Tag: Corona Vaccine

  • ಇಂಗ್ಲೆಂಡ್ ಮಾದರಿಯಲ್ಲಿ ಮಕ್ಕಳಿಗೆ ಲಸಿಕೆ: ಬಲರಾಮ್ ಭಾರ್ಗವ್

    ಇಂಗ್ಲೆಂಡ್ ಮಾದರಿಯಲ್ಲಿ ಮಕ್ಕಳಿಗೆ ಲಸಿಕೆ: ಬಲರಾಮ್ ಭಾರ್ಗವ್

    ನವದೆಹಲಿ: ಮಕ್ಕಳಿಗೆ ವ್ಯಾಕ್ಸಿನ್ ನೀಡುವ ವಿಚಾರದಲ್ಲಿ ಭಾರತ ಇಂಗ್ಲೆಂಡ್ ಮಾದರಿ ಅನುಸರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಐಸಿಎಂಆರ್ ಮುಖ್ಯಸ್ಥ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.

    ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಬಗೆಗಿನ ತಯಾರಿಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಜೈಡಸ್ ಕ್ಯಾಡಿಲಾದ ಜೈಕೋವ್-ಡಿ ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ. ಶೀಘ್ರದಲ್ಲೇ ಈ ಲಸಿಕೆ ಬಳಕೆಗೆ ಲಭ್ಯವಾಗಲಿದ್ದು, ಮೊದಲು 12-18 ವರ್ಷದ ಮಕ್ಕಳಿಗ ನೀಡಲು ಸರ್ಕಾರ ಚಿಂತಿಸಿದೆ ಎಂದು ಹೇಳಿದರು. ಭಾರತದಲ್ಲಿ 94 ಕೋಟಿ ಜನರು ವಯಸ್ಕರಿದ್ದಾರೆ. ಈಗಾಗಲೇ 75 ಕೋಟಿ ಜನರಿಗೆ ಮೊದಲ ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ. ವರ್ಷಾಂತ್ಯಕ್ಕೆ ಎಲ್ಲ ವಯಸ್ಕರಿಗೂ ಮೊದಲ ಡೋಸ್ ನೀಡುವ ಗುರಿ ಹೊಂದಲಾಗಿದ್ದು, ಬಳಿಕ ಮಕ್ಕಳಿಗೆ ವೇಗವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: 1-10 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು

    ಮೊದಲು 17-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವುದು ಬಳಿಕ 16-17 ಹೀಗೆ ಹಂತ ಹಂತವಾಗಿ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬಲರಾಮ್ ಭಾರ್ಗವ್ ಹೇಳಿದ್ದಾರೆ. ಬೂಸ್ಟರ್ ಶಾಟ್ ನೀಡುವ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾಪಗಳಿಲ್ಲ ಸಾಧ್ಯವಾದಷ್ಟು ಬೇಗ ಎರಡು ಡೋಸ್‍ಗಳನ್ನು ನೀಡುವುದು ಸರ್ಕಾರ ಗುರಿ ಎಂದು ಅವರು ಹೇಳಿದರು.

  • ಲಸಿಕಾಕರಣದಲ್ಲಿ ವಿದೇಶಗಳಿಂತ ಕರ್ನಾಟಕವೇ ಫಾಸ್ಟ್ ಅಂಡ್ ಬೆಸ್ಟ್

    ಲಸಿಕಾಕರಣದಲ್ಲಿ ವಿದೇಶಗಳಿಂತ ಕರ್ನಾಟಕವೇ ಫಾಸ್ಟ್ ಅಂಡ್ ಬೆಸ್ಟ್

    ಬೆಂಗಳೂರು: ವಿದೇಶಗಳಿಗೆ ಹೋಲಿಸಿದರೆ ಕರ್ನಾಟಕವೇ ಅತೀ ವೇಗವಾಗಿ ಸಾರ್ವಜನರಿಗೆ ಲಸಿಕೆ ವಿತರಣೆ ಮಾಡುತ್ತಿದೆ. ಅಲ್ಲದೇ ಸೆಪ್ಟೆಂಬರ್ ತಿಂಗಳಲ್ಲಿ ಮತ್ತಷ್ಟು ವೇಗವಾಗಿ ಲಸಿಕಾಕರಣ ನಡೆಸುತ್ತಿದೆ.

