Tag: Corona Virous

  • ರಾಜ್ಯದಲ್ಲಿ 628 ಮಂದಿಗೆ ಕೊರೊನಾ ಪಾಸಿಟಿವ್, 15 ಜನ ಸಾವು

    ರಾಜ್ಯದಲ್ಲಿ 628 ಮಂದಿಗೆ ಕೊರೊನಾ ಪಾಸಿಟಿವ್, 15 ಜನ ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ರಾಜ್ಯದಲ್ಲಿ 7,581 ಸಕ್ರಿಯ ಪ್ರಕರಣಗಳಿದ್ದು, ಇಂದು 628 ಪಾಸಿಟಿವ್ ಕೇಸ್‍ಗಳು ಹಾಗೂ 16 ಮರಣ ಪ್ರಕರಣಗಳು ದಾಖಲಾಗಿದೆ.

    ಇಂದು 1,349 ಕೋವಿಡ್ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೆ 38,92,459 ರೋಗಿಗಳು ಗುಣಮುಖರಾಗಿದ್ದಾರೆ. ಇಂದಿನ ಪಾಸಿಟಿವಿಟ್ ರೇಟ್ ಶೇ.0.92 ಇದ್ದು, ಮೃತಪಟ್ಟವರ ಶೇಕಡಾವಾರು ಪ್ರಮಾಣ 2.38 ಇದೆ. ಇದನ್ನೂ ಓದಿ: Russia-Ukraine War: ಉಕ್ರೇನ್ ಜೊತೆ ಮಾತುಕತೆಗೆ ಒಪ್ಪಿದ ರಷ್ಯಾ

    ರಾಜ್ಯದಲ್ಲಿ ಇಂದು ಒಟ್ಟು 1,05,030 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 67,583 ಸ್ಯಾಂಪಲ್(ಆರ್‍ಟಿಪಿಸಿಆರ್ 50061 + 17,522 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಆರೋಗ್ಯ ಇಲಾಖೆಯ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 14, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 346, ಬೀದರ್ 2, ಚಾಮರಾಜನಗರ 11, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 6, ಚಿತ್ರದುರ್ಗ 22, ದಕ್ಷಿಣ ಕನ್ನಡ 14, ದಾವಣಗೆರೆ 7, ಧಾರವಾಡ 9, ಗದಗ 0, ಹಾಸನ 10, ಹಾವೇರಿ 4, ಕಲಬುರಗಿ 4, ಕೊಡಗು 21, ಕೋಲಾರ 6, ಕೊಪ್ಪಳ 5, ಮಂಡ್ಯ 15, ಮೈಸೂರು 21, ರಾಯಚೂರು 2, ರಾಮನಗರ 7, ಶಿವಮೊಗ್ಗ 13, ತುಮಕೂರು 15, ಉಡುಪಿ 17, ಉತ್ತರ ಕನ್ನಡ 11, ವಿಜಯಪುರ 9 ಹಾಗೂ ಯಾದಗಿರಿಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

  • ಚೋಳನಗರದಲ್ಲಿ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ

    ಚೋಳನಗರದಲ್ಲಿ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಚೋಳನಗರದ ರಾಜೀವ್‍ಗಾಂಧಿ ದಂತ ವೈದ್ಯಕೀಯ ಆಸ್ಪತ್ರೆಯನ್ನು ಖಾಸಗಿ ಸಹಭಾಗಿತ್ವದೊಂದಿಗೆ ಪರಿವರ್ತಿಸಲಾಗಿರುವ 100 ಬೆಡ್‍ಗಳ ಕೋವಿಡ್ ಆಸ್ಪತ್ರೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವಸತಿ ಸಚಿವ ವಿ.ಸೋಮಣ್ಣನವರು ಇಂದು ಉದ್ಘಾಟಿಸಿದರು.

    ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಣ್ಣ, ಖಾಸಗಿ ಸಹಭಾಗಿತ್ವದೊಂದಿಗೆ ರಾಜೀವ್‍ಗಾಂಧಿ ದಂತ ವೈದ್ಯಕೀಯ ಆಸ್ಪತ್ರೆಯನ್ನು ನುರಿತ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಮತ್ತು ಆಧುನಿಕ ಸೌಲಭ್ಯದೊಂದಿಗೆ ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ದಿನದ ಇಪ್ಪತ್ತುನಾಲ್ಕು ಗಂಟೆಯೂ ಮೂರು ಪಾಳಿಯಲ್ಲಿ ಈ ಆಸ್ಪತ್ರೆ ಕೋವಿಡ್ ಸೋಂಕಿತರ ನೆರವಿಗೆ ಬರಲಿದೆ ಎಂದರು.

    ದಂತ ವೈದ್ಯಕೀಯ ಆಸ್ಪತ್ರೆಯನ್ನು 100 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ರೂಪಿಸಿರುವುದರಿಂದ ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ವರದಾನವಾಗಿ ಪರಿಣಮಿಸಲಿದೆ. ಆಸ್ಪತ್ರೆಯಲ್ಲಿ 15 ಹೆಚ್’ಬಿಯು/ಐಸಿಯು ಹಾಸಿಗೆಗಳು ತಕ್ಷಣಕ್ಕೆ ಲಭ್ಯವಿದೆಯಲ್ಲದೆ, 40 ಆಮ್ಲಜನಕ ಸೌಲಭ್ಯವನ್ನು ಒಳಗೊಂಡ ಹಾಸಿಗೆಗಳು ಸೋಂಕಿತರ ಸೇವೆಗೆ ಸಜ್ಜಾಗಿವೆ. ರಕ್ತ ಪರೀಕ್ಷೆ, ಕ್ಷಕಿರಣ ಸೌಲಭ್ಯದಂತಹ ವ್ಯವಸ್ಥೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಒಂದೆರಡು ದಿನಗಳಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಹಂತ ಹಂತವಾಗಿ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಈ ಸಂದರ್ಭ ಸ್ಥಳೀಯ ಶಾಸಕರಾದ ಶ್ರೀ ಭೈರತಿ ಸುರೇಶ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ.ವೇದಾ ಮೂರ್ತಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.