರ್ಭಯಾ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕಾರ

    ರಾಷ್ಟ್ರಪತಿಗಳಿಂದ ನಿರ್ಭಯಾ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕಾರ

    ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ದೋಷಿಗಳಲ್ಲಿ ಒಬ್ಬನಾದ ಮುಕೇಶ್ ಗಲ್ಲುಶಿಕ್ಷೆಯಿಂದ ಪಾರಾಗಲು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.

    ಈ ಹಿಂದೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದಾದ ಬಳಿಕ ಮುಕೇಶ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಇನ್ನು ಮೂವರು ಕ್ಷಮಾದಾನದ ಅರ್ಜಿ ಸಲ್ಲಿಸಿಲ್ಲ.

    ಮುಕೇಶ್ ಸಿಂಗ್ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಜನವರಿ 22ರಂದು ಗಲ್ಲಿಗೇರಿಸುವ ಬಗ್ಗೆ ಗೊಂದಲವಿದೆ ಎಂದಿತ್ತು. ಜೈಲಿನ ನಿಯಮಗಳನ್ನು ಉಲ್ಲೇಖಿಸಿದ್ದ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿತ್ತು.

    ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಮಂಗಳವಾರ ವಜಾಗೊಳಿಸಿತ್ತು.

    ಈ ಅರ್ಜಿ ವಜಾಗೊಂಡ ಕೂಡಲೇ ಮುಕೇಶ್ ರಾಷ್ಟ್ರಪತಿ ಬಳಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ನನ್ನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಡೆತ್ ವಾರಂಟ್ ಜಾರಿಯಾಗಲು ಸಾಧ್ಯವಿಲ್ಲ. ನನ್ನ ಅರ್ಜಿ ಇತ್ಯರ್ಥವಾಗದೇ ಡೆತ್ ವಾರಂಟ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮುಕೇಶ್ ಪ್ರಶ್ನಿಸಿದ್ದ. ಆದರೆ ಈಗ ರಾಷ್ಟ್ರಪತಿಗಳು ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.