Tag: corona virusm

  • ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ- 559 ಮಂದಿಗೆ ಕೊರೊನಾ, 12 ಸಾವು

    ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ- 559 ಮಂದಿಗೆ ಕೊರೊನಾ, 12 ಸಾವು

    – ಪಾಸಿಟಿವಿಟಿ ರೇಟ್ ಶೇ.0.52ಕ್ಕೆ ಇಳಿಕೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು ಒಂದು ಸಾವಿರದ ಒಳಗಡೆ ಕೇಸ್ ಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು 559 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 12 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನೂ ಪಾಸಿಟಿವಿಟಿ ರೇಟ್ ಶೇ. 0.52ಗೆ ಇಳಿಕೆಯಾಗಿದೆ. 100 ಜನರಿಗೆ ಟೆಸ್ಟ್ ಮಾಡಿದರೆ ಒಬ್ಬರಿಗೆ ಪಾಸಿಟಿವ್ ಆಗ್ತಿದೆ.

    ಬೆಂಗಳೂರಿನಲ್ಲಿ ಕೂಡ ಇಂದು 231 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ 04 ಸಾವನ್ನಪ್ಪಿದ್ದಾರೆ. ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಡೆತ್ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 1034 ಜನ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿನಲ್ಲಿ 302 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

    ಇನ್ನೂ ಇಂದು ರಾಜ್ಯದಲ್ಲಿ ಆ್ಯಕ್ಟೀವ್ ಕೇಸ್ ಗಳ ಸಂಖ್ಯೆ 15,754ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ಕೋವಿಡ್ ಟೆಸ್ಟ್ ಕೂಡ ಒಂದು ಲಕ್ಷಕ್ಕೂ ಹೆಚ್ಚು ಕೋವಿಡ್ ಟೆಸ್ಟ್ ಆಗಿದೆ. 1,05,645 ಕೋವಿಡ್ ಟೆಸ್ಟ್ ಆಗಿದ್ದು 559 ಪಾಸಿಟಿವ್ ಆಗಿರೋದು ಕೊರೊನಾ ಕಂಟ್ರೋಲ್ ನಲ್ಲಿ ಇರೋದು ಗೊತ್ತಾಗ್ತಿದೆ. ಇದನ್ನೂ ಓದಿ: ಕೊಡಗಿನಲ್ಲಿ ಕೋವಿಡ್ ಡೆಲ್ಟಾ ವೇರಿಯಂಟ್ ತಳಿ ಪತ್ತೆ- ಜನರಲ್ಲಿ ಮತ್ತೆ ಆತಂಕ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 231, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 8, ಚಿತ್ರದುರ್ಗ 2, ದಕ್ಷಿಣ ಕನ್ನಡ 87, ದಾವಣಗೆರೆ 9, ಧಾರವಾಡ 1, ಗದಗ 0, ಹಾಸನ 10, ಹಾವೇರಿ 1, ಕಲಬುರಗಿ 3, ಕೊಡಗು 23, ಕೋಲಾರ 9, ಕೊಪ್ಪಳ 1, ಮಂಡ್ಯ 10, ಮೈಸೂರು 28, ರಾಯಚೂರು 1, ರಾಮನಗರ 0, ಶಿವಮೊಗ್ಗ 8, ತುಮಕೂರು 24, ಉಡುಪಿ 57, ಉತ್ತರ ಕನ್ನಡ 18, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕ ಜೀವನ್ಮರಣ ಹೋರಾಟ

    ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕ ಜೀವನ್ಮರಣ ಹೋರಾಟ

    – ಸಹಾಯಕ್ಕಾಗಿ ಸರ್ಕಾರದ ಮೊರೆ ಹೋದ ಕುಟುಂಬಸ್ಥರು

    ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

    ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು.

    ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ವೈದ್ಯರು ರೆಫರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮೇ 10ರಂದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಮುಖ ಬಾವು ಬರುತ್ತಿದ್ದು ಇಎನ್‍ಟಿ ಸ್ಪೆಷಲಿಸ್ಟ್ ಬಳಿ ತೆರಳಲು ಸಲಹೆ ನೀಡಲಾಗಿತ್ತು. ಬಳಿಕ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ಆನಂದ ದಾಖಲಾದನು. ಈ ವೇಳೆ ಬ್ಲ್ಯಾಕ್ ಫಂಗಸ್ ಆಗಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

    ಕೋವಿಡ್‍ನಿಂದ ಗುಣಮುಖ ಆದ ಬಳಿಕ ಸರ್ಜರಿ ಮಾಡಬೇಕು ಎಂದು ವೈದ್ಯರು ಹೇಳುತ್ತಿದ್ದಾರೆ. ಹೀಗಾಗಿ ಸದ್ಯ ಯುವಕನ ಕುಟುಂಬಸ್ಥರು ರಾಜ್ಯ ಸರ್ಕಾರ ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.