    ಕೆಲವು ವಿದೇಶಗಳಿಗಿಂತ ದೇಶದ ಹಲವು ರಾಜ್ಯಗಳಲ್ಲಿ ಪ್ರತಿದಿನ ಹೆಚ್ಚಾಗಿ ಲಸಿಕೆ ನೀಡಲಾಗುತ್ತಿದೆ. ರಷ್ಯಾದಲ್ಲಿ ಪ್ರತಿನಿತ್ಯ 3.7 ಲಕ್ಷ ಜನರಿಗೆ ಲಸಿಕೆ ವಿತರಣೆಯಾದರೆ, ಕರ್ನಾಟಕದಲ್ಲಿ ಪ್ರತಿನಿತ್ಯ 3.8 ಲಕ್ಷ ಲಸಿಕೆ ನೀಡಲಾಗುತ್ತಿದೆ. ಕರ್ನಾಟಕ ಹೊರತುಪಡಿಸಿ ಉತ್ತರಪ್ರದೇಶ, ಮಧ್ಯಪ್ರದೇಶ, ಹರ್ಯಾಣ, ಗುಜರಾತ್‍ನಲ್ಲೂ ವಿದೇಶಗಳಿಗಿಂತ ದೈನಂದಿನಗಳಲ್ಲಿ ಹೆಚ್ಚು ಡೋಸ್ ವಿತರಿಸಲಾಗುತ್ತಿದೆ.  ಇದನ್ನೂ ಓದಿ: ಲ್ಯಾಬ್ ಉಪಕರಣ ಖರೀದಿಯಲ್ಲಿ 34 ಕೋಟಿ ರೂ. ಕಿಕ್ ಬ್ಯಾಕ್- ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

    ಹೌದು, ದೇಶದಲ್ಲಿ ದೈನಂದಿನ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ನಂಬರ್ 1 ಸ್ಥಾನದಲ್ಲಿದ್ದರೆ, ಕರ್ನಾಟಕಕ್ಕೆ ಮೂರನೇ ಸ್ಥಾನ ದೊರಕಿದೆ. ಇನ್ನೂ ರಾಜ್ಯಗಳ ಲಸಿಕಾಕರಣ ವೇಗದ ಬಗ್ಗೆ ಕೇಂದ್ರ ಸರ್ಕಾರ ಖುದ್ದು ಗ್ರಾಫ್ ಮೂಲಕ ಅಂಕಿ ಅಂಶ ಬಿಡುಗಡೆಗೊಳಿಸಿದೆ. ಈ ಮೂಲಕ ಅಮೇರಿಕಕ್ಕಿಂತಲೂ ವೇಗವಾಗಿದೆ ಉತ್ತರಪ್ರದೇಶದಲ್ಲಿ ಲಸಿಕಾಕರಣ ನಡೆಯುತ್ತಿದೆ ಎಂಬ ವಿಚಾರ ಬಹಿರಂಗಗೊಂಡಿದೆ.  ಇದನ್ನೂ ಓದಿ: ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್

    Indian states vaccinating at a faster pace than foreign nations

    ಪ್ರತಿನಿತ್ಯ ಅಮೇರಿಕಾದಲ್ಲಿ 8.07 ಲಕ್ಷ ಡೋಸ್ ವಿತರಣೆ ಮಾಡುತ್ತಿದ್ದರೆ, ಉತ್ತರಪ್ರದೇಶ ಒಂದರಲ್ಲಿಯೇ ಪ್ರತಿದಿನ 11.73 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದೆ. ಯುಪಿ ಬಳಿಕ ಗುಜರಾತ್ ಎರಡನೇ ಸ್ಥಾನ, ಕರ್ನಾಟಕ ಮೂರನೇ ಸ್ಥಾನ, ಮಧ್ಯಪ್ರದೇಶಕ್ಕೆ ನಾಲ್ಕು ಹಾಗೂ ಹರ್ಯಾಣ ಐದನೇ ಸ್ಥಾನ ಲಭಿಸಿದೆ.

