Tag: Corona Guidelines

  • ಮದ್ದೂರಿನ ವ್ಯಕ್ತಿಯೋರ್ವನಿಗೆ ಕೊರೊನಾ – ಮಂಡ್ಯದಲ್ಲಿ ವರ್ಷದ ಮೊದಲ ಕೇಸ್ ಪತ್ತೆ

    ಮದ್ದೂರಿನ ವ್ಯಕ್ತಿಯೋರ್ವನಿಗೆ ಕೊರೊನಾ – ಮಂಡ್ಯದಲ್ಲಿ ವರ್ಷದ ಮೊದಲ ಕೇಸ್ ಪತ್ತೆ

    ಮಂಡ್ಯ: ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

    ಕೇರಳದಲ್ಲಿ (Kerala) ಕೊರೊನಾ ರೂಪಾಂತರಿ JN.1 ಕೇಸ್ (Corona JN.1 Case) ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಜ್ವರದಿಂದಾಗಿ ಆಸ್ಪತ್ರೆಗೆ (Mandya Hospital) ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಮಂಗಳವಾರವೇ (ಇಂದು) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಅಂದು ಪುಲ್ವಾಮಾ, ಇಂದು ಸ್ಮೋಕ್‌ ಬಾಂಬ್‌ – ಚುನಾವಣೆ ಬಂದಾಗ ಬಿಜೆಪಿಗರಿಂದ ಗಲಾಟೆ ಸೃಷ್ಟಿ: ಎಸ್.ಆರ್ ಶ್ರೀನಿವಾಸ್

    ಈ ಕುರಿತು ಮಾತನಾಡಿರುವ ಮಂಡ್ಯದ ಜಿಲ್ಲಾ ಆರೋಗ್ಯಾಧಿಕಾರಿ ಮೋಹನ್, ಮದ್ದೂರಿನ ವ್ಯಕ್ತಿ ಮಿಮ್ಸ್ ಆಸ್ಪತ್ರೆಗೆ ಆಪರೇಷನ್‌ಗೆ ಬಂದಿದ್ದರು. ಆತನಿಗೆ ಕೊರೊನಾದ ಲಕ್ಷಣಗಳೇನು ಇರಲಿಲ್ಲ. ನಿಯಮದ ಪ್ರಕಾರ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು, ಆಗ ಪಾಸಿಟಿವ್ ಬಂದಿದೆ. ನಂತ್ರ ವ್ಯಕ್ತಿ ಕುಟುಂಬದ ಇತರ ನಾಲ್ವರಿಗೂ RTPCR ಪರೀಕ್ಷೆ ಮಾಡಿಸಲಾಯಿತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು, ಇಂದೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಕೇಸ್ ಆಗಿದೆ. ಜೊತೆಗೆ 25% ಗಿಂತ ಅಧಿಕ ಪ್ರಮಾಣದಲ್ಲಿ ಅವರ ಸ್ಕೋರಿಂಗ್ ಹೆಚ್ಚಿರುವ ಕಾರಣ ILI ಸ್ಯಾರಿ ಕೇಸ್‌ ಸಂಬಂಧ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳಿಸಿಲ್ಲ. ಸದ್ಯ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದಾರೆ. ಮಂಗಳವಾರವೇ (ಇಂದು) ರಾಜ್ಯ ಸರ್ಕಾರದಿಂದ ಹೊಸ ಗೈಡ್‌ಲೈನ್ಸ್ ಬರಲಿದ್ದು, ಅದರ ಪ್ರಕಾರ ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯುವತಿ ಓಡಿ ಹೋಗಿದ್ದಕ್ಕೆ ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಠಾಣೆ ಮುಂದೆಯೇ ಥಳಿತ

  • ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ತಿರುವನಂತಪುರಂ: ಸುಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ದೇವಸ್ಥಾನವನ್ನು ಜುಲೈ 17 ರಿಂದ 21ರ ವರೆಗೆ ತೆರೆಯಲಾಗುತ್ತಿದ್ದು, ಭಕ್ತರು ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ.

    ಕೊರೊನಾ 2ನೇ ಅಲೆ ಮಧ್ಯೆ ತಿಂಗಳ ಪೂಜೆಯನ್ನು ನೆರವೇರಿಸಲು ಜುಲೈ 17 ರಿಂದ 21ರ ವರೆಗೆ ಐದು ದಿನಗಳ ಅವಧಿಗೆ ದೇವಸ್ಥಾನವನ್ನು ಮತ್ತೆ ತೆರೆಯಲಾಗುತ್ತಿದೆ ಎಂದು ತಿರುವಾಂಕುರ್‌ ದೇವಸ್ವಂ ಮಂಡಳಿ ತಿಳಿಸಿದೆ.

    ಕೊರೊನಾ ಹೊಸ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಸರ್ಟಿಫಿಕೇಟ್ ಅಥವಾ 48 ಗಂಟೆಗಳೊಳಗೆ ಟೆಸ್ಟ್ ಮಾಡಿಸಿದ ಕೋವಿಡ್-19 ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಅಲ್ಲದೆ ಆನ್‍ಲೈನ್ ಮೂಲಕ ಬುಕಿಂಗ್ ಮಾಡಿಕೊಂಡ ಗರಿಷ್ಠ 5 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

    ಕೇರಳ ಪೊಲೀಸರು ಹಾಗೂ ದೇವಸ್ವಂ ಮಂಡಳಿ ಕಳೆದ ವರ್ಷ ಹೊಸ ಆನ್‍ಲೈನ್ ಪೋರ್ಟಲ್ ಲಾಂಚ್ ಮಾಡಿದ್ದು, ಇದರ ಮೂಲಕವೇ ವಚ್ರ್ಯೂಲ್ ಕ್ಯೂ, ಪ್ರಸಾದ, ಪೂಜೆ, ವಾಸ್ತವ್ಯ, ಕಾಣಿಕೆ ಬುಕ್ ಮಾಡಬೇಕು. ಈ ಮೂಲಕ ಗಲಾಟೆ ಮುಕ್ತ ದರ್ಶನಕ್ಕೆ ದೇವಸ್ಥಾನ ಮಂಡಳಿ ವ್ಯವಸ್ಥೆ ಕಲ್ಪಿಸಿದೆ. ರಿಜಿಸ್ಟ್ರೇಶನ್ ಮಾಡಲು ಮೊಬೈಲ್ ನಂಬರ್, ಇ-ಮೇಲ್ ಐಡಿ ಕಡ್ಡಾಯವಾಗಿದೆ.