Tag: COP28 Summit

  • 2028 ರಲ್ಲಿ ಭಾರತದಲ್ಲಿ COP33 ಶೃಂಗಸಭೆ ಆಯೋಜನೆ – ಪ್ರಧಾನಿ ಮೋದಿ ಪ್ರಸ್ತಾಪ

    2028 ರಲ್ಲಿ ಭಾರತದಲ್ಲಿ COP33 ಶೃಂಗಸಭೆ ಆಯೋಜನೆ – ಪ್ರಧಾನಿ ಮೋದಿ ಪ್ರಸ್ತಾಪ

    ದುಬೈ: 2028 ರಲ್ಲಿ ಭಾರತದಲ್ಲಿ (India) COP33 ಶೃಂಗಸಭೆಯನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಸ್ತಾಪಿಸಿದ್ದಾರೆ.

    ದುಬೈನಲ್ಲಿ (Dubai) ನಡೆಯುತ್ತಿರುವ ಸಿಒಪಿ-28 ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ, ಭಾರತದ ಜನಸಂಖ್ಯೆಯು ಜಾಗತಿಕ ಜನಸಂಖ್ಯೆಯ ಶೇ.17 ರಷ್ಟಿದೆ. ಆದರೆ ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ಭಾರತದ ಪಾತ್ರ ಕೇವಲ 4% ನಷ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: COP28 Summit: ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್‌ ಹಮಾರ ಎಂದ ಭಾರತೀಯರು

    ಜನಸಂಖ್ಯೆಯು ತುಂಬಾ ಕಡಿಮೆ ಇರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆಯಾಗಿದೆ. ಜಾಗತಿಕ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿದ್ದಾರೆ.

    NDC ಗುರಿಗಳನ್ನು ಸಾಧಿಸುವಲ್ಲಿ ನಾವು ವೇಗವಾಗಿ ಸಾಗುತ್ತಿದ್ದೇವೆ. ವಾಸ್ತವವಾಗಿ, ನಾವು ಗಡುವಿನ ಒಂಬತ್ತು ವರ್ಷಗಳ ಮೊದಲು ನಮ್ಮ ಪಳೆಯುಳಿಕೆಯಲ್ಲದ ಇಂಧನ ಗುರಿಗಳನ್ನು ತಲುಪಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಮಹಿಳೆಯರು 8 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ: ಪುಟಿನ್‌ ಕರೆ

    ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ ಸಿಒಪಿ 28ರ ಉನ್ನತ ಮಟ್ಟದ ವಿಭಾಗವಾಗಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಕುರಿತು ಚರ್ಚಿಸಲು ಹಲವಾರು ವಿಶ್ವ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

  • COP28 Summit: ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್‌ ಹಮಾರ ಎಂದ ಭಾರತೀಯರು

    COP28 Summit: ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್‌ ಹಮಾರ ಎಂದ ಭಾರತೀಯರು

    ಅಬುಧಾಬಿ: ದುಬೈನಲ್ಲಿ ನಡೆಯಲಿರುವ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ (PM Modi UAE Visit) ತೆರಳಿದ್ದು, ದುಬೈನಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ.

    ಮೋದಿ ಅವರು ದುಬೈ ತಲುಪುತ್ತಲೇ ಯುಎಇನಿಂದ ಸಾಂಪ್ರದಾಯಿಕವಾಗಿ ಸ್ವಾಗತ ದೊರೆಯಿತು. ಇದಾದ ಬಳಿಕ ಅನಿವಾಸಿ ಭಾರತೀಯರು ನರೇಂದ್ರ ಮೋದಿ ಅವರನ್ನು ಸಾಂಸ್ಕೃತಿಕವಾಗಿ ಸ್ವಾಗತಿಸಿದರು. ಮಹಿಳೆಯರು ಸಾರೇ ಜಹಾಂಸೆ ಅಚ್ಚಾ ಹಿಂದೂಸ್ತಾನ್‌ ಹಮಾರಾ ಗೀತೆ ಹಾಡುವ ಜೊತೆಗೆ ಭಾರತ್‌ ಮಾತಾ ಕೀ ಜೈ, ವಂದೇ ಮಾತರಂ ಎಂಬ ಉದ್ಘೋಷಗಳನ್ನು ಮೊಳಗಿಸಿದರು. ಇದನ್ನೂ ಓದಿ:  41 ಕಾರ್ಮಿಕರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ತೆರಳಬಹುದು: ಏಮ್ಸ್

    ನರೇಂದ್ರ ಮೋದಿ ಅವರನ್ನು ಕಂಡು ಅನಿವಾಸಿ ಭಾರತೀಯರು ಪುಳಕಿತರಾದರು. ನಾನು ದುಬೈನಲ್ಲಿ 20 ವರ್ಷಗಳಿಂದ ನೆಲೆಸಿದ್ದೇನೆ. ನನ್ನ ಸಂಬಂಧಿಕರೇ ಇಲ್ಲಿಗೆ ಬರುತ್ತಿದ್ದಾರೆ ಎಂದು ಭಾಸವಾಗಿದೆ, ನಮಗೆ ಅಷ್ಟು ಸಂತೋಷವಾಗಿದೆ ಎಂದು ಮಹಿಳೆಯೊಬ್ಬರು ಹೇಳಿಕೊಂಡರು. ಇನ್ನೂ ಕೆಲವರು ತ್ರಿವರ್ಣ ಧ್ವಜ ಬೀಸುವ ಮೂಲಕ ಮೋದಿ ಅವರನ್ನು ಸ್ವಾಗತಿಸಿದರು. ಅನಿವಾಸಿ ಭಾರತೀಯರ ಸ್ವಾಗತಕ್ಕೆ ಮೋದಿ ಅವರೂ ಮನ ಸೋತರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು – ಇದು ಟುಡೇಸ್‌ ಚಾಣಕ್ಯ ಭವಿಷ್ಯ

    ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ಪ್ರಮುಖವಾಗಿ ಹವಾಮಾನ ಬದಲಾವಣೆ ಕುರಿತು ಚರ್ಚಿಸಲಾಗುತ್ತದೆ. ಅದರಲ್ಲೂ, ಹವಾಮಾನ ಬದಲಾವಣೆಯ ಕ್ರಿಯಾಯೋಜನೆ ರೂಪಿಸಲು ಇದು ಪ್ರಮುಖವಾಗಿದೆ ಎಂದು ತಿಳಿದುಬಂದಿದೆ. ಅಭುದಾಬಿಯ ಶೇಖ್‌ ಮೊಹಮ್ಮದ್‌ ಬಿನ್‌ ಅಲ್‌ ನಹ್ಯಾನ್‌ ಅವರ ಆಹ್ವಾನದ ಮೇರೆಗೆ ಮೋದಿ ಅವರು ಅಬುಧಾಬಿಗೆ ತೆರಳಿದ್ದಾರೆ. ಸುಮಾರು 200 ದೇಶಗಳ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 200 ರಾಷ್ಟ್ರಗಳು ಪ್ರತಿನಿಧಿಸಿರುವ ಐತಿಹಾಸಿಕ ಸಭೆಯಲ್ಲಿ ಮಹತ್ವದ ಒಪ್ಪಂದಗಳು ಏರ್ಪಡಲಿವೆ. ಇದೇ ವೇಳೆ ಪ್ರಧಾನಿಯು ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.