    ದೇಶದ ಟಾಪ್ ಐದು ರಾಜ್ಯಗಳ ದೈನಂದಿನ ಲಸಿಕಾ ವೇಗ:
    ಯುಪಿ 11.73 ಲಕ್ಷ.
    ಗುಜರಾತ್ 4.80 ಲಕ್ಷ.
    ಕರ್ನಾಟಕ 3.82 ಲಕ್ಷ.
    ಮಧ್ಯಪ್ರದೇಶ 3.71 ಲಕ್ಷ.
    ಹರ್ಯಾಣ 1.52 ಲಕ್ಷ.

    ವಿದೇಶಗಳಲ್ಲಿ ಹೇಗಿದೆ ದೈನಂದಿನ ಲಸಿಕಾಕರಣ ವೇಗ:
    ಅಮೆರಿಕ 8.07 ಲಕ್ಷ.
    ಮೆಕ್ಸಿಕೊ 4.56 ಲಕ್ಷ.
    ರಷ್ಯಾ 3.68 ಲಕ್ಷ.
    ಫ್ರಾನ್ಸ್ 2.84.
    ಕೆನಡಾ 85 ಸಾವಿರ

  • ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ವರ್ಕ್ ಆರ್ಡರ್ ರದ್ದು- CWFI ಸ್ವಾಗತ

    ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ವರ್ಕ್ ಆರ್ಡರ್ ರದ್ದು- CWFI ಸ್ವಾಗತ

    ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿದ್ದ ವರ್ಕ್ ಆರ್ಡರ್ ನ್ನು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ರದ್ದುಗೊಳಿಸಿದೆ. ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಸಂತಸ ವ್ಯಕ್ತಪಡಿಸಿದೆ.

    ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಇತ್ತೀಚೆಗೆ ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರವನ್ನು ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿ, ಕಟ್ಟಡ ಕಾರ್ಮಿಕ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಆಗ್ರಹಿಸಿದ್ದವು. ಇದನ್ನೂ ಓದಿ: ಇನ್ನೂ ಮಳೆಯಾಗಲಿದೆ, ಭೂಮಿ ನಡುಗುತ್ತೆ, ಆಪತ್ತುಗಳು ಕಳೆದಿಲ್ಲ: ಕೋಡಿಶ್ರೀ

    ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿತ್ತು. ಆದರೆ ಆಗಲೇ ಬೆಂಗಳೂರಿನ ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆ ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿತ್ತು. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿತ್ತು.

    ಇದೀಗ ಮಂಡಳಿ ಖಾಸಗಿ ಆಸ್ಪತ್ರೆಗಳ ಒಕ್ಕೂಟವಾದ ಫನಾಗೆ ಕಳುಹಿಸಲಾದ ಆದೇಶದಲ್ಲಿ ರಾಜ್ಯ ಸರ್ಕಾರ ಎಲ್ಲ ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕ ಉಚಿತವಾಗಿ ಲಸಿಕೆ ಹಾಕುವ ಕಾರ್ಯಕ್ರಮ ಜಾರಿಗೊಳಿಸಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಮೂಲಕ ಲಸಿಕೆ ಹಾಕುವ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಇದು ಅತ್ಯಂತ ಮಹತ್ವದ ಮತ್ತು ಸ್ವಾಗತಾರ್ಹ ನಿರ್ಧಾರವಾಗಿದೆ. ಈ ಕ್ರಮಕ್ಕಾಗಿ ಮಂಡಳಿ ಕಾರ್ಯದರ್ಶಿಗಳು ಮತ್ತು ಸರ್ಕಾರಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (CWFI) ಅಭಿನಂದನೆ ಸಲ್ಲಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

  • ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

    ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

    ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿರುವ ವರ್ಕ್ ಆರ್ಡರ್ ನ್ನು ಕೂಡಲೇ ರದ್ದುಪಡಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಆಗ್ರಹಿಸಿದೆ.

    ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರ ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. ಅಲ್ಲದೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಮಿಕ ಸಚಿವರು ಹಾಗೂ ಹಿರಿಯ ಕಾರ್ಮಿಕ ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 851 ಹೊಸ ಕೊರೊನಾ ಕೇಸ್- 790 ಡಿಸ್ಚಾರ್ಜ್, 15 ಸಾವು

    ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಮಾಧ್ಯಮದಲ್ಲಿ ಪ್ರಕಟವಾಗಿದೆ, ಇದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಈಗಾಗಲೇ ಬೆಂಗಳೂರು ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆಗಳನ್ನು ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿದೆ. ಮಂಡಳಿಯಿಂದ ನೀಡಲಾದ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿದೆ.

    ಈಗಾಗಲೇ ಕೊರೊನಾ ಸಂಕಷ್ಟಕ್ಕೀಡಾದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವ ನೆಪದಲ್ಲಿ ಸಾವಿರಾರು ಕೋಟಿ ರೂ. ಹಣವನ್ನು ವ್ಯಯ ಮಾಡುವ ಮೂಲಕ ಕಾರ್ಮಿಕ ಸಚಿವರು, ಮಂಡಳಿ ಅಧಿಕಾರಿಗಳು, ಕಾರ್ಮಿಕ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದರ ವಿರುದ್ಧ ಮತ್ತು ಮಂಡಳಿಯ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 20ರಂದು ಮುಖ್ಯಮಂತ್ರಿ ಮನೆ ಚಲೋ ಹೋರಾಟವನ್ನು ಇತರೆ ಕಾರ್ಮಿಕ ಸಂಘಗಳ ಜೊತೆ ಸೇರಿ ಫೆಡರೇಶನ್ ಸಂಘಟಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

  • ವ್ಯಾಕ್ಸಿನ್ ನೀಡಲು ಬಂದ ಆರೋಗ್ಯ ಸಿಬ್ಬಂದಿಗೆ ಕುಡುಕನ ಕಿರಿಕ್

    ವ್ಯಾಕ್ಸಿನ್ ನೀಡಲು ಬಂದ ಆರೋಗ್ಯ ಸಿಬ್ಬಂದಿಗೆ ಕುಡುಕನ ಕಿರಿಕ್

    – ಲಸಿಕೆ ಬೇಡ ಎಂದು ಮರವೇರಿದ ಭೂಪ

    ಯಾದಗಿರಿ/ಬಳ್ಳಾರಿ: ಯಾದಗಿರಿಯಲ್ಲಿ ಲಸಿಕೆ ನೀಡಲು ತೆರಳಿದ್ದ ಆರೋಗ್ಯ ಸಿಬ್ಬಂದಿಗೆ ಕುಡುಕನೋರ್ವ ಕಿರಿಕಿರಿ ಉಂಟು ಮಾಡಿದ್ರೆ, ಬಳ್ಳಾರಿಯಲ್ಲೊಬ್ಬ ವ್ಯಾಕ್ಸಿನ್ ಬೇಡೆವೆಂದು ಮರವೇರಿದ್ದಾನೆ.

    ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬೆಂಡಬೆಂಬಳಿ ಗ್ರಾಮದಲ್ಲಿ ಕುಡುಕನೋರ್ವ ಆರೋಗ್ಯ ಸಿಬ್ಬಂದಿ ಮುಂದೆ ರಾದ್ಧಾಂತ ನಡೆಸಿದ್ದಾನೆ. ಅಲ್ಲದೆ ಕೋವಿಡ್ ಲಸಿಕೆ ನೀಡಲು ಹೋದವರಿಗೆ ಜೀವ ಬೇದರಿಕೆ ಸಹ ಹಾಕಿದ್ದಾನೆ. ನಮ್ಮ ಹತ್ತಿರ ಬರಬೇಡಿ ನಮ್ಮ ಏರಿಯಾಕ್ಕೆ ಬಂದ್ರೆ ಕೋಲಿನಿಂದ ಹೊಡೆಯುತ್ತೇನೆ. ಯಾರನ್ನು ಬೇಕಾದರೂ ಕರೆಯಿಸು, ಬೇಕಿದ್ರೆ ಡಿಸಿಗೆ ಹೇಳು ಅಂತ ಅವಾಜ್ ಹಾಕಿದ್ದಾನೆ. ಕುಡುಕನ ಕಿರಿಕ್ ನಿಂದ ಬೇಸತ್ತ ಸಿಬ್ಬಂದಿ ವ್ಯಾಕ್ಸಿನ್ ಹಾಕುವುದನ್ನು ಅರ್ಧಕ್ಕೆ ನಿಲ್ಲಿಸಿ ವಾಪಸ್ ಮರಳಿದ್ದಾರೆ

    ಮರ ಏರಿದ ಭೂಪ:
    ಗ್ರಾಮೀಣ ಭಾಗದ ಜನರಲ್ಲಿ ಕೊರೊನಾ ಲಸಿಕೆಯ ಬಗ್ಗೆ ಭಯ ಇನ್ನೂ ಹೋಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಲಸಿಕೆ ಹಾಕುವುದು ಬೇಡ ಎಂದು ಭಯದಿಂದ ಮರವೇರಿ ಕುಳಿತಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂರಗೋಡು ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ. ಬೈಲೂರು ಗ್ರಾಮದ ಹುಲೆಪ್ಪಾ ಎಂಬ ವ್ಯಕ್ತಿ ಲಸಿಕೆಗೆ ಹೆದರಿ ಮರ ಏರಿ ಕುಳಿತಿದ್ದಾನೆ. ಕಳೆದ ಮೂರು ದಿನಗಳಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನೂ ಓದಿ: 2023ರವರೆಗೆ ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ ಆಗಲಿ: ಹೆಚ್.ಡಿ.ರೇವಣ್ಣ

    ಕೊನೆಗೆ ಬೈಲೂರು ಗ್ರಾಮದ ಹುಲೆಪ್ಪಾ ಲಸಿಕೆಗೆ ಹೆದರಿ ಮರ ಹತ್ತಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಹುಲೆಪ್ಪಾ ಅವರನ್ನು ಅವರನ್ನು ಮರದಿಂದ ಕೆಳಗಿಳಿಸಿ ಲಸಿಕೆ ನೀಡಲಾಯಿತು.

  • ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ರೇಷನ್ ಕಾರ್ಡ್ ಕಟ್- ಯಾದಗಿರಿ ಜಿಲ್ಲಾಡಳಿತ ಎಚ್ಚರಿಕೆ

    ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ರೇಷನ್ ಕಾರ್ಡ್ ಕಟ್- ಯಾದಗಿರಿ ಜಿಲ್ಲಾಡಳಿತ ಎಚ್ಚರಿಕೆ

    ಯಾದಗಿರಿ: ಒಂದು ಕಡೆ ಕೋವಿಡ್ ಲಸಿಕೆ ಪಡೆಯಲು ಜನ ಹಿಂದೇಟು ಹಾಕುತ್ತಿದ್ದು, ಮತ್ತೊಂದೆಡೆ ಕೋವಿಡ್ ಲಸಿಕೆ ಪಡೆಯದಿದ್ದರೆ ರೇಷನ್ ಕಾರ್ಡ್ ಕಟ್ ಮಾಡಲಾಗುವುದು ಎಂದು ಜಿಲ್ಲಾಡಳಿತ ಖಡಕ್ ಎಚ್ಚರಿಕೆ ನೀಡಿದೆ.

    ಮೂರನೇ ಅಲೆ ಆತಂಕ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೋವಿಡ್ ಲಸಿಕೆ ನೀಡುವ ಪ್ರಮಾಣವನ್ನು ಹೆಚ್ಚಳ ಮಾಡಲು ಹರಸಾಹಸ ಪಡುತ್ತಿವೆ. ಹೀಗಾಗಿ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ, ಲಸಿಕೆ ಕೊಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಬಹುತೇಕರು ಲಸಿಕೆ ಪಡೆಯಲು ಇಚ್ಛಿಸಿದ್ದು, ಇನ್ನೂ ಕೆಲವರು ಲಸಿಕೆ ಎಂದರೆ ಭಯಪಡುತ್ತಿದ್ದಾರೆ. ನಾನು ಸತ್ತರೂ ಲಸಿಕೆ ಪಡೆಯಲ್ಲ ಎಂದು ವೃದ್ಧೆಯೊಬ್ಬರು ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ. ಇದನ್ನೂ ಓದಿ: 1,262 ಹೊಸ ಪ್ರಕರಣಗಳು – ಪಾಸಿಟಿವಿಟಿ ರೇಟ್ ಶೇ.0.70

    ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಲಸಿಕೆ ಪ್ರಮಾಣ ಹೆಚ್ಚಳ ಮಾಡಲು ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಲಸಿಕೆ ಪಡೆಯದಿದ್ದರೆ ರೇಷನ್ ಕಟ್ ಮಾಡಲು ಅಧಿಕಾರಿಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಮುಂಡರಗಿ ಸೇರಿ ಬಹುತೇಕ ಹಳ್ಳಿಗಳಲ್ಲಿ ಲಸಿಕೆ ಪಡೆಯದಿದ್ದರೆ ರೇಷನ್ ಕಾರ್ಡ್ ಕಟ್ ಮಾಡಲಾಗುತ್ತದೆ ಎಂದು ಪಂಚಾಯಿತಿ ಅಧಿಕಾರಿಗಳು ವಾಹನಗಳ ಮೂಲಕ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದ್ದಾರೆ.

  • ಒಂದೇ ದಿನ 1 ಕೋಟಿ ಲಸಿಕೆ – ದಾಖಲೆ ಬರೆದ ಭಾರತ

    ಒಂದೇ ದಿನ 1 ಕೋಟಿ ಲಸಿಕೆ – ದಾಖಲೆ ಬರೆದ ಭಾರತ

    ನವದೆಹಲಿ: ಶುಕ್ರವಾರ ಒಂದೇ ದಿನ 1 ಕೋಟಿ ಲಸಿಕೆಯನ್ನು ಭಾರತ ವಿತರಣೆ ಮಾಡಿ ದಾಖಲೆ ಬರೆದಿದೆ.

    ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಉತ್ಸವ ಆಯೋಜಿಸಿದ್ದರಿಂದ ಈ ಸಾಧನೆ ನಿರ್ಮಾಣವಾಗಿದೆ. ಕೊರೊನಾ ಮೂರನೇ ಭೀತಿ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ ಹೆಚ್ಚಾಗುತ್ತಿದೆ.

    ಒಂದು ದಿನದಲ್ಲಿ 1 ಕೋಟಿ ಲಸಿಕೆ ವಿತರಿಸುವ ಮೂಲಕ ಭಾರತ ಇತಿಹಾಸ ಸೃಷ್ಟಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಖಾತೆಯ ಸಚಿವ ಮನ್‍ಸುಖ್ ಮಾಂಡವ್ಯ ಹೇಳಿದ್ದಾರೆ. ಇದನ್ನೂ ಓದಿ: ಕಾಲೇಜ್ ಸೆಕ್ಯೂರಿಟಿಯಾಗಿ ಸೇರಿ 35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನಗೈದ ಟೆಕ್ಕಿ ಅರೆಸ್ಟ್

    ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, 1 ಕೋಟಿ ದಾಟುವುದು ಒಂದು ಮಹತ್ವದ ಸಾಧನೆ. ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಲಸಿಕೆ ಹಾಕುವಲ್ಲಿ ಯಶಸ್ವಿಯಾದವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಗೃಹ ಸಚಿವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ: ಬೆಲ್ಲದ್

  • ಶುಕ್ರವಾರ ರಾಜ್ಯಾದ್ಯಂತ ಕೊರೊನಾ ಲಸಿಕಾ ಅಭಿಯಾನ – ಯಾರಿಗೆ ಮೊದಲ ಆದ್ಯತೆ?

    ಶುಕ್ರವಾರ ರಾಜ್ಯಾದ್ಯಂತ ಕೊರೊನಾ ಲಸಿಕಾ ಅಭಿಯಾನ – ಯಾರಿಗೆ ಮೊದಲ ಆದ್ಯತೆ?

    ಬೆಂಗಳೂರು: ಕೋವಿಡ್ 19 ಲಸಿಕಾಕರಣ ಹೆಚ್ಚಿಸುವ ನಿಟ್ಟಿನಲ್ಲಿ ಶುಕ್ರವಾರ ರಾಜ್ಯಾದ್ಯಂತ ಕೋವಿಡ್ 19 ಲಸಿಕಾ ಮೇಳವನ್ನು ಆಯೋಜಿಸಿದ್ದು, ಲಸಿಕಾ ಮೇಳದ ಅಂಗವಾಗಿ ಬಿಪಿಎಂಪಿ ವ್ಯಾಪ್ತಿಯಲ್ಲಿ 1.25 ಲಕ್ಷ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

    ಪಾಲಿಕೆಯ ಆಯಾ ವಲಯ ಮಟ್ಟದಲ್ಲಿ ನಿಗದಿತ ಗುರಿ ಸಾಧಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಲಸಿಕೆ ನೀಡುವ ಸ್ಥಳದಲ್ಲಿ ಯಾವುದೇ ಸಮಸ್ಯೆಯಾಗಂತೆ ಲಸಿಕೆ ನೀಡಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

    ನಗರದ ಆಯಾ ವಾರ್ಡ್‍ಗಳಿಗೆ ಅವಶ್ಯಕ ಲಸಿಕೆಗಳನ್ನು ಮುಂಚಿತವಾಗಿಯೇ ಪೂರೈಸಲಾಗುವುದು. ಲಸಿಕೆ ನೀಡುವ ಸಲುವಾಗಿ ಹೆಚ್ಚು ಸೆಷನ್‍ಗಳನ್ನು ಮಾಡಿಕೊಂಡು ಅಗತ್ಯ ಸಿಬ್ಬಂದಿನ್ನು ನಿಯೋಜಿಸಿಕೊಂಡು ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಲಸಿಕಾ ಮೇಳ ಹಮ್ಮಿಕೊಂಡಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಲಸಿಕೆ ನೀಡುವ ಸ್ಥಳದಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ – ವರದಕ್ಷಿಣೆ ಕಿರುಕುಳ- ಪತಿಯಿಂದಲೇ ಪತ್ನಿ ಹತ್ಯೆ 

    ಆದ್ಯತೆ ಯಾರಿಗೆ?
    ಇದುವರೆಗೆ ಒಂದೂ ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ. 2ನೇ ಡೋಸ್‍ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ.

    60 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ಹಾಗೂ 2ನೇ ಡೋಸ್ ಕೊಡಲಾಗುತ್ತದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10 ನೇ ತರಗತಿ, ಪದವಿ ಪೂರ್ವ ಕಾಲೇಜಿನ(11ನೇ ಹಾಗೂ 12ನೇ ತರಗತಿ ಅನ್ವಯಿಸುವಲ್ಲಿ) ಭೋದಕ ಭೋದಕೇತರ ಸಿಬ್ಬಂದಿ ಇನ್ನೂ ಕೋವಿಡ್-19 ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ನೀಡಲಾಗುವುದು. ಇತರೇ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗುತ್ತದೆ. ಇದನ್ನೂ ಓದಿ – ಮತ್ತೊಂದು ರೇಪ್ ಕೇಸ್- ಸಿದ್ದಾಪುರದಲ್ಲಿ 11ರ ಬಾಲೆ ಮೇಲೆ ಮಾವನಿಂದಲೇ ಅತ್ಯಾಚಾರ

  • ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

    ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

    ಬೆಂಗಳೂರು: ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು.

    ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಕಡ್ಡಾಯ. ವ್ಯಾಕ್ಸಿನ್ ಗೆ ಪರ್ಯಾಯ ಯಾವುದೂ ಇಲ್ಲ. ಸಾಧ್ಯವಾದಷ್ಟು ಜಂಕ್ ಫುಡ್ ಸೇವಿಸದೆ, ಭಾರತೀಯ ಸಾಂಪ್ರದಾಯಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,, ಬಡವರು, ಕೆಳ ಹಂತದ ವರ್ಗದವರಿಗೆ ಲಸಿಕೆ ನೀಡುವುದು ನಮ್ಮ ಗುರಿ ಎಂದು ತಿಳಿಸಿದರು. ದಾನಿಗಳು ಹಾಗೂ ಖಾಸಗಿ ಸಂಸ್ಥೆಗಳು ಸಿಎಸ್‍ಆರ್ ನಿಧಿ ಮೂಲಕ ಲಸಿಕೆ ನೀಡಲು ಮುಂದಾಗಬೇಕು ಎಂದ ಅವರು ಸರ್ಕಾರ ಹಾಗೂ ಸಮಾಜ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಿದೆ ಎಂದರು.

    ಸೆಪ್ಟೆಂಬರ್ ಮಾಹೆಯಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಉದ್ದೇಶವಿದ್ದು, ಪ್ರಸ್ತುತ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ, ಸಂಸದ ಪಿ.ಸಿ ಮೋಹನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್ ಮನವಿ

  • ಕೋವಿಡ್ ಲಸಿಕೆ ಬಗ್ಗೆ ಯಾದಗಿರಿ ಜನರಲ್ಲಿ ಮೂಢನಂಬಿಕೆ

    ಕೋವಿಡ್ ಲಸಿಕೆ ಬಗ್ಗೆ ಯಾದಗಿರಿ ಜನರಲ್ಲಿ ಮೂಢನಂಬಿಕೆ

    ಯಾದಗಿರಿ: ರಾಜ್ಯದ ವಿವಿಧ ಕಡೆಗಳಲ್ಲಿ ಕೋವಿಡ್ ಲಸಿಕೆಗಾಗಿ ಜನ ಮುಗಿಬೀಳುತ್ತಿದ್ದಾರೆ. ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತು ಲಸಿಕೆ ಪಡೆದುಕೊಂಡಿದ್ದಾರೆ. ಆದರೆ ಯಾದಗಿರಿ ಜನ ಮಾತ್ರ ಫುಲ್ ಡಿಫೆರೆಂಟ್ ಆಗಿದ್ದಾರೆ. ಕೋವಿಡ್ ಲಸಿಕೆ ಬಗ್ಗೆ ಯಾದಗಿರಿಯ ಜನರಲ್ಲಿ ಮೂಢನಂಬಿಕೆ ಮೂಡಿದೆ.

    ಕೋವಿಡ್ ಲಸಿಕೆ ಅಂದ್ರೆ ಯಾದಗಿರಿ ಮಂದಿಗೆ ಇನ್ನಿಲ್ಲದ ಕೋಪ ಬರುತ್ತೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂದರೆ ಲೋಗೋ ತಳ್ಳುತ್ತಾರೆ. ಮುಖದ ಮೇಲೆ ಬಟ್ಟೆ ಹಾಕಿಕೊಂಡು ಮನೆಯೊಳಗೆ ಓಡಿಹೋಗಿ ಬಾಗಿಲು ಹಾಕಿಕೊಳ್ಳತ್ತಾರೆ. ಅಧಿಕಾರಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ಬಾಯಿ ಬಂದಂಗೆ ಬೈತ್ತಾರೆ. ನಾವು ಸತ್ರೆ ಇಲ್ಲಿಯೇ ಸಾಯತ್ತೀವಿ ಆದರೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲ್ಲ ಅಂತಾರೆ. ಕೋವಿಡ್ ಲಸಿಕೆ ಬಗ್ಗೆ ಮೂಢನಂಬಿಕೆ ಹೊಂದಿರುವ ಯಾದಗಿರಿ ಜನರಿಂದ ಅನಾಗರಿಕ ವರ್ತನೆ ಪ್ರದರ್ಶನವಾಗುತ್ತಿದೆ. ಇದನ್ನೂ ಓದಿ: ಎಚ್‍ಡಿಡಿ ಫೋಟೋ ತೆಗೆದಿದ್ದು ಯಾಕೆ – ಹಾಸನದಲ್ಲಿ ಜನಪ್ರತಿನಿಧಿಗಳ ಮಧ್ಯೆ ಗಲಾಟೆ

    ಜನರ ಅತಿರೇಕದ ವರ್ತನೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ನಲ್ಲಿ ಬಟಾಬಯಲಾಗಿದೆ. ಗ್ರಾಮೀಣ ಭಾಗದಲ್ಲಂತೂ ಲಸಿಕೆ ಅಂದ್ರೆ ವಿಷ ಎಂಬಂತೆ ಜನ ವರ್ತನೆ ಮಾಡುತ್ತಿದ್ದಾರೆ. ಕೊರೊನಾ ಮೂರನೇ ಅಲೆಯ ಡೆಂಜರ್ ಝೋನ್ ನಲ್ಲಿರುವ ಯಾದಗಿರಿ ಜಿಲ್ಲಾಡಳಿತಕ್ಕೆ, ಲಸಿಕೆ ಟಾರ್ಗೆಟ್ ಟೆನ್ಸನ್ ಹೆಚ್ಚಾಗಿದೆ. ಲಸಿಕೆ ಹಾಕಲು ಅಧಿಕಾರಿಗಳು ಮನೆ, ಮನೆಗೆ ತೆರಳುತ್ತಿದ್ದಾರೆ. ಆದರೆ ಅಧಿಕಾರಿಗಳ ಮೇಲೆ ಜನ ದಬ್ಬಾಳಿಕೆ ನಡೆಸುತ್ತಿದ್ದು, ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.